ಲೇಖಕ: admin

ಮಡಿಕೇರಿ ನ.9 NEWS DESK : ಚೆಯ್ಯಂಡಾಣೆಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಕೋಕೇರಿ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಜಗತ್ತಿನಾದ್ಯಂತ ಖ್ಯಾತಿ ಹೊಂದಿರುವ ಕ್ರಿಕೆಟ್ ಪಂದ್ಯಾಟ ಗ್ರಾಮೀಣ ಭಾಗದ ಯುವಕರ ಮನರಂಜನೆ ಹಾಗೂ ಅವರ ಪ್ರತಿಭೆಯನ್ನು ಜಗತ್ತಿಗೆ ಪರಿಚಯಿಸಲು ಸಹಕಾರಿಯಾಗುತ್ತದೆ ಎಂದು ಬಣ್ಣಿಸಿದರು. ಇಂತಹ ಪಂದ್ಯಾವಳಿಗಳು ಗ್ರಾಮೀಣ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಅತ್ಯಂತ ಮುಖ್ಯ ಎಂದು ಹೇಳಿದರು. ಕ್ರೀಡೆಯನ್ನು ಎಲ್ಲರೂ ಕ್ರೀಡಾಮನೋಭಾವದಿಂದ ಸ್ವೀಕರಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಶಾಸಕರು ಕರೆ ನೀಡಿದರು.  ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಬೊಳ್ಳಂಡ ಶರಿನ್, ಕೆಡಿಪಿ ಸದಸ್ಯ ಮಾಳೆಟೀರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ನರಿಯಂದಡ ಗ್ರಾಮ ಅಧ್ಯಕ್ಷರು ಕೌಶಿ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್…

Read More

ಮಡಿಕೇರಿ ನ.9 NEWS DESK : ವಿರಾಜಪೇಟೆ ತಾಲೂಕಿನ ಕಡಂಗ ಭಾಗಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಕಡಂಗ-ಚೆಯ್ಯಂಡಾಣೆ ಸಂಪರ್ಕಿಸುವ ಈ ಮುಖ್ಯ ರಸ್ತೆ, ಮಳೆಯಿಂದ ಹಾನಿಗೀಡಾಗಿದ್ದು ಶಾಸಕರ ವಿಶೇಷ ಅನುದಾನದಲ್ಲಿ ರೂ.4 ಕೋಟಿ 75 ಲಕ್ಷದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಕಾಮಗಾರಿಯು ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯರು ಮಾಳೆಟೀರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ನರಿಯಂದಡ ಗ್ರಾಮ ಅಧ್ಯಕ್ಷರು ಕೌಶಿಕ್ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಶೈಲಾ ಕುಟ್ಟಪ್ಪ, ವಾಣಿ, ಪ್ರಕಾಶ್, ಸುಬೀರ್, ಮಮ್ಮಾದ್, ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.8 NEWS DESK : ಅರಪಟ್ಟು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕಡಂಗ ಪ್ರಾಥಮಿಕ ಶಾಲೆಯ ಬಳಿ ಅಂಗನವಾಡಿ ಕಟ್ಟಕ್ಕೆ ರೂ.20ಲಕ್ಷದಲ್ಲಿ ನಿರ್ಮಾಣವಾಗಲಿದ್ದು, ಭೂಮಿ ಪೂಜೆ ಬಳಿಕ ಮಾತನಾಡಿದ  ಶಾಸಕರು, ಪ್ರತಿ ವಿದ್ಯಾರ್ಥಿಯು ತಮ್ಮ ವಿದ್ಯಾಭ್ಯಾಸದ ಆರಂಭವನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಾರೆ. ಹಾಗಾಗಿ ಅಂಗನವಾಡಿ ಕೇಂದ್ರಗಳು ದೇಶದ ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರವನ್ನು ಒದಗಿಸುತ್ತದೆ. ರಾಜ್ಯ ಸರ್ಕಾರ ಈಗಾಗಲೇ ಅಂಗನವಾಡಿಯಲ್ಲಿ ಕಲಿಯುವ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಸುಸಜ್ಜಿತ ಕಟ್ಟಡ ಹಾಗೂ ಪುಟಾಣಿ ಮಕ್ಕಳ ಕಲಿಕೆಗೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳು ಈ ಅಂಗನವಾಡಿ ಕೇಂದ್ರಗಳಲ್ಲಿ ಇರಲು ಸರ್ಕಾರ ವ್ಯವಸ್ಥೆ ಕಲ್ಪಿಸಿದೆ. ಕಾಮಗಾರಿಯು ಶೀಘ್ರದಲ್ಲಿ ಮುಕ್ತಾಯಗೊಂಡು ಮಕ್ಕಳ ಓದಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭ ಕೆಡಿಪಿ ಸದಸ್ಯರು ಮಾಳೆಟೀರ ಪ್ರಶಾಂತ್, ನಾಪೋಕ್ಲು…

