ನಾಪೋಕ್ಲು ಅ.17 NEWS DESK : ನರಿಯಂದಡ ಗ್ರಾಮದ ತೋಟಗಳಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ನರಿಯಂದಡ ಗ್ರಾಮ ಪಂಚಾಯಿತಿಗೆ ಒಳಪಟ್ಟ ನರಿಯಂದಡ ಗ್ರಾಮದ ಪೊಕ್ಕೋಳಂಡ್ರ ಮಕ್ಕಿಮನೆ, ಮಂಞಪುರ ಕುಟುಂಬಸ್ಥರ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಚಲನ ವಲನ ಕಂಡುಬಂದಲ್ಲಿ ತಕ್ಷಣವೆ ಅರಣ್ಯ ಇಲಾಖೆಯನ್ನು 8277124444 ಸಂಪರ್ಕಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಲೇಖಕ: admin
ಮಡಿಕೇರಿ ಅ.17 NEWS DESK : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 30ನೇ ವರ್ಷದ ಕಾವೇರಿ ರಥಯಾತ್ರೆ ನಾಪೋಕ್ಲು ನಿಂದ ತಲಕಾವೇರಿಗೆ ಪ್ರಯಾಣ ಪ್ರಾರಂಭಗೊಂಡಿತ್ತು. ಸಂಜೆ ಭಕ್ತಾಧಿಗಳಿಗೆ ತೀರ್ಥ ವಿತರಣಿಸುವುದರ ಮೂಲಕ ಭಾಗಮಂಡಲದಿಂದ ಅಯ್ಯಂಗೇರಿ, ಬಲ್ಲಮಾವಟ್ಟಿ ಮಾರ್ಗವಾಗಿ ನಾಪೋಕ್ಲುವಿಗೆ ಹಿಂತಿರುಗಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿನ್ನಪ್ಪ ತಿಳಿಸಿದ್ದಾರೆ. . ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.17 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಸಂದರ್ಭದಲ್ಲೆ ದೇಶ ಭಕ್ತ ಸಂಘಟನೆಯ ವಿರುದ್ಧ ತುಚ್ಛವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಪ್ರಿಯಾಂಕ ಖರ್ಗೆಯ ಧೋರಣೆಗಳನ್ನು ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ ತೀವ್ರವಾಗಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಶತಮಾನೋತ್ಸವದ ಸಂದರ್ಭ ನಡೆದ ಪಥ ಸಂಚಲನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಹಲವು ಮಂದಿ ಗಣವೇಷ ಧರಿಸಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ಆರ್ಎಸ್ಎಸ್ ವಿರುದ್ಧವಾದ ಹೇಳಿಕೆಗಳಿಗೆ ಕಾಂಗ್ರೆಸ್ನ ಎಲ್ಲರನ್ನು ದೂಷಿಸುವುದಿಲ್ಲ. ಆದರೆ, ತಂದೆ ಮಲ್ಲಿಕಾರ್ಜುನ ಖರ್ಗೆ ಅವರ ಆಶೀರ್ವಾದದಿಂದಷ್ಟೆ ಸಚಿವರಾಗಿರುವ ಪ್ರಿಯಾಂಕ ಖರ್ಗೆಯವರ ನಿಲುವುಗಳನ್ನು ತೀವ್ರವಾಗಿ ವಿರೋಧಿಸುವುದಾಗಿ ತೀಕ್ಷ್ಣವಾಗಿ ನುಡಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭಗಳಲ್ಲೆಲ್ಲ ಮುಸಲ್ಮಾನರನ್ನು ಎತ್ತಿ ಕಟ್ಟುವ, ಹಿಂದೂಗಳನ್ನು ಟೀಕಿಸುವ ಪ್ರವೃತ್ತಿಯನ್ನು ಕಾಣುತ್ತಿರುವುದಲ್ಲದೆ, ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಕಾರ್ಯವೂ ನಡೆಯುತ್ತದೆ. ಜಿಲ್ಲೆಯಲ್ಲಿ ದಶಕಗಳ ಹಿಂದೆ ನಡೆದ ಪಾಲೂರು ಘಟನೆಯ ಹಂತದಲ್ಲಿ ನೂರಾರು ಹಿಂದೂಗಳ…
ಸುಂಟಿಕೊಪ್ಪ ಅ.17 NEWS DESK : ಕಾನ್ಬೈಲ್ ಒಕ್ಕೂಟ ಕಾರ್ಯಕ್ಷೇತ್ರದಲ್ಲಿ ಲೆಕ್ಕ ಪರಿಶೋಧನೆಗೆ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಸದಸ್ಯೆ ರಾಧಮಣಿ, ಶ್ರೀ.ಕ್ಷೇ.ಧ.ಗ್ರಾ.ಯೋ.ವಲಯ ಮೇಲ್ವಿಚಾರಕ ಸಂತೋಷ್ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಒಕ್ಕೂಟದ ಕಾರ್ಯಕ್ಷೇತ್ರದ ಲೆಕ್ಕ ಪರಿಶೋಧನೆಯನ್ನು ಆರಂಭಗೊಳಿಸಲಾಗಿದೆ. ಈ ಸಂದರ್ಭ ಲೆಕ್ಕ ಪರಿಶೋಧಕರಾದ ಜಗನ್ನಾಥ್, ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು.
