ಮಡಿಕೇರಿ NEWS DESK ಆ.26 : ದೈವಜ್ಞ ಬ್ರಾಹ್ಮಣ ಸಮಾಜ ಮಡಿಕೇರಿ ವತಿಯಿಂದ ನೂಲು ಹುಣ್ಣಿಮೆ (ಶ್ರಾವಣ ಹುಣ್ಣಿಮೆ), ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮವನ್ನು ಶ್ರದ್ಧಾಭಕ್ತಿಯಿಂದ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಧಾರ್ಮಿಕ ಕಾರ್ಯಕ್ರಮವು ಸಮಾಜದ ಅಧ್ಯಕ್ಷ ಬಿ.ವಿ.ರೋಷನ್ ಹಾಗೂ ವೇದಮೂರ್ತಿ ಉಲ್ಲಾಸ್ ಭಟ್ ಅವರ ಸಮ್ಮುಖದಲ್ಲಿ ಶೇಖರ್ ಕಾಂಪ್ಲೆಕ್ಸ್ ನಲ್ಲಿ ನೆರವೇರಿತು. ಸಮಾಜದ ಹಲವಾರು ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಹಬ್ಬದ ಅಂಗವಾಗಿ ವೇದಮಂತ್ರಗಳ ಪಠಣದೊಂದಿಗೆ ಋಗ್ ಉಪಕರ್ಮ ಹಾಗೂ ನೂತನ ಜನಿವಾರ ಧಾರಣೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು. ಈ ಮೂಲಕ ಸಮಾಜದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸುವ ಜೊತೆಗೆ ಸಮಾಜ ಬಾಂಧವರಲ್ಲಿ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಲೇಖಕ: admin
ಮಡಿಕೇರಿ NEWS DESK ಆ.26 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ 23ರಂದು ಎರಡುದಿನಗಳ ಉತ್ತರ ಕರ್ನಾಟಕದ ವಾಡೆ ಮನೆಗಳ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಅರೆಭಾಷಿಕರ ಐನ್ ಮನೆಗಳು ಹಾಗೂ ವಾಡೆ ಮನೆಗಳ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದ ಅಧ್ಯಯನ ಪ್ರವಾಸದ ವೇಳೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿರುವ ಸುಮಾರು 850 ವರ್ಷದ ಭವ್ಯ ಇತಿಹಾಸ ವಿರುವ ಚಚಡಿ ದೇಸಾಯಿ ವಾಡೆಯನ್ನು ಪ್ರಧಾನವಾಗಿ ವೀಕ್ಷಿಸಿ ಅಧ್ಯಯನ ನಡೆಸಲಾಯಿತು. ವಾಡೆಯಲ್ಲಿ ಪ್ರಸ್ತುತ ವಾಸ್ತವ್ಯವಿರುವ ನಾಗರಾಜ ದೇಸಾಯಿಯವರು ಮಾಹಿತಿ ನೀಡಿದರು. 12ನೇ ಶತಮಾನದಲ್ಲಿ ರಟ್ಟರ ರಾಜವಂಶದ ಎರಡನೇಯ ಕಾರ್ತ್ಯವೀರ ನಿರ್ಮಿಸಿದ ಈ ಮಹಲ್ ಕೋಟೆಯಿಂದ ಆವೃತವಾಗಿದ್ದು 25 ತಲೆಮಾರುಗಳನ್ನು ಕಂಡಿದ್ದು ಇದೀಗ 26ನೇ ತಲೆಮಾರಿನ ದೇಸಾಯಿ ಕುಟುಂಬ ಇದನ್ನು ಮುನ್ನಡೆಸುತ್ತಿದೆ. ಚಚಡಿ ವಾಡೆ ವೀಕ್ಷಣೆ ಬಳಿಕ ಅಧ್ಯಯನ ತಂಡವು ಸವದತ್ತಿ ತಾಲೂಕಿನ ರುದ್ರಾಪುರದಲ್ಲಿರುವ ರುದ್ರಾಪುರ…
