ಲೇಖಕ: admin

ಮಡಿಕೇರಿ NEWS DESK ಜೂ.30 : ಕೊಡಗು ಜಿಲ್ಲೆಯ ಭೂಮಿಯನ್ನು ಹೊರಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಮಾಡುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ 10 ವರ್ಷಗಳಲ್ಲಿ ಕೊಡಗಿನ ಭೌಗೋಳಿಕ ಚಿತ್ರಣವೇ ಬದಲಾಗಬಹುದು ಮತ್ತು ಮೂಲ ಸಂಸ್ಕೃತಿಯ ಮೇಲೆ ಪರಿಣಾಮ ಬೀರಬಹುದು ಎಂದು ಕೊಡಗು ಹಾಗೂ ಕಾವೇರಿ ಸಂರಕ್ಷಣಾ ವೇದಿಕೆಯ ಸಂಚಾಲಕ ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೊರಗಿನವರು ಭೂಮಿ ಖರೀದಿ ಮಾಡುವುದನ್ನು ನಿಯಂತ್ರಿಸಲು ಸರಕಾರ ಹೊಸ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಬಳಿಯ ಮಲ್ಮ ಬೆಟ್ಟ ವ್ಯಾಪ್ತಿಯಲ್ಲಿ ಹೊರ ಭಾಗದ ವ್ಯಕ್ತಿಯೊಬ್ಬರು ದೊಡ್ಡ ಪ್ರಮಾಣದ ಭೂಮಿಯನ್ನು ಖರೀದಿಸಿದ್ದಾರೆ. ಈ ಬೆಟ್ಟ ಪವಿತ್ರ ನೆಲೆಯಾಗಿದ್ದು, ಕಾಮಗಾರಿ ನಡೆಸುವ ಸಂದರ್ಭ ವಿರೋಧ ವ್ಯಕ್ತವಾಗಿದೆ. ಈ ಕಾರಣದಿಂದ ಉದ್ದೇಶಿತ ಯೋಜನೆಯನ್ನು ಭೂಮಿ ಖರೀದಿದಾರರು ಕೈಬಿಟ್ಟಿರುವುದಾಗಿ ಘೋಷಿಸಿದ್ದಾರೆ. ಇದು ತಾತ್ಕಾಲಿಕ ಸಮಾಧಾನವಾಗಿದ್ದು, ಮುಂದಿನ ದಿನಗಳಲ್ಲಿ ಹೊರ ರಾಜ್ಯದ ಮಂದಿ ಜಿಲ್ಲೆಯ ದೇವರಕಾಡು ಸೇರಿದಂತೆ ಪವಿತ್ರ ಸ್ಥಳಗಳನ್ನು…

Read More

ಸೋಮವಾರಪೇಟೆ NEWS DESK ಜೂ.30 : ಶನಿವಾರಸಂತೆ ಸಮೀಪದ  ಗುಡುಗಳಲೆ ಗ್ರಾಮದ  ನಿವಾಸಿ ನಿವೃತ್ತ ಶಿಕ್ಷಕ ಡಿ. ಬಿ.ಸೋಮಪ್ಪ ನವರ ಪತ್ನಿ ಶ್ರೀಮತಿ ಹೇಮಾ (80) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಪತಿ,ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಮಡಿಕೇರಿ NEWS DESK ಜೂ.30 : ರಾಜ್ಯಾದ್ಯಂತ ಇಂದಿನಿಂದ ಜುಲೈ 29 ರವರೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಅಂಗವಾಗಿ ಮನೆ-ಮನೆ ಸಮೀಕ್ಷೆ (Enumeration) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಗರೂರಿನ ನನ್ನ ನಿವಾಸದಲ್ಲಿ ಬಿಎಲ್‌ಓಗಳಿಗೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿ ನೀಡಿ ನಾನು ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದೇನೆ. ನಾಡಿನ ಸಮಸ್ತ ನಾಗರಿಕರಲ್ಲಿ ಹಾಗೂ ಅರ್ಹ ಮತದಾರರಲ್ಲಿ ನನ್ನದೊಂದು ವಿನಂತಿ, ನೀವೆಲ್ಲರೂ ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಪೂರ್ಣ ಸಹಕಾರ ನೀಡಿ, ಅಗತ್ಯ ಮಾಹಿತಿಗಳನ್ನು ಒದಗಿಸುವ ಮೂಲಕ ನಿಮ್ಮ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಿ.  ನೆನಪಿಡಿ, ಪ್ರಜಾಪ್ರಭುತ್ವ ಎನ್ನುವುದು ಕೇವಲ ಒಂದು ಆಡಳಿತ ವ್ಯವಸ್ಥೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಧ್ವನಿ. ಆ ಧ್ವನಿಗೆ ಶಕ್ತಿ ತುಂಬುವುದು ನಮ್ಮ ‘ಮತ’. ನಾವು ಚಲಾಯಿಸುವ ಪ್ರತಿಯೊಂದು ಮತವೂ ದೇಶದ ಭವಿಷ್ಯವನ್ನು ರೂಪಿಸುವ ಮತ್ತು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಪವಿತ್ರ ಕರ್ತವ್ಯವಾಗಿದೆ. ಅಗತ್ಯ ದಾಖಲೆ ನೀಡಿ – ಮತದಾನದ ಹಕ್ಕನ್ನು ಉಳಿಸಿಕೊಳ್ಳಿ >>>…

