ಲೇಖಕ: admin

ಸುಂಟಿಕೊಪ್ಪ ಮೇ 23 NEWS DESK : ಸಾಹಿತ್ಯಾಸಕ್ತರಿಗೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ ರೀತಿಯಲ್ಲಿ ಪ್ರೋತ್ಸಾಹದಾಯಕ ವಾತಾವರಣ ಇದೆ. ಹೀಗಾಗಿಯೇ ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿ ಇದೆ ಎಂದು ಕೊಡಗು ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಶ್ಲಾಘಿಸಿದ್ದಾರೆ. ಹುಣಸೂರು ಬಳಿಯಲ್ಲಿ ನೆಲಸಿರುವ ಸುಂಟಿಕೊಪ್ಪ ಮೂಲದ ನಾಡಿನ ಹಿರಿಯ ಸಾಹಿತಿ ಅಬ್ದುಲ್ ರಶೀಧ್ ಮೇ 29 ಮತ್ತು 30 ರಂದು ಸುಂಟಿಕೊಪ್ಪದಲ್ಲಿ ಆಯೋಜಿತ ಕನ್ನಡ ಸಾಹಿತ್ಯದ 17 ನೇ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು, ಈ ಹಿನ್ನಲೆಯಲ್ಲಿ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ಅಬ್ದುಲ್ ರಶೀದ್ ಜೊತೆ ಅವರ ಆದಿವಾಸಿ ಫಾರ್ಮ್‍ನಲ್ಲಿ ಸಂವಾದ ಆಯೋಜಿಸಲಾಗಿತ್ತು. ಪತ್ರಕರ್ತರೊಂದಿಗಿನ ಸಂವಾದ ಸಂದರ್ಭ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ಅಬ್ದುಲ್ ರಶೀದ್, ಸುಂದರ ಕೊಡಗು ವಿಭಿನ್ನ ಧಾರ್ಮಿಕ, ಸಮುದಾಯಗಳ ಸಹಭಾಳ್ವೆಗೆ ಸಾಕ್ಷಿಯಾಗಿ ವಿಶಿಷ್ಟ ಜೀವನ ಶೈಲಿಯನ್ನು ಅಳವಡಿಸಿಕೊಂಡಿರುವ ಜನರನ್ನು ಹೊಂದಿದೆ. ಕನ್ನಡ, ಕೊಡವ, ಅರೆಭಾಷೆ, ತುಳು, ಮಲಯಾಳ, ಹಿಂದಿ, ತೆಲುಗು, ತಮಿಳು ಹೀಗೆ ವಿವಿಧ…

Read More

ಸೋಮವಾರಪೇಟೆ ಮೇ 23 NEWS DESK : ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಸಭೆ ಅಧ್ಯಕ್ಷರಾದ ಜಿ.ಎಂ.ಕಾಂತರಾಜು ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸೋಮವಾರಪೇಟೆ ತಾಲೂಕಿಗೆ ಸಂಬಂಧಿಸಿದಂತೆ 1032 ಬಿಪಿಎಲ್ ಪಡಿತರ ಚೀಟಿಗಳು ಎಪಿಎಲ್ ಆಗಿ ಪರಿವರ್ತನೆ ಆಗಿದ್ದು, ಅದರಲ್ಲಿ 261 ಅರ್ಜಿದಾರರು, ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರೆಂದು ಅರ್ಜಿ ಸ್ವೀಕೃತಗೊಂಡಿದೆ. ಇದರ ಪೈಕಿ 102 ಪ್ರಕರಣಗಳನ್ನು ಮರು ಸ್ಥಾಪಿಸಲಾಗಿದೆ. ಉಳಿದ ಪ್ರಕರಣಗಳಿಗೆ ಅಗತ್ಯ ದಾಖಲೆಗಳನ್ನು ಹಾಜರು ಪಡಿಸುವಂತೆ ನೋಟೀಸು ನೀಡಲಾಗಿದೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ಸಭೆಗೆ ತಿಳಿಸಿದರು. ವೈದ್ಯಕೀಯ ತುರ್ತು ಚಿಕಿತ್ಸೆಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿ ತಿದ್ದುಪಡಿಗಾಗಿ 2027ರ ಮಾರ್ಚ್ 31ರವರೆಗೆ ಸÀರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಯುವನಿಧಿ ಯೋಜನೆಯಡಿ ಜನವರಿ 2024ರಿಂದ ಫೆಬ್ರವರಿ 2026ರವರೆಗೆ ಒಟ್ಟು 1,64,74,500 ರೂ.ಗಳನ್ನು ಯುವನಿಧಿ ಹಣ ನೀಡಲಾಗಿರುತ್ತದೆ ಎಂದು ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದರು. ಗೃಹಲಕ್ಷ್ಮೀ ಯೋಜನೆಯಡಿ ಡಿಸೆಂಬರ್ 2025ರಿಂದ ಫೆಬ್ರವರಿ 2026ರವರೆಗೆ ಫಲಾನುಭವಿಗಳ ಖಾತೆಗೆ…

