ಮಡಿಕೇರಿ NEWS DESK ಜು.1 : ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ (ಕೆಸಿಎ) ನಿಯೋಗವು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಕೆಸಿಎ ಅಧ್ಯಕ್ಷ ಎ.ಜೆ.ಬಾಬು, ಕಾರ್ಯಾಧ್ಯಕ್ಷ ಆಂಟನಿ ರಾಬಿನ್, ಜಂಟಿ ಕಾರ್ಯದರ್ಶಿ ಬಿಂದು ಸಾರಾ, ನಿರ್ದೇಶಕರಾದ ಜೋಸೆಫ್ ಸ್ಯಾಮ್, ಜಾನ್ಸನ್ (ವಿರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು), ಆಂಟನಿ ಜೋಸೆಫ್, ಲಾಲು ಸ್ಟಾಲಿನ್, ಜೋಬಿ, ವಿನ್ಸೆಂಟ್ ಕುಟ್ಟಪ್ಪನ್ ಹಾಗೂ ಕ್ರೀಡಾ ಕಾರ್ಯದರ್ಶಿ ರಿಜೋಶ್ ಜೋಸೆಫ್ ಅವರುಗಳು ನಿಯೋಗದಲ್ಲಿದ್ದರು. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಎ.ಜೆ.ಬಾಬು ಅವರು ಸುಮಾರು ಎರಡು ದಶಕಗಳ ಕಾಲ ಕೊಡಗು ಬಿಜೆಪಿಯ ಭದ್ರಕೋಟೆಯಾಗಿತ್ತು. ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ 2023 ರಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯ ಕ್ಷೇತ್ರಗಳನ್ನು ಮರಳಿ ಗೆದ್ದಾಗ, ವಿರಾಜಪೇಟೆಯ ಐತಿಹಾಸಿಕ ಗೆಲುವಿನ ಮುಂಚೂಣಿಯಲ್ಲಿ ಪೊನ್ನಣ್ಣ ಅವರು ಇದ್ದರು. ಈಗ ಸಚಿವ ಸ್ಥಾನದ ಮೂಲಕ…
ಲೇಖಕ: admin
ಸುಂಟಿಕೊಪ್ಪ ಜು.1 NEWS DESK : ಸುಂಟಿಕೊಪ್ಪ ಹೋಬಳಿಯ ಸರ್ವಾಂಗೀಣ ಅಭಿವೃದ್ಧಿಗೆ ತಾವು ಸಾಧ್ಯವಿರುವ ಎಲ್ಲಾ ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಹಮ್ಮಿಕೊಳ್ಳುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ಗೌಡ ಹೇಳಿದ್ದಾರೆ. ಸುಂಟಿಕೊಪ್ಪದ ವಾಹನ ಚಾಲಕರ ಮತ್ತು ಆಟೋ ಚಾಲಕ ಮತ್ತು ಮಾಲೀಕರ ಸಂಘದ ನಿಲ್ಧಾಣದಲ್ಲಿ ಮೇಲ್ಚಾವಣಿ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಅವರು ಮಾತನಾಡಿದರು. ಕಾಮಗಾರಿಯನ್ನು ಕರ್ನಾಟಕ ರಾಜ್ಯ ರಸ್ತೆ ನಿರ್ಮಾಣ ನಿಗಮಕ್ಕೆ ವಹಿಸಲಾಗಿದ್ದು ಶಾಸಕರ ಅನುದಾನ ರೂ.40 ಲಕ್ಷ ನಿಗಧಿಗೊಳಿಸಲಾಗಿದ್ದು, ಅನುದಾನ ಈ ಕಾಮಗಾರಿಗೆ ಸಾಕಾಗುವುದಿಲ್ಲ ಆದರೆ ಬೇಕಾಗುವ ಅಉದಾನವನ್ನು ಒದಗಿಸುವ ಜವಬ್ಧಾರಿ ನಮ್ಮದುದು ಎಂದು ಅವರು ಹೇಳಿದರು. ಕಾಮಗಾರಿಯ ಸಂದರ್ಭ ಸಾರ್ವಜನಿಕರು, ವಾಹನ ಚಾಲಕರು ಮತ್ತು ಆಟೋ ಚಾಲಕರು ಸೇರಿದಂತೆ ಎಲ್ಲಾರೂ ಸಹಕಾರ ನೀಡಬೇಕಾಗಿರುವುದು ಅತೀ ಅಗತ್ಯವೆಂದು ಹೇಳಿದರು. ಕಾಮಗಾರಿ ಕುರಿತು ಇಂಜೀನಿಯರ್ ಅವರು ಮೇಲ್ಚಾವಣಿ ವಿನ್ಯಾಸದ ಬಗ್ಗೆ ಮಾಹಿತಿ ನೀಡಬೇಕೆಂದು ನಿರ್ದೇಶನ ನೀಡಿದರು. ಪಂಚಾಯಿತಿ ವತಿಯಿಂದ ನೂತನ ಮಾರುಕಟ್ಟೆಯ ಬಗ್ಗೆ ಕಾರ್ಯಕ್ರಮ ರೂಪಿಸಬೇಕಾಗಿದ್ದು, ನೂತನ…
