ಮಡಿಕೇರಿ ಸೆ.11 NEWS DESK : ಕರ್ನಾಟಕ ಅರಣ್ಯ ಇಲಾಖೆ ಕೊಡಗು ವೃತ್ತ ಮಡಿಕೇರಿ ವತಿಯಿಂದ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಹಿನ್ನೆಲೆ ನಗರದ ಅರಣ್ಯ ಭವನ ಆವರಣದಲ್ಲಿರುವ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಪುಷ್ಪಗುಚ್ಚ ಇರಿಸಿ, ಗೌರವ ನಮನ ಸಲ್ಲಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್, ಉಪ ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ತಹಶೀನ್ ಬಾನು ದವಡಿ, ಕೆ.ಪಿ.ಗೋಪಾಲ್, ಸಂದೀಪ್ ಪಿ.ಅಭಯಂಕರ್, ಶ್ರೀನಿವಾಸ್ ನಾಯಕ್, ವಿ. ಸೆಂದಿಲ್ ಕುಮಾರ್, ನಿವೃತ್ತ ಉಪ ಅರಣ್ಯ ಸಂರಕ್ಷಾಧಿಕಾರಿ ಜಯ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್, ವಲಯ ಅರಣ್ಯಾಧಿಕಾರಿ ಶಂಕರ, ಪತ್ರಾಂಕಿತ ವ್ಯವಸ್ಥಾಪಕರಾದ ಸರೋಜ ಪಿ.ಪಿ., ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ ಕೆ.ಎಸ್., ಆನೆ ಜಮೇದಾರ್ ಬೋಜಪ್ಪ ಜೆ.ಕೆ., ಗಸ್ತು ಅರಣ್ಯ…
ಲೇಖಕ: admin
ಮಡಿಕೇರಿ ಸೆ.11 NEWS DESK : ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಕಳೆದ 30 ವರ್ಷಗಳಲ್ಲಿ ಗಮನಿಸಿದಾಗ ಈ ಬಾರಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತುಂಬಾ ಕಡಿಮೆಯಾಗಿದೆ. ಆದ್ದರಿಂದ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಎಲ್ಲೆಡೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ನಗರದ ಅರಣ್ಯ ಭವನದ ಆವರಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಹಿನ್ನೆಲೆ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಇರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಮಲೆನಾಡು ಭಾಗದಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಸಹ ಮಳೆಯಾಗುತ್ತಿತ್ತು. ಆದರೆ ಈಗ ಮಳೆ ಇಲ್ಲದಂತಾಗಿ, ಬೇಸಿಗೆ ವಾತಾವರಣ ಕಾಣುತ್ತಿದೆ. ಆದ್ದರಿಂದ ಪರಿಸರ ಮತ್ತು ಅರಣ್ಯ ಸಂರಕ್ಷಣೆಗೆ ಹಿಂದಿಗಿಂತ ಇಂದು ಹೆಚ್ಚಿನ ಒತ್ತು ನೀಡುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ…
ಹುದಿಕೇರಿ, NEWS DESK ಸೆ.11: ಹುದಿಕೇರಿಯ ಜನತಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ ತ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರ ತಂಡ ರನ್ನರ್ಸ್ ಸ್ಥಾನ ಪಡೆದುಕೊಂಡಿದೆ. ತಂಡದಲ್ಲಿದ್ದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಂಡದ ಆಟಗಾರರಾದ ಸಣ್ಣುವಂಡ ವಚನ್, ಪ್ರೀತಮ್, ಶಿಬಿಲ್ ಪಿ.ಆರ್., ಮೊಹಮ್ಮದ್ ರಾಹೀಲ್, ಕನೀಶ್ ಪುಟ್ಟಪ್ಪ, ನೆಲ್ಲೀರಾ ನಿಶ್ಚಿತ್ ನಾನಯ್ಯ ಪಿ., ಐಚಂಡ ವಂಶಿಕ್ ಕುಟ್ಟಪ್ಪ, ಪಾಲೇಂಗಡ ವಿಹಾನ್ ಪೂವಣ್ಣ, ಮೊಹಮ್ಮದ್ ಶಾಝೀಲ್, ಕೊಟ್ಟೆಚಿರ ಶಿವಾನ್ ಎನ್., ಚಿರಾಗ್ ಪಿ.