ಲೇಖಕ: admin

ಸೋಮವಾರಪೇಟೆ NEWS DESK ನ.2 : ವಿದ್ಯೆ ಎಂಬುವುದು ಅಪೂರ್ವ ಸಂಪತ್ತು, ವಿದ್ಯಾದಾನ ಮಹಾನ್ ಕಾರ್ಯ, ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು, ನಾನು ಸಹಾಯ ಮಾಡುತ್ತೇನೆ ಎಂದು ಶಾಸಕ ಡಾ.ಮಂತರ್‌ಗೌಡ ಭರವಸೆ ನೀಡಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನೂತನ ಕೊಠಡಿಗಳನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಮಕ್ಕಳು ಓದಲೇಬೇಕು. ವಿದ್ಯೆಯೇ ನಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸುತ್ತದೆ. ಕಲಿತ ವಿದ್ಯೆಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಇತ್ತೀಚಿನ ವರ್ಷಗಳಲ್ಲಿ ಅತೀ ಹೆಚ್ಚು ರ‍್ಯಾಂಕ್‌ಗಳನ್ನು ಗ್ರಾಮೀಣ ಮಕ್ಕಳು ಪಡೆಯುತ್ತಿದ್ದಾರೆ ಎಂಬುದೇ ನಮಗೆ ಹೆಮ್ಮೆ ಎನಿಸುತ್ತದೆ. ಮಕ್ಕಳ ಕಲಿಕೆಗೆ ಪೋಷಕರು, ಶಿಕ್ಷಕರು ಪ್ರೋತ್ಸಾಹ ನೀಡುವುದು ಅವರ ಜವಾಬ್ದಾರಿಯಾಗಿದೆ. ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು. ನಾನು ಕೂಡ ಎಲ್ಲಾ ಸಂದರ್ಭದಲ್ಲೂ ಸಹಾಯ ಮಾಡುತ್ತೇನೆ. ಸಂಘ-ಸAಸ್ಥೆಗಳು, ದಾನಿಗಳು ಕೂಡ ಶಿಕ್ಷಣ ಮುಂದುವರಿಸಲು ಅವಶ್ಕಕತೆಯಿದ್ದವರಿಗೆ ಸಹಾಯ ಮಾಡುತ್ತಾರೆ ಎಂದು ಹೇಳಿದರು.…

Read More

ಮಡಿಕೇರಿ NEWS DESK ನ.2 : ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಬೆಂಗಳೂರು ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು. ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಚಿವರಾದ ಬೈರತಿ ಸುರೇಶ್, ಶಿವರಾಜ್ ತಂಗಡಗಿ ಹಾಗೂ ಚೇನಂಡ…

Read More

ಮಡಿಕೇರಿ NEWS DESK ನ.2 : ಕುಶಾಲನಗರ ಸಮೀಪದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನ್ಯಾಷನಲ್ ಕಾಲೇಜ್ ನ ಪ್ರಾಧ್ಯಾಪಕ ಡಾ.ಕೃಷ್ಣೇಗೌಡ ಅವರು ಇತಿಹಾಸ, ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಹೋರಾಟಗಾರರು, ಕನ್ನಡ ನಾಡಿನ ಶಿಲ್ಪಕಲೆ, ಸಾಹಿತ್ಯ, ಸಂಸ್ಕೃತಿ, ಆಚಾರ, ವಿಚಾರ ಮತ್ತು ಕನ್ನಡಿಗರು ವಿವಿಧ ಕ್ಷೇತ್ರಗಳಿಗೆ ನೀಡಿರುವ ಅಪಾರ ಕೊಡುಗೆಯ ಕುರಿತು ವಿವರಿಸಿದರು. ಚಂದದ ಬೀಡು, ಗಂಧದ ನಾಡಾದ ಕರ್ನಾಟಕವನ್ನು ಮತ್ತಷ್ಟು ಶ್ರೀಮಂತಗೊಳಿಸಲು ಎಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು. ಜ್ಞಾನಗಂಗಾ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ಮಾತನಾಡಿ ಕನ್ನಡ ಒಂದು ಸುಂದರ ಮತ್ತು ಶ್ರೀಮಂತ ಭಾಷೆಯಾಗಿದೆ, ಕನ್ನಡ ಭಾಷೆಯನ್ನು ಲಿಪಿಗಳ ರಾಣಿ ಎಂದು ಕರೆಯುತ್ತಾರೆ. ಅದು ನಮಗೆ ಹೆಮ್ಮೆಯ ವಿಚಾರವಾಗಿದೆ. ಒಂದು ಭಾಷೆ ನಾಶವಾದರೆ ಜನಾಂಗವೇ ನಾಶವಾದಂತೆ, ಹಾಗಾಗಿ ಜನ್ಮ ಕೊಟ್ಟ ತಾಯಿಯಷ್ಟೇ ನಮ್ಮ ಭಾತೃಭಾಷೆಯನ್ನು ನಾವು ಪ್ರೀತಿಸಿ, ಗೌರವಿಸಿ, ಬೆಳೆಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಬೇಕು…