ಕೇರಳದ ಪ್ರಮುಖ ಹಬ್ಬವಾದ ಓಣಂ ಕೇವಲ ಒಂದು ಧಾರ್ಮಿಕ ಅಥವಾ ಸಾಂಸ್ಕೃತಿಕ ಆಚರಣೆಯಲ್ಲ. ಅದು ಸಂಸ್ಕೃತಿ, ಪರಂಪರೆ, ಕೃಷಿ, ಪ್ರಕೃತಿ, ಕುಟುಂಬ ಬಂಧ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಸಮ್ಮಿಲನ. “ವೈವಿಧ್ಯತೆಯಲ್ಲಿ ಏಕತೆ” ಎಂಬ ಮಹತ್ವದ ಸಂದೇಶವನ್ನು ಸಾರುವ ಓಣಂ, ಮಲಯಾಳಿ ಜನರ ಬದುಕಿನಲ್ಲಿ ವಿಶೇಷ ಸ್ಥಾನ ಪಡೆದಿದೆ. ಕೇರಳದ ಗಡಿಗಳನ್ನು ದಾಟಿ, ಮಲಯಾಳಿಗಳು ನೆಲೆಸಿರುವ ಎಲ್ಲೆಡೆ ಇಂದು ಓಣಂ ಸಂಭ್ರಮ ಮನೆ ಮಾಡಿದೆ. ಮನೆಯಂಗಳದಲ್ಲಿ ಅರಳುವ ವಿವಿಧ ಬಣ್ಣಗಳ ಹೂವುಗಳಿಂದ ರಚಿಸುವ ಪೂಕಳಂ, ಹೊಸ ಬಟ್ಟೆಯ ಸಂಭ್ರಮ, ಓಣಂ ಸದ್ಯ, ಸಾಂಪ್ರದಾಯಿಕ ನೃತ್ಯಗಳು, ಆಟೋಟಗಳು, ದೋಣಿ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಓಣಂಗೆ ವಿಶೇಷ ಮೆರುಗು ನೀಡುತ್ತವೆ. ಕುಟುಂಬದ ಎಲ್ಲರೂ ಒಟ್ಟಾಗಿ ಸೇರಿ ಆಚರಿಸುವ ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವುದರ ಜೊತೆಗೆ, ಸಮಾಜದಲ್ಲಿ ಒಗ್ಗಟ್ಟು ಮತ್ತು ಸಹೋದರತ್ವದ ಭಾವನೆಯನ್ನು ಬೆಳೆಸುತ್ತದೆ. ಓಣಂ ಮೂಲತಃ ಕೃಷಿ ಸಂಸ್ಕೃತಿಯೊಂದಿಗೆ ಆಳವಾಗಿ ಬೆಸೆದುಕೊಂಡಿರುವ ಹಬ್ಬ. ಮಳೆಗಾಲದ ಅಬ್ಬರದ ನಡುವೆ ಹೊಲಗದ್ದೆಗಳಲ್ಲಿ ದುಡಿದು, ಬೆಳೆ ಬೆಳೆಯಿಸಿ ಕೃಷಿ ಚಟುವಟಿಕೆಗಳನ್ನು…
ಸುಂಟಿಕೊಪ್ಪಆ.25 NEWS DESK : ಭತ್ತದ ಕೃಷಿ ನಶಿಸುತ್ತಿರುವ ಈ ಕಾಲಘಟ್ಟದಲ್ಲಿ ಬಾಲ್ಯದಲ್ಲಿಯೇ ಮಕ್ಕಳಿಗೆ ನಾಟಿ ಕೃಷಿಯ ಮಹತ್ವದ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಆನೆಕಾಡು ಅರಣ್ಯ ವಲಯ ಅಧಿಕಾರಿ ಮಧುಕುಮಾರ್ ಹೇಳಿದರು. ಗದ್ದೆಹಳ್ಳದ ಹೋಮ್ಸ್ ಸಂಸ್ಥೆಯ ವತಿಯಿಂದ ಕೃತಿಕಾ ಹಾಗೂ ಸದಾನಂದ ಕರುಂಬಯ್ಯ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ‘ಜಿಜಿಎ ನಾಟಿ ಉತ್ಸವ–2026’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷಿಗಳು ತಮ್ಮ ಬಳಗಕ್ಕೆ ಆಹಾರ ಸಂಗ್ರಹಿಸಿ ಪೋಷಣೆ ಮಾಡುವ ರೀತಿಯ ಕುರಿತು ಮಕ್ಕಳಿಗೆ ಮಾಹಿತಿ ನೀಡಲಾಗುತ್ತಿದೆ. ಪ್ರತಿಯೊಬ್ಬ ರೈತರೂ ಭತ್ತದ ಕೃಷಿಯ ಬಗ್ಗೆ ಕಾಳಜಿ ವಹಿಸಬೇಕೆಂದು ಕರೆ ನೀಡಿದರು. ಮಡಿಕೇರಿ ಕೃಷಿ ವಿದ್ಯಾಲಯದ ವಿಸ್ತರಣಾ ಶಿಕ್ಷಣ ಘಟಕದ ಪ್ರಾಧ್ಯಾಪಕಿ ಡಾ. ಹೆಚ್.ಸಿ. ಲತಾ ಮಾತನಾಡಿ, ಭತ್ತದ ಕೃಷಿ, ಅದರ ಬೆಳವಣಿಗೆ ಹಾಗೂ ಕೃಷಿಯ ಪರಿಕಲ್ಪನೆಯ ಕುರಿತು ರೈತರು ಮತ್ತು ಮಕ್ಕಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ನಾಟಿ ಉತ್ಸವ–2026ಕ್ಕೆ ಉದ್ಯಮಿ ಹಾಗೂ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಸ್.ಜಿ. ಶ್ರೀನಿವಾಸ್ ಚಾಲನೆ ನೀಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ…
