ಲೇಖಕ: admin

ಸಿದ್ದಾಪುರ ಮೇ.22 NEWS DESK : ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ ಅಂದಾಜು 7 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಯೋಜನೆಗಳನ್ನು ಗ್ರಾಮಕ್ಕೆ ನೀಡಿ  ನುಡಿದಂತೆ ನಡೆದುಕೊಂಡ ಶಾಸಕ ಡಾ.ಮಂತರ್ ಗೌಡ ಅವರ  ಜನಪರ ಕಾಳಜಿಗೆ ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕರನ್ನ  ಅದ್ದೂರಿಯಾಗಿ ಬರಮಾಡಿಕೊಂಡು ಸನ್ಮಾನಿಸಿ ಗೌರವಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲು ನೆಲ್ಲಿಹುದಿಕೇರಿ ವಿವಿಧ ವಾರ್ಡುಗಳಿಗೆ ಆಗಮಿಸಿದ ಶಾಸಕರಿಗೆ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರೆ, ಪುರುಷರು, ಯುವಕರು ಸನ್ಮಾನಿಸಿ ಗೌರವಿಸಿ ಸಿಹಿ ಹಂಚಿ ಬರಮಾಡಿಕೊಂಡರು. ಇದೇ ಸಂದರ್ಭ ಮಾತನಾಡಿದ ಶಾಸಕರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗಳಿಗೆ ತಲುಪುವಂತೆ ಮಾಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿ  ಅಭಿವೃದ್ಧಿಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಎಲ್ಲ ರೀತಿಯ ಯೋಜನೆಗಳನ್ನು ನೀಡುತ್ತಿದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ  ನಮ್ಮ ರಾಜ್ಯ…

Read More

ಮಡಿಕೇರಿ ಮೇ 22 NEWS DESK : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ಮಳೆ ಹಾನಿಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿ.ನಿ.ಯ ಈ ಕೆಳಗಿನ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶವನ್ನು ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 18005990061. ಮಡಿಕೇರಿ ತಾಲ್ಲೂಕಿನ ಮಡಿಕೇರಿ, ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ತೇಜ 9449598603,…

Read More

ಮಡಿಕೇರಿ ಮೇ 22 NEWS DESK : ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ, ತೆಂಗಿನ ಚಿಪ್ಪು, ಟೈರು, ಹೂಕುಂಡದಲ್ಲಿ ನೀರು ನಿಲ್ಲದಂತೆ ಗಮನ ಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾರ್ಚ್ 2026ರ ವರೆಗೆ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡು ಬಂದಿದ್ದು, ಸೋಮವಾರಪೇಟೆ ತಾಲ್ಲೂಕಿನ 16,860 ಮಂದಿಯ ರಕ್ತ ಪರೀಕ್ಷೆಯಲ್ಲಿ 1 ಪ್ರಕರಣ ಕಂಡುಬಂದಿದ್ದು, ಗುಣಮುಖರಾಗಿದ್ದಾರೆ ಎಂದರು. ಮಲೇರಿಯ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶೀಘ್ರ ಪತ್ತೆಗಾಗಿ ರಕ್ತ ಲೇಪನಗಳ ಪರೀಕ್ಷೆ, ಜಿಲ್ಲೆಯ ವಲಸಿಗರ ಮತ್ತು ಹೊರ ರಾಜ್ಯದ ವಲಸಿಗರ ಸಮೀಕ್ಷೆ, ವಿವಿಧ ಕಾರ್ಯಕ್ರಮ ಮೂಲಕ ಜಾಗೃತಿ ಮೂಡಿಸುವುದು, ಮಲೇರಿಯ ಪತ್ತೆಯಾದ…

Read More

ಮಡಿಕೇರಿ ಮೇ 21 NEWS DESK : ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಿದ್ದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ. ಕನ್ನಡಸಿರಿ ಸ್ನೇಹ ಬಳಗ ವತಿಯಿಂದ 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಸಾಧನಸಿರಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಓದುವತ್ತ ಪ್ರೋತ್ಸಾಹಿಸಬೇಕು ಮತ್ತು ಉತ್ತೇಜನ ನೀಡಬೇಕು. ಅದನ್ನು ಬಿಟ್ಟು ಕುಗ್ಗಿಸುವ ಕೆಲಸ ಮಾಡಬಾರದು. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಹಿಂಸೆಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಶಿಕ್ಷಕರು ಧನಾತ್ಮಕವಾಗಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳ ಶಿಕ್ಷಕರನ್ನು, ಮುಖ್ಯ ಶಿಕ್ಷಕರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರು, ಶಿಕ್ಷಣ…

