ಮಡಿಕೇರಿ ಡಿ.23 NEWS DESK : ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ‘ಡಿಜಿಟಲ್ ನ್ಯಾಯದ ಮೂಲಕ ಪರಿಣಾಮಕಾರಿ ಮತ್ತು ತ್ವರಿತ ವಿಲೇವಾರಿ’ ಎಂಬ ವಿಷಯದಡಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯು ಡಿ.29 ರಂದು ಬೆಳಗ್ಗೆ 11 ಗಂಟೆಗೆ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಡಾ.ರೇಣುಕಾಂಭ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ, ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎ.ಎ.ಚಂಗಪ್ಪ, ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್.ಮಾದಯ್ಯ, ಗ್ರಾಹಕ ಹಕ್ಕುಗಳ ಶಿಕ್ಷಣ ಮತ್ತು ಜಾಗೃತಿ ಟ್ರಸ್ಟ್ನ ಟ್ರಸ್ಟ್ ಸ್ಥಾಪಕರಾದ ವೈ.ಜಿ.ಮುರಳೀಧರನ್, ತೂಕ, ಅಳತೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕರಾದ ಸರಳ ನಾಯರ್, ಆಹಾರ, ನಾಗರಿಕ…
ಲೇಖಕ: admin
ಮಡಿಕೇರಿ ಡಿ.23 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಗೌರಿ ಕೆರೆಯಲ್ಲಿ ಶಾಸಕರ 8ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಶಾಸಕರು, ಈ ಹಿಂದೆ ಗೌರಿ ಕೆರೆಯ ಈ ಭಾಗಕ್ಕೆ ರಸ್ತೆಗೆ ಅನುದಾನ ಒದಗಿಸಿದ್ದರು. ಇದೀಗ ಪೂರ್ಣಗೊಂಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯರುಗಳು, ಪಕ್ಷದ ಹಿರಿಯ-ಕಿರಿಯ ಮುಖಂಡರು, ಮುಖ್ಯ ಅಧಿಕಾರಿ,ಸ್ಥಳೀಯರ ಉಪಸ್ಥಿತರಿದ್ದರು.
ಮೈಸೂರು ಡಿ.23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸಿಕೊಡುವುದಾಗಿ ತಿಳಿಸಿದರು.
ಮಡಿಕೇರಿ ಡಿ.23 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳ ಆಯ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸರಕಾರ ನೀಡುವ ಉಚಿತ ಕೊಳವೆಬಾವಿ ಸೌಲಭ್ಯದ ಪ್ರಮಾಣ ಪತ್ರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಫಲಾನುಭವಿಗಳಿಗೆ ವಿತರಿಸಿದರು. ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಸರಕಾರ ನೀಡುವ ಈ ಸೌಲಭ್ಯವನ್ನು ವಿತರಿಸಿ ಫಲಾನುಭವಿಗಳಿಗೆ ಶುಭ ಕೋರಿದ ಶಾಸಕರು, ಸರಕಾರ ಸಮಾಜದ ಎಲ್ಲಾ ಸ್ಥಳದ ಜನರ ಏಳಿಗೆಗೆ ಶ್ರಮಿಸುತ್ತಿದ್ದು, ವಿಶೇಷವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹರನ್ನು ಸಮಾಜದ ಮುನ್ನೆಲೆಗೆ ತಂದು ಸದೃಢರನ್ನಾಗಿ ಮಾಡುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಶೀಘ್ರದಲ್ಲೇ ಇದರ ಫಲ ಎಲ್ಲರಿಗೂ ಸಿಗುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರೀರ ನವೀನ್, ತೆನ್ನಿರ ಮೈನಾ, ವಲಯ ಅಧ್ಯಕ್ಷರು ನವೀನ್, ಕೆಡಿಪಿ…
