ಮಡಿಕೇರಿ ಅ.28 NEWS DESK : ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಚಲನಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು. ಮೇಕೇರಿಯ ಕೂರ್ಗ್ ಗವದನ ರೆಸಾರ್ಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಯಶೋಧ ಪ್ರಕಾಶ್ ಅವರು ನನ್ನ ನಿರ್ದೇಶನದ ‘ಕಂದೀಲು’ ಕನ್ನಡ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರತ್ತಿರುವುದು ಸಂತೋಷ ಮತ್ತು ಹೆಮ್ಮೆ ಎನಿಸಿದೆ. ಈ ಪ್ರಶಸ್ತಿ ಸಿನಿರಂಗದಲ್ಲಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತಿರುವ ಸಂಸ್ಕøತಿ ಸಿರಿ ಬಳಗ ಟ್ರಸ್ಟ್ ಕಲಾವಿದರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲೂ ಟ್ರಸ್ಟ್ ಉತ್ತಮ ಕಾರ್ಯಚಟುವಟಿಕೆಗಳೊಂದಿಗೆ ಮತ್ತಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಟ್ರಸ್ಟ್ ನ ಗೌರವಾಧ್ಯಕ್ಷ ಹಾಗೂ ಸರಕಾರಿ ಆಸ್ಪತ್ರೆಯ ತುರ್ತು ಘಟಕದ ಮುಖ್ಯಸ್ಥ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಅವರು ಮಾತನಾಡಿ ಏಳುಬೀಳಿನ ಸಿನಿಮಾರಂಗದಲ್ಲಿ ಚಿತ್ರ ನಿರ್ಮಾಣ ಕಷ್ಟದ ಕೆಲಸವಾಗಿದೆ. ಆದರೆ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ…
ಲೇಖಕ: admin
ಮಡಿಕೇರಿ ಅ.28 NEWS DESK : ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಪ್ರೌಢ ಹಾಗೂ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಢಶಾಲಾ ವಿಭಾಗದ ಪಂದ್ಯಾವಳಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು.ಜಿ ಹಾಗೂ ತರುಣ್ ಎನ್.ಎಂ., ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಮಾಲೆಟ್ಟಿರ ಚಾಲ್ಸಿ, ಎಂ.ಎ.ಅಜಾನ್ ಸ್ಪರ್ಧಿಸಿದ್ದರು. ಇವರಿಗೆ ಚೆಸ್ ಮಾಸ್ಟರ್ ಮಣಿ ಮಾರ್ಗದರ್ಶನ ನೀಡಿದ್ದಾರೆ. ಈ ಒಂದು ಸಂದರ್ಭದಲ್ಲಿ ಕಾವೇರಿ ಶಾಲಾ ಅಧ್ಯಕ್ಷರಾದ ಸುದೇಶ್ ಬಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಶುಭಹಾರೈಸಿದರು.
ಮಡಿಕೇರಿ ಅ.28 NEWS DESK : ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು, ಅಮೃತ ಪ್ರಕಾಶ ಪತ್ರಿಕೆಯ ಸರಣಿ, 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿ ಬಿಡುಗಡೆಗೊಂಡಿತು. ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿ, ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಬಿ.ಕೆ.ಗಣೇಶ್ ರೈ ಅವರು ಕಟ್ಟಿಕೊಟ್ಟಿದ್ದಾರೆ. ಎಲ್ಲರಿಗೂ ಕಾವೇರಿ ಮಾತೆಯ ಪುರಾಣ ಕಥೆಗಳ ಪರಿಚಯ ಇರುವುದಿಲ್ಲ. ಈ ಕೃತಿಯ ಓದುಗರ ಮೂಲಕ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಅರೇಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಗೌಡ ಮಾವಜಿ, ಕಾವೇರಿ ಮಾತೆಯ…
