ಮಡಿಕೇರಿ NEWS DESK ಜು.26 : ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಗರದ ಕೊಡಗು ವಿದ್ಯಾಲಯದ, ಎನ್ ಸಿಸಿ ಕೆಡೆಟ್ಗಳು ಫೀಲ್ಡ್ ಮಾರ್ಷಲ್ ಕೆ.ಎಂ.ಕಾಯ೯ಪ್ಪ ಪ್ರತಿಮೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಕೊಡಗು ವಿದ್ಯಾಲಯದ ಎನ್.ಸಿ.ಸಿ. ಕೆಡೆಟ್ಗಳು ಪ್ರತಿಮೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಶಾಲೆಯ ಪ್ರಾಂಶುಪಾಲರಾದ ಕೆ. ಎಸ್. ಸುಮಿತ್ರಾ ಮಾತನಾಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರನ್ನು ಸ್ಮರಿಸುವುದು ಮತ್ತು ನಾಗರಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮುಖ್ಯವೆಂದು ಹೇಳಿದರು.
ಲೇಖಕ: admin
ಮಡಿಕೇರಿ NEWS DESK ಜು.26 : ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ನಗರಸಭೆ ಬಳಿ ಇರುವ ಯುದ್ಧ ಸ್ಮಾರಕದ ಬಳಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶೃದ್ಧಾಂಜಲಿ ಸಲ್ಸಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯ್ ಸ್ಥಾನಿಯ ಆಯುಕ್ತರಾದ ಮುತ್ತಪ್ಪ ಜಿಲ್ಲಾ ಖಜಾಂಚಿ ಮುದ್ದಪ್ಪ, ಮಡಿಕೇರಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ನೀಲಮ್ಮ, ಹಾಗೂ ಕಾರ್ಯದರ್ಶಿ ಚಂದ್ರಶೇಖರ್ ಹಾಜರಿದ್ದರು.
ಮಡಿಕೇರಿ NEWS DESK ಜು.26 : ಲಯನ್ಸ್ ಕ್ಲಬ್ ಮಡಿಕೇರಿ ವತಿಯಿಂದ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ ದೇಶದ ಸೇವೆಗಾಗಿ ತಮ್ಮ ಅತ್ಯುನ್ನತ ಬಲಿದಾನ ನೀಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಅನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್ ಕುಮಾರ್ ಎಲ್.ಮಾತನಾಡಿ, ಭಾರತೀಯ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯ, ಶೌರ್ಯ ಮತ್ತು ದೇಶಭಕ್ತಿ ಸದಾ ಸ್ಮರಣೀಯ, ಕಾರ್ಗಿಲ್ ವೀರರ ತ್ಯಾಗವು ಮುಂದಿನ ಪೀಳಿಗೆಗೂ ರಾಷ್ಟ್ರೀಯ ಏಕತೆ ಮತ್ತು ಸೇವೆಯ ಮೌಲ್ಯಗಳನ್ನು ಎತ್ತಿಹಿಡಿಯಲು ಸದಾ ಸ್ಪೂರ್ತಿಯಾಗಿರುತ್ತದೆ ಎಂದು ಹೇಳಿದರು. ಲಯನ್ಸ್ ಕ್ಲಬ್ ಸದಸ್ಯ ಬೊಳ್ಳಪ್ಪ ಕೆ.ಎ. ಅವರು ಕಾರ್ಗಿಲ್ ಯುದ್ಧದ ಐತಿಹಾಸಿಕ ಮಹತ್ವ, ಭಾರತೀಯ ಸೇನೆ ಎದುರಿಸಿದ ಸವಾಲುಗಳು ಹಾಗೂ ಯುದ್ಧದ ಸಮಯದಲ್ಲಿ ಯೋಧರು ಮೆರೆದ ಸಾಹಸ ಮತ್ತು ದೃಢಸಂಕಲ್ಪದ ಕುರಿತು ಮಹತ್ವದ ಮಾಹಿತಿ ನೀಡಿದರು. ಕ್ಲಬ್ನ ಕಾರ್ಯದರ್ಶಿ ಮಧುಕರ್ ಕೆ., ಕೋಶಾಧಿಕಾರಿ ನವೀನ್ ಅಂಬೆಕಲ್, ನಿರ್ದೇಶಕರಾದ ಜೆ.…
ಮಡಿಕೇರಿ NEWS DESK ಜು.26 : ವಿರಾಜಪೇಟೆ ತಾಲ್ಲೂಕಿನ ಆನಂದಪುರ ಸಮೀಪದ ಕಾಫಿ ತೋಟವೊಂದರಲ್ಲಿ ಹೆಣ್ಣಾನೆಯ ಮೃತದೇಹ ಪತ್ತೆಯಾಗಿದೆ. ಆಹಾರ ಅರಸುತ್ತಾ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ತಾಯಿಯನ್ನು ಕಳೆದುಕೊಂಡ ಮರಿಯಾನೆ ಮೃತದೇಹದ ಬಳಿ ರೋಧಿಸುತ್ತಿದ್ದ ದೃಶ್ಯ ಕಂಡು ಬಂತು. ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ಮತ್ತು ಅಂತಿಮ ಸಂಸ್ಕಾರಕ್ಕೆ ಕ್ರಮ ಕೈಗೊಂಡರು. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮಡಿಕೇರಿ NEWS DESK ಜು.26 : ಟ್ಯಾಂಕರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ದಕ್ಷಿಣ ಕೊಡಗಿನ ಗೋಣಿಕೊಪ್ಪಲು ಸಮೀಪದ ದೇವರಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನ ಬನಶಂಕರಿ ಮೂಲದ ಗೋಕುಲ್ (24) ಹಾಗೂ ಚೇತನ್ (24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಕೇರಳಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಗೋಣಿಕೊಪ್ಪಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ NEWS DESK ಜು.26 : ಹಿಮಾಚಲ ಪ್ರದೇಶದ ಎತ್ತರದ ಕಿನ್ನೌರ್ ನ ತಾಶಿಗಂಗ್ ಮತಗಟ್ಟೆ, ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ದೂರದ ಮಾಲೋಗಾಂವ್ ಮತಗಟ್ಟೆ ಮತ್ತು ಗುಜರಾತ್ನ ಗಿರ್ ರಾಷ್ಟ್ರೀಯ ಉದ್ಯಾನವನದ ಏಕೈಕ ಮತದಾರನಿಗಾಗಿ ನಿರ್ಮಿಸಲಾದ ಮತಗಟ್ಟೆಗಳ ಮಾದರಿಯಲ್ಲಿ, ಪ್ರತಿ ಕೊಡವ ವಂಶಾವಳಿ ಪೀಠ (“ಬಲ್ಯಮನೆ”) ಮತ್ತು ಪ್ರತಿ ಕೊಡವ ಆಧ್ಯಾತ್ಮಿಕ ಪೀಠಗಳಿಗೆ (“ಮಂದ್”) ಪ್ರತ್ಯೇಕ ವಿಶೇಷ ಕೊಡವ ಮತಗಟ್ಟೆಗಳನ್ನು ಸ್ಥಾಪಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಭಾರತದ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಈ ಪ್ರಮುಖ ಬೇಡಿಕೆಯ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ. ಕೊಡವ ಜನಾಂಗೀಯ ಲೋಕದ ಅಧಮನೀಯ ಧ್ವನಿ ಮತ್ತು ಸಾಕ್ಷಿಪ್ರಜ್ಞೆಯಾಗಿರುವ ಸಿ.ಎನ್.ಸಿ, ತೀವ್ರ ಕಾಳಜಿಯೊಂದಿಗೆ, ಹಿಮಾಚಲ ಪ್ರದೇಶದ ಎತ್ತರದ ಕಿನ್ನೌರ್ ನ ತಾಶಿಗಂಗ್ ಮತಗಟ್ಟೆ, ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ದೂರದ ಮಾಲೋಗಾಂವ್ ಮತಗಟ್ಟೆ ಮತ್ತು ಗುಜರಾತ್ನ ಗಿರ್ ರಾಷ್ಟ್ರೀಯ ಉದ್ಯಾನವನದ ಏಕೈಕ…
ಕುಶಾಲನಗರ ಜು.25 NEWS DESK : ಶಾಲಾ- ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ, ರಾಷ್ಟ್ರ ಭಕ್ತಿ, ಉತ್ತಮ ನಾಯಕತ್ವ ಗುಣ, ಸಹನೆ, ತಾಳ್ಮೆಯ ಶಕ್ತಿಯನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ವೇದಿಕೆ ಕಲ್ಪಿಸುತ್ತದೆ’ ಎಂದು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯ ಹೇಳಿದರು. ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕುಶಾಲನಗರ ಪಟ್ಟಣದ ಕೊಡವ ಸಮಾಜದ ಸಭಾಂಗಣದಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಏರ್ಪಡಿಸಿರುವ ಒಂದು ವಾರ ಕಾಲದ ಸ್ಕೌಟ್ಸ್,ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಸಂಸ್ಥೆಯಾದ ಸ್ಕೌಟ್ಸ್,ಗೈಡ್ಸ್ ಸಂಸ್ಥೆಯು ಬೆಳೆದು ಬಂದ ದಾರಿಯನ್ನು ವಿವರಿಸಿದರು. ಪ್ರಸಕ್ತ ವರ್ಷ ರಾಜ್ಯದಲ್ಲಿ 8.5 ಲಕ್ಷ ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ದೃಷ್ಟಿಯಾಗಿರಿಸಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿ ಸುಸ್ಥಿರ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಹಲವು…
ಮಡಿಕೇರಿ ಜು.25 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು 4 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹಾರಂಗಿ ಜಲಾಶಯದ ಕ್ರಸ್ಟ್ ಗೇಟ್ ಮೂಲಕ ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯದ ಇಇ ಮಹೇಶ್, ಎಇಇ ಪುಟ್ಟಸ್ವಾಮಿ, ಎಇ ಕಿರಣ್ ದೇವಯ್ಯ ಇತರರು ಇದ್ದರು.
