ಲೇಖಕ: admin

ಮಡಿಕೇರಿ ಜೂ.15 NEWS DESK : ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗ ಬಳಿ ನಿರ್ಮಾಣವಾಗುತ್ತಿರುವ ‘ಕ್ರೀಡಾ ತರಬೇತಿ ಕೇಂದ್ರ’ದ ಆಡಳಿತ ಕಟ್ಟಡ ಕಾಮಗಾರಿಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಪರಿಶೀಲಿಸಿದರು.  ಸುಮಾರು 11 ಎಕರೆ ಜಾಗದಲ್ಲಿ ಅಥ್ಲೆಟಿಕ್ ಮಾದರಿಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕ್ರೀಡಾ ತರಬೇತಿ ಕೇಂದ್ರದ ಆಡಳಿತ ಭವನ ಜತೆಗೆ ಇತರೆ ಕಾಮಗಾರಿಯ ಜಾಗವನ್ನು ಶಾಸಕರು ವೀಕ್ಷಿಸಿದರು. ಸುಮಾರು 45 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಕ್ರೀಡಾ ತರಬೇತಿ ಕೇಂದ್ರ ಹಾಗೂ ವಸತಿ ನಿಲಯ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲು ಉದ್ದೇಶಿಸಲಾಗಿದೆ. ಕ್ರೀಡಾ ತರಬೇತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಥಮ ಹಂತದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಆಡಳಿತ ಭವನ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿಯನ್ನು ಶಾಸಕರು ಪರಿಶೀಲಿಸಿದರು. ಆಡಳಿತ ಭವನದಲ್ಲಿ ನೆಲಮಹಡಿ ಹಾಗೂ ಮೊದಲ ಮಹಡಿ ಇರಲಿದ್ದು, ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ತರಬೇತಿ ಕೇಂದ್ರಗಳು ನಿರ್ಮಾಣವಾಗಲಿದೆ. ಒಳಾಂಗಣದಲ್ಲಿ ಶೆಟಲ್ ಬ್ಯಾಡಿಮಿಂಟನ್, ಟೇಬಲ್ ಟೆನ್ನಿಸ್, ಸ್ಕ್ವಾಷ್, ಜಿಮ್ಮು, ಹೊರಾಂಗಣದಲ್ಲಿ ಹಾಕಿ ಟರ್ಪ್,…

Read More

ಕುಶಾಲನಗರ ಜೂ.15 NEWS DESK : ಕುಶಾಲನಗರದ ಹಲವು ಶಿಕ್ಷಣ ಸಂಸ್ಥೆಗಳ ಪೈಕಿ ಫಾತಿಮಾ ಕಾನ್ವೆಂಟ್ ಶಾಲೆಗೆ ವಿಶಿಷ್ಟ ಸ್ಥಾನವಿದೆ. ಅಂತಹ ಶಿಕ್ಷಣ ಸಂಸ್ಥೆಯು 1976 ರಲ್ಲಿ ಆರಂಭವಾಗಿದ್ದು. ಈಗ ಅದರ ಸುವರ್ಣ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಾರ್ವಜನಿಕರನ್ನು ಸೇರಿಸಿಕೊಂಡು ಸುವರ್ಣ ವರ್ಷವನ್ನು ಹಬ್ಬವನ್ನಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು. ಅದರಂತೆ ಜೂನ್ ತಿಂಗಳಲ್ಲಿ ಶಾಲೆಯಲ್ಲಿ ಕಲೆಯುತ್ತಿರುವ ವಿದ್ಯಾರ್ಥಿಗಳಿಗೆ, ಪಾಲಕರಿಗೆ, ಶಾಲೆಯ ಸಿಬ್ಬಂದಿಗಳಿಗೆ ಜಾಗೃತಿ ಸಭೆ, ಜುಲೈ ತಿಂಗಳಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲು ಚಿಂತಿಸಲಾಗಿದೆ. ಆಗಸ್ಟ್ ತಿಂಗಳಲ್ಲಿ ಅಂತರ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಮ್ಯಾರಥಾನ್,  ಯುವ ಜನಾಂಗದಲ್ಲಿ ಆಚಾರ ವಿಚಾರಗಳನ್ನು ತಿಳಿಸುವ ಪ್ರಯತ್ನವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಸಾಂಪ್ರದಾಯಿಕ ದಿನವನ್ನು ಅಕ್ಟೋಬರ್ ತಿಂಗಳಲ್ಲಿ ಆಚರಿಸಲಾಗುವುದು. ನವೆಂಬರ್…

