ಲೇಖಕ: admin

ಮಡಿಕೇರಿ NEWS DESK ಮೇ 24 : ಸಮಾಜದಲ್ಲಿ ಕೋಮು ಪ್ರಚೋದನೆ, ದ್ವೇಷ ಭಾಷಣ, ಗಲಭೆ ಸೃಷ್ಟಿ ಹಾಗೂ ಗೋ ರಕ್ಷಣೆ ಹೆಸರಿನಲ್ಲಿ ಗೂಂಡಾಗಿರಿ ನಡೆಸಿರುವ ಪುನರಾವರ್ತಿತ ಅಪರಾಧಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್.ಡಿ.ಪಿ.ಐ ಕೊಡಗು ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 11:30 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.

Read More

ಮಡಿಕೇರಿ NEWS DESK ಮೇ 24 : ಬೆಂಗಳೂರಿನ ವಿಶ್ವ ಚೇತನ ಬಳಗವು ಆಯೋಜಿಸುವ, ರಾಷ್ಟ್ರೀಯ ಮಹಾನ್ ನಾಯಕರ ಸಂಸ್ಮರಣಾ ಕಾರ್ಯಕ್ರಮದಲ್ಲಿ, ವಿದ್ಯೆ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಚೋವಂಡ ಚೋಂದಮ್ಮ ಪೂಣಚ್ಚ ಅವರಿಗೆ ರಾಷ್ಟ್ರೀಯ ಸಿದ್ದಬುದ್ದ ಪ್ರಶಸ್ತಿ, ಹಾಗೂ ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಚಾಮೆರ ದಿನೇಶ್ ಬೆಳ್ಯಪ್ಪ ಅವರಿಗೆ ರಾಷ್ಟ್ರೀಯ ಭೀಮ್‌ರಾವ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಾಮರಾಜನಗರ ಜಿಲ್ಲಾ ಕೊಳ್ಳೆಗಾಲದ ರೋಟರಿ ಭವನದಲ್ಲಿ, ರೋಟರಿ ಅಧ್ಯಕ್ಷ ಬಿ.ಮಹದೇವ ಅವರ ಅಧ್ಯಕ್ಷತೆಯಲ್ಲಿ, ವಿಶ್ವಚೇತನ ಬಳಗದ ಅಧ್ಯಕ್ಷ ಡಾ.ಎಂ.ಶಿವಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಐವರಿಗೆ ರಾಷ್ಟ್ರೀಯ, ಐವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಮಡಿಕೇರಿ NEWS DESK ಮೇ 24 : 2002-2003ನೇ ಸಾಲಿನ ಸರಕಾರಿ ಪ್ರೌಢಶಾಲೆ ಹಾಗೂ Government Junior College Madikeri ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನವು ಮಡಿಕೇರಿಯ Ashoka Palace ನಲ್ಲಿ ಭಾನುವಾರ ಭಾವನಾತ್ಮಕ ವಾತಾವರಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮಡಿಕೇರಿಯ ಮನ್ಸೂರ್ ಅಲಿಫರ್ಝ್, ಸಂದೀಪ್ ಬೆಂಗಳೂರು ಹಾಗೂ ಗೋಪಿನಾಥ್ ಅವರ ಪ್ರಯತ್ನದಿಂದ ಆಯೋಜಿಸಲಾಗಿತ್ತು. ಸುಮಾರು 35 ಮಂದಿ ಹಳೆಯ ವಿದ್ಯಾರ್ಥಿಗಳು ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಿದ್ದು, ಕೇರಳದಿಂದಲೂ ಸ್ನೇಹಿತರು ಭಾಗವಹಿಸಿರುವುದು ವಿಶೇಷವಾಗಿತ್ತು. ಸುಮಾರು 25 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಮತ್ತೆ ಭೇಟಿಯಾದ ಸಹಪಾಠಿಗಳು ಹಳೆಯ ದಿನಗಳ ನೆನಪುಗಳನ್ನು ಹಂಚಿಕೊಂಡು ಭಾವುಕರಾದರು. ಕೇವಲ ಒಂದು ವಾರದ ಅವಧಿಯಲ್ಲಿ ಹಳೆಯ ಸ್ನೇಹಿತರನ್ನು ಹುಡುಕಿ, ಸಂಪರ್ಕಿಸಿ, ಎಲ್ಲರನ್ನು ಒಂದಾಗಿ ಸೇರಿಸಿರುವುದು ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು. ದೈನಂದಿನ ಜೀವನದ ಒತ್ತಡ, ಜವಾಬ್ದಾರಿಗಳು ಮತ್ತು ಆತುರದ ನಡುವೆ ಈ ಪುನರ್ಮಿಲನ ಎಲ್ಲರಿಗೂ ನಿಜವಾದ “Stress Buster” ಆಗಿ ಹೊಸ ಚೈತನ್ಯ ತುಂಬಿತು ಎಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.…

Read More

ಮಡಿಕೇರಿ NEWS DESK ಮೇ 24 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದೆ. 1. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಸೌಕರ್ಯವಿಲ್ಲದ ಮಲ್ಲಳ್ಳಿ ಗ್ರಾಮ ಅನಾಥ” ವರದಿಗೆ ಹಿರಿಕರ ರವಿ ಪಡೆದುಕೊಂಡಿದ್ದಾರೆ. 2. ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಜನಮಿತ್ರ ಪತ್ರಿಕೆಯಲ್ಲಿ ಪ್ರಕಟವಾದ ‘ಈಜುಕೊಳದಲ್ಲಿ ಕೊಡಗಿನ ಆರ್ನಾ ಸಾಧನೆ’ ವರದಿಗೆ ಉದಿಯಂಡ ಜಯಂತಿ ಮಂದಣ್ಣ ಪಡೆದುಕೊಂಡಿದ್ದಾರೆ. 3. ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ಟಿವಿ9 ವಾಹಿನಿಯಲ್ಲಿ ಪ್ರಸಾರವಾದ ‘ಕಾಲುಸಂಕದ ಮೇಲೆ ಆತಂಕದ ಹೆಜ್ಜೆ’ ವೀಡಿಯೋಗ್ರಫಿಗೆ ನವೀನ್ ಸುವರ್ಣ ಪಡೆದುಕೊಂಡಿದ್ದಾರೆ. 4. ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆ ಪ್ರಕಟವಾದ ‘ಸರಕಾರದಿಂದ ಅನುದಾನ ಬಂದರೂ…

Read More

ಮಡಿಕೇರಿ NEWS DESK ಮೇ 24 : ಪತ್ರಕರ್ತರ ಸ್ನೇಹಿತರ ಬಳಗ ವತಿಯಿಂದ ಪ್ರಸನ್ನ ಎಡಿಕೇರಿ ಮಾಲೀಕತ್ವದ ಲೀಡಿಂಗ್ ಎಡ್ಜ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಡಿಕೇರಿ ನಗರದ ಪತ್ರಕರ್ತರಿಗೆ ಭಾನುವಾರ ಆಯೋಜಿಸಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾಟದಲ್ಲಿ ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ ಸ್ಥಾನ ಪಡೆಯಿತು. ಬೆಸ್ಟ್ ಆಫ್ ತ್ರಿ ಪಂದ್ಯಾಟದ ಮೊದಲ ಪಂದ್ಯದಲ್ಲಿ ನವೀನ್ ಡಿಸೋಜ ಮಾಲೀಕತ್ವದ ಮಂಜುಸುವರ್ಣ ನಾಯಕತ್ವದ ಪವರ್ ಹಿಟ್ಟರ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ನಿಗದಿತ 8 ಓವರ್‌ನಲ್ಲಿ 3 ವಿಕೆಟ್ ನಷ್ಟಕ್ಕೆ 79ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ರಾಕೇಶ್ ಮಾಲೀಕತ್ವದ ಆದರ್ಶ್ ಅದ್ಕಲೇಗಾರ್ ನಾಯಕತ್ವದ ಮೀಡಿಯಾ ಮಾಸ್ಟರ್ಸ್ ತಂಡ 5.3 ಓವರ್‌ನಲ್ಲಿ ಗೆಲುವಿನ ದಡ ಸೇರಿತು. 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಮೀಡಿಯಾ ಮಾಸ್ಟರ್ಸ್ ತಂಡ ನಿಗದಿತ 8 ಓವರ್‌ನಲ್ಲಿ 3 ವಿಕೆಟ್ ಕಳೆದುಕೊಂಡು 113 ರನ್ ಕೆಲೆ ಹಾಕಿತು. ತಂಡದ ಪರ ಆದರ್ಶ್ 51…

