ಲೇಖಕ: admin

ಮೂರ್ನಾಡು.ಅ.18 NEWS DESK : ಹಾಕತ್ತೂರು ತೊಂಬತ್ತು ಮನೆಯ ತ್ರಿನೇತ್ರ ಯುವಕ ಸಂಘದ ವತಿಯಿಂದ  ಗ್ರಾಮೀಣ ಕ್ರೀಡಾಕೂಟ ನಡೆಯಿತು. ತೊಂಬತ್ತು ಮನೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ  ಹಗ್ಗ ಜಗ್ಗಾಟ, ಶಾಲಾ ಮಕ್ಕಳ ರಸ್ತೆ ಓಟ, ಸಾರ್ವಜನಿಕ ಹೋಟೆಲ್ ಸ್ಪರ್ಧೆ, ಮಹಿಳಾ ವಿಭಾಗದ ಓಟ, ಹಗ್ಗಜಗ್ಗಾಟ ಮೊದಲಾದ ಸ್ಪರ್ಧೆ ನಡೆಯಿತು. ನಂತರ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಸಂಘದ ಅಧ್ಯಕ್ಷರಾದ ಸುಕುಮಾರ್ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಘದ ಹಿರಿಯ ಸಲಹೆಗಾರರದ ಎ.ಕೆ.ಕಾರ್ಯಪ್ಪ, ಸಂಘದ ಸ್ಥಾಪಕ ಅಧ್ಯಕ್ಷರಾದ ಪಿ.ಇ.ದಿವಾಕರ, ದಾನಿಗಳಾದ ಚಂದ್ರವತಿ, ಪ್ರಸಾದ್ ಪೂಜಾರಿ, ಉಳುವರನ ಅನಿಲ್, ದೇರೆಜೆ ದೇವರಾಜ್, ಸಂಘದ ಮಾಜಿ ಅಧ್ಯಕ್ಷರಾದ ಟಿ.ಕೆ.ಸಂತೋಷ್, ಹಾಕತ್ತೂರು ಜಮಾಾಯತ್ ಮಾಜಿ ಅಧ್ಯಕ್ಷ ಖಾಸಿಂ, ರಾಜರಾಜೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷರಾದ ಪ್ರವೀಣ್, ಗಾಯತ್ರಿ ಜನಾರ್ಧನ್, ಹಿರಿಯರಾದ ಮೇಚಿರ ನಾಣಯ್ಯ ಹಾಜರಿದ್ದರು.

Read More

ಚೆಟ್ಟಳ್ಳಿ ಅ.18 NEWS DESK  : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕಾವೇರಿ ತೀರ್ಥ ಪೂಜೆ  ಹಾಗೂ ವಿತರಣೆ ನೆರವೇರಿತು. ಸಹಕಾರ ಸಂಘದ ಮುಂಭಾಗದಲ್ಲಿ ಪ್ರತಿಷ್ಠಾಪಿಸಿರುವ ಕಾವೇರಿ ಪ್ರತಿಮೆಗೆ ಅರ್ಚಕರಾದ ಯೋಗೇಶ್ ಭಟ್ ವಿಶೇಷ ಹೂವಿನ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿ, ತೀಥ ವಿತರಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ  ಮಾತನಾಡಿ, ಕಳೆದ 17 ವರ್ಷಗಳಿಂದ ನಿರಂತರವಾಗಿ ಕೊಡಗಿನ ಕುಲದೇವಿ ಮಾತೆಯ ಪುಣ್ಯ ತೀರ್ಥೋದ್ಭವದಂದು ಪವಿತ್ರ ತೀರ್ಥವನ್ನು ತಂದು ವಿತರಿಸಲಾಗುತ್ತಿದೆ. ಕಾವೇರಿ ಮಾತೆಯು ಎಲ್ಲರಿಗೂ ಒಳಿತನ್ನು ಮಾಡಲೆಂದು ಪ್ರಾರ್ಥಿಸಿದರು. ಮಹಾಮಂಗಳಾರತಿಯ ನಂತರ ಪವಿತ್ರ ತೀರ್ಥ ಹಾಗೂ ಪ್ರಸಾದ ವಿತರಿಸಲಾಯಿತು. ಸಹಕಾರ ಸಂಘದ ನಿರ್ದೇಶಕರು, ಸದಸ್ಯರು, ಸಿಬಂದ್ದಿ ವರ್ಗ ಹಾಜರಿದ್ದರು.