Read More

ನಾಪೋಕ್ಲು ನ.8 NEWS DESK  : ಸಮೀಪದ ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಂಪ್ರದಾಯದಂತೆ ನ.19 ರಂದು ಪಾಡಿಯ ಇಗ್ಗುತ್ತಪ್ಪ ದೇವಾಲಯದಲ್ಲಿ ಪರಂಪರಾಗತ “ಪತ್ತೆಪರೆ” ಯಲ್ಲಿ ಬೆಳಿಗ್ಗೆ 10.30 ಗಂಟೆಗೆ ದೇವತಕ್ಕರು ಮತ್ತು ತಕ್ಕಮುಖ್ಯಸ್ಥರು ನಾಡುತಕ್ಕರನ್ನೊಳಗೊಂಡ ಸಭೆಯಲ್ಲಿ ದೇವಸ್ಥಾನದ ಜ್ಯೋತಿಷ್ಯ ಶಾಸ್ತ್ರಾಧಿಕಾರಿಗಳಾದ ಅಮ್ಮಂಗೇರಿ ಕಣಿಯರಿಂದ ಪುತ್ತರಿ ದಿನ ಮತ್ತು ಕದಿರು ತೆಗೆಯುವ ಶುಭ ಗಳಿಗೆಯನ್ನು ನಿಗದಿಗೊಳಿಸಲಾಗುವುದು. ಅಂದೇ ಮಧ್ಯಾಹ್ನದ ನಿತ್ಯ ಪೂಜೆಯ ನಂತರ ಅಪರಾಹ್ನ ಆದಿ ಸ್ಥಾನ ಮಲ್ಮದಲ್ಲಿ ದೇಶಕಟ್ಟು ಜಾರಿಯಾಗಲಿದೆ.ದೇಶಕಟ್ಟು ಡಿಸೆಂಬರ್ ನಾಲ್ಕರ ಬಿಚ್ರ್ಯಾರ್ ಕಲ್ಲಾಡ್ಚ ನಮ್ಮೆ ಯವರೆಗೂ ಜಾರಿಯಲ್ಲಿದ್ದು ಅಂದು ” ಮಲ್ಮ”ದಲ್ಲಿ ಸಾಂಪ್ರದಾಯಿಕ ವಿಧಿವಿಧಾನದೊಂದಿಗೆ ಮತ್ತು ಉತ್ಸವ ಮೂರ್ತಿಯನ್ನು ಮಲ್ಮ ಬೆಟ್ಟಕ್ಕೆ ಕೊಂಡೊಯ್ದು, ಪಾಡಿ, ನೆಲಜಿ, ಪೇರೂರುವಿನಿಂದ ವಿವಿಧ ತಕ್ಕಮುಖ್ಯಸ್ತರ ಐನ್ಮನೆಗಳಿಂದ ಆಗಮಿಸುವ ಎತ್ತು ಪೊರಾಟದೊಂದಿಗೆ (ಜೋಡೆತ್ತುಗಳ ಪೋರಾಟ) ಆದಿ ಸ್ಥಾನ ಮಲ್ಮ ದಲ್ಲಿ ಒಟ್ಟುಗೂಡಿ ಮಲ್ಮದ ದೇವನೆಲೆಯ ಪ್ರದಕ್ಷಿಣೆಯ ತರುವಾಯ ನೈವೇದ್ಯ ಅರ್ಪಣೆಗೂ ಮುನ್ನ ಸಾಂಪ್ರದಾಯಿಕವಾಗಿ ತಂದಂತಹ “ಪೋರ್” ಅಂದರೆ ಜೋಡೆತ್ತುಗಳೊಂದಿಗೆ ತಂದಂತಹ ಧಾನ್ಯದ ರಾಶಿಯನ್ನು…

