ನಾಪೋಕ್ಲು ಅ.20 NEWS DESK : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 30ನೇ ವರ್ಷದ ಕಾವೇರಿ ತೀರ್ಥ ವಿತರಿಸಲಾಯಿತು. ಕಾವೇರಿ ರಥಯಾತ್ರೆ ನಾಪೋಕ್ಲು ನಿಂದ ತಲಕಾವೇರಿಗೆ ತೆರಳಿ ಹಿಂತುರುಗಿ ಬರುವಾಗ ವಿವಿಧ ಗ್ರಾಮಗಳ ಭಕ್ತರಿಗೆ ಕಾವೇರಿ ತೀರ್ಥ ವಿತರಿಸಿದರು. ಭಾಗಮಂಡಲದಿಂದ ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ ರಥಯಾತ್ರೆ ಆರಂಭಗೊಂಡು ಭಕ್ತರಿಗೆ ತೀರ್ಥ ವಿತರಣೆಯನ್ನು ಚೇರಂಗಾಲ, ಅಯ್ಯಂಗೇರಿ, ಪುಲಿಕೋಟು, ಪೇರೂರು, ಬಲ್ಲಮಾವಟಿ, ಚೋನಕೆರೆ, ನಾಪೋಕ್ಲು ಗ್ರಾಮಗಳಲ್ಲಿ ಪೂರೈಸಿ ಸಮೀಪದ ಪಾಲೂರಿನ ಹರಿಶ್ಚಂದ್ರ ದೇವಾಲಯದಲ್ಲಿ ಸಮಾಪ್ತಿಗೊಂಡಿತು. ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಮಾತನಾಡಿ, ಕಳೆದ 29 ವರ್ಷಗಳಿಂದ ಯಶಸ್ವಿಯಾಗಿ ಭಕ್ತರಿಗೆ ತೀರ್ಥ ವಿತರಣೆ ಮಾಡಲಾಗುತ್ತಿದೆ. ತಲಕಾವೇರಿಗೆ ತೆರಳಲಾರದ ಭಕ್ತರ ಮನೆಗಳಿಗೆ ತೀರ್ಥ ವಿತರಿಸುತ್ತಿರುವುದುದು ಸಂತಸತಂದಿದೆ. ಇದಕ್ಕೆ ಎಲ್ಲರ ಸಹಕಾರ ಲಭಿಸಿದೆ ಎಂದರು. ಭಾಗಮಂಡಲದಿಂದ ಅಯ್ಯಂಗೇರಿ, ಬಲ್ಲಮಾವಟಿ ಮಾರ್ಗವಾಗಿ ನಾಪೋಕ್ಲುವರೆಗೆ ತೀರ್ಥ ವಿತರಿಸಲಾಯಿತು ಎಂದರು. ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿನ್ನಪ್ಪ, ಬಿದ್ದಾಟಂಡ…
ಲೇಖಕ: admin
ನಾಪೋಕ್ಲು ಅ.20 NEWS DESK : ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಂಧುಗಳಿಗೆ ಮತ್ತು ಕಾವೇರಿ ಭಕ್ತರಿಗೆ ಕಾವೇರಿ ತೀರ್ಥವನ್ನು ಶ್ರದ್ಧಾ ಭಕ್ತಿಯಿಂದ ವಿತರಣೆ ಮಾಡಲಾಯಿತು. ಮೈಸೂರಿನ ಕೊಡಗು ಗೌಡ ಸಮುದಾಯ ಭವನದ ದೇವರ ಮಂಟಪದಲ್ಲಿ ತೀರ್ಥ ಪೂಜೆಯನ್ನು ನೆರವೇರಿಸಿದ ನಂತರ, ನೆರೆದ ಭಕ್ತರಿಗೆ ತೀರ್ಥ ವಿತರಣೆ ಮಾಡಲಾಯಿತು. ಈ ಸಂದರ್ಭ ಮೈಸೂರು ಕೊಡಗು ಗೌಡ ಸಮಾಜದ ಪದಾಧಿಕಾರಿಗಳಾದ ಪೊನ್ನೆಟಿ ನಂದ, ನಡುವಟ್ಟಿರ ಲಕ್ಷ್ಮಣ, ನಡುಮನೆ ಚೆಂಗಪ್ಪ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಹೊಸೂರು ರಾಘವ, ಕುಂಟುಪುಣಿ ರಮೇಶ್, ಪಾಣತ್ತಲೆ ವಸಂತ, ಚಪ್ಪೆರ ಯಮುನಾ, ಕುಂಟುಪುಣಿ ಶೀಲಾ, ತೊಟಂಬೈಲು ಇಂದಿರಾ, ಮೈಸೂರು ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷರಾದ ತೊಟಂಬೈಲು ಮನೋಹರ, ಕುದುಪಜೆ ಕುಶಾಲಪ್ಪ, ಕೊಡಗು ಮತ್ತು ದ. ಕನ್ನಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ನಡುವಟ್ಟಿರ ಗೀತಾ ಲಕ್ಷ್ಮಣ ಮೊದಲಾದವರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.20 NEWS DESK : ಇಂಡೋನೇಷ್ಯಾದ ನೇಗೇರಿ ಸಮರಂಗ್ ಯೂನಿವರ್ಸಿಟಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ ಜುರೈಜ್ ನೂರಾನಿ ಕುಂಜಿಲ ಪ್ರಬಂಧ ಮಂಡನೆಗೆ ಆಯ್ಕೆಯಾಗಿದ್ದಾರೆ. ಈ ಮೊದಲು ಅರ್ಥಶಾಸ್ತ್ರ ಮೈಕ್ರೋ ಫೈನಾನ್ಸ್ ನಲ್ಲಿ ತನ್ನ ಸಂಶೋಧನಾ ಪ್ರಬಂಧಗಳನ್ನು ಬ್ರಿಟನ್ ನ ಆಕ್ಸ್ಫರ್ಡ್ ಯೂನಿವರ್ಸಿಟಿಯಲ್ಲಿ ಪ್ರಸ್ತುತ ಪಡಿಸಿದ್ದಾರೆ. ನಾಲೆಜ್ ಸಿಟಿಯ ಅಂತಾರಾಷ್ಟ್ರೀಯ ಕಾಲೇಜಿನ ಪಿ.ಜಿ ವಿದ್ಯಾರ್ಥಿಯಾಗಿದ್ದು ಹಲವು ಅಂತಾರಾಷ್ಟ್ರೀಯ ಕಾನ್ಫರೆನ್ಸ್ ಗಳಲ್ಲಿ ಭಾಗವಹಿಸಿದ್ದರು. ಇವರು ಕುಂಜಿಲದ ಅಜೀಜ್ ಮಾಸ್ಟರ್ ಹಾಗೂ ಸುಮಯ್ಯ ದಂಪತಿಗಳ ಪುತ್ರ. