ಮಡಿಕೇರಿ NEWS DESK ಅ.27 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ನಮನ ಸಮರ್ಪಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು 1837 ಅಕ್ಟೋಬರ್ 31…
ಲೇಖಕ: admin
ಕಣಿವೆ ಅ.27 NEWS DESK : ಪ್ರಕೃತಿಯನ್ನು ತಾಯಿಯಂತೆ ಪೂಜಿಸಿ ಆರಾಧಿಸಿದಲ್ಲಿ ಮಾತ್ರ ಜೀವ ವೈವಿಧ್ಯತೆ ಸಂರಕ್ಷಿಸಲು ಸಾಧ್ಯ ಎಂದು ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಆರ್.ಶಂಕರಾನಂದ ಆಶಿಸಿದರು. ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ “ಹಸಿರು ಸಂರಕ್ಷಣೆಯಲ್ಲಿ ಕೊಡಗಿನ ಜೀವವೈವಿಧ್ಯ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಸ್ವಾರ್ಥದಿಂದಾಗಿ ಪ್ರಕೃತಿ ಇಂದು ವಿನಾಶದ ಅಂಚಿನಲ್ಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲಾಗುತ್ತಿರುವ ಅತ್ಯಾಚಾರದಿಂದಾಗಿ ಪ್ರಕೃತಿ ಮುನಿಯತೊಡಗಿದ್ದು, ಭೂಕಂಪ, ಪ್ರವಾಹಗಳು ಮನುಷ್ಯನ ನೆಮ್ಮದಿ ಹಾಳಾಗಿದೆ. ಆದರೂ ಕೂಡ ಪಾಠ ಕಲಿಯದ ಮನುಷ್ಯ ತನ್ನ ವೈಭೋಗದ ಜೀವನ ಶೈಲಿಗೆ ಪ್ರಕೃತಿಯನ್ನು ಮನಬಂದಂತೆ ದುರ್ಬಳಕೆ ಮಾಡತೊಡಗಿದ್ದಾನೆ. ಕರವಸ್ತ್ರವನ್ನು ಹೊಂದದೇ ಟಿಷ್ಯು ಸಂಸ್ಕೃತಿಯಿಂದಾಗಿ ಹೇರಳವಾಗಿ ಮರಗಳ ಹನನವಾಗುತ್ತಿದೆ. ದೇವರು ನಮಗೆ ಕೊಟ್ಟಿರುವ ಐದು ಕೈಬೆರಳುಗಳ ಬದಲಾಗಿ ಚಮಚಗಳ (ಸ್ಪೂನ್) ಬಳಕೆಯಿಂದಾಗಿಯೂ ಮರಹನನವಾಗುತ್ತಿದೆ. ಹಾಗಾಗಿ ಪ್ರಕೃತಿಯ ಸೂಕ್ಷ್ಮತೆ ಅರಿಯದ ಮನುಷ್ಯ ತಾನು ಮಾಡುವ ಪ್ರತಿಯೊಂದು ಸಣ್ಣ ತಪ್ಪುಗಳಿಂದ…
ಮಡಿಕೇರಿ ಅ.27 NEWS DESK : ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಫಾತಿಮಾ ಪ್ರೌಢಶಾಲೆ ಕುಶಾಲನಗರದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಪ್ರದೀಪ್ ಯಶ್ವಂತ್, ಮನು ಪಿ.ಡಿ ಕಿಶೋರ್, ಕುಮಾರ್ ಜೆ.ಯಂ, ಸುರೇಶ ಜೆ.ಯಂ, ಸುನೀತ್ ಟಿ.ಯಂ, ಸೃಜನ್ ಜಿ.ಅರ್, ತಿತಿಮತಿ ಸರ್ಕಾರಿ ಪ್ರೌಢಶಾಲೆಯ ಇಬ್ಬರು ಬಾಲಕರಾದ ಮನೋಜ್, ರಾಕೇಶ್ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡದ ಪರವಾಗಿ ವಿರಾಜಪೇಟೆ ಶೈಕ್ಷಣಿಕ ತಾಲ್ಲೂಕು ತಂಡವನ್ನು ಪ್ರತಿನಿಧಿಸಿ ಗೆಲುವು ಸಾಧಿಸಿದರು. ತರಬೇತುದಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಪಡಿಞರಂಡ ಪ್ರಭು ಕುಮಾರ್ ಭಾಗವಹಿಸಿದ್ದಾರೆಂದು ವಿಜಯಲಕ್ಷ್ಮಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ತಿಳಿಸಿದ್ದಾರೆ.
