ಮಡಿಕೇರಿ ನ.7 NEWS DESK : ಮರಗೋಡು ಎಸ್ ಕೆ ಎಫ್ ಸಿ ವತಿಯಿಂದ ಪ್ರಥಮ ಬಾರಿಗೆ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯವು ನ.8 ಮತ್ತು 9 ಮರಗೋಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಮೊಗೇರ ಜನಾಂಗದ ಕ್ರೀಡಾಪಟುಗಳಿಗೆ ಮಾತ್ರ ಸೀಮಿತವಾಗಿದ್ದು, ಒಟ್ಟು 7 ಮಾಲೀಕತ್ವದ 7 ತಂಡಗಳು ಪಾಲ್ಗೊಳ್ಳಲಿದೆ. ಮ್ಯಾಡ್ರಿಡ್ ಎಫ್ ಸಿ ಸುಂಟಿಕೊಪ್ಪ, ಸ್ಟಾರ್ ಬಾಯ್ಸ್ ಅಭ್ಯತ್ ಮಂಗಲ, ಎಂ ಎಫ್ ಸಿ ಅಮ್ಮತಿ, ಅಮೃತ ಮೊಗೇರ ಫ್ರೆಂಡ್ಸ್ ಸಿದ್ದಾಪುರ, ಸೋಕರ್ ಯುನೈಟೆಡ್ ಅಮ್ಮತಿ, ಭಗವತಿ ಹಾಲುಗುಂದ, ಎಸ್ ಕೆ ಎಫ್ ಸಿ ಮರಗೋಡು, ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ. ಪಂದ್ಯ ಕೂಟದ ಚಾಂಪಿಯನ್ ತಂಡಕ್ಕೆ 44444 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22222 ನಗದು ಹಾಗೂ ಆಕರ್ಷಕ ಟ್ರೊಫಿ ತೃತೀಯ ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೊಫಿ ಹಾಗೆಯೇ ವೈಯಕ್ತಿಕ ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ಸಿಗಲಿದೆ. ಕ್ರೀಡಾ…
ಲೇಖಕ: admin
ಮಡಿಕೇರಿ ನ.7 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಕನಕದಾಸರ ಜಯಂತಿ ಆಚರಣೆಯು ನ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಎಚ್.ಎಸ್.ಮಹೇಶ್, ಕೊಡಗು ಜಿಲ್ಲಾ…
ಮಡಿಕೇರಿ ನ.7 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಗಳ ಪದಾಧಿಕಾರಿಗಳ ಸಭೆ ನಡೆಯಿತು. ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ ತಿಂಗಳು ವಿರಾಜಪೇಟೆ ಕ್ಷೇತ್ರದ ಹಿಂದುಳಿದ ವರ್ಗಗಳ ಘಟಕದ ಬೃಹತ್ ಸಮಾವೇಶ ಆಯೋಜಿಸುವ ಬಗ್ಗೆ ಚರ್ಚಿಸಿದ ಶಾಸಕರು, ಸಮಾವೇಶಕ್ಕೆ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವುದಾಗಿ ತಿಳಿಸಿದರು. ಈ ಸಮಾವೇಶದ ಪೂರ್ವಭಾವಿ ತಯಾರಿಯ ಬಗ್ಗೆ ಮಾಹಿತಿ ನೀಡಿದ ಶಾಸಕರು, ಸಮಾವೇಶದ ಯಶಸ್ವಿಗೆ ಕೈಗೊಳ್ಳಬೇಕಾದ ಎಲ್ಲಾ ಕಾರ್ಯಕ್ರಮಗಳನ್ನು ಬಗ್ಗೆ ಪದಾಧಿಕಾರಿಗಳಿಗೆ ಮನವರಿಕೆ ಮಾಡಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಘಟಕಗಳ ಜಿಲ್ಲಾಧ್ಯಕ್ಷ ಬಾನಂಡ ಪ್ರತ್ಯು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ಜಿಲ್ಲಾ ಯುವ…
ಮಡಿಕೇರಿ ನ.7 NEWS DESK : ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರನ್ನು ಗುರುತಿಸಲು ಸರ್ಕಾರದ ನಿರ್ದೇಶನದಂತೆ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ಯಲ್ಲಿ ತೆರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್ಎಸ್ಎಲ್ಸಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಕಂದಾಯ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 