ಲೇಖಕ: admin

ಮಡಿಕೇರಿ NEWS DESK ನ.9 : ಚೇರಳ ಗೌಡ ಸಮಾಜದ 17ನೇ ಮಹಾಸಭೆ ಸಮಾಜದ ಅಧ್ಯಕ್ಷ ಐಯಂಡ್ರ ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌಡ ಸಮಾಜದ ನೂತನ ಕಟ್ಟಡವನ್ನು 2026ರ ಫೆಬ್ರವರಿಯಲ್ಲಿ ಉದ್ಘಾಟಿಸಲು ಸಭೆ ನಿರ್ಧರಿಸಿತು. ನೂತನ ಕಟ್ಟಡದ ಪ್ರಗತಿಯ ಕುರಿತು ಮಾತನಾಡಿದ ಐಯಂಡ್ರ ರಾಘವಯ್ಯ ಅವರು ಕೇವಲ 22 ಕುಟುಂಬಗಳಿದ್ದ ಸಣ್ಣ ಹಳ್ಳಿಯಲ್ಲಿ ಒಟ್ಟು ಒಂದೂವರೆ ಕೋಟಿ ರೂ. ವೆಚ್ಚದ ಗೌಡ ಸಮಾಜದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಯಿತು. ಒಂದು ಕಾಲು ಕೋಟಿ ರೂ. ವೆಚ್ಚದಲ್ಲಿ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 27 ಲಕ್ಷ ರೂ.ಗಳ ಕೊನೆಯ ಹಂತದ ಕಾಮಗಾರಿ ಬಾಕಿ ಇದ್ದಾಗ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಹಾಗೂ ಆಡಳಿತ ಮಂಡಳಿಯವರು ದಾನಿಗಳ ಸಹಕಾರ ಪಡೆದು 17 ಲಕ್ಷ ರೂ.ಗಳ ಕಾಮಗಾರಿಯನ್ನು ಪೂರ್ಣಗೊಳಿಸಿಕೊಟ್ಟಿದ್ದಾರೆ. ಒಕ್ಕೂಟದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರಿಗೆ ಎಲ್ಲರ ಪರವಾಗಿ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು. ಉಳಿದ 10ಲಕ್ಷ ರೂ.ಗಳ ಕಾಮಗಾರಿಯನ್ನು ಚೇರಳ ಗೌಡ ಸಮಾಜ…

Read More

ಮಡಿಕೇರಿ NEWS DESK ನ.9 : ಕೊಡವರ ಕೋವಿ ಹಕ್ಕಿನ ಕುರಿತು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎನ್‌ಸಿಯ ಕಾನೂನು ಸಲಹೆಗಾರರಾಗಿರುವ ಸುಪ್ರೀಂಕೋರ್ಟ್ ನ ಖ್ಯಾತ ವಕೀಲ ವಿಕ್ರಮ್ ಹೆಗ್ಡೆ ಅವರನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ನವದೆಹಲಿಯಲ್ಲಿ ಭೇಟಿ ಮಾಡಿದರು. ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯದ ಹಕ್ಕು, ಸಾಂಪ್ರದಾಯಿಕ ಗನ್ (ತೋಕ್) ವಿನಾಯಿತಿಯನ್ನು ಸಂವಿಧಾನದ 25 ಮತ್ತು 26ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸುವುದು, ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು, ಕೊಡವರ ರಾಜಕೀಯ ಸಬಲೀಕರಣ, 2026ರಲ್ಲಿ ನಡೆಯುವ ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರು ‘ಕೊಡವ’ ಎಂದು ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳುವುದರಿಂದ ಆಗುವ ಲಾಭಗಳ ಕುರಿತು ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಯು.ನಾಚಪ್ಪ ಅವರು ಪ್ರಾದೇಶಿಕ ಸ್ವಾಯತ್ತತೆ ವಿಷಯಗಳ ಬಗ್ಗೆ ಪ್ರಾವೀಣ್ಯತೆ ಹೊಂದಿರುವ ವಿಕ್ರಮ್ ಹೆಗ್ಡೆ ಅವರು ಈಶಾನ್ಯ ರಾಜ್ಯಗಳು ಮತ್ತು…

Read More

ಮಡಿಕೇರಿ NEWS DESK ನ.9 : ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ನ.15 ರಂದು ಕೋಲಾರ, ಕಾಸರಗೋಡು ಗಡಿನಾಡು ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ರುಬೀನಾ ಎಂ.ಎ ಅವರಿಗೆ ‘ಕಾಸರಗೋಡು ಕನ್ನಡ ಭವನ ರಜತ ಮಹೋತ್ಸವ ಸಂಭ್ರಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ಅವರು ತಿಳಿಸಿದ್ದಾರೆ. ನ.15ರಂದು ಕಾಸಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Read More