ಮಡಿಕೇರಿ ಅ.17 NEWS DESK : ಟಿ.ಎ.ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ತೊರೆನೂರು ಗ್ರಾಮದ ಸಾಗರ್ ತೊರೆನೂರು ಅವರನ್ನು ವೇದಿಕೆಯ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ನೇಮಕ ಮಾಡಿದ್ದಾರೆ. ವೇದಿಕೆ ವತಿಯಿಂದ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶ ಪ್ರತಿ ನೀಡಿ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರು ಅ.17 NEWS DESK : ವಿವಿಧ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ರಕ್ತದ ಅಗತ್ಯವಿರುತ್ತದೆ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಲುಕೇಮಿಯಾ ಮುಂತಾದ ಸಂದರ್ಭದಲ್ಲಿ ರಕ್ತ ಅತೀ ಅವಶ್ಯವಾಗಿರುತ್ತದೆ. ಕೆಲವರಂತೂ ರಕ್ತ ಸಿಗದೇ ಪ್ರಾಣವನ್ನು ಕಳೆದುಕೊಳ್ಳುವ ಸಾಧ್ಯತೆಗಳೂ ಇರುತ್ತವೆ. ಈ ಕಾರಣದಿಂದ ರಕ್ತದಾನದ ಮಹತ್ವವನ್ನು ಅರಿತು ಅರ್ಹರೆಲ್ಲರೂ ರಕ್ತದಾನ ಮಾಡುವುದಕ್ಕೆ ಹಿಂಜರಿಯಬಾರದು ಎಂದು ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೃಂದ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್ಕ್ರಾಸ್ ಮತ್ತು ಎನ್ಎಸ್ಎಸ್ ಘಟಕ ಹಾಗೂ ಕೆಎಂಸಿ ರಕ್ತಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ರಕ್ತ ನೀಡುವುದಕ್ಕೆ ಇರುವ ಮಾನದಂಡಗಳು ಮತ್ತು ರಕ್ತದಾನದ ನಂತರ ರೋಗಿಗೆ ಅದನ್ನು ನೀಡುವ ಮೊದಲು ಯಾವೆಲ್ಲಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎನ್ನುವುದನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಮಾತನಾಡಿ ರಕ್ತದಾನವು ಅನೇಕ ಜೀವಗಳನ್ನು ಉಳಿಸಬಲ್ಲದು. ಮನುಷ್ಯನ ಜೀವ…
ಮಡಿಕೇರಿ ಅ.17 NEWS DESK : ಹಿಂದೂ ಮಲಯಾಳಿ ಸಂಘದ ವತಿಯಿಂದ ಅ.19 ರಂದು ನಗರದಲ್ಲಿ ಮಲಯಾಳಿ ಬಾಂಧವರ ‘ಓಣಾ ಘೋಷಂ-ಓಣಂ ಸಧ್ಯ’ ಹಬ್ಬ ಆಚರಿಸಲಾಗುವುದೆಂದು ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಣಂ ಹಬ್ಬವನ್ನು ನಮ್ಮ ಸಂಸ್ಕೃತಿ ಆಚಾರ, ವಿಚಾರಗಳ ಸಂರಕ್ಷಣೆಯೊಂದಿಗೆ, ಅದನ್ನು ಯುವ ಸಮೂಹಕ್ಕೆ ತಿಳಿಯಪಡಿಸುವ ಉದ್ದೇಶದಿಂದ ಆಚರಿಸಿಕೊಮಡು ಬರಲಾಗುತ್ತಿದೆ. ಈ ಬಾರಿಯ ಹಬ್ಬಾಚರಣೆ ನಗರದ ಕಾವೇರಿ ಹಾಲ್ನಲ್ಲಿ ನಡೆಯಲಿದೆಯೆಂದು ಹೇಳಿದರು. ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಮಾತನಾಡಿ, ಅ.19ರ ಭಾನುವಾರ ಬೆಳಿಗ್ಗೆ ಪೂಕಳಂ ಸ್ಪರ್ಧೆ, ಛದ್ಮವೇಷ ಹಾಗೂ ಮಾವೇಲಿ ಮತ್ತು ಚಂಡೆ ವಾದ್ಯದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದರು. ಬೆಳಿಗ್ಗೆ 10.30 ಗಂಟೆಗೆ ಸಾಂಪ್ರದಾಯಿಕ ತಿರುವಾದಿ ನೃತ್ಯದ ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ವಹಿಸಲಿದ್ದಾರೆಂದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮೈಸೂರು-ಕೊಡಗು…