13 ರ ಸಂಜೆ 5.30 ಗಂಟೆಯೊಳಗೆ ಅಥವಾ ಮುಂಚಿತವಾಗಿ ಅರ್ಜಿಗಳನ್ನು https://karnemakaone.kar.nic/abcd/ ನಲ್ಲಿ ಆನ್ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ. ಅರ್ಜಿಯೊಂದಿಗೆ (ಆನ್ಲೈನ್ನಲ್ಲಿ) ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕವಿರುವ ಎಸ್ಎಸ್ಎಲ್ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರರು/ ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಡೀಕರಣ ಪತ್ರ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, ಪತಿಯ ಮರಣ ಪ್ರಮಾಣಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ…
ಮಡಿಕೇರಿ ನ.7 NEWS DESK : ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯಗತಗೊಳಿಸಲಾದ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸದರು, ಜಲ್ ಜೀವನ್ ಮಿಷನ್ ಯೋಜನೆಯ ಕಾರ್ಯಗತಗೊಳಿಸುವುದು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಲಭ್ಯತೆಯ ಮಹತ್ವದ ಹೆಜ್ಜೆ ಎಂದು ಪ್ರಶಂಸಿಸಿದರು. ಯೋಜನೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿರುವ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್ ಗಳು ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮತ್ತು ಕಾಮಗಾರಿಯನ್ನು ನಿರ್ವಹಿಸಲು ಸಹಕರಿಸಿದ ಗ್ರಾಮಸ್ಥರಿಗೆ ಅಭಿನಂದಿಸಿದರು. ಜಿಲ್ಲಾದ್ಯಂತ ಇದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಸಂಬಂಧಿತ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿದಲ್ಲಿ ಯೋಜನೆಗಳನ್ನು ಉತ್ತಮವಾಗಿ ಸಮಯಕ್ಕೆ ಪೂರ್ಣಗೊಳಿಸಲು…
ಮಡಿಕೇರಿ ನ.7 NEWS DESK : ಪ್ರಧಾನ ಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮವು ನಗರದ ರಾಜ್ ದರ್ಶನ್ ಹೋಟೆಲ್ನಲ್ಲಿ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಿತು. ಪ್ರಧಾನ ಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮವು ಬಹಳ ಒಂದು ವಿನೂತನವಾದ ಯೋಜನೆಯಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ, ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಒಂದು ಅತ್ಯುತ್ತಮ ಯೋಜನೆಯಾಗಿದೆ. ನಮ್ಮ ಭಾರತ ದೇಶವು ಸಂಸ್ಕøತಿಗಳ ನೆಲೆ ಬೀಡು. ನಮ್ಮ ದೇಶದಲ್ಲಿ ಅನೇಕ ರೀತಿಯ ಕಲೆ, ಸಂಸ್ಕøತಿ, ಕಸುಬುಗಳಿವೆ. ಇವೆಲ್ಲವನನ್ನು ಒಂದು ಚಾವಣಿಗೆ ತರುವಂತಹ ಯೋಜನೆ ಇದಾಗಿದೆ. ಬೇರೆ ಬೇರೆ ರೀತಿಯ ಉದ್ಯೋಗಗಳನ್ನು ಕಲಿಯಲು ಹಾಗೂ ಉತ್ತೇಜನ ನೀಡಲು