Read More

ಮಡಿಕೇರಿ ಮೇ 22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ 6 ನೇ ವರ್ಷದ ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಾವು ಸವಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಮಡಿಕೇರಿ ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷರಾದ ಮಲ್ಲಂಡ ಮಧು ದೇವಯ್ಯ, ನಿರ್ದೇಶಕರಾದ ನಾಗೇಶ್ ಕುಂದಲ್ಪಾಡಿ, ಎಸ್.ಪಿ.ಪೊನ್ನಪ್ಪ, ಬೇಬಿ ಪೂವಯ್ಯ, ಚಟ್ರಂಡ ಲೀಲಾ ಮೇದಪ್ಪ, ಕೆ.ಎಂ.ಮನೋಹರ್, ಸುವಿನ್ ಗಣಪತಿ, ಮನು ಮಹೇಶ್, ಪೂವಪ್ಪ ನಾಯ್ಕ, ಉಮೇಶ್ ರಾಜಾ ಅರಸ್, ಸುದೀರ್, ಕಾಂಗೀರ ಸತೀಶ್, ಬಿ.ಎ.ಹರೀಶ್, ನಗರಸಭಾ ಸದಸ್ಯರಾದ ಸತೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ, ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಮುತ್ತಪ್ಪ, ತೋಟಗಾರಿಕೆ ಇಲಾಖೆ…

Read More

ಮಡಿಕೇರಿ ಮೇ 22 NEWS DESK : ಪ್ರಸಿದ್ಧ ಪ್ರವಾಸಿತಾಣ ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯಲ್ಲಿ ಮೇ 18ರಂದು ನಡೆದ ದುರ್ಘಟನೆಯಲ್ಲಿ ತಮಿಳುನಾಡು ಮೂಲದ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆಯ ಕುರಿತು ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿರುವ ಘಟನೆ ಹಾಗೂ ಓರ್ವ ಮಹಿಳೆ ಮೃತಪಟ್ಟಿರುವುದು ಸಂಬಂಧಪಟ್ಟ ಅಧಿಕಾರಿಗಳ ನಿಷ್ಕ್ರೀಯತೆ, ವೈಫಲ್ಯತೆಗಳನ್ನು ಸೂಚಿಸುತ್ತದೆ. ಘರ್ಷಣೆಯಲ್ಲಿ ಗಾಯಗೊಂಡ ಮಾರ್ತಾಂಡ ಆನೆಯೂ ಮೃತಪಟ್ಟಿದೆ. ಇದು ಕೂಡ ಅರಣ್ಯ ಇಲಾಖೆ ಅಧಿಕಾರಿಗಳ ನಿಷ್ಕ್ರೀಯತೆ, ವೈಫಲ್ಯತೆಗಳನ್ನು ಸೂಚಿಸುತ್ತದೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಸಾರ್ವಜನಿಕರ ಕುಂದುಕೊರತೆ ಪರಿಹಾರಕ್ಕಾಗಿ ಕಲಂ 12(1)ರ ಅಡಿಯಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ಮೇಲೆ ಬಾಧ್ಯತೆಯನ್ನು ವಿಧಿಸುತ್ತದೆ ಮತ್ತು ಕಲಂ2(10)ರ ಅಡಿಯಲ್ಲಿ ಸಾರ್ವಜನಿಕ ಅಧಿಕಾರಿಗಳಿಂದ ಆಗುವ ದುರಾಡಳಿತವನ್ನು ತಡೆ ಹಿಡಿಯಲು ಬಾಧ್ಯತೆಯನ್ನು ನೀಡುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಕಲಂ(7(2) ಮತ್ತು ಕಲಂ 9(3)(ಎ) ಪ್ರಕಾರ ಅಧಿಕಾರ ಚಲಾಯಿಸಿ ಸ್ವಯಂ…