Read More

ಉಡುಪಿ ನ.8 NEWS DESK : ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ.ಪ್ರಶಾಂತ್ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್ ಅವರನ್ನು ಉಡುಪಿ ಓಸಿಯನ್ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು. ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್ ಸಂಸ್ಥೆಯ ಅಶ್ವತ್ ಎಸ್. ಎಲ್, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್ ಸಂಸ್ಥೆಯ ಡಾ. ಗಣನಾಥ್ ಶೆಟ್ಟಿ, ಸುಜ್ಞಾನ ಸಂಸ್ಥೆಯ ಪ್ರತಾಪ್ ಚಂದ್ರ ಶೆಟ್ಟಿ, ಉಪಾಧ್ಯಕ್ಷರುಗಳನ್ನಾಗಿ ಸುಜ್ಞಾನ ಸಂಸ್ಥೆಯ ರಮೇಶ್ ಶೆಟ್ಟಿ, ಎಕ್ಸಲೆಂಟ್ ಕುಂದಾಪುರದ ದೀಪಾ ಎಂ. ಹೆಗಡೆ, ಅಮೃತ ಭಾರತಿ ಹೆಬ್ರಿಯ ಸತೀಶ್ ಪೈ ಹಾಗೂ ರಾಜೇಶ್ವರಿ ಸಂಸ್ಥೆ ಕಾರ್ಕಳದ ದೇವಿಪ್ರಸಾದ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಸಮಿತಿಯ ಗೌರವ ಉಪಾಧ್ಯಕ್ಷರಾದ ರಾಧಕೃಷ್ಣ ಶೆಣೈ, ಫಾದರ್ ವಿನ್ಸೆಂಟ್ ಕ್ರಾಸ್ತ, ಪ್ರೊ.…

Read More

ಮಡಿಕೇರಿ ನ.8 NEWS DESK : ಅಮ್ಮತ್ತಿ ಪ್ರೌಢಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರೌಢ ಶಾಲಾ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲು ಲಯನ್ಸ್ ಪ್ರೌಢ ಶಾಲಾ ಬಾಲಕಿಯರ ಫುಟ್ಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ. ಕೊಡಗು ಜಿಲ್ಲಾ ತಂಡವು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು 1-0 ಗೋಲುಗಳ ಅಂತರದಲ್ಲಿ ಸೊಲಿಸಿ ಜಯ ಸಾಧಿಸಿದೆ. ಕೊಡಗು ತಂಡದ ಗೋಲ್ ಕೀಪರ್ ಖುಷಿ ತಂಗಮ್ಮ ಪಂದ್ಯದುದ್ದಕ್ಕೂ ಸಂಭವನಿಯ ಗೋಲುಗಳನ್ನು ತೊಡೆಯುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಗೋಣಿಕೊಪ್ಪ ಲಯನ್ಸ್ ಶಾಲೆಯ ಶ್ರಾವ್ಯ, ಸೀತಮ್ಮ, ರಿಷಿಕಾ ಬಿಮಯ್ಯ ವಂಶಿಕಾ ಡಿ.ಜೆ, ಖುಷಿ ತಂಗಮ್ಮ, ಪೂಜಿತ, ತೃಷ, ಪರಿಣಿತಾ, ಹಾತೂರು ಪ್ರೌಢಶಾಲೆಯ ವಿಧ್ಯ, ಸೋನಿ, ಭವ್ಯ ಸಂತ ಜೊಸೆಫ್ ಪ್ರೌಢ ಶಾಲೆಯ ವಿಧಿತಾ, ಸೋನಶ್ರೀ, ರಿಫಾಮರಿಯಾಮ, ಪ್ರಣಿತ್ ಪೂವಮ್ಮ ತನುಷಾ .ಪಿ.ಬಿ.ಇಂಚರಾ ಲಯನ್ಸ್ ಪ್ರೌಢ ಶಾಲಾ ತಂಡದ ಪರವಾಗಿ ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ತಂಡದ ತರಬೇತುದಾರರಾಗಿ ಲಯನ್ಸ್ ಶಾಲಾ ದೈಹಿಕ ಶಿಕ್ಷಣ…

