ಮಡಿಕೇರಿ ಮಾ.30 NEWS DESK : ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಮಾಜದ ವತಿಯಿಂದ 10ನೇ ವರ್ಷದ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.18 ಮತ್ತು 19 ರಂದು ನಡೆಯಲಿದೆ ಎಂದು ಸಮಾಜದ ಗೌರವಾಧ್ಯಕ್ಷ ಪಿ.ಎಂ.ರವಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದರು. ಕೊಡಗನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಮೊಗೇರ ಬಾಂಧವರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾಜ ಬಾಂಧವರನ್ನು ಒಗ್ಗೂಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೊಗೇರ ಸಮಾಜದ ಪ್ರತಿಭಾವಂತರನ್ನು ಗುರುತಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು. *60 ತಂಡಗಳ ನೋಂದಣಿ* ರಾಜ್ಯ ಮಟ್ಟದ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೆ 60 ತಂಡಗಳು ನೋಂದಣಿ ಮಾಡಿಕೊಂಡಿವೆ. 4 ಓವರ್ಗಳಿಗೆ ಸೀಮಿತವಾಗಿ ಪಂದ್ಯಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಏ.18ರಂದು ಬೆಳಗ್ಗೆ…
ಲೇಖಕ: admin
ಮಡಿಕೇರಿ ಮಾ.30 NEWS DESK : ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದ ವತಿಯಿಂದ ಏ.5 ರಿಂದ ಮೂರು ದಿನಗಳ ಕಾಲ ಕ್ರೀಡಾಕೂಟ ಹಾಗೂ ಏ.11 ರಂದು ಡ್ಯಾನ್ಸ್ ಮೇಳ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ಮಾಲೀಕ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ ಅವರು ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಆಕರ್ಷಕ ಡ್ಯಾನ್ಸ್ ಮೇಳದ ಕುರಿತು ಮಾಹಿತಿ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಖಡ್ಡಾಯವಾಗಿ ಸ್ಥಳೀಯ ಆಟೋ ಸಂಘಟನೆಗಳಲ್ಲಿ ಸದಸ್ಯರಾಗಿರುವ ಕೊಡಗಿನ ಆಟೋ ಚಾಲಕರಿಗೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈಗಾಗಲೇ 16ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಉದ್ಘಾಟನಾ ಪಂದ್ಯದಲ್ಲಿ 5 ಓವರ್ ಗಳಿಗೆ ಸೀಮಿತವಾಗಿ ಪೊಲೀಸ್ ಇಲಾಖಾ ಸಿಬ್ಬಂದಿಗಳು, ವಕೀಲರು ಹಾಗೂ ವೈದ್ಯರ ತಂಡವನ್ನು ನಿರೀಕ್ಷಿಸಲಾಗಿದೆ. ವಿಜೇತ ತಂಡಕ್ಕೆ ವಿನ್ನರ್ ಮತ್ತು ರನ್ನರ್ ಟ್ರೋಫಿ ನೀಡಲಾಗುವುದು. ಆಟೋ ಚಾಲಕರ ನಡುವೆ ನಡೆಯುವ ಪಂದ್ಯಾವಳಿಯ ವಿಜೇತ ತಂಡಕ್ಕೆ 40ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ…