Read More

ಮಡಿಕೇರಿ NEWS DESK ನ.2 : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಖಿಲ ಕೊಡಗು ಕೆಂಬಟ್ಟಿ ಸಮಾಜದ ನಿಯೋಗ ಅಧ್ಯಕ್ಷ ಬಿಲ್ಲರೀಕುಟ್ಟಡ ಪ್ರಭು ಅಯ್ಯಪ್ಪ ಅವರ ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಕೆಂಬಟ್ಟಿ ಸಮಾಜದ ಪ್ರಮುಖರು ಕೆಂಬಟ್ಟಿ ಹೆಸರನ್ನು ಜಾತಿ ಪಟ್ಟಿಯಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅಲ್ಲದೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಪೊನ್ನಣ್ಣ ಅವರು ಕೆಂಬಟ್ಟಿ ಸಮಾಜದ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ನಿಯೋಗದಲ್ಲಿ ನಿತೇಶ್, ಜೀವನ್, ಉದಯ್ ಮಾದಪ್ಪ, ಸುಬ್ರಮಣಿ, ಸಾಗರ್ ಪೂವಣ್ಣ, ದಿನೇಶ್ ಪೆಗ್ಗೋಲಿ, ಚಿಮ್ಮ ಅಯ್ಯಪ್ಪ, ವಿನೋದ್, ಅನಿಕೇತನ್, ರಂಜಿತ್, ಚರಣ್, ಕಿರಣ್ ಕಾವೇರಪ್ಪ, ಡಾಲಿ, ಮಹೇಶ್, ವಿಲ್ಮ, ರೋಹಿಣಿ, ವೈಶಾಲಿ, ದೀಪಿಕಾ, ತಿಲಕ್, ಉದಯ್ ಮಾದಪ್ಪ ನೇತುರ್ತ್ ದಲಿ, ಮನವಿ ಕೊಟ್ಟಿದ್ರು, ಅಖಿಲ ಕೊಡಗು ಕೆಂಬಟ್ಟಿ ಸಮಾಜ ಅಧ್ಯಕ್ಷರು ಆದ ಬಿಲ್ಲಿರಿ ಕುಟ್ಟ ಪ್ರಭು ಅಯ್ಯಪ್ಪ,…

Read More

ಮಡಿಕೇರಿ NEWS DESK ಅ.2 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.5ರಂದು ಬಿಟ್ಟಂಗಾಲದಲ್ಲಿ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬಿಟ್ಟಂಗಾಲದಲ್ಲಿ ಶಾಂತಿಯುತವಾಗಿ ಮಾನವ…

