ಲೇಖಕ: admin

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ ಮೂಲಕ ಅಮೆರಿಕಾವು ಭಾರತಕ್ಕೆ ತನ್ನ ಕಲ್ಲಿದ್ದಲು ಮತ್ತು ಇಂಧನ ರಫ್ತನ್ನು ಗಣನೀಯವಾಗಿ ಹೆಚ್ಚಿಸಲಿದೆ ಎಂದು ಅವರು ಘೋಷಿಸಿದ್ದಾರೆ. ‘ಚಾಂಪಿಯನ್ ಆಫ್ ಕೋಲ್’ ಕಾರ್ಯಕ್ರಮದಲ್ಲಿ ಟ್ರಂಪ್ ಹೇಳಿಕೆ: ವಾಷಿಂಗ್ಟನ್‌ನಲ್ಲಿ ನಡೆದ ‘ಚಾಂಪಿಯನ್ ಆಫ್ ಕೋಲ್’ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, “ನಮ್ಮ ನಾಯಕತ್ವದಲ್ಲಿ ಅಮೆರಿಕಾವು ಬೃಹತ್ ಇಂಧನ ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಕಳೆದ ಕೆಲವು ತಿಂಗಳಲ್ಲಿ ನಾವು ಜಪಾನ್, ದಕ್ಷಿಣ ಕೊರಿಯಾ ಮತ್ತು ಭಾರತದಂತಹ ದೇಶಗಳೊಂದಿಗೆ ಕಲ್ಲಿದ್ದಲು ರಫ್ತು ಹೆಚ್ಚಿಸಲು ಐತಿಹಾಸಿಕ ಒಪ್ಪಂದಗಳನ್ನು ಮಾಡಿಕೊಂಡಿದ್ದೇವೆ,” ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಅಮೆರಿಕಾದ ಕಲ್ಲಿದ್ದಲು ವಿಶ್ವದಲ್ಲೇ ಅತ್ಯುತ್ತಮ ಗುಣಮಟ್ಟದ್ದಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಇದರ ಬೇಡಿಕೆ ಹೆಚ್ಚುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಒಪ್ಪಂದದ ಪ್ರಮುಖ ಅಂಶಗಳು: ಕಳೆದ ವಾರ ಅಂತಿಮಗೊಂಡಿರುವ ಈ ತಾತ್ಕಾಲಿಕ ವಾಣಿಜ್ಯ ಒಪ್ಪಂದದ ರೂಪರೇಖೆಯು ಉಭಯ ದೇಶಗಳ ಆರ್ಥಿಕತೆಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ:…

Read More

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ ಪ್ರಕರಣದಲ್ಲಿ ಕೊನೆಗೂ ಮಹತ್ವದ ತೀರ್ಪು ಹೊರಬಂದಿದೆ. ಪೊಲೀಸ್ ಅಧಿಕಾರಿಯ ನಿರ್ಲಕ್ಷ್ಯಕ್ಕೆ ಬಲಿಯಾದ ಜಾಹ್ನವಿ ಅವರ ಕುಟುಂಬಕ್ಕೆ ಸಿಯಾಟಲ್ ನಗರ ಆಡಳಿತವು 29 ಮಿಲಿಯನ್ ಡಾಲರ್ (ಸುಮಾರು ₹262 ಕೋಟಿ) ಬೃಹತ್ ಮೊತ್ತದ ಪರಿಹಾರ ನೀಡಲು ಮುಂದಾಗಿದೆ. ಘಟನೆಯ ಹಿನ್ನೆಲೆ: ಜನವರಿ 2023ರಲ್ಲಿ ಸಿಯಾಟಲ್‌ನ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಹೈದರಾಬಾದ್ ಮೂಲದ ಜಾಹ್ನವಿ ಕಂದುಲಾ (23), ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿ ಹೊಡೆದಿತ್ತು. ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಚಲಾಯಿಸುತ್ತಿದ್ದ ಕಾರು, ನಿಗದಿತ ವೇಗಕ್ಕಿಂತ ಮೂರು ಪಟ್ಟು ಹೆಚ್ಚು (ಗಂಟೆಗೆ 74 ಮೈಲಿ) ವೇಗದಲ್ಲಿತ್ತು. ಡಿಕ್ಕಿಯ ರಭಸಕ್ಕೆ ಜಾಹ್ನವಿ ಸುಮಾರು 137 ಅಡಿ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದರು. ಅಧಿಕಾರಿಗಳ ಉದ್ಧಟತನ ಮತ್ತು ಜಾಗತಿಕ ಆಕ್ರೋಶ: ಈ ಅಪಘಾತದ ಬೆನ್ನಲ್ಲೇ ಸಿಯಾಟಲ್…