ಮಡಿಕೇರಿ NEWS DESK ನ.9 : ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುತ್ತಿದ್ದು, ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಬರಹಗಾರರಿಗೆ ಪ್ರೋತ್ಸಾಹ ನೀಡಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕರೆ ನೀಡಿದ್ದಾರೆ. ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ ಲೇಖಕಿ ರುಬೀನಾ ಎಂ.ಎ ಅವರ ಚೊಚ್ಚಲ ಕೃತಿ “ಕಣ್ಣಾ ಮುಚ್ಚಾಲೆ” ಬಿಡುಗಡೆಗೊಳಿಸಿ ಶಾಸಕರು ಮಾತನಾಡಿದರು. ಹಿಂದೆ ಸಾಹಿತ್ಯ ಕ್ಷೇತ್ರದಲ್ಲಿ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡಿದ್ದರು. ಇಂದು ಮಹಿಳೆಯರು ಪುರುಷರಿಗೆ ಸಮಾನವಾಗಿ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಹಿಂದೆ ಪುಸ್ತಕ ಓದುವವರ ಸಂಖ್ಯೆ ಹೆಚ್ಚಿತ್ತು. ಇಂದು ಅತಿಯಾದ ತಂತ್ರಜ್ಞಾನದ ಬಳಕೆಯಿಂದಾಗಿ ಓದುಗರ ಸಂಖ್ಯೆ ಕಡಿಮೆಯಾಗಿದೆ. ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಆಸಕ್ತಿ ಹೊಂದಬೇಕು ಎಂದರು. ಪುಸ್ತಕ ರಚನೆ ಕಷ್ಟಕರ ಕೆಲಸ, ಆದರೂ ಸವಾಲಿನ ನಡುವೆ ಮಹಿಳಾ ಪ್ರಧಾನವಾದ ಪುಸ್ತಕವನ್ನು ರುಬೀನಾ ಅವರು ಹೊರತಂದಿದ್ದು, ಶ್ರಮಕ್ಕೆ ತಕ್ಕ ಪ್ರತಿಫಲ…

Read More

ಸೋಮವಾರಪೇಟೆ ನ.8 NEWS DESK : ಶಿಕ್ಷಣ ಎಂಬುದು ಮಾನವನ ಜೀವನದ ಮೂಲಧಾರವಾಗಿದ್ದು, ವೈಯುಕ್ತಿಕ ಯಶಸ್ಸಿಗೂ ಶಿಕ್ಷಣವೇ ಮೂಲ ಕಾರಣವಾಗಿದೆ ಎಂದು ದಾನಿಗಳಾದ ಅಮೇರಿಕಾ ನಿವಾಸಿ ಡಾ.ಚಂದ್ರಮೌಳಿ ಅಭಿಪ್ರಾಯಿಸಿದರು. ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿಗಳ ಸಂಘ, ಶತಮಾನೋತ್ಸವ ಆಚರಣಾ ಸಮಿತಿ ವತಿಯಿಂದ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಯೋರ್ವ ಶಾಲಾ ಹಂತದಲ್ಲಿಯೇ ಉತ್ತಮ ಶಿಕ್ಷಣ ಪಡೆದರೆ ಭವಿಷ್ಯದಲ್ಲಿ ಉತ್ತಮ ನಾಗರಿಕನಾಗಿ ಬದುಕಬಹುದು. ವಿದ್ಯಾರ್ಥಿಗಳ ಕೌಶಲ್ಯ, ಜ್ಞಾನವನ್ನು ಹೊರ ತೆಗೆಯಲು ಪ್ರೋತ್ಸಾಹ ಆಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ತಾನು ಓದಿದ ಶಾಲೆಗೆ ಸಹಾಯ ಸಹಕಾರ ಮಾಡುವುದು ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ ಎಂದು ಹೇಳಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಶಿಕ್ಷಣದ ಪ್ರಭಾವದಿಂದ ಅಜ್ಞಾನ, ಆಂಧಶ್ರದ್ಧೆ, ಅಸಮಾನತೆ ಮುಂತಾದ ದುರುಳತೆಗಳನ್ನು ನಿವಾರಿಸಬಹುದು. ಪ್ರತಿಯೊಬ್ಬ ಪೋಷಕರು ಶಿಕ್ಷಣದ…