Read More

ಮಡಿಕೇರಿ ನ.1  NEWS DESK : ಕರಿಕೆ ಗ್ರಾಮ ಪಂಚಾಯತ್ ಮತ್ತು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷಾರಾದ  ಎನ್.ಬಾಲಚಂದ್ರ ನಾಯರ್  ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರಾದ ಎನ್. ಬಾಲಚಂದ್ರನ್ ನಾಯರ್ ಮತ್ತು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ರಾಜಶೇಖರ್  ಕನ್ನಡ ರಾಜ್ಯೋತ್ಸವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಪಂಚಾಯತ್ ಸದಸ್ಯರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸಹಕಾರ ಸಂಘದ ನಿರ್ದೇಶಕರುಗಳು, ಎಸ್.ಡಿ.ಎಂಸಿ ಅಧ್ಯಕ್ಷರುಗಳು, ಸದಸ್ಯರುಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿ ವರ್ಗ ಪಾಲ್ಗೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿಪಿನ್ ಸ್ವಾಗತಿಸಿದರು, ಗ್ರಂಥಪಾಲಕರಾದ ಸಾವಿತ್ರಿ ವಂದಿಸಿದರು. ಪ್ರೌಢ ಶಾಲೆಯಿಂದ ಆರಂಭಗೊಂಡ ಮೆರವಣಿಗೆ ಎಳ್ಳುಕೊಚ್ಚಿ ಪೇಟೆಯಲ್ಲಿ ಸಮಾಪ್ತಿಯಾಯಿತು.

Read More

ಮಡಿಕೇರಿ ನ.1 NEWS DESK : ಯುವ ಜನಾಂಗ ನಮ್ಮ ನಾಡಿನ ಅಮೂಲ್ಯ ಆಸ್ತಿ. ಅವರಲ್ಲಿ ಭಾಷೆ, ಸಂಸ್ಕೃತಿಯ ಬಗ್ಗೆ ಗೌರವ ಬೆಳೆಯುವ ಹಾಗೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ಕನ್ನಡಿಗನ ಕರ್ತವ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ಬಿ.ರಾಘವ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು. ನಮ್ಮ ನಾಡು ಎನ್ನುವ ಭಾವನೆ ಉಂಟು ಮಾಡಿದ ಮಹಾನ್ ವ್ಯಕ್ತಿಗಳಾದ ಕರ್ನಾಟಕ ಗತ ವೈಭವ ಕೃತಿಕಾರರಾದ ಆಲೂರು ವೆಂಕಟರಾಯರು, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದ ಹುಯಿಳಗೋಳ್ ನಾರಾಯಣರಾಯರು, ಬಿ.ಎಂ.ಶ್ರೀ, ಗೋವಿಂದ ಪೈ ಮುಂತಾದವರನ್ನು ಸ್ಮರಿಸುತ್ತ ಭಾಷಾವಾರು ರಾಜ್ಯಗಳ ವಿಂಗಡಣೆ, 2008ರಲ್ಲಿ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಲಭ್ಯವಾಯಿತು. ಕನ್ನಡ ಭಾಷೆಯ ಹಿರಿಮೆಯನ್ನು ಕುರಿತು 8 ಜ್ಞಾನಪೀಠ ಪ್ರಶಸ್ತಿ ಸಿಕ್ಕಿದೆ. ಇತ್ತೀಚಿಗೆ ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿಯನ್ನು ತಂದುಕೊಟ್ಟ ಬಾನು…

Read More

ಪುತ್ತೂರು ನ.1 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವರ್ಷಿತಾ.ಪಿ.ಆಳ್ವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ತಮಿಳ್ನಾಡಿನ ವಿನಾಯಕ ಮಿಷನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾವಳಿಯಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Read More