ಸುಂಟಿಕೊಪ್ಪ ಡಿ.23 NEWS DESK : ಕ್ರಿಸ್ಮಸ್ ಹಬ್ಬದ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಕ್ಯಾರೋಲ್ಸ್ ಗಾಯನದ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಧರ್ಮಗುರು ರೇವರೆಂಡ್ ಫಾದರ್ ವಿಜಯಕುಮಾರ್, ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತೀಯರು, ಸಂತ ಕ್ಲಾಸ್ ವೇಷಧಾರಿ, ಯುವಕ ಯುವತಿಯರು ಕ್ಯಾರೋಲ್ಸ್ ವೃಂದದವರು ಕ್ರೈಸ್ತರ ಮನೆಗಳಿಗೆ ತೆರಳಿ ಪ್ರಾರ್ಥನೆ ಗಾಯನಗಳನ್ನು ಹಾಡುತ್ತಾ ಕ್ರಿಸ್ತ ಜಯಂತಿ ಶುಭ ಸಂದೇಶವನ್ನು ಸಾರಿದರದು. ಕ್ರೈಸ್ತ ಭಾಂದವರು ಡಿಸೆಂಬರ್ ಮಾಸದಲ್ಲಿ ಮನೆಗಳಿಗೆ ಸುಣ್ಣ ಬಣ್ಣ ಬಳಿದು ವಿವಿಧ ಬಗೆಯ ನಕ್ಷತ್ರಗಳನ್ನು ಮನೆಯ ಮೇಲ್ಚಾವಣಿಗಳ ಮೇಲೆ ಅಳವಡಿಸುವುದು. ಮನೆಗಳಲ್ಲಿ ಕ್ರಿಸ್ತನ ಜನನದ ಸ್ಥಳವಾದ ಗೋದಾಲಿ (ದನದಕೊಟ್ಟಿಗೆ) ನಿರ್ಮಾಣವಾದರೆ, ಮಹಿಳೆಯರು ವಿವಿಧ ಬಗೆ ಬಗೆಯ ತಿಂಡಿ ಖಾದ್ಯಗಳನ್ನು ತಯಾರಿಸುವ ಸಡಗರ ಸಂಭ್ರಮಕ್ಕೆ ಅಣಿಯಾಗುತ್ತಿರುವಂತೆಯೇ ಸಾಂತಕ್ಲಾಸ್ ಅವರನ್ನು ಒಳಗೊಂಡ ಕ್ಯಾರೋಲ್ಸ್ ತಂಡವು ಆಗಮಿಸಿ ಮನೆಗಳಿಗೆ ಆರ್ಶಿವಚನ ನೀಡಿ ಮನೆಯ ಮಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದೇ ಈ ಹಬ್ಬದ ವಿಶೇಷತೆಯಾಗಿದೆ. ವಿಶ್ವದಾದ್ಯಂತ ಕ್ರಿಸ್ತರ ಜನನದ ಹಬ್ಬವನ್ನು ಸಡಗರ ಸಂಭ್ರಮದಲ್ಲಿ…
ಮೈಸೂರು ಡಿ.23 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್” ಯಶಸ್ವಿಯಾಗಿದ್ದು ಈ ನಿಟ್ಟಿನಲ್ಲಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಸಂಬಂಧಪಟ್ಟ ಸಚಿವರನ್ನು, ಹಿರಿಯ ಅಧಿಕಾರಿಗಳನ್ನು, ತಂಬಾಕು ಮಂಡಳಿಯ ಅಧಿಕಾರಿಗಳನ್ನು ಭೇಟಿ ಮಾಡಿ, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು, ಅದಕ್ಕೆ ಈಗ ಸೂಕ್ತ ಸ್ಪಂದನೆ ಸಿಕ್ಕಿದೆ ಎಂದರು. ನೋಂದಾಯಿತ ಮತ್ತು ನೋಂದಾಯಿಸಿದ ಬೆಳೆಗಾರರ ಹೆಚ್ಚುವರಿ FCV ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (FCV ತಂಬಾಕು) ತಂಬಾಕು ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975…