Read More

ನವದೆಹಲಿ: ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸಂಭ್ರಮದ ನಡುವೆಯೇ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನೈರ್ಮಲ್ಯಕ್ಕೆ ಸಂಬಂಧಿಸಿದ ಗಂಭೀರ ಆರೋಪ ಕೇಳಿಬಂದಿದೆ. ಪೇಪರ್ ಕಪ್‌ಗಳಲ್ಲಿದ್ದ ಪಾನೀಯವನ್ನು ಸಿಬ್ಬಂದಿಗಳು ಮರುಬಳಕೆಗಾಗಿ ಬಾಟಲಿಗಳಿಗೆ ತುಂಬಿಸುತ್ತಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಹಿನ್ನೆಲೆ: ಫೆಬ್ರವರಿ 10ರಂದು ನಡೆದ ನೆದರ್ಲ್ಯಾಂಡ್ಸ್ ಮತ್ತು ನಮೀಬಿಯಾ ನಡುವಿನ ಪಂದ್ಯ ಮುಕ್ತಾಯಗೊಂಡ ಬಳಿಕ ಈ ವಿಡಿಯೋ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ವಿಡಿಯೋದಲ್ಲಿ ಕ್ರೀಡಾಂಗಣದ ಮಾರಾಟ ಮಳಿಗೆಯ ಸಿಬ್ಬಂದಿಗಳು ಟ್ರೇನಲ್ಲಿ ಉಳಿದಿದ್ದ ಗ್ಲಾಸ್‌ಗಳಿಂದ ಪಾನೀಯವನ್ನು ದೊಡ್ಡ ಪ್ಲಾಸ್ಟಿಕ್ ಬಾಟಲಿಗಳಿಗೆ ಸುರಿಯುತ್ತಿರುವುದು ಕಂಡುಬಂದಿದೆ. ಇದನ್ನು ನೋಡಿದ ಪ್ರೇಕ್ಷಕರು, “ಗ್ರಾಹಕರು ಕುಡಿದು ಉಳಿಸಿದ ಪಾನೀಯವನ್ನು ಮರುಮಾರಾಟ ಮಾಡಲು ಹೀಗೆ ಮಾಡಲಾಗುತ್ತಿದೆ” ಎಂದು ಆರೋಪಿಸಿ ವಿಡಿಯೋ ಹಂಚಿಕೊಂಡಿದ್ದರು. ಡಿಡಿಸಿಎ (DDCA) ನೀಡಿದ ಸ್ಪಷ್ಟನೆ: ವಿಡಿಯೋ ವೈರಲ್ ಆಗಿ ಸಾರ್ವಜನಿಕರು ಮತ್ತು ಕ್ರಿಕೆಟ್ ಅಭಿಮಾನಿಗಳು ನೈರ್ಮಲ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ, ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA) ಅಧಿಕೃತ ಹೇಳಿಕೆ…

