ಲೇಖಕ: admin

ಸುಂಟಿಕೊಪ್ಪ, NEWS DESK ಆ.25: ಸುಂಟಿಕೊಪ್ಪದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದರೂ ಮುಸ್ಲಿಂ ಬಾಂಧವರು ಮಹಮ್ಮದ್ ಪೈಗಂಬರರ 1501ನೇ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯ ಸಂಕೇತವಾಗಿ ಸಡಗರ ಸಂಭ್ರಮದಿಂದ ಆಚರಿಸಿದರು. ಮಳೆಯನ್ನು ಲೆಕ್ಕಿಸದೆ ಸಣ್ಣಪುಟ್ಟ ಮಕ್ಕಳು, ಯುವಕರು ಹಾಗೂ ಹಿರಿಯರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ಮಂಗಳವಾರ ಸುಂಟಿಕೊಪ್ಪ ಪಟ್ಟಣದ ಸುನ್ನಿ ಶಾಫಿ ಜುಮ್ಮ ಮಸ್ಜಿದ್, ಸುನ್ನಿ ಹನಫಿ ಮುಸ್ಲಿಂ ಜಮಾಅತ್, ಮುನ್ವರಲ್ ಇಸ್ಲಾಂ ಮದರಸ, ಸುನ್ನಿ ಶಾಫಿ ಜಮಾಅತ್ ಹಾಗೂ ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್‌ಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಮಸೀದಿಗಳ ಮದರಸಗಳಲ್ಲಿ ವಿದ್ಯಾಭ್ಯಾಸ ನಡೆಸುವ ಮಕ್ಕಳಿಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಸೀದಿಗಳ ಮೌಲವಿಗಳು ಮುಸ್ಲಿಂ ಬಾಂಧವರಿಗೆ ಧಾರ್ಮಿಕ ಪ್ರವಚನಗಳನ್ನು ನೀಡಿದರು. ಮಂಗಳವಾರ ಬೆಳಿಗ್ಗೆ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಂ ಬಾಂಧವರು ವಿಶೇಷ ಉಡುಗೆಗಳನ್ನು ಧರಿಸಿ, ಹಾಡಿನೊಂದಿಗೆ ದಫ್ ಬಡಿಯುತ್ತಾ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ಶಾಲಾ ಮಕ್ಕಳು…

Read More

ಮೈಸೂರು, NEWS DESK ಆ.25: ಸ್ನೇಹದ ಕಡಲು ಬಳಗದ ವತಿಯಿಂದ ಹಿರಿಯ ಸಂಗೀತ ಕಲಾವಿದ, ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರ 81ನೇ ಹುಟ್ಟುಹಬ್ಬವನ್ನು ಮೈಸೂರು ಕೊಡವ ಸಮಾಜದ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಹಾಗೂ ಅವರ ಧರ್ಮಪತ್ನಿಯನ್ನು ಗೌರವಿಸಿ ಸನ್ಮಾನಿಸಲಾಯಿತು. ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬದ ಸಂಭ್ರಮ ಆಚರಿಸಿ, ಶ್ರೀಕೃಷ್ಣನ ಸ್ಮರಣಿಕೆಯನ್ನು ನೀಡಿ ದಂಪತಿಯನ್ನು ಗೌರವಿಸಲಾಯಿತು. ಮೈಸೂರು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಿರಿಯ ಕಲಾವಿದರ ಬಗ್ಗೆ ಸ್ನೇಹದ ಕಡಲು ಬಳಗದವರು ತೋರುತ್ತಿರುವ ಅಭಿಮಾನ ಹಾಗೂ ಗೌರವವನ್ನು ಶ್ಲಾಘಿಸಿದ ಅವರು, ಇಂತಹ ಉತ್ತಮ ಕಾರ್ಯಕ್ರಮಗಳಿಗೆ ಕೊಡವ ಸಮಾಜದ ಸಭಾಂಗಣದ ಬಾಗಿಲು ಸದಾ ತೆರೆದಿರುತ್ತದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಕಾರ್ಯಗಳಿಗೆ ಸಮಾಜದ ಸಹಕಾರವಿರುತ್ತದೆ ಎಂದು ಭರವಸೆ ನೀಡಿದರು. ಅಲ್ಲದೆ, ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರ 100ನೇ ವರ್ಷದ ಹುಟ್ಟುಹಬ್ಬವನ್ನೂ ಇದೇ ಸಭಾಂಗಣದಲ್ಲಿ ಆಚರಿಸುವಂತಾಗಲಿ ಎಂದು ಶುಭ ಹಾರೈಸಿದರು. ಹಿರಿಯ ಕಲಾವಿದ…