ಮಡಿಕೇರಿ ಡಿ.22 NEWS DESK : ಮಹಾ ಶಿವರಾತ್ರಿಯ ಹಿನ್ನೆಲೆಯಲ್ಲಿ ಕೊಯಂಬತ್ತೂರಿನ ಈಶಾ ಕೇಂದ್ರ್ರದ ವತಿಯಿಂದ ಕೃಷ್ಣನ ನಗರಿ ಉಡುಪಿಯಿಂದ ಆರಂಭಗೊಂಡ ‘ಆದಿ ಯೋಗಿ ರಥ ಯಾತ್ರೆ’ ಸೋಮವಾರ ಸಂಜೆ ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯನ್ನು ಪ್ರವೇಶಿಸಿತು. ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ ಮಾರ್ಗವನ್ನು ಹಾದು ಇಂದು ಸಂಜೆ ನಗರದ ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ರಥ ಯಾತ್ರೆ ನಗರವನ್ನು ಪ್ರವೇಶಿಸಿತು.ಈ ಸಂದರ್ಭ ಯಾತ್ರೆಯನ್ನು ಭಕ್ತಿ ಭಾವದಿಂದ ಎದುರ್ಗೊಂಡ ಭಕ್ತಾದಿಗಳು, ತಾವು ಕೈ ಜೋಡಿಸುವ ಮೂಲಕ ನಗರದ ಮುಖ್ಯ ಬೀದಿಗಳಲ್ಲಿ ರಥ ಯಾತ್ರೆ ಸಂಭ್ರಮದಿಂದ ನಡೆಯಿತು. ರಥ ಯಾತ್ರೆ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತ, ಕೋಟೆ, ಮಹದೇವಪೇಟೆಯನ್ನು ಹಾದು ಚೌಕಿ ಮೂಲಕ ಸೋಮವಾರಪೇಟೆ ರಸ್ತೆಯಲ್ಲಿರುವ ಕಾಶೀಮಠವನ್ನು ತಲುಪಿತು. ಮಂಗಳವಾರದಂದು ಸುಂಟಿಕೊಪ್ಪದತ್ತ ತೆರಳಲಿದೆ. ರಥವು ‘ಆದಿ ಯೋಗಿ’ಯ ಮೂರ್ತಿ, ಸದ್ಗುರುಗಳ ಪಾದುಕೆಯನ್ನು ಹೊಂದಿದ್ದು, ಮರದಿಂದ ನಿರ್ಮಿತ ರಥ ಸುಮಾರು 3 ಟನ್ ಭಾರವನ್ನು ಹೊಂದಿದೆ. ಈ ಸಂದರ್ಭ ಈಶಾ ಯೋಗ ಕೇಂದ್ರ್ರದ ಸ್ವಯಂ ಸೇವಕರಾದ ಧನಂಜಯ್,…
ಮಡಿಕೇರಿ ಡಿ.22 NEWS DESK : ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿ ಮಂಡಿಸುವ ಮೂಲಕ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮುಖರಾಗಿದ್ದಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆಯಿತು. ಎಲ್ಲಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಒಟ್ಟು 23 ಕಂತುಗಳು ಬಿಡುಗಡೆಯಾಗಿದ್ದು ಹಾಗೂ ಯಾರಿಗೆಲ್ಲ ಹಣ ಬಂದಿಲ್ಲ ಅಂತವರು ಬ್ಯಾಂಕುಗಳಿಗೆ ಹೋಗಿ ಪಾಸ್ ಪುಸ್ತಕಗಳನ್ನು ಎಂಟ್ರಿ ಮಾಡಿಕೊಳ್ಳುವುದು ಉತ್ತಮ ಎಂದು ತಾಲೂಕು ಪಂಚಾಯಿತಿ ಇಒ. ಶೇಖರ್ ಹೇಳಿದರು. ಶಕ್ತಿ ಯೋಜನೆ ಪ್ರಗತಿ ಬಗ್ಗೆ ಪರಿಶೀಲಿಸಿ ಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬೆಳಿಗ್ಗೆ 8.30 ಗಂಟೆಗೆ ಹೊರಡುವ ಬಸ್ಸು 7.30 ಗಂಟೆಗೆ ಹೋಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ದಯಾನಂದ ಅವರಿಗೆ ಪ್ರಶ್ನಿಸಿದರು.…
