ವಿರಾಜಪೇಟೆ ಮೇ 21 NEWS DESK : ಜಿಲ್ಲಾ ಕೇಂದ್ರಗಳಲ್ಲಿ ಸಿಐಟಿಯು ಸಂಘಟನೆಯನ್ನು ಬಲಪಡಿಸುವ ಹಾಗೂ ಕಾರ್ಮಿಕರ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಕೊಡಗು ಜಿಲ್ಲಾ ಸಿಐಟಿಯು ವತಿಯಿಂದ ನೆಲ್ಲಿಹುದಿಕೇರಿಯಲ್ಲಿ ಒಂದು ದಿನದ ಹಿರಿಯ ಮುಖಂಡರ ಹಾಗೂ ಕಾರ್ಯಕರ್ತರ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಧರ್ಮೇಶ್ ಅವರು, ಕಾರ್ಮಿಕರ ಕನಿಷ್ಠ ವೇತನವನ್ನು ರೂ.36,000 ಕ್ಕೆ ಹೆಚ್ಚಿಸಬೇಕು ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೇ 30 ರಂದು ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದೆಂದರು. ದೇಶದ ಆರ್ಥಿಕ ಕುಸಿತ ಹಾಗೂ ಹೆಚ್ಚುತ್ತಿರುವ ಅಸಮಾನತೆ ಕುರಿತು ದಿಕ್ಸೂಚಿ ಭಾಷಣ ಮಾಡಿದ ಧರ್ಮೇಶ್ ಅವರು, ಪ್ರಸ್ತುತ ದೇಶವು ತೀವ್ರ ಸಾಮಾಜಿಕ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ದೇಶದಲ್ಲಿ ಉತ್ಪಾದನಾ ವಲಯ ಸಂಪೂರ್ಣವಾಗಿ ಕುಸಿದಿದ್ದು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ…
ಲೇಖಕ: admin
ಮಡಿಕೇರಿ ಮೇ 21 NEWS DESK : ಕೊಡಗು ಜಿಲ್ಲೆಯ ವಿವಿಧ ವಯೋಮಾನದ ಪ್ರತಿಭಾನ್ವಿತ ಫುಟ್ಬಾಲ್ ಆಟಗಾರರಿಗೆ ಮೇ 25 ರಂದು ಅಮ್ಮತ್ತಿ ಪ್ರೌಢ ಶಾಲಾಮೈದಾನದಲ್ಲಿ ಆಯ್ಕೆ ಟ್ರಯಲ್ಸ್ ನಡೆಯಲಿದೆ. ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆ ಹಾಗೂ ಮಂಗಳೂರಿನ ಯೆನಪೋಯ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯ್ಕೆ ನಡೆಯಲಿದೆ. ಯೆನಪೋಯ ವಿಶ್ವಿದ್ಯಾನಿಲಯದ ಹಿರಿಯ ಕೋಚ್ ಬಿಬಿ ಥೋಮಸ್ ನೇತೃತ್ವದ ಪರಿಣಿತರ ತಂಡ ಆಟಗಾರರನ್ನು ಆಯ್ಕೆ ಮಾಡುತ್ತಿದ್ದು, ಆಯ್ಕೆಯಾದವರಿಗೆ ವಿದ್ಯಾರ್ಥಿವೇತನ ಜೊತೆ ಯೆನಪೋಯ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣವನ್ನೂ ನೀಡಲಾಗುತ್ತದೆ. ಅಂಡರ್ 14, ಅಂಡರ್ 16, ಅಂಡರ್ 18 ಮತ್ತು 24 ವರ್ಷದೊಳಗಿನ ಹಿರಿಯರ ತಂಡಕ್ಕೂ ಆಯ್ಕೆ ನಡೆಯಲಿದೆ. ಟ್ರಯಲ್ಸ್ ನಲ್ಲಿ ಭಾಗವಹಿಸುವವರು ಮೇ 25 ರ ಸೋಮವಾರದಂದು ತಮ್ಮ ಪಾಸ್ ಪೋರ್ಟ್ ಅಳತೆಯ ಫೋಟೋ, ಆಧಾರ್ ಕಾರ್ಡ್ ಜೊತೆ ಕಡ್ಡಾಯವಾಗಿ ಬೆಳಗ್ಗೆ 8 ಗಂಟೆಗೆ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಆಟಗಾರರು ಶಾರ್ಟ್ಸ್, ಜೆರ್ಸಿ, ಸ್ಟಡ್ಸ್, ಸ್ಟಾಕಿನ್ಸ್, ಶಿನ್ ಗಾರ್ಡ್ ಕಡ್ಡಾಯವಾಗಿ ತರಬೇಕು. ಯೆನಪೋಯ ಕ್ರೀಡಾ ಅಕಾಡೆಮಿಗೆ…
