ಲೇಖಕ: admin

ಮಡಿಕೇರಿ NEWS DESK ಅ.25 : ಬುದ್ಧ, ಬಸವ ಹಾಗೂ ಡಾ.ಅಂಬೇಡ್ಕರ್ ಅವರ ಚಿಂತನೆ ಸಾಕಾರಗೊಳ್ಳಲು ಮತ್ತು ಆದರ್ಶಗಳು ಅರ್ಥಪೂರ್ಣಗೊಳ್ಳಲು ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎಂದು ಚಿಕ್ಕಅಳುವಾರು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ ಸಂಗಪ್ಪ ಆಲೂರ ಕರೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪ್ರೊಫೆಸರ್ ಗಳಾಗಿ ಬಡ್ತಿ ಹೊಂದಿರುವ ಬೋಧಕ ಸಿಬ್ಬಂದಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಕುಲದ ವಿಕಾಸಕ್ಕೆ ಶಿಕ್ಷಣ ಅತ್ಯಗತ್ಯ, ಬುದ್ಧ, ಬಸವ, ಡಾ.ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಅನುಭವದ ಸಂಕೇತವಾಗಿದ್ದಾರೆ. ನಮ್ಮ ಅರಿವು ನಮಗೆ ಗುರುವಾಗಬೇಕು, ಸಮಸಮಾಜದ ಕಲ್ಪನೆಯನ್ನು ಸಾಕಾರಗೊಳಿಸಬೇಕು. ಅವರುಗಳ ಅನುಭವವನ್ನು ಅನುಸರಿಸಿ ಅದರ ಆಧಾರದ ಮೇಲೆ ಅತ್ಯುತ್ತಮ ಚೌಕಟ್ಟನ್ನು ಹಾಕಿಕೊಳ್ಳಬೇಕು. ಶಿಕ್ಷಣದ ಅರಿವು ಹೆಚ್ಚಾದರೆ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯ. ಸಮಸಮಾಜ ಕಲ್ಪನೆಯನ್ನು ನಡೆಯಾಗಿ,…

Read More

ಮಡಿಕೇರಿ NEWS DESK ಅ.25 : ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ನೂತನವಾಗಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಜಯಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತೇಲಬೈಲು ಅಸಿಕಾ ದಿನೇಶ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕೊಟ್ಟಗೇರಿಯನ ಕಲ್ಪನಾ ಪ್ರದೀಪ್, ಉಪಾಧ್ಯಕ್ಷರಾಗಿ ಕುಂಬುಗೌಡನ ಕವಿತಾ ಸುನಿಲ್, ಸಹಕಾರ್ಯದರ್ಶಿಯಾಗಿ ಮಳ್ಳನ ಅನಿತಾ ವಿಜಯಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಕುಡೆಕಲ್ಲು ಸವಿತಾ ಸಂತೋಷ್ ಹಾಗೂ ಕುಂಬುಗೌಡನ ನಿಶ್ಚಲ್ ಜಗದೀಶ್ ನೇಮಕಗೊಂಡರು. ಸದಸ್ಯರಾಗಿ ಲಕ್ಕಪನ ಸೌಮ್ಯ ವಿಜೇತ, ಹಿರೇಗೌಡನ ಚಲನ ತೀರ್ಥಕುಮಾರ್, ಕೋಳಿಬೈಲು ಅನಿತಾ ರಂಜು, ಮಳ್ಳನ ಭವ್ಯ ವೀರೇಂದ್ರ, ಕುಂಬುಗೌಡನ ಜಿಜಾ ಹೇಮಂತ್, ತೇಲಬೈಲು ದಿವ್ಯ ಡೆನಿಲ್, ಮಾನಡ್ಕ ಹಿತಾ ದಯಾನಂದ, ಅಣ್ಣಚ್ಚಿರ ರೇಣುಕಾ ಸತೀಶ್, ಹೊಸೊಕ್ಲು ಜಯಶ್ರೀ ಪ್ರವೀಣ, ಗೌರವ ಸಲಹೆಗಾರರಾಗಿ ಅಣ್ಣಚ್ಚಿರ ಪ್ರಮೀಳ, ತೋಟೆರ ಪದ್ಮಾವತಿ ಕೆಂಚಪ್ಪ, ಕುಂಬುಗೌಡನ ಜಲಜಾ ವಿನೋದ್ ಕುಮಾರ್ ಆಯ್ಕೆಯಾದರು. *ಸಭೆ* ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಸಮಾಜದ ಅಧ್ಯಕ್ಷ ಲಕ್ಕಪ್ಪನ ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ…

