ಲೇಖಕ: admin

ಮಡಿಕೇರಿ NEWS DESK ಅ.18 : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ (ನೀಮಾ) ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿ ಮಹೋತ್ಸವ ಸಮಾರಂಭ ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ಗಣಪತಿ ಹೋಮ ಮತ್ತು ಧನ್ವಂತರಿ ಹವನ ಶ್ರದ್ಧಾಭಕ್ತಿಯಿಂದ ನಡೆಯಿತು. ಸಹಸ್ರಾಕ್ಷ, ಉಕ್ಕಿನಡ್ಕ ಡಾ.ಜಯ ಗೋವಿಂದ ಯು. ‘ಸಮಾಜದ ಮೇಲೆ ನೀಮಾ’ದ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಿದರು. ಅಲ್ಲದೆ ‘ನೀಮಾ’ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಿದರು. ಬೆಂಗಳೂರು ಕೆಎಯುಪಿಯ ಡಾ.ಎಂ.ಡಿ.ರಫಿ ಹಕೀಂ ಹಾಗೂ ಕೆಎಸ್‌ಬಿ ನೀಮಾ ಅಧ್ಯಕ್ಷರು ಮಾತನಾಡಿದರು. *ಸನ್ಮಾನ* ನೀಮಾ ಅಧ್ಯಕ್ಷ ಡಾ.ರಾಜಾರಾಮ ಎ.ಆರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಯೋಗ ಗುರು ಕೆ.ಕೆ.ಮಹೇಶ್, ತಣಲ್ ಸಂಸ್ಥೆಯ ಮಹಮ್ಮದ್, ವನ್ಯಜೀವಿ ಪಶುವೈದ್ಯ ಡಾ.ಬಿ.ಸಿ.ಚಿಟ್ಟಿಯಪ್ಪ, ಲೀಡ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ, ಲೇಖನಿ ಮೂಲಕ ಶಾಂತಿ…

Read More

ವಿರಾಜಪೇಟೆ ಅ.18 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿ ನಗರದ ಅಂದವನ್ನು ಕೆಡಿಸುತ್ತಿರುವವರನ್ನು ಪತ್ತೆ ಹಚ್ಚಿ ಅವರ ಭಾವಚಿತ್ರವನ್ನು ಪ್ರಚಾರ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಭಾಗವಾಗಿ ಪುರಸಭಾ ವತಿಯಿಂದ ವಿನೂತನ ಮಾರ್ಗ ಒಂದನ್ನು ಅಳವಡಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಹೇಳಿದರು. ಅಧಿಕೃತವಾಗಿ ಫೇಸ್‍ಬುಕ್ ಪೇಜ್ ಖಾತೆ ತೆರೆಯಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ಯಾರೇ ಕಂಡರೂ ಕೂಡಲೇ ಫೋಟೋ ಕ್ಲಿಕ್ಕಿಸಿ ಈ ಫೇಸ್ಬುಕ್ ಪೇಜ್‍ನಲ್ಲಿ ಹಾಕಬಹುದು. ವ್ಯಕ್ತಿ ಹಾಗೂ ವಾಹನದಲ್ಲಿ ತಂದು ಹಾಕುವವರ ವಾಹನದ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ ನಗರದ ನಿರ್ದಿಷ್ಟವಾದ ಕೆಲವು ಸ್ಥಳಗಳನ್ನು ಗುರುತಿಸಿ ಸಿ,ಸಿ. ಕ್ಯಾಮರಾ ಅಳವಡಿಸಲಾಗುವುದು. ಶಾಸಕರ ನಿರ್ದೇಶನದ ಮೇರೆಗೆ ‘ಕ್ಲೀನ್ ವಿರಾಜಪೇಟೆ” ಯೋಜನೆಯಂತೆ ಪುರಸಭೆ ಈ ವಿನೂತನ ಮಾರ್ಗವನ್ನು ಅನುಸರಿಸಿದೆ. ಈ ಕುರಿತು ಸಹಾಯವಾಣಿ ಸಂಖ್ಯೆ 9986096362 ಅನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಕಸ ಬಿಸಾಡುವವರು ಅಂಗಡಿ ಮಾಲೀಕರಾಗಿದ್ದಲ್ಲಿ…