ಮಡಿಕೇರಿ ಮೇ 21 NEWS DESK : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಡೆದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಸುಧಾಕರ್, ಬೈರತಿ ಸುರೇಶ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಬಾನು ಚಿಬ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಮಡಿಕೇರಿ ಮೇ 21 NEWS DESK : ಸರ್ಕಾರವು ಘನತ್ಯಾಜ್ಯ ನಿರ್ವಹಣೆ ನಿಯಮಗಳ 2026ರ ಪ್ರಕಾರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತ್ಯಾಜ್ಯ ವಿಲೇವಾರಿ ಮಾಡುವ ವಾಹನಕ್ಕೆ ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಮೂಲದಲ್ಲಿಯೇ ನಾಲ್ಕು ವಿದಧ ತ್ಯಾಜ್ಯ ವಿಂಗಡಣೆ ಮಾಡಿ ಕಡ್ಡಾಯವಾಗಿ ನೀಡಬೇಕು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಅವರು ಕೋರಿದ್ದಾರೆ. ಹಸಿತ್ಯಾಜ್ಯ: ಅಡಿಗೆ ಮನೆಯ ತ್ಯಾಜ್ಯ, ಆಹಾರ ತ್ಯಾಜ್ಯ, ತರಕಾರಿ ತ್ಯಾಜ್ಯ, ಮಾಂಸದ ತ್ಯಾಜ್ಯ, ಹಣ್ಣಿನ ತ್ಯಾಜ್ಯ, ಹೂವಿನ ತ್ಯಾಜ್ಯ, ಗಾರ್ಡನ್ ವೇಸ್ಟ್ ಮತ್ತು ಇತರೆ ಕರಗುವ ತ್ಯಾಜ್ಯ ವಸ್ತುಗಳು. ಒಣತ್ಯಾಜ್ಯ: ಎಲ್ಲಾ ರೀತಿಯ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳು, ಬಟ್ಟೆಯ ತ್ಯಾಜ್ಯ ವಸ್ತುಗಳು, ಕಬ್ಬಿಣ, ರಬ್ಬರ್ ಮರದ ತ್ಯಾಜ್ಯ ಮತ್ತಿತರ. ಸ್ಯಾನಿಟರಿ ತ್ಯಾಜ್ಯ: ಡೈಪರ್ಸ್, ಸ್ಯಾನಿಟರಿ ನ್ಯಾಫ್ಕಿನ್ಸ್, ಕಾಂಡೂಮ್ಸ್ ಮತ್ತಿತರ. ಸ್ಪೆಷಲ್ ಕೇ ವೇಸ್ಟ್: ಪೈಂಟ್ ಡ್ರಮ್ಸ್/ಕಂಟೈನರ್ಸ್ ಔಷಧಿ ಕ್ಯಾನ್ಗಳು/ಡ್ರಮ್ ಗಳು/ಬಾಟಲ್ಗಳು ಬಲ್ಬ್/ ಟ್ಯೂಬ್ ಲೈಟ್ಸ್, ಅವಧಿ ಮೀರಿದ ಔಷದಿಗಳು, ಒಡೆದ ಮಕ್ರ್ಯೂರಿ ಥರ್ಮೋಮೀಟರ್ಸ್ ಹಳೆಯ…
ಮಡಿಕೇರಿ ಮೇ 21 NEWS DESK : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರ ಉಪಸ್ಥಿತಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅವರ ಆಪ್ತ ಸಹಾಯಕರಾದ ಜಿ.ಷಣ್ಮುಖ ಅವರು ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಷಣ್ಮುಖ ಅವರು ಪ್ರಮಾಣ ವಚನ ಬೋಧಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಜಿಲ್ಲಾ…
ಮಡಿಕೇರಿ ಮೇ 21 NEWS DESK : ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಇದರ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಲ್ಸ್ ಪೋಲಿಯೋ ಲಸಿಕೆಯು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜೂ.28 ರಿಂದ ಜು.1 ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ಸಿಬ್ಬಂದಿಗಳ ನಿಯೋಜನೆ, ವಾಹನ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪೋಲಿಯೋ ಹನಿ ನೀಡುವ ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 5 ವರ್ಷದವರೆಗಿನ ಒಟ್ಟು 32,702 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 3,275, ಗ್ರಾಮೀಣ ಭಾಗದಲ್ಲಿ 29,427 ಮಕ್ಕಳಿದ್ದಾರೆ.…
ಮಡಿಕೇರಿ ಮೇ 21 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಪೊಲೀಸ್ ಮತ್ತು ಲಿಪಿಕ ಸಿಬ್ಬಂದಿಗಳಿಗೆ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.
