ಪತ್ತನಂತಿಟ್ಟ ಅ.22 NEWS DESK : ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ದೀಪಾವಳಿ ಬಲಿಪಾಡ್ಯಮಿ ದಿನ ಸನ್ನಿಧಾನಂನಲ್ಲಿ ಅಯ್ಯಪ್ಪ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಅವರು ಪಂಪಾದಿಂದ ಇರುಮುಡಿಯನ್ನು ಹೊತ್ತುಕೊಂಡು ಪತಿನೆಟ್ಟಂ ಪಾಡಿಯನ್ನು ಹತ್ತಿ ಗರ್ಭಗುಡಿಯ ಬಳಿ ತಲುಪಿದರು. ಕೇರಳ ದೇವಸ್ವಂಗಳ ಸಚಿವ ವಿಎನ್ ವಾಸವನ್ ಭೇಟಿಯ ಸಮಯದಲ್ಲಿ ಅವರೊಂದಿಗೆ ಜೊತೆಗಿದ್ದರು. ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ದ್ರೌಪದಿ ಮುರ್ಮು ಅವರು ಪಾತ್ರರಾಗಿದ್ದಾರೆ.
ಲೇಖಕ: admin
ಮಡಿಕೇರಿ ಅ.22 NEWS DESK : ವಿರಾಜಪೇಟೆ ತಾಲ್ಲೂಕಿನ ಕೋಳತೋಡು-ಬೈಗೋಡು ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷ ಪುಲಿಯಂಡ ರೋಶನ್ ಅವರ ಹಿರಿಯ ಸಹೋದರ ಪುಲಿಯಂಡ ಸುಬ್ರಮಣಿ ರಾಜ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಪ್ರತಿಷ್ಠಿತ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ತಿಳಿಸಿದು ಆಸ್ಪತ್ರೆಗೆ ತೆರಳಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸುಬ್ರಮಣಿ ರಾಜ ಅವರ ಆರೋಗ್ಯ ವಿಚಾರಿಸಿ ಧೈರ್ಯ ನೀಡಿದರು. ಇವರ ಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ ರೂಪಾಯಿ ಖರ್ಚಾಗಿದ್ದು, ಕುಟುಂಬದ ಆರ್ಥಿಕ ಸ್ಥಿತಿಯನ್ನು ಮನಗಂಡ ಶಾಸಕರು, ಇವರ ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಗಿರೀಶ್, ಚಂಗಪ್ಪ, ಜೋಯ್ ನಂಜಪ್ಪ ಉಪಸ್ಥಿತರಿದ್ದರು.
ಮಡಿಕೇರಿ ಅ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಲ್ಲಿ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಮಕ್ಕಿ-ಬೂದಿಮಾಳ ರಸ್ತೆಗೆ ರೂ.15 ಲಕ್ಷ ಅನುದಾನದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ ರೂ.10 ಲಕ್ಷ ಹಾಗು ರೂ.5 ಲಕ್ಷ ಅನುದಾನದಲ್ಲಿ 2 ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಅನುದಾನ ಒದಗಿಸಿದ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಇದಕ್ಕೆ ಸಹಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಗ್ಯಾರೆಂಟಿ ಯೋಜನೆ ಸದಸ್ಯ ಟಿ.ಕೆ.ಹರೀಶ ಮತ್ತು ಟಿ.ಪಿ.ಪುರುಷೋತ್ತಮ , ಪಿ.ಬಿ.ಸುರೇಶ್, ಶಶಿ, ರವಿ, ಹರೀಶ, ಮನೋಹರ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಗ್ಗಳ-ಎಡಮಕ್ಕಿ-ಬೂದಿಮಾಳ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ಮಡಿಕೇರಿ NEWS DESK ಅ.22 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ‘ದೀಪೋತ್ಸವ’ ಶ್ರದ್ಧಾಭಕ್ತಿಯಿಂದ ನಡೆಯಿತು. ಭಕ್ತರು ಸಹಸ್ರ ಸಹಸ್ರ ಹಣತೆಗಳನ್ನು ಹಚ್ಚಿ ದೇವಾಲಯನ್ನು ಬೆಳಗಿದರು. ದೇವಾಲಯದ ಧರ್ಮದರ್ಶಿ ಹೆಚ್.ಎಸ್.ಗೋವಿಂದ ಸ್ವಾಮಿ ಅವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ಜರುಗಿತು. ಕಳಸ ಪೂಜೆ, ಅನ್ನದಾನ ಮತ್ತು ಪ್ರಸಾದ ವಿನಿಯೋಗವಾದ ನಂತರ ತಾಯಿಯ ದರ್ಶನ ಹಾಗೂ ದೀಪೋತ್ಸವ ನೆರವೇರಿತು. 108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗಲಿದೆ ಎನ್ನುವ ನಂಬಿಕೆಯ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೀಪೋತ್ಸವವನ್ನು ಯಶಸ್ವಿಗೊಳಿಸಿದರು.