Read More

ಮಡಿಕೇರಿ ಅ.18 NEWS DESK : ಕುಂಜಿಲಾ -ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿರುವ 42ನೇ ವರ್ಷದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ವರ್ಷದಲ್ಲಿ ಒಂದು ಬಾರಿ ಎಲ್ಲಾ ಗ್ರಾಮಸ್ಥರು ಒಂದೆಡೆ ಸೇರಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಗ್ರಾಮದಲ್ಲಿ ಒಗ್ಗಟ್ಟು ಹೆಚ್ಚುತ್ತದೆ ಎಂದರು. ಕ್ರೀಡೆಗೆ ಹೆಸರುವಾಸಿಯಾದ ನಮ್ಮ ಕೊಡಗು ಜಿಲ್ಲೆಯ ಇತಿಹಾಸಕ್ಕೆ ಮತ್ತೊಂದು ಬಲ ಬಂದಂತಾಗಿದೆ. ತಮ್ಮೆಲ್ಲ ಕೆಲಸದ ಒತ್ತಡಗಳನ್ನು ಬದಿಗಿಟ್ಟು, ಈ ದಿನ ಗ್ರಾಮಸ್ಥರು ಒಟ್ಟಾಗಿ ಆಟದಲ್ಲಿ ಭಾಗವಹಿಸಿರುವುದನ್ನು ನೋಡಲು ನಿಜವಾಗಿ ಸಂತೋಷ ಆಗುತ್ತಿದೆ ಎಂದು ಹೇಳಿದರು. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಇಂತಹ ಕ್ರೀಡಾಕೂಟಗಳು ಅತ್ಯಂತ ಮಹತ್ವ ಪಡೆಯುತ್ತದೆ ಎಂದರು. ಈ ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು ತಮ್ಮ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದರು. ಈಗಾಗಲೇ ಈ ಭಾಗಕ್ಕೆ ತನಗೆ ಹಲವು ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ಬಂದಿದ್ದು, ಹಂತ…

