ವಿರಾಜಪೇಟೆ ಅ.24 NEWS DESK : ಶ್ರೀ ರಾಮ ಭಕ್ತರ ಬಳಗ ವತಿಯಿಂದ ಎರಡನೇ ವರ್ಷದ ರಕ್ತದಾನ ಶಿಬಿರ ನಡೆಯಿತು. ವಿರಾಜಪೇಟೆ ಪುರಸಭೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಮ ಭಕ್ತರ ಬಳಗ ಅಧ್ಯಕ್ಷರಾದ ಬಿ.ಎಂ.ಕುಮಾರ್ ಅವರು ಮಾತನಾಡಿ, ರಕ್ತದಾನ ಶ್ರೇಷ್ಠ ದಾನ. ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ. ಮಾನವರಿಗೆ ಮಾನವರೆ ರಕ್ತದಾನ ಮಾಡಬೇಕು, ಎರಡನೇ ಬಾರಿಗೆ ನಮ್ಮ ಮಹಿಳಾ ಸದಸ್ಯರಾದ ಸಂದ್ಯ ರಂಜನ್, ಅದೀತ ಮುತ್ತಮ್ಮ, ಹಾಗೂ ಹತ್ತೊಂಬತ್ತನೆ ಬಾರಿ ವಿರಾಜಪೇಟೆ ಮನೋಜ್, ನಲವತ್ತಾರು ಬಾರಿ ರಕ್ತದಾನ ಮಾಡಿದ ಸ್ನೇಕ್ ಸತೀಶ್, ಸೇರಿದಂತೆ ಹಲವಾರು ಮಂದಿ ಇಂದು ರಕ್ತದಾನ ಮಾಡಿ ಮಾದರಿಯಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಕೊರತೆ ಇದೆ. ಶಸ್ತ್ರಚಿಕಿತ್ಸೆ ಸಮಯದಲ್ಲಿ ನಾವು ನೀಡುವ ರಕ್ತದಲ್ಲಿ ಅನೇಕರ ಪ್ರಾಣವನ್ನು ಉಳಿಸಬಹುದು ಎಂದು ತಿಳಿಸಿದರು. ರಕ್ತದಾನ ಶಿಬಿರದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಬಳಗದ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಸದಸ್ಯರಾದ ವಿವೇಕ್ ರೈ, ದಿನೇಶ್ ಸೇರಿದಂತೆ…
ಲೇಖಕ: admin
ಬೆಂಗಳೂರು ಅ.24 NEWS DESK : 2025ರ ಅಕ್ಟೋಬರ್ 23 ಮತ್ತು 24 ರಂದು ತರಬೇತಿ ಕಮಾಂಡ್ ನ ಬೆಂಗಳೂರಿನ ಪ್ರಧಾನ ಕಚೇರಿ (ಎಚ್ ಕ್ಯೂ -ಟಿಸಿ) ಯಲ್ಲಿ ನಡೆದ ತರಬೇತಿ ಕಮಾಂಡ್ ಕಮಾಂಡರ್ಗಳ ಸಮ್ಮೇಳನ 2025 ರ ಅಧ್ಯಕ್ಷತೆಯನ್ನು ವಾಯುಪಡೆಯ ಮುಖ್ಯಸ್ಥ (ಸಿಎಎಸ್) ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ವಹಿಸಿದ್ದರು. ಈ ಸಮ್ಮೇಳನದಲ್ಲಿ ತರಬೇತಿ ಕಮಾಂಡ್ನ ಅಡಿಯಲ್ಲಿರುವ ಎಲ್ಲಾ ತರಬೇತಿ ಸಂಸ್ಥೆಗಳ ಕಮಾಂಡರ್ಗಳು ಭಾಗವಹಿಸಿದ್ದರು. ಈ ವಾರ್ಷಿಕ ಸಮ್ಮೇಳನದಲ್ಲಿ ತರಬೇತಿ ತತ್ವಶಾಸ್ತ್ರದ ಪರಿವರ್ತನೆ, ಮೂಲಸೌಕರ್ಯದ ಆಧುನೀಕರಣ ಮತ್ತು ಭಾರತೀಯ ವಾಯುಪಡೆಯ ವಿಕಸನಗೊಳ್ಳುತ್ತಿರುವ ಕಾರ್ಯಾಚರಣೆಯ ಅಗತ್ಯಗಳಿಗೆ ಅನುಗುಣವಾಗಿ ಬೋಧನಾ ಪದ್ಧತಿಗಳ ಅಳವಡಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವ್ಯಾಪಕ ಕುರಿತು