Read More

ಮಡಿಕೇರಿ NEWS DESK ಮೇ 24 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಮೃತ ದಾನಿಯಾದ ಡಾಲು ಅವರಿಂದ ಸಂಗ್ರಹಿಸಲಾದ ಎರಡು ಮೂತ್ರಪಿಂಡಗಳನ್ನು ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಈ ಮೂಲಕ ಸಂಸ್ಥೆಯಲ್ಲಿ ನಡೆದ ಮೊದಲ ಅಂಗಾಂಗ ದಾನ ಕಾರ್ಯಾಚರಣೆ ಜೀವ ಉಳಿಸುವ ಮಹತ್ವದ ಸಾಧನೆಯಾಗಿ ಪರಿಣಮಿಸಿದೆ. ಅಂಗಾಂಗ ದಾನದ ಮೂಲಕ ಇಬ್ಬರು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ದೊರೆತಿದೆ. ಮೂತ್ರಪಿಂಡ ಕಸಿಗೆ ಅಗತ್ಯ ಸಹಕಾರ ನೀಡಿದ ಜೆ.ಎಸ್.ಎಸ್ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಡಾ.ಮಂಜುನಾಥ ಶೆಟ್ಟಿ, ವಿಭಾಗದ ಮುಖ್ಯಸ್ಥರು ನೆಪ್ರಾಲಾಜಿ ವಿಭಾಗ ಹಾಗೂ ಅಂಗಾಗ ಕಸಿ ಸಂಯೋಜಕರು, ಡಾ. ವಿಜಯಕುಮಾರ್ ಆರ್., ಪ್ರೊಫೆಸರ್ ಆಫ್ ಯೂರಾಲಜಿ ಮತ್ತು ರಿನಲ್ ಟ್ರಾನ್ಸ್‌ಪ್ಲಾಂಟ್ ಸರ್ಜನ್, ಡಾ. ಸಚಿನ್ ಧಾರವಾಡ್ಕರ್, ಪ್ರೊಫೆಸರ್ ಆಫ್ ಯೂರಾಲಜಿ, ಶ್ರೀ ರಾಜೇಂದ್ರ, ಯೂರಾಲಜಿ ಓಟಿ ಇನ್‌ಚಾರ್ಜ್ ನರ್ಸ್ ಹಾಗೂ ಶ್ರೀ ಗವಿ ಪ್ರಸಾದ್, ಓಟಿ ತಾಂತ್ರಿಕ ತಜ್ಞರು ಸೇರಿದಂತೆ ಎಲ್ಲಾ ಸಿಬ್ಬಂದಿಗೆ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಅವರು…

Read More

ಮಡಿಕೇರಿ NEWS DESK ಮೇ 24 : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಕಚೇರಿ ಮೇ 27 ರಂದು ಮಡಿಕೇರಿಯ ಮಹದೇವಪೇಟೆಯಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಕಚೇರಿಯನ್ನು ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಹಾಗೂ ಹಿರಿಯ ವಕೀಲ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮೈಸೂರು ಘಟಕದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಶಾಲನಗರ, ಮೇ 23 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಹಾಗೂ ಶ್ರೀ ಚಿಕ್ಕಮ್ಮ ದೇವಿಯ ವಾರ್ಷಿಕ ಜಾತ್ರೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀ ಬಸವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆದ ಗ್ರಾಮ ದೇವತೆ ಹಬ್ಬ ಹಾಗೂ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿ ದೇವರ ದರ್ಶನ ಪಡೆದರು. ತೊರೆನೂರು ಗ್ರಾಮದ ದೇವಸ್ಥಾನದ ಬಳಿಯಿಂದ ಶುಕ್ರವಾರ ರಾತ್ರಿ ಆರಂಭಗೊಂಡ ದೇವರ ಉತ್ಸವವು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ವಿರಕ್ತ ಮಠದ ಆವರಣದಲ್ಲಿರುವ ಗ್ರಾಮ ದೇವತೆಗಳ ಆವರಣಕ್ಕೆ ಶನಿವಾರ ಮುಂಜಾನೆ ತಲುಪಿದವು. ಮೆರವಣಿಗೆಯಲ್ಲಿ ಕುಕ್ಕೆಯೊಂದಿಗೆ ಹರಕೆ ಹೊತ್ತ ಭಕ್ತರು ಅಗ್ನಿಕುಂಡ ಹಾಯ್ದು ಭಕ್ತಿಭಾವ ಮೆರೆದರು. ದೇವರಿಗೆ ಹಣ್ಣುತುಪ್ಪ ಸಮರ್ಪಿಸಿದರು. ರಾತ್ರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ದೇವಸ್ಥಾನ ಸಮಿತಿ ಸೇರಿದಂತೆ ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದ ಉತ್ಸವ ಮಂಟಪಗಳ ಮೆರವಣಿಗೆಯು ಹಬ್ಬಕ್ಕೆ ಮೆರಗು…