Read More

ಮಡಿಕೇರಿ ಮೇ 22 NEWS DESK : ಸಾಮಾಜಿಕ ಜಾಲತಾಣದ ಗುಂಪೊಂದರ ಪ್ರಮುಖರೊಬ್ಬರು ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಅಶಾಂತಿ ಸೃಷ್ಟಿಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮಡಿಕೆರಿ ನಗರಸಭೆಯ ಸರ್ವ ಪಕ್ಷಗಳ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಎಸ್‍ಪಿ ಆರ್.ಎನ್.ಬಿಂದುಮಣಿ ಅವರನ್ನು ಇಂದು ಭೇಟಿಯಾದ ನಗರಸಭಾ ಸದಸ್ಯರು ಕೊಡಗು ಅಭಿವೃದ್ಧಿ ಸಮಿತಿ ಹೆಸರಿನ ಗ್ರೂಪ್ ನ ಪ್ರಸನ್ನ ಭಟ್ ಎಂಬುವವರ ವಿರುದ್ಧ ದೂರು ನೀಡಿದರು. ಸುಳ್ಳು ವಿಚಾರಗಳನ್ನು ಸತ್ಯ ಎಂಬಂತೆ ಬಿಂಬಿಸಲಾಗುತ್ತಿದೆ. ನಗರಸಭಾ ಸದಸ್ಯರುಗಳ ಅಧ್ಯಯನ ಪ್ರವಾಸವನ್ನು ಮೋಜು ಮಸ್ತಿಯ ಪ್ರವಾಸ ಎಂಬಂತೆ ವಾಟ್ಸಪ್ ಗ್ರೂಪ್ ಗಳಲ್ಲಿ ಪ್ರತಿಬಿಂಬಿಸಿ ಸಾರ್ವಜನಿಕವಾಗಿ ನಿಂದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಸನ್ನ ಭಟ್ ಅವರು ತಮ್ಮ ಸ್ವಂತ ಜೀಪ್‍ಗೆ ಅಭಿವೃದ್ಧಿ ಸಮಿತಿಯ ಬೋರ್ಡ್‍ನ್ನು ಅಳವಡಿಸಿಕೊಂಡು, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮಧ್ಯೆ ನಿಂತು ಟ್ರಾಫಿಕ್ ಕಂಟ್ರೋಲ್ ಮಾಡುವ ಸೋಗಿನಲ್ಲಿ ಸ್ಥಳೀಯ ವಾಹನ ಸವಾರರಿಗೆ ತೊಂದರೆ ಕೊಡುವುದು ಮತ್ತು ಅದೆಷ್ಟೋ ಬಾರಿ ತನ್ನ…

Read More

ಮಡಿಕೇರಿ ಮೇ 21 NEWS DESK : ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಪ್ರಸಕ್ತ ಸಾಲಿನ ಮಾವು ಮತ್ತು ಹಲಸು ಮೇಳವು ಮೇ, 22 ರಿಂದ 24 ರವರೆಗೆ ಹಾಪ್‍ಕಾಮ್ಸ್ ಆವರಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಆವರಣದಲ್ಲಿ ಮೇ, 22 ರಂದು ಬೆಳಗ್ಗೆ 10.30 ಗಂಟಗೆ ಮಾವು ಮತ್ತು ಹಲಸು ಮೇಳಕ್ಕೆ ಗಣ್ಯರಿಂದ ಚಾಲನೆ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಮೇ 21 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ, 22 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ “ನೇರ ಸಂದರ್ಶನ” ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಜೆಕೆ ಟೈರ್ಸ್ ಮೈಸೂರು ಅವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ‘ಜೆಕೆ ಟೈಯರ್ಸ್ ಮೈಸೂರು’ ಇವರು ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು.

Read More

ಮಡಿಕೇರಿ ಮೇ 21 NEWS DESK : ನವದೆಹಲಿಯಲ್ಲಿ ಮೇ 24 ರಂದು ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ಹೊರಟ 110 ಗಿರಿಜನ ಪ್ರತಿನಿಧಿಗಳ ಸಭೆಯು ಗೊಣಿಕೊಪ್ಪ ದುರ್ಗಾ ಭೋಜಿ ಹಾಲ್ ನಲ್ಲಿ ನಡೆಯಿತು.  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಿರಿಜನ ಸುರಕ್ಷಾ ವೇದಿಕೆ ಕೊಡಗು ಜಿಲ್ಲಾ ಘಟಕದ ಸಂಚಾಲಕರಾದ ಪಣಿಯರವರ ಭಾಗ್ಯ ಮೋಹನ್, ಮಹಾನ್ ಜನನಾಯಕ ಬಿರ್ಸಾ ಮುಂಡಾರವರ 150ನೇ ಜನ್ಮ ಜಯಂತಿ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಲಾಗುತ್ತಿರುವ ಈ ಮಹಾ ಸಂಗಮದಲ್ಲಿ ದೇಶದ ಐದು ನೂರಕ್ಕೂ ಹೆಚ್ಚು ಗಿರಿಜನ ಸಮುದಾಯಗಳಿಂದ ಮೂರು ಲಕ್ಷಕ್ಕೂ ಅಧಿಕ ಗಿರಿಜನ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಕೊಡಗು ಜಿಲ್ಲೆಯ 6 ಗಿರಿಜನ ಜನಜಾತಿಯ 110 ಪ್ರತಿನಿಧಿಗಳು ಸೇರಿದಂತೆ ರಾಜ್ಯದ 1250 ಪ್ರತಿನಿಧಿಗಳು ವಿಶೇಷ ರೈಲಿನ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ ಎಂದರು. ಗಿರಿಜನ ಸಮುದಾಯಗಳ ಸಾಂಸ್ಕೃತಿಕ ಅಸ್ತಿತ್ವ, ಧಾರ್ಮಿಕ ಪರಂಪರೆ ಹಾಗೂ ಸಾಮಾಜಿಕ ಮಾಲ್ಯಗಳನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪರಿಚಯಿಸುವ ಅಪರೂಪದ ಅವಕಾಶ…

Read More