Read More

ಮಿಯಾಮಿ (ಅಮೆರಿಕ)/ಬೆಂಗಳೂರು NEWS DESK, ಆ.25  : ಕೃತಕ ಬುದ್ಧಿಮತ್ತೆ, ಡಿಜಿಟಲ್ ಫೊರೆನ್ಸಿಕ್ಸ್, ರೋಬೋಟಿಕ್ಸ್ ಮತ್ತು ಕಂಪ್ಯೂಟರ್ ವಿಜ್ಞಾನ ಕ್ಷೇತ್ರದ ಪ್ರವರ್ತಕ ಸಂಶೋಧಕರಾದ ಪ್ರೊ. ಎಸ್. ಎಸ್. ಅಯ್ಯಂಗಾರ್ ಅವರನ್ನು ಫ್ಲೋರಿಡಾ ಇಂಟರ್‌ನ್ಯಾಷನಲ್ ಯೂನಿವರ್ಸಿಟಿಯ (FIU) ‘President’s Council Outstanding Faculty Award – 2026’ಗೆ ಆಯ್ಕೆ ಮಾಡಲಾಗಿದೆ. ಸಂಶೋಧನೆ, ಬೋಧನೆ, ಮಾರ್ಗದರ್ಶನ ಹಾಗೂ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರೊ. ಅಯ್ಯಂಗಾರ್ ಅವರ ಸಾಧನೆಗಳು FIUನ ಶ್ರೇಷ್ಠತೆ, ನಾವೀನ್ಯತೆ ಮತ್ತು ಪ್ರಭಾವವನ್ನು ಪ್ರತಿನಿಧಿಸುತ್ತವೆ ಎಂದು ವಿಶ್ವವಿದ್ಯಾಲಯದ President’s Council ತಿಳಿಸಿದೆ. ಸ್ಥಳೀಯ, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಪರಿವರ್ತನೆಗೆ ಕಾರಣವಾದ ಅವರ ಕಾರ್ಯವನ್ನೂ ಪ್ರಶಸ್ತಿಯ ಆಯ್ಕೆಯಲ್ಲಿ ಗುರುತಿಸಲಾಗಿದೆ. FIU ನ Knight Foundation School of Computing and Information Sciences ನಲ್ಲಿ ನಿರ್ದೇಶಕರು ಮತ್ತು ಪ್ರಾಧ್ಯಾಪಕರಾಗಿರುವ ಪ್ರೊ. ಅಯ್ಯಂಗಾರ್, ಹಲವು ದಶಕಗಳಿಂದ ಕಂಪ್ಯೂಟರ್ ವಿಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.…

Read More

ಮಡಿಕೇರಿ, NEWS DESK ಆ.25: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡು ವ್ಯಾಪಕವಾಗಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರದ ಮೇಲಿನ ನಿಷೇಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಂಗಾರು ಮಳೆಯ ಪ್ರಮಾಣ ಹೆಚ್ಚಾದ ಸಂದರ್ಭದಲ್ಲಿ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸುವುದರಿಂದ ಭೂಕುಸಿತ ಸೇರಿದಂತೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ಹಾಗೂ ಪ್ರಯಾಣಿಕರು ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಹೊರಡಿಸಿದ್ದ ಆದೇಶದಂತೆ ಆಗಸ್ಟ್ 17ರವರೆಗೆ ಜಿಲ್ಲೆಯಾದ್ಯಂತ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಜಿಲ್ಲೆಯಾದ್ಯಂತ ವ್ಯಾಪಕ ಭಾರೀ ಗಾಳಿ ಮತ್ತು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಆಗಸ್ಟ್ 31, 2026ರವರೆಗೆ ಮುಂದುವರಿಸಲಾಗಿದೆ. ಉಳಿದಂತೆ ಹಿಂದಿನ ಆದೇಶದಲ್ಲಿದ್ದ ಯಾವುದೇ ನಿಯಮಗಳಲ್ಲಿ ಬದಲಾವಣೆ…