Read More

ಮಡಿಕೇರಿ ನ.8 NEWS DESK : ಸಮಸ್ತ ಕನ್ನಡಿಗರು ಕರ್ನಾಟಕ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಡಿಕೇರಿ ನಗರದ ಓಂಕಾರೇಶ್ವರ ದೇಗುಲದ ಸಮೀಪದ ಓಂಕಾರ ಸದನದಲ್ಲಿ ನಿಮ್ಮ ಪ್ರತಿಭೆ ನಮ್ಮ ವೇದಿಕೆ ಸಾಂಸ್ಕೃತಿಕ ಹಬ್ಬ ನ.9 ರಂದು ಆಯೋಜಿತವಾಗಿದೆ. ಸಾಹಿತಿ ಡಾಕ್ಟರ್ ನಡಿಬೈಲು ಉದಯಶಂಕರ್ ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ. ಪ್ರಾಂಶುಪಾಲ ಮೇಜರ್ ಬಿ.ರಾಘವ ಹಾಗೂ ಸಮರ್ಥ ಕನ್ನಡಿಗರು ಸಂಸ್ಥೆ ಕರ್ನಾಟಕದ ಸಂಸ್ಥಾಪಕ ಲಿಂಗೇಶ್ ಹುಣಸೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮರ್ಥ ಕನ್ನಡಿಗರು ಸಂಸ್ಥೆ ಕೊಡಗು ಘಟಕದ ಪ್ರಧಾನ ಸಂಚಾಲಕಿ ಜಯಲಕ್ಷ್ಮಿ ಕೆ ವಹಿಸುವರು. ಎರಡು ವಿಭಾಗಗಳಲ್ಲಿ ಪುಟಾಣಿ ಮಕ್ಕಳಿಗೆ ಛದ್ಮ ವೇಷ ಸ್ಪರ್ಧೆ, ಪ್ರಾಥಮಿಕ ಮಕ್ಕಳಿಗೆ ಸಮೂಹ ನೃತ್ಯ, ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಜಾನಪದ ನೃತ್ಯ,ಪದವಿ ವಿದ್ಯಾರ್ಥಿಗಳಿಗೆ ಸಮೂಹ ನೃತ್ಯ ಮತ್ತು ಮಹಿಳೆಯರಿಗೆ ಗೀತ ಗಾಯನ ಸ್ಪರ್ಧೆ, ಪದವಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಆಯ್ದ ಕವಿಗಳಿಂದ ಕವಿಗೋಷ್ಠಿ ಕೂಡ…

Read More

ಮಡಿಕೇರಿ NEWS DESK ನ.8 : ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯದ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿದ ಸದಸ್ಯರು ಕೊಡವಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಕೊಡವರ ಸಾಂಪ್ರದಾಯಿಕ ಗನ್ (ತೋಕ್) ವಿನಾಯಿತಿಯನ್ನು ಸಂವಿಧಾನದ 25 ಮತ್ತು 26ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಬೇಕು. ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕು, ಕೊಡವರ ರಾಜಕೀಯ ಸಬಲೀಕರಣಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದ ಎನ್.ಯು.ನಾಚಪ್ಪ ಅವರು ಜಿಲ್ಲಾಡಳಿತದ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿಪತ್ರ ಸಲ್ಲಿಸಿದರು. *ಬೇಡಿಕೆಗಳು* ಭಾರತದ ಸಂವಿಧಾನ ಪರಿಶೀಲನಾ ಆಯೋಗವು ಶಿಫಾರಸ್ಸು ಮಾಡಿದಂತೆ ಈಶಾನ್ಯ ಭಾರತದಲ್ಲಿ ಅಸ್ತಿತ್ವದಲ್ಲಿರುವ ಸ್ವಾಯತ್ತ ಪ್ರದೇಶಗಳು, ಪ್ರಾದೇಶಿಕ ಮಂಡಳಿಗಳು, ಲೇಹ್ ಮತ್ತು ಲಡಾಖ್ ಸ್ವಾಯತ್ತ…

