ಲೇಖಕ: admin

ವಿರಾಜಪೇಟೆ NEWS DESK ಜು.24 : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ಸುಸಜ್ಜಿತ ಕಟ್ಟಡ, ನುರಿತ ಉಪನ್ಯಾಸಕರು, ಉತ್ತಮ ಗ್ರಂಥಾಲಯ, ಇಂಡಸ್ಟ್ರಿಯಲ್ ವಿಸಿಟ್ ಕಾರ್ಯಕ್ರಮ, ಇಂಟರ್ನ್ಶಿಪ್ ಹಾಗೂ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಳ್ಳುವಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಹೀಗೆ ಹತ್ತು ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಮಾತ್ರವಲ್ಲದೆ ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವೃತ್ತಿ ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುತ್ತದೆ. ಈ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಕಚೇರಿಯ ವೇಳೆಯಲ್ಲಿ ಕಾಲೇಜಿಗೆ ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು  ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ NEWS DESK ಜು.23 : ಇತ್ತೀಚೆಗೆ ಹಾನಿಗೀಡಾದ ಮಡಿಕೇರಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೆ ಖಾಸಗಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ವರ್ತಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರ ಚೇಂಬರ್ ಆಫ್ ಕಾಮರ್ಸ್ನಿಂದ ಜಿಲ್ಲಾಡಳಿತ, ನಗರಸಭೆ ಹಾಗೂ ಸಂಬ0ಧಪಟ್ಟ ಇಲಾಖೆಗಳಿಗೆ ತುರ್ತು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಭೂಕುಸಿತದ ಹಿನ್ನೆಲೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದ್ದು, ಇದರ ಪರಿಣಾಮ ನಿತ್ಯ ನಗರದಲ್ಲಿ ವಾಹನದಟ್ಟಣೆ ಮಿತಿ ಮೀರಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು, ಹಿರಿಯ ನಾಗರೀಕರು, ಸಾರ್ವಜನಿಕರು ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಗಳ ಮಾರ್ಗವನ್ನು ಕೂಡ ಬದಲಾಯಿಸಿರುವುದರಿಂದ ಸಕಾಲದಲ್ಲಿ ಸಂಚಾರ ವ್ಯವಸ್ಥೆ ಇಲ್ಲದೆ ಪ್ರಯಾಣಿಕರೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. *ವರ್ತಕರಿಗೆ ನಷ್ಟ*…

Read More

ಮಡಿಕೇರಿ NEWS DESK ಜು.23 : ಇತ್ತೀಚೆಗೆ ಹಾನಿಗೀಡಾದ ಮಡಿಕೇರಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೆ ಖಾಸಗಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ವರ್ತಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರ ಚೇಂಬರ್ ಆಫ್ ಕಾಮರ್ಸ್ನಿಂದ ಜಿಲ್ಲಾಡಳಿತ, ನಗರಸಭೆ ಹಾಗೂ ಸಂಬ0ಧಪಟ್ಟ ಇಲಾಖೆಗಳಿಗೆ ತುರ್ತು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಭೂಕುಸಿತದ ಹಿನ್ನೆಲೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದ್ದು, ಇದರ ಪರಿಣಾಮ ನಿತ್ಯ ನಗರದಲ್ಲಿ ವಾಹನದಟ್ಟಣೆ ಮಿತಿ ಮೀರಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು, ಹಿರಿಯ ನಾಗರೀಕರು, ಸಾರ್ವಜನಿಕರು ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಗಳ ಮಾರ್ಗವನ್ನು ಕೂಡ ಬದಲಾಯಿಸಿರುವುದರಿಂದ ಸಕಾಲದಲ್ಲಿ ಸಂಚಾರ ವ್ಯವಸ್ಥೆ ಇಲ್ಲದೆ ಪ್ರಯಾಣಿಕರೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. *ವರ್ತಕರಿಗೆ ನಷ್ಟ*…

Read More

ಮಡಿಕೇರಿ NEWS DESK ಜು.23 : ಇತ್ತೀಚೆಗೆ ಹಾನಿಗೀಡಾದ ಮಡಿಕೇರಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಳೆ ಖಾಸಗಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ವರ್ತಕರು, ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರ ಚೇಂಬರ್ ಆಫ್ ಕಾಮರ್ಸ್ನಿಂದ ಜಿಲ್ಲಾಡಳಿತ, ನಗರಸಭೆ ಹಾಗೂ ಸಂಬ0ಧಪಟ್ಟ ಇಲಾಖೆಗಳಿಗೆ ತುರ್ತು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಭೂಕುಸಿತದ ಹಿನ್ನೆಲೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದ್ದು, ಇದರ ಪರಿಣಾಮ ನಿತ್ಯ ನಗರದಲ್ಲಿ ವಾಹನದಟ್ಟಣೆ ಮಿತಿ ಮೀರಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು, ಹಿರಿಯ ನಾಗರೀಕರು, ಸಾರ್ವಜನಿಕರು ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಗಳ ಮಾರ್ಗವನ್ನು ಕೂಡ ಬದಲಾಯಿಸಿರುವುದರಿಂದ ಸಕಾಲದಲ್ಲಿ ಸಂಚಾರ ವ್ಯವಸ್ಥೆ ಇಲ್ಲದೆ ಪ್ರಯಾಣಿಕರೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. *ವರ್ತಕರಿಗೆ ನಷ್ಟ*…

Read More

​ ಸುಂಟಿಕೊಪ್ಪ ಜು.22 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಕುಮಾರ್ ಅವರು ಉದ್ಘಾಟಿಸಿ ಮಾತನಾಡಿ, ​ವಿಕಲಚೇತನರಿಗೆ ಆರೋಗ್ಯ ತಪಾಸಣೆ ಆಯೋಜಿಸಿರುವುದು ಅತ್ಯಂತ ಮಹತ್ವದ ಸಮಾಜಮುಖಿ ಕಾರ್ಯವಾಗಿದೆ. ಇಂತಹ ಶಿಬಿರಗಳು ವಿಕಲಚೇತನರ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಸೂಕ್ತ ಚಿಕಿತ್ಸೆ ಹಾಗೂ ಅಗತ್ಯ ಸಲಹೆಗಳನ್ನು ನೀಡಲು ಹೆಚ್ಚು ಸಹಕಾರಿಯಾಗುತ್ತವೆ ಎಂದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ಕಾಮತ್ ಮಾತನಾಡಿ, “ವಿಕಲಚೇತನರು ಸಮಾಜದ ಸಮಾನ ಸದಸ್ಯರಾಗಿದ್ದಾರೆ. ಅವರಿಗೆ ಸೂಕ್ತ ಅವಕಾಶ, ಬೆಂಬಲ ಮತ್ತು ಪ್ರೋತ್ಸಾಹ ದೊರೆತರೆ ಅವರು ಶಿಕ್ಷಣ, ಕ್ರೀಡೆ, ಕಲೆ, ವಿಜ್ಞಾನ ಹಾಗೂ ಉದ್ಯೋಗ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಶ್ರೇಷ್ಠ ಸಾಧನೆ…

Read More

​ಸುಂಟಿಕೊಪ್ಪ ಜು.22 NEWS DESK : ಗ್ರಾಮದ ಜನರ ಪ್ರಮುಖ ಬೇಡಿಕೆಗಳಿಗೆ ಅನುಗುಣವಾಗಿ ಅವರೊಂದಿಗೆ ಮೌಖಿಕವಾಗಿ ಚರ್ಚಿಸಿ, ಅವರ ಇಚ್ಛೆಯಂತೆ ಕಾರ್ಯವೈಖರಿ ರೂಪಿಸುವುದರಿಂದ ಅಭಿವೃದ್ಧಿ ಕಾರ್ಯಗಳಲ್ಲಿ ಸುಸೂತ್ರವಾಗಿ ಯಶಸ್ಸು ಕಾಣಲು ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು. ​​ಸುಂಟಿಕೊಪ್ಪ ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಧುನಿಕ ಮಾರುಕಟ್ಟೆ ಮತ್ತು ಬಸ್ ನಿಲ್ದಾಣ ನಿರ್ಮಾಣ ಕುರಿತ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಭೆಯಲ್ಲಿ ಮಾಜಿ ಜನಪ್ರತಿನಿಧಿಗಳು, ವ್ಯಾಪಾರಿಗಳು ಹಾಗೂ ಗ್ರಾಮಸ್ಥರ ಅಭಿಪ್ರಾಯಗಳನ್ನು ಮುಕ್ತವಾಗಿ ಆಲಿಸಿದ ಶಾಸಕರು, ಗ್ರಾಮದ ಪ್ರಗತಿಗೆ ಎಲ್ಲರೂ ಪಕ್ಷಾತೀತ ಹಾಗೂ ಜಾತ್ಯತೀತ ನಿಲುವಿನೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು. ಮುಂದಿನ 10 ದಿನಗಳ ಒಳಗಾಗಿ ವಿಶೇಷ ಗ್ರಾಮಸಭೆಯನ್ನು ಕರೆಯಬೇಕು. ನೂತನ ಮಾರುಕಟ್ಟೆ ಮತ್ತು ಬಸ್ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕನಿಷ್ಠ 3 ಮಾದರಿಯ ನೀಲಿ ನಕ್ಷೆಗಳೊಂದಿಗೆ (Blueprints) ವಿವರ ನೀಡುವಂತೆ ಕಂದಾಯ ಪರಿವೀಕ್ಷಕ ಎಚ್.ಎಂ.…

Read More

​ಸುಂಟಿಕೊಪ್ಪ ಜು.22 NEWS DESK : ತನ್ನ ಸಹಚರರ ಜೊತೆ ಯಾವುದೇ ಸಂಘರ್ಷವಿಲ್ಲದೆ, ಧರ್ಮಾತೀತವಾಗಿ ಹಾಗೂ ಜಾತ್ಯತೀತವಾಗಿ ಸಮಾಜಕ್ಕಾಗಿ ದುಡಿಯುವವನೇ ನಿಜವಾದ ನಾಯಕನಾಗುತ್ತಾನೆ ಎಂದು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ​”ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ಮತ್ತು ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಇಂತಹ ವೇದಿಕೆಗಳು ಹಾಗೂ ಕಾರ್ಯಕ್ರಮಗಳು ಅತ್ಯಗತ್ಯ.” ಎಂದರು. ಒಬ್ಬ ಉತ್ತಮ ನಾಯಕನಿಗೆ ಇರಬೇಕಾದ ವ್ಯಕ್ತಿತ್ವ ಮತ್ತು ಗುಣಲಕ್ಷಣಗಳ ಕುರಿತು ವಿವರಣೆ ನೀಡಿದ ಅವರು, ಕಾಲೇಜಿನ ಶ್ರೇಯಸ್ಸಿಗೆ ಶ್ರಮಿಸುವುದರ ಜೊತೆಗೆ ಪೋಷಕರ ಅಭಿಲಾಷೆ ಹಾಗೂ ಗುರುಗಳ ನಿರೀಕ್ಷೆಯನ್ನು ಸಾಕಾರಗೊಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಅಧ್ಯಯನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ::…

