ನಾಪೋಕ್ಲು ಅ.21 NEWS DESK : ಕರ್ನಾಟಕ ಗಮಕ ಕಲಾ ಪರಿಷತ್ ಮತ್ತು, ಬೆಂಗಳೂರು ಮತ್ತು ದ.ಕ.ಜಿಲ್ಲಾ ಘಟಕದ ವತಿಯಿಂದ ಸುಬ್ರಾಯ ಸಂಪಾಜೆ ಅವರಿಗೆ ಪಾವಂಜೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಪುತ್ತೂರಿನಲ್ಲಿ ನಡೆದ 10ನೇ ದ.ಕ. ಜಿಲ್ಲಾ ಗಮಕ ಕಲಾ ಸಮ್ಮೇಳನದಲ್ಲಿ ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರನ್ನು ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕನ್ನಡ ಕಾವ್ಯಗಳ ಆಯ್ದ ಭಾಗಗಳನ್ನು ಕೊಡಗಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಭಗವದ್ಗೀತೆಯನ್ನು ಆಕಾಶವಾಣಿಯ ಪ್ರಸಾರದಲ್ಲಿ ಗಮಕ ರೂಪದಲ್ಲಿ ಪ್ರಸ್ತುತ ಪಡಿಸಿದ ವಿಶೇಷ ಸಾಧನೆಗಾಗಿ ಕೊಡಗಿನ ಏಕೈಕ ಗಮಕಿ ಸಂಪಾಜೆ ಅವರಿಗೆ ಈ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು. ಖ್ಯಾತ ಗಮಕಿ ಮುಳಿಯ ಶಂಕರ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ನಾಪೋಕ್ಲು ಅ.21 NEWS DESK : ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಸಂತೆ ಮೈದಾನದಲ್ಲಿ ಆಯೋಜಿಸಲಾಗಿದ್ದ 33ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಸಂಘ ಹಿರಿಯ ಆಟೋ ಚಾಲಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ ಸುಕುಮಾರ್ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಆಟೋ ಚಾಲಕರಾದ ವೆಂಕಪ್ಪ, ಅಂತೋನಿ, ಅಬ್ದುಲ್ ರಜಾಕ್ (ಗುಂಡು) ಅವರುಗಳನ್ನು ಸಂಘದ ಪರವಾಗಿ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿ ಗಣ್ಯರು ಹಾಗೂ ಸಂಘ ಉಪ ಅಧ್ಯಕ್ಷರು ರಾಶಿದ್, ಕಾರ್ಯದರ್ಶಿ ಸತೀಶ್, ಖಜಾಂಜಿ, ಚೇತನ್ ನಿರ್ದೇಶಕರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ NEWS DESK ಅ.20 : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಪ್ರೋತ್ಸಾಹ ನೀಡಬೇಕು, ಆದರೆ, ಇಂತಹದ್ದೇ ವಿಷಯವನ್ನು ಆಯ್ಕೆ ಮಾಡಿ ಓದುವಂತೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ಪಿ.ದಿನೇಶ್ ಕುಮಾರ್ ಅವರು ಸಲಹೆ ನೀಡಿದ್ದಾರೆ. ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉನ್ನತ ಹುದ್ದೆಯನ್ನು ಅಲಂಕರಿಸಲು ಎಲ್ಲರಿಗೂ ಸಾಮರ್ಥ್ಯ ಇದೆ, ಆದರೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಸ್ವಂತ ಸಾಮರ್ಥ್ಯದ ಮೇಲೆ ನಂಬಿಕೆ ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಪ್ರತಿಯೊಬ್ಬರು ಉನ್ನತ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು. ಆ ಭಾವನೆಯನ್ನು ಪೋಷಕರು ಮಕ್ಕಳಲ್ಲಿ ಬೆಳೆಸಬೇಕು ಎಂದು ಕರೆ ನೀಡಿದರು. ಪೋಷಕರು ಮಕ್ಕಳಿಗೆ ಡಾಕ್ಟರ್, ಇಂಜಿನಿಯರ್ ಗಳಾಗುವಂತೆ ಒತ್ತಡ ಹೇರದೆ ಅವರ ಆಸಕ್ತಿಯ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡಬೇಕು.…
ಮಡಿಕೇರಿ NEWS DESK ಅ.20 : ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿಶಾಲವಾಗಿ ಬೆಳೆದಿದ್ದು, ಇದರ ಪ್ರಗತಿಯನ್ನು ಸಹಿಸಲಾಗದ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಘಟನೆಯ ಮೇಲೆ ನಿರ್ಬಂಧ ಹೇರಲು ಮುಂದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಎನ್ನುವುದು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ಸಂಘಟನೆಯಲ್ಲ. ಇದರಲ್ಲಿ ರಾಷ್ಟ್ರಭಕ್ತರು ಯಾರು ಬೇಕಾದರು ಪಾಲ್ಗೊಳ್ಳ್ಳಬಹುದಾಗಿದೆ. ಆರ್ಎಸ್ಎಸ್ ನಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್ ಎನ್ನುವ ಶಾಖೆಯೂ ಇದೆಯೆಂದು ತಿಳಿಸಿದರು. ಸಂಘದ ಬೆಳವಣಿಗೆಯನ್ನು ಸಹಿಸಲಾಗದೆ ಸಚಿವ ಪ್ರಿಯಾಂಕ ಖರ್ಗೆಯವರ ಪತ್ರದ ಆಧಾರದಲ್ಲಿ ಆರ್ಎಸ್ಎಸ್ ಮೇಲೆ ನಿರ್ಬಂಧ ಹೇರಲು ಮುಂದಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ‘ಧಮ್’ ಇದ್ದಲ್ಲಿ ಸಂಘವನ್ನು ಬ್ಯಾನ್ ಮಾಡಲಿ ಎಂದು ಸವಾಲು ಹಾಕಿದರು. ಆರ್ಎಸ್ಎಸ್ ಸಂಘಟನೆಯನ್ನು 1979 ಮತ್ತು 1992 ರಲ್ಲಿ ಬ್ಯಾನ್ ಮಾಡಲಾಗಿತ್ತು, ಆದರೆ ನಂತರದ ದಿನಗಳಲ್ಲಿ ದೇಶಭಕ್ತ ಸಂಘಟನೆಗೆ ಮತ್ತೆ ಅವಕಾಶವನ್ನು ಮಾಡಿಕೊಡಲಾಗಿತ್ತು ಎಂದರು. ಖರ್ಗೆಯವರ ಸ್ವ ಕ್ಷೇತ್ರವೆ ಆಗಿರುವ ಗುಲ್ಬರ್ಗ ಜಿಲ್ಲೆಯಲ್ಲಿ ಕನಿಷ್ಟ…
ಗೋಣಿಕೊಪ್ಪ ಅ.20 NEWS DESK : ಸಮೀಕ್ಷೆ ವಿಸ್ತರಣೆಯ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸಲ್ಲದ ಒತ್ತಡ ಹೇರುತ್ತಿರುವುದನ್ನು ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಸಂಘಟನೆ ಖಂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಅಧ್ಯಕ್ಷೆ ಸುಮಿತ್ರ ಸಮೀಕ್ಷೆಯಿಂದ ಕಾರ್ಯಕರ್ತರಿಗೆ ಆಗುತ್ತಿರುವ ಮಾನಸಿಕ ಒತ್ತಡದ ಬಗ್ಗೆ ಅಳಲು ತೋಡಿಕೊಂಡರು. ಪ್ರತಿ ಬಾರಿಯೂ ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಒಂದಲ್ಲ ಒಂದು ಯೋಜನೆಗಳ ಬಗ್ಗೆ ಜನರಿಗೆ ತಲುಪಿಸುವ ಮತ್ತು ಸರ್ವೆ ಕಾರ್ಯ ಮಾಡುವ ವ್ಯವಸ್ಥೆಯನ್ನು ಪೂರಕವಾಗಿ ನಡೆಸುತ್ತಿದ್ದಾರೆ. ತಮ್ಮ ಹಲವಾರು ಜವಾಬ್ದಾರಿಯುತ ಕರ್ತವ್ಯಗಳ ನಡುವೆ ಇತರ ವ್ಯವಸ್ಥೆಗಳ ಬಗ್ಗೆಯು ಗಮನಹರಿಸಲಾಗುತ್ತಿದೆ ಆದರೂ, ಕಾರ್ಯಕರ್ತರ ಸಂಕಷ್ಟಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ಆರೋಪಿಸಿದರು. ತೀವ್ರ ನಿಧಾನ ಗತಿ ಸಮೀಕ್ಷೆಯಿಂದ ಪ್ರಮಾಣವನ್ನು ಗುರಿಯತ್ತ ಸಾಗಿಸುವ ನಿಟ್ಟಿನಲ್ಲಿ ವಿಸ್ತರಣೆಗೊಂಡ ಸಮೀಕ್ಷೆಗೆ ಸರ್ಕಾರದ ಆದೇಶವಿಲ್ಲದಿದ್ದರೂ, ಅಂಗನವಾಡಿ ಕಾರ್ಯಕರ್ತರನ್ನ ಒತ್ತಾಯ ಪೂರಕವಾಗಿ ಸಮೀಕ್ಷೆ ನಡೆಸಲು ಹೇಳುತ್ತಿರುವುದು ಖಂಡನೀಯ ಎಂದರು. ಮೇಲಾಧಿಕಾರಿಗಳ ಸೂಚನೆಯನ್ನು ಉಲ್ಲೇಖಿಸಿ ಪೊನ್ನಂಪೇಟೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಇಲಾಖಾಧಿಕಾರಿ ಕಾರ್ಯಕರ್ತರ ಮೇಲೆ ಒತ್ತಡ…
ಮಡಿಕೇರಿ ಅ.20 NEWS DESK : ಸರಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ವಿರಾಜಪೇಟೆ ಕ್ಷೇತ್ರದ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲೆ ಶಿಕ್ಷಕರು, ಇತರ ಇಲಾಖೆ ಸಿಬ್ಬಂದಿಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು. ಸಮೀಕ್ಷೆ ಸಂದರ್ಭದಲ್ಲಿ ಸಮೀಕ್ಷಕರು ಅನುಭವಿಸುತ್ತಿರುವ ತೊಡಕುಗಳನ್ನು ಹಾಗೂ ಕೆಲವು ತಾಂತ್ರಿಕ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಎಲ್ಲವನ್ನು ಆಲಿಸಿದ ಶಾಸಕರು, ಅಗತ್ಯ ಕ್ರಮ ಕೈಗೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಮಡಿಕೇರಿ ಅ.20 NEWS DESK : ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲ್ಲೂಕು ಮಹಿಳಾ ಬಂಟರ ಸಂಘ, ನಗರ ಬಂಟರ ಸಂಘ, ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಬಂಟರ ಸಂಘದ ಸಹಯೋಗದಲ್ಲಿ ಮಡಿಕೇರಿ ತಾಲ್ಲೂಕು ಬಂಟರ ಸಂಘದ ಆಶ್ರಯದಲ್ಲಿ ಅ.26 ರಂದು ನಗರದ ಗಾಂಧಿ ಮೈದಾನದಲ್ಲಿ ‘ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ವಿವರ ನೀಡಿದ ಮಡಿಕೇರಿ ತಾಲ್ಲೂಕು ಬಂಟರ ಸಂಘದ ಖಜಾಂಚಿ ದಿನೇಶ್ ರೈ, 2023-24, 2024-25ನೇ ಸಾಲಿಗೆ ಸಂಬಂಧಿಸಿದಂತೆ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ 30 ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಪುರಸ್ಕರಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೂರ್ನಾಡು, ಕಗ್ಗೋಡ್ಲು, ತಾಳತ್ಮನೆ, ನಾಪೋಕ್ಲು, ಕತ್ತಲೆಕಾಡು, ಗಾಳಿಬೀಡು ಬಂಟರ ಸಂಘದ ಹೋಬಳಿ ಘಟಕಗಳ ಅಧ್ಯಕ್ಷರನ್ನು ಹಾಗೂ ಪ್ರತಿ ಹೋಬಳಿಯಲ್ಲಿರುವ ಹಿರಿಯ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಇದರೊಂದಿಗೆ ಸ್ವಜಾತಿ ಬಂಧಿಗಳ ಸಾಧಕರಿಗೆ, ಚುನಾಯಿತ ಜನಪ್ರತಿನಿಧಿಗಳನ್ನು ಸನ್ಮಾನಿಸಲಾಗುತ್ತದೆ ಎಂದರು. ಜಿಲ್ಲಾ ಮಟ್ಟದ ಪ್ರತಿಭಾ…