ಮಡಿಕೇರಿ ಜು.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ಯು ಜು.2 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ, ಮಡಿಕೇರಿ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷರಾದ ವಿಜಯಲಕ್ಷ್ಮಿ, ಕುಶಾಲನಗರ ಹೋಬಳಿ…
ಮಡಿಕೇರಿ ಜು.1 NEWS DESK : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯ ಅಧಿಕಾರಿಯಾಗಿ ಜಿಲ್ಲೆಯಲ್ಲಿ ಸುಮಾರು 33 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಎಸ್.ಹೊನ್ನೇಗೌಡ ಅವರಿಗೆ ವಿವಿಧ ಇಲಾಖೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ನಗರದ ಮೈತ್ರಿ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊನ್ನೇಗೌಡ ಅವರಿಗೆ ಶಾಲೂ ಹೊದಿಸಿ, ಫಲ ತಾಂಬೂಲ ಹಾಗೂ ವಿಶೇಷ ಉಡುಗೊರೆ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಅಧಿಕಾರಿ ಎಸ್.ಹೊನ್ನೇಗೌಡ ಅವರು, ಜಿಲ್ಲೆಯಲ್ಲಿ ಉತ್ತಮ ಅನುಭವ ಆಗಿದೆ. ಜೊತೆಗೆ ಆತ್ಮತೃಪ್ತಿಯೂ ಇದೆ ಎಂದು ತಿಳಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆತ್ಮ ತೃಪ್ತಿಯಿಂದ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಆದರೆ ಒತ್ತಡ ಮಾಡಿಕೊಂಡು ಕಾರ್ಯ ನಿರ್ವಹಿಸಬಾರದು ಎಂದು ಅವರು ಸಲಹೆ ಮಾಡಿದರು. ತನ್ನ ಸೇವಾ ಅವಧಿಯಲ್ಲಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಭಾಗಮಂಡಲ ಜು.1 NEWS DESK : 2026-2027 ನೇ ಸಾಲಿಗೆ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ (BGS) ಪ್ರಥಮ ಬಾರಿಗೆ ಇವಿಎಂ ಮೂಲಕ ಮತ ಚಲಾಯಿಸಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚುನಾವಣಾ ಅಧಿಕಾರಿಗಳಾಗಿ ರಾಜ್ಯ ಶಾಸ್ತ್ರ ಉಪನ್ಯಾಸಕರಾದ ದಾಮೋಧರ ನಾಯ್ಕ್ ಮತ್ತು ಇತಿಹಾಸ ಉಪನ್ಯಾಸಕರಾದ ಸತೀಶ್ ಕಾರ್ಯ ನಿರ್ವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಹೇಮಂತ್ ಕುಮಾರ್ ಟಿ ಮುಖ್ಯ ಚುನಾವಣಾ ಆಯಕ್ತರಾಗಿ ಕಾರ್ಯನಿರ್ವಹಿಸಿದರು. ಆಡಳಿತಾಧಿಕಾರಿ ಕೀರ್ತಿ ಗೌಡ ಹೆಚ್.ಆರ್. ಉಪಸ್ಥಿತರಿದ್ದರು. ತಾಂತ್ರಿಕ ವ್ಯವಸ್ಥೆಯನ್ನು ನರಸಿಂಹ ಮತ್ತು ಕಿಶೋರ್ ಕೆ.ಬಿ ಯಶಸ್ವಿಯಾಗಿ ನಿರ್ವಹಿಸಿದರು. ಎಲ್ಲಾ ಉಪನ್ಯಾಸಕರು ಮತ್ತು ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿದರು. :: ಸಂಸತ್ತಿನ ನೂತನ ಪದಾಧಿಕಾರಿಗಳು : : ಕಾಲೇಜು ವಿಭಾಗ- ಪ್ರಜ್ವಲ್ ಕುದುಪಜೆ (ಶಾಲಾ ನಾಯಕ), ದರ್ಶಿನಿ ಕೆ. ಎಸ್.(ಕಾರ್ಯದರ್ಶಿ), ರಿಫಾ ಯು. (ಶಿಸ್ತು ನಾಯಕಿ), ಹೇಮಂತ್ ಎಂ ಎನ್.(ಕ್ರೀಡಾ ನಾಯಕ), ಭುವನೇಶ್ವರಿ ಕೆ. ಜೆ (ಆರೋಗ್ಯ ಮತ್ತು ಸ್ವಚ್ಚತಾ ನಾಯಕಿ)…
