ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎನ್.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಸಿದ್ದಾಪುರ ಕೊಡಗು ಯೂನಿಯನ್ ಎಸ್ಎನ್ಡಿಪಿ ಅಧ್ಯಕ್ಷರಾದ ವಿ.ಕೆ.ಲೋಕೇಶ್, ಕೊಡಗು ಜಿಲ್ಲೆ ಬಿಲ್ಲವ ಸಮಾಜದ…
ಲೇಖಕ: admin
ಬೆಂಗಳೂರು ಆ.26 NEWS DESK : ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ವಕೀಲರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬಾರ್ ಕೌನ್ಸಿಲ್ಗೆ ನೂತನ ಕಟ್ಟಡ ನಿರ್ಮಾಣ ಹಾಗೂ ವಕೀಲರ ವೆಲ್ಫೇರ್ ನಿಧಿಗೆ ಸಂಬಂಧಿಸಿದಂತೆ ಪ್ರಮುಖವಾಗಿ ಚರ್ಚೆ ನಡೆಸಿ, ತಮ್ಮ ಬೇಡಿಕೆಗಳು ಮತ್ತು ಅಹವಾಲುಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ವಕೀಲರ ವೃತ್ತಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಪರಿಹಾರ, ಕಲ್ಯಾಣ ಕ್ರಮಗಳು ಹಾಗೂ ಬಾರ್ ಕೌನ್ಸಿಲ್ನ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡುವಂತೆ ಸದಸ್ಯರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಸೇರಿದಂತೆ ಬಾರ್ ಕೌನ್ಸಿಲ್ನ ಇತರ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು, NEWS DESK ಆ.26: ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳು ಹಾಗೂ ಅಹವಾಲುಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಬಾರ್ ಕೌನ್ಸಿಲ್ಗೆ ನೂತನ ಕಟ್ಟಡ ನಿರ್ಮಾಣ ಹಾಗೂ ವಕೀಲರ ವೆಲ್ಫೇರ್ ನಿಧಿಗೆ ಸಂಬಂಧಿಸಿದಂತೆ ಪ್ರಮುಖವಾಗಿ ಚರ್ಚೆ ನಡೆಸಲಾಯಿತು. ವಕೀಲರ ಹಿತಾಸಕ್ತಿ ಹಾಗೂ ಕಲ್ಯಾಣಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವಂತೆ ಸದಸ್ಯರು ಮನವಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.