Read More

ಮಡಿಕೇರಿ ಮಾ.15 NEWS DESK : ಸಮಾಜದಲ್ಲಿನ ಈ ರೀತಿಯ ಸಂಕಷ್ಟ ಕುಟುಂಬಗಳನ್ನು ಗುರುತಿಸಿ ತಮ್ಮಿಂದ ಸಾಧ್ಯವಿರುವ ಸೌಲಭ್ಯ ನೀಡುವ ಮೂಲಕ ಮಾನವೀಯ ಸ್ನೇಹಿತರ ಒಕ್ಕೂಟವು ಪ್ರಶಂಸೆಗೆ ಪಾತ್ರವಾಯಿತು. ಸ್ನೇಹಿತರ ಒಕ್ಕೂಟದ ಜಿಲ್ಲಾ ಮಟ್ಟದ ವಾರ್ಷಿಕ ಕಾರುಣ್ಯ ಕಾರ್ಯಕ್ರಮ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸಂದರ್ಭ ಮಕ್ಕಳು, ಮಹಿಳೆಯರು ಸೇರಿದಂತೆ ಜಿಲ್ಲೆಯ ಸುಮಾರು 70ಕ್ಕೂ ಅಧಿಕ ಅರ್ಹ ಫಲಾನುಭವಿಗಳು ಸ್ವೀಕರಿಸಿರು. ಅದಾಯ ಮಾರ್ಗವಿಲ್ಲದೆ ಬಲುಕಷ್ಟ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ಕುಟುಂಬಗಳಿಗೆ ಉತ್ತಮ ದರ್ಜೆಯ ಆಹಾರದ ಕಿಟ್, ಅನಾರೋಗ್ಯದಿಂದ ಬಳಲುತ್ತಿದ್ದಮಂದಿಯ ಚಿಕಿತ್ಸೆಗೆ ತಲಾ 5 ಸಾವಿರ ರೂಪಾಯಿ ಹಾಗೂ ವಿದ್ಯೆ ಕಲಿಯುವ ಕಷ್ಟದ ಕುಟುಂಬದಮಕ್ಕಳಿಗೆ ಪಠ್ಯ ಪರಿಕರ ಸೇರಿದಂತೆ ಒಟ್ಟು 70ಕ್ಕೂ ಅಧಿಕ ಮಂದಿಗೆ ರೂ 3,00,000 ವೆಚ್ಚದಲ್ಲಿ ಸವಲತ್ತುಗಳನ್ನು ವಿತರಿಸಲಾಯಿತು. ನಡೆಯಲಾಗದ ಅಶಕ್ತರನ್ನು ಒಕ್ಕೂಟದ ಕಾರ್ಯಕರ್ತರು ಎತ್ತಿಕೊಂಡು ಸಭಾಂಗಣಕ್ಕೆ ಕರೆತಂದು ಕೂರಿಸಿ ಅರ್ಹ ಸವಲತ್ತುಗಳನ್ನು ನೀಡಿದರು. ಒಕ್ಕೂಟದ ವಕ್ತಾರ ಶಶಿಕುಮಾರ್ ಚೆಟ್ಟಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರುಣ್ಯ ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆಯ…