Read More

ಕುಶಾಲನಗರ ಮೇ 23 NEWS DESK : ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ವಿಠಲ ಸಾಲಿಯಾನ್ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಉಚಿತ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾಲ ಕಾಲಕ್ಕೆ ಅಗತ್ಯವಿರುವ ತಂತ್ರಜ್ಞಾನಗಳಲ್ಲಿ ನುರಿತು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ನೀಡುವಲ್ಲಿ ನಿಪುಣರಾಗಬೇಕಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಗಳ ಮೂಲಕ ಮಹಿಳೆಯರಿಗೆ ಹಲವು ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಅದರ ಸದುಪಯೋಗವನ್ನು ಪಡೆಯುವಂತೆ ಅವರ ಕೋರಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಮಾತನಾಡಿ, ಮಹಿಳೆಯರು ಸಮಯ ವ್ಯರ್ಥ ಮಾಡದೆ ತಾವು ಕಲಿತಿರುವ ವಿದ್ಯೆಯನ್ನು ಬಳಸಿಕೊಂಡು ಕುಟುಂಬ ನಿರ್ವಹಣೆಯಲ್ಲಿ…

Read More

ಚೆಟ್ಟಳ್ಳಿ ಮೇ 23 NEWS DESK : ಪುಸ್ತಕಗಳನ್ನು ಓದುವುದರಿಂದ ಮನಸ್ಸಿಗೆ ಸುಖ-ಶಾಂತಿ, ನೆಮ್ಮದಿ ಪ್ರಾಪ್ತಿಯಾಗುವುದರೊಂದಿಗೆ ಮನೆಯ ವಾತಾವರಣವು ಬೆಳಗುವುದೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಚೇರಂಬಾಣೆಯ ಬೇಂಗ್‌ನಾಡ್ ಕೊಡವ ಸಮಾಜದಲ್ಲಿ ಆಯೋಜಿಸಿದ್ದ 10ನೇ ಕೊಡವ ಪುಸ್ತಕ ಪತ್ತಾಯ ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ ಎಂಬುವುದು ಜ್ಞಾನದ ದೀವಿಗೆಯಿದ್ದಂತೆ. ಇದರಿಂದ ಓದುಗರ ಜ್ಞಾನ ವೃದ್ಧಿಸುವುದು. ಕೊಡವರ ವಿಚಾರವಾಗಿ ಕಾವೇರಿ ಪುರಾಣ, ಸ್ಕಂದ ಪುರಾಣಗಳಲ್ಲಿ ಉಲ್ಲೇಖವಿದ್ದು, 2ನೇ ಶತಮಾನದ ತಮಿಳು ಸಂಘದ ಸಾಹಿತ್ಯದಲ್ಲಿಯೂ ಉಲ್ಲೇಖಿಸಲಾಗಿದೆ. ಇಂತಹ ಜನಾಂಗದ ಸಾಹಿತ್ಯ, ಸಂಸ್ಕೃತಿಯ ವಿಚಾರವಾಗಿ ಪ್ರತಿಯೊಬ್ಬರೂ ಅರಿತಿರಬೇಕು. ಮಕ್ಕಳನ್ನು ಕೊಡವಾಮೆಯ ಪಥದಲ್ಲಿ ಬೆಳೆಸುವುದು ಒಂದು ಕರ್ತವ್ಯ ಅಥವಾ ಜವಾಬ್ದಾರಿಯಾಗಿಬಾರದು, ಇದೊಂದು ಜೀವನ ಕ್ರಮವಾಗಿರಬೇಕು ಎಂದರು. ಬಾಲ್ಯದಲ್ಲಿಯೇ ಬಾಳೋಪಾಟ್, ಕೊಡಗಿನ ಚರಿತ್ರೆ, ಪೂರ್ವಜರ ಸಾಧನೆಗಳು ಹಾಗೂ ಸಂಸ್ಕೃತಿಯ ಬಗ್ಗೆ ಅರಿತಿದ್ದರೆ ಭವಿಷ್ಯದಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ದಕ್ಷತೆಯ ಬದುಕು ರೂಪುಗೊಳ್ಳಲು ಕಾರಣವಾಗುವುದು. ಬೇಂಗ್‌ನಾಡ್ ಜನರಲ್ಲಿ ಸಾಹಿತ್ಯದ ಬಗ್ಗೆ ಇರುವ…

Read More