ಮಡಿಕೇರಿ ಆ.26 NEWS DESK : ಇಂದಿನ ಕಾಲದಲ್ಲಿ ಜನರು ದೊಡ್ಡಸ್ಥಿಕೆಗಿಂತ ಒಳ್ಳೆಯತನಕ್ಕೆ ಹೆಚ್ಚು ಒಲವು ತೋರುತ್ತಾರೆ. ದೊಡ್ಡತನ ಮೆರೆಯುವವರನ್ನು ಸಮಾಜ ಇಷ್ಟಪಡುವುದಿಲ್ಲ. ದೊಡ್ಡಸ್ಥಿಕೆಯಿಂದ ಸುಸಂಸ್ಕೃತ ಸಮಾಜ ಕಟ್ಟಲು ಸಾಧ್ಯವಿಲ್ಲ. ಆದ್ದರಿಂದ ದೊಡ್ಡತನವನ್ನು ಬಿಟ್ಟು ಒಳ್ಳೆಯತನದೊಂದಿಗೆ ಬದುಕು ಕಟ್ಟಿಕೊಳ್ಳಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಕರೆ ನೀಡಿದರು. ಬುಟ್ಟಂಗಾಲದಲ್ಲಿರುವ ಕೊಡಗು ಹೆಗ್ಗಡೆ ಸಮಾಜದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಆಯೋಜಿಸಿದ್ದ 18ನೇ ಕೊಡವ ಪುಸ್ತಕ ಪತ್ತಾಯ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಂದು ಸಮುದಾಯದ ಸಂಸ್ಕೃತಿ, ಪದ್ಧತಿ, ಆಚಾರ–ವಿಚಾರ ಹಾಗೂ ಸಂಪ್ರದಾಯಗಳನ್ನು ಕೇವಲ ಪಠ್ಯಪುಸ್ತಕಗಳ ಮೂಲಕ ತಿಳಿದುಕೊಳ್ಳಲು ಸಾಧ್ಯವಿಲ್ಲ. ಇವುಗಳನ್ನು ಹಿಂದಿನ ಸಾಹಿತಿಗಳು ಸಾಹಿತ್ಯದ ರೂಪದಲ್ಲಿ ದಾಖಲಿಸಿ ಮುಂದಿನ ಪೀಳಿಗೆಗೆ ನೀಡಿದ್ದಾರೆ. ಪದ್ಧತಿ, ಆಚಾರ–ವಿಚಾರಗಳನ್ನು ದೊಡ್ಡಸ್ಥಿಕೆ ಮೆರೆದು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಅಂತಹ ವ್ಯಕ್ತಿಯನ್ನು ಸಮಾಜ ಇಷ್ಟಪಡುವುದಿಲ್ಲ. ಪಾರಂಪರ್ಯವಾಗಿ ಬಂದಿರುವ ಪದ್ಧತಿ ಹಾಗೂ ಜೀವನಕ್ರಮಗಳನ್ನು ಪ್ರತಿಯೊಬ್ಬರೂ ಕಲಿತು ಅನುಸರಿಸಬೇಕು.…
ಮಡಿಕೇರಿ, NEWS DESK ಆ.26: ಚಾಲಕನ ನಿಯಂತ್ರಣ ಕಳೆದುಕೊಂಡ ಸರಕು ತುಂಬಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್ ವಾಹನದ ಮೇಲೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯನಾಡು ಅಬ್ಬಿಕೊಲ್ಲಿ ಬಳಿ ನಡೆದಿದೆ. ಗುಜರಾತ್ ರಾಜ್ಯದ ಅಹಮದಾಬಾದ್ ಮೂಲದ 8 ಮಂದಿ ಪ್ರವಾಸಿಗರು ನೆನ್ನೆ ದಿನ ಮಡಿಕೇರಿಗೆ ಆಗಮಿಸಿ ಇಲ್ಲಿನ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಬುಧವಾರ ಈ ತಂಡ ಟಿ.ಟಿ ವಾಹನದಲ್ಲಿ(ಕೆಎ.13.ಸಿ.3250) ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದರು. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಮದೆನಾಡು-ಜೋಡುಪಾಲ ನಡುವಿನ ಅಬ್ಬಿಕೊಲ್ಲಿ ಎಂಬಲ್ಲಿ ಈ ಪ್ರವಾಸಿ ತಂಡ ಹೆದ್ದಾರಿ ಬದಿ ಇರುವ ಜಲಪಾತ ವೀಕ್ಷಿಸಿ ಟೀ ಕುಡಿಯುವ ಸಲುವಾಗಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮೂವರು ವಾಹನದಿಂದ ಕೆಳಗೆ ಇಳಿದಿದ್ದರು. ವಾಹನದಲ್ಲಿದ್ದ ಚಾಲಕ ಸಹಿತ 6 ಮಂದಿ ಕೆಳಗೆ ಇಳಿಯುವ ಸಂದರ್ಭ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿ ಚಾಲಕನ…