Read More

ಮಡಿಕೇರಿ ಅ.25 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಅಂಚಿನ ಮದೆನಾಡಿನ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ, ಯೋಗಪಟು ಕುಮಾರಿ ಸಿಂಚನ ಅವರಿಂದ ಅ.28 ರಂದು ವಿದ್ಯಾಸಂಸ್ಥೆಯಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್‍ಗಾಗಿ ಮೂರು ಯೋಗಾಸನಗಳ ಪ್ರದರ್ಶನ ಕಾರ್ಯಕ್ರಮ ನಡೆಯೊಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ಮೈಸೂರು ಮತ್ತು ಕೊಡಗು ಶಾಖೆÉಯ ಕಾರ್ಯದರ್ಶಿಗಳಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ಈ ಕುರಿತು ಮಾಹಿತಿ ನೀಡಿ, ಈಗಾಗಲೆ ಕೊಡಗಿನಲ್ಲಿ ವಿಶ್ವದಾಖಲೆಯ ಎರಡು ಯೋಗ ಪ್ರದರ್ಶನವನ್ನು ಸಿಂಚನ ನೀಡಿದ್ದು, ಇದೀಗ ಮೂರನೇ ಬಾರಿ ವಿಶ್ವ ದಾಖಲೆಯ ಯೋಗ ಪ್ರದರ್ಶನವನ್ನು ನೀಡಲಿದ್ದಾರೆಂದು ತಿಳಿಸಿದರು. ಯೋಗಪಟು ಸಿಂಚನಳ ತಾಯಿ ರೇಣುಕಾ ಅವರು ಮಾತನಾಡಿ, ಈ ಬಾರಿ ಸಿಂಚನ ಖಂಡಪೀಡಾಸನ ಭಂಗಿಯಲ್ಲಿ ಒಂದು ನಿಮಿಷ ಸಮ ಸ್ಥಿತಿಯಲ್ಲಿ ಇರುವ ಮೂಲಕ ವಿಶ್ವದಾಖಲೆಯ ಪ್ರಯತ್ನ ನಡೆಸಲಿದ್ದು, ಧನುರಾಸನದಲ್ಲಿ ಒಂದು ನಿಮಿಷಕ್ಕೆ 15 ಬಾರಿ ಸುತ್ತು ಹೊಡೆಯುವ ಹಾಗೂ ಡಿಂಬಾಸನದಲ್ಲಿ ಒಂದು ನಿಮಿಷಕ್ಕೆ 10 ಬಾರಿ ಸುತ್ತು ಹೊಡೆಯುವ…

Read More

ಮಡಿಕೇರಿ ಅ.25 NEWS DESK : ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳ ಕುರಿತು ಮತದಾರರಲ್ಲಿ ಅರಿವು ಮೂಡಿಸಲು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಕಾಂಗ್ರೆಸ್‍ನೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು. ಹೀಗೆ ಮಾಡಿದಾಗ ಮಾತ್ರ ಸರಕಾರದ ಯೋಜನೆಗಳು ಜನತೆಗೆ ತಿಳಿಯಲಿದೆ ಮತ್ತು ಪಕ್ಷ ಸಂಘಟನೆ ಪ್ರಬಲವಾಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯೂ ಆಗಿರುವ ಮಾಜಿ ಶಾಸಕ ಜೆ.ಆರ್.ಲೋಬೋ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರಕಾರದ ಕಾರ್ಯಕ್ರಮಗಳನ್ನು ತಿಳಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ವಾಟ್ಸಪ್, ಟ್ವಿಟರ್, ಫೇಸ್‍ಬುಕ್, ಇನ್ ಸ್ಟಾಗ್ರಾಮ್ ಮತ್ತಿತರ ಮೂಲಗಳಲ್ಲಿ ಪ್ರಚಾರ ಕೈಗೊಳ್ಳಬೇಕು. ಪತ್ರಿಕೆಗಳಲ್ಲಿ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಪರ ಲೇಖನಗಳನ್ನು ನೀಡಬೇಕು. ಪಕ್ಷದ ಕಾರ್ಯಕ್ರಮಗಳನ್ನು ಜನ ಸಮೂಹಕ್ಕೆ…