Read More

ಮಡಿಕೇರಿ NEWS DESK ಜೂ.30 : 2026ರ ಜುಲೈ 3ರಿಂದ 7ರವರೆಗೆ ಹಾಂಗ್‌ಕಾಂಗ್‌ನಲ್ಲಿ ನಡೆಯಲಿರುವ ಲಯನ್ಸ್ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಲಯನ್ಸ್ ಜಿಲ್ಲೆ 317D ಅನ್ನು ಪ್ರತಿನಿಧಿಸುವ ಅಧಿಕೃತ ಮತದಾನ ಪ್ರತಿನಿಧಿಗಳಾಗಿ ಕೊಡಗು ಜಿಲ್ಲೆಯ ನಾಲ್ವರು ಲಯನ್ಸ್ ಸದಸ್ಯರು ಭಾಗವಹಿಸಲಿದ್ದಾರೆ. ಲಯನ್ಸ್ ಸಂಸ್ಥೆ, ಮೂರ್ನಾಡಿನ ಖಜಾಂಚಿ ಲಯನ್ ಅರುಣ್ ಅಪ್ಪಚ್ಚು, ಲಯನ್ ಕನ್ನು ಅಪ್ಪಚ್ಚು, ಲಯನ್ಸ್ ಸಂಸ್ಥೆ, ಮಡಿಕೇರಿಯ ಕಾರ್ಯದರ್ಶಿ ಲಯನ್ ಮಧುಕರ್ ಕೆ. ಹಾಗೂ ಲಯನ್ ಗೀತಾ ಮಧುಕರ್ ಅವರು ಈ ಸಮ್ಮೇಳನದಲ್ಲಿ ಜಿಲ್ಲೆ 317D ಪರವಾಗಿ ಮತದಾನ ಪ್ರತಿನಿಧಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿಶ್ವದ 200ಕ್ಕೂ ಹೆಚ್ಚು ದೇಶಗಳು ಮತ್ತು ಭೌಗೋಳಿಕ ಪ್ರದೇಶಗಳಿಂದ ಸಾವಿರಾರು ಲಯನ್ಸ್ ಸದಸ್ಯರು ಈ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಸಂಘಟನೆಯ ನೀತಿ-ನಿರ್ಧಾರಗಳು, ಅಂತರಾಷ್ಟ್ರೀಯ ಪದಾಧಿಕಾರಿಗಳ ಚುನಾವಣೆ, ಸೇವಾ ಚಟುವಟಿಕೆಗಳ ವಿನಿಮಯ ಹಾಗೂ ವಿಶ್ವ ಲಯನ್ಸ್ ಸದಸ್ಯರ ಪರಸ್ಪರ ಸ್ನೇಹ-ಸಹಕಾರಕ್ಕೆ ಈ ಮಹಾಸಭೆ ವೇದಿಕೆಯಾಗಲಿದೆ. ಈ ಮಹಾಸಭೆಯಲ್ಲಿ ಜಿಲ್ಲಾ 317Dಯಿಂದ 70 ಸದಸ್ಯರ ನಿಯೋಗ ಭಾಗವಹಿಸುತ್ತಿದ್ದು, ಈ ನಿಯೋಗದಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ…