Read More

ಮಡಿಕೇರಿ, NEWS DESK ಆ.25 : ಪಶ್ಚಿಮಘಟ್ಟ ಪರಿಸರ ಸೂಕ್ಷö್ಮವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಶಾಂತಿಯುತ ಮೆರವಣಿಗೆ ನಡೆಸಿ ಬೇಂಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಅವರಿಗೆ ಆಕ್ಷೇಪಣೆ ಸಲ್ಲಿಸಿದರು. ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27, 2026ರಂದು ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆಯಲ್ಲಿ ಕೊಡಗು ಜಿಲ್ಲೆಯ 55 ಗ್ರಾಮಗಳನ್ನು ಪರಿಸರ ಸೂಕ್ಷö್ಮವಲಯದ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇವುಗಳಲ್ಲಿ ಕೊಳಗದಾಳು ಗ್ರಾಮವೂ ಸೇರಿದೆ. ಈ ಗ್ರಾಮದಲ್ಲಿ ಶತಮಾನಗಳಿಂದ ರೈತರು, ಕೃಷಿ ಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು ವಾಸಿಸುತ್ತಿದ್ದು, ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ವಸತಿ ಪ್ರದೇಶ, ಸಾರ್ವಜನಿಕ ಸಮುದಾಯ ಭವನ, ರಸ್ತೆಗಳು, ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಗೂ ನೈಸರ್ಗಿಕ ನೀರಿನ ಟ್ಯಾಂಕ್‌ಗಳಿವೆ. ಈಗಾಗಲೇ ಅರಣ್ಯದ ಅಂಚಿನಲ್ಲಿರುವ ಕೊಳಗದಾಳು ಗ್ರಾಮದಲ್ಲಿ…

Read More

ವಿರಾಜಪೇಟೆ, NEWS DESK ಆ.25: ಸಮೀಪದ ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾ ಸಂಸ್ಥೆಯ ಎಲ್ ಎಸ್ ಎ ಕೇರ್ ವತಿಯಿಂದ ಈದ್ ಮಿಲಾದ್-ಉನ್-ನಬಿ ವಿಶೇಷ ಸೌಹಾರ್ದ ಕಾರ್ಯಕ್ರಮ ಜರುಗಿತು. ಎಲ್ ಎಸ್ ಎ ಕೇರ್ ವತಿಯಿಂದ ವಿರಾಜಪೇಟೆಯ  ಆರ್ಜಿ ಯಲ್ಲಿರುವ ಅನ್ವರುಲ್ ಹುದಾ ಪಬ್ಲಿಕ್ ಶಾಲೆಗೆ ಭೇಟಿ ನೀಡಲಾಯಿತು. ಈದ್ ಮಿಲಾದ್-ಉನ್-ನಬಿ ಪ್ರಯುಕ್ತ ಆಯೋಜಿಸಲಾದ ಸೌಹಾರ್ದ ಕೂಟದಲ್ಲಿ  ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ, ಅಲ್ಲಿನ ಮಕ್ಕಳೊಂದಿಗೆ ಮನೋರಂಜನಾ ಮತ್ತು ಸ್ನೇಹಭಾವದ ಕಾರ್ಯಕ್ರಮಗಳನ್ನು ನಡೆಸಿದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಸಂಗ್ರಹಿಸಲಾದ ಅಡಿಗೆ ಸಾಮಗ್ರಿಗಳು, ಕ್ರೀಡಾ ಸಾಮಗ್ರಿಗಳು ಹಾಗೂ ಇತರೆ ಅಗತ್ಯ ವಸ್ತುಗಳನ್ನು ಅಲ್ಲಿನ ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಹಸ್ತಾಂತರಿಸಲಾಯಿತು.  ಮಕ್ಕಳಲ್ಲಿ ವಿಶ್ವಾಸ, ಸ್ನೇಹ, ಸಹೋದರತ್ವ ಮತ್ತು ಸಮಾನತೆ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳಲ್ಲಿರುವ ಜಾತಿ–ಧರ್ಮ ಭೇದಭಾವವನ್ನು ದೂರ ಮಾಡಿ ಮಾನವೀಯ ಮೌಲ್ಯಗಳನ್ನು ಬಲಪಡಿಸುವಲ್ಲಿ ಈ ಕಾರ್ಯಕ್ರಮದ ಉದ್ದೇಶ ಸಾಕಾರಗೊಂಡಿತು. ಈ ಸಂದರ್ಭದಲ್ಲಿ ಅನ್ವರುಲ್…

