ಲೇಖಕ: admin

ಮಡಿಕೇರಿ ಅ.21 NEWS DESK : ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಕುಮಾರ್, ಗುಪ್ತದಳ ವಿಭಾಗದ ಪೊಲೀಸ್ ನಿರೀಕ್ಷರಾದ ಐ.ಪಿ.ಮೇದಪ್ಪ, ಜಿಲ್ಲಾ ಪೊಲೀಸ್ ಲಿಪಿಕ ಸಿಬ್ಬಂದಿಗಳ ಪರವಾಗಿ ಪಿ.ಎ.ನಂಜಪ್ಪ, ನಿವೃತ್ತ ಪೊಲೀಸ್ ಅಧಿಕಾರಿಗಳ ಪರವಾಗಿ ಅಪ್ಪಯ್ಯ, ನಿವೃತ್ತ ಸೇನಾಧಿಕಾರಿಗಳ ಪರವಾಗಿ ಮೊಣ್ಣಪ್ಪ, ಜಿಲ್ಲಾ ಕಾರಾಗೃಹ ಪರವಾಗಿ ಸಂಜಯ್ ಜತ್ತಿ, ನಗರಸಭೆ ಪರವಾಗಿ ಅಧ್ಯಕ್ಷರಾದ ಪಿ.ಕಲಾವತಿ ಹಾಗೂ ಸದಸ್ಯರಾದ ಅನಿತಾ ಪೂವಯ್ಯ,…

Read More

ಮಡಿಕೇರಿ ಅ.21 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯ ವತಿಯಿಂದ ಕಾರ್ತಿಕ ಮಾಸದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಉತ್ಸವಾದಿಗಳು ಶಾಸ್ತ್ರೋಕ್ತವಾಗಿ ನಡೆಯಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಅಧ್ಯಕ್ಷರಾದ ಚುಮ್ಮಿ ದೇವಯ್ಯ ಅವರು ತಿಳಿಸಿದ್ದಾರೆ. ಅ.22 ರಂದು ಸಂಜೆ 6 ಗಂಟೆಗೆ ಗೋಪೂಜೆ ನಡೆಯಲಿದೆ. ಅಕ್ಟೋಬರ್ 22 ರಿಂದ ನವೆಂಬರ್ 2 ರವರೆಗೆ 12 ದಿನಗಳ ಕಾಲ ಸಂಜೆ 6.30 ಗಂಟೆಯಿಂದ ತುಳಸಿ ಪೂಜೆ ನಡೆಯಲಿದ್ದು, ತುಳಸಿ ಪೂಜೆ ಮಾಡಿಸ ಬಯಸುವ ಭಕ್ತಾಧಿಗಳು 100 ಸೇವಾ ದರ ಪಾವತಿಸಿ, ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರವಾಗಿಬೇಕಾಗಿ ಕೋರಿದ್ದಾರೆ. ನವೆಂಬರ್ 2 ರಂದು ಬೆಳಗ್ಗೆ 10.30 ಗಂಟೆಗೆ ತುಳಸಿ ಕಲ್ಪೋಕ ಪೂಜೆ ನಡೆಯಲಿದೆ. ಹಾಗೆಯೇ ನವೆಂಬರ್ 5 ರಂದು ಸಂಜೆ 6 ಗಂಟೆಗೆ ಮಹಾಪೂಜೆ ನಡೆಯಲಿದೆ. ಜೊತೆಗೆ ಸಂಜೆ 6.30 ಗಂಟೆಗೆ ತೆಪ್ಪೋತ್ಸವ, ದಟ್ಟೋತ್ಸವ ಮತ್ತು ಪಲ್ಲಕ್ಕಿ ಉತ್ಸವ ನಡೆಯಲಿದೆ. ಕಾರ್ತಿಕ ಹುಣ್ಣಿಮೆಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ…

Read More

ಮಡಿಕೇರಿ ಅ.21 NEWS DESK : ನಗರದ ಶ್ರೀ ರಾಘವೇಂದ್ರ ದೇವಸ್ಥಾನದ ಬಳಿಯ ಕಲಾ ನಗರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ.26 ಹಾಗೂ ನ.22 ರಂದು ರಂದು ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಆರ್.ಮಹೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಬೆಳಿಗ್ಗೆ 9 ಗಂಟೆಗೆ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರಿಡಾಂಗಣದಲ್ಲಿ ಶ್ರೀ ರಾಘವೇಂದ್ರ ದೇವಸ್ಥಾನ ವ್ಯಾಪ್ತಿಯ ನಿವಾಸಿಗಳು, ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಚೈನ್ ಗೇಟ್ ನಿವಾಸಿಗಳಿಗೆ ಸೀಮಿತವಾಗಿ ಆಟೋಟ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಅಂದು ಕ್ರಿಕೆಟ್ ಪಂದ್ಯಾವಳಿ, ವಿವಿಧ ವಿಭಾಗಗಳಲ್ಲಿ 100 ಮೀಟರ್ ಓಟದ ಸ್ಪರ್ಧೆ, ಹಗ್ಗಜಗ್ಗಾಟ, 50 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ವೇಗದ ನಡಿಗೆ ಸ್ಪರ್ಧೆ, ಮನೋರಂಜನಾ ಸ್ಪರ್ಧೆಗಳು ನಡೆಯಲಿದ್ದು, ಮಧ್ಯಾಹ್ನದ ನಂತರ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. *ಸಾಂಸ್ಕೃತಿಕ ಸ್ಪರ್ಧೆ* ನ.22 ರಂದು ಬೆಳಿಗ್ಗೆ 9…