Read More

ಸೋಮವಾರಪೇಟೆ ಮೇ 23 NEWS DESK : ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ಉಚಿತ ನಿವೇಶನಕ್ಕಾಗಿ ನಡೆಯುತ್ತಿರುವ ನಿವೇಶನ ರಹಿತ ಕಾರ್ಮಿಕರ ಧರಣಿ 22ನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಬಡ ಕಾರ್ಮಿಕರು ಟಾರ್ಪಲ್‍ನಿಂದ ನಿರ್ಮಿಸಿರುವ ಶೆಡ್‍ನಲ್ಲಿ ಮಳೆ-ಚಳಿಯಲ್ಲೇ ರಾತ್ರಿ ಕಳೆಯುತ್ತಿದ್ದಾರೆ.

Read More

ಮಡಿಕೇರಿ ಮೇ 23 NEWS DESK :  ಕೊಡಗಿನ ಪತ್ರಕರ್ತ ಪ್ರಶಾಂತ್ ವಿರಚಿತ “ಹೊನ್ನಮ್ಮನ ಕನಸು” ಕಾದಂಬರಿ ವಿಶ್ವ ಕನ್ನಡ ಸಮ್ಮೇಳನದ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಭಾಜನವಾಗಿದೆ. ಚೇತನ ಪ್ರತಿಷ್ಠಾನ ಹಾಗೂ ಗೋವಾ ಕನ್ನಡಿಗರ ಒಕ್ಕೂಟ ಆಯೋಜಿಸುತ್ತಿರುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಭಾನುವಾರ ಗೋವಾದ ಪಣಜಿಯ ಕಡಲ ತೀರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಅದ್ದೂರಿಯಾಗಿ ನಡೆಯಲಿದೆ. ಖ್ಯಾತ ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಡಾ.ರಾಜಶೇಖರ್ ಮಠಪತಿ, ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರು, ಸೇರಿದಂತೆ ಹಲವು ಗಣ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರ್ತಕರ್ತ ಪ್ರಶಾಂತ್ ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊನ್ನಮ್ಮನ ಕನಸು ಕಾದಂಬರಿ ದೃಷ್ಟಿ ಕಳೆದುಕೊಂಡು ವೃದ್ದೆಯೊಬ್ಬರ ಮೂಕರೋಧನೆಯನ್ನು ಒಳಗೊಂಡಿದೆ. ಬಾಳ ಹಾದಿಯಲಿ…

