ಮಡಿಕೇರಿ ಮೇ 25 NEWS DESK : ಕೊಡಗು ಜಿಲ್ಲೆಯ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಪುರ ಗ್ರಾಮದ ಅಯ್ಯಪ್ಪ ಭದ್ರಕಾಳಿ ದೇವಸ್ಥಾನದಲ್ಲಿ ಮೇ, 27 ಮತ್ತು 28 ರಂದು ನಡೆಯುವ ಬೇಡು ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮೇ, 28 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವರಪುರ ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ 26 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್ನಲ್ಲಿ ಮೇ, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕುಶಾಲನಗರ ಮೇ 26 NEWS DESK : ಜೂನ್ ತಿಂಗಳ ತಾ.23 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಸಮ್ಮೇಳನಾಧ್ಯಕ್ಷರಾದ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅರಮೇರಿ ಮಠದ ಆವರಣದಲ್ಲಿ ಬಿಡುಗಡೆ ಮಾಡಿದರು. ಶರಣ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಸರ್ವಜನರ ಸಮ್ಮೇಳನ ವಾಗಿ ರೂಪುಗೊಳ್ಳಬೇಕಿದೆ. ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಗಮಿಸುತ್ತಿರುವ ಕಾರಣ ಸಮ್ಮೇಳನಕ್ಕೆ ಹೆಚ್ಚು ಭಕ್ತರು ಆಗಮಿಸುವ ಮೂಲಕ ಇಡೀ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಬೇಕಿದೆ. ಈ ನಿಟ್ಟಿನಲ್ಲಿ ಸಮ್ಮೇಳನ ಸಮಿತಿ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು. ಈ ಸಂದರ್ಭ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಶರಣ ಸಾಹಿತ್ಯ ಸಮ್ಮೇಳನ ಜಿಲ್ಲೆಯ ಎಲ್ಲಾ ಜನಸಮುದಾಯದ ಸಮ್ಮೇಳನವಾಗಲಿದೆ. ಈ ದಿಸೆಯಲ್ಲಿ ಎಲ್ಲಾ ಸಮುದಾಯ ಸಂಘಟನೆಗಳ ಸಹಭಾಗಿತ್ವ ಕೋರಲಾಗುತ್ತಿದೆ ಎಂದರು. ಪ್ರಧಾನ ಕಾರ್ಯದರ್ಶಿ…
ಮಡಿಕೇರಿ ಮೇ 25 NEWS DESK : ಕೊಡಗು ಪತ್ರಕತ೯ರ ಸಂಘದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ 8 ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ, ಗ್ರಾಮೀಣ ವರದಿ – ಕೊಡಗು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು ದಿವಂಗತ ಬಿ.ಟಿ. ರಾಮದಾಸ ಶೆಟ್ಟಿ ಅವರ ಜ್ಞಾಪಕಾಥ೯ ಸ್ಫಾಪಿಸಿರುವ ದತ್ತಿ ಪ್ರಶಸ್ತಿ. ಕೖಷಿ ವರದಿ – ಶ್ರೀಮತಿ ಕಾಂತಿ ಸತೀಶ್ ಅವರು ನೀಡಿರುವ ದತ್ತಿ ಪ್ರಶಸ್ತಿ, ಕ್ರೀಡಾವರದಿ – ದಿ.ಕೆ.ಬಿ. ಮಹತೇಂಶ್ ಸ್ಮರಣಾಥ೯ ಅವರ ಪತ್ನಿ ಭಾಗೀರಥಿ ಅವರು ನೀಡಿರುವ ಪ್ರಶಸ್ತಿ, ರಾಜಕೀಯ ವರದಿಗಾಗಿ ನಾಪಂಡ…
ಮಡಿಕೇರಿ ಮೇ 25 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಸೂಚಿಸಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬಂಧ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿದಿ ಹಾಗೆಯೇ ಭೂ ಒಡೆತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಗತಿಯತ್ತ ಸಾಗುತ್ತಿದೆ. ಜೊತೆಗೆ ಬಡ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ತಲುಪುವಂತಾಗಲು ಅಧಿಕಾರಿಗಳ ಕರ್ತವ್ಯ ಮಹತ್ತರ ಎಂದು ಧರ್ಮಜ ಉತ್ತಪ್ಪ ಅವರು ನುಡಿದರು. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ.…