Read More

ಮಡಿಕೇರಿ ಅ.25 NEWS DESK :  ದೇವರು ಕೊಟ್ಟಿರುವ ಮಹತ್ವದ ವರವಾಗಿರುವ ಮನುಷ್ಯ ಜನ್ಮವನ್ನು ಸಾಥ೯ಕಗೊಳಿಸಲು ಉತ್ತಮ ಆರೋಗ್ಯ ಕಾಳಜಿಯೂ ಮುಖ್ಯ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಹೇಳಿದ್ದಾರೆ. ಮೂನಾ೯ಡುವಿನ ಗ್ರಾಮಪಂಚಾಯತ್ ಸಭಾಭವನದಲ್ಲಿ ಮಡಿಕೇರಿಯ ರೋಟರಿ ವುಡ್ಸ್, ಕೊಡಗು ಔಷಧಿ ವ್ಯಾಪಾರಸ್ಥರ ಸಂಘ, ಮೂನಾ೯ಡು ಗ್ರಾಮಪಂಚಾಯತ್ ಮತ್ತು ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆ ವತಿಯಿಂದ ಆಯೋಜಿತ ಕ್ಯಾನ್ಸರ್ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಹವನ್ನೇ ದೇಗುಲ ಎಂದು ಭಾವಿಸುತ್ತೇವೆ. ಹೀಗಿರುವಾಗ ದೇವಾಲಯದಂತೆಯೇ ನಮ್ಮ ದೇಹದ ಆರಾಧನೆಯೂ ಮುಖ್ಯ ಪಾತ್ರ ವಹಿಸುತ್ತದೆ. ನಿಯಮಿತವಾದ ಆಹಾರ ಸೇವನೆ, ವ್ಯಾಯಾಮ, ಸೂಕ್ತ ಆರೋಗ್ಯ ತಪಾಸಣೆ ಮೂಲಕ ನಮ್ಮ ದೇಹವನ್ನು ಆರಾಧನೆ ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟ ಬಾರಿಕೆ ದಿನೇಶ್, ರೋಗ ಬಂದಾಗ ಮಾತ್ರ ಆಸ್ಪತ್ರೆಗೆ ಹೋಗುವ ಮನೋಭಾವ ಬದಲಾಗಿ, ಆಗಿಂದಾಗ್ಗೆ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಕಿವಿಮಾತು ಹೇಳಿದರು. ವ್ಯಕ್ತಿಯ ಆರೋಗ್ಯ ಉತ್ತಮವಾಗಿದ್ದಾಗ ಆತನಿಂದ ಆರೋಗ್ಯವಂತ…

Read More

ಮಡಿಕೇರಿ ಅ.25 NEWS DESK  : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಮೃತ್ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ನಗರಸಭೆಯ ಮಾಜಿ ಸದಸ್ಯ ಕೆ.ಎಂ.ಗಣೇಶ್ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೃತ್ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಯೋಜನೆ ಪೂರ್ಣಗೊಳ್ಳುವ ಬಗ್ಗೆ ವಿಶ್ವಾಸವಿಲ್ಲ ಎಂದು ಆರೋಪಿಸಿದರು. ಮಡಿಕೇರಿ ನಗರ ಬೆಟ್ಟಗುಡ್ಡಗಳಿಂದ ಕೂಡಿದ್ದು, ಅಮೃತ್ ಯೋಜನೆ ಇಲ್ಲಿಗೆ ಪೂರಕವಾಗಿಲ್ಲ. ಸುಮಾರು 12 ವರ್ಷಗಳ ಹಿಂದೆ 49 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡ ಯುಜಿಡಿ ಒಳಚರಂಡಿ ಯೋಜನೆ ವಿಫಲವಾಗಿದೆ. ಇದೇ ಮಾದರಿಯಲ್ಲಿ 38 ಕೋಟಿ ರೂ. ವೆಚ್ಚದ ಅಮೃತ್ ಯೋಜನೆ ಕೂಡ ವಿಫಲವಾಗಲಿದೆ. ಈಗಾಗಲೇ ಶೇ.25 ರಷ್ಟು ಕಾಮಗಾರಿ ಮುಗಿದಿದ್ದು, ಇದು ಅವೈಜ್ಞಾನಿಕವಾಗಿದೆ. ಪೈಪ್ ಅಳವಡಿಕೆಗಾಗಿ ತೆಗೆದಿರುವ ಗುಂಡಿಗಳಿಂದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ, ವಾಹನಗಳ ಸಂಚಾರ ದುಸತರವಾಗಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಈ ಗುಂಡಿಗಳಲ್ಲಿ ನೀರು ನಿಂತು ಭೂಕುಸಿತದಂತಹ ಅನಾಹುತಗಳು ಸಂಭವಿಸುವ ಸಾಧ್ಯತೆ ಎಂದು ಗಮನ ಸೆಳೆದರು. ಯುಜಿಡಿ ಯೋಜನೆಯ ಹಣ…

