ಲೇಖಕ: admin

ವಿರಾಜಪೇಟೆ NEWS DESK ಜೂ.28 : ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಕ್ಯಾಪ್ಟನ್ ಬಾಚುರ ಎಸ್.ಪೂಣಚ್ಚ ಅವರು ದೀಪ ಬೆಳಗುವ ಮೂಲಕ ಘಟಕವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುತ್ತದೆ. ನಾಯಕತ್ವದ ಗುಣಗಳನ್ನು ವೃದ್ಧಿಸುತ್ತದೆ. ಶಿಸ್ತು, ಸಮಯಪಾಲನೆ ಮತ್ತು ಜವಾಬ್ದಾರಿಯನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪರಿಪಾಲನೆಯನ್ನು ರೂಢಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು, ಸಾಮಾಜಿಕ ಜಾಲತಾಣ, ಕಾನೂನುಬಾಹಿರ ಚಟುವಟಿಕೆಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಉತ್ತಮ ಜೀವನವನ್ನು ನಡೆಸಬೇಕೆಂದು ಕರೆ ನೀಡಿದರು. ದೇಶ ನಮಗೆ ಎಲ್ಲವನ್ನೂ ನೀಡಿದೆ, ಆದ್ದರಿಂದ ದೇಶ ಸೇವೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ದೇಶ ಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರುವುದು ಮಾತ್ರವಲ್ಲ, ಕಾನೂನು ಪಾಲಿಸುವುದು, ಸಮಾಜದ ಒಳಿತಿಗಾಗಿ ದುಡಿಯುವುದು ಹಾಗೂ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುವುದೂ ದೇಶ…

Read More

ಮಡಿಕೇರಿ NEWS DESK ಜೂ.28 : ಮಾರಕ ರೋಗ ಪಲ್ಸ್ ಪೋಲಿಯೋವನ್ನು ನಿರ್ಮೂಲನ ಮಾಡುವ ನಿಟ್ಟಿನಲ್ಲಿ ವರ್ಷಂಪ್ರತಿ ಆಯೋಜಿಸಿಕೊಂಡು ಬರುತ್ತಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಯಶಸ್ವಿಯಾಗಿ ನಡೆಯಿತು. ವಿರಾಜಪಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಇಂದು ಬೆಳಗ್ಗೆ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಸೋಮವಾರಪೇಟೆ ಆಸ್ಪತ್ರೆಯಲ್ಲಿ ಪುಟಾಣಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆಯನ್ನಿತ್ತರು. ಕೊಡಗು ಜಿಲ್ಲೆಯಲ್ಲಿ 0–5 ವರ್ಷದೊಳಗಿನ ಮಕ್ಕಳ ಒಟ್ಟು 29,011 ಗುರುತಿಸಿದ್ದು ,ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 26,373 ಮಕ್ಕಳು ಹಾಗೂ ನಗರ ಪ್ರದೇಶದಲ್ಲಿ 2,638 ಮಕ್ಕಳಿದ್ದು, ಇವರುಗಳಿಗೆ ಲಸಿಕೆ ಒದಗಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಲಸಿಕಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲಾಯಿತು. 471 ಬೂತ್‌ಗಳಲ್ಲಿ ಲಸಿಕೆ- ಜಿಲ್ಲೆಯಲ್ಲಿ ಒಟ್ಟು 471 ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು…

Read More

ಸಿದ್ದಾಪುರ NEWS DESK ಜೂ.28 : ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಲ್‌ಬ್ಲೂಮ್ಸ್ ಹೆಲ್ತ್‌ಕೇರ್, ಸಿದ್ದಾಪುರ ,ಹಾಗೂ ಎಸ್‌ಎಲ್‌ವಿ ಗ್ರೂಪ್, ಕುಶಾಲನಗರ ಇವರ ಸಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ  ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು “ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು. ಇವೆರಡನ್ನು ನಾವು ಗಳಿಸಿದರೆ ಅವನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಉತ್ತಮ ಶಿಕ್ಷಣ ಮತ್ತು ಆರೋಗ್ಯದ ಅರಿವು ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಶಾಲೆಯ ಅಭಿವೃದ್ಧಿಗಾಗಿ ವಿಶೇಷ ಅನುದಾನವನ್ನು ಘೋಷಿಸಿದ ಅವರು, ಶಾಲೆಗೆ ಆಧುನಿಕ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಮುಂದಿನ ಸಾಲಿನಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಆರಂಭಿಸಲು ಸೂಚಿಸಿದರು. ಶಾಲೆಯ ಶಿಕ್ಷಕ ವೃಂದ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ…

