ಮಡಿಕೇರಿ ನ.3 NEWS DESK : ಕನ್ನಡ ನಾಡು ನುಡಿ, ನೆಲ-ಜಲ, ಸಾಹಿತ್ಯ, ಸಂಸ್ಕøತಿಯ ಸಂರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ(ಹೆಚ್.ಶಿವರಾಮೇಗೌಡ)ಯ ಕೊಡಗು ಜಿಲ್ಲಾ ಘಟಕ ಕಟಿಬದ್ಧವಾಗಿ ಕಾರ್ಯನಿರ್ವಹಿಸಲಿದೆ ಎಂದು ನೂತನ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಅಕ್ಟೋಬರ್ನಲ್ಲಿ ಕರವೇ ಜಿಲ್ಲಾಧ್ಯಕ್ಷ ಸ್ಥಾನವನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ಶೀಘ್ರದಲ್ಲೆ ಕರವೇ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಸಂಘಟನೆಗಳು ಅಸ್ತಿತ್ವದಲ್ಲಿವೆ. ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕು ಸಮಿತಿಗಳ ರಚನೆಯಾಗಬೇಕಾಗಿದೆ ಎಂದರು. ಜಿಲ್ಲಾ ವ್ಯಾಪ್ತಿಯಲ್ಲಿ ಮುಚ್ಚಲ್ಪಟ್ಟಿರುವ ಕನ್ನಡ ಶಾಲೆಗಳನ್ನು ಬಡ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸರ್ಕಾರ ಮತ್ತೆ ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಘಟನೆ ಕರವೇ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು. ಕರವೇ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿ ಗೌಡ ಅವರು ಮಾತನಾಡಿ, ಕನ್ನಡ ನಾಡಿನ ಎಲ್ಲೆಡೆಯೂ ಕನ್ನಡ…
ಲೇಖಕ: admin
ಮಡಿಕೇರಿ ನ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಸೋಮವಾರಪೇಟೆ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದ ಮೂಕಾಂಬಿಕಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹೆಚ್ಚುವರಿ ಬೋಧನಾ ತರಬೇತಿ (ಟ್ಯೂಷನ್ ಕ್ಲಾಸ್) ಕಾರ್ಯಕ್ರಮ ನಡೆಯಿತು. ಮೂಕಾಂಬಿಕಾ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವನಾಂದ ಉದ್ಘಾಟಿಸಿ, ಮಾತನಾಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾವಂತ ಮತ್ತು ಅಧ್ಯಯನಶೀಲರಾಗಿ ಹಾಗೂ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಅಂಕಗಳನ್ನು ಪಡೆಯಲು ಇಂತಹ ತರಗತಿಗಳ ಮೂಲಕ ಕಲಿಯುವ ವಿಷಯ ಚೇತರಿಕೆ, ಮತ್ತು ಚೈತನ್ಯದ ಬೆಳವಣಿಗೆ ಸಹಕಾರಿಯಾಗುವುದು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೂಡಿಗೆ ಪದವಿ ಪೂರ್ವ ಕಾಲೇಜು ಮಾಜಿ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ ಮಾತಾನಾಡಿ, ಇಂದಿನ ಪೈಪೋಟಿಯ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಧ್ಯಾಯ ಶೀಲರಾಗಬೇಕು. ವಿದ್ಯಾರ್ಥಿಗಳು ಪ್ರಸಕ್ತ ವಿದ್ಯಮಾನದ ಜೊತೆಯಲ್ಲಿ ಪಠ್ಯ ಪುಸ್ತಕದ ವಿಷಯಗಳನ್ನು ಹೆಚ್ಚು ಅರಿತುಕೊಂಡು ಮುಂದಿನ ದಿನಗಳಲ್ಲಿ ಬರುವ ಪರೀಕ್ಷೆಯಲ್ಲಿ ಉತ್ತಮ…