Read More

ಮಡಿಕೇರಿ ಜೂ.15 NEWS DESK : ಈಜುಕೊಳಕ್ಕೆ ಇಳಿದ ಸಂದರ್ಭ ಉಸಿರಾಟ ಸಮಸ್ಯೆಯಿಂದ ಪ್ರವಾಸಿಗ ಮೃತಪಟ್ಟ ಘಟನೆ ವಿರಾಜಪೇಟೆ ಹೊರ ವಲಯದ  ಪ್ರತಿಷ್ಟಿತ ರೆಸಾಟ್೯ನಲ್ಲಿ ನಡೆದಿದೆ. ಗೋವಾದ  ಪಣಜಿಯಿಂದ  ವಿರಾಜಪೇಟೆ ಸಮೀಪದ  ರೆಸಾರ್ಟ್ ಗೆ ಆಗಮಿಸಿದ್ದ ಮನೋಜ್ ಆನಂದ್(57) ಎಂಬವರೇ ಮೃತ ದುರ್ದೈವಿ. ಸೋಮವಾರ ಮಧ್ಯಾಹ್ನ 2 ಗಂಟೆಗೆ  ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರೆಸಾಟ್೯ ಆಗಮಿಸಿದ್ದರು. 2.30ರ ಸಮಯದಲ್ಲಿ ಮನೋಜ್ ಆನಂದ್ ಈಜುಕೊಳ ಕ್ಕೆ ಇಳಿದಿದ್ದ ಸಂದರ್ಭ ಉಸಿರಾಟದ ತೊಂದರೆ ಉಂಟಾಗಿದ್ದು, ನೀರಿನಲ್ಲಿ ಮುಳುಗಿದ್ದರು ಎನ್ನಲಾಗಿದೆ. ಬಳಿಕ ರೆಸಾಟ್೯ ಸಿಬ್ಬಂದಿಗಳು ಅವರನ್ನು ನೀರಿನಿಂದ ಹೊರ ತೆಗೆದು ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ಕರೆದೊಯ್ದ  ಸಂದರ್ಭ ಪರೀಕ್ಷಿಸಿದ ವೈದ್ಯರು ಮನೋಜ್ ಆನಂದ್  ಮೃತಪಟ್ಟಿರುವುದಾಗಿ ದೃಡಪಡಿಸಿದ್ದಾರೆ. ಘಟನೆಯ ಮಾಹಿತಿ ಅರಿತು ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ನೀರಿಗೆ ಇಳಿದ ಸಂದರ್ಭ ಹೃದಯಾಘಾತ ಆಗಿರುವ…

Read More

ಮಡಿಕೇರಿ ಜೂ.15 NEWS DESK : ಮಡಿಕೇರಿ ನಗರದ ಭಾರತೀಯ ವಿದ್ಯಾಭವನದಲ್ಲಿ 2001 ರಲ್ಲಿ ಆರಂಭಗೊಂಡ “ಯೋಗ ಭಾರತಿ” ಯೋಗ ತರಬೇತಿ ಕೇಂದ್ರದ ರಜತ ಮಹೋತ್ಸವ ಸಮಾರಂಭ ಜೂ.17 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ “ಯೋಗ ಭಾರತಿ”ಯ ಸಂಸ್ಥಾಪಕ ಹಾಗೂ ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ಅವರು ಬುಧವಾರ ನಗರದ ರೆಡ್‍ಬ್ರಿಕ್ಸ್‍ನ ಸತ್ಕಾರ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಅಪರ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಅಧ್ಯಕ್ಷ ಕೆ.ಎಸ್.ದೇವಯ್ಯ, ಯೋಗ ಭಾರತಿಯ ಪೋಷಕ ಡಾ.ಮನೋಹರ್ ಜಿ.ಪಾಟ್ಕರ್, ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಹಾಗೂ ಜಿಲ್ಲಾ ಆಯುಷ್  ಅಧಿಕಾರಿ ಡಾ.ಶೈಲಜಾ ಜಿ. ಅವರುಗಳು ಪಾಲ್ಗೊಳ್ಳಲಿದ್ದಾರೆ. ಯೋಗದ ಮಹತ್ವದ ಕುರಿತು ಆಯುಷ್  ಇಲಾಖೆಯ ಡಾ.ಅರುಣ ಮಾಹಿತಿ ನೀಡಲಿದ್ದು, ಯೋಗ ಭಾರತಿ ಮತ್ತು ಯೋಗ ಸಂಧ್ಯಾ ತರಗತಿಯ ಯೋಗ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಲಿದೆ…