Read More

ಮಡಿಕೇರಿ ಅ.21 NEWS DESK : ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎರಡನೇ ಅವಧಿಯ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದು ಆರು ತಿಂಗಳುಗಳೇ ಕಳೆದಿದ್ದರೂ ನಿಯಮಾನುಸಾರ ಸಭೆ ನಡೆಸದೆ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಲಾಗಿದೆ. ಮುಂದಿನ ಎರಡು ವಾರದೊಳಗೆ ಸಾಮಾನ್ಯ ಸಭೆಯನ್ನು ನಡೆಸದಿದ್ದರೆ ಪ್ರಕರಣ ಸಂಖ್ಯೆ 47(3) ಪ್ರಕಾರ ಅಭಿವೃದ್ಧಿಯ ದೃಷ್ಟಿಯಿಂದ ನಾವುಗಳೇ ಸಭೆ ಕರೆಯುತ್ತೇವೆ ಎಂದು ನಗರಸಭೆಯ ವಿರೋಧ ಪಕ್ಷ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಅವರು ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 47(1) ರ ಪ್ರಕಾರ ಪ್ರತಿ ತಿಂಗಳು ಕನಿಷ್ಠ ಒಂದು ಸಭೆಯನ್ನಾದರೂ ನಡೆಸಬೇಕು. ಆದರೆ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಕಳೆದ ಆರು ತಿಂಗಳಿನಲ್ಲಿ ಕೇವಲ ಒಂದು ಸಾಮಾನ್ಯ ಸಭೆ ಮತ್ತು ಒಂದು ತುರ್ತು ಸಭೆಯನ್ನು ಮಾತ್ರ ನಡೆಸಿ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು…

Read More

ಮಡಿಕೇರಿ ಅ.21 NEWS DESK : ಬೆಂಗಳೂರಿನ ಸತ್ಯ ಪ್ರಕಾಶ್ ಅವರು ರಚಿಸಿರುವ ಬ್ಲಾಕ್ ಚೈನ್ (BLOCK CHAIN) ಇಂಗ್ಲೀಷ್ ಕೃತಿ ಮಡಿಕೇರಿಯಲ್ಲಿ ಬಿಡುಗಡೆಗೊಂಡಿತು. ಕ್ಲಬ್ ಮಹೀಂದ್ರದಲ್ಲಿ ಜಿಲ್ಲೆಯ ಸರಕಾರಿ ಅಭಿಯೋಜಕ ಶ್ರೀಧರನ್ ನಾಯರ್ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಪತ್ರಿಕಾ ಭವನದ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್, ಹಿರಿಯ ವಕೀಲರಾದ ರಮೇಶ್ ಚಂದರ್ ನಂಬಿಯಾರ್, ಕೆ.ಎಂ.ರಾಜನ್ ಹಾಗೂ ಕೃತಿ ರಚನೆಕಾರ ಸತ್ಯ ಪ್ರಕಾಶ್ ಉಪಸ್ಥಿತರಿದ್ದರು. ಸತ್ಯ ಪ್ರಕಾಶ್ ಅವರು ಕೇರಳ ಉಚ್ಚನ್ಯಾಯಾಲಯದ ಹಿರಿಯ ವಕೀಲ ರಮೇಶ್ ಚಂದರ್ ನಂಬಿಯಾರ್ ಅವರ ಅಳಿಯ.