Read More

ಸೋಮವಾರಪೇಟೆ, NEWS DESK ಆ.24:ಕೊಡಗಿನಲ್ಲಿ ಮೋಡಬಿತ್ತನೆ ಮಾಡಿದರೆ ಕೃಷಿ ಫಸಲಿನ ಮೇಲೆ ದುಷ್ಪರಿಣಾಮ ಬೀರಲಿದ್ದು, ಸರ್ಕಾರ ಮೋಡಬಿತ್ತನೆ ಮಾಡಬಾರದು ಎಂದು ಬಿಜೆಪಿ ಮಂಡಲ ಕೃಷಿಮೋರ್ಚಾ ಒತ್ತಾಯಿಸಿದೆ. ಮೋಡಬಿತ್ತನೆಯಿಂದ ಸುರಿಯುವ ಮಳೆ ನೀರು ಕೆಮಿಕಲ್ ಮಿಶ್ರಿತವಾಗಿರುವ ಆತಂಕ ಜಿಲ್ಲೆಯ ರೈತರಲ್ಲಿ ಮೂಡಿದೆ. ರೈತರೆ ಕಾಫಿ, ಕಾಳುಮೆಣಸು ಬೆಳೆಯುತ್ತಿದ್ದು, ಬೆಳೆ ಹಾನಿಯ ಆತಂಕ ಎದುರಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಎಂ.ಬಿ.ಅಭಿಮನ್ಯು ಕುಮಾರ್ ಹೇಳಿದರು. ಹವಾಮಾನ ಏರುಪೇರು ಆದರೆ, ಕಾಫಿ ಫಸಲು ಹಾನಿಯಾಗುತ್ತದೆ. ಆಗಷ್ಟ್ ತಿಂಗಳಲ್ಲಿ ವಿಪರೀತ ಮಳೆಯಾದರೆ ಕಾಫಿ ಗಿಡಗಳಿಗೆ ಕೊಳೆರೋಗ ವ್ಯಾಪಿಸಿ ಕಾಫಿ ಉದುರುತ್ತದೆ. ಹೊರರಾಜ್ಯಗಳಿಗೆ ಉಪಯೋಗ ಮಾಡಿಕೊಡಲು ಕೊಡಗಿನಲ್ಲಿ ಮೋಡ ಬಿತ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ ಅಭಿಮನ್ಯುಕುಮಾರ್, ಸರ್ಕಾರಕ್ಕೆ ಕೊಡಗಿಗೆ ಒಂದು ಮಂತ್ರಿ ಸ್ಥಾನ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿಗೆ ಪೂರಕವಾಗಿ ಅನುದಾನ ಕೊಡುವುದಿಲ್ಲ. ಆದರೆ ಕೊಡಗಿನಲ್ಲಿ ಮೋಡಬಿತ್ತನೆ ಮಾಡಿ, ಅಣೆಕಟ್ಟುಗಳನ್ನು ತುಂಬಿಸುವ ಪ್ರಯತ್ನಕ್ಕೆ ಮುಂದಾಗುವುದು ಖಂಡನೀಯ ಎಂದು ಹೇಳಿದರು. ಜಿಲ್ಲೆಯ ಶಾಸಕದ್ವಯರು ಮೋಡಬಿತ್ತನೆಗೆ ಒಪ್ಪಿಗೆ ಸೂಚಿಸಬಾರದು…