ವಾಷಿಂಗ್ಟನ್ ಅ.22 NEWS DESK : ಅನಿವಾಸಿ ಭಾರತೀಯರೊಂದಿಗೆ ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದೀಪಾವಳಿ ಆಚರಿಸಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದ್ದಾರೆ. ದೀಪಾವಳಿ ಹಿನ್ನೆಲೆ ಅಮೆರಿಕಾದ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಕ್ಯಾಂಡಲ್ನಿಂದ ದೀಪ ಹಚ್ಚಿ ದೀಪ ಬೆಳಗಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮಾತನಾಡಿರುವುದಾಗಿ ತಿಳಿಸಿದರು. ಭಾರತದ ಜನತೆಗೆ ದೀಪಾವಳಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ನಾನು ಇಂದು (ಅ.20) ನಿಮ್ಮ ಪ್ರಧಾನ ಮಂತ್ರಿ ಮೋದಿಯವರೊಂದಿಗೆ ಮಾತನಾಡಿದೆ. ನಮ್ಮ ಸಂಭಾಷಣೆ ಬಹಳ ಉತ್ತಮವಾಗಿತ್ತು. ನಾವು ವ್ಯಾಪಾರದ ಬಗ್ಗೆ ಮಾತನಾಡಿದೆವು. ಆ ಬಗ್ಗೆ ಅವರು ಬಹಳ ಆಸಕ್ತಿ ಹೊಂದಿದ್ದಾರೆ. ಸ್ವಲ್ಪ ಸಮಯದ ಹಿಂದೆ, ನಾವು ಪಾಕಿಸ್ತಾನದೊಂದಿಗೆ ಯಾವುದೇ ಯುದ್ಧ ಬೇಡ ಎಂದು ಮಾತನಾಡಿಕೊಂಡಿದ್ದೆವು. ಈ ವೇಳೆ ವ್ಯಾಪಾರದ ಬಗ್ಗೆಯೂ ಮಾತುಕತೆ ನಡೆಸಲಾಗಿದೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ…
ಮಡಿಕೇರಿ ಅ.22 NEWS DESK : ನೀರಿನ ರಭಸಕ್ಕೆ ಬೈಕ್ ಸಮೇತ ಕೊಚ್ಚಿ ಹೋಗಿ ಅದೃಷ್ಟವಶಾತ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ, ಡಬ್ಬಡ್ಕ ಭಾಗದ ಹೊಸೂರು ಜಯರಾಮ ಅವರ ಪುತ್ರ ಅನುಪಮ್ ಮನೆಗೆ ಕೊಡಗು ವಿಭಾಗಾಧಿಕಾರಿಗಳು, ಮಡಿಕೇರಿ ತಹಶೀಲ್ದಾರರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸೂಚನೆ ಮೇರೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಮೊದಲಿಗೆ ಅವಘಡ ಸಂಭವಿಸಿದ ಹೊದ್ದೆಟ್ಟಿ ಹೊಳೆ ಜಾಗವನ್ನು ಪರಿಶೀಲಿಸಿ ಬಳಿಕ ನಿರೂಪಮ ಮನೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾತನಾಡಿ ಧೈರ್ಯ ತುಂಬಿದರು. ಈ ಎಲ್ಲಾ ಘಟನೆಯ ವಿವರವನ್ನು ಶಾಸಕರ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಸಂಬಂಧ ಪಟ್ಟ ಇಲಾಖೆಗಳಿಗೆ ತಲುಪಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಮಡಿಕೇರಿ ಅ.22 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ ಇವರ ವತಿಯಿಂದ ಪ್ರತಿ ವರ್ಷದಂತೆ 2025-26ನೇ ಸಾಲಿಗೆ ಜಿಲ್ಲೆಯ ವಿವಿಧ ಸಂಘ- ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ (ಗಣಪತಿ ಉತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಇತರೆ ಕಾರ್ಯಕ್ರಮಗಳನ್ನು ಹೊರತುಪಡಿಸಿ) ವೇದಿಕೆ ಹಾಗೂ ಮೆರವಣಿಗೆಗೆ ಸಂಬಂಧಿಸಿದಂತೆ ಕಲಾತಂಡ ನಿಯೋಜಿಸಲು ಅವಕಾಶವಿದ್ದು, ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಕಾರ್ಯಕ್ರಮಗಳು ರೂಪಿಸಿಕೊಂಡ ಸಂಘ-ಸಂಸ್ಥೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೇದಿಕೆ ಹಾಗೂ ಮೆರವಣಿಗೆಗೆ ಕಲಾತಂಡಗಳನ್ನು ಪ್ರಾಯೋಜಿಸಲು ತಮ್ಮ ಪೂರ್ಣ ವಿವರಗಳೊಂದಿಗೆ ಸಕಾಲದ ಸೇವಾಸಿಂಧುವಿನಡಿ ಕಾರ್ಯಕ್ರಮ ನಡೆಯುವ 15 ದಿನಗಳ ಮುಂಚಿತವಾಗಿ ಮನವಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228490 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಅವರು ತಿಳಿಸಿದ್ದಾರೆ.