ಮಡಿಕೇರಿ NEWS DESK ಆ.26 : ಗೌರಿ-ಗಣೇಶೋತ್ಸವ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ಸರಕಾರ ವಿಶೇಷ ಅನುಮತಿ ನೀಡಬೇಕೆಂದು ಕೊಡಗು ಯುವ ಸೇನಾ ಮುಖಂಡ ಕುಲದೀಪ್ ಪೂನಾಚ ಒತ್ತಾಯಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಗೌರಿ-ಗಣೇಶೋತ್ಸವ ಹಾಗೂ ದಸರಾ ಹಬ್ಬಗಳು ಸಮೀಪಿಸುತ್ತಿದ್ದು, ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸಮಿತಿ ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ವಿರಾಜಪೇಟೆಯಲ್ಲಿ ಗಣೇಶೋತ್ಸವ, ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ದಸರಾ ಜನೋತ್ಸವಗಳು ಅದ್ದೂರಿಯಾಗಿ ನಡೆಯಲಿದ್ದು, ರಾತ್ರಿ ವೇಳೆಯಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿದರೆ ಹಬ್ಬದ ಸಂಭ್ರಮಕ್ಕೆ ಧಕ್ಕೆಯಾಗುವುದಲ್ಲದೆ, ಯುವ ಸಮುದಾಯದ ಪಾಲ್ಗೊಳ್ಳುವಿಕೆಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಜನಪ್ರತಿನಿಧಿಗಳು ಸರ್ಕಾರದ ಗಮನ ಸೆಳೆದು, ಹಬ್ಬಗಳ ಸಂದರ್ಭದಲ್ಲಿ ನಿಯಮಾನುಸಾರ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕುಲದೀಪ್ ಪೂನಾಚ ಮನವಿ ಮಾಡಿದ್ದಾರೆ. ಹಬ್ಬದ ಸಂಭ್ರಮ ಮತ್ತು ಸಾಂಸ್ಕೃತಿಕ ವಾತಾವರಣಕ್ಕೆ ಧಕ್ಕೆಯಾಗದ ರೀತಿಯಲ್ಲಿ ಧ್ವನಿವರ್ಧಕ ಬಳಕೆಗೆ ಸೂಕ್ತ…
ಕೇರಳದ ಪ್ರಮುಖ ಹಬ್ಬವಾದ ಓಣಂ ಕೇವಲ ಒಂದು ಧಾರ್ಮಿಕ ಅಥವಾ ಸಾಂಸ್ಕೃತಿಕ ಆಚರಣೆಯಲ್ಲ. ಅದು ಸಂಸ್ಕೃತಿ, ಪರಂಪರೆ, ಕೃಷಿ, ಪ್ರಕೃತಿ, ಕುಟುಂಬ ಬಂಧ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಸಮ್ಮಿಲನ. “ವೈವಿಧ್ಯತೆಯಲ್ಲಿ ಏಕತೆ” ಎಂಬ ಮಹತ್ವದ ಸಂದೇಶವನ್ನು ಸಾರುವ ಓಣಂ, ಮಲಯಾಳಿ ಜನರ ಬದುಕಿನಲ್ಲಿ ವಿಶೇಷ ಸ್ಥಾನ ಪಡೆದಿದೆ. ಕೇರಳದ ಗಡಿಗಳನ್ನು ದಾಟಿ, ಮಲಯಾಳಿಗಳು ನೆಲೆಸಿರುವ ಎಲ್ಲೆಡೆ ಇಂದು ಓಣಂ ಸಂಭ್ರಮ ಮನೆ ಮಾಡಿದೆ. ಮನೆಯಂಗಳದಲ್ಲಿ ಅರಳುವ ವಿವಿಧ ಬಣ್ಣಗಳ ಹೂವುಗಳಿಂದ ರಚಿಸುವ ಪೂಕಳಂ, ಹೊಸ ಬಟ್ಟೆಯ ಸಂಭ್ರಮ, ಓಣಂ ಸದ್ಯ, ಸಾಂಪ್ರದಾಯಿಕ ನೃತ್ಯಗಳು, ಆಟೋಟಗಳು, ದೋಣಿ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಓಣಂಗೆ ವಿಶೇಷ ಮೆರುಗು ನೀಡುತ್ತವೆ. ಕುಟುಂಬದ ಎಲ್ಲರೂ ಒಟ್ಟಾಗಿ ಸೇರಿ ಆಚರಿಸುವ ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವುದರ ಜೊತೆಗೆ, ಸಮಾಜದಲ್ಲಿ ಒಗ್ಗಟ್ಟು ಮತ್ತು ಸಹೋದರತ್ವದ ಭಾವನೆಯನ್ನು ಬೆಳೆಸುತ್ತದೆ. ಓಣಂ ಮೂಲತಃ ಕೃಷಿ ಸಂಸ್ಕೃತಿಯೊಂದಿಗೆ ಆಳವಾಗಿ ಬೆಸೆದುಕೊಂಡಿರುವ ಹಬ್ಬ. ಮಳೆಗಾಲದ ಅಬ್ಬರದ ನಡುವೆ ಹೊಲಗದ್ದೆಗಳಲ್ಲಿ ದುಡಿದು, ಬೆಳೆ ಬೆಳೆಯಿಸಿ ಕೃಷಿ ಚಟುವಟಿಕೆಗಳನ್ನು…
