ಮಡಿಕೇರಿ ಮಾ.30 NEWS DESK : ಅಮ್ಮತ್ತಿ ಕೊಡವ ಸಮಾಜದ ಪ್ರಮುಖರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿದರು. ತಾವು ಶಾಸಕರಾಗಿ ಆಯ್ಕೆಯಾದಲ್ಲಿನಿಂದ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ನಿರಂತರ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹಗಲಿರಳು ಶ್ರಮಿಸುತ್ತಿರುವುದಕ್ಕೆ ಹಾಗೂ ವಿಶೇಷವಾಗಿ ಜಮ್ಮಾಬಾಣೆ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ, ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ದಶಕಗಳಿಂದ ಕೊಡವ ಸಮುದಾಯದವರನ್ನು ಕೊಡಗರು ಎಂದು ಸಂಬೋಧಿಸುತ್ತಿರುವುದನ್ನು ಸರಕಾರಿ ದಾಖಲೆಗಳಲ್ಲಿ ಅಧಿಕೃತವಾಗಿ ಬದಲಾಯಿಸಿ, ಕೊಡವರು ಎಂದು ನಮೂದಿಸುವಂತೆ ತಿದ್ದುಪಡಿ ಮಾಡಿದ ವಿಶೇಷ ಪ್ರಯತ್ನಕ್ಕೆ ಅಮ್ಮತ್ತಿ ಕೊಡವ ಸಮಾಜದ ಪ್ರಮುಖರು ಶಾಸಕರನ್ನು ಸನ್ಮಾನಿ, ಗೌರವಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪ್ರಕಾಶ್, ಸದಸ್ಯರಾದ ಧನು ಉತ್ತಯ್ಯ, ಭೀಮಯ್ಯ, ಧನ್ಯ ದೇವಯ್ಯ, ಅಪ್ಪಣ್ಣ, ಶ್ಯಾಮ್ ಬೋಪಣ್ಣ, ಸಮಾಜ ಸೇವಕರು ಚೊಕ್ಕಂಡ ಸಂಜು ಸುಬ್ಬಯ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಲೇಖಕ: admin
ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏ.3 ಮತ್ತು 4 ರಂದು ನಡೆಯಲಿದೆ. ಕೆದಮುಳ್ಳೂರು ಚಾಮುಂಡಿ ಹಬ್ಬ ಎಂದರೆ ಎಲ್ಲೆಡೆ ಪ್ರಚಲಿತದಲ್ಲಿದ್ದು ಅತ್ಯಂತ ಹೆಸರುವಾಸಿಯಾಗಿದೆ. ಹಾಗೂ ಅತ್ಯಂತ ಶಕ್ತಿಯನ್ನು ಹೊಂದಿರತಕ್ಕಂತಹ ಚಾಮುಂಡಿ ದೇವಿಯ ಕ್ಷೇತ್ರವಾಗಿದೆ. ಹಾಗಾಗಿ ಈ ಉತ್ಸವದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ತರು, ದೂರ ದೂರದ ಊರುಗಳಿಂದ ಭಕ್ತರು, ಆಗಮಿಸಿ ದೇವರಲ್ಲಿ ಹರಕೆ ಹೊತ್ತುಕೊಂಡು ತಮ್ಮ ಸಂಕಷ್ಟಗಳನ್ನು ಪರಿಹರಿಸಿಕೊಳ್ಳುತ್ತಾರೆ. 2 ರಂದು ರಾತ್ರಿ 8.30 ಗಂಟೆಗೆ ಕೊಟ್ಟಿಪಾಡೋ, 3 ರಂದು ರಾತ್ರಿ 8:30 ಗಂಟೆಗೆ ತಕ್ಕರ ಮನೆಯಿಂದ ಭಂಡಾರ ಇಳಿಯುವುದು, ಹಾಗೂ ರಾತ್ರಿ ವಿವಿದ ಕೋಲಗಳು, 4ರಂದು ಬೆಳಿಗ್ಗೆ 7.30 ಗಂಟೆಗೆ ವಿಷ್ಣುಮೂರ್ತಿ ತೆರೆ, ಮಧ್ಯಾಹ್ನ 12 ಗಂಟೆಗೆ ಶ್ರೀ ಚಾಮುಂಡಿ ತೆರೆ ನಡೆಯಲಿದೆ. ಬೆಳಿಗ್ಗೆ 4 ರಂದು ಪ್ರಮುಖವಾದ ವಿಷ್ಣುಮೂರ್ತಿ ಕೋಲವು ದೇವಾಲಯದ ಮುಂದೆ ಸಿದ್ಧಪಡಿಸಿದ್ದ ಬೆಂಕಿ ಕೆಂಡದ ಮೇಲೆ 101…