Read More

ವಿರಾಜಪೇಟೆ ಅ.18 NEWS DESK : ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ನಾಗದೇವರ ದೇವಾಲಯದಲ್ಲಿ ಅ.21, 22 ಮತ್ತು 23 ರಂದು ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವ ಪೂಜೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ಸಂಜೆ 6 ಗಂಟೆಗೆ ವಿಶೇಷ ಪೂಜೆ, ಶ್ರೀದುರ್ಗಿ ವಿಷ್ಣು ಮೂರ್ತಿ ನಾಗದೇವರಿಗೆ ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮೂರು ದಿನಗಳು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಅ.18 NEWS DESK : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 27ನೇ ವಾರ್ಷಿಕೋತ್ಸವವು ಅ.23 ಮತ್ತು 24 ರಂದು ನಡೆಯಲಿದೆ. ಅ.23ರ ಸಂಜೆಯಿಂದ ಆರಂಭಗೊಳ್ಳುವ ಪೂಜಾ ವಿಧಿವಿಧಾನಗಳು ಅ.24ರ ಮಧ್ಯಾಹ್ನ ಮಹಾಮಂಗಳಾರತಿಯೊಂದಿಗೆ ಪೂರ್ಣಗೊಳ್ಳಲಿದೆ. ಆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಅ.18 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಲಂಬೇರಿ ಪ್ರಸಿದ್ಧ ಅಗಸ್ತೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಐತಿಹಾಸಿಕ ಮಹತ್ವವುಳ್ಳ ಹಾಗೂ ಕಾವೇರಿ ತಾಯಿಗೆ ಸಂಬಂಧಿಸಿದ ಅತ್ಯಂತ ಪಾವಿತ್ರ್ಯತೆಯ ಈ ಕ್ಷೇತ್ರಕ್ಕೆ, ತುಲಾ ಸಂಕ್ರಮಣದ ಮರುದಿನ ಶಾಸಕರು ಆಗಮಿಸಿ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಆಗಮಿಸಿ ಕಾವೇರಿ ನದಿಗೆ ತೆರಳಿ, ಪುಣ್ಯ ತೀರ್ಥ ಸೇವಿಸಿದ ಬಳಿಕ ನದೀ ಸ್ವರೂಪಿಣಿ ಕಾವೇರಿ ತಾಯಿಗೆ ಆರತಿ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅಗಸ್ಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಯೇ ಅನ್ನಪ್ರಸಾದವನ್ನು ಸ್ವೀಕರಿಸಿದರು. ಅಗಸ್ಟೇಶ್ವರ ಸನ್ನಿಧಿಗೆ ಆಗಮಿಸುವ ಸಂದರ್ಭ ಮುನೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೊಳ್ಳಚೆಟ್ಟೀರ ಸುರೇಶ್, ಬೋಳಂಡ ಶೇರಿ, ಕೌಶಿಕ್, ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಮಡಿಕೇರಿ, ಅ.18 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು, ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ “ನಮ್ಮ ನಡೆ ಹಸಿರೆಡೆಗೆ”: “ಗೋ ಗ್ರೀನ್ ಅಭಿಯಾನ”: 2025 ದಡಿ ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ-2025*ಅಂಗವಾಗಿ *ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಜಿಲ್ಲಾಮಟ್ಟದ ಜಾಗೃತಿ ಅಭಿಯಾನ ಏರ್ಪಡಿಸಲಾಗಿತ್ತು. ಹಣತೆ(ಮಣ್ಣಿನ ದೀಪ) ಬೆಳಗಿಸಿ ಹಸಿರು ದೀಪಾವಳಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ‘ಪ್ರತಿಯೊಬ್ಬರೂ…

Read More

ಪೊನ್ನಂಪೇಟೆ, ಅ.18 NEWS DESK :  ಬಾಳೆಲೆಯ ರಾಜಾಪುರ (ದೇವನೂರು) ಗ್ರಾಮಸ್ಥರು ಬಾಳೆಲೆಯಲ್ಲಿ ಸ್ವಚ್ಛತಾ ಶ್ರಮದಾನ ಮಾಡಿದರು. ಸ್ವಚ್ಛ ಕೊಡಗು -ಸುಂದರ ಕೊಡಗು ಯೋಜನೆಗೆ ಕೈಜೋಡಿಸಿರುವ ರಾಜಾಪುರ ಗ್ರಾಮಸ್ಥರು ಬಾಳೆಲೆಯ ಗಣೇಶ ದೇವಸ್ಥಾನದಿಂದ ಕಿಸ್ತೂರಿನವರೆಗಿನ ಒಟ್ಟು 10 ಕಿ.ಮೀ. ಉದ್ದದ ರಸ್ತೆಯ ಎರಡು ಬದಿಗಳಲ್ಲಿ ಬಿದ್ದಿದ್ದ ಕಸ, ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಸಂಗ್ರಹಿಸಿದ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿಗೊಳಿಸಿದರು. ಈ ಸಂದರ್ಭ  ಮಾತನಾಡಿದ ಗ್ರಾಮದ ಪ್ರಮುಖರಾದ ಪಾರುವಂಗಡ ಎನ್. ಸೋಮಣ್ಣ, ಸ್ವಚ್ಛ ಕೊಡಗು ಸುಂದರ ಕೊಡಗು ಉತ್ತಮ ಪರಿಕಲ್ಪನೆಯಾಗಿದೆ. ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಈ ಯೋಜನೆ ಹೆಚ್ಚು ಸಹಕಾರಿಯಾಗಿದೆ. ಕೊಡಗಿನ ಪ್ರತಿಯೊಬ್ಬರಲ್ಲೂ ಸ್ವಚ್ಛ ಕೊಡಗು ಕಲ್ಪನೆ ಸ್ವಯಂ ಪ್ರೇರಣೆಯಿಂದ ಮೂಡಿ ಬರಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Read More