ಗೋಣಿಕೊಪ್ಪ ಮೇ 25 NEWS DESK : ಭಗತ್ ಸಿಂಗ್ ಯುವಕ ಸಂಘ ಆಯೋಜಿಸಿದ 6ನೇ ಆವೃತ್ತಿಯ ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ಅತ್ತೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಗತ್ಸಿಂಗ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕಡೇಮಾಡ ಸುನಿಲ್ ಮಾದಪ್ಪ, ಗೋಣಿಕೊಪ್ಪಲು ಗ್ರಾಪಂ ಸದಸ್ಯ ಬಿ.ಎನ್.ಪ್ರಕಾಶ್ ಮಾಡಿದ ಬೌಲಿಂಗ್ಗೆ, ಬ್ಯಾಟ್ ಬಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದರು. ನಾಲ್ಕು ದಿನಗಳು ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 16 ತಂಡಗಳು ಭಾಗವಹಿಸಲಿವೆ, ಗುರುವಾರದಂದು ಅಂತಿಮ ಪಂದ್ಯಾಟ ನಡೆಯಲಿದೆ.ವಿಜೇತ ತಂಡಗಳಿಗೆ, ಪ್ರಥಮ, ದ್ವಿತೀಯ, ತೃತೀಯ, ನಾಲ್ಕನೇ ಬಹುಮಾನವಾಗಿ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಮಾಹಿತಿ ನೀಡಿದರು. ಈ ಸಂದರ್ಭ ಪತ್ರಕರ್ತ, ಗೋಣಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷಜಗದೀಶ್ಜೋಡುಬೀಟಿ ಮಾತನಾಡಿ, ಯುವಕರ ಮನಸುಗಳನ್ನು ಏಕಚಿತ್ತವಾಗಿ ಬಿಗಿಗೊಳಿಸಲು ಕ್ರೀಡೆ ಸಹಕಾರಿ,…
ಮಡಿಕೇರಿ ಮೇ 25 NEWS DESK : ವಿದ್ಯಾರ್ಥಿಗಳು ಶಿಕ್ಷಣದಂತೆ ಕ್ರೀಡೆಗೂ ಮಹತ್ವ ನೀಡಿ ಕ್ರೀಡಾ ಕ್ಷೇತ್ರದಲ್ಲಿ ಕೀರ್ತಿ ಗಳಿಸಬೇಕು ಎಂದು ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಾದ ಅಂಕಿತಾ ಬಿ.ಎಸ್ ಕರೆ ನೀಡಿದ್ದಾರೆ. ನಗರದ ಕೊಡಗು ವಿಶ್ವ ವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ “ಕ್ರೀಡೆ ಮತ್ತು ಪ್ರತಿಭೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಬೇಕು, ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡು ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಶಾಲಾ ಕಾಲೇಜುಗಳಲ್ಲಿ ನಡೆಯುವ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಸ್ಫೂರ್ತಿಯನ್ನು ತುಂಬುತ್ತವೆ. ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡುವ ಮೂಲಕ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲೂ ವಿದ್ಯಾರ್ಥಿಗಳು ಕೀರ್ತಿ ಗಳಿಸಬೇಕು ಎಂದರು. ಶೈಕ್ಷಣಿಕವಾಗಿ ಓದಿಗೆ ಕೊನೆ ಎಂಬುವುದೇ ಇಲ್ಲ, ಕ್ರೀಡೆಯಲ್ಲಿ ತೊಡಗಿಸಿಕೊಂಡೇ ಹೆಚ್ಚು ಹೆಚ್ಚು ಓದಬಹುದು. ಕ್ರೀಡಾಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಗೌರವ ದೊರೆತಾಗ ಕಾಲೇಜು ದಿನಗಳಲ್ಲಿ ತೋರಿದ ಕ್ರೀಡಾ ಪ್ರತಿಭೆಯ ನೆಪಾಗುವುದು ಸಹಜ. ಕ್ರೀಡಾಪಟುಗಳಿಗೆ ಕ್ರೀಡಾಕೂಟಗಳು ಹಬ್ಬವಿದ್ದಂತೆ, ಕ್ರೀಡೆಗಳಿಂದಲೂ ಸುಂದರ…
ಮಡಿಕೇರಿ NEWS DESK ಮೇ 24 : ಸಮಾಜದಲ್ಲಿ ಕೋಮು ಪ್ರಚೋದನೆ, ದ್ವೇಷ ಭಾಷಣ, ಗಲಭೆ ಸೃಷ್ಟಿ ಹಾಗೂ ಗೋ ರಕ್ಷಣೆ ಹೆಸರಿನಲ್ಲಿ ಗೂಂಡಾಗಿರಿ ನಡೆಸಿರುವ ಪುನರಾವರ್ತಿತ ಅಪರಾಧಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್.ಡಿ.ಪಿ.ಐ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 11:30 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.