Read More

ಮಡಿಕೇರಿ ಅ.25 NEWS DESK : ಸಾಮಾಜಿಕ ಜಾಲತಾಣಗಳೇ ಹೆಚ್ಚು ಪ್ರಭಾವ ಬೀರುತ್ತಿರುವ ಇಂದಿನ ದಿನಗಳಲ್ಲಿ ಪುಸ್ತಕಗಳನ್ನು ಓದುವವರ ಸಂಖ್ಯೆ ಬಹಳ ವಿರಳ ಎನ್ನುವ ಮಾತಿದೆ. ಆದರೆ ಪ್ರಪಂಚಕ್ಕೆ ಬರವಣಿಗೆ ನೀಡುವ ಅಮೂಲ್ಯವಾದ ಸಾರವನ್ನು ಎಐ ತಂತ್ರಜ್ಞಾನ ನೀಡಲು ಸಾಧ್ಯವಿಲ್ಲವೆಂದು ಸಾಹಿತಿ ಹಾಗೂ ಸಮಾಜ ಸೇವಕಿ ಮಾಳೇಟಿರ ಸೀತಮ್ಮ ವಿವೇಕ್ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಲೇಖಕಿ ಕೊಟ್ಟಂಗಡ ಕವಿತಾ ವಾಸುದೇವ ಅವರು ರಚಿಸಿರುವ ಕೊಡವ ಮಕ್ಕಡ ಕೂಟದ 119ನೇ ಪುಸ್ತಕ “ಬಯಂದ ಬಾಳ್” ಕೊಡವ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಯಾವುದೇ ನಿರೀಕ್ಷೆಗಳಿಲ್ಲದೆ ಸಾಹಿತ್ಯವನ್ನು ಸಮಾಜಕ್ಕೆ ಧಾರೆ ಎರೆಯಬೇಕು, ಆಗ ಸಮಾಜ ಅದನ್ನು ಉತ್ತಮ ರೀತಿಯಲ್ಲಿ ಸ್ವೀಕರಿಸುತ್ತದೆ. ಸಮಾಜವನ್ನು ಬದಲಾಯಿಸುವ ಶಕ್ತಿ ಸಾಹಿತ್ಯಕ್ಕಿದೆ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ವೈಯಕ್ತಿಕ ಭಾವಗಳಿರುತ್ತವೆ. ಬರಹಗಾರರು ಅದಕ್ಕೆ ಅಕ್ಷರದ ರೂಪ ನೀಡಿ ಪುಸ್ತಕವನ್ನಾಗಿ ಹೊರ ತರುತ್ತಾರೆ. ಮೌಲ್ಯಯುತವಾದ ಪುಸ್ತಕಗಳನ್ನು ಓದುವ ಸಾಹಿತ್ಯಾಸಕ್ತರು ಸಮಾಜದಲ್ಲಿ ಇನ್ನೂ ಇದ್ದಾರೆ. ಆದ್ದರಿಂದ ಬರಹಗಾರರು…

Read More

ಮಡಿಕೇರಿ ಅ.25 NEWS DESK : ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಅಂಗ ಸಂಸ್ಥೆಗಳ ಸಹಯೋಗದಲ್ಲಿ ಅ.31 ರಂದು ನಡೆಯುವ ಹುತಾತ್ಮ ಸುಬೇಧಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನದ ಪ್ರಯುಕ್ತ ಅ.27ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ತಿಳಿಸಿದ್ದಾರೆ.  ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಜೂನಿಯರ್ ಕಾಲೇಜು ಆವರಣದಲ್ಲಿರುವ ಸರಕಾರಿ ಮಹಿಳಾ ಕಾಲೇಜ್ ನಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.  ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಸಂಪರ್ಕಿಸಬೇಕಾದ ಮೊ.ಸಂ ಪುದಿಯನೆರವನ ರೇವತಿ ರಮೇಶ್ *9663254829*