Read More

ವಿರಾಜಪೇಟೆ ಜು.22 NEWS DESK : ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜಿನ 2026-2027ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ವೈಭವದಿಂದ ನೆರವೇರಿತು. ​ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ, ಪ್ರತಿಜ್ಞಾವಿಧಿ ಬೋಧಿಸಿದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್‌ ಅವರು ಮಾತನಾಡಿ, “ವಿದ್ಯಾರ್ಥಿಗಳು ಉತ್ತಮ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಹೆತ್ತವರು ತಮ್ಮ ಕನಸುಗಳನ್ನು ಮಕ್ಕಳ ಕಣ್ಣುಗಳಲ್ಲಿ ಕಾಣುತ್ತಾರೆ. ಹಾಗಾಗಿ ಅವರಿಗೆ ನೋವು ಉಂಟುಮಾಡದೆ ಅವರ ಆಸೆ-ಕನಸುಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಗುರುಗಳಿಗೆ ಸದಾ ಗೌರವ ನೀಡಿ, ಅವರ ಮಾರ್ಗದರ್ಶನದಲ್ಲಿ ನಡೆದು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು,” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಣಿಕೊಪ್ಪಲಿನ ಕಾವೇರಿ ಎಜುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಅವರು ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಮುಂದಿನ 5 ವರ್ಷಗಳ ಕಾಲ ಗುರುಗಳ ಸಲಹೆ-ಮಾರ್ಗದರ್ಶನ ಪಡೆಯುವುದು ಅಗತ್ಯ.…

Read More

ವಿರಾಜಪೇಟೆ ಜು.22 NEWS DESK : ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜನಗಣತಿ ಹಾಗೂ ಕ್ಷೇತ್ರ ಮರು ವಿಂಗಡಣೆ ಪ್ರಕ್ರಿಯೆಯಿಂದ ಮಹಿಳಾ ಮೀಸಲಾತಿಯನ್ನು ಬೇರ್ಪಡಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಮಂಡಿಸಬೇಕು. ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳ ಕ್ಷೇತ್ರಗಳ ಆಧಾರದ ಮೇಲೆಯೇ ಮುಂದಿನ ಚುನಾವಣೆಯಿಂದ ಶೇ.33ರ ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ವತಿಯಿಂದ ವಿರಾಜಪೇಟೆಯಲ್ಲಿ ಪೋಸ್ಟರ್  ಬಿಡುಗಡೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಸಿತು. ವಿರಾಜಪೇಟೆಯಲ್ಲಿ ಸಂಘಟನೆಯ ಕಛೇರಿಯಲ್ಲಿ ಜಾಗೃತಿ  ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದ ಮುಖಂಡರು, ಬಳಿಕ ಸಾರ್ವಜನಿಕರು, ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಂದ ಸಹಿ ಸಂಗ್ರಹಿಸುವ ಮೂಲಕ ಕೇಂದ್ರ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ರಾಜಕೀಯದಲ್ಲಿ ಮಹಿಳೆಯರ ಸಮಾನ ಪ್ರಾತಿನಿಧ್ಯ ಮತ್ತು ಶೇ.33 ಮೀಸಲಾತಿಯ ಅಗತ್ಯತೆಯನ್ನು ಸಾರುವ ವಿಶೇಷ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು. ಮುಂಬರುವ ಚುನಾವಣೆಗಳಿಂದಲೇ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಕ್ಷೇತ್ರಗಳ ಆಧಾರದ ಮೇಲೆ ಶೇಕಡಾ 33…

Read More

ಮಡಿಕೇರಿ ಜು.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೊಡಗು ಜಿಲ್ಲೆಯ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್ ಗೋಪಾಲಕೃಷ್ಣರವರ ಜ್ಞಾಪಕಾರ್ಥ ಅವರ ಪುತ್ರ ಅನಂತಶಯನ ಮತ್ತು ಸಹೋದರರು ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ದತ್ತಿ ಸ್ಥಾಪನೆ ಮಾಡಿರುತ್ತಾರೆ. 2026-27ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2021ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶ. ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನಾಂಕ 02.08.2026. :: ಕಳುಹಿಸಬೇಕಾದ…

Read More