ಮಡಿಕೇರಿ ಡಿ.22 NEWS DESK : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಎರಡು ಪ್ರತಿಷ್ಠಿತ ರಾಜ್ಯ ಮಟ್ಟದ ವಾರ್ಷಿಕ ಪ್ರಶಸ್ತಿಗಳಿಗೆ ಕೊಡಗು ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ. ಕುಶಾಲನಗರದ ಕೃಷಿ ಬೀಜ ತಳಿಗಳ ತಜ್ಞ ಎಂ.ಬಿ.ಅಫ್ತಾಬ್ ಅವರಿಗೆ ರಾಜ್ಯಮಟ್ಟದ ‘ಡಾ.ಎಚ್.ನರಸಿಂಹಯ್ಯ’ ಪ್ರಶಸ್ತಿ ಹಾಗೂ ಕೊಡಗು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಅವರು ‘ಚೈತನ್ಯ ಸ್ತ್ರೀ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯದಲ್ಲಿ ಜಿಲ್ಲೆಗೊಬ್ಬರಂತೆ ಜೀವಮಾನ ಸಾಧಕರನ್ನು ಗುರುತಿಸಿ ‘ಎಚ್ ಎನ್’ ಪ್ರಶಸ್ತಿ ನೀಡಲಾಗುತ್ತಿದ್ದು ಕುಶಾಲನಗರದ ಕೃಷಿ ಬೀಜ ತಳಿ ತಜ್ಞ ಎಂ.ಬಿ.ಅಫ್ತಾಬ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಸಾಧನಾ ಪ್ರಶಸ್ತಿ ‘ಚೈತನ್ಯ ಸ್ತ್ರೀ’ ಪ್ರಶಸ್ತಿ ಕೊಡಗು ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ…
ಮಡಿಕೇರಿ ಡಿ.22 NEWS DESK : ಮೂರ್ನಾಡು ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಫೆ.1 ರಂದು ‘ಮೂರ್ನಾಡು ಯಕ್ಷೋತ್ಸವ’ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಪೂರ್ವಭಾವಿ ಸಭೆಯಲ್ಲಿ ವಿವಿಧ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಮೂರ್ನಾಡಿನ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಫೆ.1 ರಂದು ಮೂರ್ನಾಡಿನ ಪಾಂಡಾಣೆ ನಾಡ್ಮಂದ್ ಮತ್ತು ಸರಕಾರಿ ಶಾಲಾ ಮೈದಾನದಲ್ಲಿ ಗಜ ಮೇಳವೆಂದೆ ಪ್ರಖ್ಯಾತಿ ಪಡೆದಿರುವ ಶ್ರೀ ಹನುಮಗಿರಿ ಮೇಳದವರಿಂದ ‘ಸಂಪೂರ್ಣ ಶ್ರೀ ದೇವಿ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟ ನಡೆಸಲು ನಿರ್ಧರಿಸಲಾಯಿತು. ಕಳೆದ ಮೂರು ವರ್ಷಗಳಿಂದ ‘ಮೂರ್ನಾಡು ಯಕ್ಷೋತ್ಸವ’ವನ್ನು ಅತ್ಯಂತ ಅದ್ದೂರಿ ಮತ್ತು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಸಾವಿರಾರು ಕಲಾಭಿಮಾನಿಗಳು ಯಕ್ಷಗಾನದ ರಸದೌತಣವನ್ನು ಸವಿಯುತ್ತಿದ್ದಾರೆ. ಆಪ್ತಮಿತ್ರ ಬಳಗದ ಸೇವಾರ್ಥವಾಗಿ ನಡೆಯುವ ಈ ಯಕ್ಷಗಾನವು ಜಿಲ್ಲೆಯಾದ್ಯಂತ ಯಕ್ಷಗಾನ ಪ್ರೇಮಿಗಳನ್ನು ಕಾತರದಿಂದ ಕಾಯುವಂತೆ ಮಾಡುತ್ತಿದೆ. ಆದ್ದರಿಂದ ಎಲ್ಲಾ ವ್ಯವಸ್ಥೆಗಳನ್ನು ಸುಗಮಗೊಳಿಸಬೇಕು ಎಂದು ಪ್ರಮುಖರು ಅಭಿಪ್ರಾಯ ಹಂಚಿಕೊಂಡರು. ಊಟೋಪಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಉಪ ಸಮಿತಿಗಳನ್ನು ರಚಿಸಿ ವ್ಯವಸ್ಥಿತ ರೀತಿಯಲ್ಲಿ ‘ಮೂರ್ನಾಡು…






