ಮಡಿಕೇರಿ ಜು.1 NEWS DESK : ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳ ಪುನರ್ ಪರಿಶೀಲನಾ ಕಾರ್ಯ ಜುಲೈ 1 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಸಿಬ್ಬಂದಿ ನೇರವಾಗಿ ಗ್ರಾಹಕರ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಕಳೆದ 2023 ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದ ಗೃಹ ಜ್ಯೋತಿ ಯೋಜನೆಯ ಅರ್ಹತೆಯನ್ನು ಮರು ಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸ್ಥಳದಲ್ಲೇ ದಾಖಲೆ ಪರಿಶೀಲನೆ, ಆಪ್ ಮೂಲಕ ಮಾಹಿತಿ ಸಂಗ್ರಹ ಸೆಸ್ಕ್ ಮೀಟರ್ ರೀಡರ್ಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ಮೂಲ ದಾಖಲೆಗಳನ್ನು ಸ್ಥಳದಲ್ಲೇ ಪರಿಶೀಲಿಸಲಿದ್ದಾರೆ. ಬಳಿಕ ವಿಶೇಷ ಮೊಬೈಲ್ ಆಪ್ ಹಾಗೂ ಅಧಿಕೃತ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿ ಸಂಗ್ರಹಿಸಿ, ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಸ್ಥಳದಲ್ಲೇ ಪೂರ್ಣಗೊಳಿಸಲಿದ್ದಾರೆ. ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ತಪಾಸಣೆ ಮಾಡುವುದು ಏಕೈಕ ಮಾರ್ಗವಾಗಿದ್ದು,…
ಲೇಖಕ: admin
ಮಡಿಕೇರಿ ಜು.1 NEWS DESK : ಮಹತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ವಿರಾಜಪೇಟೆ ತಾಲ್ಲೂಕಿನಲ್ಲಿ ಅನುಷ್ಠಾನಕ್ಕೆ ಸಿದ್ಧತೆ ಆರಂಭಿಸಲಾಗಿದೆ. ವಿರಾಜಪೇಟೆ ತಾಲ್ಲೂಕು ಸಾಮಥ್ರ್ಯ ಸೌಧದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆ ಸಂಬಂಧಿಸಿದಂತೆ ಒಂದು ದಿನದ ಕಾರ್ಯಾಗಾರಕ್ಕೆ ವಿರಾಜಪೇಟೆ ತಾ.ಪಂ.ಇಒ ರಾಜೇಶ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿ, ಅವರು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜಿವಿಕ್ ಮಿಷನ್ (ಗ್ರಾಮೀಣ) ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡುವ ಉದ್ದೇಶದಿಂದ ರೂಪುರೇಷ ಸಿದ್ದ ಮಾಡಿಕೊಳ್ಳಲಾಗುತ್ತಿದ್ದು, ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು. ವಿಬಿಜಿ ರಾಮ್ಜಿ ಕಾಯ್ದೆ ವೈಶಿಷ್ಟಗಳು, ಸಾಂಸ್ಥಿಕ ರಚನೆ ಮತ್ತು ಸಾಂಸ್ಥಿಕ ಚೌಕಟ್ಟು…
ಮಡಿಕೇರಿ ಜು.1 NEWS DESK : ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ತಿಳಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ, ಅನುಷ್ಠಾನ ಮತ್ತು ಜಾಗೃತಿ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು. ಕನ್ನಡ ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾಷೆಯಾಗಿದ್ದು, ಮುಂದಿನ ದಿನಗಳಲ್ಲಿ ಕನ್ನಡದ ಭವಿಷ್ಯವನ್ನು ಮತ್ತಷ್ಟು ಉಜ್ವಲಗೊಳಿಸಲು ಕನ್ನಡ ಜಾಗೃತಿ ಸಮಿತಿಯ ಜವಾಬ್ದಾರಿಗಳು ಅತ್ಯಂತ ನಿರ್ಣಾಯಕ. ಆ ದಿಸೆಯಲ್ಲಿ ಕನ್ನಡ ಜಾಗೃತಿ ಸಮಿತಿ ಆಧುನಿಕ ಜಗತ್ತಿಗೆ ಕನ್ನಡವನ್ನು ಕೊಂಡೊಯ್ಯುವ ಮಾರ್ಗದರ್ಶಿ ಸಮಿತಿಯಾಗಿ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ತಿಳಿಸಿದರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಸಂಬಂಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು…