ಸೋಮವಾರಪೇಟೆ ನ.3 NEWS DESK : ಸಿ ಆ್ಯಂಡ್ ಡಿ ಭೂಮಿ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾಫಿ ಬೆಳೆಗಾರರ ಸಂಘದ ಆಶ್ರಯದಲ್ಲಿ ಸೋಮವಾರ ಪಟ್ಟಣದ ಜೇಸಿ ವೇದಿಕೆಯಲ್ಲಿ ರೈತ ಜಾಗೃತಿ ಸಮಾವೇಶ ನಡೆಯಿತು. ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ರೈತರು, ಸರ್ಕಾರಗಳು ಪರವಾಗಿ ವರ್ತಿಸಬೇಕು. ರೈತರ ಆಸ್ತಿ ಸಮಸ್ಯೆಗಳನ್ನು ಕೂಡಲೆ ಬಗೆಹರಿಸುವಂತೆ ಆಗ್ರಹಿಸಿದರು. ನಂತರ ಜೇಸಿ ವೇದಿಕೆಯಲ್ಲಿ ನಡೆದ ಜಾಗೃತಿ ಸಭೆಯಲ್ಲಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ಮಾತನಾಡಿ. ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಹಲವು ದಶಕಗಳಿಂದ ಕೃಷಿಭೂಮಿಯನ್ನು ಅರಣ್ಯ ಇಲಾಖೆ ಕಸಿದುಕೊಳ್ಳಲು ಪ್ರಯತ್ನಿಸಿದರು ಉಗ್ರಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು. ಕಳೆದ ಒಂದೂವರೆ ವರ್ಷಗಳಿಂದ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ಅನೇಕ ಹೋರಾಟಗಳನ್ನು ಮಾಡಲಾಗಿದೆ. ಸಮಸ್ಯೆಗಳ ಬಗ್ಗೆ ಶಾಸಕರು, ಸಂಸದರು, ಮುಖ್ಯಮಂತ್ರಿಗಳು, ಅರಣ್ಯ ಹಾಗೂ ಕಂದಾಯ ಇಲಾಖಾ ಸಚಿವರನ್ನೂ ಭೇಟಿ…
ಮಡಿಕೇರಿ ನ.3 NEWS DESK : ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ರೋಗ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯ ರೋಗಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣಧಿಕಾರಿ ಡಾ.ಸನ್ನತ್ ಕುಮಾರ್ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು ಡಾ.ಇಂದೂಧರ ಕೆ ಕಾರ್ಯಕ್ರಮ ಉದ್ಘಾಟಿಸಿದರು. ಮನೆ ಮನೆ ಭೇಟಿ ಮಾಡಿ ಕ್ಷಯ ರೋಗದ ಲಕ್ಷಣಗಳಿದ್ದರೆ ಕಫದ ಮಾದರಿಯ ಸಂಗ್ರಹಣೆ ಮಾಡಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲು ವೈದ್ಯಾಧಿಕಾರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಚಿನ್ಮಯಿ, ಸಿಬ್ಬಂದಿಗಳಾದ ಹಿರಿಯ ಪ್ರಾ. ಆ.ಸುರಕ್ಷಾಧಿಕಾರಿ, ಪಾರ್ವತಿ ಮತ್ತು ಕಿರಿಯ ಪ್ರಾ ಆ ಸುರಕ್ಷಾಧಿಕಾರಿ ಶ್ವೇತ ಮತ್ತು ದಿವ್ಯ, ಹಿರಿಯ ಅರೋಗ್ಯ ನಿರೀಕ್ಷೆಣಾಧಿಕಾರಿ ಮಹೇಶ್, S T L S ಪುಟ್ಟರಾಜು ಮತ್ತು ಜಿಲ್ಲಾ ಮೇಲ್ವಿಚಾರಕರಾದ ಶ್ರೀಧರ್, ಎಲ್ಲಾ ಆಶಾ ಕಾರ್ಯಕರ್ತೆ ಭಾಗವಹಿಸಿದರು.