Read More

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. ಕಳೆದ ವರ್ಷದ ಅಹಿತಕರ ಘಟನೆಯಿಂದಾಗಿ ಅನಿಶ್ಚಿತತೆಯಲ್ಲಿದ್ದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಹಿನ್ನೆಲೆ: ಕಾಲ್ತುಳಿತದ ಕಹಿ ನೆನಪು ಕಳೆದ ಐಪಿಎಲ್ ಆವೃತ್ತಿಯಲ್ಲಿ ಆರ್ ಸಿಬಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ, ಕ್ರೀಡಾಂಗಣದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದು ಪಂದ್ಯಗಳ ಆಯೋಜನೆಗೆ ತಡೆ ನೀಡಿತ್ತು. ಇದರಿಂದಾಗಿ ಈ ಬಾರಿ ಆರ್ ಸಿಬಿ ತನ್ನ ತವರು ಪಂದ್ಯಗಳನ್ನು ಬೇರೆ ರಾಜ್ಯಗಳಲ್ಲಿ ಆಡಬೇಕಾದ ಅನಿವಾರ್ಯತೆ ಎದುರಾಗಿತ್ತು. ಕೆಎಸ್‌ಸಿಎ (KSCA) ಸತತ ಪ್ರಯತ್ನಕ್ಕೆ ಜಯ ತವರು ಮೈದಾನವನ್ನು ಉಳಿಸಿಕೊಳ್ಳಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಸರ್ಕಾರದೊಂದಿಗೆ ನಿರಂತರ ಮಾತುಕತೆ ನಡೆಸಿತ್ತು. ಕ್ರೀಡಾಂಗಣದಲ್ಲಿ ಕೈಗೊಳ್ಳಲಾದ ಸುಧಾರಿತ ಸುರಕ್ಷತಾ ಕ್ರಮಗಳು ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಸರ್ಕಾರಕ್ಕೆ…

Read More

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು (ESCOMs) 2026-27ನೇ ಹಣಕಾಸು ವರ್ಷಕ್ಕೆ ಪ್ರತಿ ಯೂನಿಟ್‌ಗೆ ಸರಾಸರಿ 67 ಪೈಸೆ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ಪ್ರಸ್ತಾವನೆ ಸಲ್ಲಿಸಿವೆ. ನಷ್ಟದ ಸುಳಿಯಲ್ಲಿ ಎಸ್ಕಾಂಗಳು: ರಾಜ್ಯದ ವಿದ್ಯುತ್ ಕಂಪನಿಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಒಟ್ಟಾರೆಯಾಗಿ ಸುಮಾರು ₹4,500 ಕೋಟಿಗೂ ಅಧಿಕ ನಷ್ಟ ಅನುಭವಿಸುತ್ತಿವೆ ಎಂದು ವರದಿಯಾಗಿದೆ. ಬೆಸ್ಕಾಂ (BESCOM): ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಒಂದೇ ₹2,800 ಕೋಟಿಗೂ ಹೆಚ್ಚು ಆದಾಯ ಕೊರತೆ ಎದುರಿಸುತ್ತಿದೆ. ಕಾರಣ: ಹೆಚ್ಚುತ್ತಿರುವ ನಿರ್ವಹಣಾ ವೆಚ್ಚ, ವಿದ್ಯುತ್ ಖರೀದಿ ದರದಲ್ಲಿನ ಏರಿಕೆ ಮತ್ತು ಹಳೆಯ ಬಾಕಿಗಳನ್ನು ಸರಿದೂಗಿಸಲು ಈ ದರ ಏರಿಕೆ ಅನಿವಾರ್ಯ ಎಂದು ಕಂಪನಿಗಳು ವಾದಿಸಿವೆ. ಯಾರಿಗೆ ಎಷ್ಟು ಹೊರೆ? ಎಸ್ಕಾಂಗಳು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕೇವಲ ಗೃಹಬಳಕೆ ಮಾತ್ರವಲ್ಲದೆ,…

