ಲೇಖಕ: admin

ಮಡಿಕೇರಿ ನ.18 NEWS DESK : ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿನಾಯಿಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) ಕನಿಷ್ಠ 1 ಎಕರೆ ಜಾಗ ಕಾಯ್ದಿರಿಸಿ ಸುತ್ತುಗೋಡೆ ನಿರ್ಮಿಸುವಂತೆ ನಿರ್ದೇಶನ ನೀಡಿದರು. ನಗರಾಭಿವೃದ್ದಿ, ಪಂಚಾಯತ್ ರಾಜ್, ಪಶುಪಾಲನೆ ಹಾಗೂ ಪಶು ವೈದ್ಯಕೀಯ, ಶಿಕ್ಷಣ, ಸಾರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯುವ ಸಬಲೀಕರಣ ಸೇರಿದಂತೆ ವಿವಿಧ ಇಲಾಖೆಗಳು ಬೀದಿನಾಯಿಗಳ ಹಾವಳಿ ನಿಯಂತ್ರಣ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು,…

Read More

ಮಡಿಕೇರಿ ನ.18 NEWS DESK : ಕೊಡವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಲ್ಲ. ಆದರೆ ಇಂದು ಜನಗಣತಿಯೂ ಸೇರಿದಂತೆ ರಾಜ್ಯದ ದಾಖಲೆಗಳ ಎಲ್ಲಾ ಕಾಲಂಗಳು ಈ ದೇಶದ ಬಹುಧರ್ಮ, ಪ್ರಬಲಧರ್ಮ ಮತ್ತು ಬಲಾಢ್ಯ ಜಾತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಚಿಸಲ್ಪಟ್ಟಿದೆ. ಧರ್ಮ ಮತ್ತು ಜಾತಿ ಬಗ್ಗೆ ಮಾತ್ರ ಉಲ್ಲೇಖ ಇರುವುದರಿಂದ ಆನಿಮಿಸ್ಟಿಕ್ ನಂಬಿಕೆಯ ಕೊಡವರು ಅನಿವಾರ್ಯವಾಗಿ ಧರ್ಮ ಮತ್ತು ಜಾತಿ ಕಾಲಂಗಳನ್ನು ಒಪ್ಪಿಕೊಂಡು ಕೊಡವ ಎಂದು ದಾಖಲಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಕುಟ್ಟದಲ್ಲಿ ನಡೆದ 20ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್…

Read More

ವಿರಾಜಪೇಟೆ ನ.18 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ವಿದ್ಯಾಸಂಸ್ಥೆಯೊಂದರ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪಿ ಯು ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ  ಚಿಲ್ಲವಂಡ ಕಾವೇರಪ್ಪ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಪೋಷಕರ ಸಭೆ 2025-26 ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆಯನ್ನು ಮಾಡಬೇಕು. ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ವಿದ್ಯಾಸಂಸ್ಥೆ ಗೂ ಪೋಷಕರಿಗೂ ಕೀರ್ತಿಯನ್ನು ತರಬೇಕು. ಶೈಕ್ಷಣಿಕ ಪ್ರಗತಿಯಿಂದ ಸಂಸ್ಥೆಯ ಬೆಳವಣಿಗೆ ಆಗಲು ಸಾಧ್ಯ ಎಂದರು. ಪೋಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಗಮನಿಸುತ್ತಿರಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ, ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಪೋಷಕರು ಆಗಿಂದಾಗೆ ವಿದ್ಯಾರ್ಥಿಗಳ ಪ್ರಗತಿಯನ್ನು ಪರಿಶೀಲಿಸಬೇಕು. ಮೊಬೈಲ್ ಗೀಳಿಗೆ ಮಕ್ಕಳು ಒಳಗಾಗದಂತೆ ಪೋಷಕರು ಎಚ್ಚರವಹಿಸಬೇಕು ಎಂದು ಹೇಳಿದರು. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರುಗಳನ್ನು ಅಭಿನಂದಿಸಿದ ಅವರು, ನೂತನ ಪ್ರಶ್ನೆ ಪತ್ರಿಕೆ ನೀಲಿ…