ಮೈಸೂರು, ಅ.17 NEWS DESK : ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಈ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರಿನಿಂದ ರಾಜಸ್ಥಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಂಸದರು ಹೇಳಿದ್ದಾರೆ. ರಾಜಸ್ಥಾನದ ಜನರು ಹಾಗೂ ಇತರರು ಈ…
ಮಡಿಕೇರಿ NEWS DESK ಅ.16 : ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಸಿದ್ಧತೆಯನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಗುರುವಾರ ಪರಿಶೀಲಿಸಿದರು. ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ತ್ರಿವೇಣಿ ಸಂಗಮ ಭೇಟಿ ನೀಡಿ ವೀಕ್ಷಿಸಿದರು, ಬಳಿಕ ತಲಕಾವೇರಿಯಲ್ಲಿನ ಸಿದ್ಧತೆ ಪರಿಶೀಲಿಸಿದರು. ಭಕ್ತಾದಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಎಚ್ಚರವಹಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ತಕ್ಕ ಮುಖ್ಯಸ್ಥರು, ಇತರರು ಇದ್ದರು.
ವಿರಾಜಪೇಟೆ NEWS DESK ಅ.16 : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರೆಜಿತ್ ಕುಮಾರ್ ಗುಹ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಸ್ ಮುಸ್ತಫ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2025-28 ನೇ ಸಾಲಿನ ಆಡಳಿತ ಮಂಡಳಿಗೆ ವಿರಾಜಪೇಟೆ ಪ್ರೆಸ್ ಕ್ಲಬ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಪುತ್ತಂ ಪ್ರದೀಪ್, ಖಜಾಂಚಿಯಾಗಿ ಹೇಮಂತ್ ಕುಮಾರ್ ಎಂ.ಎನ್, ನಿರ್ದೇಶಕರಾಗಿ ಕಿಶೋರ್ ಕುಮಾರ್ ಶೆಟ್ಟಿ, ಕೋಲತಂಡ ರಘು ಮಾಚಯ್ಯ ಆಯ್ಕೆಯಾದರು. ಈ ಸಂದರ್ಭ ಮಾತನಾಡಿದ ರೆಜಿತ್, ಎಲ್ಲರ ಸಹಕಾರದಿಂದ ಸಂಘವನ್ನು ಮುನ್ನಡೆಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಜಿಮ್ಮಿ ಸಿಕ್ವೇರಾ, ಜಿಲ್ಲಾ ವೀಕ್ಷಕರಾದ ಎಂ.ಎನ್ ಚಂದ್ರಮೋಹನ್, ಪ್ರಮುಖರಾದ ನಾಗರಾಜ್ ಶೆಟ್ಟಿ, ಪಾರ್ಥ ಚಿಣ್ಣಪ್ಪ, ಡಿ. ಮಂಜುನಾಥ್, ಕಾಂಗಿರ ಬೋಪಣ್ಣ, ತೇಜಸ್ ಪಾಪಯ್ಯ, ಇಸ್ಮಾಯಿಲ್ ಕಂಡಕ್ಕರೆ, ಎ.ಎನ್ ವಾಸು, ನೌಫಲ್ ಕಡಂಗ, ಕೃಷ್ಣ, ಅಂತೋಣಿ ಹಾಜರಿದ್ದರು.