ಚರ್ಚೆಗಳು ನಡೆದವು. ಸಮ್ಮೇಳನದಲ್ಲಿ ಸಿಎಎಸ್, ಎಲ್ಲಾ ತರಬೇತಿ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು ಮತ್ತು ಅವುಗಳ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು ಹಾಗೂ ಸುಧಾರಣೆಗಳು ಅಗತ್ಯವಿರುವ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿ ಅಗತ್ಯ ಸಲಹೆಗಳನ್ನು ನೀಡಿದರು. ತಮ್ಮ ಪ್ರಧಾನ ಭಾಷಣದಲ್ಲಿ ಸಿಎಎಸ್, “ತರಬೇತಿ…
ಪುತ್ತೂರು NEWS DESK ಅ.24 : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು.ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ ಗ್ರಾಹಕರ ಸಮ್ಮುಖದಲ್ಲೇ “ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಹೊಸ ಅಪ್ಲಿಕೇಶನ್ನನ್ನು ಬಿಡುಗಡೆ ಮಾಡಲಾಯಿತು. ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಹಾಗೂ ಆ್ಯಪ್ ಸ್ಟೋರ್ನಲ್ಲಿ ಲಭ್ಯವಿದ್ದು ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಈ ಆ್ಯಪ್ನಲ್ಲಿ ಗ್ರಾಹಕರಿಗೆ ದಿನನಿತ್ಯದ ಚಿನ್ನದ ದರ ಲಭ್ಯವಿದ್ದು, ಗ್ರಾಹಕರ ವಿವರ ಡಿಜಿಟಲ್ ಪಾಸ್ಬುಕ್ ವಿವರ,ಆರ್ಡರ್ ವಿವರಗಳು, ಅಲ್ಲದೆ ಗ್ರಾಹಕರು ಪಾವತಿಸಿರುವ ಮೊತ್ತದ ವಿವರಗಳನ್ನು ಸಹ ಪರಿಶೀಲಿಸಬಹುದು.ಯಾವುದೇ ಪಾವತಿ ಶುಲ್ಕವನ್ನು ಬರಿಸದೇ ಗ್ರಾಹಕರು ಸ್ಟೀಮ್ ಪೇಮೆಂಟ್ ಮಾಡಬಹುದು.ಈ ಆ್ಯಪ್ ಮುಖಾಂತರ ಮನೆಯಲ್ಲೇ ಕುಳಿತುಕೊಂಡು ಪೇಮೆಂಟ್ಮಾಡಿ ರಶೀದಿ ಪಡೆಯಬಹುದು..ಈ ಅಪ್ಲಿಕೇಶನ್ ಸಮಯದ ಅಭಾವವಿರುವವರಿಗೆ ಇದು ತುಂಬಾ ಅನು ಕೂಲಕರವಾಗಿದೆ.ಈ ಆ್ಯಪ್ ಮೂಲಕ ಸಮಾಜಿಕ ಜಾಲತಾಣಗಳನ್ನು ಸಂಪರ್ಕಿಸಿ ನಮ್ಮ ಆಭರಣಗಳ ಬಗೆಗಿನ ಹೊಸ ಅಪ್ಡೇಟ್ಸ್ಗಳ ಮಾಹಿತಿಗಳನ್ನು ತಿಳಿದುಕೊಳ್ಳಬಹುದು. 24 ಕ್ಯಾರೆಟ್, 22ಕ್ಯಾರೆಟ್ ಚಿನ್ನದ…
ಸೋಮವಾರಪೇಟೆ ಅ.24 NEWS DESK : ರಾಷ್ಟ್ರಕವಿ ಕುವೆಂಪು ಕನ್ನಡ ಮಣ್ಣಿನ ಅಮೂಲ್ಯ ರತ್ನ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಬಣ್ಣಿಸಿದ್ದಾರೆ. ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸಾಹಿತ್ಯ ಪರಿಷತ್ತು ಕಚೇರಿ ಬಳಿ ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದರು. ಕುವೆಂಪು ಈ ನಾಡಿನ ಘನತೆಯನ್ನು ಹೆಚ್ಚಿಸಿದ ಮಹಾನ್ ವ್ಯಕ್ತಿ, ಜ್ಞಾನಪೀಠ ಪ್ರಶಸ್ತಿ ತಂದುಕೊಡುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಿರುವುದು ಶ್ಲಾಘನೀಯವೆಂದರು. ಪರಿಷತ್ತಿನ ಮೇಲಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನದ ನೀಡುವುದಾಗಿ ತಿಳಿಸಿದರು. ಮಾಜಿ ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಕನ್ನಡ ನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ಪುಣ್ಯವಂತರು. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನಂತರ ಬೇರೆ ಭಾಷೆಗಳಿಗೆ ಎಂದರು. ಕುವೆಂಪು ಅವರು ರಾಷ್ಟ್ರಕವಿಯಾಗಿ ಕನ್ನಡವನ್ನ ದೇಶ ವಿದೇಶಗಳಲ್ಲಿ ಪಸರಿಸಿದ್ದಾರೆ ಎಂದರು. ಮಾಜಿ ಸಚಿವ ಬಿ.ಎ.ಜೀವಿಜಯ, ತಹಶೀಲ್ದಾರ್ ಕೃಷ್ಣ ಮೂರ್ತಿ, ಜಿಲ್ಲಾ ಕನ್ನಡ…
ಮಡಿಕೇರಿ ಅ.24 NEWS DESK : ಭಾಗಮಂಡಲದ ಜಾನ್ ಡಾನ್ಸ್ ಗ್ಯಾಲರಿ ನೃತ್ಯ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ನವೆಂಬರ್ನಲ್ಲಿ ಪಾಂಡಿಚೆರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರದರ್ಶನವನ್ನು ನೀಡಲಿದ್ದಾರೆ. ಸಂಸ್ಥೆಯ ಗಾನವಿ, ಧೃತಿ, ತ್ರೈಸಿ ಹೆಚ್ಆರ್, ಅನುಪಮಾ, ನೀಕ್ಷಾ, ಸಾನ್ವಿ ಜಿ, ದರ್ಶಿನಿ, ಯುಕ್ತ, ಹರ್ಷಿಕ, ಪವಿತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಭಾಗಮಂಡಲದ ನೃತ್ಯ ತರಬೇತಿ ಸಂಸ್ಥೆ ಹಾಗೂ ಕರಾಟೆ ತರಬೇತಿಯ ನಿರ್ದೇಶಕ ನಾಗರಾಜ್, ನೃತ್ಯ ತರಬೇತಿಯ ಮುಖ್ಯ ತರಬೇತಿದಾರಾಗಿ ಅಂತರಾಷ್ಟ್ರೀಯ ನೃತ್ಯಪಟು ಪೃಥ್ವಿ ನಾಯಕ್ ಹಾಗೂ ಸಹ ತರಬೇತಿದಾರರಾಗಿ ಬೃಂದಾಕವನ್, ಕರಾಟೆ ತರಬೇತುದಾರರಾಗಿ ರಾಷ್ಟ್ರೀಯ ಮಿಕ್ಸ್ಡ್ ಮಾರ್ಷಲ್ ಆರ್ಟ್ಸ್ ರೆಫ್ರಿ ಇಮ್ಯಾನ್ವಲ್ ಹಾಗೂ ರಾಯ್ ಜೋಸೆಫ್ ತರಬೇತಿ ನೀಡಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸಲು ನಮ್ಮ ಸಂಸ್ಥೆ ಕಾರ್ಯೋನ್ಮುಖವಾಗಿದ್ದು, ಆಸಕ್ತರು ಕರಾಟೆ ಹಾಗೂ ನೃತ್ಯ ತರಬೇತಿಗಾಗಿ Contact No 9207566495, PLACE: VSSN…