ಮಡಿಕೇರಿ, NEWS DESK ಆ.26: ಕೊಡಗು ಜಿಲ್ಲೆಯಲ್ಲಿ ಮೋಡ ಭಿತ್ತನೆ ಮಾಡಲ್ಲ. ಅದರ ಅಗತ್ಯವೂ ಜಿಲ್ಲೆಗೆ ಇಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಸ್ಪಷ್ಟಪಡಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲೆಯಲ್ಲಿ ಮೋಡ ಭಿತ್ತನೆ ಮಾಡಿಲ್ಲ, ಮಾಡುವ ಅಗತ್ಯವೂ ಇಲ್ಲ. ಈ ಕುರಿತು ನೆನ್ನೆ ದಿನ ಮುಖ್ಯಮಂತ್ರಿಗಳು, ನೀರಾವರಿ ಸಚಿವರ ಜೊತೆಯಲ್ಲಿ ಚರ್ಚೆ ಮಾಡಿ ಅಭಿಪ್ರಾಯ ಮಂಡಿಸಲಾಗಿದೆ ಎಂದು ಹೇಳಿದರು. ಇನ್ನುಳಿದಂತೆ ಬೇರೆ ಜಿಲ್ಲೆಗಳ ಕಾವೇರಿ ಕಣಿವೆ ಪ್ರವೇಶಗಳಲ್ಲಿ ಮೋಡ ಭಿತ್ತನೆ ಮಾಡಲು ನಮ್ಮ ಅಭ್ಯಂತರವಿಲ್ಲ. ಅಲ್ಲಿ ಬೇಕಾದರೆ ಮೊಡ ಭಿತ್ತನೆ ಮಾಡಲಿ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಈಗ ಮೋಡ ಭಿತ್ತನೆ ಮಾಡಿದಲ್ಲಿ 5ರಿಂದ 8 ಇಂಚು ಮಳೆಯಾಗಿ ಮೇಘ ಸ್ಪೋಟವಾಗುವ ಸಂಭವವಿದೆ. ಆ ಸಂದರ್ಭ ಭೂ ಕುಸಿತದಂತಹ ಘಟನೆಗಳು ಕೂಡ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಸುರಿದ ಮಳೆಗೆ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಭೂ ಕುಸಿತವಾಗಿದೆ. ಈ ಎಲ್ಲಾ…
ಮಡಿಕೇರಿ, NEWS DESK ಆ. 26: ಆಟಿ ಪಾಯಸ, ಬಗೆ ಬಗೆಯ ಹಿಟ್ಟು, ಪತ್ರೊಡೆ, ಕಣಿಲೆ ಪಲ್ಯ, ಅಕ್ಕಿ ರೊಟ್ಟಿ, ಮಾವಿನಹಣ್ಣಿನ ಸಾರು, ಬೈನೆ ಹುಡಿಯ ಹಲ್ವಾ, ತರಕಾರಿ ಇಡ್ಲಿ, ಪಾಪಿಟ್ಟು, ಕೋಳಿ ಸಾರು, ಮೊಟ್ಟೆ, ಮೀನು ಫ್ರೈ, ಹಣ್ಣಿನ ರಸಾಯನ, ಚರ್ಮೆ ಸೊಪ್ಪಿನ ಪಲ್ಯ, ಕೆಸ ಸಾರು, ನೀರು ದೋಸೆ, ಕೈಹುಳಿ ಚಟ್ನಿ, ಕೂಗಲೆ ಹಿಟ್ಟು, ಏಡಿ ಸಾರು, ಎಳ್ಳು-ಮೆಂತೆ, ಬಟರ್ ಫ್ರೂಟ್ ಹಲ್ವಾ ಹೀಗೆ ಬಗೆ ಬಗೆಯ ಆಟಿ ಹಬ್ಬದೂಟದ ಘಮಲು ಘಮ ಘಮಿಸಿದವು. ಇದು ಕಂಡು ಬಂದಿದ್ದು ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಆಟಿ ಜಂಬರದಲ್ಲಿ. ಆಟಿ ತಿಂಗಳ ಸಾಂಪ್ರದಾಯಿಕ ಆಚರಣೆ, ವಿಶಿಷ್ಟ ಆಹಾರ ಪದ್ಧತಿ ಹಾಗೂ ಗೌಡ ಸಮುದಾಯದ ಸಾಂಸ್ಕೃತಿಕ ವೈಭವ ಆಟಿ ಜಂಬರದಲ್ಲಿ ಅನಾವರಣಗೊಂಡಿತು. ಮಹಿಳೆಯರು ತಮ್ಮ ಮನೆಗಳಲ್ಲಿ ಸಿದ್ಧಪಡಿಸಿಕೊಂಡು ಬಂದಿದ್ದ ಸಾಂಪ್ರದಾಯಿಕ ಖಾದ್ಯಗಳು ಎಲ್ಲರ ಗಮನ ಸೆಳೆದವು. ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಮಕ್ಕಂದೂರಿನ ವಿಎಸ್ಎಸ್ಎನ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…
ಸುಂಟಿಕೊಪ್ಪ, NEWS DESK ಆ. 26: ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ಕೇರಳ ಮೂಲದ ಮಲಯಾಳಿ ಭಾಷಿಕರು ದೇವರ ನಾಡು ಕೇರಳದ ನಾಡಹಬ್ಬವಾದ ಓಣಂ ಅನ್ನು ಸಂಭ್ರಮ, ಸಡಗರ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ ಆಚರಿಸಿದರು. ಸುಂಟಿಕೊಪ್ಪದಲ್ಲಿಯೂ ಮಲಯಾಳಿ ಭಾಷಿಕರು ವಿಶೇಷವಾಗಿ ಓಣಂ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು. ಓಣಂ ಹಬ್ಬದ ಆಚರಣೆಯ ಹಿಂದೆ ಬಲಿಚಕ್ರವರ್ತಿಯ ಪೌರಾಣಿಕ ಕಥೆಯಿದೆ. ಬಲಿಚಕ್ರವರ್ತಿ ಧರ್ಮಿಷ್ಠ, ಪರಾಕ್ರಮಿ ಹಾಗೂ ಮಹಾದಾನಿಯಾಗಿದ್ದು, ಆತನ ಆಡಳಿತದಲ್ಲಿ ರಾಜ್ಯ ಸುಭಿಕ್ಷೆಯಿಂದ ಕೂಡಿತ್ತು. ಪ್ರಜೆಗಳು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು ಎನ್ನುವುದು ಪುರಾಣದ ನಂಬಿಕೆ. ಬಲಿಚಕ್ರವರ್ತಿ ಇಂದ್ರಪದವಿ ಪಡೆಯಲು ಮಹಾಯಾಗ ನಡೆಸಲು ಮುಂದಾದಾಗ ದೇವತೆಗಳು ಆತಂಕಗೊಂಡು ಮಹಾವಿಷ್ಣುವಿನ ಮೊರೆ ಹೋದರು. ಆಗ ವಿಷ್ಣು ವಾಮನ ರೂಪದಲ್ಲಿ ಬಲಿಚಕ್ರವರ್ತಿಯ ಬಳಿಗೆ ತೆರಳಿ ಮೂರು ಹೆಜ್ಜೆ ಜಾಗವನ್ನು ದಾನವಾಗಿ ಕೇಳಿದರು. ಬಲಿಚಕ್ರವರ್ತಿ ಮಾತು ನೀಡಿದಂತೆ ದಾನ ಮಾಡಲು ಒಪ್ಪಿದಾಗ, ವಾಮನನು ತ್ರಿವಿಕ್ರಮನಾಗಿ ಬೆಳೆದು ಒಂದು ಹೆಜ್ಜೆಯಲ್ಲಿ ಭೂಮಿಯನ್ನೂ, ಮತ್ತೊಂದು ಹೆಜ್ಜೆಯಲ್ಲಿ ಆಕಾಶವನ್ನೂ ಆವರಿಸಿದನು. ಮೂರನೇ ಹೆಜ್ಜೆ ಇಡಲು ಸ್ಥಳ ಕೇಳಿದಾಗ,…