Read More

ಮಡಿಕೇರಿ ನ.18 NEWS DESK : ಪರಭಾಷೆಗಳ ವ್ಯಾಮೋಹದಿಂದ ಕನ್ನಡ ಭಾಷೆಯು ಶೋಚನೀಯವಾದ ಸ್ಥಿತಿಯನ್ನು ತಲುಪುತಿದೆ. ಕನ್ನಡಿಗರಿಗೆ ಭಾಷೆಯ ಶ್ರೇಷ್ಠತೆ, ಅನನ್ಯತೆ ಅರಿವಿಲ್ಲದಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಹೇಮಂತ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದನ್ನು ಏಕೀಕರಣಗೊಳಿಸಿದ ನೆನಪಾಗಿ ಹಾಗೂ ಮೈಸೂರು ರಾಜ್ಯವೆಂದಿದ್ದ ಹೆಸರನ್ನು ಕರ್ನಾಟಕವೆಂದು ಮರು ನಾಮಕರಣ ಮಾಡಿದ ಸುದಿನವನ್ನು ಕನ್ನಡ ರಾಜ್ಯೋತ್ಸವವೆಂದು ಆಚರಿಸುತ್ತೇವೆ. ಕನ್ನಡ ಭಾಷೆ ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಭಾಷೆ. ಈ ನಾಡಿನ ರಾಜರ ಪರಾಕ್ರಮ ಉತ್ತರ ಭಾರತದವರಿಗೂ ಹರಡಿತ್ತು ಇಮ್ಮಡಿ ಪುಲಕೇಶಿ, ಮುಮ್ಮಡಿ ಗೋವಿಂದರಂತಹ ರಾಜರ ಇತಿಹಾಸಗಳು ಇದಕ್ಕೆ ಸಾಕ್ಷಿಯಾಗಿ ನಿಂತಿವೆ. ಎಲ್ಲಾ ಕ್ಷೇತ್ರಗಳಲ್ಲೂ ಶ್ರೇಷ್ಠತೆಯನ್ನು ಹೊಂದಿರುವ ಕನ್ನಡ ಭಾಷೆಯ ಅನನ್ಯತೆ, ಹಿರಿಮೆ, ಸುಲಲಿತತೆ ತಿಳಿಯದೆ ಇರುವುದರಿಂದ ಹೆಚ್ಚಿನವರು ಭಾಷೆಯನ್ನು…

Read More

ಮಡಿಕೇರಿ ನ.18 NEWS DESK : ಕೊಡಗು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿ ಬಿ.ಜಿ.ಮಂಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಯಾಗಿ ಕೆ.ಎಂ.ವಿನೋದ್, ಸಹ ಕಾರ್ಯದರ್ಶಿಯಾಗಿ ಲೋಹಿತ್ ಮಾಗುಲುಮನೆ, ಹಾಗೂ ನಿದೇರ್ಶಕರಾಗಿ ಬಾಚರಣಿಯಂಡ ಅನುಕಾರ್ಯಪ್ಪ, ಮನೋಜ್ ಕುಮಾರ್, ಸ್ಟ್ಯಾನ್ಲಿ.ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಶಾಲನಗರ ನ.18 NEWS DESK : ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಪೂಂಪ್ ಹಾರ್ ನಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪವಿತ್ರ ಕಾವೇರಿಯನ್ನು ಸಮುದ್ರ ಸಂಗಮದಲ್ಲಿ ವಿಸರ್ಜನೆ ಗೊಳಿಸುವ ಮೂಲಕ ಸಮಾಪ್ತಿ ಗೊಂಡಿತು. ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ನದಿ ಸ್ವಚ್ಛತಾ ಆಂದೋಲನ ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್ ನಮಾಮಿ ಕಾವೇರಿ ಸಹಯೋಗದೊಂದಿಗೆ ತಲಕಾವೇರಿ ಕ್ಷೇತ್ರದಿಂದ ಆರಂಭಗೊಂಡ ರಥಯಾತ್ರೆ ಪವಿತ್ರ ಕಾವೇರಿ ತೀರ್ಥಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾವೇರಿ ನದಿ ಮತ್ತು ಬಂಗಾಳ ಕೊಲ್ಲಿ ಸಮುದ್ರ ಸಂಗಮದಲ್ಲಿ ವಿಶೇಷ ಪೂಜಾ ಸಲ್ಲಿಸಿ ದಕ್ಷಿಣ ಭಾರತದ ಸಾಧುಸಂತರ ಸಮ್ಮುಖದಲ್ಲಿ ಯಾತ್ರೆ ವಿದ್ಯುಕ್ತವಾಗಿ ಸಮಾಪ್ತಿಗೊಂಡಿತು. ಅಕ್ಟೋಬರ್ ತಿಂಗಳ 24ರಂದು ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಚಾಲನೆಗೊಂಡ ರಥ ಯಾತ್ರೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನದಿ ತಟಗಳಲ್ಲಿ ಕಾವೇರಿ ಮಾತೆಯನ್ನು ಹೊತ್ತ ರಥ ಮೂಲಕ ಸಾಗಿ ಜನರಿಗೆ ಕಾವೇರಿ ನದಿ ಸಂರಕ್ಷಣೆಯ ಬಗ್ಗೆ ಅರಿವು ಜಾಗೃತಿ ಮೂಡಿಸುವ ಕಾರ್ಯ…