ಮಡಿಕೇರಿ ನ.3 NEWS DESK : ಕೂಡಿಗೆ ಗ್ರಾಮ ಪಂಚಾಯತಿಯ ಮಾಸಿಕ ಸಭೆಯ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಕುಮಾರ್ ನವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಶುಚಿತ್ವಕ್ಕೆ ಹೆಚ್ಚಿನ ಅಧ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಗುಣವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಬಗ್ಗೆ ಚರ್ಚೆಗಳು ನಡೆದವು. ಪ್ರಮುಖವಾಗಿ ಈಗಾಗಲೇ ಕೂಡಿಗೆಯಿಂದ ಹೆಬ್ಬಾಲೆರವರೆಗೆ ನಿಗದಿತ ಅಪಘಾತ ವಲಯದ ಹಾಸನ ಹೆದ್ದಾರಿ ರಸ್ತೆಯ ಕಾಮಗಾರಿಯು ನಡೆಯುತ್ತಿದ್ದು, ರಸ್ತೆಯ ಅಗಲಿಕರಣದ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯವರು ರಸ್ತೆಗೆ ಹೊಂದಿಕೊಂಡಂತೆ ಇರುವ ಮರ ಮತ್ತು ಮನೆಯ ಚಾವಣಿಗಳನ್ನು ಇಲಾಖೆಯ ನಿಯಮಾನುಸಾರ ತೆರವುಗೊಳಸಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸಂಬಂಧಿಸಿದವರಿಗೆ ಪತ್ರ ವ್ಯವಹಾರ ಮಾಡಲು ಸಭೆಯಲ್ಲಿ ಸೂಚನೆ ನೀಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿ ಅಧ್ಯಕ್ಷ ಕೆ.ಟಿ.ಗರೀಶ್, ಸಭೆಯಲ್ಲಿ…
ಮಡಿಕೇರಿ ನ.3 NEWS DESK : ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾಥಿ೯ಗಳಿಗೆ ಶೈಕ್ಷಣಿಕ ತರಬೇತಿ ಕಾಯಾ೯ಗಾರಕ್ಕೆ ಚಾಲನೆ ದೊರೆಯಿತು. ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿತ ತರಬೇತಿ ಕಾಯಾ೯ಗಾರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ, ಸೈನಿಕ ಶಾಲೆ ಎಂಬುದು ಕೇವಲ ಶಿಕ್ಷಣದ ಕೇಂದ್ರವಲ್ಲ ಅದು ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ. ಸೈನಿಕಶಾಲೆಯಲ್ಲಿ ಕಲಿಯುವ ಮಕ್ಕಳು ನಾಳೆಯ ಭಾರತದ ಭದ್ರ ಕೈಗಳು, ದೇಶದ ಹೆಮ್ಮೆಯಾಗಿದ್ದಾರೆ ಎಂದು ಶ್ಲಾಘಿಸಿದರು. ಈ ಶಿಬಿರ ಕೇವಲ ಪರೀಕ್ಷೆಗೆ ತಯಾರಿ ಮಾತ್ರವಲ್ಲ ಇದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವ ವೇದಿಕೆ. ನಮ್ಮ ದೇಶದ ಶಕ್ತಿ, ದೇಶ ಸೇವೆ ಮಾಡಲು ಕನಸು ಕಾಣುವ ಯುವಕ , ಯುವತಿಯರಲ್ಲಿದೆ ಎಂದೂ ಜೀವನ್ ಅಭಿಪ್ರಾಯಪಟ್ಟರು. ಸೈನಿಕ ಶಾಲೆಗೆ ಸೇರಲು ಇಚ್ಛೆ ಇರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಈ …
