ಮಡಿಕೇರಿ, NEWS DESK ಆ.25 : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಡಿಕೇರಿ ಆದಾಯ ತೆರಿಗೆ ಇಲಾಖೆ ಸಹಯೋಗದಲ್ಲಿ “ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು” ವಿಷಯದ ಕುರಿತು ಕಾರ್ಯಾಗಾರವನ್ನು ಮಂಗಳವಾರ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ. ರಾಘವ ಬಿ. ವಹಿಸಿದ್ದರು. ಆದಾಯ ತೆರಿಗೆ ಇಲಾಖೆಯ ಮಡಿಕೇರಿ ಕಚೇರಿಯ ಆದಾಯ ತೆರಿಗೆ ಅಧಿಕಾರಿ ಶ್ರೀ ಮಂಜುನಾಥ ಮೃತ್ತ್ಯುಂಜಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರದೀಪ್ ಆರ್. ಭಂಡಾರಿ ಅವರು ಗಣ್ಯರು, ಸಂಪನ್ಮೂಲ ವ್ಯಕ್ತಿ, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಅಧ್ಯಕ್ಷೀಯ ಭಾಷಣದಲ್ಲಿ ಮೇಜರ್ ಡಾ. ರಾಘವ ಬಿ. ಅವರು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಆದಾಯ ತೆರಿಗೆಯ ಮಹತ್ವವನ್ನು ವಿವರಿಸಿದರು. ವಾಣಿಜ್ಯ ವಿದ್ಯಾರ್ಥಿಗಳಿಗೆ ತೆರಿಗೆ ಕುರಿತ ಜ್ಞಾನ ಅತ್ಯಂತ…
ಲೇಖಕ: admin
ಮಡಿಕೇರಿ, NEWS DESK ಆ.25 : ಕೊಡಗಿನ ಜನತೆಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯಲ್ಲಿನ ಕೊಡಗಿನ ಸೂಕ್ಷ್ಮ ಪರಿಸರ ಪ್ರದೇಶಗಳಾಗಿ ಗುರುತಿಸಲ್ಪಟ್ಟ ಗ್ರಾಮಗಳನ್ನು ವರದಿಯಿಂದ ಕೈ ಬಿಡುವುದಕ್ಕೆ ಪೂರಕವಾಗಿ ಕಂದಾಯ ಮತ್ತು ಅರಣ್ಯ ಇಲಾಖಾ ಜಂಟಿ ಸರ್ವೆ ಕಾರ್ಯಕ್ಕೆ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಇದನ್ನು ರಾಜ್ಯ ಸರ್ಕಾರ ಈಗಾಗಲೇ ತಿರಸ್ಕರಿಸಿದ್ದು, ಇದಕ್ಕೆ ನಮ್ಮ ಸಹಮತ ಮತ್ತು ಬೆಂಬಲವಿದೆ. ಆದರೆ, ವರದಿಯನ್ನು ತಿರಸ್ಕರಿಸಿರುವ ಕ್ರಮ ಕೇವಲ ಪಶ್ಚಿಮಘಟ್ಟ ಪ್ರದೇಶದ ಜನರ ಆಕ್ರೋಶದಿಂದ ತಪ್ಪಿಸಿಕೊಳ್ಳುವ ಅಥವಾ ಕೈತೊಳೆದುಕೊಳ್ಳುವ ಪ್ರಯತ್ನವಾಗಬಾರದು ಎಂದರು. ಕಸ್ತೂರಿ ರಂಗನ್ ವರದಿಯ ಆರಂಭದ ಹಂತದಲ್ಲೆ ನೆರೆಯ ಕೇರಳ ರಾಜ್ಯವು, ತನ್ನ ರಾಜ್ಯದಲ್ಲಿನ ಪರಿಸರ ಸೂಕ್ಷ್ಮ ವಲಯಕ್ಕೆ ಒಳಪಟ್ಟ ಗ್ರಾಮಗಳಿಗೆ ಸಂಬಂಧಿಸಿದಂತೆ ಕಂದಾಯ, ಅರಣ್ಯ ಇಲಾಖೆಯ ಜಂಟಿ ಸರ್ವೇ ನಡೆಸಿ, ಆ ಗ್ರಾಮಗಳನ್ನು…
ಮಡಿಕೇರಿ, NEWS DESK ಆಗಸ್ಟ್ 25: ಕೊಡಗು ಜಿಲ್ಲೆಯಲ್ಲಿ ಡಾ. ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಸಾಧಕ-ಬಾಧಕಗಳ ಕುರಿತು ಸಮಗ್ರ ಚರ್ಚೆ ನಡೆಸಲು ಜಿಲ್ಲೆಯ ಹಾಲಿ ಹಾಗೂ ಮಾಜಿ ಪ್ರಮುಖ ಜನಪ್ರತಿನಿಧಿಗಳ ವಿಶೇಷ ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳ ಜಾರಿಯಿಂದ ಕೊಡಗು ಜಿಲ್ಲೆಯ ಭೌಗೋಳಿಕ ಪರಿಸ್ಥಿತಿ, ಕೃಷಿ, ಪರಿಸರ ಹಾಗೂ ಸಾರ್ವಜನಿಕರ ದೈನಂದಿನ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಚರ್ಚಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯ ಹಿತರಕ್ಷಣೆ, ರೈತರು, ಬೆಳೆಗಾರರು ಹಾಗೂ ಸಾರ್ವಜನಿಕರ ಭವಿಷ್ಯದ ದೃಷ್ಟಿಯಿಂದ ಎಲ್ಲರ ಒಮ್ಮತದ ನಿರ್ಧಾರ ಮತ್ತು ಸಲಹೆಗಳನ್ನು ಕ್ರೋಢೀಕರಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ. ಸಂಸದ ಯದುವೀರ್ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿ ನಗರದ ರಾಜದರ್ಶನ್ ಹೋಟೆಲ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಕೊಡಗು ಜಿಲ್ಲೆಯ ಅಭಿವೃದ್ಧಿ…
ವಿರಾಜಪೇಟೆ,NEWS DESK ಆ.25:ಮೀನುಪೇಟೆಯ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ 18ನೇ ವರ್ಷದ ‘ಓಣಂ ಆಚರಣೆ’ಯನ್ನು ಸೆಪ್ಟೆಂಬರ್ 06 ರ ಭಾನುವಾರದಂದು ಚೈತನ್ಯ ಮಠಪುರ ಶ್ರೀ ಮುತ್ತಪ್ಪ ಕಲಾಮಂಟಪದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಪಿ.ಜಿ. ಸುಮೇಶ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅಧ್ಯಕ್ಷ ಸುಮೇಶ್ ಅವರು, ಸೆ. 6ರಂದು ಬೆಳಿಗ್ಗೆ 08:30 ಗಂಟೆಗೆ ಮಹಾಬಲಿಯನ್ನು ಬರಮಾಡಿಕೊಂಡು, ಶ್ರೀ ಮುತ್ತಪ್ಪ ಸನ್ನಿಧಿಯಲ್ಲಿ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಬಳಿಕ ಮಹಾಬಲಿಯ (ಮಾವೇಲಿ) ಮೆರವಣಿಗೆ ಬೆಳಿಗ್ಗೆ 09:30ಕ್ಕೆ ಶ್ರೀ ಮುತ್ತಪ್ಪ ದೇವಾಲಯದಿಂದ ಪ್ರಾರಂಭವಾಗಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ವಾದ್ಯಘೋಷಗಳೊಂದಿಗೆ ವೈಭವದ ಮೆರವಣಿಗೆ ಸಾಗಲಿದೆ. ಇದೇ ವೇಳೆ ಹೂವಿನ ರಂಗೋಲಿ ಸ್ಪರ್ಧೆ ಪೂಕಳಂ’ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಾಂಪ್ರದಾಯಿಕ ಓಣಂ ಭೋಜನ (ಸದ್ಯ) ಉಣಬಡಿಸಲಾಗುತ್ತದೆ ಎಂದರು. ಮಧ್ಯಾಹ್ನ 2 ಗಂಟೆಗೆ…
ಕುಶಾಲನಗರ, NEWS DESK ಆ.25 : ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ದುಬಾರೆ ಶಿಬಿರದಿಂದ ಧನಂಜಯ, ಪ್ರಶಾಂತ, ಗೋಪಿ, ಶ್ರೀರಾಮ, ಕಾವೇರಿ ಸೇರಿದಂತೆ 5 ಆನೆಗಳು ತೆರಳಿದವು. ಶಿಬಿರದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ ನಂತರ ಅಧಿಕಾರಿ ಸಿಬ್ಬಂದಿಗಳು ಆನೆಗಳನ್ನು ಬೀಳ್ಕೊಟ್ಟರು. ಈ 5 ಆನೆಗಳು ಕಳೆದ ಬಾರಿ ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದವು. ಮೈಸೂರಿನಿಂದ ಬಂದ ಲಾರಿಗಳಲ್ಲಿ ಆನೆಗಳೊಂದಿಗೆ ಅವುಗಳ ಮಾವುತ ಕಾವಾಡಿಗರು ಮತ್ತು ಕುಟುಂಬ ಸದಸ್ಯರು ತೆರಳಿದರು.