ವಿರಾಜಪೇಟೆ ಮಾ.30 NEWS DESK : ಕೆದಮುಳ್ಳೂರು ಶ್ರೀ ಭಗವತಿ ದೇವರ 15ನೇ ವರ್ಷದ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಪ್ರಯುಕ್ತ ಮುಂಜಾನೆಯಿಂದಲೇ ವಿಶೆಷ ಪೂಜಾ ಕೈಂಕರ್ಯಗಳು, ಗಣಪತಿ ಹೋಮ, ಭಗವತಿ ದೇವರಿಗೆ ಪೂಜೆ, ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು. ಬಳಿಕ ಬೆಲಿಕಲ್ಲು ಪೂಜೆ ಹಾಗೂ ದೇವರ ನೃತ್ಯ ಬಲಿ ಪ್ರದಕ್ಷಿಣೆ ನಡೆಯಿತು. ಪೂಜಾ ಕೈಂಕರ್ಯಗಳನ್ನು ಬೈತೂರಿನ ತಂತ್ರಿಗಳಾದ ಶ್ರೀ ರಾಜನ್ ನಂಬೂದರಿಪಾಡ್ ಮತ್ತು ಭಗವತಿ ದೇವಾಲಯದ ಅರ್ಚಕರಾದ ರಾಧಾಕೃಷ್ಣ ಅವರು ನೆರವೇರಿಸಿದರು. ವಾರ್ಷಿಕೋತ್ಸವಕ್ಕೆ ಆಗಮಿಸಿದ ಸರ್ವ ಭಕ್ತಾಧಿಗಳಿಗೆ ದೇವಾಲಯದ ವತಿಯಿಂದ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು.
ಮಡಿಕೇರಿ ಮಾ.30 NEWS DESK : ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಸದುದ್ದೇಶದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ರೂ.28 ಲಕ್ಷದಲ್ಲಿ ಪೊನ್ನಂಪೇಟೆ ಭಾಗದಲ್ಲಿ ಅಗತ್ಯ ಇರುವ ಸಾರ್ವಜನಿಕರಿಗೆ ತುರ್ತು ನೀರಿನ ಸೌಲಭ್ಯ ಕಲ್ಪಿಸಲು ಟ್ಯಾಂಕರ್ ವಾಹನವನ್ನು ವ್ಯವಸ್ಥೆ ಮಾಡಿದ್ದಾರೆ. ಪೊನ್ನಂಪೇಟೆಯಲ್ಲಿ ನೀರಿನ ಟ್ಯಾಂಕರ್ ಅನ್ನು ಉದ್ಘಾಟಿಸಿ, ತೀವ್ರ ಬೇಸಿಗೆಯಿಂದ ನೀರಿನ ಅಭಾವ ತಲೆದೋರಿದ್ದು, ಸಾರ್ವಜನಿಕರಿಗೆ ನೀರಿನ ಅಭಾವ ಆಗದಂತೆ ನೋಡಿಕೊಳ್ಳಲು ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಮಹಿಳಾ ಅಧ್ಯಕ್ಷರಾದ ಆಶಾ ಪೂಣಚ್ಚ, ಪಂಚಾಯಿತಿ ಅಧ್ಯಕ್ಷರು ಅಣ್ಣಿರ ಹರೀಶ್, ಉಪಾಧ್ಯಕ್ಷರು ಆಲಿರ ರಶೀದ್, ಮಾಜಿ ಮಹಿಳಾ ಅಧ್ಯಕ್ಷರು ಭಾರತಿ, ಸುನಿತಾ, ಅನಿತಾ, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಜುನೈದ್, ಹಿರಿಯರು ಮುಕಳೇರ ಕುಶಾಲಪ್ಪ, ಜಿಮ್ಮಿ ಅಣ್ಣಯ್ಯ, ಕೊಲ್ಲಿರ ಬೋಪಣ್ಣ, ಅಜ್ಜಿಕುಟ್ಟಿರ ಪೊನ್ನು, ಪಮ್ಮು, ಗಿರೀಶ್, ಮನು, ಮಚ್ಚಾಮಾಡ ಮನು,…
ನಾಪೋಕ್ಲು NEWS DESK ಮಾ.30 : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಈ ಕೆಳಗಿನಂತೆ ಎಚ್ಚರಿಕೆ ನೀಡಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಸದರಿ ವಿಡಿಯೋ ಮಾಡಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದಿನಾಂಕ: 30-03-2026 ರಂದು ದೂರು ಸ್ವೀಕರಿಸಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಮೊ.ಸಂ: 37/2026, ಕಲಂ: 196(1) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. (Facebook/ Whatsapp/ X/ Instagram & etc) ಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ರೀತಿಯ ಸಂದೇಶ/ಭಾವಚಿತ್ರ/ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಕೋರಿದೆ ಹಾಗೂ ಕೊಡಗು ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾವಹಿಸಿದ್ದು,…
ಸೋಮವಾರಪೇಟೆ ಮಾ.30 NEWS DESK : ಮಹಿಳಾ ಸಹಕಾರ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜದ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶನಿವಾರಸಂತೆಯ ಸಾಹಿತಿ ಶ.ಗ. ನಯನತಾರ ಮಾತನಾಡಿ, ಮಹಿಳೆಯರು ಇಂದಿನ ದಿನಗಳಲ್ಲಿ ಯಾವುದೇ ಕ್ಷೇತ್ರಕ್ಕೂ ಸೀಮಿತರಾಗದೇ, ಪುರುಷರಿಗೆ ಸರಿಸಮಾನವಾಗಿ ಎಲ್ಲಾ ವಲಯಗಳಲ್ಲಿ ಸಾಧನೆಗೈದು ತಮ್ಮ ಸಾಮಥ್ರ್ಯವನ್ನು ತೋರಿಸುತ್ತಿದ್ದಾರೆ ಎಂದು ಹೇಳಿದರು. ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ ಆಗುವ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಬೇಕು. ಸಮಾಜದಲ್ಲಿನ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘದ ಸದಸ್ಯರು ಒಗ್ಗಟ್ಟಿನಿಂದ ಮುಂದಾಗಬೇಕೆಂದು ಕರೆ ನೀಡಿದರು. ಉನ್ನತ ಹುದ್ದೆಗಳಲ್ಲಿ ಇರುವ ಮಹಿಳೆಯರೂ ಇಂದಿಗೂ ಹಲವು ಸವಾಲುಗಳನ್ನು ಎದುರಿಸುತ್ತಿರುವುದು ವಾಸ್ತವ. ಕೆಲವರು ಸ್ವಾಭಿಮಾನದಿಂದ ಸ್ವತಂತ್ರ ಜೀವನ ನಡೆಸುತ್ತಿದ್ದರೂ, ವೃದ್ಧಾಪ್ಯದ ಸಂದರ್ಭದಲ್ಲಿ ಇದು ಸಮಸ್ಯೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕುಟುಂಬ ಜೀವನದಲ್ಲಿ ಹೊಂದಾಣಿಕೆ ಮನೋಭಾವ ಅತ್ಯಂತ ಮುಖ್ಯವಾಗಿದ್ದು, ಪರಸ್ಪರ ಗೌರವ ಮತ್ತು ಸಹಕಾರದಿಂದ ಜೀವನವನ್ನು ಸಮತೋಲನಗೊಳಿಸಬೇಕು ಎಂದು ಸಲಹೆ ನೀಡಿದರು. ಸಂಘದ ಕಾರ್ಯಾಧ್ಯಕ್ಷೆ…