Read More

ಮಡಿಕೇರಿ ನ.18 NEWS DESK : ಮಕ್ಕಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಪ್ರತಿಷ್ಠಿತ ಸಿಸ್ಕೋ ಕಂಪೆನಿ ಹಾಗೂ ಜಾಗೃತಿ ಸಂಸ್ಥೆ ( NGO) ಸಹಯೋಗದಲ್ಲಿ ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಕಲಿಕಾ ಹಾಗೂ ವೈಯುಕ್ತಿಕ ಆರೈಕೆ ಉತ್ಪನ್ನಗಳ ಕಿಟ್ ವಿತರಿಸಲಾಯಿತು. ಬೆಂಗಳೂರಿನ ಜಾಗೃತಿ ಸಂಸ್ಥೆಯು ರಾಜ್ಯಾದ್ಯಂತ ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಕುಂದು ಕೊರತೆಗಳಿಗೆ ಸ್ಪಂದಿಸುತ್ತಾ, ಅವರಿಗೆ ಅತ್ಯವಶ್ಯಕ ಇರುವ ವಸ್ತುಗಳನ್ನು ಪೂರೈಸುತ್ತಿದೆ. ಈ ನಿಟ್ಟಿನಲ್ಲಿ ಕೊಡಗಿನ ಅನೇಕ ಶಾಲೆಗಳನ್ನು ಗುರುತಿಸಿ ಅವರಿಗೆ ಸಹಾಯ ಹಸ್ತ ನೀಡುತ್ತಿರುವುದಾಗಿ ಸಂಸ್ಥೆಯ ಕಾರ್ಯನಿರ್ವಾಹಕ ಸದಸ್ಯರುಗಳಾದ ನೋಯಲ್ ಹಾಗೂ ಕಣ್ಣನ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿಸ್ಕೋ ಕಂಪನಿ ಉದ್ಯೋಗಿಗಳಾದ ನಾಗೇಶ್ ಹಾಗೂ ಜಯ, ಸಂಸ್ಥೆಯ ಕಾರ್ಯಕರ್ತರುಗಳು, ಸ್ಥಳೀಯರಾದ ಬಿ.ಟಿ.ದಿನೇಶ್, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ರವಿಕುಮಾರ್ ಬಿ.ಎನ್ ಹಾಗೂ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಉಪಾಧ್ಯಾಯನಿಯರಾದ ರಮ್ಲತ್ ಅವರು ಕಾರ್ಯಕ್ರಮ ನಿರೂಪಿಸಿ ಕೊನೆಗೆ ಎಲ್ಲರನ್ನು ವಂದಿಸಿದರು.…