ಮಡಿಕೇರಿ NEWS DESK ಅ.27 : ಮಡಿಕೇರಿ ನಗರದ ಮಹದೇವಪೇಟೆಯಲ್ಲಿ ಕೃಷಿ ಯಂತ್ರೋಪಕರಣಗಳ ಮಳಿಗೆ ಪ್ಲಾಂಟರ್ಸ್ ಆಗ್ರೋ ಶುಭಾರಂಭಗೊಂಡಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಳಿಗೆಯನ್ನು ಉದ್ಘಾಟಿಸಿ ಮಾಲೀಕ ಶ್ರೀಹರಿ ಜಿ.ಪಿ ಹಾಗೂ ಕುಟುಂಬ ವರ್ಗಕ್ಕೆ ಶುಭ ಹಾರೈಸಿದರು. ನಗರಸಭಾ ಸದಸ್ಯರು, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ವಾಣಿಜ್ಯೋದ್ಯಮಿಗಳು, ವರ್ತಕರು, ವಿವಿಧ ಪಕ್ಷಗಳ ಪದಾಧಿಕಾರಿಗಳು ಹಾಗೂ ಕೃಷಿಕರು ಈ ಸಂದರ್ಭ ಹಾಜರಿದ್ದು ಶುಭ ಕೋರಿದರು. ಪ್ಲಾಂಟರ್ಸ್ ಆಗ್ರೋ ಮಳಿಗೆಯ ಮಾಲೀಕ ಶ್ರೀಹರಿ ಜಿ.ಪಿ ಮಾತನಾಡಿ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸರ್ವಿಸ್ ಕೂಡ ಇದೆ. ರೈತರ ಸಂತೃಪ್ತಿಯೇ ನಮ್ಮ ತೃಪ್ತಿ, ಆದ್ದರಿಂದ ಎಲ್ಲಾ ರೀತಿಯ ಯಂತ್ರೋಪಕರಣಗಳನ್ನು ಮಾರಾಟ ಮಾಡಲಾಗುವುದು ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ಶ್ರೀಹರಿ ಜಿ.ಪಿ, ಮಾಲೀಕರು, ಪ್ಲಾಂಟರ್ಸ್ ಆಗ್ರೋ 9740478899, 8277060844 ಸಂಪರ್ಕಿಸಬಹುದು.
ಮಡಿಕೇರಿ ಅ.27 NEWS DESK : ಕೋಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಾನಿಗಳಿಂದ ಬೀರು (ಗಾಡ್ರೇಜ್) ಹಾಗೂ ಚೇರ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಗ್ರಾಮದ ದಾನಿಗಳಾದ ಪೊನ್ನಚಂಡ ಭೀಮಯ್ಯ ಅವರು ಶಾಲೆಯ ದಾಖಲಾತಿಗಳನ್ನು ಇಡಲು ಉತ್ತಮವಾದ ಬೀರು (ಗಾಡ್ರೇಜ್) ಹಾಗೂ ಗ್ರಾಮದ ಮತ್ತೋರ್ವ ದಾನಿಗಳಾದ ಚೆರಿಯಪಂಡ ಕೆ.ಪೊನ್ನಪ್ಪ ಶಾಲೆಯ ಉಪಯೋಗಕ್ಕಾಗಿ 10 ಚೇರ್ಗಳನ್ನು ಕೊಡುಗೆಯಾಗಿ ನೀಡಿದರು. ದಾನಿಗಳ ಉದಾರ ಸೇವೆಗೆ ಶಾಲೆಯ ಮುಖ್ಯ ಶಿಕ್ಷಕರು, ಎಸ್ ಡಿಎಂಸಿ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಂಗಳೂರು ಅ.27 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ಘೋಷಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್. ಅಂಬೇಡ್ಕರ್ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ , ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು. ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು.…