Read More

ಮೈಸೂರು ಅ.21 NEWS DESK : ದೀಪಾವಳಿ ಅಮಾವಾಸ್ಯೆ ಸಂದರ್ಭದಲ್ಲಿ ಐತಿಹಾಸಿಕ ಪಿರಿಯಾಪಟ್ಟಣ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ ದೇವರ ದರ್ಶನ ಪಡೆದಿದ್ದು ಧನ್ಯತಾ ಭಾವ ಮೂಡಿಸಿತು ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ಯದುವೀರ್ ಒಡೆಯರ್ ಸಮಸ್ತ ಭಕ್ತಾದಿಗಳೊಡನೆ ಪಾದಯಾತ್ರೆ ಮೂಲಕ ಹತ್ತಿ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಭಕ್ತಿಯಿಂದ ಪ್ರಾರ್ಥಿಸಿದರು. :: ವಿಶೇಷ ಅನುಭೂತಿ :: ನಂತರ ಮಾಹಿತಿ ನೀಡಿದ ಸಂಸದರು, ನಮ್ಮ ಕ್ಷೇತ್ರದ ಸಾವಿರಾರು ಭಕ್ತರೊಂದಿಗೆ ಪಾದಯಾತ್ರೆ ಕೈಗೊಂಡು, ದರ್ಶನ ಪಡೆದಿದ್ದು ವಿಶೇಷ ಅನುಭೂತಿ ದೊರೆಯಿತು ಎಂದರು. :: ನಾಡು ಸುಭಿಕ್ಷವಾಗಲಿ :: ಬೆಳಕಿನ ಹಬ್ಬ ದೀಪಾವಳಿ ನಾಡಿನ ಪ್ರತಿಯೊಬ್ಬರಿಗೂ ಸುಖ, ಶಾಂತಿ, ಸಮೃದ್ಧಿ ತರಲಿ. ನಾಡು ಸದಾ ಸುಭಿಕ್ಷವಾಗಿರಲಿ ಎಂದು ಸಂಸದರು ಇದೇ ಸಂದರ್ಭದಲ್ಲಿ ಶುಭ ಕೋರಿದರು. ::…

Read More

ಮಡಿಕೇರಿ ಅ.21 NEWS DESK : ಪೊನ್ನಂಪೇಟೆ ತಾಲ್ಲೂಕಿನ ತೂಚಮಕೇರಿ ಗ್ರಾಮದ ಪೆಮ್ಮಂಡ ಕುಟುಂಬಸ್ಥರ ವತಿಯಿಂದ ಪ್ರಥಮ ಬಾರಿಗೆ ‘ತೋಕ್ ನಮ್ಮೆ’ ಕಾರ್ಯಕ್ರಮ ನಡೆಯಿತು. ಪೊನ್ನಂಪೇಟೆ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು.

Read More

ಮಡಿಕೇರಿ ಅ.21 NEWS DESK : ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್ ಸೇರಿದಂತೆ ಹಲವರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಪೊಲೀಸ್ ಕವಾಯತು ಸಿಬ್ಬಂದಿಗಳು ಮೂರು ಸುತ್ತು ವಾಲಿ ಫೈರಿಂಗ್ ನಡೆಸಿದರು. ಈ ಸಂದರ್ಭದಲ್ಲಿ ಗಣ್ಯರು ಸೇರಿದಂತೆ ಎಲ್ಲರೂ ಎದ್ದು ನಿಂತು ಗೌರವ ವಂದನೆ ಸಲ್ಲಿಸಿದರು. ಹುತಾತ್ಮರ ಸ್ಮರಣಾರ್ಥ ಎಲ್ಲರೂ ಎದ್ದು ನಿಂತು ಎರಡು ನಿಮಿಷ ಮೌನಾಚರಣೆ ಮಾಡಿದರು.

Read More

ಪುತ್ತೂರು ಅ.21 NEWS DESK : ಆರ್ಥಿಕವಾಗಿ ಸದೃಢರಾದವರು ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು ಭಾಗವನ್ನು ನೀಡುವುದು ಒಳ್ಳೆಯ ಕೆಲಸ. ಸಂವಿಧಾನದ ಸಮ ಸಮಾಜ ಉದ್ದೇಶ, ಬಸವಣ್ಣನ ಕಾಯಕ ಮತ್ತು ದಾಸೋಹ ತತ್ವ ಎಲ್ಲವೂ ಇದೇ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಪುತ್ತೂರಿನಲ್ಲಿ ಆಯೋಜಿಸಿದ್ದ “ಅಶೋಕ ಜನ-ಮನ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಅವರ ಈ ಕಾರ್ಯ ಇತರರಿಗೆ ಅವರು ಸ್ಫೂರ್ತಿಯಾಗಲಿ. ನಮ್ಮ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಪರಸ್ಪರ ಕಚ್ಚಾಡುವ, ಅಸಮಾನತೆವುಳ್ಳ ಸಮಾಜ ನಿರ್ಮಾಣವಾಗಬಾರದು. ಇತರೆ ಧರ್ಮಗಳ ಬಗ್ಗೆ ಸಹಿಷ್ಣುತೆ ಅಗತ್ಯ. ಸಹಬಾಳ್ವೆ ಇರಬೇಕು. ಇದನ್ನು ಎಲ್ಲರೂ ಪಾಲಿಸಿದಾಗ ಸಂವಿಧಾನದ ಧ್ಯೇಯೋದ್ದೇಶಗಳನ್ನು ಪಾಲಿಸಿದಂತಾಗುತ್ತದೆ ಎಂದರು. ಶಕ್ತಿ ಯೋಜನೆ ಜಾರಿಯಾದ ನಂತರ…

Read More

ಬೆಂಗಳೂರು ಅ.21 NEWS DESK :  ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ…

Read More