ವಿರಾಜಪೇಟೆ ನ.3 NEWS DESK : ಬಳಕೆದಾರರ ಮತ್ತು ಗುತ್ತಿಗೆದಾರರ ಸಮ್ಮೇಳನ ವಿರಾಜಪೇಟೆಯ ಸ್ಪೀಂಗ್ ಫೀಲ್ಡ್ ರೆಸಾರ್ಟ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅದ್ಯಕ್ಷತೆಯನ್ನು ಮಾಜಿ ಯೋಧ ಸಲಾಂ ಅಬ್ದುಲ್ಲ ಕಡಂಗ ವಹಿಸಿದ್ದರು. ಎ.ಸಿ.ಸಿ.ಸಿಮೆಂಟ್ ಸಂಸ್ಥೆಯ ರಾಜ್ಯ ನಿರ್ದೇಶಕರಾದ ಜೀವನ್ ಅವರು ಮಾತನಾಡಿ, ನಮ್ಮ ಸಂಸ್ಥೆಯು 1936 ನೇ ಇಸವಿಯಲ್ಲಿ ಆರಂಭಗೊಂಡಿತು. ಸ್ವತಂತ್ರ ಪೂರ್ವದಲ್ಲಿ ನಮ್ಮ ಸಂಸ್ಥೆಯು ಆರಂಭ ಗೊಂಡಿತು. 1984 ರಿಂದ ಹೊರದೇಶದ ಕಂಪನಿಗಳು ನಡೆಸುತ್ತಿದ್ದವು, ನಂತರ 2022 ರಲ್ಲಿ ಅಂಬಾನಿ ಅದಾನಿ ಕಂಪನಿಯು ಮರಳಿ ಪಡೆಯಲು ಯಶಸ್ವಿಯಾಯಿತು. ಮೊದಲು 50 ಮಿಲಿಯನ್ ಟನ್ ಸಿಮೆಂಟ್ ಉತ್ಪಾದನೆ ಮಾಡುತ್ತಿತ್ತು. ಪ್ರಸ್ತುತ ನೂತನ ಆಡಳಿತ ಮಂಡಳಿಯ ರಚನೆಯಾದ ನಂತರ 110 ಮಿಲಿಯನ್ ಡನ್ ಸಿಮೆಂಟ್ ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು. ದೇಶದಲ್ಲಿ ಎಸಿಸಿ ಸಿಮೆಂಟ್ ನಲ್ಲಿ ಯಾವುದೇ ಕಲಬೆರಕೆ ಇಲ್ಲ. ಅಂಬುಜ ಎಂಬ ಸಿಮೆಂಟ್ ಕೂಡ ನಮ್ಮ ಸಂಸ್ಥೆಯೆ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದರು. ಈ ಬಾರಿ ಅತಿ ಹೆಚ್ಚು ಸಿಮೆಂಟ್ ಖರೀದಿ ಮಾಡಿದ…
ಪುತ್ತೂರು ನ.3 NEWS DESK : ಸ್ವಚ್ಚ ಭಾರತ ಸ್ವಸ್ಥ ಭಾರತ ಎನ್ನುವ ಕೇಂದ್ರ ಸರ್ಕಾರದ ಪರಿಕಲ್ಪನೆಯನ್ವಯ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್ಎಸ್ಎಸ್ ವಿಭಾಗದ ವಿದ್ಯಾರ್ಥಿಗಳು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದ ಸುತ್ತಮುತ್ತ ಸ್ವಚ್ಚತಾ ಕಾರ್ಯವನ್ನು ನಡೆಸಿದರು. ವಿದ್ಯಾರ್ಥಿಗಳಲ್ಲಿ ಮತ್ತು ಸ್ಥಳೀಯ ಜನರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸುವುದಕ್ಕಾಗಿ ನಡೆದ ಈ ಅಭಿಯಾನದಲ್ಲಿ 58 ಎನ್ಎಸ್ಎಸ್ ಸ್ವಯಂಸೇವಕರು ಮತ್ತು ಅಧಿಕಾರಿಗಳು ಭಾಗವಹಿಸಿದರು. ಸ್ವಚ್ಚ ಸಮುದಾಯ ಮತ್ತು ಸಾಮಾಜಿಕ ಜವಾಬ್ಧಾರಿಯನ್ನು ಉತ್ತೇಜಿಸುವ ಈ ಕಾರ್ಯಕ್ರಮವನ್ನು ದೇವಳದ ಆಡಳಿತ ಮಂಡಳಿಯವರು ಶ್ಲಾಘಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಪುತ್ತೂರು ನ.3 NEWS DESK : ಇಂಜಿನಿಯರಿಂಗ್ ಎಂದರೆ ಕೇವಲ ಪ್ರೊಗ್ರಾಮಿಂಗ್ ಲ್ಯಾಂಗ್ವೇಜ್ಗಳನ್ನು ಕಲಿಯುವುದಲ್ಲ ಬದಲಾಗಿ ನೈಜ ಜಗತ್ತಿನ ಸಾಮಾಜಿಕ ಸಮಸ್ಯೆಗಳನ್ನು ಅರಿತುಕೊಂಡು ಅದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದೇಆಗಿದೆ ಎಂದು ಐಇಇಇ ಮಂಗಳೂರು ಉಪ ವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್.