ಮಡಿಕೇರಿ ಮಾ.30 NEWS DESK : ಮಾಯಮುಡಿಯಲ್ಲಿ ಆಯೋಜನೆಗೊಂಡ ಎಂಪಿಎಲ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಮಾಯಮುಡಿ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿ, ಶುಭ ಕೋರಿದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆಲಿರ ರಶೀದ್, ಪಕ್ಷದ ಪ್ರಮುಖರು ಅಜ್ಜಿಕುಟ್ಟಿರ ಪೊನ್ನು, ಯಸ್ವಿನ್,ಸಿದ್ದು ನಾಚಪ್ಪ, ಮಚ್ಚಮಾಡ ಮನು,ಅಜ್ಜಿಕುಟ್ಟಿರ ಗಿರೀಶ್, ಮನು, ಹಾಗೂ ಕಾರ್ಯಕ್ರಮ ಆಯೋಜಕರು, ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಮಾ.30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಹಿಂದಿ ವಿಭಾಗ ಮತ್ತು ಕೇಂದ್ರೀಯ ಹಿಂದಿ ಸಂಸ್ಥಾನ, ಆಗ್ರಾದ ಪ್ರಾದೇಶಿಕ ಕೇಂದ್ರ ಮೈಸೂರು ಇವರ ಸಹ ಭಾಗಿತ್ವದಲ್ಲಿ 12 ದಿನಗಳ “ಸಂಚೇತನಾ ಶಿಬಿರ” ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ವಿದ್ಯಾರ್ಥಿಗಳ ಪ್ರತಿಭೆ ಅನಾವರಣ, ಭಾಷೆಯ ಕಲಿಕೆ ಮತ್ತು ವಿವಿಧ ಅವಕಾಶಗಳ ಕುರಿತು ಮಾಹಿತಿ ಪಡೆಯಲು 12 ದಿನಗಳ ಈ ಶಿಬಿರ ಹೆಚ್ಚು ಸಹಕಾರಿಯಾಗಿದೆ ಎಂದರು. ಕೇಂದ್ರೀಯ ಹಿಂದಿ ಸಂಸ್ಥಾನದ ಪ್ರಾದೇಶಿಕ ಕೇಂದ್ರ ಮೈಸೂರಿನ ನಿರ್ದೇಶಕ ಪ್ರೊ.ಯೋಗೇಂದ್ರ ಮಿಶ್ರ ಅವರು ಕಾರ್ಯಕ್ರಮದ ಧ್ಯೇಯೋದ್ದೇಶ ಹಾಗೂ ವಿದ್ಯಾರ್ಥಿಗಳು ಕಲಿಯಬೇಕಾದ ವಿಷಯಗಳನ್ನು ವಿವರಿಸಿದರು. ಕೇಂದ್ರೀಯ ಹಿಂದಿ ಸಂಸ್ಥಾನ ಆಗ್ರಾ ನಿರ್ದೇಶಕ ಪ್ರೊ.ವಿನಯ ಬಾಬುರಾವ್ ಕುಲಕರ್ಣಿ ಆನ್ ಲೈನ್ ಮೂಲಕ ಮಾತನಾಡಿ ಶುಭ ಹಾರೈಸಿದರು. ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಪ್ರೊ.ಮೇಜರ್ ಡಾ.ರಾಘವ ಬಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…
ಮಡಿಕೇರಿ ಮಾ.30 NEWS DESK : ಸಿದ್ದಾಪುರ ಗ್ರಾಮದ ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟೆ ನೀಡಿ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡರು. ಉತ್ಸವದ ಸಂದರ್ಭದಲ್ಲಿ ಶ್ರೀ ದೇವರ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ ವಲಯ ಅಧ್ಯಕ್ಷರಾದ ಪ್ರತೀಶ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ, ಪಕ್ಷದ ಮುಖಂಡರು ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಮಲ್ದಾರೆ ಪಂಚಾಯಿತಿ ಅಧ್ಯಕ್ಷರು ಮಾಲತಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಮಾ.30 NEWS DESK : ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಬಿ.ಡಿ. ಜಗದೀಶ್ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಗೌರಧ್ಯಕ್ಷರಾಗಿ ಬಿ.ಬಿ. ಐತಪ್ಪ ರೈ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರತ್ನಾಕರ ರೈ, ಸದಾಶಿವ ರೈ, ಲೀಲಾಧರ ರೈ, ಜನಾರ್ಧನ ಶೆಟ್ಟಿ ಮತ್ತು ಸದಾನಂದ ರೈ, ಖಜಾಂಚಿಯಾಗಿ ಪ್ರಮೋದ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿಯಾಗಿ ಅಪ್ಪು ಬಾಲಕೃಷ್ಣ ರೈ, ಸಹಕಾರ್ಯದರ್ಶಿಗಳಾಗಿ ಬಿ.ಸಿ. ಹರೀಶ್ ರೈ ಮತ್ತು ಮನೋಜ್ ಶೆಟ್ಟಿ, ಸಹ ಖಜಾಂಚಿಯಾಗಿ ಜಗನ್ನಾಥ್ ರೈ ಮೂರ್ನಾಡು ಅವರನ್ನು ಆಯ್ಕೆ ಮಾಡಲಾಗಿದೆ. ಕ್ರೀಡಾ ಸಮಿತಿಯ ಅಧ್ಯಕ್ಷರಾಗಿ ಶರತ್ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಪ್ರತಿಮಾ ಹರೀಶ್ ರೈ, ಸ್ವಚ್ಛತಾ ಆಂದೋಲನದ ಸಂಚಾಲಕರಾಗಿ ನಗರಸಭಾ ಸದಸ್ಯ ಅರುಣ್ ಶೆಟ್ಟಿ, ಮಾಧ್ಯಮ ಸಂಯೋಜಕರಾಗಿ ಹೇಮಂತ್ ಕುಮಾರ್ ಶೆಟ್ಟಿ, ಸಾಮಾಜಿಕ ಜಾಲತಾಣ ಸಂಯೋಜಕರಾಗಿ ಕಿಶೋರ್ ರೈ…
ಮಡಿಕೇರಿ NEWS DESK ಮಾ.30 : ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಏ.2 ರಂದು ಮಡಿಕೇರಿಯಲ್ಲಿ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸತ್ಯಾಗ್ರಹ ನಡೆಸಿ ಭಾರತದ ರಾಷ್ಟçಪತಿ, ಪ್ರಧಾನಮಂತ್ರಿ, ಕೇಂದ್ರ ಕಾನೂನು ಮಂತ್ರಿ ಹಾಗೂ ಭಾರತದ ಚುನಾವಣಾ ಆಯೋಗಕ್ಕೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೀಡಲಾಗುವುದು ಎಂದು ಹೇಳಿದ್ದಾರೆ.ಕೊಡವರು ಪ್ರಕೃತಿಯ ಆರಾಧಕರು, ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಇವರು ಆದಿಮಸಂಜಾತ ಸಮುದಾಯದವರಾಗಿದ್ದು, ಭಾರತದ ಪ್ರಜಾಪ್ರಭುತ್ವ ರಚನೆಯಲ್ಲಿ ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ವಿಶೇಷ ಪ್ರಾತಿನಿಧ್ಯದ ಅಗತ್ಯವಿದೆ. ಈ “ವರ್ಚುವಲ್ ಕ್ಷೇತ್ರ” ವು ಯಾವುದೇ ನಿರ್ದಿಷ್ಟ ಭೌಗೋಳಿಕ ಗಡಿಗಳನ್ನು ಹೊಂದಿರುವುದಿಲ್ಲ. 1958 ರಲ್ಲಿ…
ಮಡಿಕೇರಿ NEWS DESK ಮಾ.29 : “ಕೆಪಿಎಸ್ ಮ್ಯಾಗ್ನೆಟ್” ಯೋಜನೆ ಜಾರಿಯಾದರೆ ಕೊಡಗಿನ ಬಹುತೇಕ ಸರಕಾರಿ ಶಾಲೆಗಳು ಮುಚ್ಚುವ ಸಾಧ್ಯತೆಗಳಿದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಯೂನಿಯನ್(ಎಐಡಿಎಸ್ಓ) ಸಂಘಟನೆ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಕುಶಾಲನಗರದ ಮಹಿಳಾ ಸಮಾಜ ಭವನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದ ಪ್ರಮುಖರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಎಐಡಿಎಸ್ಓ ರಾಜ್ಯ ಉಪಾಧ್ಯಕ್ಷರಾದ ಅಭಯ ದಿವಾಕರ್ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರವು “ಸಂಯೋಜನೆ” ಹೆಸರಿನಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿತ್ತು. ಆ ಸಂದರ್ಭ ರಾಜ್ಯಾದ್ಯಂತ ಹೋರಾಟ ನಡೆಸಿ ಸರಕಾರಿ ಶಾಲೆಗಳನ್ನು ಉಳಿಸಿದ್ದೆವು. ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿಯಲ್ಲಿ 40ಸಾವಿರ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರಕಾರಿ ಶಾಲೆಗಳನ್ನು ಮುಚ್ಚಿ ಬಡ ವಿದ್ಯಾರ್ಥಿಗಳಿಂದ ಶಿಕ್ಷಣವನ್ನು ಕಸಿದುಕೊಳ್ಳುವುದೇ ಸರಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸರಕಾರವು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕಿನಿoದ 2,500 ಕೋಟಿ ಸಾಲ ಮಾಡಿ ತೆರೆಯುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು…
ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಅತ್ಯಂತ ಸಂಭ್ರಮ ಸಡಗರಗಳಿಂದ, ಎಲ್ಲಾ ನಿಲಯಗಳ ವಿದ್ಯಾರ್ಥಿಗಳು ಅತ್ಯುತ್ಸಾಹದ ಪಾಲ್ಗೊಲ್ಳುವಿಕೆಯ ಮೂಲಕ ನಡೆಯಿತು. ಈ ಸಾಂಸ್ಕೃತಿಕ ಹಬ್ಬದಲ್ಲಿ ಸೃಜನಶೀಲತೆ ಮತ್ತು ಪ್ರತಿಭೆಯನ್ನು ಪ್ರದರ್ಶಿಸಲು ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಮೂಹ ಗೀತೆ ಗಾಯನ ಸ್ಪರ್ಧೆ “ಭವಿಷ್ಯ ನಮ್ಮದು” ಎನ್ನುವ ಶೀರ್ಷಿಕೆಯಡಿ, ಕಿರುನಾಟಕ “ಡಿಜಿಟಲ್ ಕನ್ನಡಿ: ತಂತ್ರಜ್ಞಾನ ಮತ್ತು ನೈತಿಕತೆ” ಎನ್ನುವ ವಿಷಯದಡಿ, ಜಾನಪದ ನೃತ್ಯ ಸ್ಪರ್ಧೆ ಸ್ಥಳೀಯ ಸಂಪ್ರದಾಯಗಳು ಮತ್ತು ಪುರಾಣ ಕಥೆಗಳಿಗೆ ಸಂಬಧಿಸಿದAತೆ ಹಾಗೂ ಸಮೂಹ ನೃತ್ಯ “ಫ್ರೀ-ಸ್ಟೈಲ್ ಸಿನಿಮಾಟಿಕ್” ಶೈಲಿಯಲ್ಲಿ ಅತ್ಯಾಕರ್ಷಕವಾಗಿ ಮೂಡಿ ಬಂದಿತು. ತೀವ್ರ ಪೈಪೋಟಿಯಿಂದ ಕುಡಿದ್ದ ಸ್ಪರ್ಧೆಗಳಲ್ಲಿ ಕಾರ್ಯಪ್ಪ ನಿಲಯವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಭಾವಪೂರ್ಣ ಬೀಳ್ಕೊಡುಗೆ-ಇದೇ ಸಂದರ್ಭ ಶಾಲೆಯ 13ನೇ ಬ್ಯಾಚ್ನ 12ನೇ ತರಗತಿಯ ಕೆಡೆಟ್ಗಳಿಗೆ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಉಪ…
ಸುರಪುರ NEWS DESK ಮಾ.29 : ಈಜಲೆಂದು ಕೃಷಿ ಹೊಂಡಕ್ಕೆ ಇಳಿದಿದ್ದ ನಾಲ್ವರು ಮಕ್ಕಳು ಮುಳುಗಿ ದುರಂತ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕಿರಣ್(6), ಬಸಮ್ಮ(11), ಶರತ್(6) ಹಾಗೂ ಹನುಮೇಶ್(7) ಮೃತ ದುರ್ದೈವಿಗಳಾಗಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.