Read More

ಮಡಿಕೇರಿ ಮೇ 23 NEWS DESK : ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ, ಸಂಗೀತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ತಂದೆ ತಾಯಿಯರನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುವ ಹೆಣ್ಣು ಮಕ್ಕಳು, ಅತ್ತೆ ಮಾವಂದಿರನ್ನು ಅದೇ ರೀತಿ ಅಷ್ಟೇ ಚೆನ್ನಾಗಿ ನೋಡಿಕೊಳ್ಳಬೇಕು, ಆಗ ಸಂಸಾರ ಮತ್ತು ಸಂಬಂಧಕ್ಕೆ ಒಂದು ಅರ್ಥ ಬರುತ್ತದೆಂದು ಸೆಸ್ಕ್ ನಿರ್ದೇಶಕ(ತಾಂತ್ರಿಕ)ರಾಗಿರುವ ಶರಣಮ್ಮ ಎಸ್.ಜಂಗಿನರವರು ಕಿವಿಮಾತು ಹೇಳಿದರು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ನಗರದ ಗಾಂಧಿ ಭವನದಲ್ಲಿ ಆಯೋಜಿತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಣ್ಣು ಮಕ್ಕಳು ಮನೆ ಹಾಗೂ ಕಚೇರಿ ಕೆಲಸಗಳೆರಡಕ್ಕೂ ಅಗತ್ಯ ಜಾಗವನ್ನು ನೀಡಿ ನಿಭಾಯಿಸುತ್ತಾರೆ. ಮಹಿಳೆ ತನ್ನ ಸಹನೆ ಮತ್ತು ಪ್ರೀತಿಯಿಂದಲೇ ಎಲ್ಲವನ್ನೂ ನಿಬಾಯಿಸುತ್ತಾಳೆÉಂದು ಹೆಣ್ಣು ಮಕ್ಕಳ ಬಗ್ಗೆ ಹೆಮ್ಮೆಯಿಂದ ಹೇಳಿದರು. ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಡಳಿತಾಧಿಕಾರಿ ಪ್ರಭಾವತಿ ಕೆ.ಎಚ್. ಮಾತನಾಡಿ, ಮಹಿಳೆಯರು ಅಬಲೆಯಲ್ಲ, ಸಬಲೆ. ಏನೇ ಸಮಸ್ಯೆ ಇದ್ದರೂ…

Read More

ಮಡಿಕೇರಿ ಮೇ 23 NEWS DESK : ಆಡಳಿತ ಪಕ್ಷದೊಳಗಿನ ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಉತ್ತಮ ಆಡಳಿತದ ನಿರೀಕ್ಷೆಯಲ್ಲಿ ಬಹುಮತ ನೀಡಿದ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಳೆಗಾಲ ಸಮೀಪಿಸಿದರೂ ನಗರಸಭೆಯಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಮಡಿಕೇರಿ ಶಾಸಕರು 6.50 ಕೋಟಿ ರೂ. ವಿಶೇಷ ಅನುದಾನವನ್ನು ತಂದಿದ್ದು, ಈ ಹಣದಿಂದ ಕಾಮಗಾರಿ ನಡೆಯುತ್ತಿದೆ. ನಗರೋತ್ಥಾನದ ಕಾಮಗಾರಿಗಳು ಕೂಡ ಈಗಿನ ಶಾಸಕರ ಆಸಕ್ತಿಯಿಂದ ನಡೆಯುತ್ತಿದೆ. ಶಾಸಕರು ನಗರದ ಅಭಿವೃದ್ಧಿಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಈ ಹಿಂದೆ ಇದ್ದ ಶಾಸಕರು ನಗರಸಭೆಗೆ ಯಾವುದೇ ವಿಶೇಷ ಅನುದಾನವನ್ನು ತಂದಿಲ್ಲವೆಂದು ಟೀಕಿಸಿದರು. ಮಳೆಗಾಲ ಸಮೀಪಿಸಿದರೂ ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ತಡೆಗೋಡೆ ಮತ್ತು ರಸ್ತೆಗಳ ಕಾಮಗಾರಿ ಆರಂಭಗೊಂಡಿಲ್ಲ. ತೋಡು ಮತ್ತು ಚರಂಡಿಗಳ ಸ್ವಚ್ಛತಾ ಕಾರ್ಯ ನಡೆದಿಲ್ಲ.…