ಮಡಿಕೇರಿ ಮೇ 21 NEWS DESK : ಪೊನ್ನಂಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಜೂ.6 ರಂದು ಹುದಿಕೇರಿಯಲ್ಲಿ ಜರಗಲಿದೆ. ಸಮ್ಮೇಳನದಲ್ಲಿ ಉದ್ಘಾಟನಾ ಸಮಾರಂಭ, ವಿಚಾರಗೋಷ್ಠಿ, ಕನ್ನಡ ಗೀತ ಗಾಯನ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಸಮಾರೋಪ ಸಮಾರಂಭ ಮತ್ತು ತಾಲೂಕಿನ ಪ್ರತಿಭೆಗಳ ಪ್ರದರ್ಶನಕ್ಕಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಕಲಾವಿದರು ಅಥವಾ ಕಲಾವಿದರ ತಂಡ ಈ ಕೆಳಗಿನ ವಿಳಾಸ ಅಥವಾ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಅಪೇಕ್ಷೆ ಅಥವಾ ಅರ್ಜಿ ವಾಟ್ಸಾಪ್ ಮೂಲಕ ದಿನಾಂಕ 25.05.2026ರ ಒಳಗಾಗಿ ಸಲ್ಲಿಸಬಹುದು. ಸಂಪರ್ಕಿಸಬೇಕಾದ ವಿಳಾಸ : ಶ್ರೀ ಬಾನಂಗಡ ಅರುಣ್, ಅಧ್ಯಕ್ಷರು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ. ಹೆಚ್ಚಿನ ಮಾಹಿತಿಗೆ 94497 64418, 91138 92396, 94487 21542 ಸಂಪರ್ಕಿಸಬಹುದಾಗಿದೆ ಎಂದು ಸಮ್ಮೇಳನದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ಬುಟ್ಟಿಯಂಡ ಸುನಿತಾ ಗಣಪತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮೇ 21 NEWS DESK : ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಂಗಳ್ಳಿ ಗ್ರಾಮದ ಊರ್ ಮಂದ್ ಹೊಳೆಗೆ 35ಲಕ್ಷ ವೆಚ್ಚದ ಸೇತುವೆ ನಿರ್ಮಾಣಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಪ್ರತೀ ಗ್ರಾಮಗಳ ಅಭಿವೃದ್ಧಿಯ ಕನಸು ತನ್ನದಾಗಿದ್ದು, ಈಡೇರಿಕೆಗೆ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ತಿಳಿಸಿದರು. ಅಭಿವೃದ್ಧಿಯಲ್ಲಿ ಗ್ರಾಮ ನಿವಾಸಿಗಳ ಪಾತ್ರವು ಮುಖ್ಯ, ಗುಣಮಟ್ಟದ ಕಾಮಗಾರಿ ಗಮನಿಸುವ ಹೊಣೆಗಾರಿಕೆ ಸ್ಥಳೀಯರದಾಗಬೇಕು ಎಂದರಲ್ಲದೆ, ಕಾಲಮಿತಿಯೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆಗಾರರಿಗೆ ಸೂಚಿಸಿದರು. ಈ ಸಂದರ್ಭ ಶಿರಂಗಳ್ಳಿ ಗ್ರಾಮಧ್ಯಕ್ಷ ಉಡುವೆರ ಮಿಟ್ಟು ತಮ್ಮಯ್ಯ, ಗರ್ವಾಲೆ ಕೊಡವ ಸಮಾಜ ಅಧ್ಯಕ್ಷ ಸರ್ಕಂಡ ಗಣಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಾಕೇರಿ ಸತೀಶ್, ಸ್ಥಳೀಯ ಮುಖಂಡರಾದ ಉದ್ದಿನಾಡಂಡ ರಘು, ಮೋಟನಳ್ಳಿರ ಸನ್ನಿ ಕಾರ್ಯಪ್ಪ ಸೇರಿದಂತೆ ಗ್ರಾಮಸ್ಥರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಮೇ 21 : ಬೆಲೆ ಹೆಚ್ಚಳದ ಪರಿಣಾಮ ಸಂಕಷ್ಟದ ಜೀವನ ಸಾಗಿಸುತ್ತಿರುವ ಆಟೋ ಚಾಲಕರ ಹಿತ ಕಾಪಾಡಲು ಸರಕಾರ “ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ” ರಚಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಸ್ಡಿಟಿಯು ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಅವರು ಪೆಟ್ರೋಲ್, ಡೀಸೆಲ್, ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನಿತ್ಯ ದುಡಿಯುವ ಆಟೋ ಚಾಲಕರು ಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸದ ಶುಲ್ಕವೂ ದುಬಾರಿಯಾಗಿದೆ, ತೆರಿಗೆ ಹೊರೆ ಅಧಿಕವಾಗಿದೆ. ಆದ್ದರಿಂದ ಸರಕಾರ ತಕ್ಷಣ ಆಟೋ ಚಾಲಕರ ನೆರವಿಗೆ ಬಂದು “ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ” ರಚಿಸಿ ಅಗತ್ಯ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.