Read More

ಸೋಮವಾರಪೇಟೆ ನ.18 NEWS DESK : ಗ್ರಾಮ ಪಂಚಾಯ್ತಿಗಳು ಹಾಗೂ ಗ್ರಾಮ ಸಭೆಗಳು ಬಲಿಷ್ಟವಾದವು ಅವುಗಳಿಗೆ ಇರುವ ಅಧಿಕಾರಗಳನ್ನು ತಿಳಿದುಕೊಳ್ಳಬೇಕೆಂದು ಶಾಸಕ ಮಂತರ್ ಗೌಡ ತಿಳಿಸಿದರು.  ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ  ತಾಲ್ಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಿದೆ ಎಂದರು. ಗ್ರಾಮ ಪಂಚಾಯತಿ ಹಾಗೂ ಗ್ರಾಮ ಸಭೆಗಳು ಅತ್ಯಂತ ಪ್ರಭಾವ ಶಾಲಿಯಾಗಿದೆ. ಎಲ್ಲಾ ಗ್ರಾಮ ಪಂಚಾಯ್ತಿ ಸದಸ್ಯರು ತಮ್ಮ ಅಧಿಕಾರವನ್ನು ಅರಿತು ಕರ್ತವ್ಯ ನಿರ್ವಹಿಸಿ, ನೀವುಗಳು ಮಾಡಿದ ನಿರ್ಣಯಗಳನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ  ಎಂದರು. ತಾಲೂಕಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ 25,686.56 ಲಕ್ಷ  ರೂಪಾಯಿಗಳ ಕ್ರಿಯಜೋಜನೆಗೆ ಅನುಮೋದನೆ ನೀಡಲಾಯಿತು.ಸಭೆಯಲ್ಲಿ  ತಹಶೀಲ್ದಾರ್ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಸದಸ್ಯರುಗಳಾದ ನಿಡ್ತಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್, ಬ್ಯಾಡಗೊಟ್ಟಾ ಅಧ್ಯಕ್ಷೆ ಪಾವನ,…

Read More

ಬೆಂಗಳೂರು ನ.18 NEWS DESK : ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ “ಬೆಂಗಳೂರು ಟೆಕ್ ಸಮ್ಮಿಟ್” ನ 28ನೇ ಆವೃತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚಾಲನೆ ನೀಡಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ನ.18 NEWS DESK : ಬೊಟ್ಟಿಯತ್ ನಾಡಿನ ಆರು ಗ್ರಾಮಗಳಾದ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಈಚೂರು, ಅರ್ವತೋಕ್ಲುವಿಗೆ ಸೇರಿದ ಕುಂದಾ ಬೆಟ್ಟದ ಶ್ರೀ ಈಶ್ವರ ದೇವಸ್ಥಾನದಲ್ಲಿ (ಬೊಟ್ಲಪ್ಪ) ಕಾರ್ತಿಕಾ ಸೋಮವಾರದ ಕೊನೆಯ ದಿನವಾದ ಇಂದು ಮನೆಯಪಂಡ ಹಾಗೂ ಸಣ್ಣುವಂಡ ಕುಟುಂಬದ ತಕ್ಕಾಮೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ದೇವಸ್ಥಾನ ತಕ್ಕಮುಖ್ಯಸ್ಥರು ಸೇರಿದಂತೆ ವಿವಿಧ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಪಾಂಡವರ ಕಾಲದ ಇತಿಹಾಸವಿರುವ ಈ ದೇವಾಲಯವನ್ನು ವನವಾಸದಲ್ಲಿದ್ದ ಪಾಂಡವರೇ ನಿರ್ಮಿಸಿದರು ಎಂಬ ಪ್ರತೀತಿ ಇದೆ. ಇಲ್ಲಿ ತೀರ್ಥೋದ್ಭವ ಮರುದಿನ ಕಾವೇರಿ ತೀರ್ಥವನ್ನು ತಂದು ಅಭಿಷೇಕ ಮಾಡುವುದರ ಮೂಲಕ ಕೊಡಗಿನ ಮೊದಲ ಬೋಡ್ ನಮ್ಮೆಗೆ ಚಾಲನೆ ದೊರೆತರೆ, ನಂತರ ಕಾರ್ತಿಕ ಮಾಸದಲ್ಲಿ ನಾಲ್ಕು ಸೋಮವಾರ ಪೂಜೆ ಹೊರತುಪಡಿಸಿದರೆ ಇಲ್ಲಿ ನಿತ್ಯ ಪೂಜೆಗೆ ಅವಕಾಶ ಇಲ್ಲ. ಕಾರ್ತಿಕ ಮಾಸದಲ್ಲಿ ಕೊನೆಯ ಸೋಮವಾರ ಶ್ರದ್ಧಾಭಕ್ತಿಯಿಂದ ಪೂಜೆ  ಹಾಗೂ ಅನ್ನದಾನ ನಡೆಯುತ್ತದೆ.

Read More