Read More

ಮಡಿಕೇರಿ ಮೇ 23 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಮೊದಲ ಬಾರಿಗೆ ಮೃತ ದಾನಿಯಿಂದ ಅಂಗಾಂಗ ಸಂಗ್ರಹಣೆ ಯಶಸ್ವಿಯಾಗಿ ನೆರವೇರಿದ್ದು, ಕೊಡಗು ಜಿಲ್ಲೆಯ ವೈದ್ಯಕೀಯ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ. ಗೋಣಿಕೊಪ್ಪ ಸಮೀಪದ ಅರವತ್ತೋಕ್ಲು ಗ್ರಾಮದ 46 ವರ್ಷದ ಡಾಲು ಅವರು ಅಪಘಾತದಲ್ಲಿ ತೀವ್ರ ತಲೆಗೆ ಗಾಯಗೊಂಡು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ವೈದ್ಯರು ಬ್ರೇನ್‍ಸ್ಟೆಮ್ ಡೆತ್ ಶಂಕೆ ವ್ಯಕ್ತಪಡಿಸಿದರು. ಭಾರತೀಯ ಕಾನೂನು ಪ್ರಕಾರ ಎರಡು ಹಂತಗಳಲ್ಲಿ ವೈದ್ಯಕೀಯ ಸಮಿತಿಯಿಂದ ಪರೀಕ್ಷೆ ನಡೆಸಿ, 48 ಗಂಟೆಗಳ ವೀಕ್ಷಣೆಯ ಬಳಿಕ ಬ್ರೇನ್‍ಸ್ಟೆಮ್ ಡೆತ್ ದೃಢಪಡಿಸಲಾಯಿತು. ಈ ಸಂದರ್ಭದಲ್ಲಿ ಡಾಲು ಅವರ ಪತ್ನಿ ರಾಜೇಶ್ವರಿ ಹಾಗೂ ಕುಟುಂಬ ಸದಸ್ಯರು ಮಹತ್ವದ ಮಾನವೀಯ ನಿರ್ಧಾರ ಕೈಗೊಂಡು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಈಗಾಗಲೇ SOTTO ಹಾಗೂ NOTTO ಮಾನ್ಯತೆ ಪಡೆದಿರುವ ಹಿನ್ನೆಲೆ, ಪ್ರಕರಣವನ್ನು ರಾಜ್ಯ ಅಂಗಾಂಗ ಮತ್ತು SOTTO ಗೆ…

Read More

ಮಡಿಕೇರಿ ಮೇ 23 NEWS DESK : ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ಆದಿವಾಸಿಗಳು ವಾಸವಿರುವ ಪ್ರದೇಶದಲ್ಲಿ ಚರ್ಚ್ ನಡೆಸಲೆಂದು ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದು, ಸರಕಾರಿ ಕಾರ್ಯಚಟುವಟಿಕೆಗಳಿಗೆ ಬಳಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದನ್ನು ಸ್ವಾಗತಿಸುವುದಾಗಿ ಹೇರೂರು ಗ್ರಾಮಸ್ಥರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಯುವ ಮೋರ್ಚಾದ ಪ್ರಮುಖ ಹಾಗೂ ಗ್ರಾಮಸ್ಥ ಚಂದ್ರಶೇಖರ್ ಹೇರೂರು ಅವರು ಅನಾರೋಗ್ಯಪೀಡಿತರಾಗುವ ಆದಿವಾಸಿಗಳನ್ನು ಗುಣಮುಖರನ್ನಾಗಿ ಮಾಡುವ ನೆಪದಲ್ಲಿ ಮನಪರಿವರ್ತಿಸಿ ಮತಾಂತರ ಮಾಡಲಾಗುತ್ತಿದೆ. ಆದಿವಾಸಿಗಳು ಹೆಚ್ಚು ಅನಾರೋಗ್ಯಕ್ಕೆ ತುತ್ತಾಗುತ್ತಿರುವುದರಿಂದ ಈ ಭಾಗದಲ್ಲಿರುವ ಹಾಡಿ ಜನರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಲು ಆಸ್ಪತ್ರೆಯನ್ನು ಆರಂಭಿಸಬೇಕು ಎಂದು ಮನವಿ ಮಾಡಿದರು. ಹೇರೂರು ಹಾಡಿಯಲ್ಲಿ 380ಕ್ಕೂ ಹೆಚ್ಚಿನ ಆದಿವಾಸಿಗಳು ನೆಲೆಸಿದ್ದಾರೆ. ಇಲ್ಲಿಗೆ ನಾಕೂರು ಶಿರಂಗಾಲ ಗ್ರಾಮ ಪಂಚಾಯ್ತಿಯಿಂದ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ, ಶೌಚಾಲಯಗಳನ್ನು ಒದಗಿಸಲಾಗಿದೆ. ಇವರುಗಳು ವಾಸಿಸುತ್ತಿರುವ ಪ್ರದೇಶ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದಾಗಿದೆ. ಮುಗ್ಧ ಆದಿವಾಸಿಗಳನ್ನು ಹಣಕಾಸಿನ ನೆರವನ್ನು ನೀಡುವ ಆಮಿಷಗಳನ್ನೊಡ್ಡಿ…

