ಲೇಖಕ: admin

ಮಡಿಕೇರಿ ಮಾ.21 NEWS DESK : ಕೊಡಗಿನ ಕಾಡಾನೆ-ಮಾನವ ಸಂಘರ್ಷ ತಡೆಗೆ ರಾಜ್ಯದಷ್ಟೇ ಕೇಂದ್ರಕ್ಕೂ ಜವಾಬ್ದಾರಿ ಇದ್ದು, ಕೇಂದ್ರದಿಂದ ಏನು ಪರಿಹಾರ ದೊರೆತ್ತಿದೆ, ಸಮಸ್ಯೆ ಬಗೆಹರಿಕೆಗೆ ಎಷ್ಟು ಅನುದಾನ ಒದಗಿಸಿದೆ ಎನ್ನುವುದನ್ನು ಬಿಜೆಪಿ ಮಂದಿ ಬಹಿರಂಗಪಡಿಸಲಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಒತ್ತಾಯಿಸಿದ್ದಾರೆ. ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಡಾನೆಗಳ ಹಾವಳಿಯಿಂದ ಯಾರೂ ತೊಂದರೆಗೆ ಒಳಗಾಗಬಾರದು. ಹೀಗಿದ್ದೂ ಸಿದ್ದಾಪುರ, ಕುಶಾಲನಗರ, ಬೆಟ್ಟತ್ತ್ತೂರಿನಲ್ಲಿ ಮೂವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಇದನ್ನೆ ಬಳಸಿಕೊಂಡ ಬಿಜೆಪಿ ಪ್ರತಿಭಟನೆ ಮತ್ತು ರಸ್ತೆ ತಡೆ ಮಾಡಿ ಪ್ರತಿಭಟಿಸುವ ಮೂಲಕ ಸಾವಿನಲ್ಲಿ ರಾಜಕಾರಣ ಮಾಡುತ್ತ್ತಿದೆ. ಬಿಜೆಪಿಯ ಧೋರಣೆಗಳನ್ನು ಗಮನಿಸಿದರೆ, ಅವರು ಸಾವಿಗೆ ಕಾಯುತ್ತಿರುವಂತೆ ಭಾಸವಾಗುತ್ತಿದೆ ಎಂದು ಟೀಕಿಸಿದರು. *25 ವರ್ಷ ಸಾವೇ ಸಂಭವಿಸಿಲ್ಲವೆ* ಜಿಲ್ಲೆಯಲ್ಲಿ ಕಳೆದ ಇಪ್ಪತ್ತೈದು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯ ಅವಧಿಯಲ್ಲಿ ಕಾಡಾನೆಗಳ ಹಾವಳಿಯಿಂದ ಜೀವಹಾನಿಯೇ ಸಂಭವಿಸಿಲ್ಲವೆ ಎಂದು ಪ್ರಶ್ನಿಸಿದ ಪೊನ್ನಣ್ಣ, 2020-21 ನೇ ಸಾಲಿನಲ್ಲಿ 13 ಮಂದಿ,…

Read More

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು ಪ್ರತಿಪಾದಿಸುತ್ತಿದ್ದಾರೆಯೇ ಹೊರತು ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಅಲ್ಲವೆಂದು ಖ್ಯಾತ ವಕೀಲ, ಲೇಖಕ ಹಾಗೂ ಚಿಂತಕ ಕೆ.ಪಿ.ಬಾಲಸುಬ್ರಮಣ್ಯ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನಡೆದ ವಿಚಾರ ಸಂಕಿರಣದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಕೊಡವರು ಕೊಡಗಿನ ಆದಿಮಸಂಜಾತರು, ಕೊಡವರು ಪ್ರತ್ಯೇಕ ರೇಸ್ ಅಥವಾ ಮೂಲ ವಂಶಸ್ತ ಜನಾಂಗವಾಗಿದ್ದು , ಈ ಜನಾಂಗದ ನೆಲೆ ಮತ್ತು ನೆಲ ಇಲ್ಲಿಯೇ ಇದೆ ಎಂದರು. ವರ್ಣಾಶ್ರಮದ, ಚಾತುರ್ವರ್ಣದ ಯಾವ ಅಂಶವು ಕೊಡವರಲ್ಲಿ ಇಲ್ಲದಂತ ಪ್ರಕೃತಿ, ಭೂದೇವಿ, ಜಲದೇವಿ, ಪೂರ್ವಿಕರು, ಮಂದ್ ಮತ್ತು ಸೂರ್ಯ ಚಂದ್ರ, ಗತಿಸಿ ಹೋದವರ ಆತ್ಮ ಇತ್ಯಾದಿಗಳನ್ನು ಪೂಜಿಸುವ ಇಡೀ ದೇಶದಲ್ಲೇ ಬೇರೆ ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾದ ಕೊಡವರು…