Read More

ಕುಶಾಲನಗರ ನ.8 NEWS DESK : ಕುಶಾಲನಗರ ಐತಿಹಾಸಿಕ ಶ್ರೀ ಗಣಪತಿ ದೇವಾಲಯ ರಥೋತ್ಸವ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು. ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ ಪುಷ್ಪಾಲಂಕಾರ ರಥ ಪೂಜೆ ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆಗಳೊಂದಿಗೆ ಭಕ್ತಿಭಾವದಿಂದ ಎಳೆದರು. ದೇವಾಲಯದ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು ನೇತೃತ್ವದಲ್ಲಿ ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿಂದ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳು ಜರುಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು. ರಥ ತೆರಳುವ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

Read More

ಮಡಿಕೇರಿ ನ.8 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿದ ಸಮಿತಿಯ ಪ್ರಮುಖರು ಕೇಕ್ ಕತ್ತರಿಸಿ ಸಿಹಿ ಹಂಚಿ, ಊಟದ ವ್ಯವಸ್ಥೆಯನ್ನು ಕಲ್ಪಿಸಿ ಸಂಭ್ರಮಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯ ಹಾಗೂ ಸಮಾಜ ಸೇವಕ ಡಾ.ಹೆಚ್.ವಿ.ದೇವದಾಸ್ ಅವರು, ದಲಿತ ಸಂಘರ್ಷ ಸಮಿತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಹಳ ವರ್ಷಗಳಿಂದ ತಾವು ವೃದ್ಧಾಶ್ರಮದ ನಿವಾಸಿಗಳೊಂದಿಗೆ ಓಡನಾಟ ಹೊಂದಿದ್ದು, ಮುಂದಿನ ದಿನಗಳಲ್ಲಿಯೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ವಯೋವೃದ್ಧರು ತಂಬಾಕು, ಧೂಮಪಾನದಂತಹ ದುಶ್ಚಟಗಳಿಂದ ದೂರವಿರಬೇಕು. ಆಗ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಮಾತನಾಡಿ, ಕೊಡಗಿನಲ್ಲಿ ಕಳೆದ 20 ವರ್ಷಗಳಿಂದ ಕಾಣದಿರುವ ಅಭಿವೃದ್ಧಿ ಕಾರ್ಯಗಳು ಶಾಸಕದ್ವಯರಿಂದ ನಡೆಯುತ್ತಿದೆ. ಎಲ್ಲಾ ಸಮುದಾಯದವರನ್ನು ಸಮಾನವಾಗಿ…

Read More

ಮಡಿಕೇರಿ ನ.8 NEWS DESK : ಕೊಡಗಿನ ಆಟೋ ರಿಕ್ಷಾಗಳಿಗೆ ಜಿಲ್ಲಾ ಮಟ್ಟದ ಪರವಾನಗಿ ನೀಡಬೇಕೆಂದು ಆಟೋ ರಿಕ್ಷಾ ಚಾಲಕರ ಸಂಘ ರಾಜ್ಯ ಸರಕಾರಕ್ಕೆ ಸಲ್ಲಿಸಿರುವ ಮನವಿಗೆ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್‍ನ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು ಅವರು ಕೊಡಗು ಜಿಲ್ಲೆಯ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಈಗಾಗಲೆ ಅಗತ್ಯ ಬಾಡಿಗೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಂತದಲ್ಲಿ ಆಟೋ ರಿಕ್ಷಾಗಳಿಗೆ ಜಿಲ್ಲಾ ಪರವಾನಗಿ ನೀಡಿದಲ್ಲಿ ಟ್ಯಾಕ್ಸಿ ಚಾಲಕರು, ಮಾಲೀಕರ ಬದುಕು ಅತಂತ್ರವಾಗಲಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅಗತ್ಯ ತೆರಿಗೆ ಪಾವತಿಸಿ, ನಿಯಮಾವಳಿಗಳನ್ನು ಪಾಲಿಸಿಕೊಂಡು ಬರುತ್ತಿರುವ ಎಲ್ಲೋ ಬೋರ್ಡ್ ಟ್ಯಾಕ್ಸಿಗಳಿಗೆ ಬರಬೇಕಾದ ಬಾಡಿಗೆ ಟ್ರಿಪ್‍ಗಳನ್ನು, ವೈಟ್ ಬೊರ್ಡ್ ಖಾಸಗಿ ವಾಹನಗಳು ಪಡೆದುಕೊಳ್ಳುತ್ತಿವೆ. ಈ ಸಮಸ್ಯೆಯ ಬಗೆಹರಿಕೆಗೆ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ಹತ್ತು ಹಲವು ಬಾರಿ ಸಂಘಟನೆಯಿಂದ ಮನವಿಗಳನ್ನು ಸಲ್ಲಿಸಲಾಗಿದ್ದರು…