Read More

ವಿರಾಜಪೇಟೆ ಮೇ 22 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ರಾಮನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗಿನ ಪ್ರತಿಷ್ಟಿತ ನಾಟ್ಯಂಜಲಿ ನೃತ್ಯ ಸಂಸ್ಥೆಯ ಗುರು ಕಾವ್ಯಶ್ರೀ ಕಾಂತ್‍ರಾಜ್ ಹಾಗೂ ಅವರ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ “ಕರ್ನಾಟಕ ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾವ್ಯಶ್ರೀ ಪ್ರಸ್ತುತ ಮಡಿಕೇರಿಯ ಸಂತ ಜೋಸೆಫರ ಪ್ರೌಢ ಶಾಲೆಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾವ್ಯಶ್ರೀ ಅಮ್ಮತ್ತಿ ಬಿಳುಗುಂದ ಗ್ರಾಮದ ಶಿಕ್ಷಕಿ ಹೇಮಾವತಿ ಹಾಗೂ ಕಾಂತ್‍ರಾಜ್ ದಂಪತಿಯ ಪುತ್ರಿ. ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ನೃತ್ಯ ಸಂಸ್ಥೆಯ ಮಾಲೀಕರಾದ ಮಹೇಶ್ ಅವರ ಪತ್ನಿ.

Read More

ವಿರಾಜಪೇಟೆ ಮೇ 22 NEWS DESK : ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಯುವ ವೈಭವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ 88 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನವನ್ನು ತೋರುವ ಮೂಲಕ ಸಮಗ್ರ ವಿನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ರಂಗೋಲಿಯಲ್ಲಿ ದ್ವಿತೀಯ ಸ್ಥಾನ, ಸೆಲ್ಫಿ ಪಾಯಿಂಟ್ ನಲ್ಲಿ ದ್ವಿತೀಯ , ಕ್ಲಿಕ್ ಕ್ಯಾಂಡಿಡ್ ನಲ್ಲಿ ಪ್ರಥಮ, ಬೆಸ್ಟ್ ಮ್ಯಾನೇಜರ್ ನಲ್ಲಿ ಪ್ರಥಮ, ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಫ್ಯೂಷನ್ ಡ್ಯಾನ್ಸ್ ನಲ್ಲಿ ದ್ವಿತೀಯ, ವಿಜ್ಞಾನ ಮಾದರಿ ರಚನೆಯಲ್ಲಿ ಪ್ರಥಮ, ಪೋಸ್ಟರ್ ನಿರ್ಮಾಣ ಹಾಗೂ ವಿವರಣೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸಾಧನೆ ಮಾಡಿದ್ದಾರೆ. ಕಾಲೇಜಿನಲ್ಲಿ ಜರುಗಿದ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಅವರು, ವಿದ್ಯಾರ್ಥಿಗಳ ಈ ಸಾಧನೆಯು ಅಭಿನಂದನಾರ್ಹವಾಗಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಉತ್ತಮವಾದ ಸಾಧನೆಯನ್ನು…

Read More