Read More

ಮಡಿಕೇರಿ ಜೂ.15 NEWS DESK : ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯು ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರದಂತೆ ಕಂಡು ಬಂದಿದ್ದು, ಜನಸಾಮಾನ್ಯರು ಜಾಗೃತರಾಗಬೇಕೆಂದು ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟ ಕರೆ ನೀಡಿದೆ. ಒಕ್ಕೂಟದ ವತಿಯಿಂದ ಜೂ.20 ರಂದು “ಎಸ್‍ಐಆರ್ ವಿರೋಧಿ ಸಮಾವೇಶ” ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯಲಿದೆ. ಇದಕ್ಕೆ ಪೂರಕವಾಗಿ ರಾಜ್ಯದ ವಿವಿಧೆಡೆ ಆಯೋಜಿಸಲಾಗಿರುವ “ಎದ್ದೇಳು ಕರ್ನಾಟಕ” ಆಂದೋಲನದ ಭಾಗವಾಗಿ ಜನಜಾಗೃತಿ ಅಭಿಯಾನ ಮಡಿಕೇರಿಗೆ ಆಗಮಿಸಿತು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖರು ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ. ಆದರೆ ಈ ಹಕ್ಕನ್ನು ಪರಿಶಿಷ್ಟರು, ಅಲ್ಪಸಂಖ್ಯಾತರು ಹಾಗೂ ಆದಿವಾಸಿಗಳಿಂದ ಕಸಿದುಕೊಳ್ಳುವ ಪ್ರಯತ್ನವಾಗಿ ಎಸ್‍ಐಆರ್ ಜಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಚುನಾವಣೆಗೂ ಪೂರ್ವದಲ್ಲೆ…

Read More

ಮಡಿಕೇರಿ NEWS DESK ಜೂ.15 : ಕೊಡಗು ಜಿಲ್ಲೆಯ ಬಹುತೇಕ ರಸ್ತೆಗಳು ಹೊಂಡಗುoಡಿಗಳಿoದ ಕೂಡಿದ್ದು, ಸುಗಮ ಸಂಚಾರ ಅಸಾಧ್ಯವಾಗಿದೆ. ರಸ್ತೆಗಳ ಅವ್ಯವಸ್ಥೆಗೆ ಇಬ್ಬರು ಶಾಸಕರುಗಳ ನಿರ್ಲಕ್ಷ್ಯವೇ ಕಾರಣವೆಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಕಾದು ಜನ ಬೇಸತ್ತು ಹೋಗಿದ್ದಾರೆ. ಕನಿಷ್ಠ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡ ಮಾಡಲಾಗದ ಪರಿಸ್ಥಿತಿಯಲ್ಲಿ ಶಾಸಕರುಗಳು ಇದ್ದಾರೆ. ಆರಂಭದ ಶೂರತನವೆಂಬoತೆ ಆರಂಭದಲ್ಲಿ ಡಾಂಬರೀಕರಣಗೊಳಿಸಿದ ರಸ್ತೆಗಳು ಕಳೆದ ಒಂದು ವಾರದ ಮಳೆಗೆ ನೀರುಪಾಲಾಗಿದ್ದು, ಹೊಂಡಗುoಡಿಗಳು ಮತ್ತೆ ಅಪಾಯವನ್ನು ಆಹ್ವಾನಿಸುತ್ತಿವೆ ಎಂದು ಟೀಕಿಸಿದ್ದಾರೆ. ರಸ್ತೆಗಳ ಅಭಿವೃದ್ಧಿಗಾಗಿ ಕೋಟಿ ಕೋಟಿ ಅನುದಾನ ಬಂದಿದೆ ಎಂದು ಪ್ರಚಾರವನ್ನಷ್ಟೇ ಮಾಡಲಾಗುತ್ತಿದೆ. ಜನರ ಕಣ್ಣೊರೆಸುವ ಉದ್ದೇಶದಿಂದ ರಸ್ತೆ ಕಾಮಗಾರಿಗೆ ವಿವಿಧೆಡೆ ಭೂಮಿಪೂಜೆ ನೆರವೇರಿಸಲಾಗಿದೆ. ಆದರೆ ಇಲ್ಲಿಯವರೆಗೆ ಎಲ್ಲೂ ಕಾಮಗಾರಿ ಆರಂಭಗೊoಡಿಲ್ಲ, ಆರಂಭಗೊoಡಿರುವ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆಗಾಲ ಸಮೀಪಿಸುವ ಹಂತದಲ್ಲಿ ಕಾಮಗಾರಿ ಆರಂಭಿಸುವ ನಾಟಕ ಮಾಡಲಾಗಿದೆ. ಮಳೆಯ ಕಾರಣ ನೀಡಿ ಕಾಮಗಾರಿ ನಡೆಸದೆ…

