ಮಡಿಕೇರಿ ನ.5 NEWS DESK : ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27 ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ಹೆಮ್ಮೆಯಿಂದ ಗುರುತಿಸಿಕೊಂಡಾಗ ಮಾತ್ರ ಸಂವಿಧಾನಬದ್ಧ ಹಕ್ಕನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಸಿಎನ್ಸಿ ವತಿಯಿಂದ ಬಿಟ್ಟಂಗಾಲದಲ್ಲಿ ನಡೆದ 18ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು. ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿರುವ ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ ಎಂದು ತಿಳಿಸಿದರು. ಕೊಡವಲ್ಯಾಂಡ್ ಭೂ ರಾಜಕೀಯ…
ಲೇಖಕ: admin
ಮಡಿಕೇರಿ ನ.5 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮವನ್ನು ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಇಂಧನ, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರವಾಸೋದ್ಯಮ, ಬೃಹತ್ ಮತ್ತು ಸಣ್ಣ ನೀರಾವರಿ, ಶಾಲಾ ಶಿಕ್ಷಣ, ಕಾರ್ಮಿಕ, ಲೋಕೋಪಯೋಗಿ, ಕೈಮಗ್ಗ ಮತ್ತು ಜವಳಿ, ಅರಣ್ಯ, ನಗರಾಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡೆ, ಆಯುಷ್, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಕೈಗಾರಿಕೆ, ನಗರಾಭಿವೃದ್ಧಿ, ಪದವಿ ಪೂರ್ವ ಶಿಕ್ಷಣ, ಹೀಗೆ ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕಾಗಿ ಇಂತಿಷ್ಟು ಹಣ ಮೀಸಲಿರಿಸಿದ್ದು, ಆದಷ್ಟು…
ಮಡಿಕೇರಿ ನ.5 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿಯ ಸಭೆಯು ನಗರದ ವ್ಯಾಲಿವ್ಯೂ ಹೊಟೇಲಿನ ಸಭಾಂಗಣದಲ್ಲಿ ನಡೆಯಿತು. ಅಸೋಸಿಯೇಷನ್ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಆಶ್ರಯದಲ್ಲಿ ನಡೆಯಲಿರುವ ಕ್ರಿಸ್ಮಸ್ ಗಾಯನ ಸ್ಪರ್ಧೆ ಬಗ್ಗೆ ಚರ್ಚಿಸಲಾಯಿತು. ವೈಯುಕ್ತಿಕ ಕಾರಣದಿಂದ ತೆರವಾಗಿದ್ದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸೋಮವಾರಪೇಟೆಯ ಒ.ಎಲ್.ವಿ ದೇವಾಲಯಕ್ಕೆ ಸೇರಿದ ಅಂತೋಣಿ ಡಿಸೋಜ ಅವರನ್ನು ಸಭೆಯಲ್ಲಿ ಸರ್ವನು ಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅಸೋಸಿಯೇಷನ್ ಸದಸ್ಯರಾದ ಜೋಸೆಫ್, ರೋಡ್ರಿಗಸ್, ಜೂಡಿ ಡೇವಿಡ್ ವಾಜ್, ಜೇಮ್ಸ್ ಡಿಸೋಜ, ವಿ.ಎ.ಲಾರೆನ್ಸ್ ಹಾಜರಿದ್ದರು.
ಮಡಿಕೇರಿ ನ.5 NEWS DESK : ಮಹಿಷಾಸುರ ಮರ್ದಿನಿ ದೇವಾಲಯದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸುವಂತೆ ದೇವಾಲಯದ ಸಮಿತಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ದೇವಾಲಯ ಸಮಿತಿ ಪ್ರಮುಖರು ಮಹಿಷಾಸುರ ಮರ್ದಿನಿ ದೇವಸ್ಥಾನ ತಾವೂರು ಭಾಗಮಂಡಲ ಕೊಡಗು ಜಿಲ್ಲೆಯಲ್ಲಿರುವ ದೇವಸ್ಥಾನವು ಅತ್ಯಂತ ಪುರಾತನ ದೇವಸ್ಥಾನ ವಾಗಿದ್ದು, ಇದೀಗ ಶೀತಲಗೊಂಡಿದೆ. ಜೀರ್ಣೋದ್ಧಾರ ಮಾಡಲು ಅಗತ್ಯವಿರುವುದರಿಂದ 50 ಲಕ್ಷ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಅನುದಾನ ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ನಿಯೋಗದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಕೋಳಿ ಬೈಲು ಸಿ ವೆಂಕಟೇಶ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕುದುಕುಳಿ ಸಿ.