Read More

ಮಡಿಕೇರಿ NEWS DESK ಜೂ.30 : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಹಾಗೂ ಮತಗಟ್ಟೆ ಅಧಿಕಾರಿಗಳು ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಗಣತಿ ನಮೂನೆ ನೀಡುವ ಮೂಲಕ ಮತದಾನ ಪಟ್ಟಿ ಪರಿಷ್ಕರಣೆ ಆಂದೋಲನಕ್ಕೆ ಚಾಲನೆ ನೀಡಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ, ನೇಮಿಸಲ್ಪಟ್ಟ ಮತಗಟ್ಟೆ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ನಮೂನೆ ಅರ್ಜಿ ಸಲ್ಲಿಸಿ, ನಮೂನೆ ಭರ್ತಿ ಮಾಡಿ ಸಹಿ ಹಾಕಿ ಕೊಡುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ಮತದಾರರು ಗಮನಿಸಬೇಕಿದೆ ಎಂದು ಕೋರಿದರು. ಅರ್ಜಿ ನಮೂನೆ ಕೊಡದೇ ಹೋದರೆ ಅಂತಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯಲಿದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಮನವಿ ಮಾಡಿದರು. ಗಣತಿ ನಮೂನೆ ನೀಡಿ, ಪರಿಷ್ಕರಣೆ ಕುರಿತು ವಿವರಿಸಿದರು. ಒಂದು ವೇಳೆ ಮತದಾರರು ಹೊರಗೆ ಇದ್ದರೂ ಕುಟುಂಬದ ಯಾರಾದರೊಬ್ಬರೂ ತಮ್ಮ ಕುಟುಂಬದ ಎಲ್ಲ…

Read More

ಚೆಟ್ಟಳ್ಳಿ ಜೂ.29 NEWS DESK : ಚೆಟ್ಟಳ್ಳಿ ಉಪಠಾಣಾಧಿಕಾರಿಯಾಗಿ ಪಟ್ರಪಂಡ ಮೊಣ್ಣಪ್ಪ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮೊಣ್ಣಪ್ಪ ಅವರು ಈ ಹಿಂದೆ ಮೂರ್ನಾಡು ಉಪಠಾಣೆಯಲ್ಲಿ ಸೇವೆಸಲ್ಲಿಸಿದ್ದಾರೆ.

Read More

ವಿರಾಜಪೇಟೆ ಜೂ.29 NEWS DESK : ಆರೋಗ್ಯ ಇಲಾಖೆಯ ವತಿಯಿಂದ ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅವರು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರವು ದೇಶಾದ್ಯಂತ ಪೋಲಿಯೋವನ್ನು ನಿರ್ಮೂಲನೆ ಮಾಡಿ ಪೋಲಿಯೋ ಮುಕ್ತ ಭಾರತವನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಜೊತೆಗೆ ನಮ್ಮ ವಿದ್ಯಾಸಂಸ್ಥೆಯು ಕೂಡ ಈ ಅಭಿಯಾನಕ್ಕೆ ಸಂಪೂರ್ಣ ಸಹಕಾರವನ್ನು ನೀಡಿ ಪಾಲ್ಗೊಂಡಿದ್ದು, ಸಂಸ್ಥೆಯು ಸಮುದಾಯದ ಸಹಭಾಗಿತ್ವದ ಜೊತೆಗೆ ಆರೋಗ್ಯಯುಕ್ತ ರಾಷ್ಟ್ರದ ನಿರ್ಮಾಣಕ್ಕೆ ಕೈ ಜೋಡಿಸಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ಅತ್ಯಂತ ಜವಾಬ್ದಾರಿಯುತ ಹಾಗೂ ಸಾಮಾಜಿಕ ಕಳಕಳಿಯುಳ್ಳ ಕಾರ್ಯವಾಗಿದ್ದು, ನಮ್ಮ ವಿದ್ಯಾಸಂಸ್ಥೆಯು ಇಂತಹ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡು ತನ್ನ ಸೇವೆಯನ್ನು ಸಲ್ಲಿಸುತ್ತಿದೆ ಎಂದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸಿಬ್ಬಂದಿಗಳು, ಮಕ್ಕಳು ಹಾಗೂ ಸಾರ್ವಜನಿಕರು…