ಮಡಿಕೇರಿ ಅ.18 NEWS DESK : ಕಾವೇರಿ ತೀರ್ಥೋದ್ಭವ ಹಿನ್ನೆಲೆ ವಿರಾಜಪೇಟೆಯಿಂದ ತಲಕಾವೇರಿವರೆಗೆ ಆರು ಯುವಕರು 5ನೇ ವರ್ಷದ ಪಾದಯಾತ್ರೆ ಮಾಡಿದರು. ಕಾವೇರಿ ಮಾತೆಯ ಭಕ್ತಾದಿಗಳಾಗಿರುವ ಚೆಟ್ಟೋಳಿರ ಶರತ್ ಸೋಮಣ್ಣ , ಮುರುವಂಡ ಸಾವನ್ ಸೋಮಣ್ಣ, ಕಾಳಮಂಡ ರಾಬಿನ್ ಅಚ್ಚಮ್ಮ, ಚೈಯ್ಯಂಡ ಕೀರ್ತನ್ ಅಯ್ಯಪ್ಪ, ಪೊನ್ನೋಳತಂಡ ಶರಣು, ಮುರುವಂಡ ಜಗತ್ ಮಾದಯ್ಯ, ಪೊರ್ಕೋಂಡ ಶಾನ್ ನಾಣಯ್ಯ , ಮುರುವಂಡ ಸ್ಪೂರ್ತಿ ಸೀತಮ್ಮ, ಪೊರ್ಕೋಂಡ ರಿಯಾನ್ ಪೆಮ್ಮಯ್ಯ, ಮಾಳೇಟಿರ ಶ್ರೀಜನ್ ಗಣಪತಿ, ಮುದ್ದಿಯಡ ಕರಣ್ ಕಾವೇರಪ್ಪ ವಿರಾಜಪೇಟೆಯಿಂದ ಸುಮಾರು 58 ಕಿಮೀ  ಪಾದಯಾತ್ರೆ ಕೈಗೊಂಡಿದ್ದರು.ಮುರುವಂಡ ಸ್ಪೂರ್ತಿ ಸೀತಮ್ಮ  2ನೇ ಬಾರಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು ತಾಯಿ ಕಾವೇರಿಯ ಆಶೀರ್ವಾದ ಪಡೆದರು. ವಿರಾಜಪೇಟೆ , ಕದನೂರು , ಕಡಂಗ , ನಾಪೋಕ್ಲು, ಬಲ್ಲಮಾವಟಿ, ಅಯ್ಯಂಗೇರಿ ಮೂಲಕ ಭಾಗಮಂಡಲಕ್ಕೆ ಸಂಜೆತಲುಪಿದ ಯುವಕರು, ಗುರುವಾರ ಭಾಗಮಂಡಲದಿಂದ ಎಲ್ಲರೊಂದಿಗೆ ಪಾದಯಾತ್ರೆ ಮುಂದುವರಿಸಿ ತೀರ್ಥೋದ್ಭವ ಮುನ್ನ ತಲಕಾವೇರಿಗೆ ತಲುಪಿದರು. ಕಾವೇರಿಯ ಪವಿತ್ರ ತೀರ್ಥವನ್ನು ಪಡೆದು ಹಲವೆಡೆ ತೀರ್ಥ ಪ್ರಸಾದವನ್ನು ವಿತರಿಸಿದರು.

Read More

ಮೈಸೂರು ಅ.18 NEWS DESK : ಪತ್ರಕರ್ತರು ಸತ್ಯ ಹೇಳುತ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಯಾರಿಗೂ ಗೌರವ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ  “ಮುಖ್ಯಮಂತ್ರಿ ಕಪ್ ಪ್ರಶಸ್ತಿ” ನೀಡಿ, ಶುಭ ಹಾರೈಸಿದರು.  ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದರು. ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು…

Read More