Read More

ಬೆಳ್ತಂಗಡಿ ಫೆ.12: ಜೇನು ಕೃಷಿ ಅಧ್ಯಯನ ಪ್ರವಾಸದ ನೆಪದಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಟ್ರಕ್ ಹಾಗೂ ಪಿಕಪ್ ವಾಹನಗಳಲ್ಲಿ ಕರೆದೊಯ್ದ ಬೆಳ್ತಂಗಡಿಯ ಬಳೆಂಜ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ಫೆಬ್ರವರಿ 11ರಂದು ಶಾಲೆಯ ಸುಮಾರು 70 ವಿದ್ಯಾರ್ಥಿಗಳನ್ನು ಶಾಲೆಗೆ ಹತ್ತಿರವಿರುವ (ಸುಮಾರು 1.5 ಕಿ.ಮೀ ದೂರ) ನಾಲ್ಕೂರು ಅನಿಲ್ ಫಾರ್ಮ್‌ಗೆ ಜೇನು ಕೃಷಿ ಅಧ್ಯಯನಕ್ಕಾಗಿ ಕರೆದೊಯ್ಯಲಾಗಿತ್ತು. ಈ ವೇಳೆ ಮಕ್ಕಳನ್ನು ಸುರಕ್ಷಿತ ವಾಹನಗಳ ಬದಲಾಗಿ, ಮಣ್ಣು ಸಾಗಿಸುವ ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಕುರಿಗಳಂತೆ ತುಂಬಿಸಿಕೊಂಡು ಹೋಗಲಾಗಿತ್ತು. ವೈರಲ್ ಆದ ವಿಡಿಯೋ – ಸಾರ್ವಜನಿಕರ ಆಕ್ರೋಶ: ಮಕ್ಕಳನ್ನು ಗೂಡ್ಸ್ ವಾಹನಗಳಲ್ಲಿ ಸಾಗಿಸುತ್ತಿದ್ದ ದೃಶ್ಯವನ್ನು ಸ್ಥಳೀಯರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಭಾರಿ ವೈರಲ್ ಆಗಿದ್ದು, ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಮತ್ತು ಸಾರ್ವಜನಿಕರು ತೀವ್ರ ಕಳವಳ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದರು. “ಮಕ್ಕಳಿಗೆ ಏನಾದರೂ ಅಪಾಯವಾಗಿದ್ದರೆ ಹೊಣೆ…

Read More

ಮಡಿಕೇರಿ NEWS DESK ಫೆ.12 : ಎನ್.ಸತೀಶ್‌ ಕುಮಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಕೇಂದ್ರಸ್ಥಾನ-1, ಬೆಂಗಳೂರು ಇವರು ಇಂದು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಕಚೇರಿಯ ಪರಿಶೀಲನೆ ನಡೆಸಿದರು. ನಂತರ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿ ಅಪರಾಧ ಪತ್ತೆ, ತನಿಖೆ ಮತ್ತು ಕಾನೂನು ಸುವ್ಯವಸ್ಥೆ ವಿಚಾರಗಳಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಎನ್.ಬಿಂದುಮಣಿ ಇದ್ದರು.

Read More

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ ಡಾ ಮಂತರ್ ಗೌಡ ಹೇಳಿದರು. ಅವರು ರೋಟರಿ ಕುಶಾಲನಗರ 50ನೇ ವರ್ಷದ ಸಂಭ್ರಮದ ಅಂಗವಾಗಿ ಕುಶಾಲನಗರದ ಸರಕಾರಿ ಬಸ್ ನಿಲ್ದಾಣದ ಎದುರುಗಡೆ ನಿರ್ಮಿಸಿದ ಬೃಹತ್ ಬಾಟಲ್ ಮಾದರಿಯ ಒಣ ಕಸ ಸಂಗ್ರಹ ಘಟಕ ಉದ್ಘಾಟಿಸಿ ಮಾತನಾಡಿದರು. ಸ್ಥಳೀಯರು ಸೇರಿದಂತೆ ಪ್ರವಾಸಿಗರ ಒತ್ತಡದಿಂದ ಪಟ್ಟಣ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ಮೂಲಕ ನದಿ ಪರಿಸರ ಕಲುಷಿತಗೊಳುತ್ತಿದೆ. ಪ್ರತಿಯೊಬ್ಬರು ಸ್ವಚ್ಛ ಕುಶಾಲನಗರ ಸ್ವಚ್ಛ ಕಾವೇರಿ ಅಭಿಯಾನದಲ್ಲಿ ರೋಟರಿ ಸಂಸ್ಥೆಯೊಂದಿಗೆ ತಮ್ಮನ್ನು ತೊಡಗಿಸಿಕೊಂಡು ಕೈಜೋಡಿಸುವಂತೆ ಕರೆ ನೀಡಿದರು. ಸಾಮಾಜಿಕ ಕಾರ್ಯಕ್ರಮಗಳ ಮೂಲಕ ರೋಟರಿ ಸಂಸ್ಥೆ ಸರಕಾರ ಮಾಡಬೇಕಾದ ಕಾರ್ಯಗಳನ್ನು ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಂತರ್ ಗೌಡ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ಸುವರ್ಣ ಮಹೋತ್ಸವ…