ಸರ್ಕಾರದ ವತಿಯಿಂದ ಸಾಲ ಸೌಲಭ್ಯಗಳನ್ನು ನೀಡಿ ಸಹಾಯವನ್ನು ಮಾಡುವ ಒಂದು ಒಳ್ಳೆಯ ಯೋಜನೆ ಸರ್ಕಾರವು ತಂದಿದೆ. ಈ ಯೋಜನೆಯ ಉಪಯೋಗವನ್ನು ಎಲ್ಲರು ಪಡೆದುಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದರು. ಜಿಲ್ಲಾ ಕೌಶಲ್ಯಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರೂಪ ಅವರು ಮಾತನಾಡಿ ಉದ್ಯಮಿ ಹಾಗೂ ಉದ್ಯೋಗ ನೀಡು ಎಂಬುದು ನಮ್ಮ…
ಮಡಿಕೇರಿ NEWS DESK ನ.6 : ಚಲನಚಿತ್ರ ರಂಗದಲ್ಲಿ ಅಮೋಘ ಸಾಧನೆ ಮಾಡುತ್ತಿರುವ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಹಾಗೂ ರಾಷ್ಟ್ರೀಯ ಪ್ರಶಸ್ತಿ ವಿಜೇತೆ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ‘ಗೃಹಶೋಭಾ ಇನ್ ಇನ್ ಸ್ಪೈರ್ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಇಂಟರ್ ನ್ಯಾಷನಲ್ ಸೆಂಟರ್ ಸಭಾಂಗಣದಲ್ಲಿ ನಡೆದ ‘ಗೃಹಶೋಭಾ ಇನ್ ಇನ್ ಸ್ಪೈರ್ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಯಶೋಧ ಪ್ರಕಾಶ್ ಅವರಿಗೆ ಮನೋರಂಜನೆಯ ಮೂಲಕ ಮಹಿಳಾ ಸಬಲೀಕರಣ ಮತ್ತು ಸಿನಿಮಾ ರಂಗದ ತಾಂತ್ರಿಕ ವಿಭಾಗದ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡೆಲ್ಲಿ ಪ್ರೆಸ್ ನ ಪ್ರಧಾನ ಸಂಪಾದಕ ಪರೇಶ್ನಾಥ್ ಮಾತನಾಡಿ ಮಹಿಳಾ ಸಾಧಕರನ್ನು ಪ್ರೋತ್ಸಾಹಿಸಲು ಮತ್ತು ಮುಂದಿನ ಸಾಧನೆಗೆ ಸ್ಫೂರ್ತಿ ತುಂಬಲು ಪ್ರತಿ ವರ್ಷ ‘ಗೃಹಶೋಭಾ ಇನ್ ಇನ್ ಸ್ಪೈರ್ ಪ್ರಶಸ್ತಿ’ ಯನ್ನು ನೀಡಲಾಗುತ್ತಿದೆ ಎಂದರು. ಡೆಲ್ಲಿ ಪ್ರೆಸ್ ನ ಪ್ರಕಾಶಕ ಅನಂತ್ ನಾಥ್ ಮಾತನಾಡಿ ಮಹಿಳಾ ಪ್ರಧಾನವಾಗಿರುವ ಗೃಹಶೋಭಾ ಪುಸ್ತಕ 8 ಭಾಷೆಗಳಲ್ಲಿ ಪ್ರಕಟಗೊಳ್ಳುತ್ತಿದೆ. ವಿವಿಧ ಕ್ಷೇತ್ರಗಳ…
ಮಡಿಕೇರಿ ನ.6 NEWS DESK : ಗೋಣಿಕೊಪ್ಪದಲ್ಲಿ ಪ್ರಗತಿಯಲ್ಲಿರುವ ಗೋಣಿಕೊಪ್ಪ ಬಸ್ ನಿಲ್ದಾಣದ ಕಾಮಗಾರಿಯ ಪ್ರಗತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ಈಗಾಗಲೇ ಮುಕ್ತಾಯ ಹಂತಕ್ಕೆ ಬಂದಿರುವ ಕಾಮಗಾರಿಯ ಅಂತಿಮ ಕೆಲಸ ಕಾರ್ಯಗಳ ಬಗ್ಗೆ ವರದಿ ಪಡೆದ ಶಾಸಕರು, ಇನ್ನು ಕೆಲವೇ ಸಮಯದಲ್ಲಿ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಬೇಕಾಗಿರುವುದರಿಂದ, ಕಾಮಗಾರಿಗಳನ್ನು ಶೀಘ್ರವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ಎಲ್ಲಾ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ, ಕೆಲವು ಸಣ್ಣಪುಟ್ಟ ಮಾರ್ಪಾಡುಗಳನ್ನು ಗುತ್ತಿಗೆದಾರರಿಗೆ ನಿರ್ವಹಿಸಲು ತಿಳಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪಂಚಾಯಿತಿ ಅಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ, ಪಿ.ಡಿ.ಓ ತಿಮ್ಮಯ್ಯ, ನಾಯಂದಿರ ಶಿವಾಜಿ, ಕಂದ ದೇವಯ್ಯ, ಮುಕಟೀರ ಸಂದೀಪ್ ಹಾಗೂ ಪ್ರಮುಖರು ಇದ್ದರು.
