ಬೆಂಗಳೂರು NEWS DESK ಮಾ.29 : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ. ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್ಗೆ ರೂ. 77.74 ರ ದರದಲ್ಲಿ ಆಟೋ ಎಲ್ಪಿಜಿ ಪೂರೈಸುತ್ತಿವೆ. ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್…
ಲೇಖಕ: admin
ಸುಂಟಿಕೊಪ್ಪ NEWS DESK ಮಾ.29 : ಕ್ರೈಸ್ತ ಬಾಂಧವರ ಪವಿತ್ರ ವಾರದ ಸಂಕೇತವಾಗಿ ಗರಿಗಳ ಭಾನುವಾರದ ಅಂಗವಾಗಿ ಸಂತ ಮೇರಿ ಶಾಲಾ ಆವರಣದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ತೆಂಗಿನ ಗರಿಗಳನ್ನು ಭಕ್ತರಿಗೆ ವಿತರಿಸಲಾಯಿತು. ಸಂತ ಅಂತೋಣಿಯವರ ದೇವಾಲಯದಲ್ಲಿ ಶೃದ್ಧಾಭಕ್ತಿಯಿಂದ ಧಾರ್ಮಿಕ ಆಚರಣೆ ನಡೆಯಿತು.ಸಂತ ಅಂತೋಣಿ ಚರ್ಚ್ ನ ಧರ್ಮಗುರು ರೇ.ಫಾ.ವಿಜಯಕುಮಾರ್ ಅವರು ತೆಂಗಿನ ಗರಿಗಳನ್ನು ವಿತರಿಸಿದರು. ನಂತರ ಶಾಲಾ ಆವರಣದಿಂದ ಚರ್ಚ್ ವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ಭಕ್ತರು ವಿಶೇಷ ಗಾಯನ ಬಲಿಪೂಜೆ ಹಾಗೂ ಪ್ರಭೋದನೆಯನ್ನು ಆರ್ಪಿಸಿದರು. ಇದರೊಂದಿಗೆ ಪವಿತ್ರ ವಾರಕ್ಕೆ ಮುನ್ನುಡಿ ಇಡಲಾಯಿತು. ಕ್ರೈಸ್ತ ಬಾಂಧವರು 40 ದಿನಗಳ ಉಪವಾಸ ಆಚರಿಸಲಿದ್ದಾರೆ.ಸಂತ ಕ್ಲಾರ ಕನ್ಯಾಸ್ತ್ರೀಯರು ಹಾಗೂ ನೂರಾರು ಸಂಖ್ಯೆಯ ಭಕ್ತರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ NEWS DESK ಮಾ.28 : ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಕೊಡಗಿನ ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್.ಮುಧೋಳ್ ಹಾಗೂ ಎಎಸ್ಐ ಜೋಷಿ ಕುಟ್ಟಪ್ಪ ಪಾತ್ರರಾಗಿದ್ದಾರೆ. ಇದೇ ಏ.2ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಲಿದ್ದಾರೆ. ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ಅವರು ಗೋಣಿಕೊಪ್ಪಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಜೋಷಿ ಕುಟ್ಟಪ್ಪ ಅವರು ಮಡಿಕೇರಿಯ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ನಿಸ್ತಂತು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಂ)ಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ ಆತಂಕವನ್ನು ಮೂಡಿಸಿತು. ಸುಂಟಿಕೊಪ್ಪದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಗಾಳಿಮಳೆಗೆ ಭಾಗಮಂಡಲ – ತಲಕಾವೇರಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವುಗೊಳಿಸಿದರು. ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಮಡಿಕೇರಿ NEWS DESK ಮಾ.28 : ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಹೊಟೇಲ್ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸರಕಾರ ಹೊಟೇಲ್ ಕಾರ್ಮಿಕರಿಗೆ ಸಹಾಯ ಧನ ನೀಡಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ನ ಲಭ್ಯತೆ ಕಡಿಮೆ ಇರುವುದರಿಂದ ಕೊಡಗು ಜಿಲ್ಲೆಯಲ್ಲೂ ಹೊಟೇಲ್ ಮಾಲೀಕರು ಕಾರ್ಯವನ್ನು ಸ್ಥಗಿತಗೊಳಿಸಿದ್ದು, ಹೊಟೇಲ್ ಕಾರ್ಮಿಕರು ಕಷ್ಟ ಎದುರಿಸುತ್ತಿದ್ದಾರೆ. ಹೊಟೇಲ್ ಕೆಲಸವನ್ನೇ ನಂಬಿ ಬದುಕು ಸಾಗಿಸುತ್ತಿದ್ದ ಬಡ ಕಾರ್ಮಿರಿಗೆ ಪರ್ಯಾಯ ಮಾರ್ಗವಿಲ್ಲದೆ ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ.ಜಿಲ್ಲೆಯಲ್ಲಿರುವ ಸಾವಿರಾರು ಸಂಖ್ಯೆಯ ಹೊಟೇಲ್ ಕಾರ್ಮಿಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಸರಕಾರ ತಕ್ಷಣ ಎಚ್ಚೆತ್ತುಕೊಂಡು ಕಾರ್ಮಿಕರ ಜೀವನೋಪಾಯಕ್ಕೆ ಪರ್ಯಾಯ ಮಾರ್ಗ ಸೂಚಿಸಬೇಕು ಮತ್ತು ಸಹಾಯ ಧನ ವಿತರಿಸಬೇಕು ಎಂದು ಎಸ್ಡಿಟಿಯು ನ ಜಿಲ್ಲಾ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾ಼ಕ್ ಒತ್ತಾಯಿಸಿದರು.ಕಳೆದ ಹಲವಾರು…
ಮಡಿಕೇರಿ ಮಾ.28 NEWS DESK : ನಗರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಅಮೃತ್ ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಕುರಿತು ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಯಿತು. ನಗರಸಭೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವ ಸದಸ್ಯರು ಅಮೃತ್ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ವಾಹನ ಚಾಲಕರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ವ ಸದಸ್ಯರು ಪ್ರಸ್ತಾಪಿಸಿದರು. ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್ ಮಾತನಾಡಿ ಕಾಮಗಾರಿ ಮಳೆಗಾಲಕ್ಕೂ ಮೊದಲು ಪೂರ್ಣಗೊಳ್ಳುವುದು ಅಸಾಧ್ಯ, ಇದರಿಂದ ಹೆಚ್ಚಿನ ತೊಂದರೆ ಎದುರಾಗಲಿದೆ ಎಂದರು. ವಿರೋಧ ಪಕ್ಷದ ನಾಯಕ ಅಮಿನ್ ಮೊಹಿಸಿನ್ ಮಾತನಾಡಿ ನಗರಸಭೆಯ ಆಡಳಿತದ ಅವಧಿ ಇನ್ನು ಕೇವಲ 6 ತಿಂಗಳು ಮಾತ್ರವೇ ಇದೆ. ಈ ಕಾಮಗಾರಿ ಕುರಿತು ಹಲವು ಬಾರಿ ಚರ್ಚೆ ನಡೆದಿದೆ, ಈಗಲಾದರೂ ಗಂಭೀರವಾಗಿ ಪರಿಗಣಿಸಿ ಎಂದು ಒತ್ತಾಯಿಸಿದರು. ಎಸ್ಡಿಪಿಐ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಮಾತನಾಡಿ ಪ್ರತಿ ಸಭೆಯಲ್ಲಿ ಈ ಕುರಿತು ಗಮನ ಸೆಳೆದರೂ ಪ್ರಯೋಜನವಾಗಿಲ್ಲ, ಗುತ್ತಿಗೆದಾರರನ್ನು ಸಭೆಗೆ ಕರೆಸಿ ಕಟ್ಟುನಿಟ್ಟಿನ ಸೂಚನೆ ನೀಡಿ…
ಮಡಿಕೇರಿ ಮಾ.28 NEWS DESK : ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದ ಬಳಿಯ ಪೊಲೀಸ್ ವಸತಿ ಗೃಹ ಸಮುಚ್ಚಯ ಮತ್ತು ಅಬ್ಬಿ ಫಾಲ್ಸ್ ಬಳಿಯ ಸಮುದಾಯ ಭವನಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.