ಪಿ.ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಮತ್ತು ಐಇಇಇ ಬೆಂಗಳೂರು ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ಉಪವಿಭಾಗ ಮಟ್ಟದ ಪ್ರಾಥಮಿಕ ಸುತ್ತಿನ ಬಹುವಿಭಾಗೀಯ ಹ್ಯಾಕಥಾನ್ ಸ್ಪರ್ಧೆ ಅನ್ವೇಶಣ್-2025 ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ಗೌರವ ಅತಿಥಿಗಳಾಗಿದ್ದ ಐಇಇಇ ಮಂಗಳೂರು ಉಪ ವಿಭಾಗದ ಕಾರ್ಯದರ್ಶಿ ಡಾ.ವಿನಯ್ ಕುಮಾರ್ ಜಾಧವ್ ಮಾತನಾಡಿ, ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾದಾಗ ಅದಕ್ಕೆ ಸೃಜನಾತ್ಮಕವಾಗಿ ಉತ್ತಮ ಕಾರ್ಯತಂತ್ರದೊಂದಿಗೆ ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ, ಮಂಗಳೂರು ಉಪವಿಭಾಗದಾದ್ಯಂತ 21 ಕಾಲೇಜುಗಳ 58 ತಂಡಗಳು ಇಲ್ಲಿ ಭಾಗವಹಿಸುತ್ತಿದ್ದು, ನಾವೀನ್ಯತೆ,…
ಮಡಿಕೇರಿ ನ.3 NEWS DESK : ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸೌಹಾರ್ದತೆ, ಒಗ್ಗಟ್ಟು ಸಾಧ್ಯವಿದೆ ಎಂದು ಮಡಿಕೇರಿಯ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ನಗರದ ಪೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ರೋಟರಿ ವಲಯ 6 ರ ಕಲಾಕಲರವ ಸಾಂಸ್ಕೃತಿಕ ಸ್ಪಧೆ೯ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರೋಟರಿ ಸಂಸ್ಥೆಯು ಸ್ವಾಥ೯ರಹಿತವಾಗಿ ಸಾಮಾಜಿಕ ಕಳಕಳಿಯೊಂದಿಗೆ ನಿರಂತವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ. ರೋಟರಿ ಕೇವಲ ಸಂಸ್ಥೆಯಾಗಿ ಮಾತ್ರವಲ್ಲದೇ ಸಮಾಜದಲ್ಲಿಯೂ ಜನರನ್ನು ಒಗ್ಗೂಡಿಸುವ ಸಂದೇಶಗಳನ್ನು ಸಾರಿ ಹೇಳುತ್ತಾ ಬಂದಿದೆ. ಅವಿಭಕ್ತ ಕುಟುಂಬ ಪದ್ದತಿ ಕ್ಷೀಣಿಸುತ್ತಿರುವ ಇಂದಿನ ದಿನಗಳಲ್ಲಿ ರೋಟರಿಯಂಥ ಸಂಸ್ಥೆ ಎಲ್ಲರನ್ನೂ ಒಗ್ಗೂಡಿಸಿ ಸ್ವಾಥ೯ ರಹಿತ ಸಮಾಜ ಸೇವಗೆ ಕಾರ್ಯಪ್ರವೃತ್ತವಾಗಿರುವುದು ಭವಿಷ್ಯದ ಸಮಾಜದ ದೖಷ್ಟಿಯಿಂದ ಆಶಾದಾಯಕವಾಗಿದೆ ಎಂದು ಶ್ಲಾಘಿಸಿದರು. ಈಗಿನ ಕಾಲದಲ್ಲಿ ಜನ ಸ್ವಾಥ೯ದ ಉದ್ದೇಶದ ಕಾಯ೯ಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಎಲ್ಲವೂ ತನಗೆ ಮಾತ್ರ ಎಂಬ ಸ್ವಾಥ೯ ಮನೋಭಾವ.ಕಂಡುಬರುತ್ತಿದೆ. ಆದರೆ…