ಮಡಿಕೇರಿ ಅ.24 NEWS DESK : ಮಡಿಕೇರಿಯ ಹೋಂಡಾ ಶೋರೂಂನ ನೂತನ ಬೈಕ್ಗಳನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭ ಮಡಿಕೇರಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಬಿ.ವೈ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮೂಡ ಸದಸ್ಯರ ಚಂದ್ರಶೇಖರ್, ಮಡಿಕೇರಿ ನಗರಸಭೆ ನಾಮ ನಿರ್ದೇಶೀತ ಸದಸ್ಯ ಮುದ್ದುರಾಜ್, ಜಗದೀಶ್ ಜಿ.ಸಿ. ಹಾಜರಿದ್ದರು.
ಮಡಿಕೇರಿ ಅ.24 NEWS DESK : ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ನ.16 ರಂದು ನಡೆಯಲಿದೆ. ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರೊಂದಿಗೆ ಸದಸ್ಯತ್ವವನ್ನು ಕೂಡ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆ ದೇವಾಲಯವಿದ್ದಂತೆ, ಪ್ರತಿಯೊಬ್ಬರಿಗೆ ತಾವು ಓದಿದ ಶಿಕ್ಷಣ ಸಂಸ್ಥೆಯ ಮೇಲೆ ಅಭಿಮಾನವಿರಬೇಕು. ವಿದ್ಯಾರ್ಥಿಗಳು ದೇಶದ ಮುಂದಿನ ಭವಿಷ್ಯವಾಗಿದ್ದು, ಉತ್ತಮ ಶಿಕ್ಷಣ, ಅವಕಾಶ ಮತ್ತು ಮಾರ್ಗದರ್ಶನ ದೊರೆತಾಗ ಯುವ ಸಮೂಹದಿಂದ ದೇಶದ ಪ್ರಗತಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಆದ್ದರಿಂದ ಕಾರ್ಯಪ್ಪ ಕಾಲೇಜ್ ನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸದಸ್ಯತ್ವ ಪಡೆಯುವ ಮೂಲಕ ಕಾಲೇಜ್ ನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕೈಜೋಡಿಸುವಂತೆ ಕೋರಿದರು. ಹಳೇ ವಿದ್ಯಾರ್ಥಿಗಳ ಸಂಘದ ನೂತನ ಆಡಳಿತ ಮಂಡಳಿ ಸದಸ್ಯತ್ವವವನ್ನು ಹೆಚ್ಚಿಸುವ ಸಲುವಾಗಿ ಸದಸ್ಯತ್ವ…
ಮಡಿಕೇರಿ ಅ.24 NEWS DESK : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 27ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಅ.23ರ ಸಂಜೆಯಿಂದಲೇ ದೇವಾಲಯದಲ್ಲಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಇಂದು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಅ.24 NEWS DESK : ರೋಟರಿ ಮಡಿಕೇರಿ ವುಡ್ಸ್ ಭಾರತ್ ಕ್ಯಾನ್ಸರ್ ಆಸ್ಪತ್ರೆ, ಮೈಸೂರು, ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ಮಡಿಕೇರಿ., ಗ್ರಾಮ ಪಂಚಾಯತ್ ಕಾಂತೂರ್ ಮೂರ್ನಾಡು. ಇವರ ಸಹಯೋಗದಲ್ಲಿ ಕ್ಯಾನ್ಸರ್ ಉಚಿತ ತಪಾಸಣಾ ಬೃಹತ್ ಶಿಬಿರವು ಅ.25 ರಂದು ಮೂನಾ೯ಡುವಿನಲ್ಲಿ ಆಯೋಜಿತವಾಗಿದೆ. ಮೂನಾ೯ಡು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಶಿಬಿರ ಪ್ರಾರಂಭವಾಗಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಶಿಬಿರ ಉದ್ಘಾಟಿಸಲಿದ್ದು, ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಸಂಘಟನಾ ಕಾಯ೯ದಶಿ೯ ಹಾಗೂ ಕರ್ನಾಟಕ ರಾಜ್ಯ ಔಷದ ವ್ಯಾಪಾರರಿಗಳ ಸಂಘದ ಗೌರವ ಕಾರ್ಯದರ್ಶಿಗಳಾದ ಎ.ಕೆ.ಜೀವನ್, ಸಂಘದ ಜಿಲ್ಲಾ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ, ರೋಟರಿ ಪಬ್ಲಿಕ್ ಇಮೇಜ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್,ಟಿ, ಮೂನಾ೯ಡು ಕಾಂತೂರು ಗ್ರಾಮಪಂಚಾಯತ್ ಅಧ್ಯಕ್ಷ ಕುಶನ್ ರೈ, ರೋಟರಿ ವುಡ್ಸ್ ಕಾಯ೯ದಶಿ೯ ಪ್ರಮೀಳಾ ಶೆಟ್ಟಿ, ಶಿಬಿರದ…
ಮಡಿಕೇರಿ ಅ.24 NEWS DESK : ಸೈನಿಕಶಾಲೆಗಳ 6 ಮತ್ತು 9, ನೇ ತರಗತಿಗೆ ಸೇಪ೯ಡೆ ಸಂಬಂಧಿತ ವಿದ್ಯಾಥಿ೯ ಮತ್ತು ಪೋಷಕರಲ್ಲಿ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ತರಬೇತಿ ಕಾಯಾ೯ಗಾರ ಆಯೋಜಿಸಲಾಗಿದೆ. ನಗರದ ಸಕಾ೯ರಿ ಬಸ್ ನಿಲ್ದಾಣ ಬಳಿಯಿರುವ ಕೊಡಗು ಶಿಶುಕಲ್ಯಾಣ ಸಂಸ್ಥೆಯಲ್ಲಿ ನವೆಂಬರ್ 2 ರ ಭಾನುವಾರದಿಂದ ಪ್ರತೀ ಭಾನುವಾರಗಳಂದು 10 ಭಾನುವಾರಗಳ ಕಾಲ ಸೈನಿಕ ಶಾಲಾ ಪರೀಕ್ಷಾ ಮಾಹಿತಿ ಕಾಯಾ೯ಗಾರ ಪ್ರತೀ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜರುಗಲಿದೆ. ಸರಗೂರು ಸೈನಿಕಶಾಲೆಯ ಪರಿಣಿತ ಅಧ್ಯಾಪಕರು ಸೇರಿದಂತೆ ವಿವಿಧ ವಿಷಯ ತಜ್ಞರು ಈ ಕಾಯಾ೯ಗಾರದಲ್ಲಿ ಉಪಯುಕ್ತ ಮಾಹಿತಿ ನೀಡಲಿದ್ದಾರೆ. ನವೆಂಬರ್ 2 ರಂದು ಬೆಳಗ್ಗೆ 9.30 ಗಂಟೆಗೆ ಉದ್ಘಾಟನೆ ನಂತರ ವಿದ್ಯಾರ್ಥಿಗಳ ಪೋಷಕರಿಗೂ ಮಾಹಿತಿ ಶಿಬಿರ ಆಯೋಜಿತವಾಗಿದೆ. ಸೈನಿಕಶಾಲೆಗೆ ಸೇರಲಿಚ್ಚಿಸುವ ಕೊಡಗಿನ ವಿದ್ಯಾಥಿ೯ಗಳು ಈ ಉಚಿತ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ ಮಿಸ್ಟಿ…