Read More

ಮಡಿಕೇರಿ ಮಾ.21 NEWS DESK : ಕಾರು ಮತ್ತು ಎರಡು ಬೈಕ್‍ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‍ಗಳ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ತಿತಿಮತಿ-ಮೈಸೂರು ರಸ್ತೆಯಲ್ಲಿ ನಡೆದಿದೆ. ನಂಜನಗೂಡು ನಿವಾಸಿ ಶಿವಕುಮಾರ್(25) ಮತ್ತು ಕೇರಳ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತ ಯುವಕರಾಗಿದ್ದಾರೆ. ಕಾರೊಂದು ಮೈಸೂರು-ತಿತಿಮತಿ ಮಾರ್ಗವಾಗಿ ಗೋಣಿಕೊಪ್ಪ ಕಡೆಗೆ ಆಗಮಿಸುತಿತ್ತು. ಇದೇ ಮಾರ್ಗವಾಗಿ ನಂಜನಗೂಡು ನಿವಾಸಿ ಶಿವಕುಮಾರ್ ಹಾಗೂ ಕೇರಳ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ ಅವರು ಮೈಸೂರು ಕಡೆಗೆ ತೆರಳುತ್ತಿದ್ದರು. ಮಧ್ಯಾಹ್ನ ಗೋಣಿಕೊಪ್ಪ-ತಿತಿಮತಿ ಹೆದ್ದಾರಿಯ ದೇವರಪುರ ಬಳಿ ಕಾರು ಮತ್ತು ಬೈಕ್‍ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಎರಡೂ ಬೈಕ್‍ಗಳಲ್ಲಿದ್ದ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ವಿರಾಜಪೇಟೆ ಮಾ.21 NEWS DESK : ವಿರಾಜಪೇಟೆಯಲ್ಲಿ ಮುತ್ತಪ್ಪ ತೆರೆ ಜಾತ್ರೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ವಿರಾಜಪೇಟೆ ಮೀನುಪೇಟೆಯ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಾಲಯದಲ್ಲಿ 82ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವವು 3 ದಿನಗಳ ಕಾಲ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ನೆರವೇರಿತು. ಸಾವಿರಾರು ಭಕ್ತಾಧಿಗಳು ದೇವರ ದರ್ಶನ ಪಡೆದರು. ಮುತ್ತಪ್ಪ, ವಸೂರಿಮಾಲಾ, ತಿರುವಪ್ಪನ್, ಗುಳಿಗ, ವಿಷ್ಣುಮೂರ್ತಿ, ಪೌವ್ವದಿ ದೇವತೆಗಳು ಭಕ್ತಾಧಿಗಳಿಗೆ ದರ್ಶನ ನೀಡಿದವು. ಪಯಂಗುತ್ತಿ ಹಾಗೂ ತುಲಾಭಾರ, ಇನ್ನಿತರ ಹರಕೆ ಒಪ್ಪಿಸಿದರು. ಶ್ರೀ ಮುತ್ತಪ್ಪ ದೇವರ ಕಲಶ ಮೆರವಣಿಗೆ ಹಾಗೂ ತಾಲಪ್ಪೋಲಿ ಮೆರವಣಿಗೆ ತೆಲುಗರ ಬೀದಿಯ ಮಾರಿಯಮ್ಮ ದೇವಾಲಯದ ಬಳಿಯಿಂದ ಹೊರಟಿತು. ನಗರದ ಮುಖ್ಯ ರಸ್ತೆಗಳಲ್ಲಿ ಪ್ರಸಿದ್ಧ ಕಲಾ ತಂಡದವರಿಂದ ವಿವಿಧ ಕಲಾ ರೂಪಗಳೊಂದಿಗೆ ನಡೆಯಿತು. ಗಣಪತಿ ಹೋಮ, ಬಳಿಕ ಧ್ವಜಾರೋಹಣ ಮಾಡುವುದರೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು. ಸಂಜೆ ಶ್ರೀ ಮುತ್ತಪ್ಪ ವೆಳ್ಳಾಟಂ ನಡೆಯಿತು. ಬುಧವಾರ ಮದ್ಯಾಹ್ನ ದೇವರ ಮಲೆ ಇಳಿಸುವುದು, ಸಂಜೆ ಶ್ರೀ ಮುತ್ತಪ್ಪ ವೆಳ್ಳಾಟಂ,…