Read More

ಬೆಂಗಳೂರು ಅ.18 NEWS DESK : ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ. ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್‌ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಅವರಿಗೆ ಹಸ್ತಾಂತರಿಸಿ, ಮಾತನಾಡಿದರು. ಸಂಸ್ಥೆಯ ಸೇವೆಯು ಶ್ಲಾಘನೀಯವಾದುದ್ದು. ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ…

Read More

ಮಡಿಕೇರಿ ಅ.18 NEWS DESK : ಪ್ರಸಕ್ತ (2025-26) ಸಾಲಿಗೆ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವು 2025 ರ ನವೆಂಬರ್, 04 ರಿಂದ 2026 ರ ಫೆಬ್ರವರಿ, 03 ರವರೆಗೆ (ಪುರುಷ ಅಭ್ಯರ್ಥಿಗಳು ಮಾತ್ರ) ನಡೆಯಲಿದೆ. ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಂದು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, (ಸಾಮಾನ್ಯ ವರ್ಗ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅ.23 ರಿಂದ 27 ರವರೆಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ/ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ ಅಥವಾ ಇಲಾಖಾ ವೆಬ್‍ಸೈಟ್: https://horticulturedir.karnataka.gov.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್, 30 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಪಹಣಿ(ಖಖಿಅ), ತಂದೆ/ ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ)…

Read More

ಮಡಿಕೇರಿ ಅ.18 NEWS DESK  : ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್‍ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್, ರೆಡ್‍ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆಯು ಅಕ್ಟೋಬರ್, 26 ರಂದು ನಡೆಯಲಿದೆ. ಹೆಸರು ನೋಂದಾಯಿಸಲು ಅ.24 ಕೊನೆಯ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಚೇತನ ಚಿಲುಮೆ(ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದ ಹತ್ತಿರ) ಇಲ್ಲಿ ಹಾಗೂ ದೂ.ಸಂ.9880985939, 9480745776 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.

Read More

ಮಡಿಕೇರಿ ಅ.18 NEWS DESK : ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಸುಂಟಿಕೊಪ್ಪದಲ್ಲಿ ಹೊಸದಾಗಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಪ್ರಾರಂಭಿಸಲಾಗಿದ್ದು, ಈ ವಸತಿ ಶಾಲೆಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಹ ಶಿಕ್ಷಣದಲ್ಲಿ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸಲಾಗಿರುತ್ತದೆ. ಈ ವಸತಿ ಶಾಲೆಗೆ 6ನೇ ತರಗತಿ ಪ್ರವೇಶಾತಿ ಬಯಸುವ ಆಸಕ್ತ ವಿದ್ಯಾರ್ಥಿಗಳು ಷಡಕ್ಷರಿ ಎಚ್.ಆರ್., ಪ್ರಾಂಶುಪಾಲರು, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಸುಂಟಿಕೊಪ್ಪ, ಕುಶಾಲನಗರ ತಾಲ್ಲೂಕು 9482359812 ಮತ್ತು ಆಸಿಫ್ ಪಿ.ಕೆ., ನಿಲಯಪಾಲರು, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಸುಂಟಿಕೊಪ್ಪ, ಕುಶಾಲನಗರ ತಾಲ್ಲೂಕು 9900873037 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಅ.18 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025-26ನೇ ಸಾಲಿಗೆ ಇಲಾಖೆಯ 10ನೇ ತರಗತಿ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಮರು ಪಾವತಿಸುವ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ಪ್ರೋತ್ಸಾಹ ಧನ ಯೋಜನೆಗಳಡಿ ಅರ್ಹ ವಿಕಲಚೇತನರಿಂದ ಆಪ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ನವೆಂಬರ್, 15 ರೊಳಗೆ ಈ ಕಚೇರಿಗೆ ಅಥವಾ ಆಯಾಯ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ. 9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ. 8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂ.ಸಂ. 08272-295829 ನ್ನು ಕಚೇರಿ ವೇಳೆಯಲ್ಲಿ…