ಮಡಿಕೇರಿ, NEWS DESK ಆ.25 :ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಕುರಿತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ ಮತ್ತು ನದಿ ತಟಗಳ ಅಭಿವೃದ್ಧಿ ಹಾಗೂ ನದಿ ತಟಗಳಲ್ಲಿ ಅಕ್ರಮವಾಗಿ ಆಗಿರುವ ಒತ್ತುವರಿ ತೆರವುಗೊಳಿಸಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರದ ಮೂಲಕ ಯೋಜನೆ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಮೂಲಕ ಮನವಿ ಸಲ್ಲಿಸಿ ಚರ್ಚಿಸಲಾಯಿತು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಮಾರ್ಗದರ್ಶಕರಾದ ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮತ್ತು ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಚಂದ್ರಮೋಹನ್ ಎಂ ಎನ್ ಮತ್ತಿತರರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜೀವನದಿ ಕಾವೇರಿ ಕೊಡಗು ಜಿಲ್ಲೆಯಲ್ಲಿ ಮೂಲದಿಂದಲೇ ನಿರಂತರವಾಗಿ ಕಲುಷಿತಗೊಳ್ಳುತ್ತಿದ್ದು ಅದಕ್ಕೆ ಪ್ರಮುಖ ಕಾರಣಗಳು ಮತ್ತು ಆಗಬೇಕಾದ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ನದಿ ತಟಗಳು ಅಕ್ರಮವಾಗಿ ಒತ್ತುವರಿ ಆಗುವುದರೊಂದಿಗೆ ಅಕ್ರಮವಾಗಿ ವಾಣಿಜ್ಯ ಚಟುವಟಿಕೆಗಳು ನಡೆಯಲು ಆರಂಭಗೊಂಡಿವೆ. ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು…
ಕುಶಾಲನಗರ, NEWS DESK ಆ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಹಾಗೂ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಆ.25) ಹಾರಂಗಿ ಬಳಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ದಿವಂಗತ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಶೇ.98.77 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ಶನಿವಾರಸಂತೆಯ ವಿಘ್ನೇಶ್ವರ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯ ಎಚ್.ಕೆ. ಅವರನ್ನು ಸನ್ಮಾನಿಸಿ, ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ವಿದ್ಯಾರ್ಥಿಗಳು ನಾಡು-ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುವ ಮೂಲಕ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿನೊಂದಿಗೆ…
ಮಡಿಕೇರಿ NEWS DESK ಆ.25 : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನದಿ, ಉಪನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಭಾಗಮಂಡಲ, ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ರಾತ್ರಿಯಿಂದ ಬೆಳಗ್ಗಿನ ಅವಧಿಯವರೆಗೆ 110 ಮಿ.ಮೀ.ಗೂ ಹೆಚ್ಚಿನ ಮಳೆಯಾಗಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ಪ್ರವಾಹ ರಸ್ತೆಗಳನ್ನು ಆವರಿಸಿದೆ. ಕಾವೇರಿ ನದಿ ಪಾತ್ರದ ಪ್ರದೇಶಗಳಾದ ನಾಪೋಕ್ಲು, ಮೂರ್ನಾಡು, ಸಿದ್ದಾಪುರ ವಿಭಾಗದಲ್ಲು ಭಾರೀ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗೆ 10 ಗಂಟೆಯವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಪ್ರಮಾಣದ ಮಳೆ ಸುರಿದಿದ್ದು, ಮೈಕೊರೆಯುವ ಚಳಿ ಇದೆ. ಗಾಳಿ ಮಳೆಯ ಪರಿಣಾಮ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿಯಿಂದ ಸುದರ್ಶನ ಅತಿಥಿ ಗೃಹಕ್ಕೆ ತೆರಳುವ ಹಾದಿಯ ಪಕ್ಕದ ಬರೆ ಕುಸಿತವಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ನಗರದ ವಿವಿಧೆೆಡೆ ಮಳೆಯಿಂದ ಹಾನಿಗೊಳಗಾದ ವಾರ್ಡ್ಗಳಿಗೆ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಅರುಣ್ ಶೆಟ್ಟಿ,…
ಮಡಿಕೇರಿ NEWS DESK ಆ.25 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.1 ರಂದು 31ನೇ ವರ್ಷದ ಕೈಲ್ ಪೊವ್ದ್ ಆಚರಣೆ ಮಡಿಕೇರಿಯ ಹೊರವಲಯದ ಕ್ಯಾಪಿಟಲ್ ವಿಲೇಜ್ ಮಂದ್ ನಲ್ಲಿ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಕೊಡವಲ್ಯಾಂಡ್ ಹಕ್ಕುಗಳ ನಿರ್ಣಯಕ್ಕಾಗಿ, ಕೊಡವ ಜನಾಂಗೀಯ ಸಾಂಸ್ಕೃತಿಕ ಪರಂಪರೆ ಮತ್ತು ಸಮರ ಪರಂಪರೆಯನ್ನು ಪ್ರದರ್ಶಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ್ಯಾಷನಲ್ ಫ್ರಂಟ್ ಫಾರ್ ನ್ಯೂ ಸ್ಟೇಟ್ಸ್ ಅಧ್ಯಕ್ಷರು ಹಾಗೂ ಉತ್ತರಾಂಧ್ರ ಪ್ರತ್ಯೇಕ ರಾಜ್ಯ ಚಳವಳಿಯ ಮುಖಂಡರಾದ ಮೆಟ್ಟಾ ರಾಮರಾವ್, ಐಆರ್ಎಸ್ (ನಿವೃತ್ತ), ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಖ್ಯಾತ ವೈದ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಡಾ.ಮಾತಂಡ ಅಯ್ಯಪ್ಪ ಗೌರವ ಅತಿಥಿಯಾಗಿ ಹಾಗೂ ಚೋಪ್ರಾ ಫೌಂಡೇಶನ್ ನ ಸಿಇಒ ಬಲ್ಯಾಟಂಡ ಕವೇರ್ ಪೂಣಚ್ಚ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಾಧವಿ ಮೆಟ್ಟಾ ರಾಮರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಎನ್.ಯು.ನಾಚಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಜಾನಪದ ಪುಷ್ಪ ‘ತೋಕ್ ಪೂವ್’…