ಮಡಿಕೇರಿ NEWS DESK ಮಾ.30 : ನಾಪೋಕ್ಲುವಿನ ಎಮ್ಮೆಮಾಡುವಿನಲ್ಲಿ ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ದೈವವನ್ನೇ ಹೋಲುವ ರೀತಿಯಲ್ಲಿ ಮದುಮಗನು ವೇಷ ಹಾಕಿ ಅತಿರೇಕದ ವರ್ತನೆ ತೋರಿದ್ದು, ಇದು ದೈವಕ್ಕೆ ಅಪಮಾನ ಮಾಡಿದಂತ್ತಾಗಿದೆ ಎಂದು ಆರೋಪಿಸಿ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಕೊಡಗು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ಎಮ್ಮೆಮಾಡುವಿನಲ್ಲಿ ಕೆಲ ದಿನಗಳ ಹಿಂದೆ ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಮದುಮಗನು ತುಳುನಾಡಿನ ದೈವ ಕೋಲದ ಮಾದರಿ ಮುಖಕ್ಕೆ ಬಣ್ಣ ಬಳಿದು ದೈವವನ್ನೇ ಅಣಕಿಸುವ ರೀತಿಯಲ್ಲಿ ನಡೆದುಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೈವ ಆರಾಧನೆ ನಮ್ಮ ಹಿರಿಯರು ಹಾಕಿಕೊಟ್ಟಿರುವ ಮೂಲನಂಬಿಕೆ, ಮೂಲ ಪದ್ಧತಿ, ಮೂಲ ಆಧಾರವಾಗಿದೆ. ದೈವ ಆರಾಧನೆ ಪ್ರದರ್ಶನದ ಕಲೆಯಲ್ಲ ಹಾಗೂ ಜಾನಪದ ಕಲೆಯೂ ಅಲ್ಲ. ಈ ರೀತಿಯಲ್ಲಿ ದೈವವನ್ನೇ ಹೊಲುವ ರೀತಿ ವೇಷಭೂಷಣ ಹಾಕಿ ದೈವಕ್ಕೆ…
ಮಡಿಕೇರಿ ಮಾ.30 NEWS DESK : ಭಗವಾನ್ ಮಹಾವೀರರ ತತ್ವ, ಚಿಂತನೆ ಹಾಗೂ ಅಹಿಂಸೆಯನ್ನು ಅಳವಡಿಸಿಕೊಂಡಲ್ಲಿ ಪ್ರಪಂಚದಲ್ಲಿ ಯಾವುದೇ ಯುದ್ದ ನಡೆಯುವುದಿಲ್ಲ. ಆ ನಿಟ್ಟಿನಲ್ಲಿ ಭಗವಾನ್ ಮಹಾವೀರರ ಸಂದೇಶಗಳು ಹಾಗೂ ಮಾರ್ಗದರ್ಶನವನ್ನು ಪಾಲಿಸುವಂತಾಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ವಾಣಿ ಪುಷ್ಪರಾಜ್ ಅವರು ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಮೆರಿಕಾ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ವಿಶ್ವದಲ್ಲಿ ಒಂದು ರೀತಿ ಸಂದಿಗ್ಧ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಆರ್ಥಿಕ ಚಟುವಟಿಕೆ ಹಾಗೂ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೇಳಿದರು. ‘ಇಂದಿನ ವೇಗದ ಬದುಕಿನಲ್ಲಿ ಜಗತ್ತು ಒಂದು ಹಳ್ಳಿಯಾಗಿದ್ದು, ರಾಷ್ಟ್ರ ರಾಷ್ಟ್ರಗಳು ಒಂದಕ್ಕೊಂದು ಅವಲಂಬಿತವಾಗಿ ಬದುಕು ನಡೆಸುವಂತಾಗಿದೆ. ಆದ್ದರಿಂದ ಇಡೀ ವಿಶ್ವದಲ್ಲಿ ಶಾಂತಿ ನೆಲೆಸುವಂತಾಗಬೇಕು. ಅದಕ್ಕೆ ಮಹಾವೀರರ ಸಂದೇಶಗಳು ಮತ್ತು ತತ್ವಗಳನ್ನು ಅಳವಡಿಸಿಕೊಂಡು ಮುನ್ನಡೆಯುವಂತಾಗಬೇಕು ಎಂದು ವಾಣಿ ಪುಷ್ಪರಾಜ್ ಅವರು ಪ್ರತಿಪಾದಿಸಿದರು.’ ಭಗವಾನ್…