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಅ.20 NEWS DESK : ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವ ಕುರಿತಂತೆ ಜಿಲ್ಲಾಡಳಿತ, ಜಿ.ಪಂ.,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಕುಶಾಲನಗರ ಪುರಸಭೆ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ,ಭಾರತ್ ಸ್ಕೌಟ್ಸ್ ,ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಎಸ್.ಎಸ್.ಘಟಕದ ಸಂಯುಕ್ತಾಶ್ರಯದಲ್ಲಿ ಶನಿವಾರ (ಅ.19 ರಂದು ) ಕುಶಾಲನಗರ ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ನೇಸರ ಇಕೋ ಕ್ಲಬ್ ನ ಸಹಯೋಗದೊಂದಿಗೆ ‘ನಮ್ಮ ನಡೆ ಹಸಿರೆಡೆಗೆ: ಗೋ ಗ್ರೀನ್ *ಅಭಿಯಾನದಡಿ ಸ್ವಚ್ಛ, ಸ್ವಸ್ಥ ಹಾಗೂ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ’ ಕುರಿತಂತೆ ಪರಿಸರ ಜಾಗೃತಿ ಆಂದೋಲನ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಹಸಿರು ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ…
ಮಡಿಕೇರಿ NEWS DESK ಅ.19 : ಕೊಡಗು ಪತ್ರಿಕಾ ಭವನ ಟ್ರಸ್ಟ್ನ 24ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರದಂದು ಪತ್ರಿಕಾ ಭವನದಲ್ಲಿ ಆಯೋಜಿತ ಒಳಾಂಗಣ ಕ್ರೀಡಾ ಕೂಟವನ್ನು ಹಿರಿಯ ಕಬಡ್ಡಿ ಆಟಗಾರ ಜಿ.ಸಿ.ಕೃಷ್ಣ ಅವರು ಟಿ.ಟಿ ಆಡುವ ಮೂಲಕ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭಕೋರಿದರು. ಈ ಸಂದರ್ಭ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಅವರು ಮಾತನಾಡಿ, ಪತ್ರಿಕಾ ಭವನ ಆರಂಭವಾದಲ್ಲಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ವಾರ್ಷಿಕೋತ್ಸವದ ಸಂದರ್ಭ ನಿರಂತರವಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ವಿವಿಧ ಕ್ರೀಡಾಕೂಟಗಳಿಗೆ ಅನೇಕ ಪತ್ರಕರ್ತರು ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಕ್ರೀಡಾಪಟುಗಳು ಆಗಮಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು, ಕ್ರೀಡಾಕೂಟಕ್ಕೆ ಶುಭಕೋರಿದರು. ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಜಿ.ವಿ.ರವಿಕುಮಾರ್ ಮಾತನಾಡಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ ವರ್ಷಂಪ್ರತಿ ತನ್ನ ವಾರ್ಷಿಕೋತ್ಸವ ಸಂದರ್ಭ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬದವರಿಗಾಗಿ ವಿವಿಧ ಒಳಾಂಗಣ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಕೊಡಗು…
ಬೆಂಗಳೂರು NEWS DESK ಅ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಅ.19 : ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಕೊಡವ ಸಮಾಜ ಸರಕಾರದ ಅನುದಾನ ರೂ.6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಕೊಡವ ಸಮಾಜದ ಕಾಮಗಾರಿ ಉತ್ತಮ ರೀತಿಯಲ್ಲಿ ನಡೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸರಕಾರದ ಅನುದಾನ ಸದ್ಬಳಕೆಯಾಗುವಂತೆ ಕಾಳಜಿ ತೋರಬೇಕೆಂದು ಸಲಹೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಬಾಳುಗೋಡು ಕೊಡವ ಸಮಾಜದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಪರಿಣಾಮ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಮೂಲಕ ಅನುದಾನ ಬಿಡುಗಡೆಗೊಂಡಿದೆ ಎಂದರು. ರೂ.6 ಕೋಟಿ ವೆಚ್ಚದಲ್ಲಿ ಕೊಡವ ಸಮಾಜದ ವಿವಿಧ ಅಭಿವೃದ್ಧಿ ಕಾರ್ಯ, ಮೈದಾನದ ಅಭಿವೃದ್ಧಿ, ಪ್ರೇಕ್ಷಕರ ಗ್ಯಾಲರಿ, ತಡೆಗೋಡೆ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯ ಗುಣಮಟ್ಟ ತೃಪ್ತಿ ತಂದಿದ್ದು, ಅಭಿವೃಧ್ಧಿ ಕಾರ್ಯ ಶೀಘ್ರ ಪೂರ್ಣಗೊಳ್ಳುವ ವಿಶ್ವಾಶವಿದೆ. ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆತರುವ ಪ್ರಯತ್ನ ಮಾಡುವುದಾಗಿ…
ಮಡಿಕೇರಿ NEWS DESK ಅ.18 : ಕಾವೇರಿ ಚಂಗ್ರಾಂದಿಯ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಪುಷ್ಪನಮನ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿತು. ಅನಾದಿ ಕಾಲದಿಂದಲೂ ಜಾನಪದ ಪದ್ಧತಿಯ ರೂಪದಲ್ಲಿ ನಡೆದುಕೊಂಡು ಬಂದಿರುವಂತೆ ದೋಸೆ ಮತ್ತು ಪುಟ್ಟ್ ನ್ನು “ಬೊತ್ತ್” ಎಂಬ ಗಿಡಮೂಲಿಕೆಯ ಮರದ ಬಳ್ಳಿ”ಯಲ್ಲಿಟ್ಟು ಹಿರಿಯರನ್ನು ಸ್ಮರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ದೇವಟ್ ಪರಂಬ್ ದುರಂತ ನರಮೇಧದ ಸ್ಮಾರಕ ಸ್ಥಳಕ್ಕೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಾವಿತ್ರ್ಯತೆಯನ್ನು ನೀಡುವ ಉದ್ದೇಶದಿಂದ ಕಳೆದ ಅನೇಕ ವರ್ಷಗಳಿಂದ ಸಿಎನ್ಸಿ ಸಂಘಟನೆ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ ಎಂದರು. ಪ್ರತಿ ವರ್ಷ ಕಾವೇರಿ ತೊಲೆಯಾರ್ ಚಂಗ್ರಾಂದಿ ಆಚರಣೆಗೆ ಎರಡು ಅಥವಾ ಮೂರು ದಿನಗಳ ಮೊದಲು ತಮ್ಮ ಜೌಗು ಭೂಮಿಗಳು, ಭತ್ತದ ಗದ್ದೆಗಳು, ಭತ್ತ ಒಣಗಿಸುವ ಅಂಗಳಗಳು, ಹಸುವಿನ ಸಗಣಿ ಹೊಂಡಗಳು, ಕೊಟ್ಟಿಗೆಗಳು, ಕುಡಿಯುವ ನೀರಿನ ಬಾವಿಗಳು, ದ್ವಾರಗಳು ಮತ್ತು ಮನೆಗಳ…
ಮಡಿಕೇರಿ NEWS DESK ಅ.18 : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಮರುದಿನ ಹಾರಂಗಿ ಜಲಾಶಯದ ಕ್ರೆಸ್ಟ್ಗೇಟ್ ಬಳಿ ಇರುವ ತಾಯಿ ಕಾವೇರಿ ಮಾತೆ ಪ್ರತಿಮೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಾರಿ ಮೇ 3ನೇ ವಾರದಿಂದಲೇ ಮಳೆ ಆರಂಭವಾಗಿದ್ದು, ಹಾರಂಗಿ ಜಲಾಶಯ ಇಂದಿಗೂ ಸಹ ಭರ್ತಿಯಾಗಿರುವ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಳಿಕ ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಶಾಲೂ ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಪ್ರತೀ ವರ್ಷದಂತೆ ಈ ವರ್ಷವೂ ಸಹ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಂತರ ಹಾರಂಗಿ ಜಲಾಶಯದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ವಿತರಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರು…
ಮಡಿಕೇರಿ NEWS DESK ಅ.18 : ಜಿಲ್ಲಾಡಳಿತವು 2025 ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಅರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯತಕ್ಕದ್ದು. 125 ಡೆಸಿಬಲ್ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ಸಮಯ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ…