ಗೋಣಿಕೊಪ್ಪ ನ.1 NEWS DESK : ಹರಿಚಂದ್ರಪುರ ಚೇಂಬರ್ ಆಫ್ ಕಾಮರ್ಸ್ ಕಚೇರಿ ಕಟ್ಟಡ ಮುಂಭಾಗದಲ್ಲಿ ಕನ್ನಡದ ಧ್ವಜಾರೋಹಣ ಮಾಡುವ ಮೂಲಕ 70ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಕಲಾವಿದ ನಾರಾಯಣಸ್ವಾಮಿ ನಾಯ್ಡು ಅವರ ನೇತೃತ್ವದಲ್ಲಿ ಆಚರಿಸಲಾಯಿತು. ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ಕನ್ನಡ ನಾಡು ನುಡಿಯ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಹೊಂದಿರಬೇಕು. ಕನ್ನಡ ನಾಡನ್ನು ಕಟ್ಟಲು ಹಲವಾರು ಮಹನೀಯರು ಹೋರಾಟದ ಮೂಲಕ ತ್ಯಾಗ ಮಾಡಿದ್ದಾರೆ. ಇಲ್ಲಿನ ಭವ್ಯ ಪರಂಪರನೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ. ಕನ್ನಡ ಪರ ಸಂಘಟನೆಗಳು ರಾಜ್ಯೊತ್ಸವವನ್ನು ಗೋಣಿಕೊಪ್ಪ ನಗರದಲ್ಲಿ ಸಂಭ್ರಮದಿಂದ ಆಚರಿಸುವಂತಾಗಬೇಕಾಗಿದೆ. ಈ ನಿಟ್ಟಿನಲ್ಲಿ ನಾಯ್ಡು ಸಂಸ್ಥೆ ಈ ಕಾರ್ಯಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆಯೆಂದು ಹೇಳಿದರು. ಕಲಾವಿದ ನಾರಾಯಣಸ್ವಾಮಿ ಮಾತನಾಡಿ, ಪ್ರಥಮ ವರ್ಷದ ಆಚರಣೆಯಾಗಿ 70ನೇ ವರ್ಷದ ರಾಜ್ಯೋತ್ಸವವನ್ನು ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿದೆ. ಮುಂದಿನ ವರ್ಷ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕನ್ನಡದ ಹಬ್ಬವನ್ನು ವೈಭವಯುತವಾಗಿ ಆಚರಿಸಲು ಚಿಂತನೆ ಹರಿಸಲಾಗಿದೆ ಎಂದು ಹೇಳಿದರು. ಗೋಣಿಕೊಪ್ಪ ಗ್ರಾಪಂ…

Read More

ಕುಶಾಲನಗರ ನ.1 NEWS DESK :  ಭಾಷೆ ಕೇವಲ ಮಾತಿಗೆ ಸೀಮಿತವಾಗಬಾರದು, ನಿರಂತರ ಬಳಕೆ ಮಾಡುವ ಮೂಲಕ ಕನ್ನಡದ ಬೆಳವಣಿಗೆ ಆಗಬೇಕಾಗಿದೆ ಎಂದು ಕುಶಾಲನಗರ ತಾಲ್ಲೂಕು ತಹಸಿಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ತಾಲೂಕು ಅಧ್ಯಕ್ಷರು ಕಿರಣ್ ಜಿ ಗೌರಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದ ಮೈದಾನದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆ ಕ್ಷೀಣಗೊಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ, ಮಕ್ಕಳಲ್ಲಿ ಭಾಷಾ ಪ್ರೇಮ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಏಕೀಕರಣದ ನಂತರ ರಾಜ್ಯ ಶರವೇಗದಲ್ಲಿ ಬೆಳವಣಿಗೆಯೊಂದಿಗೆ ಅಭಿವೃದ್ಧಿ ಕಂಡಿದೆ ಎಂದು ತಿಳಿಸಿದರು. ಅತಿ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗೆ ಪಾತ್ರವಾಗಿರುವ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ. ಭಾಷೆ ಬಗ್ಗೆ ಚಿಂತನೆಗಳು ಕೇವಲ ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ತಾಲೂಕು ಗ್ಯಾರೆಂಟಿ…

Read More