ಮಡಿಕೇರಿ ಮಾ.28 NEWS DESK : ಹಿಂದೂ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕೃತ್ಯಗಳನ್ನು ಖಂಡಿಸಿ ಏ.1 ರಂದು ನಾಪೋಕ್ಲುವಿನಲ್ಲಿ ಬೃಹತ್ ಹಿಂದೂ ಜನಜಾಗೃತಿ ಸಮಾವೇಶ ನಡೆಯಲಿದೆ ಎಂದು ಹಿಂದೂ ಸುರಕ್ಷಾ ಸಮಿತಿಯ ನಾಪೋಕ್ಲು ಸಂಚಾಲಕ ಲವ ನಾಣಯ್ಯ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಹಳೇ ತಾಲ್ಲೂಕು ಜಂಕ್ಷನ್ ನಿಂದ ಜಾಥಾ ನಡೆಯಲಿದೆ. ನಂತರ ಮಾರುಕಟ್ಟೆ ಆವರಣದಲ್ಲಿ ಜನಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ ಎಂದರು. ಇಪ್ಪತ್ತನಾಲ್ಕು ಗ್ರಾಮಗಳ ಪ್ರಮುಖ ವ್ಯಾಪಾರ ವಹಿವಾಟಿನ ಕೇಂದ್ರವಾದ ನಾಪೋಕ್ಲುವಿನಲ್ಲಿ ಪ್ರಸ್ತುತ ಹಿಂದೂ ಸಮಾಜಕ್ಕೆ ಬೆದರಿಕೆಯೊಡ್ಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ. ಇದನ್ನು ನಿಗ್ರಹಿಸಬೇಕಾದ ನಾಪೋಕ್ಲು ಪೊಲೀಸ್ ಇಲಾಖೆ ನಿಷ್ಕ್ರೀಯವಾಗಿದೆಯೆಂದು ಆರೋಪಿಸಿದ ಲವ ನಾಣಯ್ಯ, ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರುಗಳನ್ನು ನೀಡಿದ್ದರು ಸೂಕ್ತ ಸ್ಪಂದನ ದೊರಕಿಲ್ಲ. ಹೀಗಿದ್ದ ಮೇಲೆ ಹಿಂದೂ ಸಮಾಜಕ್ಕೆ ರಕ್ಷಣೆಯನ್ನು ನೀಡುವವರು ಯಾರು ಎಂದು ಪ್ರಶ್ನಿಸಿದರು. ಹಿಂದೂ ಜಾಗರಣಾ ಸಮಿತಿಯ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಮಿತಿಯ…
ಮಡಿಕೇರಿ ಮಾ.28 NEWS DESK : ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯನವರ 120ನೇ ಜಯಂತಿಯನ್ನು ಮಾ.31ರಂದು ನಗರದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಗುತ್ತದೆ. ಬಳಿಕ 11 ಗಂಟೆಗೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಮಾಜಿ ಸಚಿವ ಎಂ.ಸಿ.ನಾಣಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಎಂಎಲ್ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ನಿವೃತ್ತ ಕರ್ನಲ್ ಮುಲ್ಲೇರ ಕಾವೇರಪ್ಪ, ಸಾರ್ವಜನಿಕರು, ಸಂಘ ಸಂಸ್ಥೆಗಳು, ನಗರಸಭೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸೇರಿ ಜನರಲ್ ತಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಕೆ.ಎ.ದೇವಯ್ಯ, ಕಾರ್ಯದರ್ಶಿ ಬೊಪ್ಪಂಡ…
ಸುಂಟಿಕೊಪ್ಪ ಮಾ.28 NEWS DESK : ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ (ಕೋಕಾ), ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜಿ.ರಮೇಶ್ ನಾಕೂರು ಅವರನ್ನು ನೇಮಕಗೊಳಿಸಲಾಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಗೌತಮ್ ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಿ.ಆರ್.ಸುನಿಲ್ಕುಮಾರ್, ಯುವ ಮೋರ್ಚಾ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಹೆರೂರು, ಜಿಲ್ಲಾ ಒಬಿಸಿ ಮಾಜಿ ಉಪಾಧ್ಯಕ್ಷರಾದ ಬಿ.ಕೆ.ಮೋಹನ್, ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರ ಅಧ್ಯಕ್ಷ ಶಂಕರ್ ನಾರಾಯಣ, ಕೆದಕಲ್ ಪಂಚಾಯಿತಿ ಶಕ್ತಿ ಕೇಂದ್ರ ಅಧ್ಯಕ್ಷ ರಮೇಶ್, ಸೋಮಯ್ಯ, ಲೀಲಾ ಮೇದಪ್ಪ ಹಾಗೂ ವಿವಿಧ ಬೂತ್ ಮಟ್ಟದ ಅಧ್ಯಕ್ಷರುಗಳು ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ನಿಕಟ ಪೂರ್ವ ಅಧ್ಯಕ್ಷರಾದ ವಾಸುದೇವ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳು ಪಾಲ್ಗೊಂಡಿದ್ದರು. 4 ಪಂಚಾಯಿತಿ ಕಾರ್ಯಕರ್ತರ ಸಮ್ಮುಖದಲ್ಲಿ…