Read More

ಮಡಿಕೇರಿ ಜೂ.28 : ತುಮಕೂರು ಸ್ನಾತಕೋತ್ತರ ವ್ಯವಹಾರ ಆಡಳಿತ ಮಂಡಳಿ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಮಡಿಕೇರಿ ತಾಲ್ಲೂಕಿನ ಅರ‍್ವತ್ತೊಕ್ಲು ಗ್ರಾಮದ ದಿವ್ಯ ಎ. ಅವರು ತುಮಕೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. Impact of Work Flexibility on Employee Performance in Selected Private hospitals- With Special reference to Nurses in Mangalore & Udupi City ವಿಷಯದ ಮೇಲೆ ಪ್ರೊ.ಶಿವಶಂಕರ್ ಕೆ.ಸಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. ದಿವ್ಯ ಎ. ಅವರಿಗೆ ಪತಿ ಸಂತು ಟಿ.ಪಿ ಹಾಗೂ ಪುತ್ರ ಕುಶ್ ಟಿ.ಎಸ್ ಶುಭ ಕೋರಿದ್ದಾರೆ.

Read More

ಮಡಿಕೇರಿ NEWS DESK ಜೂ.28 : ಮಡಿಕೇರಿ ಲಯನ್ಸ್ ಕ್ಲಬ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಲ್.ಮೋಹನ್ ಕುಮಾರ್, ಕಾರ್ಯದರ್ಶಿಯಾಗಿ ಕೆ.ಮಧುಕರ್, ಖಜಾಂಚಿಯಾಗಿ ಅಂಬೆಕಲ್ ನವೀನ್ ಹಾಗೂ ಇತರ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ನಗರದ ಕಾವೇರಿ ಹಾಲ್ ನಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಲಯನ್ಸ್ ಉಪ ರಾಜ್ಯಪಾಲ ಹಾಗೂ ಶಿಕ್ಷಣ ತಜ್ಞ ಹರಿಪ್ರಸಾದ್ ರೈ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಅವರು, ಲಯನ್ಸ್ ಸಂಸ್ಥೆ ಮಡಿಕೇರಿಯಲ್ಲಿ 61 ವಸಂತಗಳನ್ನು ಪೂರೈಸಿದ್ದು, ಸಾವಿರಾರು ಸಮಾಜಮುಖಿ ಸೇವೆಯ ಮೂಲಕ ತನ್ನದೇ ಛಾಪು ಮೂಡಿಸಿದೆ. ಸಂಸ್ಥೆಯ ನಿಯಮಗಳು, ಹಿರಿಯರ ಮಾರ್ಗದರ್ಶನ, ಸಂಸ್ಥೆಯ ಸಾಮಾಜಿಕ, ಶೈಕ್ಷಣಿಕ ಕಳಕಳಿ ಹಾಗೂ ಮಾನವೀಯ ಗುಣಗಳಿಂದ ಇದು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ಲಯನ್ಸ್ ಸಂಸ್ಥೆ ಮತ್ತಷ್ಟು ಸಮಾಜ ಸೇವೆಯ ಮೂಲಕ ಜನರ ಹೃದಯವನ್ನು ಗೆಲ್ಲುವಂತಾಗಬೇಕು. ಆ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಹೆಜ್ಜೆ ಇರಿಸಬೇಕು ಎಂದು…

Read More

ಮಡಿಕೇರಿ ಜೂ.28 NEWS DESK : ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವ ಮೂಲಕ ಕೊಡಗು‌ ಜಿಲ್ಲೆಯಾದ್ಯಂತ  ಚಾಲನೆ ದೊರೆಯಿತು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ಹಾಗೂ ಡಾ.ಮಂತರ್ ಗೌಡ ಅವರು ಸೋಮವಾರಪೇಟೆಯ ತಾಲ್ಲೂಕು ಆಸ್ಪತ್ರೆಯಲ್ಲಿ ಶಿಶುಗಳಿಗೆ ಪೋಲಿಯೋ ಹನಿ ನೀಡಿ ಕಾರ್ಯಕ್ರಮದ ಮಹತ್ವ ಕುರಿತು ಸಂದೇಶ ಸಾರಿದರು. ಹಾಗೆಯೇ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಐದು ವರ್ಷದ ಮಕ್ಕಳಿಗೆ ಪೋಲಿಯೋ ಹನಿ ನೀಡಿ ಗಮನ ಸೆಳೆದರು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ರಾಷ್ಟ್ರವು ಪೋಲಿಯೋ ಮುಕ್ತವಾಗಿದ್ದರೂ ಸಹ, ಇತರೆ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ಇರುವುದರಿಂದ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಆದ್ದರಿಂದ ಐದು ವರ್ಷದೊಳಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಕೊಡಿಸಬೇಕು ಎಂದು‌ ಕರೆ ನೀಡಿದರು. ಐದು ವರ್ಷದೊಳಗಿನ‌ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವುದರಿಂದ ಮಕ್ಕಳ ಬೆಳವಣಿಗೆ ಸಂದರ್ಭದಲ್ಲಿ ಉಂಟಾಗಬಹುದಾದ…