ವಿರಾಜಪೇಟೆ ಅ.27 NEWS DESK : ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದ್ದಾರೆ. ಶಿಕ್ಷಣ ಸಾಧನೆಯತ್ತಲೂ ಹೆಚ್ಚು ಸಾಗಬೇಕಾಗಿದೆ. ಆಗ ಮಾತ್ರ ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ, ದೌರ್ಜನ್ಯಗಳನ್ನು ಪ್ರಶ್ನಿಸಲು ಸಾಧ್ಯ ಎಂದು ದುಡಿಯುವ ಮಹಿಳೆಯರ ರಾಜ್ಯ ಸಂಚಾಲಕಿ ಹೆಚ್.ಎಸ್. ಸುನಂದ ಅಭಿಪ್ರಾಯಪಟ್ಟರು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿ ವತಿಯಿಂದ ವಿರಾಜಪೇಟೆ ಶಾಖೆಯ ಕಚೇರಿ ಸಭಾಂಗಣದಲ್ಲಿ ನಡೆದ ‘ದುಡಿಯುವ ಮಹಿಳೆಯರ ಕೊಡಗು ಜಿಲ್ಲಾ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಬೀದಿಯಲ್ಲಿ ಕಸ ತೆಗೆಯುವ, ತನ್ನದಲ್ಲದ ಮನೆಗಳಲ್ಲಿ ಕಸಮುಸುರೆ ಸ್ವಚ್ಛತೆ ಮಾಡುವ, ತನ್ನದಲ್ಲದ ಮಕ್ಕಳಿಗೆ ಆಹಾರ ಆರೋಗ್ಯ ಶಿಕ್ಷಣಕ್ಕೆ ಕೆಲಸ ಮಾಡುವ, ತನ್ನದಲ್ಲದ ಮನೆಯನ್ನು ಕಟ್ಟುವಲ್ಲಿ ಶ್ರಮ ಹಾಕುವ, ಬೀದಿಬದಿಯಲ್ಲಿ ದುಡಿದು ತನ್ನದಲ್ಲದ ಖಜಾನೆಗೆ ಲಾಭ ಮಾಡಿಕೊಡುವ ತನ್ನದಲ್ಲದ ಬದುಕನ್ನು ಬೇರೆಯವರಿಗೆ ಕಟ್ಟಿಕೊಡುವಲ್ಲೇ ನಿರತರಾದವರನ್ನು ಒಳಗೊಂಡು, ದೇಶದ ರಾಷ್ಟ್ರಾಧ್ಯಕ್ಷರವರೆಗೆ, ವ್ಯೋಮಕ್ಕೆ ಜಿಗಿದು ವಾಪಸ್ ಬಂದ ಆ ಹೆಣ್ಮಗಳ ತನಕವೂ ಎಲ್ಲರೂ ದುಡಿಯುವ ಮಹಿಳೆಯರೇ ಆಗಿದ್ದಾರೆ. ಇವರಲ್ಲಿ…
ವಿರಾಜಪೇಟೆ ಅ.27 NEWS DESK : ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ವ್ಯಕ್ತಿತ್ವದ ವಿಕಸನ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ವಿರಾಜಪೇಟೆ ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಹೇಳಿದರು. ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡಾ ಹಾಗೂ ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೋಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಮಹಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕನಸನ್ನು ನನಸು ಮಾಡಲು ಪ್ರಯತ್ನಿಸಬೇಕು. ಪ್ರತಿಯೊಬ್ಬರಲ್ಲೂ ಕೌಶಲ್ಯ, ಜ್ಞಾನ, ಆರೋಗ್ಯ, ಸಂತೃಪ್ತಿ ಗುಣಗಳು ಇರಬೇಕು. ಈ ಗುಣಗಳು ಇದ್ದಾಗ ಮಾತ್ರ ಉತ್ತಮ ಮನುಷ್ಯನಾಗಲು ಸಾಧ್ಯ ಎಂದು ಅವರು ಹೇಳಿದರು. ಮನುಷ್ಯನಲ್ಲಿ ಆತ್ಮವಿಶ್ವಾಸ ಇದ್ದರೆ ಸಾಧನೆ ಮಾಡಬಹುದು. ನಿರಂತರ ಶ್ರಮದಿಂದ ಜೀವನದಲ್ಲಿ ಮುಂದೆ ಬರಲು ಸಾಧ್ಯ. ಪ್ರತಿಯೊಬ್ಬರಲೂ ಪ್ರತಿಭೆ ಇರುತ್ತದೆ. ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡಾಗ ಜೀವನದಲ್ಲಿ ಯಶಸ್ಸು ಪಡೆಯಬಹುದು ಎಂದು ಹೇಳಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾದಂಡ ತಿಮ್ಮಯ್ಯ ಕಾರ್ಯಕ್ರಮ…