Read More

ಮಡಿಕೇರಿ NEWS DESK ಫೆ.12 : ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಭ್ರಷ್ಟಾಚಾರಕ್ಕಿಂತಲೂ ಈಗಿನ ಸರಕಾರದ ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ ಮತ್ತು “ಮಧ್ಯವರ್ತಿ”ಗಳ ಮೂಲಕ ಸರಕಾರದ ಆಡಳಿತ ನಡೆಯುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.  ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಹಿಂದಿನ ಅಧ್ಯಕ್ಷರಾಗಿ ಕೆಂಪಣ್ಣ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಅವರು, ಅಂದಿನ ಸಂದರ್ಭಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದರು. ಹೀಗಿದ್ದೂ ಇಂದು ಗುತ್ತಿಗೆದಾರರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಬಹಳಷ್ಟು ಇಲಾಖೆಗಳಲ್ಲಿ ಕೆಲವು ಸಚಿವರು ಮಧ್ಯವರ್ತಿಗಳ ಮೂಲಕ ಆಡಳಿತ ನಡೆಸುತ್ತಿದ್ದಾರೆ, ಇಂತಹ ಕೆಲಸ ಇತಿಹಾಸದಲ್ಲೆ ನಡೆದಿಲ್ಲ ಎಂದು ಟೀಕಿಸಿದರು. ರಾಜ್ಯವ್ಯಾಪಿ ಗುತ್ತಿಗೆದಾರರ ಕೆಲಸಗಳಿಗೆ 37 ಸಾವಿರ ಕೋಟಿ ರೂ. ಇಂದಿಗೂ ಪಾವತಿಯಾಗಿಲ್ಲ. ಕಳೆೆದ ಎರಡೂವರೆ ವರ್ಷಗಳ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಿಂಚಿತ್ ಹಣ ಪಾವತಿಯಾಗದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾಕಿ ಮೊತ್ತವನ್ನು ತಕ್ಷಣ ಪಾವತಿಸುವಂತೆ…

Read More

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು, ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮತ್ತೆ ಆರಂಭಿಸಬೇಕೆAದು ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸ್ವತಂತ್ರ ಒಕ್ಕೂಟಗಳಿಂದ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು. ಜಂಟಿ ಕ್ರಿಯಾ ಸಮಿತಿಯ ಪ್ರಮುಖರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿಯಿಂದ ವಿವಿಧ ಕಾರ್ಮಿಕ ಸಂಘಟನೆಗಳ ನೂರಾರು ಮಂದಿ ಘೋಷಣೆಗಳ ಸಹಿತ ನಗರದ ಮುಖ್ಯ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡು, ಕೇಂದ್ರ‍್ರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಹಲ ದಶಕಗಳ ಹೋರಾಟಗಳಿಂದ ಕಾರ್ಮಿಕರಿಗೆ ನ್ಯಾಯ ಒದಗಿಸುವ 41 ಕಾನೂನುಗಳನ್ನು ದುಡಿಯುವ ವರ್ಗ ಪಡೆದುಕೊಂಡಿದೆ. ಇಂತಹ ಕಾನೂನುಗಳಲ್ಲಿ 21 ಕಾನೂನುಗಳನ್ನು ಇಂದಿನ ಕೇಂದ್ರ ಸರಕಾರ ನಾಲ್ಕು ಲೇಬರ್ ಕೋಡ್‌ಗಳನ್ನಾಗಿ ಬದಲಿಸುವ ಮೂಲಕ, ಕಾರ್ಮಿಕ ಮೂಲಭೂತ ಹಕ್ಕುಗಳನ್ನು…

Read More