Read More

ಮಡಿಕೇರಿ ಅ.25 NEWS DESK : ಕರ್ನಾಟಕ ರಾಜ್ಯ ಸರಕಾರದ ಎಸ್.ಎಫ್.ಸಿ ಅನುದಾನದಲ್ಲಿ ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಆಯ್ದ ವರ್ಡ್ ಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ವಿಶೇಷ ಮುತುವರ್ಜಿಯಿಂದ ಮಂಜೂರಾದ ರೂ.20 ಕೋಟಿಗಳ ವಿಶೇಷ ಅನುದಾನಗಳ ಕಾಮಗಾರಿಗಳಿಗೆ ಚಾಲನೆ ದೊರೆಯಿತು. ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಕಲ್ಲು ಬಾಣೆ, ತಿಮ್ಮಯ್ಯ ಬಾಡವಣೆ, ಶಿವಕೇರಿ, ಬೋಯಿಕೇರಿ, ಗಾಂಧಿ ನಗರ, ಮಹಿಳಾ ಸಮಾಜ, ಸುಣ್ಣದ ಬೀದಿ, ನಿಸರ್ಗ ಬಾಡವಣೆ ಭಾಗದಲ್ಲಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷರು ಮದಂಡ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಮುಖ್ಯಅಧಿಕಾರಿ ನಾಚಪ್ಪ, ಸ್ಥಾಯಿ ಸಮಿತಿಯ ಅಧ್ಯಕ್ಷರು…

Read More

ಮಡಿಕೇರಿ NEWS DESK ಅ.24 : ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘದ 2025-30 ನೇ ಸಾಲಿನ ಆಡಳಿತ ಮಂಡಳಿಗೆ ಇದೇ ಅ.26 ರಂದು ಚುನಾವಣೆ ನಡೆಯಲಿದೆ. ಹಾಲಿ ಅಧಿಕಾರದಲ್ಲಿರುವ ಅಧ್ಯಕ್ಷ ಸೂದನ ಎಸ್.ಈರಪ್ಪ ಅವರ ನೇತೃತ್ವದ ರೈತ ಮಿತ್ರಕೂಟ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದೆ. 2020ರಲ್ಲಿ ರೈತಮಿತ್ರಕೂಟ ತಂಡವನ್ನು ರಚಿಸಿಕೊಂಡು ಭರ್ಜರಿ ಜಯ ಸಾಧಿಸಿದ ಸೂದನ ಎಸ್.ಈರಪ್ಪ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಸಂಘದಲ್ಲಿ ಕಳೆದ 35-40 ವರ್ಷಗಳಿಂದ ಏಲಕ್ಕಿ ವ್ಯವಹಾರ ನಡೆಯುತ್ತಿರಲಿಲ್ಲ. ಇದನ್ನು ಮನಗಂಡು ಕಳೆದ ನಾಲ್ಕು ವರ್ಷಗಳಿಂದ “ಉತ್ಪತಿ” ಎಂಬ ಹೆಸರಿನ ಸಾಂಬಾರ ಮಳಿಗೆಯೊಂದನ್ನು ಸ್ಥಾಪಿಸಿ ವ್ಯಾಪಾರಕ್ಕೆ ಒತ್ತು ನೀಡಲಾಯಿತು. ಕೊಡಗಿನ ಏಲಕ್ಕಿಯನ್ನು ಸಂಘದ ಮೂಲಕ ಖರೀದಿಸಿ ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಆರಂಭಿಸಲಾಯಿತು. ಗುಣಮಟ್ಟದ ಏಲಕ್ಕಿ, ಕರಿಮೆಣಸು, ವೈನ್, ಜೇನುತಪ್ಪ ಮುಂತಾದ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಕಳೆದ ಹಲವು ವರ್ಷಗಳಿಂದ ಸೋಮವಾರಪೇಟೆ ಶಾಖೆ ನಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಮೂಲಕ ರೈತಪರ ಯೋಜನೆಗಳನ್ನು ರೂಪಿಸಿ ಶಾಖೆಯನ್ನು ನಷ್ಟದಿಂದ…

Read More