Read More

ಕುಶಾಲನಗರ ಮಾ.21 NEWS DESK :  ಕೂಡಿಗೆ ಕ್ಲಸ್ಟರ್ ಕೇಂದ್ರ ವ್ಯಾಪ್ತಿಯ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಗೊಂಡ ಶಿಕ್ಷಕರನ್ನು  ಕ್ಲಸ್ಟರ್ ಕೇಂದ್ರ ಹಾಗೂ ಸರ್ಕಾರಿ ಶಾಲಾ ಶಿಕ್ಷಕರ ಬಳಗದ ವತಿಯಿಂದ ಕೂಡುಮಂಗಳೂರು ಸಮೀಪದ ವಿಜಯನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನಡೆದ  ಸಮಾರಂಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ನಿವೃತ್ತಗೊಂಡ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಎಂ.ಎಂ.ಸತೀಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜೇನುಕಲ್ಲುಬೆಟ್ಟ ಶಾಲೆಯ ಶಿಕ್ಷಕ ಎಂ.ಎನ್.ರಾಮೇಗೌಡ, ಕೂಡುಮಂಗಳೂರು ಶಾಲೆಯ ಶಿಕ್ಷಕಿ ಎ. ಭೋಜಮ್ಮ, ಸೀಗೆಹೊಸೂರು ಶಾಲೆಯ ಶಿಕ್ಷಕಿ ಟಿ.ಎಸ್.ವಿನೋದ, ಚಿಕ್ಕತ್ತೂರು ಶಾಲೆಯ ಶಿಕ್ಷಕ ಎಚ್.ಎಂ.ಪ್ರಕಾಶ್ , ದೊಡ್ಡತ್ತೂರು ಶಾಲೆಯ ಶಿಕ್ಷಕ ಎಸ್. ಸಿ.ಗೋವಿಂದರಾಜ್ ಸೇರಿದಂತೆ ಇದೇ ವೇಳೆಯಲ್ಲಿ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸಿ ಇದೀಗ ಬೇರೆ ಕ್ಲಸ್ಟರ್ ಗಳ ಶಾಲೆಗಳಿಗೆ ವರ್ಗಾವಣೆಗೊಂಡಿರುವ ಎಸ್.ಆರ್.ಸುನಿತ, ಕೆ.ವಿ.ಕಮಲ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭಾಶಯಗಳನ್ನು ಕೋರಲಾಯಿತು. ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ರಾಜ್ಯ…

Read More

ಮಡಿಕೇರಿ ಮಾ.21 NEWS DESK : ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ 85 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬಂಧಿಸಿದಂತೆ 10, ಸೆಸ್ಕ್‌ 3, ಆಹಾರ 3, ರಸ್ತೆ ಸೇರಿದಂತೆ ವಿವಿಧ ಇಲಾಖೆಗಳ‌ 46 ಒಟ್ಟು 85 ಅರ್ಜಿಗಳು ಸಲ್ಲಿಕೆಯಾದವು. ಪ್ರತಿಯೊಬ್ಬ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕರು, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಅರ್ಜಿ ಪರಿಶೀಲಿಸಿ ಒಂದು ವಾರದಲ್ಲಿ ಬಗೆಹರಿಸಬೇಕು ಎಂದು ಸೂಚಿಸಿದರು.  ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು, ವಿಳಂಭ ಮಾಡಬಾರದು ಎಂದು ಎ.ಎಸ್.ಪೊನ್ನಣ್ಣ ಅವರು ತಾಕೀತು ಮಾಡಿದರು. ಸಭೆ ಆರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು‌ ಸಾರ್ವಜನಿಕರ ಸಮಸ್ಯೆಯನ್ನು ಕಚೇರಿ ಹಂತದಲ್ಲಿಯೇ ಪರಿಹರಿಸುವಂತಾಗಬೇಕು ಎಂದು ಸಲಹೆ ನೀಡಿದರು. ಕಾನೂನು…