ಮಡಿಕೇರಿ ಜು.1 NEWS DESK : ಬೆಂಗಳೂರಿನ ಶ್ರೀ ಕಂಠೀರವ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನವನ್ನು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ನೇರ ಪ್ರಸಾರ ಮೂಲಕ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳನ್ನು ಸೇವನೆ ಮತ್ತು ದುಷ್ಪರಿಣಾಮ ಕುರಿತು ಅರಿವು ಮೂಡಿಸಲಾಯಿತು. ವಿರಾಜಪೇಟೆಯ ಡಿವೈಎಸ್ಪಿ ಎಸ್. ಮಹೇಶ್ ಕುಮಾರ್ ಮತ್ತು ವಿರಾಜಪೇಟೆ ನಗರದ ಸಬ್ ಇನ್ಸ್ಪೆಕ್ಟರ್ ಹೆಚ್.ಎಸ್.ಪ್ರಮೋದ್ ಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅರುಣ್ ಮತ್ತು ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಕುಶಾಲನರ ಜು.1 NEWS DESK : ಸ್ವಚ್ಛತೆಗಾಗಿ ನಿರಂತರ ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸರಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ಕುಶಾಲನಗರ ಪಿ.ಎಂ. ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಗ್ಲೌಸ್, ಮಾಸ್ಕ್, ಗಂಬೂಟ್ಸ್, ಸ್ಯಾನಿಟೈಸರ್, ಸೋಪ್ ಹಾಗೂ ರೇನ್ಕೋಟ್ ಒಳಗೊಂಡ ಕಿಟ್ಗಳನ್ನು ವಿತರಿಸಿದರು. ಪೌರಕಾರ್ಮಿಕರು ಸ್ವಚ್ಛ ನಗರದ ನೈಜ ಶಿಲ್ಪಿಗಳು. ಚರಂಡಿ, ಕಸ, ತ್ಯಾಜ್ಯ ಸ್ವಚ್ಛಗೊಳಿಸುವಾಗ ಅವರ ಆರೋಗ್ಯಕ್ಕೆ ಧಕ್ಕೆ ಆಗಬಾರದು. ಪ್ರತಿಯೊಬ್ಬರಿಗೂ ಸುರಕ್ಷತಾ ಪರಿಕರಗಳನ್ನು ನೀಡಲಾಗುತ್ತಿದೆ. ಕೆಲಸ ನಿರ್ವಹಿಸುವ ಸಂದರ್ಭ ಅಗತ್ಯ ಪರಿಕರಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ ಪಿ ಶಶಿಧರ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಜೋಸೆಫ್ ಫಿಕ್ಟರ್ ಸೋನ್ಸ್. ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ ಪಿ ಚಂದ್ರಕಲಾ ವಿ…
ಮಡಿಕೇರಿ ಜು.1 NEWS DESK : ರೋಟರಿ ಜಿಲ್ಲೆ 3181 ನ ವಲಯ 6 ರ ಸಹಾಯಕ ಗವನ೯ರ್ ಗಳಾಗಿ ಕೊಡಗಿನ ರೋಟರಿ ಸಂಸ್ಥೆಗಳಿಗೆ ಮೂವರು ಸಹಾಯಕ ಗವವ೯ರ್ ಗಳನ್ನು ನೇಕ ಮಾಡಲಾಗಿದೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ರೋಟರಿ ಸಂಸ್ಥೆಗಳಿಗೆ ಸಹಾಯಕ ಗವನ೯ರ್ ಆಗಿ ಶನಿವಾರಸಂತೆ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಎಚ್.ಎಸ್. ವಸಂತ್ ಕುಮಾರ್, ಕುಶಾಲನಗರ, ಆಲೂರು ಸಿದ್ದಾಪುರ, ಮಡಿಕೇರಿ ವುಡ್ಸ್, ಮಡಿಕೇರಿ ರೋಟರಿ ಸಂಸ್ಥೆಗಳಿಗೆ ಕುಶಾಲನಗರ ರೋಟರಿ ಸಂಸ್ಥೆಯಎಂ.ಡಿ. ರಂಗಸ್ವಾಮಿ, ವೀರಾಜಪೇಟೆ, ಗೋಣಿಕೊಪ್ಪ, ಪಿರಿಯಾಪಟ್ಟಣ ಐಕಾನ್ ರೋಟರಿ ಸಂಸ್ಥೆಗಳಿಗೆ ಪಿರಿಯಾಪಟ್ಟಣ ರೋಟರಿ ಐಕಾನ್ ಸಂಸ್ಥೆಯ ಸಿ.ಎನ್. ವಿಜಯ್ ಅವರನ್ನು ರೋಟರಿ ಜಿಲ್ಲೆ 3181 ನಿಂದ ನೇಮಕ ಮಾಡಲಾಗಿದೆ.