Read More

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಹಾಗೂ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ರೋಟರಿ ಇಂಟರಾಕ್ಟ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ನಮನ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು. ಹಿರಿಯ ನಾಗರಿಕರನ್ನು ಗೌರವಿಸುವುದು ಮತ್ತು ಅವರ ಅನುಭವ, ಮಾರ್ಗದರ್ಶನವನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀರಾಮ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ *ಅರೆಯಡ ಕಾಳಯ್ಯ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹಾಗೂ ತೋಲಂಡ ಮೊಣ್ಣಪ್ಪ* ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಪ್ರಾಂಶುಪಾಲರಾದ ಶಾರದಾ ಬಿ.ಎಂ., ರೋಟರಿ ಮಿಸ್ಟಿ ಹಿಲ್ಸ್ ನ ಅಜಿತ್ ಕುಲ್ಲೇಟಿರ, ಶ್ರೀಹರಿ ರಾವ್, ಬೊಳ್ಯಂಡ ಕಾರ್ಯಪ್ಪ, ನವೀನ್ ಬೆಳ್ಳಿಯಪ್ಪ ಹಾಗೂ ಶಾಲಾ ಇಂಟರಾಕ್ಟ್ ಸಂಯೋಜಕಿ ಶೋಭಾ ಕೆ.ಎಸ್ ಉಪಸ್ಥಿತರಿದ್ದರು. ಶಾಲಾ ಇಂಟರಾಕ್ಟ್ ನ ಶಮಿಕ ಬಿ.ಎನ್., ಗಾನ…

Read More

ಮಡಿಕೇರಿ, NEWS DESK ಆ.24 : ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ 19ನೇ ಪುಣ್ಯಸ್ಮರಣೆಯ ಅಂಗವಾಗಿ ಮಡಿಕೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಮಡಿಕೇರಿಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಸಮಾಜ ಸೇವಾ ವಿಭಾಗ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬ್ರಹ್ಮಾಕುಮಾರಿ ಲೈಟ್ ಹೌಸ್ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಂಡು ರಕ್ತದಾನ ಮಾಡಿದರು. ಬ್ರಹ್ಮಾಕುಮಾರಿ ಲೈಟ್ ಹೌಸ್ ನ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ರಕ್ತದಾನದ ಮಹತ್ವದ ಕುರಿತು ವಿವರಿಸಿದರು. ಅತಿಥಿ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿ ಧ್ಯಾನ, ಏಕಾಗ್ರತೆ ಮತ್ತು ಆರೋಗ್ಯದ ಕುರಿತು ಮಾತನಾಡಿದರು. ಬ್ರಹ್ಮ ಕುಮಾರಿ ಧನಲಕ್ಷಿö್ಮ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್, ಡಾ.ರವಿ ಕರುಂಬಯ್ಯ, ಡಾ.ಸನತ್ ಕುಮಾರ್, ಕೊಡಗು ಚಾನಲ್ ನ ಸಂಪಾದಕ ಜಿ.ವಿ.ರವಿಕುಮಾರ್, ಪ್ರಮುಖರಾದ ನಾಣಯ್ಯ, ಲಲಿತ ಮಣಿ, ರೇಖಾ, ಹರಿಣಾಕ್ಷಿ, ರಮಾದೇವಿ ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೋಮವಾರ ಬಿಡುಗಡೆ ಮಾಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜತೆ ಸೋಮವಾರ ನಡೆದ ಸಭೆ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಅವರು, ಪ್ರಕಟಿಸಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 567 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 4,05,803 ಮತದಾರರು ಇದ್ದು, ಇವರಲ್ಲಿ 1,98,294 ಪುರುಷರು ಮತ್ತು 2,07,505 ಮಹಿಳಾ ಮತದಾರರು ಜೊತೆಗೆ 4 ಇತರೆ ಮತದಾರರನ್ನು ಒಳಗೊಂಡಿದೆ ಎಂದರು. ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,09,115 ಮತದಾರರು ಇದ್ದು, 1,01,316 ಪುರುಷ ಮತದಾರರು ಮತ್ತು 1,07,797 ಮಹಿಳಾ ಮತದಾರರು ಇತರರು ಇಬ್ಬರು ಮತದಾರರನ್ನು ಒಳಗೊಂಡಿದ್ದು, 285 ಮತಗಟ್ಟೆಗಳನ್ನು ಹೊಂದಿದೆ ಎಂದು ಹೇಳಿದರು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕರಡು ಮತದಾರರ ಪಟ್ಟಿಯಂತೆ 1,96,688 ಮತದಾರರು ಇದ್ದು, 96,978 ಪುರುಷರು…

Read More