Read More

ವಿರಾಜಪೇಟೆ ಜೂ.28 NEWS DESK : ವಿರಾಜಪೇಟೆಯ ಕಾವೇರಿ ಪದವಿ ಪೂರ್ವ  ಕಾಲೇಜಿನಲ್ಲಿ  ಕಾನೂನು ಮತ್ತು ಮಹಿಳೆಯರಿಗೆ ಲೈಂಗಿಕ ಶಿಕ್ಷಣದ ಮಹತ್ವ  ಕುರಿತು ವಿದ್ಯಾರ್ಥಿಗಳಿಗೆ ಅರಿವಿಕೆಯನ್ನು ನೀಡಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ವಕೀಲರಾದ ಅನುಪಮ ಕಿಶೋರ್ ವಕೀಲರು,ಕಾನೂನಿನ ಅರಿವು ಪ್ರತಿಯೊಬ್ಬ ಮಹಿಳೆಗೆ ಅತ್ಯಗತ್ಯ. ತಮ್ಮ ಹಕ್ಕುಗಳು, ಕರ್ತವ್ಯಗಳು ಹಾಗೂ ಕಾನೂನಿನ ರಕ್ಷಣೆಯ ಬಗ್ಗೆ ತಿಳಿದಿದ್ದರೆ ಮಹಿಳೆಯರು ಆತ್ಮವಿಶ್ವಾಸದಿಂದ ಬದುಕಬಹುದು. ಗೃಹ ಹಿಂಸೆ, ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ, ಕೆಲಸದ ಸ್ಥಳದಲ್ಲಿನ ಕಿರುಕುಳ ಮುಂತಾದ ಅನ್ಯಾಯಗಳ ವಿರುದ್ಧ ಧೈರ್ಯವಾಗಿ ಕ್ರಮ ಕೈಗೊಳ್ಳಲು ಕಾನೂನಿನ ಅರಿವು ನೆರವಾಗುತ್ತದೆ. ಇದು ಮಹಿಳೆಯರ ಸಬಲೀಕರಣಕ್ಕೆ ಪ್ರಮುಖ ಅಡಿಪಾಯವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬ ನಾಗರಿಕನು ತನ್ನ ಹಕ್ಕುಗಳನ್ನು ತಿಳಿದುಕೊಳ್ಳಲು ಸಹಾಯ ಮಾಡುತ್ತದೆ. ಅನ್ಯಾಯ, ಶೋಷಣೆ ಮತ್ತು ದೌರ್ಜನ್ಯಗಳ ವಿರುದ್ಧ ಧೈರ್ಯವಾಗಿ ನಿಲ್ಲಲು ಶಕ್ತಿ ನೀಡುತ್ತದೆ. ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಕಾನೂನಿನ ರಕ್ಷಣೆಯ ಬಗ್ಗೆ ಅರಿವು ಮೂಡಿಸುತ್ತದೆ. ಸಮಾಜದಲ್ಲಿ ನ್ಯಾಯ, ಶಾಂತಿ…

Read More

ಕುಶಾಲನಗರ ಜೂ.28 NEWS DESK : ಸಮಾಜ ಸೇವೆಯ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಕೊಡಗಿನ ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರವಾದದ್ದು ಎಂದು ತಾಲ್ಲೂಕು ಗ್ಯಾರಂಡಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಅಭಿಪ್ರಾಯಪಟ್ಟರು. ಮಾಧ್ಯಮ ಸ್ಪಂದನ, ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ, ಕೊಡಗು ರಕ್ತನಿಧಿ ಕೇಂದ್ರ ಹಾಗೂ ಸೈರಸ್ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಕುಶಾಲನಗರದ ಸೈರಸ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿನ ಪತ್ರಕರ್ತರು ಮಾಧ್ಯಮ ಸ್ಪಂದನ ತಂಡವನ್ನು ಕಟ್ಟಿ ಸಮಾಜಮುಖಿ ಕೆಲಸಗಳಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡಿದ್ದಾರೆ‌. ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಿ ಅಮೂಲ್ಯವಾದ ಜೀವಗಳನ್ನು ಉಳಿಸುವ ಪ್ರಯತ್ನ ಮಾಡಿರುವ ಮಾಧ್ಯಮ ಸ್ಪಂದನ ತಂಡದ ಕಾರ್ಯ ಶ್ಲಾಘನೀಯ ಎಂದರು. ಪ್ರಾಸ್ತಾವಿಕ ನುಡಿ ನುಡಿದ ಮಾಧ್ಯಮ‌ ಸ್ಪಂದನದ ಸ್ಥಾಪಕ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುವಾದ ವಿಘ್ನಗಳು ಎದುರಾಗುತ್ತವೆ‌. ಅವುಗಳನ್ನು ಮನಸ್ಸಿಗೆ ಹಾಕದೇ, ನಾವು ಮಾಡುವ ಸೇವೆಗೆ ಯಾವುದೇ…