Read More

ಮಡಿಕೇರಿ ಮಾ.21 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷದಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಹು ವರ್ಷಗಳಿಂದ ಆದಿವಾಸಿ ಜನರ ಅಭಿವೃದ್ಧಿಗಾಗಿ ಕೇಳಿ ಬರುತ್ತಿದ್ದ ‘ಆದಿವಾಸಿಗಳ ಅಭಿವೃದ್ಧಿ ನಿಗಮ’ ಬಜೆಟ್ ನಲ್ಲಿ ಪ್ರಕಟಿಸುವ ಮೂಲಕ ಸರ್ಕಾರ ಈ ಜನರ ಧ್ವನಿಗೆ ಸ್ಪಂದಿಸಿದೆ. ಹಾಗೆಯೇ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಘೋಷಿಸಲಾಗಿದೆ ಎಂದರು. ವಿ‌.ಬಾಡಗ ಗ್ರಾಮದಲ್ಲಿ 11 ಎಕರೆ ಪ್ರದೇಶದಲ್ಲಿ ‘ಕ್ರೀಡಾ ತರಬೇತಿ ಕೇಂದ್ರ’ ಆರಂಭವಾಗಲಿದೆ. ಇದರಿಂದ ಜಿಲ್ಲೆಯ ವಿದ್ಯಾರ್ಥಿಗಳು ಒಲಿಂಪಿಕ್ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿ ಆಗಲಿದೆ ಎಂದರು. ಸರ್ಕಾರ ಶೋಷಿತರ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಜಿಲ್ಲೆಯ ಎರಡು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವಲ್ಲಿ ಕ್ರಮವಹಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಮಾನವ ಮತ್ತು ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಿಸಲು…

Read More

ಮಡಿಕೇರಿ ಮಾ.21 NEWS DESK : ಹಿರಿಯ ನಾಗರಿಕರ ವೇದಿಕೆ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್, 24 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಕಣ್ಣಿನ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ಖ್ಯಾತ ಕಣ್ಣಿನ ತಜ್ಞರಾದ ಡಾ.ಪ್ರಶಾಂತ್ ಅವರು ಕಣ್ಣಿನ ತಪಾಸಣೆ ನಡೆಸಲಿದ್ದಾರೆ. ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಕೆ.ಎ.ತಿಮ್ಮಯ್ಯ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.21 NEWS DESK : ರೋಟರಿ ಮಡಿಕೇರಿ ವತಿಯಿಂದ ಮೂರ್ನಾಡು ಎಜುಕೇಷನ್ ಟ್ರಸ್ಟ್ ವಿದ್ಯಾ ಸಂಸ್ಥೆಯ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಿಸಲಾಯಿತು. ಗರ್ಭಕಂಠದ ಕ್ಯಾನ್ಸರ್ ಕುರಿತು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ 13 ವಿದ್ಯಾರ್ಥಿಗಳು ಲಸಿಕೆ ಪಡೆದುಕೊಂಡರು. ಲಸಿಕೆ ನೀಡಿ ಮಾತನಾಡಿದ ಸ್ತ್ರೀರೋಗ ತಜ್ಞೆ ಡಾ.ಸುಮಂಗಲಿ ಅವರು ಇತ್ತೀಚಿನ ದಿನಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುತ್ತಿದ್ದು, ಜಾಗೃತಿ ಅಗತ್ಯ. 9 ರಿಂದ 14 ವಯಸ್ಸಿನ ಮಕ್ಕಳಿಗೆ ಹೆಚ್‍ಪಿವಿ ಲಸಿಕೆ ನೀಡಲಾಗುತ್ತಿದೆ. ಈ ರೋಗದ ಬಗ್ಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದರು. *ನಿರಂತರ ಜಾಗೃತಿ* ಕಳೆದ ವರ್ಷ ರೋಟರಿ ವತಿಯಿಂದ 51 ವಿದ್ಯಾರ್ಥಿನಿಯರಿಗೆ ಹೆಚ್‍ಪಿವಿ ಲಸಿಕೆ ನೀಡಲಾಗಿತ್ತು. ಈ ಬಾರಿ 250 ವಿದ್ಯಾರ್ಥಿನಿಯರ ಗುರಿ ಹೊಂದಲಾಗಿತ್ತಾದರೂ 13 ವಿದ್ಯಾರ್ಥಿನಿಯರು ಸ್ವಯಂ ಇಚ್ಛೆಯಿಂದ ಲಸಿಕೆ ಪಡೆದುಕೊಂಡಿದ್ದಾರೆ. ಸರಕಾರದಿಂದ ಲಸಿಕೆ ನೀಡುವ ಯೋಜನೆಯ ಮೂಲಕ ಲಸಿಕೆ ಪಡೆದುಕೊಳ್ಳುವ ಇಂಗಿತವನ್ನು…

Read More

ಮಡಿಕೇರಿ NEWS DESK ಮಾ.21 : ಕೊಡಗು ಕಲಾವಿದರ ಸಂಘವನ್ನು ಪುನರ್ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಹಾಗೂ ಸಹ ಕಾರ್ಯದರ್ಶಿಯಾಗಿ ಮಲ್ಲಮಾಡ ಶ್ಯಾಮಲ ಸುನಿಲ್ ಅವಿರೋಧವಾಗಿ ಆಯ್ಕೆಯಾದರು. ಇತರ ಪದಾಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಪ್ರಮುಖರು ತಿಳಿಸಿದರು.

Read More