ನಾಪೋಕ್ಲು ಅ.27 NEWS DESK : ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ ಜನ್ಮದಿನದ ಪ್ರಯುಕ್ತ ಶಾಲೆ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಸಿಹಿ ವಿತರಿಸಲಾಯಿತು. ಅಪ್ಪಚ್ಚಕವಿ ಮೊಮ್ಮಗ ಅಪ್ಪನೆರವಂಡ ವಿನು ಮಾದಪ್ಪ ಅವರು ಅಪ್ಪಚ್ಚಕವಿ ಅವರ ಜನ್ಮದಿನದ ಪ್ರಯುಕ್ತ ಪಾರಾಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಸಿಹಿ ವಿತರಿಸಿದರು. ಈ ಸಂದರ್ಭ ಶಾಲಾ ಮಕ್ಕಳಿಗೆ ಕೇರಂ ಪೈಪೆÇೀಟಿ ಆಯೋಜಿಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ ನೀಡಿ ಪೆÇ್ರೀತ್ಸಾಹಿಸಲಾಯಿತು. ಪ್ರತಿ ವರ್ಷ ತಮ್ಮ ತಾತನವರ ನೆನಪಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ವಸ್ತುಗಳನ್ನು ನೀಡಲಾಗುತ್ತಿದೆ ಎಂದರು. ಶಾಲಾ ಮುಖ್ಯ ಶಿಕ್ಷಕರಾದ ವೇದಪ್ರಸಾದ್, ಅತಿಥಿ ಶಿಕ್ಷಕಿ ಮಂಜುಳಾ ಮತ್ತು ಅಪ್ಪನೆರವಂಡ ರಾಜೇಶ್, ನಯನ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.27 NEWS DESK : ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರ ಪ್ರಾಣಾಪಾಯದಿಂದ ಪಾರಾಗಿ, ಹಸು ಸಾವನ್ನಪ್ಪಿದ ಘಟನೆ ಪೇರೂರು ಗ್ರಾಮದಲ್ಲಿ ನಡೆದಿದೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯತಿಯ ಪೇರೂರು ಗ್ರಾಮದ ನಿವಾಸಿ ಕಾಫಿ ಬೆಳೆಗಾರ ಅಪ್ಪಚ್ಚಿರ ಹ್ಯಾರಿ ಪೊನ್ನಪ್ಪ ಕಾಡಾನೆ ದಾಳಿಗೆ ಒಳಗಾಗಿ ತೀವ್ರ ಗಾಯಗೊಂಡ ವ್ಯಕ್ತಿ. ಹ್ಯಾರಿ ಪೊನ್ನಪ್ಪ ತಮ್ಮ ತೋಟದಿಂದ ಕೆಲಸ ಮುಗಿಸಿ ಸಂಜೆ ಮನೆಗೆ ಹಿಂತಿರುಗುವ ಸಂದರ್ಭ ಮಚ್ಚೂರ ಮಂದ್ ಸಮೀಪ ಕಾಡಾನೆ ದಾಳಿ ನಡೆಸಿ ಕೋರೆಯಿಂದ ಹ್ಯಾರಿ ಪೊನ್ನಪ್ಪ ಅವರ ಎದೆಯ ಭಾಗಕ್ಕೆ ತಿವಿದೆ. ಸಮೀಪದಲ್ಲಿದ್ದವರು ಭಯದಿಂದ ಚೀರಾಡಿದ ಕಾರಣ ಆನೆ ಓಡಿದೆ. ಇದೇ ಸಂದರ್ಭ ಮಚ್ಚೂರ ಹರೀಶ್ ಬಿದ್ದಪ್ಪ ಎಂಬವರು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸುವನ್ನು ಕಾಡಾನೆ ತಿವಿದು ತೀವ್ರ ಗಾಯಗೊಳಿಸಿದ್ದು, ಹಸು ಮರಣ ಹೊಂದಿ ನಷ್ಟ ಸಂಭವಿಸಿದೆ. ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹ್ಯಾರಿ ಪೊನ್ನಪ್ಪ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ತುರ್ತು ಚಿಕಿತ್ಸೆಗಾಗಿ…