ಮಡಿಕೇರಿ, NEWS DESK ಆ. 26: ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ 144.60 ಕೋಟಿ ರೂ. ವಹಿವಾಟು ನಡೆಸುವ ಮೂಲಕ 46.86 ಲಕ್ಷ ರೂ. ನಿವ್ವಳ ಲಾಭ ಗಳಿಸಿರುವುದಾಗಿ ಸಂಘದ ಅಧ್ಯಕ್ಷ ಮಂದ್ರೀರ ಎನ್. ತೇಜಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸದಸ್ಯರ ಪಾಲು ಹಣದ ಮೇಲೆ ಶೇ. 11.50ರಷ್ಟು ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಸಂಘದ ವಾರ್ಷಿಕ ಮಹಾಸಭೆಯು ಇದೇ ಆ. 29ರಂದು ಬೆಳಗ್ಗೆ 10.30 ಗಂಟೆಗೆ ಹಾಕತ್ತೂರಿನ ಸಂಘದ ಮುಖ್ಯ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸಂಘವು ಹಾಕತ್ತೂರು, ಬಿಳಿಗೇರಿ, ಕಗ್ಗೋಡ್ಲು ಮತ್ತು ಮೇಕೇರಿ ಗ್ರಾಮಗಳನ್ನು ಒಳಗೊಂಡಂತೆ ಕಾರ್ಯನಿರ್ವಹಿಸುತ್ತಿದ್ದು, ಸಂಘದಲ್ಲಿ 1,261 ಸದಸ್ಯರಿದ್ದಾರೆ. 1.81 ಕೋಟಿ ರೂ. ಪಾಲು ಬಂಡವಾಳ ಹಾಗೂ 2.43 ಕೋಟಿ ರೂ. ಕ್ಷೇಮ ನಿಧಿಯನ್ನು ಹೊಂದಿದೆ. ಸಂಘದ ದುಡಿಯುವ ಬಂಡವಾಳ 27.75 ಕೋಟಿ ರೂ.ಗಳಾಗಿದ್ದು, ಪ್ರಸ್ತುತ 16.39 ಕೋಟಿ ರೂ. ಠೇವಣಿ…
ಮಡಿಕೇರಿ, NEWS DESK ಆ. 26: ಕಸ್ತೂರಿ ರಂಗನ್ ವರದಿ ಜಾರಿಯಾದಲ್ಲಿ, ತಲೆತಲಾಂತರಗಳಿಂದ ಸಿ ಮತ್ತು ಡಿ ದರ್ಜೆಯ ಜಮೀನಿನಲ್ಲಿ ಬದುಕು ಕಟ್ಟಿಕೊಂಡಿರುವ ಕೃಷಿಕ ಸಮೂಹವು ತೀವ್ರ ಸಂಕಷ್ಟಕ್ಕೆ ಸಿಲುಕಲಿದೆ ಎಂದು ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯಿಂದ ಜನವಸತಿಯ 53 ಗ್ರಾಮಗಳನ್ನು ಕೈಬಿಡುವುದು ಸೇರಿದಂತೆ ಸೂಕ್ಷ್ಮ ಪರಿಸರ ವಲಯದ ಗಡಿಯಿಂದ ಬಫರ್ ಝೋನ್ನ್ನು ‘ಶೂನ್ಯ’ಕ್ಕೆ ಮಿತಿಗೊಳಿಸಬೇಕೆಂದು ಆಗ್ರಹಿಸಿ, ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಸೆ. 11ರಂದು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಅಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯ ಸುದರ್ಶನ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಗಾಂಧಿ ಮೈದಾನದಲ್ಲಿ ಬಹಿರಂಗ ಸಭೆ ನಡೆಸಲು ಉದ್ದೇಶಿಸಲಾಗಿದೆ. ಇದರಲ್ಲಿ ಜಿಲ್ಲೆಯಾದ್ಯಂತದಿಂದ ಜನರು ಹಾಗೂ ಸಂಘ-ಸಂಸ್ಥೆಗಳು ಪಾಲ್ಗೊಳ್ಳಲಿರುವುದಾಗಿ ಹೇಳಿದರು. ಇಡೀ ಜಿಲ್ಲೆಯೇ ಸೂಕ್ಷ್ಮ ಪರಿಸರ ವಲಯವಾಗುವ ಆತಂಕ ಕಸ್ತೂರಿ ರಂಗನ್…