Read More

ಮಡಿಕೇರಿ ನ.8 NEWS DESK : ಮಡಿಕೇರಿ ನಗರಸಭೆಯ ಸ್ವಂತ ನಿಧಿ 3.35 ಕೋಟಿ ರೂ. ವೆಚ್ಚದ ರಸ್ತೆಯನ್ನು ಒಳಗೊಂಡಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕಾರ್ಯಗಳು ನಡೆಸಿ, ಗುತ್ತಿಗೆದಾರರಿಗೆ ಕಾರ್ಯಾದೇಶವನ್ನು ನೀಡಲಾಗಿದೆ. ಶೀಘ್ರದಲ್ಲೆ ಕಾಮಗಾರಿಗಳು ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭಾ ಆಡಳಿತ ಮಂಡಳಿ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿರುವ ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ ಅವರು, ನಗರದಲ್ಲಿ ನಡೆದಿರುವ ನಡೆಯಲಿರುವ ಕಾಮಗಾರಿಗಳ ಬಗ್ಗೆ ಚರ್ಚೆಗೆ ಬರಲಿ ಎಂದು ಸವಾಲೊಡ್ಡಿದರು. 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ನಗರಸಭೆಯಿಂದ 138.70 ಲಕ್ಷಗಳ ಅಭಿವೃದ್ಧಿ ಕಾರ್ಯ, ಎಸ್‍ಎಫ್‍ಸಿ ಯೋಜನೆಯಡಿ 9.32 ಲಕ್ಷ ವೆಚ್ಚದ ಕುಡಿಯುವ ನೀರಿನ ಕಾಮಗಾರಿ, ಎಸ್‍ಎಫ್‍ಸಿ ಯೋಜನೆಯಡಿ 9.77 ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿ, ನಗರದ ಎಲ್ಲಾ ವಾರ್ಡ್‍ಗಳಲ್ಲಿ 166.50 ಲಕ್ಷ ರೂ. ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ನಗರಸಭೆಯ…

Read More

ಮಡಿಕೇರಿ ನ.8 NEWS DESK : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿರುವ ಇನ್ನರ್ ವೀಲ್ ಜಿಲ್ಲೆ 318 ನ ಮಡಿಕೇರಿ ಘಟಕ ಇದೀಗ ಸುವಣ೯ ಮಹೋತ್ಸವ ಸಂಭ್ರಮದಲ್ಲಿದ್ದು, ನ.10 ರಂದು ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಸುವಣ೯ ಮಹೋತ್ಸವ ಸಮಾರಂಭ ಆಯೋಜಿತವಾಗಿದೆ ಎಂದು ಸುವಣ೯ ಸಮಾರಂಭ ಸಮಿತಿಯ ಅಧ್ಯಕ್ಷೆ ಲತಾಚಂಗಪ್ಪ ತಿಳಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಲತಾ ಚಂಗಪ್ಪ, ಸೋಮವಾರ ಸಂಜೆ 6 ಗಂಟೆಗೆ ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಇನ್ನರ್ ವೀಲ್ ಜಿಲ್ಲೆಯ ಅಧ್ಯಕ್ಷೆ ಶಬರಿ ಕಡಿದಾಳ್ ಅಧ್ಯಕ್ಷತೆ ವಹಿಸಲಿದ್ದು, ಅಂದು ವಿವಿಧ ಕಾಯ೯ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಲಲಿತಾ ರಾಘವನ್ ಕಾಯ೯ದಶಿ೯ ನಮಿತಾ ರೈ, ಸುವಣ೯ ಮಹೋತ್ಸವ ಸಮಿತಿಯ ಅಧ್ಯಕ್ಷೆ ಲತಾ ಚಂಗಪ್ಪ, ಕಾಯ೯ದಶಿ೯ ಶಫಾಲಿ ರೈ ಪಾಲ್ಗೊಳ್ಳಲಿದ್ದಾರ ಎಂದು ಲತಾಚಂಗಪ್ಪ ತಿಳಿಸಿದರು. ಇನ್ನರ್ ವೀಲ್ ಸಂಸ್ಥೆಯು ಮಡಿಕೇರಿಯಲ್ಲಿ 1975 ನೇ ಜೂನ್ 27 ರಂದು ಉದ್ಘಾಟನೆಯಾಗಿತ್ತು.…

Read More