Read More

ಮಡಿಕೇರಿ ಜೂ.25 NEWS DESK : ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಲಸಿಕೆ ಪಡೆಯದೆ ವಂಚಿತರಾದ ಮಕ್ಕಳಿಗೆ ಪತ್ತೆ ಹಚ್ಚಲು 2 ದಿನ ಮನೆ ಮನೆಗಳಿಗೆ ಭೇಟಿ ಮಾಡುವ 2ನೇ ದಿನ ಮೂರ್ನಾಡು ವ್ಯಾಪ್ತಿಯ ಹೂಕಾಡು ಪೈಸಾರಿ ಗ್ರಾಮದ ಮನೆ ಮನೆಗಳಿಗೆ ತೆರಳಿ ಲಸಿಕೆ ಪಡೆಯಾದ ಮಕ್ಕಳಿಗೆ ಪತ್ತೆ ಹಚ್ಚಿ ಲಸಿಕೆ ನೀಡುವ ಕಾರ್ಯದಲ್ಲಿ ಆರೋಗ್ಯ ಸಿಬ್ಬಂದಿ ತಂಡಗಳು ಕಾರ್ಯನಿರ್ವಹಿಸಿದರು. ತಂಡಗಳ ಕಾರ್ಯವನ್ನು ಮೇಲ್ವಿಚಾರಣೆಗಾಗಿ ಡಾ.ಸನತ್ ಕುಮಾರ್ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಮತ್ತು ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿ ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು. ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್, ಕಾರ್ಯಕ್ರಮ ವ್ಯವಸ್ಥಾಪಕರು ನಿಲಿಮ್ , ಹಾಗೂ ಪ್ರಾ.ಆ.ಸುರಕ್ಷಾಧಿಕಾರಿ ಶಿಲ್ಪಾ, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಹಾಜರಿದ್ದರು.

Read More

ಮಡಿಕೇರಿ ಜೂ.29 NEWS DESK : ಕರ್ನಾಟಕ ಸರ್ಕಾರವು 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಅಧಿಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗಿದೆ. 2026-27 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ. 47,000 ಹಾಗೂ ಅಡಿಕೆ ಬೆಳೆಗೆ ರೂ. 1,28,000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5 ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಿದೆ.…

Read More

ಕುಶಾಲನಗರ, ಜೂ.29 NEWS DESK : ಚಿತ್ರದುರ್ಗದ ತಾರಾಮಂಡಲ & ಪುಟಾಣಿ ವಿಜ್ಞಾನದ ಸಂಸ್ಥೆಯ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ವಿಜ್ಞಾನಿ ಚಾರ್ಲ್ಸ್ ಡಾರ್ವಿನ್ ದ್ವಿ ಶತಮಾನೋತ್ಸವದ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು)ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರಿಗೆ ರಾಜ್ಯಮಟ್ಟದ ಡಾರ್ವಿನ್ ವಿಜ್ಞಾನ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶಾಲಾ ವಿಜ್ಞಾನ ಕಾರ್ಯಕ್ರಮಗಳ ಯಶಸ್ಸಿನ ಕ್ರಿಯಾಶೀಲ ಶಿಕ್ಷಕರಿಗೆ ಕೊಡಮಾಡುವ ಈ ಪ್ರಶಸ್ತಿಯನ್ನು ಅಂತರಾಷ್ಟ್ರೀಯ ಖ್ಯಾತಿ ಹಿರಿಯ ವಿಜ್ಞಾನಿ ಡಾ ರಾಮಕೃಷ್ಣ ಅವರು ಪ್ರೇಮಕುಮಾರ್ ಅವರಿಗೆ ನೀಡಿ ಗೌರವಿಸಿದರು. ಮಕ್ಕಳಲ್ಲಿ ವಿಜ್ಞಾನ ವಿಷಯ ಕಲಿಕೆಯಲ್ಲಿ ಆಸಕ್ತಿ ಬೆಳೆಸುವುದು ಸೇರಿದಂತೆ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ವಿದ್ಯಾರ್ಥಿಗಳು ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳುವ ದಿಸೆಯಲ್ಲಿ ಜಿಲ್ಲೆಯಲ್ಲಿ ವಿವಿಧ ವಿಜ್ಞಾನ/ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಪ್ರೇಮಕುಮಾರ್ ಅವರು ತಮ್ಮನ್ನು ಕಳೆದ 3 ದಶಕಗಳಿಂದ ತೊಡಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಕೈಗೊಳ್ಳುವ…

Read More