Read More

​ಬೆಂಗಳೂರು, ಜೂ.15 NEWS DESK  : ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ (KAAMS – Karnataka Advanced Attendance Management System) ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ 100% ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು. ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು (Geographical Location) ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ. ​:: ಸಂಪೂರ್ಣ “ಮೇಡ್-ಇನ್-ಕರ್ನಾಟಕ” ಆವಿಷ್ಕಾರ :: ​ಯಾವುದೇ ಬಾಹ್ಯ ಖಾಸಗಿ ತಂತ್ರಜ್ಞಾನ ಸಂಸ್ಥೆಗಳ ನೆರವಿಲ್ಲದೆ,…

Read More

ಮಡಿಕೇರಿ ಜೂ.15 NEWS DESK :  ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.72 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 41.95 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 259.90 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 865.04 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.08 ಮಿ.ಮೀ. ಕಳೆದ ವರ್ಷ ಇದೇ ದಿನ 70.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 419.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1302.52 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 54 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 315.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 905.10 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…

Read More

ಮಡಿಕೇರಿ ಜೂ.15 NEWS DESK  : ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ನಿರ್ದೇಶನ ಮೇರೆಗೆ ಕಾಲೂರು- ಮಾಂದಲಪಟ್ಟಿ ರಸ್ತೆ ದುರಸ್ತಿ ಕಾರ್ಯ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದೆ. ವಾರದ ಹಿಂದೆ ಕಾಲೂರು ಗ್ರಾಮಸ್ಥರು ರಸ್ತೆ ಹಾಳಾಗಿರುವುದರಿಂದ ಬಸ್ ಸಂಚಾರವಿಲ್ಲದೆ ವಿಧ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಡಾ.ಮಂತರ್ ಗೌಡ ರವರಲ್ಲಿ ಮನವಿ ಮಾಡಿಕೊಂಡಿದ್ದರು. ಮಳೆ ಆರಂಭಗೊಂಡಿರುವುದರಿಂದ ಪೂರ್ಣ ಪ್ರಮಾಣದಲ್ಲಿ ರಸ್ತೆ ನಿರ್ಮಾಣ ಅಸಾಧ್ಯವಾಗಿದ್ದು ಸದ್ಯಕ್ಕೆ ತಾತ್ಕಾಲಿಕ ದುರಸ್ತಿ ಮಾಡಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ಶಾಸಕರು ಭರವಸೆ ನೀಡಿದ್ದರು. ಶಾಸಕರು ಭರವಸೆ ನೀಡಿದಂತೆ ಈಗ ತಾತ್ಕಾಲಿಕ ದುರಸ್ತಿ ಆಗುತ್ತಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್ ರವರು ಸ್ಥಳದಲ್ಲಿಯೇ ಇದ್ದು ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ತಮ್ಮ ಕೋರಿಕೆಗೆ ತಕ್ಷಣವೇ ಸ್ಪಂದನೆ ನೀಡಿದ ಡಾ ಮಂತರ್ ಗೌಡ ರವರ ನಡೆಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More