ವಿರಾಜಪೇಟೆ,NEWS DESK ಆ.25:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಆಯೋಜಿಸಲಾಗುತ್ತಿರುವ ವಿರಾಜಪೇಟೆ ತಾಲೂಕಿನ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ಅಂಗಳ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಿಬಿರದ ಯಶಸ್ವಿ ನಿರ್ವಹಣೆಗೆ ಅಗತ್ಯವಿರುವ ಪೂರ್ವಸನ್ನಾಹಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಶಿಬಿರದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಗಳಿಗೆ ಆಹ್ವಾನಿಸಬೇಕಾದ ಮುಖ್ಯ ಅತಿಥಿಗಳ ಆಯ್ಕೆ, ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಪದಾಧಿಕಾರಿಗಳು ಸುದೀರ್ಘ ವಿಚಾರ ವಿನಿಮಯ ನಡೆಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ್ ಸಾಲ್ಯಾನ್ ಅವರು, ತಮ್ಮ ಸುದೀರ್ಘ ಅನುಭವಗಳನ್ನು ಹಂಚಿಕೊಳ್ಳುವುದರ ಜೊತೆಗೆ ಮದ್ಯಾವರ್ಜನಾ ಶಿಬಿರವನ್ನು ಅತ್ಯಂತ ಯಶಸ್ವಿಯಾಗಿ ಹೇಗೆ ನಡೆಸಬೇಕು ಎಂಬ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಜನಜಾಗೃತಿ…
ಮಡಿಕೇರಿ, NEWS DESK ಆ.25 : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ” ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಿ.ಹೆಚ್.ಮೊಹಮ್ಮದ್ ಹನೀಫ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, “ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)” ಎಂಬ ಶೀರ್ಷಿಕೆಯಲ್ಲಿ ನಡೆಯಲಿರುವ ಅಭಿಯಾನದ ಮೂಲಕ ಪ್ರವಾದಿ ಮುಹಮ್ಮದ್ ಅವರು ಜಗತ್ತಿಗೆ ನೀಡಿರುವ ಸತ್ಯ, ಶಾಂತಿ, ನ್ಯಾಯ, ಕರುಣೆ, ಸಮಾನತೆ, ಘನತೆಯ ಕುರಿತ ಸಂದೇಶಗಳನ್ನು ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಮತ್ತು ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು. ಸೀರತ್ ಅಭಿಯಾನದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು, ವಿಚಾರಗೋಷ್ಠಿ, ಮಸೀದಿಗಳಲ್ಲಿ ಸಾರ್ವಜನಿಕ ಜುಮಾ ಪ್ರವಚನ, ಪುಸ್ತಕ ಬಿಡುಗಡೆ, ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿಯನ್ನಿತ್ತು ಅಲ್ಲಿರುವವರಿಗೆ ಅಗತ್ಯ ನೆರವು ಸಾಂತ್ವನ ನೀಡುವ ಕಾರ್ಯಕ್ರಮ, ಸೀರತ್ ಎಕ್ಸಿಬಿಷನ್, ಸಮಾಜಸೇವಾ ಚಟುವಟಿಕೆಗಳು ಹಾಗೂ…
ಮಡಿಕೇರಿ, NEWS DESK ಆ.25: ಪ್ರತಿಯೊಬ್ಬರೂ ಒಳ್ಳೆಯ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಪ್ರಯತ್ನ ಮಾಡಬೇಕು ಎಂದು ಪೊನ್ನಂಪೇಟೆ ಶ್ರೀ ರಾಮ ಕೃಷ್ಣ ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಪರಹಿತಾ ನಂದ ಮಹಾರಾಜ್ ಅವರು ಕರೆ ನೀಡಿದರು. ವಿಶ್ವ ವೇದಾಂತ ವೇದಿಕೆ ಅಧ್ಯಕ್ಷ ಸ್ವಾಮಿ ಸೋಮನಾಥಾನಂದಪುರಿ ಅವರು ರಚಿಸಿರುವ ಓಂಕಾರ ಲೋಕ ಕೃತಿಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಪೊನ್ನಂಪೇಟೆ ಆಶ್ರಯದಲ್ಲಿ ಇಂದು ಪುಸ್ತಕ ಬಿಡುಗಡೆ ಮಾಡಿ ಆಶೀರ್ವಚನ ನೀಡಿದ ಸ್ವಾಮೀಜಿ ಈ ಕಾಲಘಟ್ಟದಲ್ಲಿ ಎಲ್ಲರೂ ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ದಿಸೆಯಲ್ಲಿ ಸ್ವಾಮಿ ಸೋಮನಾಥಾನಂದ ಪುರಿ ಅವರು ಬರೆದಿರುವ ಓಂಕಾರ ಲೋಕ ಕೃತಿಯನ್ನು ಸಾಕಷ್ಟು ಪ್ರಮುಖ ವಿಷಯಗಳನ್ನು ಸಂಗ್ರಹಿಸಿ ರಚಿಸಿರುವುದು ಶ್ಲಾಘನೀಯ ಎಂದು ನುಡಿದರು. ಇದೊಂದು ಉತ್ತಮ ವಿಷಯಗಳ ಸಂಗ್ರಹ ಯೋಗ್ಯ ಕೃತಿ ಎಂದು ಪರಹಿತಾನಂದಜೀ ಪ್ರಶಂಸೆಯ ನುಡಿ ಆಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಡಗು ಜಿಲ್ಲಾ ಸಂಘಚಾಲಕ್ ಹಾಗೂ…
ಮಡಿಕೇರಿ, NEWS DESK ಆ.25 : ದುಬಾರೆ ಮೀಸಲು ಅರಣ್ಯದಲ್ಲಿ ಯಾವುದೇ ಅನುಮತಿ ಇಲ್ಲದೆ ಬಂದೂಕಿನೊಂದಿಗೆ ಪ್ರವೇಶಿಸಿದ್ದ ಏಳು ಮಂದಿಯ ಪೈಕಿ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಮಡಿಕೇರಿ ವಿಭಾಗದ ಕುಶಾಲನಗರ ವಲಯದ ದುಬಾರೆ ಮೀಸಲು ಅರಣ್ಯದ ಮಾಲ್ದಾರೆ ಶಾಖಾ ವ್ಯಾಪ್ತಿಯ ದೊಡ್ಡಹಡ್ಡು ಭಾಗದಲ್ಲಿ ಆಗಸ್ಟ್ 23ರಂದು ಈ ಘಟನೆ ನಡೆದಿದೆ. ದೊಡ್ಡಹಡ್ಡು ಹಾಡಿಯ ಸಮೀಪದ ಮೀಸಲು ಅರಣ್ಯಕ್ಕೆ ಏಳು ಮಂದಿ ಯಾವುದೇ ಅನುಮತಿ ಇಲ್ಲದೆ ಬಂದೂಕಿನೊಂದಿಗೆ ಪ್ರವೇಶಿಸಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಾಲ್ದಾರೆ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ಮಹಮ್ಮದ್ ಹನೀಫ್ (ಕೊಡಂಗೇರಿ ಗ್ರಾಮ, ವಿರಾಜಪೇಟೆ ತಾಲ್ಲೂಕು), ಸುರೇಶ ಪಿ.ವಿ. ಹಾಗೂ ಥೋಮಸ್ (ತ್ರಿಶೂರ್ ಜಿಲ್ಲೆ, ಕೇರಳ) ಎಂಬ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದ್ದು, ತಪ್ಪಿಸಿಕೊಂಡು ಹೋದ ಇತರರ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ವಿರಾಜಪೇಟೆ ನ್ಯಾಯಾಲಯದಲ್ಲಿ ವನ್ಯಜೀವಿ ಪ್ರಕರಣ ದಾಖಲಿಸಲಾಗಿದೆ. ಕಾರ್ಯಾಚರಣೆ…
ಮಡಿಕೇರಿ, NEWS DESK ಆ.25 : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ” ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಿ.ಹೆಚ್.ಮೊಹಮ್ಮದ್ ಹನೀಫ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, “ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)” ಎಂಬ ಶೀರ್ಷಿಕೆಯಲ್ಲಿ ನಡೆಯಲಿರುವ ಅಭಿಯಾನದ ಮೂಲಕ ಪ್ರವಾದಿ ಮುಹಮ್ಮದ್ ಅವರು ಜಗತ್ತಿಗೆ ನೀಡಿರುವ ಸತ್ಯ, ಶಾಂತಿ, ನ್ಯಾಯ, ಕರುಣೆ, ಸಮಾನತೆ, ಘನತೆಯ ಕುರಿತ ಸಂದೇಶಗಳನ್ನು ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವುದು ಮತ್ತು ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು. ಸೀರತ್ ಅಭಿಯಾನದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು, ವಿಚಾರಗೋಷ್ಠಿ, ಮಸೀದಿಗಳಲ್ಲಿ ಸಾರ್ವಜನಿಕ ಜುಮಾ ಪ್ರವಚನ, ಪುಸ್ತಕ ಬಿಡುಗಡೆ, ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮಗಳಿಗೆ ಭೇಟಿಯನ್ನಿತ್ತು ಅಲ್ಲಿರುವವರಿಗೆ ಅಗತ್ಯ ನೆರವು ಸಾಂತ್ವನ ನೀಡುವ ಕಾರ್ಯಕ್ರಮ, ಸೀರತ್ ಎಕ್ಸಿಬಿಷನ್, ಸಮಾಜಸೇವಾ ಚಟುವಟಿಕೆಗಳು ಹಾಗೂ…