Read More

ಮಡಿಕೇರಿ ನ.8 NEWS DESK : ಸರ್ವರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕೆನ್ನುವ ಕೇಂದ್ರ ಸರ್ಕಾರದ ಪರಿಕಲ್ಪನೆಯ ‘ಜಲ ಜೀವನ್ ಮಿಷನ್’ ಯೋಜನೆಯಡಿ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯ್ತಿಯ ‘ಕಾಂತೂರು’ ಮತ್ತು ‘ಕಿಗ್ಗಾಲು’ ಗ್ರಾಮಗಳಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಇನ್ನು ಮೂರು ತಿಂಗಳಿನ ಅವಧಿಯ ಒಳಗಾಗಿ ಇಡೀ ಪಂಚಾಯ್ತಿಯಲ್ಲಿ ಯೋಜನೆ ಪೂರ್ಣವಾಗಿ ಜಾರಿಗೆ ಬರುವ ವಿಶ್ವಾಸವನ್ನು ಪಂಚಾಯ್ತಿ ಅಧ್ಯಕ್ಷ ಕುಶನ್ ರೈ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯನ್ನು ಕಾಂತೂರು ಮತ್ತು ಕಿಗ್ಗಾಲು ಗ್ರಾಮಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವುದಕ್ಕೆ ಪ್ರಮುಖವಾಗಿ ಅಲ್ಲಿನ ಸಾರ್ವಜನಿಕರ ಸಂಪೂರ್ಣ ಸಹಕಾರ, ಪಂಚಾಯ್ತಿ ಜನಪ್ರತಿನಿಧಿಗಳು, ಇಂಜಿನಿಯರ್‍ಗಳ ಪರಿಶ್ರಮವೆ ಕಾರಣವೆಂದು ಸ್ಪಷ್ಟಪಡಿಸಿದರು. ಕಿಗ್ಗಾಲು ಮತ್ತು ಕಾಂತೂರು ಗ್ರಾಮಗಳಲ್ಲಿ ಯೋಜನೆಯಡಿ ಕುಡಿಯುವ ನೀರನ್ನು ಕಾವೇರಿ ನದಿಯಿಂದ ಒದಗಿಸಲಾಗುತ್ತಿದೆ. ಕಿಗ್ಗಾಲು ಗ್ರಾಮದಲ್ಲಿ ಯೋಜನೆಯಡಿ 249 ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದ್ದರೆ, ಕಾಂತೂರು ಗ್ರಾಮದಲ್ಲಿ 726 ಮನೆಗಳಿಗೆ ನೀರನ್ನು ಒದಗಿಸುವ ಕಾರ್ಯ ಮಾಡಲಾಗಿದೆಯೆಂದು ಮಾಹಿತಿಯನ್ನಿತ್ತರು. ಕಾಂತೂರು ಗ್ರಾಮದಲ್ಲಿ…

Read More

ಮಡಿಕೇರಿ ನ.7 NEWS DESK : ಪೊನ್ನಂಪೇಟೆಯಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಹಿಂದೆ ಸರ್ಕಾರ 63 ಹೊಸ ತಾಲ್ಲೂಕುಗಳನ್ನು ಪ್ರಕಟಿಸಿತ್ತು, ಅದರಲ್ಲಿ ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಾಗಿ ಸೇರ್ಪಡೆಗೊಂಡಿದ್ದವು, ಆ ಸಂದರ್ಭದಲ್ಲಿ 14 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ 2 ವರ್ಷದಲ್ಲಿ, 49 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಿ ಆದೇಶಿಸಿದೆ ಎಂದು ತಿಳಿಸಿದರು. ಹೊಸ ತಾಲ್ಲೂಕುಗಳಲ್ಲಿ ಪ್ರತೀ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸರ್ಕಾರ ತಲಾ 8.60…

Read More