ಮಡಿಕೇರಿ NEWS DESK ಅ.21 : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವ ಎಂದು ದಾಖಲೀಕರಣಗೊಂಡರೆ ಮಾತ್ರ ಕೊಡವರು ಸಂವಿಧಾನಬದ್ಧವಾದ ಹಕ್ಕುಗಳನ್ನು ಸಾಧಿಸಲು ಸಾಧ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಉಮ್ಮತ್ ನಾಡಿನ ಅಮ್ಮತ್ತಿಯಲ್ಲಿ ಸಿಎನ್ಸಿ ವತಿಯಿಂದ ನಡೆದ 16ನೇ ಕೊಡವ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು. ಆದಿಮಸಂಜಾತ, ಇಂಡಿಜಿನಸ್, ಆನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಪ್ರತ್ಯೇಕ ಗುರುತು ನೋಂದವಣೆಯ ಪ್ರಕ್ರಿಯೆ ರಾಷ್ಟ್ರೀಯ ಜನಗಣತಿಯಲ್ಲಿ ದಾಖಲಿಕರಣವಾದರೆ ಮಾತ್ರ ನಮಗೆ ಸಂವಿಧಾನ ಬದ್ಧ ಹಕ್ಕು ದೊರೆಯಲಿದೆ. ಕೊಡವರ ಪೂರ್ವಾರ್ಜಿತ ಭೂಹಕ್ಕು ಮತ್ತು ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಲಿದೆ ಎಂದರು. 2026-27 ರಲ್ಲಿ ನಡೆಯಲಿರುವ…
ಮಡಿಕೇರಿ ಅ.21 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಪಾರವಾಗಿ ಅನುಭವಿರುವ ಹಿರಿಯ ನಾಗರಿಕರು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಅವರು ತಮ್ಮ ಸ್ವರಚಿತ ಕವನವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು. ಕವನಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಲು ಸಮಿತಿ ರಚಿಸಲಾಗುವುದು. ಕವನ 16 ಗೆರೆಗಳನ್ನು ಮೀರಿರಬಾರದು. ಒಬ್ಬರು ಒಂದು ಕವನವನ್ನು ಮಾತ್ರ ಕಳುಹಿಸಬಹುದು ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನ) ಗಳನ್ನೂ ಕಳುಹಿಸಬಹುದು. ಲಕೊಟೆಯ ಮೇಲೆ *ರಾಜ್ಯೋತ್ಸವ ಹಿರಿಯರ ಕವಿಗೋಷ್ಠಿ*ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಮಾತ್ರ ಅವಕಾಶ. ಕವನಗಳನ್ನು ಕಳುಹಿಸಲು ಕಡೆಯ ದಿನಾಂಕ 05.11.2025. ಈ ಕೆಳಗಿನ ಮೊಬೈಲ್ ಗಳಿಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು. ಕವನದ ಜೊತೆಗೆ ಆಧಾರ್ ಕಾರ್ಡ್ ಅಥವಾ ಹಿರಿಯ ನಾಗರಿಕ ದೃಢೀಕರಣ ಪತ್ರದ ನಕಲನ್ನು ಕಳುಹಿಸಿತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು,…
ಮಡಿಕೇರಿ ಅ.21 NEWS DESK : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನ.1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೊಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಾಗಿಲ್ಲ. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವವರಿಗೆ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ದೊರೆಯಲಿದೆ. ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ…