ಸುಂಟಿಕೊಪ್ಪ ಜು.1 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್ಬೈಲ್ ಪ್ರೆಂಡ್ಸ್ ಯೂತ್ ವತಿಯಿಂದ ಕಾನ್ಬೈಲ್ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಕಾನ್ಬೈಲ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಪ್ರೆಂಡ್ಸ್ ಯೂತ್ ಕ್ಲಬ್ನ ಅಧ್ಯಕ್ಷ ಶಂಕನಾರಾಯಣ, ಉಪಾಧ್ಯಕ್ಷ ಧರ್ಮು, ಪದಾಧಿಕಾರಿಗಳು ಸೇರಿದಂತೆ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು. ಗೌರವಧ್ಯಕ್ಷ ವಸಂತ, ಮಾಜಿ ಅಧ್ಯಕ್ಷ ಪೌಲೋಸ್, ಕಾರ್ಯದರ್ಶಿ ಪ್ರಶಾಂತ್, ಕ್ರೀಡಾ ಕಾರ್ಯದರ್ಶಿ ಚಂದ್ರು, ಸದಸ್ಯರಾದ ಅನಿಲ್ಕುಮಾರ್, ದಿನೇಶ್, ದಯಾನಂದ ರೈ, ದಿವಾಕರ ಸೇರಿದಂತೆ ಮತ್ತಿರರು ಪಾಲ್ಗೊಂಡಿದ್ದರು.
ಮಡಿಕೇರಿ ಜು.1 NEWS DESK : ವಿಶ್ವವೇ ಮೆಚ್ಚುವ ಮಹಾತ್ಮಾ ಗಾಂಧೀಜಿ ಮತ್ತು ಜ್ಞಾನ ಸಂಪನ್ನರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳಂತೆ ನಾವೆಲ್ಲರೂ ಮನುಜರು ಎನ್ನುವ ವಿಶಾಲ ಚಿಂತನೆಗಳಡಿ ನಾವೆಲ್ಲರೂ ಕರ್ತವ್ಯ ಪರರಾಗಬೇಕೆಂದು ಸಮಾಜಸೇವಕರು ಹಾಗೂ ನೆಲ್ಯಹುದಿಕೇರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಸಾಬು ವರ್ಗಿಸ್ ಕರೆ ನೀಡಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಬಿ. ಎಸ್. ಗೋಪಾಲಕೃಷ್ಣ ರಸ್ತೆಯಲ್ಲಿನ ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ “ಪತ್ರಿಕಾ ದಿನಾಚರಣೆ” ಮತ್ತು ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಪ್ರತಿಯೊಬ್ಬರು ಮೈಮುಚ್ಚುವಂತೆ ವಸ್ತçವನ್ನು ತೊಡುವವರೆಗೂ ತಾನು ಅವರಂತೆಯೇ ಇರುವುದಾಗಿ ಬದುಕಿನುದ್ದಕ್ಕೂ ಅರೆಬೆತ್ತಲೆಯಾಗಿ ಬದುಕು ನಡೆಸಿದ ಮಹಾತ್ಮಾ ಗಾಂಧೀಜಿ ಹಾಗೂ ಹಲವಾರು ಪದವಿಗಳನ್ನು ಪಡೆದ ಡಾ.ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು ಹಾಗೂ ಅವರ ತತ್ವಾದರ್ಶ ಚಿಂತನೆಗಳಿಗೆ ತಕ್ಕಂತೆ ಪತ್ರಿಕಾ ಕ್ಷೇತ್ರದಲ್ಲಿ ತೊಡಗಿಸುವವರು ಪ್ರಾಮಾಣಿಕವಾದ ಸೇವೆಯನ್ನು ಸಮಾಜಕ್ಕೆ ನೀಡುವಂತಾಗಲೆ0ದು ಹಾರೈಸಿದರು. ಸ್ವತಂತ್ರ ಅಭ್ಯರ್ಥಿಯಾಗಿ ನೆಲ್ಯಹುದಿಕೇರಿ ಗ್ರಾಮ…
ಮಡಿಕೇರಿ NEWS DESK ಜು.1 : ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮದ ಹೋಂಸ್ಟೇಯೊoದರಲ್ಲಿ ಅಕ್ರಮ ಜೂಜಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಕೊಡಗು ಜಿಲ್ಲಾ ಪೊಲೀಸರು, 28 ಮಂದಿಯನ್ನು ವಶಕ್ಕೆ ಪಡೆದು 11 ಲಕ್ಷ ರೂ. ನಗದು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಡಗದಾಳು ಗ್ರಾಮದಲ್ಲಿ ಸರಕಾರದ ಪರವಾನಗಿಯಿಲ್ಲದೆ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಜೂಜಾಟ ನಡೆಸುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ, ಮಡಿಕೇರಿ ಉಪವಿಭಾಗ ಮಟ್ಟದ ಅಪರಾಧ ಪತ್ತೆ ವಿಶೇಷ ತಂಡದ ಅಧಿಕಾರಿ ಹಾಗೂ ಸಿಬ್ಬಂದಿಗಳು ಇಂದು ದಾಳಿ ನಡೆಸಿದರು. ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಮೂಲದ ಆರೋಪಿಗಳ ಸಹಿತ ಸ್ಥಳದಲ್ಲಿದ್ದ 11,08,130 ರೂ. ನಗದು, 5 ಕಾರು, 1 ದ್ವಿಚಕ್ರ ವಾಹನ, 35 ಮೊಬೈಲ್ ಪೋನ್ಗಳನ್ನು ವಶ ಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಸೂರಜ್.ಪಿ.ಎ. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಚಂದ್ರಶೇಖರ್ ಹೆಚ್.ವಿ., ಮಡಿಕೇರಿ ಉಪವಿಭಾಗದ ಅಪರಾಧ ತನಿಖಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಮಡಿಕೇರಿ NEWS DESK ಜು.1 : ಕೊಡವ ಭಾಷಾ ಸಂಸ್ಕೃತಿ, ಸಂಪ್ರದಾಯಗಳ ಮೂಲ ತಾಯಿ ಬೇರಿನಂತಿರುವ ಕೊಡವ ಭಾಷಿಕ ಜನಾಂಗದವರನ್ನು ಹಲವಾರು ವರ್ಷಗಳಿಂದ ಸರಕಾರ ಹಾಗೂ ಜನಪ್ರತಿನಿಧಿಗಳು ತಾತ್ಸಾರ ಮನೋಭಾವನೆಯಿಂದ ಕಾಣುತ್ತಿದ್ದಾರೆ ಎಂದು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕೊಡವ ಭಾಷಿಕ ಸಮುದಾಯಗಳ ಕೂಟದ 2025- 26 ನೇ ಸಾಲಿನ ಮಹಾಸಭೆ ಮೂರ್ನಾಡು ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತೀರಾ ಹಿಂದುಳಿದ ಮೂಲ ನಿವಾಸಿ ಜನಾಂಗದವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಆಡಳಿತ ವ್ಯವಸ್ಥೆ ವಿಫಲತೆಯನ್ನು ಕಾಣುತ್ತಿದೆ. ಕೊಡವ ಭಾಷಿಕ ಜನಾಂಗದವರನ್ನು ಕೇವಲ ಮತ ಬ್ಯಾಂಕ್ ಗಾಗಿ ಬಳಸಿಕೊಳ್ಳುತ್ತಿರುವುದು ವಿಪರ್ಯಾಸ ಎಂದರು. ಶಾಶ್ವತ ನೆಲೆ ಕಂಡುಕೊಳ್ಳುವುದು ಕೊಡವ ಭಾಷಿಕ ಜನಾಂಗದವರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ. ಜಾಗವನ್ನು ಗುರುತಿಸಿ ಸಂಬAಧಿಸಿದ ಸರಕಾರ ಮತ್ತು ಜಿಲ್ಲಾಡಳಿತÀಕ್ಕೆ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಮಂಜೂರು ಮಾಡಿಲ್ಲವೆಂದು ವಿಷಾದ ವ್ಯಕ್ತಪಡಿಸಿದರು. ಜನಾಂಗದ ಪ್ರಮುಖರಾದ…
ಮಡಿಕೇರಿ NEWS DESK ಜು.1 : ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಕಾಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಗರದಲ್ಲಿ ನಡೆಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಸಂಭ್ರಮದಿಂದ ಜರುಗಿದ ಕಾರ್ಯಕ್ರಮದಲ್ಲಿ 22ನೇ ಬ್ಯಾಚ್ ನ 36 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ 10 ಹಂತಗಳಿರುವ ಅಬಕಾಸ್ ಕೋರ್ಸ್ ನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ ಇಲ್ಲಿಯವರೆಗೆ ಕೇಂದ್ರದಿಂದ ಒಟ್ಟು 736 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ ಎಂದರು. ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ ಮಡಿಕೇರಿ ಕೇಂದ್ರದ ಅಲುಫ್ ಎ.ಆರ್ ಅವರು ದುಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಚಾಂಪಿಯನ್ ಆಗಿದ್ದಾರೆ. ಈ ಬ್ಯಾಚ್ ನ ಹಲವು ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಅಬಕಾಸ್ ಸ್ಪರ್ಧೆಯಲ್ಲಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಅಬಕಾಸ್ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ…
ಮಡಿಕೇರಿ NEWS DESK ಜು.1 : ಕೊಡವರ ಭವಿಷ್ಯಕ್ಕೆ ಮಾರಕವಾಗಿರುವ ಹೊರಗಿನ ಉದ್ಯಮ ಸಂಸ್ಥೆಗಳು ಕೊಡಗಿನಲ್ಲಿ ನಿರ್ಮಿಸಿರುವ ಟೌನ್ಶಿಪ್ ಮತ್ತು ರೆಸಾರ್ಟ್ ಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.10 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯು ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ನೆಲಜಿ ಗ್ರಾಮದ “ಮಲ್ಮ ಬೆಟ್ಟ” ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಯನ್ನು ಪತ್ರಿಕಾ ಪ್ರಕಟಣೆ ಮೂಲಕ ತೀವ್ರವಾಗಿ ವಿರೋಧಿಸಿರುವ ಅವರು ಮದ್ರಾಸ್ ಹೈಕೋರ್ಟ್ ಆದೇಶಗಳನ್ನು ಪಾಲಿಸಿ, 2024-25ರಲ್ಲಿ ನೀಲಗಿರಿ ಜಿಲ್ಲೆಯ ಮಸಿನಗುಡಿಯಲ್ಲಿ ನೂರಾರು ರೆಸಾರ್ಟ್ಗಳನ್ನು ಒಂದೇ ಹಂತದಲ್ಲಿ ತೆರವುಗೊಳಿಸಿದ ಮಾದರಿಯಲ್ಲಿಯೇ, ಕರ್ನಾಟಕ ಸರಕಾರದಿಂದಲೂ ಕಠಿಣ ಕ್ರಮ ಜಾರಿಯಾಗಬೇಕೆಂದು ಒತ್ತಾಯಿಸಿದ್ದಾರೆ. ಸರಕಾರ ಮತ್ತು ಹೊರಗಿನ ಹಣದ ಚೀಲದ ಉದ್ಯಮಿಗಳು ಕೊಡವರ ಭಾವನೆಗಳೊಂದಿಗೆ ಚೆಲ್ಲಾಟವಾಡಬಾರದು. “ಮಲ್ಮ ಬೆಟ್ಟ” ಸಮಸ್ಯೆಗೆ ಸಂಬoಧಿಸಿದoತೆ ನೆಲಜಿನಾಡಿನಲ್ಲಿ ಸಾಂಸ್ಕೃತಿಕ-ಸಾಮಾಜಿಕ ಅಶಾಂತಿಗೆ ದಾರಿ ಮಾಡಿಕೊಡುವ ಲಕ್ಷಣಗಳು ಕಂಡುಬರುತ್ತಿದೆ. ಕೊಡವರು ಪರ್ವತ ದೇವರ ವಾಸಸ್ಥಾನವಾದ “ಮಲ್ಮ ಬೆಟ್ಟ”ದ ಮೇಲೆ ಅತ್ಯುನ್ನತ ಭಕ್ತಿಯನ್ನು ಇಟ್ಟಿದ್ದಾರೆ.…
ಮಡಿಕೇರಿ NEWS DESK ಜು.1 : ಮುಖ್ಯಮoತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇoದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಕುಮಾರಕೃಪಾ ರಸ್ತೆಯ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರವನ್ನು ಸ್ಮರಿಸಿದರು. ಸಮಾರಂಭದಲ್ಲಿ ತೆಲoಗಾಣ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ವಾರ್ತಾಭಾರತಿ ಪ್ರಧಾನ ಸoಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸoಘದ ಅಧ್ಯಕ್ಷರಾದ ಶಿವಾನoದ ತಗಡೂರು, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯಿಷಾ ಖಾನo, ವಾರ್ತಾ ಇಲಾಖೆ ಆಯುಕ್ತರಾದ ಎo.ಎನ್. ಅನುಚೇತ್, ಹಿರಿಯ ಪತ್ರಕರ್ತೆ ಆರ್. ಪೂರ್ಣಿಮಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.