ಅಶ್ವಥ್ ಹಾಗೂ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಮಡಿಕೇರಿ ನ.5 NEWS DESK : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಆಡಳಿತಾಧಿಕಾರಿ ಜೀವನ್ ಅವರ ಅಧ್ಯಕ್ಷತೆಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಾ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಆನಂದ್. ಎನ್ ಅವರು ಮಾತನಾಡಿ ಸಾರ್ವಜನಿಕರಲ್ಲಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ನವೆಂಬರ್-24 ರಿಂದ ಡಿಸೆಂಬರ್ 09 ರವರೆಗೆ 14 ದಿನಗಳ ಕಾಲ “ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಾ” ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯಿಂದ ಮನೆ ಮನೆಗೆ ಭೇಟಿ ನೀಡಿ ಚರ್ಮ ಮತ್ತು ನರಗಳ ತಪಾಸಣೆ ನಡೆಸಲಾಗುತ್ತದೆ, ಕುಷ್ಠರೋಗ ದೃಢಪಟ್ಟ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು. ಸಕಾಲಕ್ಕೆ ಚಿಕಿತ್ಸೆ ಪಡೆಯುವುದರಿಂದ ಅಂಗವೈಕಲ್ಯತೆ ತಡೆಗಟ್ಟಬಹುದು. ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಹೆಚ್ಚು ಕುಷ್ಠರೋಗ ಪ್ರಕರಣ ಎಲ್ಲಿ ಪತ್ತೆಯಾಗಿದೆಯೋ ಆ 13 ಪ್ರಾಥಮಿಕ ಆರೋಗ್ಯ ಕೇಂದ್ರದ 18 ಗ್ರಾಮಗಳಲ್ಲಿ ಒಟ್ಟು 17,399 ಮನೆಗಳಿದ್ದು ಒಟ್ಟು…
ಮಡಿಕೇರಿ ನ.5 NEWS DESK : ಕೊಡಗು ಜಿಲ್ಲೆಯ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾಪ್ರತಿಭೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಜಿಲ್ಲೆಯ ಪ್ರತಿಭಾವಂತ ಕಲಾವಿದರೂ ಸೇರಿದಂತೆ ಕಲಾಪ್ರದರ್ಶನಗಳಿಗೆ ಸೂಕ್ತ ಕಲಾಭವನದ ಕನಸು ಶೀಘ್ರ ಸಾಕಾರಗೊಳ್ಳಬೇಕು ಎಂದು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರು ಕರೆ ನೀಡಿದ್ದಾರೆ. ನಗರದ ಗಾಂಧಿ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿತ ಕಲಾಪ್ರತಿಭೋತ್ಸವದ ಎರಡನೇ ದಿನದ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗಿನಲ್ಲಿ ವರ್ಷದ 5-6 ತಿಂಗಳು ಧಾರಾಕಾರ ಮಳೆಯಿಂದಾಗಿ ಯಾವುದೇ ಸಾಂಸ್ಕೃತಿಕ ಚಟುವಟಿಕೆ ಕೈಗೊಳ್ಳಲು ಕಷ್ಟಸಾಧ್ಯವಾಗಿತ್ತು, ಹೀಗಿದ್ದರೂ ಜಿಲ್ಲೆಯಲ್ಲಿನ ಅನೇಕ ಉದಯೋನ್ಮುಖ ಕಲಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 8 ವರ್ಷಗಳ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾಪ್ರತಿಭೋತ್ಸವದಂತಹ ಕಾರ್ಯಕ್ರಮ ಮರು ಚಾಲನೆಗೊಂಡಿರುವುದು ಶ್ಲಾಘನೀಯ ಎಂದರು. ನೈಜ ಪ್ರತಿಭೆಗಳಿಗೆ ಕೊಡಗು ಎಂದೂ ನಿರಾಶೆ ಉಂಟು ಮಾಡುವುದಿಲ್ಲ. ಕಲಾಸಕ್ತ ಯುವಪೀಳಿಗೆ ಕಲಾಪ್ರತಿಭೋತ್ಸವದಂತಹ ಮತ್ತಷ್ಟು ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ತಮ್ಮೊಳಗಿನ ಕಲಾ ಪ್ರತಿಭೆಗೆ…
ಮಡಿಕೇರಿ ನ.5 NEWS DESK : ಮಡಿಕೇರಿ ನಗರದ ಎಎಲ್ಜಿ ಕ್ರೆಸೆಂಟ್ ಶಾಲೆಯಲ್ಲಿ ಪುಟಾಣಿ ‘ಮಾಸ್ಟರ್ ಶೆಫ್’ಗಳಿಂದ ರುಚಿಕರ ತಿಂಡಿಗಳು ಘಮಘಮಿಸಿತು. ಪೋಷಕರ ಮಮತೆ ಹಾಗೂ ಪ್ರೋತ್ಸಾಹದ ನಡುವೆ ಶಾಲಾ ಆವರಣದಲ್ಲಿ ನಡೆದ ಆಹಾರ ಉತ್ಸವವು ಗಮನ ಸೆಳೆಯಿತು. ಪುಟ್ಟ ತಾರೆಯರು ತೋರಿಸಿದ ಸೃಜನಶೀಲತೆ, ತಂಡದ ಮನೋಭಾವ ಮತ್ತು ಆಹಾರ ಪ್ರದರ್ಶನದ ನವೀನ ವಿಧಾನಗಳು ನೋಡುಗರ ಮನ ಗೆದ್ದವು. ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರಾದ ಜಾಯಿಸಿ ವಿನಯ್ ಅವರು ಉದ್ಘಾಟಿಸಿ ಮಾತನಾಡಿ, ಎಎಲ್ಜಿ ಕ್ರೆಸೆಂಟ್ ಶಾಲೆ ಕೇವಲ ಪಾಠಪುಸ್ತಕಗಳ ಪಾಠವನ್ನಷ್ಟೇ ಅಲ್ಲ, ಬದಲಾಗಿ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ಮುಂದಾಗಿದೆ. ಪುಟಾಣಿಗಳ ಹಾಗೂ ಪೋಷಕರ ಯಶಸ್ವಿ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದರು. ಶಿಕ್ಷಕರ ಅವಿರತ ಶ್ರಮಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದರು.