ಮಡಿಕೇರಿ ಅ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಅಕ್ಟೋಬರ್, 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ…
ಮಡಿಕೇರಿ ಅ.20 NEWS DESK : ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಾ ಘೋಷಂ ಹಾಗೂ ಓಣಾಂ ಸಧ್ಯ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ನಗರದ ಕಾವೇರಿ ಹಾಲ್ನಲ್ಲಿ ತಿರುವಾದಿರ ನೃತ್ಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಓಣಂ ಕೇರಳದ ಪವಿತ್ರವಾದ ಹಬ್ಬವಾಗಿದ್ದು, ಕೊಡಗಿನಲ್ಲೂ ಕೂಡ ತಲತಲಾಂತರದಿಂದ ಈ ಹಬ್ಬವನ್ನು ಹಿಂದೂ ಮಲಯಾಳಿ ಸಮುದಾಯ ಆಚರಿಸುತ್ತಾ ಬಂದಿದೆ. ಆ ಮೂಲಕ ಹಿಂದೂ ಮಲಯಾಳಿ ಸಮುದಾಯವನ್ನು ಸಂಘಟಿಸುವ ಕಾರ್ಯವೂ ನಡೆಯುತ್ತಿದೆ ಎಂದರು. ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಮಾತನಾಡಿ, ಹಿಂದೂ ಮಲಯಾಳಿ ಸಮುದಾಯಕ್ಕೂ ಮೈಸೂರು ಅರೆಮನೆಗೂ ಅವಿನಾಭಾವ ಸಂಬಂಧವಿದೆ. ಅರಮನೆಯಲ್ಲೂ ಬಲಿಪಾಡ್ಯಮಿ ಆಚರಿಸಲ್ಪಡುತ್ತದೆ. ಇಲ್ಲಿನ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಲು ಪ್ರತಿಯೊಬ್ಬರು ಪಣತೊಡಬೇಕು. ನಮ್ಮ ಧರ್ಮವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಡಿಕೇರಿ ಹಿಂದೂ…
ವಿರಾಜಪೇಟೆ ಅ.20 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನಡೆಯಿತು. ವಿರಾಜಪೇಟೆಯ ಶಾಸಕರ ಕಛೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಜಾನ್ಸನ್, ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಯೋಜನೆಗಳ ಅನುಷ್ಠಾನವನ್ನು ಶೇ.100ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಫಲಾನುಭವಿಗಳ ಅಹವಾಲು ಸ್ವೀಕರಿಸಲು ಸಂವಾದ ನಡೆಸಲಾಗುವುದು. ಶಕ್ತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಚರ್ಚಿಸಲಾಯಿತು. ಅರ್ಹ ಫಲಾನುಭವಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಿರಲಿ. ಪಂಚ ಗ್ಯಾರಂಟಿಗಳು ಕರ್ನಾಟಕ ಸರಕಾರದ ಅತ್ಯಂತ ಮಹತ್ವದ ಯೋಜನೆಗಳಾಗಿದ್ದು, ಅರ್ಹತೆ ಹೊಂದಿರುವ ಯಾವುದೇ ಫಲಾನುಭವಿಗಳು ತಂತ್ರಾಂಶದ ನೋಂದಣಿ ಸೇರಿದಂತೆ ಯಾವುದೇ ಕಾರಣದಿಂದ ವಂಚಿತರಾಗದಂತೆ ಅನುಷ್ಠಾನ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ಯಾರಂಟಿ ಯೋಜನೆಗಳು ನಾಗರಿಕರ ಜೀವನದ ಗುಣಮಟ್ಟ ಸುಧಾರಣೆಗೆ ಪೂರಕವಾಗಿದ್ದು, ನಮ್ಮ ಭಾಗದಲ್ಲಿಶೇ.100 ರ ಅನುಷ್ಠಾನಕ್ಕೆ ಮುಂದಾಗುವಂತೆ ಸೂಚಿಸಿದರು. ಪಂಚಾಯಿತಿ ಹಂತದಲ್ಲಿ…