ಮಡಿಕೇರಿ ನ.6 NEWS DESK : ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಗೌರವ ಸಂಚಾಲಕ ಪಿ.ಎಲ್.ಸುರೇಶ್ ಅವರು ಬಹಳ ವರ್ಷಗಳ ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕೊಡಗು ಜಿಲ್ಲೆಯ ಮೂವರಿಗೆ ಸಚಿವ ದೊರೆತ್ತಿತ್ತು. ನಂತರ ಯಡಿಯೂರಪ್ಪ ಅವರ ನೇತೃತ್ವದ ಸರಕಾರದಲ್ಲಿ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನ ನೀಡಲಾಯಿತು. ಆದರೆ ಆನಂತರ ಬಂದ ಯಾವುದೇ ಸರಕಾರದಲ್ಲಿ ಕೊಡಗಿಗೆ ಸಚಿವ ಸ್ಥಾನ ದೊರೆಯಲಿಲ್ಲ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಆದ್ದರಿಂದ ಈ ಬಾರಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈಗಾಗಲೇ ಕೊಡಗು ಗೌಡ ಹಿತರಕ್ಷಣಾ ಸಮಿತಿಯ ನಿಯೋಗ ಸಚಿವ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಕೋರಿದೆ. ಇದಕ್ಕೆ ಸೂಕ್ತ ಸ್ಪಂದನೆ ದೊರೆತ್ತಿದ್ದು, ಪೊನ್ನಣ್ಣ ಅವರು…
ಮಡಿಕೇರಿ ನ.6 NEWS DESK : ಆಟೋ ರಿಕ್ಷಾಗಳ ಚಾಲನ ಪರಿಮಿತಿಯನ್ನು 55 ಕಿ.ಮೀ.ಗೆ ಹೆಚ್ಚಿಸಬೇಕೆನ್ನುವ ಆಟೋ ಚಾಲಕರ ಮನವಿಗೆ ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ವಿವಿಧ ಸಂಘಟನೆಗಳು ತೀವ್ರ ವಿರೋಧವನ್ನು ವ್ಯಕ್ತಪಡಿಸಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರದ ಪ್ರವಾಸಿ ವಾಹನ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷ ತೆಕ್ಕಡ ಸಂತೋಷ್ ಕಾರ್ಯಪ್ಪ ಅವರು, ಈಗಾಗÀಲೇ ಸರಕಾರದ ಕೆಲವು ನಿಯಮಾವಳಿಗಳು, ರೆಂಟಲ್ ಬೈಕ್ಗಳಿಂದಾಗಿ ಅಗತ್ಯ ಬಾಡಿಗೆ ಇಲ್ಲದೆ ವಾಹನ ಮಾಲೀಕರು ಮತ್ತು ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಆಟೋ ಚಾಲನ ಪರಿಮಿತಿಯನ್ನು ಹೆಚ್ಚಿಸಿದಲ್ಲಿ ಅದರ ನೇರ ದುಷ್ಪರಿಣಾಮ ಪ್ರವಾಸಿ ವಾಹನ ಮಾಲೀಕರ ಮತ್ತು ಚಾಲಕರ ಮೇಲೆ ಬೀಳುತ್ತದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯ ಆಟೋ ಚಾಲಕರ ಸಂಘದ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿಗಳು ಮತ್ತು ಜಿಲ್ಲೆಯ ಶಾಸಕರನ್ನು ಭೇಟಿಯಾಗಿ, ಜಿಲ್ಲೆಯಲ್ಲಿ ಆಟೋ ಚಾಲನ ಪರಿಮಿತಿಯನ್ನು 15 ಕಿ.ಮೀ. ನಿಂದ 55 ಕಿ.ಮೀ.ಗೆ ಹೆಚ್ಚಿಸಬೇಕೆಂದು ಮನವಿ ಮಾಡಿದೆ. ಯಾವುದೇ ಕಾರಣಕ್ಕೂ…