ವಿರಾಜಪೇಟೆ ಜು.25 NEWS DESK : ಕೊಡವ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯನ್ನು ಇಂದಿನ ಯುವ ಪೀಳಿಗೆಗೆ ತಲುಪಿಸಿ, ಅದನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ಕೊಡವ ಜನಾಂಗದ ಪ್ರತಿಯೊಬ್ಬರ ಮೇಲಿದೆ ಎಂದು ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಒಂಟಿಅಂಗಡಿ ಭಾಗದಲ್ಲಿರುವ ಕೊಡವ ಸಂಸ್ಥೆಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಸಂಸ್ಕೃತಿ ಕಾರ್ಯಕ್ರಮದಲ್ಲಿ ‘ಪತ್ತಾಯ’ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೊಡವ ಸಾಹಿತ್ಯ ಅಕಾಡೆಮಿಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಕೃತಿ ಹಾಗೂ ಭಾಷೆಯ ಮಹತ್ವವನ್ನು ಸಾರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ‘ಪತ್ತಾಯ’ ಬಿಡುಗಡೆಯಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಮಾತ್ರ ಸಮುದಾಯದ ಬಾಂಧವರಲ್ಲಿ ನಮ್ಮ ಪುರಾತನ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಅರಿವು ಮೂಡಲು ಸಾಧ್ಯ. ಆಧುನಿಕ ಯುಗದ ಪ್ರಭಾವದಿಂದ ಇಂದಿನ ಯುವ ಪೀಳಿಗೆ ನಮ್ಮ ಭಾಷೆ, ಸಾಹಿತ್ಯ ಹಾಗೂ ಆಚಾರ-ವಿಚಾರಗಳಿಂದ ದೂರವಾಗುತ್ತಿರುವುದು ಕಳವಳಕಾರಿ ಎಂದರು. ಕೊಡವ ಸಂಸ್ಕೃತಿಯನ್ನು ಉಳಿಸುವ ಕಾರ್ಯ ಕೇವಲ…
ಗೋಣಿಕೊಪ್ಪ ಜು.25 NEWS DESK : ವಿದ್ಯಾರ್ಥಿಗಳು ಕೈಗೊಂಡ ಪ್ರತಿಭಟನೆಗೆ ಬೆಂಬಲವಾಗಿ ಹಾಗೂ ಕೇಂದ್ರ ಬಿಜೆಪಿ ನಾಯಕತ್ವ ಮತ್ತು ಪೊಲೀಸರು, ವಿದ್ಯಾರ್ಥಿಗಳ ಮೇಲೆ ನಡೆಸಿದ ದೌರ್ಜನ್ಯದ ವಿರುದ್ದ ಗೋಣಿಕೊಪ್ಪದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್, ಪ್ರಚಾರ ಸಮಿತಿ, ಯುವ ಕಾಂಗ್ರೆಸ್ ಹಾಗೂ ವಿವಿಧ ಪೋಷಕ ಘಟಕಗಳ ಜಂಟಿ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆ ತಳೆಯುತ್ತಿರುವುದು ಖಂಡನೀಯ. ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಹೋರಾಡುತ್ತಿದ್ದ ವಿದ್ಯಾರ್ಥಿಗಳನ್ನು ‘ಉಗ್ರಗಾಮಿಗಳು’ ಎಂದು ಹೇಳಿರುವುದು ಪ್ರಜಾಪ್ರಭುತ್ವಕ್ಕೆ ಬಂದೊದಗಿದ ದೊಡ್ಡ ದುರಂತ,” ಎಂದು ಕಿಡಿಕಾರಿದರು. ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಎಸಗಿರುವ ಈ ಅನ್ಯಾಯ ಇನ್ನೊಂದಿಲ್ಲ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಬ್ಲಾಕ್…