ಮಡಿಕೇರಿ ಮಾ.30 NEWS DESK : ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಸಂಸ್ಥೆಯ ಮೂಲ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಶ್ರಮಿಸಬೇಕೆಂದು ಸೈನಿಕ ಶಾಲೆಗಳು, ರಾಷ್ಟ್ರೀಯ ಮಿಲಿಟರಿ ಶಾಲೆಗಳು ಮತ್ತು ಆರ್ಐಎಂಸಿ ನಿರ್ದೇಶಕರಾದ ಕೆ.ವಿ.ಅಜಿತ್ ಕರೆ ನೀಡಿದರು. ಕೂಡಿಗೆ ಕೊಡಗು ಸೈನಿಕ ಶಾಲೆಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಅಜಿತ್ ಅವರು, ಈ ಸಂದರ್ಭ ಆಯೋಜಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸೈನಿಕ ಶಾಲೆಯ ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ತಲುಪುವ ನಿಟ್ಟಿನಲ್ಲಿ ತಮಗೆ ದೊರಕುವ ಯಾವುದೇ ಅವಕಾಶವನ್ನು ವ್ಯರ್ಥ ಮಾಡುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಯುಪಿಎಸ್ಸಿ, ಎನ್ಡಿಎ ಪರೀಕ್ಷೆಗಳು, ಬೋರ್ಡ್ ಪರೀಕ್ಷೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೈನಿಕ ಶಾಲಾ ವಿದ್ಯಾರ್ಥಿಗಳು ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಅವರು ಶ್ಲಾಘಿಸಿದರು. ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು, ಶಾಲೆಗೆ ಭೇಟಿಯನ್ನಿತ್ತ ಕೆ.ವಿ.ಅಜಿತ್ ಅವರಿಗೆ ಧನ್ಯವಾದ ಅರ್ಪಿಸಿ, ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ…
ಮಡಿಕೇರಿ ಮಾ.30 NEWS DESK : ಬೇತ್ರಿ ಮುಕ್ಕಾಟಿರ ಕುಟುಂಬಸ್ಥರ ವತಿಯಿಂದ ಕೊಡವ ಕುಟುಂಬಗಳ ನಡುವೆ ಏ.3 ರಿಂದ ಮತ್ತು ಮೇ 1 ರವರೆಗೆ ಮೂರ್ನಾಡು ಹಾಗೂ ಅರಮೇರಿಯಲ್ಲಿ 24ನೇ ವರ್ಷದ ‘ಮುಕ್ಕಾಟಿರ ಕ್ರಿಕೆಟ್ ನಮ್ಮೆ-2026’ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇತ್ರಿ ಮುಕ್ಕಾಟಿರ ಕುಟುಂಬದ ವಕ್ತಾರ ರವಿ ಚಿಯಣ್ಣ ಹಾಗೂ ಗೌರವ ಕಾರ್ಯದರ್ಶಿ ಭಜನ್ ಬೋಪಣ್ಣ ಅವರು ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದರು. ಮುಕ್ಕಾಟಿರ ಕ್ರಿಕೆಟ್ ನಮ್ಮೆಯಲ್ಲಿ ಸೆಣಸಾಡಲು ದಾಖಲೆಯ ಒಟ್ಟು 289 ಕೊಡವ ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಮೂರ್ನಾಡು ವಿದ್ಯಾ ಸಂಸ್ಥೆಯ ಲಾಲು ಮುದ್ದಯ್ಯ ಕ್ರೀಡಾಂಗಣ, ಸರಕಾರಿ ಶಾಲಾ ಮೈದಾನ ಹಾಗೂ ಅರಮೇರಿ ಕಳಂಚೇರಿ ಶಾಲಾ ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಆರು ಓವರ್ ನ ಪಂದ್ಯಾವಳಿ ಇದಾಗಿದ್ದು, ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮಹಿಳಾ ಕ್ರಿಕೆಟ್ ಗೆ ಈಗಾಗಲೇ 44 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ನೋದಣಿಗೆ ಏ.4 ರವರೆಗೆ ಅವಕಾಶವಿರುವುದರಿಂದ ಮತ್ತಷ್ಟು…