Read More

ಮಡಿಕೇರಿ ಅ.18 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ಸೇವಾ ಸಿಂಧು, ಆನ್‍ಲೈನ್ ತಂತ್ರಾಂಶದಡಿ ಆಳವಡಿಸಲಾಗಿದೆ. ಆದ್ದರಿಂದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‍ಚೇರ್, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ಸಾಧನ ಸಲಕರಣೆ ಯೋಜನೆಗಳಿಗೆ 2025-26ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/Kannada ಪೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದ್ದು, ಜಿಲ್ಲೆಯ ವಿಶೇಷಚೇತನರು ಅಕ್ಟೋಬರ್, 30 ರವರೆಗೆ ಯೋಜನೆಗಳಿಗೆ ಅರ್ಜಿ…

Read More

ಮೂರ್ನಾಡು ‌ಅ.18 NEWS DESK : ಮೂರ್ನಾಡು ವಿವೇಕ ಜಾಗೃತ ಬಳಗದ ವತಿಯಿಂದ ಅ.19 ರಂದು ಮರಗೋಡಿನಲ್ಲಿ ವನಿತಾ ಸಂಗಮ ಕಾರ್ಯಕ್ರಮ ನಡೆಯಲಿದೆ.  ಮರಗೋಡು ವಿಎಸ್ಎಸ್ ಏನ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಭಜನೆ ನಂತರ ವನಿತಾ ಸಂಗಮ ಕಾರ್ಯಕ್ರಮ ಕಾರ್ಯಕ್ರಮದ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿವೇಕ ಜಾಗೃತ ಬಳಗದ ಪ್ರಮುಖರಾದ ದಿವ್ಯ ಹವ್ಯಾಸ ಅವರು ಭಾಗವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಮಡಿಕೇರಿ NEWS DESK ಅ.17 : ಸಂಸದ ಯದುವೀರ್ ಮೈಸೂರು ರಾಜವಂಶಸ್ಥರ ಉಡುಗೆಯಲ್ಲಿ ಕಾವೇರಿ ತೀಥೋ೯ದ್ವವ ಸಂದಭ೯ ಕಂಗೊಳಿಸಿದ್ದು ವಿಶೇಷವಾಗಿತ್ತು. ತಲೆಗೆ ಮೈಸೂರು ಪೇಟ ಧರಿಸಿದ್ದ ಯದುವೀರ್ ಕೊಡವರೊಂದಿಗೆ ಭಾಗಮಂಡಲದಿಂದ 8 ಕಿ.ಮೀ. ದೂರದ ತಲಕಾವೇರಿಗೆ ಬರೀಕಾಲಿನಲ್ಲಿಯೇ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕೊಡವ ಸಾಂಪ್ರದಾಯಿಕ ಧಿರಿಸಿನಲ್ಲಿ  ಸಂಸದರ ಜತೆ ಕಾಲ್ನಡಿಗೆಯಲ್ಲಿಯೇ ಹೆಜ್ಜೆ ಹಾಕಿದರು. ನಮ್ಮ ನಾಡಿನ ಜೀವನದಿ, ಸಕಲ ಜೀವರಾಶಿಗಳಿಗೂ “ತಾಯಿ” ಸ್ವರೂಪಳಾದ ಕಾವೇರಿ ಮಾತೆಯ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಧನ್ಯತಾ ಭಾವ ಮೂಡಿಸಿತು ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ತಿಳಿಸಿದ್ದಾರೆ. ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡ ನಂತರ ಹೇಳಿಕೆ ನೀಡಿರುವ ಸಂಸದರು, ಇದೊಂದು ಅಪೂರ್ವ ಕ್ಷಣ ಮತ್ತು ಕಾವೇರಿ ಮಾತೆಯು ತೀರ್ಥ ಸ್ವರೂಪದಲ್ಲಿ ಉಕ್ಕುತ್ತಿದ್ದಂತೆ ಧಾರ್ಮಿಕ ಭಾವನೆಗಳೂ ಉಕ್ಕುತ್ತವೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ನಮ್ಮ ಕೊಡಗು ಜನರು ಹಾಗೂ ನಮ್ಮ ನಾಯಕರೊಂದಿಗೆ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆಯಲ್ಲಿ ಬಂದಿದ್ದು ನಿಜಕ್ಕೂ ಹೆಮ್ಮೆ…

Read More