ವಿರಾಜಪೇಟೆ ಅ.28 NEWS DESK : ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿರುವ ಶಕ್ತಿ ವ್ರದ್ಧಾಶ್ರಮದಲ್ಲಿ 12 ವರ್ಷದ ಬಾಲಕಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಮೂಲಕ ಮಾನವೀಯತೆ ಮೆರೆದಿದ್ದಾಳೆ. ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ನಿವಾಸಿ ಕಿರಣ್ ಹಾಗೂ ರಜಿತ ದಂಪತಿಗಳ ಪುತ್ರಿ ಕೆ.ಈಶಾನ್ವಿ(ನಮನ) ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ವೃದ್ಧಾಶ್ರಮದಲ್ಲಿ ಆಚರಣೆ ಮಾಡಿಕೊಳ್ಳುತ್ತಿದ್ದು, ಈ ಬಾರಿಯೂ ವೃದ್ಧ ಜೀವಗಳೊಂದಿಗೆ ಬೆರೆತು ಕೆಕ್ ಕತ್ತರಿಸಿ, ಸಿಹಿ ಹಂಚಿ ಅವರ ಸಂತೋಷಕ್ಕೆ ಕಾರಣಕರ್ತಳಾದಳು. ಕೆ.ಈಶಾನ್ವಿ(ನಮನ) ವಿರಾಜಪೇಟೆಯ ಅರಮೇರಿಯ ಎಸ್ಎಂಎಸ್ ಶಾಲೆಯಲ್ಲಿ 7 ತರಗತಿಯಲ್ಲಿ ಓದುತ್ತಿದ್ದಾಳೆ. ಆಸರೆ ಇಲ್ಲದ ವೃದರಿಗೆ ಸಹಾಯ ಮಾಡಬೇಕು, ಅವರೊಂದಿಗೆ ನಾವಿದ್ದೇವೆ ಅನ್ನುವ ಸಂದೇಶ ಕೊಡಬೇಕು, ಅವರು ಯಾವಾಗಲು ಸಂತೋಷದಿಂದ ಇರಬೇಕು, ಹಿರಿಯರನ್ನು ಗೌರವಿಸಬೇಕು ಅನ್ನುವ ಉದ್ದೇಶ. ಎಲ್ಲಕ್ಕಿಂತ ಮಿಗಿಲಾಗಿ ಮಾನವ ಯಾವಾಗಲು ಮಾನವೀಯ ನೆಲೆಗಟ್ಟಿನಲ್ಲಿ ಬದುಕಬೇಕು, ಮಾನವೀಯತೆ ಮೈಗೂಡಿಸಿಕೊಂಡು ಜೀವನ ಸಾಗಿಸಬೇಕು. ಏಕೆಂದರೆ ಮಾನವೀಯತೆ ಮರೆತರೆ ಸಮಾಜದಲ್ಲಿ ಬದುಕಲು ಸಾಧ್ಯವಿಲ್ಲ. ಈ ಹಿಂದೆ ನಮ್ಮ ಕುಟುಂಬದಲ್ಲಿ ಉಂಟಾದ ಅನಾರೋಗ್ಯ, ಅಪಘಾತ…
ವಿರಾಜಪೇಟೆ ಅ.28 NEWS DESK : ಮೈಸೂರಿನ ವಿ.ಯನ್.ಯೋಧ ಮಾರ್ಷಲ್ ಆಟ್ರ್ಸ್ ಅಕಾಡೆಮಿ ವತಿಯಿಂದ ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ನಡೆಸಲಾದ ಐದನೇ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಜಿ.ಎಸ್.ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಮೋಕ್ಷಿತಾ ಕುಮಿತೆ ವಿಭಾಗದಲ್ಲಿ ದ್ವಿತೀಯ ಮತ್ತು ಕತಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗೋಜೋ ಕಾಯ್ ಕರಾಟೆ ಶಾಲೆಯಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದು, ಕರಾಟೆ ಶಿಕ್ಷಕರಾದ ಸೆನ್ಸಾಯಿ ಎಂ.ಬಿ. ಚಂದ್ರನ್ ತರಬೇತಿ ನೀಡಿದ್ದಾರೆ. ಇವರು ವಿರಾಜಪೇಟೆಯ ದಿವ್ಯ ಹಾಗೂ ಶಶಿ ಕುಮಾರ್ ಅವರ ಪುತ್ರಿ.