Read More

ಕುಶಾಲನಗರ ಜೂ.28 NEWS DESK : ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಯೂನಿಟ್ ತೆರೆಯಲು ಸರ್ಕಾರದ ಆದೇಶವಾಗಿದ್ದು, ಆದಷ್ಟು ಬೇಗನೇ ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಯೂನಿಟ್ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರು ತಿಳಿಸಿದರು. ಕುಶಾಲನಗರ ಸೈರಸ್ ಆಸ್ಪತ್ರೆಯಲ್ಲಿ ಮಾಧ್ಯಮ ಸ್ಪಂದನದ ವತಿಯಿಂದ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾರಕ್ಕೆ 400-450ರೋಗಿಗಳು ಚಿಕಿತ್ಸೆಗಾಗಿ ಹೊರಗೆ ತೆರಳುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ ಹಂತಹಂತವಾಗಿ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಕೊಡುವ ಕೆಲಸಕ್ಕೆ ಸರ್ಕಾರ ಮುಂದಾಗಲಿದೆ ಎಂದರು.  ಮಾಧ್ಯಮ ಸ್ಪಂದನದಿಂದ ಯಶಸ್ವಿ ರಕ್ತದಾನ ಶಿಬಿರ ಆಯೋಜಿಸಿದ್ದಾರೆ‌. ರಕ್ತದಾನ ಮಾಡುವ ಮೂಲಕ ಅದೆಷ್ಟೋ ಜೀವಗಳನ್ನು ಉಳಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದೀರಾ. ಮಾಧ್ಯಮ ಮಿತ್ರರ ಸಮಾಜಮುಖಿ ಕೆಲಸಗಳಿಗೆ ಸದಾ ನನ್ನ ಸಹಕಾರ ಇರಲಿದೆ ಎಂದರು. ಮಾಧ್ಯಮ ಸ್ಪಂದನದ ಸಂಸ್ಥಾಪಕರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಸುವ ಜವಾಬ್ದಾರಿ ಶಾಸಕರ ಹೆಗಲ ಮೇಲಿದೆ. ಈ ದಿಸೆಯಲ್ಲಿ ಯುವ…

Read More

ಮಡಿಕೇರಿ ಜೂ.27 NEWS DESK : ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ನೀಡಿದರು. ಕೆ.ಬಾಡಗ ಗ್ರಾಮದಲ್ಲಿ ಶಾಸಕರ ವಿಶೇಷ 47 ಲಕ್ಷ ಅನುದಾನದಲ್ಲಿ ನಿರ್ಮಾಣವಾದ ತಾಯಿ ಭೂಮಿ ಪೈಸಾರಿ ಹಾಡಿ, ನಾಣಚ್ಚಿ ಗದ್ದೆ ಹಾಡಿ ಹಾಗೂ ಕೋಡಂಗೆ ಭಾಗದ ವಿವಿಧ ಅಭಿವೃದ್ಧಿ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಸರಕಾರ ಹಾಗೂ ತಾನು ಜನಸಾಮಾನ್ಯರ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ರಸ್ತೆಯ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದು, ಕಳೆದ ಹಲವಾರು ದಶಕಗಳಿಂದ ಅಭಿವೃದ್ಧಿ ಕಾಣದೆ ಜನಸಾಮಾನ್ಯರ ಬಳಕೆಗೆ ಯೋಗ್ಯವಲ್ಲದ ರಸ್ತೆಗಳನ್ನು ಉತ್ತಮಗೊಳಿಸುವತ್ತ ಗಮನಹರಿಸಿರುವುದಾಗಿ ತಿಳಿಸಿದರು. ಸಾರ್ವಜನಿಕರು ಸಲ್ಲಿಸಿದ ಬೇಡಿಕೆಗೆ ಅನುಸಾರ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿತ್ತು, ಜನರ ಮೂಲಭೂತ ಸೌಲಭ್ಯ ಪೂರೈಕೆಗೆ ತಾವು ಸದಾ ಬದ್ಧರಾಗಿರುವುದಕ್ಕೆ ತಿಳಿಸಿದರು. ಗ್ರಾಮೀಣ ಜನತೆಯು ಆರ್ಥಿಕವಾಗಿ ಸದೃಢವಾಗಲು ಕೃಷಿ ಚಟುವಟಿಕೆಗಳೊಂದಿಗೆ ಉತ್ತಮ ರಸ್ತೆಯ ಸೌಲಭ್ಯದ ಅವಶ್ಯಕತೆಯನ್ನು ಮನಗಂಡಿರುವ ತಾವು, ರಸ್ತೆ ಕುಡಿಯುವ ನೀರು ಹಾಗೂ…

Read More