ಮಡಿಕೇರಿ ನ.5 NEWS DESK : ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.9ರಂದು ಲೇಖಕಿ ರುಬೀನಾ ಎಂ.ಎ ಅವರ ಚೊಚ್ಚಲ ಕೃತಿ “ಕಣ್ಣಾ ಮುಚ್ಚಾಲೆ” ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಕನ್ನಡ ಭವನ ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ಭಾರದ್ವಾಜ್ ಕೆ.ಆನಂದ ತೀರ್ಥ, ಕಣ್ಣಾ ಮುಚ್ಚಾಲೆ ಪುಸ್ತಕದ ಬರಹಗಾರ್ತಿ ಎಂ.ಎ.ರುಬೀನಾ ಹಾಗೂ ಮರ್ಕರ ಪೋಸ್ಟ್ ಪತ್ರಿಕೆ ಸಂಪಾದಕ ಜೈರೋಸ್ ಥೋಮಸ್ ಅಲೆಕ್ಸಾಂಡರ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಕನ್ನಡ ಭವನದ ಪ್ರಧಾನ…
ಮಡಿಕೇರಿ ನ.5 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ 6 ಬ್ಲಾಕ್ ಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ವಿ.ಜಿ.ಮೋಹನ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ವಿ.ಎ.ಲಾರೆನ್ಸ್, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಎ.ಕೆ.ಹಕೀಂ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾಗಿ ಆಪಟ್ಟೀರ ಟಾಟು ಮೊಣ್ಣಪ್ಪ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಮತೀನ್ ಹಾಗೂ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಪೆರುಮುಂಡ ಮನು ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರುಗಳ ಶಿಫಾರಸ್ಸಿನಂತೆ ಮಾಜಿ ಸಚಿವ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಇವರುಗಳನ್ನು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ. 6 ಬ್ಲಾಕ್ ಅಧ್ಯಕ್ಷರೊಂದಿಗೆ ತಲಾ 22 ಪದಾಧಿಕಾರಿ ಹಾಗೂ ಸದಸ್ಯರನ್ನು ಕೂಡ ನೇಮಕ ಮಾಡಿ ಅನುಮೋದನೆಗಾಗಿ ಕೆಪಿಸಿಸಿ ಪ್ರಚಾರ ಸಮಿತಿಗೆ…
ಸೋಮವಾರಪೇಟೆ ನ.5 NEWS DESK : ಶ್ರೀ ಹೊನ್ನಮ್ಮ ವಿಶೇಷ ಚೇತನ ಸ್ವಸಹಾಯ ಸಂಘದ ವತಿಯಿಂದ ‘ಸಾಮರ್ಥ್ಯ ಬಲವರ್ಧನ ತರಬೇತಿ’ ಶಿಬಿರ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ.ಗೋಪಾಲಕೃಷ್ಣ ಉದ್ಘಾಟಿಸಿದರು. ಉಪಾಧ್ಯಕ್ಷೆ ರಸೀದಾ, ಪಿಡಿಒ ಮೋಹನ್, ಹೆಚ್.ಆರ್.ಮೋಹನ್, ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಯ ಸುನೀತಾ ತರಬೇತಿ ನೀಡಿದರು. ಸಂಘವನ್ನು ಮುನ್ನೆಡೆಸುವ ಬಗ್ಗೆ, ಸಂಘದ ಪುಸ್ತಕ ಬರೆಯುವುದು ಅಂತರೀಕ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಸಂಘದ ಪ್ರತಿನಿಧಿ ನಾರಾಯಣ, ಮಧುಸೂದನ್ ಇದ್ದರು. 25 ಮಂದಿ ತರಬೇತಿ ಪಡೆದುಕೊಂಡರು.