ಮಡಿಕೇರಿ ಜು.1 NEWS DESK : ಸತ್ಯ, ಧರ್ಮ ನ್ಯಾಯ ಎಂಬ ಜೀವನ ಮೌಲ್ಯಗಳನ್ನು ಎಂದಿಗೂ ಮರೆಯಬಾರದು, ಯಾವುದೇ ಸಂದರ್ಭದಲ್ಲೂ ಪಕ್ಷಪಾತ ಮಾಡಬಾರದು ಎಂದು ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಬಿ.ಜಿ.ವಿ.ಕುಮಾರ್ ಕರೆ ನೀಡಿದರು. ಮಡಿಕೇರಿಯ ಕೊಡಗು ವಿದ್ಯಾಲಯದ ಬಿ.ಕೆ.ಸುಬ್ಬಯ್ಯ ಸಭಾಂಗಣದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ಪದಗ್ರಹಣ ಸಮಾರಂಭ ಜರುಗಿತು. ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಬಿ.ಜಿ.ವಿ. ಕುಮಾರ್ ನೂತನ ವಿದ್ಯಾರ್ಥಿ ಪರಿಷತ್ ಸದಸ್ಯರಿಗೆ ಪದಗ್ರಹಣ ಬೋಧಿಸಿ ಅಧಿಕಾರದ ಬ್ಯಾಡ್ಜ್ಗಳನ್ನು ಪ್ರದಾನ ಮಾಡಿ ಮಾತನಾಡಿದರು. , ಸ್ವಾಮಿ ವಿವೇಕಾನಂದರ ತತ್ವಗಳನ್ನು ಉಲ್ಲೇಖಿಸಿದ ಅವರು, ಕೊಡಗಿನ ಇತಿಹಾಸ, ಪ್ರಮುಖ ಸ್ಥಳಗಳ ಪರಿಚಯ ಹಾಗೂ ದೈಹಿಕ ವ್ಯಾಯಾಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಶಾಲೆಯ ಬೆಳವಣಿಗೆಗೆ ಶ್ರಮಿಸಿದ ಶಿಕ್ಷಕರನ್ನು ಅಭಿನಂದಿಸಿ, ವಿದ್ಯಾರ್ಥಿ ನಾಯಕರು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದೂ ಕುಮಾರ್ ಕರೆ ನೀಡಿದರು. ಪ್ರೌಢಶಾಲಾ ವಿಭಾಗದ ಶಾಲಾ ನಾಯಕ ನಿರಂಜನ್ ಎನ್., ಶಾಲಾ ನಾಯಕಿ ಲಕ್ಷ್ಯ ಪೊನ್ನಕ್ಕ, ಸಹ…
ಮಡಿಕೇರಿ NEWS DESK ಜೂ.30 : ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಬಲವಂತದ ಮತಾಂತರ ಪ್ರಕರಣ ಖಂಡಿಸಿ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಕುಶಾಲನಗರದಲ್ಲಿ ಬೃಹತ್ ಜನಾಂದೋಲನ ಜಾಗೃತಿ ಜಾಥಾ ನಡೆಯಿತು. ಕುಶಾಲನಗರದ ವಿವಿಧ ಸಂಘಸಂಸ್ಥೆಗಳು, ವಿವಿಧ ಸಮುದಾಯ ಬಾಂಧವರು ಜಾಥಾದಲ್ಲಿ ಪಾಲ್ಗೊಂಡು ಧರ್ಮ ರಕ್ಷಣೆ ಕಹಳೆ ಮೊಳಗಿಸಿದರು. ಬೆಳಗ್ಗೆ 11 ಗಂಟೆಗೆ ಆರಂಭಗೊಂಡ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿ ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಬಳಿ ಸೇರಿತು. ನಂತರ ಪಟ್ಟಣದ ಕಾರು ನಿಲ್ದಾಣ ಆವರಣದಲ್ಲಿ ಬೃಹತ್ ಸಭೆ ನಡೆಸಿತು. ಸ್ಥಳೀಯರು ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನ ಜಾಥಾದಲ್ಲಿ ಪ್ರಕರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು. ಕುಶಾಲನಗರ ಕಾವೇರಿ ನಿಸರ್ಗಧಾಮ ಮುಂಭಾಗದಿಂದ ಕೇಸರಿ ಧ್ವಜ ಹಿಡಿದು ಶಲ್ಯ ಧರಿಸಿ ಧರ್ಮ ಪರ ಘೋಷಣೆಗಳೊಂದಿಗೆ ಹೆದ್ದಾರಿಯಲ್ಲಿ ಬೃಹತ್ ಜಾಗೃತಿ ಜಾಥಾ ಸಾಗಿ ಬಂತು. ಮಾಜಿ ಶಾಸಕದ್ವಯರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಮತ್ತಿತರ ಮುಖಂಡರು…