ಮಡಿಕೇರಿ ಅ.28 NEWS DESK : ಮಕ್ಕಳ ಕ್ರೀಯಾಶೀಲ ಹಾಗೂ ಸೃಜನಶೀಲ ಚಟುವಟಿಕೆಗೆ ವಿದ್ಯಾರ್ಥಿಗಳ ಶ್ರಮ ಜೊತೆಗೆ, ಪೋಷಕರು ಹಾಗೂ ಗುರುಗಳ ಮಾರ್ಗದರ್ಶನವು ಅತ್ಯಗತ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿನಿ ಸಿಂಚನ ಅವರ ಯೋಗ ಸಾಧನೆ ಮೆಚ್ಚುವಂತದ್ದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಪರಮಪೂಜ್ಯ ಜಗದ್ಗುರು ಶ್ರೀಮನ್ನಿರಂಜನ ಪ್ರಣವ ಸ್ವರೂಪಿ ಶ್ರೀವಿಧ ದಾಸೋಹಿ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ ಕುಮಾರಿ ಸಿಂಚನ ಅವರು ಯೋಗದಲ್ಲಿ 3 ವಿಶ್ವ ದಾಖಲೆ(ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್)ಯ ಪ್ರದರ್ಶನದ ಕಾರ್ಯಕ್ರಮವು ಮದೆನಾಡು ಬಿಜಿಎಸ್ ಶಾಲೆ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಬಿಜಿಎಸ್ ಸಂಸ್ಥೆ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ಬಿಜಿಎಸ್ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿದೆ. ಬಡ ವಿದ್ಯಾರ್ಥಿಗಳ ಏಳಿಗೆಗೆ…
ಮಡಿಕೇರಿ ಅ.28 NEWS DESK : ಮಡಿಕೇರಿ ನಗರದಲ್ಲಿ ಸ್ಥಾಪಿತವಾಗಿರುವ ಸ್ವತಂತ್ರ ಭಾರತದ ಪ್ರಪ್ರಥಮ ಮಹಾನ್ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆ ಮತ್ತು ಸುತ್ತಲಿನ ಉದ್ಯಾನವನದ ಅಭಿವೃದ್ದಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಮ್ಮ ಶಾಸಕರ ನಿಧಿಯಿಂದ 3 ಲಕ್ಷ ರೂ.ಗಳ ಅನುದಾನ ಒದಗಿಸಿದ್ದಾರೆ. ಇಂದು ಶಾಸಕರು ಮಡಿಕೇರಿಗೆ ಆಗಮಿಸಿದ ಸಂಧರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಹಾಗೂ ಮಡಿಕೇರಿ ನಗರ ಸಭೆಯ ನಾಮನಿರ್ದೇಶನ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ ಅಭಿವೃದ್ಧಿಗೆ ಸಂಭಂದಿಸಿದ ಅಂದಾಜು ಪಟ್ಟಿಯನ್ನು ಸಲ್ಲಿಸಿದರು. ತಕ್ಷಣವೇ ಸ್ಪಂದಿಸಿದ ಶಾಸಕರು, ಅನುದಾನ ಘೋಷಣೆ ಮಾಡಿದ್ದಾರೆ. ನಂತರ ಮಾತನಾಡಿದ ಡಾ.ಮಂತರ್ ಗೌಡ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ನವರು ದೇಶ ಕಂಡ ಅಪ್ರತಿಮ ಸೇನಾನಿಗಳಾಗಿದ್ದು, ಅವರ ಸಾಧನೆಗಳನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಈ ಮಹಾನ್ ನಾಯಕರಿಗೆ ಸಂಭಂದಿಸಿದ ಪ್ರತಿಯೊಂದು ಕಾರ್ಯಕ್ರಮಗಳಿಗೆ…
ಸುಂಟಿಕೊಪ್ಪ ಅ.28 NEWS DESK : ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ 7ನೇ ಹೊಸಕೋಟೆ, ಕೆದಕಲ್, ಹೊರೂರು, ಕೊಡಗರಹಳ್ಳಿ ಕಂಬಿಬಾಣೆ ಚಿಕ್ಲಿಹೊಳೆ ಭಾಗಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇದೀಗ ಹುಲಿ ಹೆಜ್ಜೆ ಗುರುತುಗಳು ಗೋಚರಿಸಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹೊರೂರು ವ್ಯಾಪ್ತಿಯಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪ್ರತ್ಯಕ್ಷಗೊಂಡಿದೆ. ಕೊಡಗರಹಳ್ಳಿ, ಕೆದಕಲ್, ಹೊರೂರು, ಮೊದ್ದೂರು, ಕಂಬಿಬಾಣೆ, ಚಿಕ್ಲಿಹೊಳೆ, 7ನೇ ಹೊಸಕೋಟೆ ಭಾಗಗಳಲ್ಲಿ ಶಾಲೆಗಳಿದ್ದು, ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಇದೇ ಮಾರ್ಗವಾಗಿ ಶಾಲೆಗೆ ತೆರಳಬೇಕಾಗಿದೆ. ಅರಣ್ಯ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಕೃಷಿಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಮುಕ್ಕಾಟಿರ ಸಂಜಪೊನ್ನಪ್ಪ ಮಾತನಾಡಿ, ಈಗಾಗಲೇ ಕಾಡಾನೆ ಹಾವಳಿಯಿಂದ ಹೈರಾಣಾಗಿದ್ದೇವೆ ಇದೀಗ ಕಳೆದ 2 ದಿನಗಳಿಂದ ನಮ್ಮ ವ್ಯಾಪ್ತಿಯಲ್ಲಿ ಹುಲಿ ಹೆಜ್ಜೆ ಪ್ರತ್ಯಕ್ಷಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಈ ಸಂಬ0ಧ ಕಾರ್ಯಾಚರಣೆ ನಡೆಸಿ…
ವಿರಾಜಪೇಟೆ ಅ.28 NEWS DESK : ಮೈಸೂರಿನ ವಿ.ಯನ್. ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ನಡೆಸಲಾದ ಐದನೇ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವಿರಾಜಪೇಟೆಯ ಗೋಜೋ ಕಾಯ್ ಕರಾಟೆ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಕತಾ ಮತ್ತು ಕುಮಿತೆ ವಿಭಾಗದಲ್ಲಿ 22 ಚಿನ್ನ, 27 ಬೆಳ್ಳಿ, 26 ಕಂಚಿನ ಪದಕಗಳನ್ನು ಪಡೆದುಕೊಂಡು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಸ್ಪರ್ಧೆಯಲ್ಲಿ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಿಗೆ ಕರಾಟೆ ಶಿಕ್ಷಕರಾದ ಸೆನ್ಸಾಯಿ ಎಂ.ಬಿ. ಚಂದ್ರನ್ ತರಬೇತಿ ನೀಡಿದ್ದಾರೆ.
ಬೆಂಗಳೂರು ಅ.28 NEWS DESK : ಕರ್ನಾಟಕ ರಾಜ್ಯ ಪೊಲೀಸ್ ಸಿಬ್ಬಂದಿಯ ಪೀಕ್ ಕ್ಯಾಪ್ ವಿತರಣೆ ಹಾಗೂ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವರಾದ ಜಿ.ಪರಮೇಶ್ವರ್ ಅವರೊಂದಿಗೆ ಭಾಗವಹಿಸಿದೆ. ಈ ವೇಳೆ ಹಳೇ ಕಾಲದ ಸ್ಲೋಚ್ ಹ್ಯಾಟ್ಗೆ ವಿದಾಯ ಹೇಳಿ ಪೊಲೀಸ್ ಸಿಬ್ಬಂದಿಗೆ ಹೊಸ ಪೀಕ್ ಕ್ಯಾಪ್ ವಿತರಣೆ ಮಾಡಲಾಯಿತು. ಪ್ರತಿಭಟನೆ, ಆರೋಪಿಯನ್ನು ಹಿಡಿಯಲು ಓಡುವಾಗ, ಲಾಠಿಪ್ರಹಾರದ ವೇಳೆ ಸ್ಲೋಚ್ ಕ್ಯಾಪ್ ಕೆಳಗೆ ಬೀಳುತ್ತಿತ್ತು. ಪೊಲೀಸರ ಹ್ಯಾಟ್ ಕೆಳಗೆ ಬಿದ್ದರೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಹೀಗಾಗಿ ಕಳೆದ 4 ದಶಕಗಳಿಂದ ಪೀಕ್ ಕ್ಯಾಪ್ ನೀಡುವಂತೆ ಪೊಲೀಸರು ಬೇಡಿಕೆಯಿಟ್ಟಿದ್ದರು. ಕೊನೆಗೆ ನಮ್ಮ ಸರ್ಕಾರ ಹೊಸ ಮಾದರಿಯ ಕಡು ನೀಲಿ ಬಣ್ಣದ ಪೀಕ್ ಕ್ಯಾಪ್ ವಿತರಿಸಲು ಒಪ್ಪಿಗೆ ನೀಡಿತ್ತು. ಹೊಸ ಪೀಕ್ ಕ್ಯಾಪ್ನಲ್ಲಿ ಎಲಾಸ್ಟಿಕ್ ಇರುವುದರಿಂದ ಪೊಲೀಸರ ತಲೆಯಲ್ಲಿ ಸರಿಯಾಗಿ ಕೂರಲಿವೆ. ಇಂದಿನಿಂದ ರಾಜ್ಯದ 1 ಲಕ್ಷ ಪೊಲೀಸ್ ಸಿಬ್ಬಂದಿಗೆ ಹೊಸ…