ಆರ್., ಮೊಹಮ್ಮದ್ ಅನಸ್, ಪಾಲೇಚಂಡ ಪ್ರಧಾನ ಅಪ್ಪಚ್ಚು ಹಾಗೂ ಬೈಮನ ಚೇತನ್ ಉತ್ತಮ ಪ್ರದರ್ಶನ ನೀಡಿದರು. ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ತರಬೇತಿ ನೀಡಿದ್ದರು. ತಂಡದಲ್ಲಿದ್ದ ಮೂವರು ವಿದ್ಯಾರ್ಥಿಗಳಾದ ಮೊಹಮ್ಮದ್ ಶಾಝೀಲ್, ಸಣ್ಣುವಂಡ ವಚನ್ ಹಾಗೂ ನಲ್ಲೆರ ನಿಶ್ಚಿತ್ ನಾನಯ್ಯ ಅವರು ಜಿಲ್ಲಾ ಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಅತ್ಯುತ್ತಮ…
ಸೋಮವಾರಪೇಟೆ, NEWS DESK ಸೆ.11: ಹೋಮ್ಸ್ಟೇ ಅಸೋಸಿಯೇಷನ್, ಸೋಮವಾರಪೇಟೆ ವತಿಯಿಂದ ಕೇರಳದ ಕಾಸರಗೋಡು ಹಾಗೂ ಕಣ್ಣೂರು ಜಿಲ್ಲೆಗಳಿಗೆ ಎರಡು ದಿನಗಳ ಅಧ್ಯಯನ ಪ್ರವಾಸವನ್ನು ಆಯೋಜಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ. ರೋಹಿತ್ ಅವರು ಪ್ರವಾಸಕ್ಕೆ ಚಾಲನೆ ನೀಡಿದರು. ಪ್ರವಾಸದ ಸಂದರ್ಭದಲ್ಲಿ ಕಾಸರಗೋಡು ಹಾಗೂ ಕಣ್ಣೂರು ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಲಾಯಿತು. ಅಲ್ಲಿನ ಪ್ರವಾಸೋದ್ಯಮ ವ್ಯವಸ್ಥೆ, ಹೋಮ್ಸ್ಟೇ ಚಟುವಟಿಕೆಗಳು ಹಾಗೂ ಪ್ರವಾಸಿಗರಿಗೆ ಕಲ್ಪಿಸಿರುವ ಸೌಲಭ್ಯಗಳ ಕುರಿತು ಅಸೋಸಿಯೇಷನ್ ಸದಸ್ಯರು ಅಧ್ಯಯನ ನಡೆಸಿದರು. ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದ್ ಎಸ್.ಎಲ್., ಖಜಾಂಚಿ ಪ್ರೀತಮ್ ಡಿ.ಪಿ. ಸೇರಿದಂತೆ ಅಸೋಸಿಯೇಷನ್ನ ಎಲ್ಲಾ ಸದಸ್ಯರು ಅಧ್ಯಯನ ಪ್ರವಾಸದಲ್ಲಿ ಭಾಗವಹಿಸಿದ್ದರು.
ಮಡಿಕೇರಿ, NEWS DESK ಸೆ. 11: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ಪ್ರತಿಭಟನೆ ನಡೆಸಿದ ಪರಿಣಾಮ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ರೈತರು, ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸಬೇಕೆಂದು ಪಟ್ಟು ಹಿಡಿದರು. ಪರಿಣಾಮ ಮೈಸೂರು, ವೀರಾಜಪೇಟೆ ಹಾಗೂ ಮಂಗಳೂರು ರಸ್ತೆಗಳಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಹೋರಾಟ ಸಮಿತಿ ಸಂಚಾಲಕ ಸುರೇಶ್ ಚಕ್ರವರ್ತಿ ಮಾತನಾಡಿ, ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಿ ಕಸ್ತೂರಿ ರಂಗನ್ ವರದಿಯ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಮನವಿ…
ಮಡಿಕೇರಿ NEWS DESK ಸೆ.11 : ಗೌರಿ ಗಣೇಶ, ದಸರಾ ಹಾಗೂ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ಧ್ವನಿವರ್ಧಕಗಳಲ್ಲಿ ‘Pressure Mid’ ಅಳವಡಿಸುವುದು ಹಾಗೂ ‘Pressure Mid’ ಅಳವಡಿಸಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್.ಜೆ., ಭಾ.ಆ.ಸೇ. ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಹಬ್ಬಗಳ ಸಂದರ್ಭದಲ್ಲಿ ಧ್ವನಿವರ್ಧಕಗಳ ಬಳಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ, ನಿಯಮ ಮೀರಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಾಗೂ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಹಿಂದಿನ ವರ್ಷಗಳಲ್ಲಿ ಧ್ವನಿಯ ತೀವ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ‘Pressure Mid’ ಅಳವಡಿಸಿ ಬಳಸಿರುವುದು ಗಮನಕ್ಕೆ ಬಂದಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳ ವರದಿಯ ಆಧಾರದ ಮೇಲೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. 2026ರ ಸೆಪ್ಟೆಂಬರ್ 14ರಿಂದ…
ಸುಂಟಿಕೊಪ್ಪ, NEWS DESK ಸೆ.11: ಟೀಮ್ ಅರ್ಜುನ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ದಸರಾ ಹಬ್ಬದ ಪ್ರಯುಕ್ತ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ನೂತನ ಪದಾಧಿಕಾರಿಗಳ ಆಯ್ಕೆ ಟೀಮ್ ಅರ್ಜುನ ತಂಡದ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹರ್ಷತ್, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜು (ಜೂಚು), ಸಹ ಕಾರ್ಯದರ್ಶಿಯಾಗಿ ಅಯ್ಯಪ್ಪ, ಖಜಾಂಚಿಯಾಗಿ ಸಿ.ಎ. ಸಚಿನ್, ಸಹ ಖಜಾಂಚಿಯಾಗಿ ಪ್ರವೀಣ್, ಕ್ರೀಡಾ ಕಾರ್ಯದರ್ಶಿಗಳಾಗಿ ಸಂಶಾದ್ ಹಾಗೂ ಕೇಶವ ಅವರನ್ನು ನೇಮಕ ಮಾಡಲಾಗಿದೆ. ಮೈದಾನದ ಉಸ್ತುವಾರಿಗಳಾಗಿ ಪ್ರಜ್ವಲ್, ಸ್ವಾಮಿ ಹಾಗೂ ಅವಿನಾಶ್, ವೇದಿಕೆ ಸಮಿತಿಯ ಉಸ್ತುವಾರಿಗಳಾಗಿ ಇಬ್ರಾಹಿಂ, ಜಗತ್ (ಚಿಟ್ಟೆ), ದರ್ಶನ್ ಹಾಗೂ ಆರಿಫ್ ಅವರನ್ನು ನೇಮಕಗೊಳಿಸಲಾಗಿದೆ. ಸಲಹೆಗಾರರಾಗಿ ಜಸ್ಟಿನ್, ಈಶ್ವರ್, ಪ್ರಶಾಂತ್ (ಗೋಪು) ಹಾಗೂ ಪ್ರವೀಣ್ (ತೋಕು), ಸದಸ್ಯರಾಗಿ ನವೀನ, ಅಭಿ, ಕೃತಿಕ್, ಸಚಿನ್, ಸಹದ್ ಹಾಗೂ ವಿಪಿನ್ (ಕುಟ್ಟ) ಅವರನ್ನು ನೇಮಕ…
ಸುಂಟಿಕೊಪ್ಪ, NEWS DESK ಸೆ.11: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಚೆಸ್ಕಾಂ ಕಚೇರಿ ಸಮೀಪ ನಡೆದಿದೆ. ಮೂಲತಃ ಅಸ್ಸಾಂ ರಾಜ್ಯದವರಾದ ಸಿರಾಜು ರೆಹಮಾನ್ ಮತ್ತು ಜಹನಾರ್ ದಂಪತಿ ಕೂಲಿ ಕೆಲಸಕ್ಕಾಗಿ ಸುಂಟಿಕೊಪ್ಪಕ್ಕೆ ಬಂದು ಹೊಸ ಬಡಾವಣೆಯಲ್ಲಿ ನೆಲೆಸಿದ್ದರು. ಇವರ ಪುತ್ರಿ ಮುಸುಮತ್ ಪಿಂಕಿಕತ್ತುಲ್ (6) ಹೆದ್ದಾರಿ ಬದಿಯ ಅಂಗಡಿಯೊಂದರಲ್ಲಿ ಮಿಠಾಯಿ ಖರೀದಿಸಲು ತೆರಳಿದ್ದಳು. ಮಿಠಾಯಿ ಖರೀದಿಸಿದ ಬಳಿಕ ರಸ್ತೆ ದಾಟಲು ಒಂದೆರಡು ಹೆಜ್ಜೆ ಹಾಕುತ್ತಿದ್ದ ಸಂದರ್ಭದಲ್ಲಿ ಮೈಸೂರು-ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಬಾಲಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ಬಾಲಕಿಯನ್ನು ಸ್ಥಳೀಯರು ಸುಂಟಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಬಾಲಕಿ ಮೃತಪಟ್ಟಿದ್ದಾಳೆ. ಈ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಸುಂಟಿಕೊಪ್ಪ, NEWS DESK ಸೆ.10: ಕಂಬಿಬಾಣೆಯ ಕಮಲ ನೆಹರು ಯುವತಿ ಮಂಡಳಿ ವತಿಯಿಂದ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಸೆ.13ರಂದು ಭಾನುವಾರ ಕಂಬಿಬಾಣೆಯ ಅನ್ನಪೂರ್ಣೇಶ್ವರಿ ಫಂಕ್ಷನ್ ಹಾಲ್ನಲ್ಲಿ ನಡೆಯಲಿದೆ ಎಂದು ಕಮಲ ನೆಹರು ಯುವತಿ ಮಂಡಳಿಯ ಅಧ್ಯಕ್ಷೆ ಅಕ್ಷತಾ ಯೋಗೇಶ್ ತಿಳಿಸಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಶ್ರೀಕೃಷ್ಣನ ವಿವಿಧ ಛದ್ಮವೇಷ ಸ್ಪರ್ಧೆ, ಮುದ್ದುರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಗಾಗಿ ಯಶೋಧೆ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಅದೇ ರೀತಿ 1ರಿಂದ 15 ವರ್ಷದೊಳಗಿನ ಮಕ್ಕಳಿಗೆ ವಿವಿಧ ಛದ್ಮವೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಹಿಳೆಯರು ಹಾಗೂ ಪುರುಷರಿಗಾಗಿ ಪ್ರತ್ಯೇಕವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನೂ ಏರ್ಪಡಿಸಲಾಗಿದೆ. ಅಪರಾಹ್ನ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಸಂಘಟನೆಗಳ ಅಧ್ಯಕ್ಷರು ಹಾಗೂ ಸಾರ್ವಜನಿಕ ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಅಕ್ಷತಾ ಯೋಗೇಶ್ ತಿಳಿಸಿದ್ದಾರೆ.
ಮಡಿಕೇರಿ, NEWS DESK ಸೆ.11 : ಮಡಿಕೇರಿ ದಸರಾ ಜನೋತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಯುವ ದಸರಾ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಾಜ್ಯಮಟ್ಟದ ಈ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧೆಯಲ್ಲಿ ಶಾಸ್ತ್ರೀಯ ನೃತ್ಯ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ನೃತ್ಯ ಪ್ರಕಾರವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಸ್ಪರ್ಧೆಗೆ ಯಾವುದೇ ವಯೋಮಿತಿಯ ನಿರ್ಬಂಧವಿಲ್ಲ. ಪ್ರತಿ ತಂಡದಲ್ಲಿ ಕನಿಷ್ಠ 12 ಹಾಗೂ ಗರಿಷ್ಠ 30 ಮಂದಿ ಕಲಾವಿದರು ಇರಬೇಕು. ನೃತ್ಯ ಪ್ರದರ್ಶನಗಳು ಸಾಮಾಜಿಕ ಪರಿಕಲ್ಪನೆ ಹಾಗೂ ಉತ್ತಮ ಸಂದೇಶಗಳನ್ನು ಒಳಗೊಂಡಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ-ತೊಡುಗೆಗಳು ಸಭ್ಯವಾಗಿರಬೇಕು. ಯಾವುದೇ ವ್ಯಕ್ತಿ ಅಥವಾ ಸಮುದಾಯದ ನಂಬಿಕೆಗೆ ನೋವುಂಟು ಮಾಡುವಂತಹ ಪ್ರದರ್ಶನಗಳಿಗೆ ಅವಕಾಶವಿರುವುದಿಲ್ಲ. ಪ್ರತಿ ತಂಡಕ್ಕೆ 10+2 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಬೆಂಕಿ, ಬಣ್ಣ, ನೀರು ಸೇರಿದಂತೆ ವೇದಿಕೆಗೆ ಹಾನಿ ಉಂಟುಮಾಡುವ ಯಾವುದೇ ಪರಿಕರಗಳನ್ನು ಬಳಸುವಂತಿಲ್ಲ. ಸ್ಪರ್ಧೆಯ ತೀರ್ಪುಗಾರರ ತೀರ್ಮಾನವನ್ನು ಎಲ್ಲಾ ಸ್ಪರ್ಧಿಗಳು ಗೌರವಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು.…