ಮಡಿಕೇರಿ NEWS DESK ಮೇ 24 : ಬೆಂಗಳೂರಿನ ವಿಶ್ವ ಚೇತನ ಬಳಗವು ಆಯೋಜಿಸುವ, ರಾಷ್ಟ್ರೀಯ ಮಹಾನ್ ನಾಯಕರ ಸಂಸ್ಮರಣಾ ಕಾರ್ಯಕ್ರಮದಲ್ಲಿ, ವಿದ್ಯೆ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಚೋವಂಡ ಚೋಂದಮ್ಮ ಪೂಣಚ್ಚ ಅವರಿಗೆ ರಾಷ್ಟ್ರೀಯ ಸಿದ್ದಬುದ್ದ ಪ್ರಶಸ್ತಿ, ಹಾಗೂ ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಚಾಮೆರ ದಿನೇಶ್ ಬೆಳ್ಯಪ್ಪ ಅವರಿಗೆ ರಾಷ್ಟ್ರೀಯ ಭೀಮ್ರಾವ್ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಾಮರಾಜನಗರ ಜಿಲ್ಲಾ ಕೊಳ್ಳೆಗಾಲದ ರೋಟರಿ ಭವನದಲ್ಲಿ, ರೋಟರಿ ಅಧ್ಯಕ್ಷ ಬಿ.ಮಹದೇವ ಅವರ ಅಧ್ಯಕ್ಷತೆಯಲ್ಲಿ, ವಿಶ್ವಚೇತನ ಬಳಗದ ಅಧ್ಯಕ್ಷ ಡಾ.ಎಂ.ಶಿವಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಐವರಿಗೆ ರಾಷ್ಟ್ರೀಯ, ಐವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಡಿಕೇರಿ NEWS DESK ಮೇ 24 : 2002-2003ನೇ ಸಾಲಿನ ಸರಕಾರಿ ಪ್ರೌಢಶಾಲೆ ಹಾಗೂ Government Junior College Madikeri ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನವು ಮಡಿಕೇರಿಯ Ashoka Palace ನಲ್ಲಿ ಭಾನುವಾರ ಭಾವನಾತ್ಮಕ ವಾತಾವರಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮಡಿಕೇರಿಯ ಮನ್ಸೂರ್ ಅಲಿಫರ್ಝ್, ಸಂದೀಪ್ ಬೆಂಗಳೂರು ಹಾಗೂ ಗೋಪಿನಾಥ್ ಅವರ ಪ್ರಯತ್ನದಿಂದ ಆಯೋಜಿಸಲಾಗಿತ್ತು. ಸುಮಾರು 35 ಮಂದಿ ಹಳೆಯ ವಿದ್ಯಾರ್ಥಿಗಳು ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಿದ್ದು, ಕೇರಳದಿಂದಲೂ ಸ್ನೇಹಿತರು ಭಾಗವಹಿಸಿರುವುದು ವಿಶೇಷವಾಗಿತ್ತು. ಸುಮಾರು 25 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಮತ್ತೆ ಭೇಟಿಯಾದ ಸಹಪಾಠಿಗಳು ಹಳೆಯ ದಿನಗಳ ನೆನಪುಗಳನ್ನು ಹಂಚಿಕೊಂಡು ಭಾವುಕರಾದರು. ಕೇವಲ ಒಂದು ವಾರದ ಅವಧಿಯಲ್ಲಿ ಹಳೆಯ ಸ್ನೇಹಿತರನ್ನು ಹುಡುಕಿ, ಸಂಪರ್ಕಿಸಿ, ಎಲ್ಲರನ್ನು ಒಂದಾಗಿ ಸೇರಿಸಿರುವುದು ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು. ದೈನಂದಿನ ಜೀವನದ ಒತ್ತಡ, ಜವಾಬ್ದಾರಿಗಳು ಮತ್ತು ಆತುರದ ನಡುವೆ ಈ ಪುನರ್ಮಿಲನ ಎಲ್ಲರಿಗೂ ನಿಜವಾದ “Stress Buster” ಆಗಿ ಹೊಸ ಚೈತನ್ಯ ತುಂಬಿತು ಎಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.…






