ಮಡಿಕೇರಿ NEWS DESK ಅ.16 : ಮಡಿಕೇರಿ ನಗರಸಭಾ ವ್ಯಾಪ್ತಿಯ ವಿವಿಧ ಬಡಾವಣೆಗಳಿಗೆ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಅವರು ಭೇಟಿ ನೀಡಿದರು. ಮಲ್ಲಿಕಾರ್ಜುನ ನಗರ ಮತ್ತು ತ್ಯಾಗರಾಜ ನಗರ ಕಾಲೋನಿಗಳಿಗೆ ಭೇಟಿ ನೀಡಿದ ಅವರು ಮೂಲಭೂತ ಸಮಸ್ಯೆಗಳ ಕುರಿತು ನಗರಸಭಾ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದರು. ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಸ್ಥಳೀಯರು ಮನವಿ ಮಾಡಿದರು. ನಗರಸಭಾ ಅಧ್ಯಕ್ಷರು ಹಾಗೂ ಮಲ್ಲಿಕಾರ್ಜುನ ನಗರ ವಾರ್ಡ್ ನ ಸದಸ್ಯರೂ ಆಗಿರುವ ಪಿ.ಕಲಾವತಿ, ತ್ಯಾಗರಾಜ ನಗರದ ಸದಸ್ಯೆ ಮೇರಿವೇಗಸ್, ಮೈಸೂರು ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ಕುಮಾರ್ ಈಶ್ವರ, ಕಿರಿಯ ಅಭಿಯಂತಕರು ಲಕ್ಷ್ಮೀಶ್ ಗೌಡ, ಮಡಿಕೇರಿ ನಗರಸಭೆಯ ಹಿರಿಯ ಅಭಿಯಂತರ ಸತೀಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವೂಫ್ ಎಂ.ಎನ್, ಡಿಸಿಸಿ ಸದಸ್ಯ ಕಲೀಲ್ ಬಾಷಾ, ವಿನೋದ್, ಬೂತ್ ಸದಸ್ಯರಾದ ಗಣೇಶ್, ಮಲ್ಲೇಶ್, ಕೋದಂಡ ರಾಮ ಸೇವಾ ಸಮಿತಿಯ ಅಧ್ಯಕ್ಷ ನಂಜುಂಡ,…
ಲೇಖಕ: admin
ಮಡಿಕೇರಿ ಅ.16 NEWS DESK : ಅಭಿವೃದ್ಧಿ ಹೊಂದುತ್ತಿರುವ ದೇಶವಾದ ಭಾರತದಲ್ಲಿಂದು, ಅತ್ಯಂತ ಸಂಪದ್ಭರಿತವಾದ ಜಾನಪದ ಕಲಾ ಸಂಸ್ಕೃತಿಯತ್ತ ಯುವ ಪೀಳಿಗೆಯ ಆಸಕ್ತಿ ಕ್ಷೀಣಿಸುತ್ತಿರುವುದು ಕಂಡು ಬರುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಕಳವಳ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ ‘ಜಿಲ್ಲಾ ಮಟ್ಟದ ಯುವ ಜನೋತ್ಸವ’ವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಇಂದಿನ ಯುವ ಶಕ್ತಿ ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿಯನ್ನು ತೋರಿ ಅದರತ್ತ ಮಾರುಹೋಗುತ್ತಿದೆ. ಮೊದಲು ನಾವು ನಾಡಿನೆಲ್ಲೆಡೆ ಇರುವ ವೈವಿಧ್ಯಮಯವಾದ ಜಾನಪದ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಸಕ್ತರಾಗಬೇಕು. ಇಂದಿನ ಯುವ ಸಮೂಹ ತಮ್ಮ ಬದುಕಿಗೆ ಒಳಿತಾಗುವಂತಹ ವಿದ್ಯಾಭ್ಯಾಸ ಪಡೆಯುವಂತಾಗಬೇಕೇ…
ಮಡಿಕೇರಿ ಅ.16 NEWS DESK : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಅ.21 ರಂದು ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ‘ದೀಪೋತ್ಸವ’ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಹೆಚ್.ಎಸ್.ಗೋವಿಂದ ಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾತ್ರಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ದೀಪೋತ್ಸವ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ದೇವಾಲಯದ ಟ್ರಸ್ಟಿ ಕಿರಣ್ ಕುಮಾರ್ ಮಾತನಾಡಿ, ರಾತ್ರಿ 7 ಗಂಟೆಗೆ ಕಳಸ ಪೂಜೆ, 8 ಗಂಟೆಗೆ ಅನ್ನದಾನ, ಪ್ರಸಾದ ವಿನಿಯೋಗ ನಡೆಯಲಿದ್ದು, ರಾತ್ರಿ 9 ಗಂಟೆಗೆ ತಾಯಿಯ ದರ್ಶನ ಹಾಗೂ 9.30 ಗಂಟೆಗೆ ದೀಪೋತ್ಸವ ಪ್ರಾರಂಭವಾಗಲಿದೆ. ನಂತರ ಭಕ್ತಾದಿಗಳು ಎಳ್ಳು ಬತ್ತಿಯನ್ನು ಹಚ್ಚಬಹುದು ಎಂದು ತಿಳಿಸಿದರು. ಮತ್ತೋರ್ವ ಟ್ರಸ್ಟಿ ವಿ.ಸಚಿನ್ ವಾಸುದೇವ್ ಮಾತನಾಡಿ, 108 ಎಳ್ಳು ಬತ್ತಿಯನ್ನು ದೇವಾಲಯದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರ ಆಗಲಿದೆ ಎಂಬ ನಂಬಿಕೆ ಇದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ದೇವಾಲಯದ ಭಕ್ತರಾದ ಎ.ಸಿ.ಚುಮ್ಮಿ…
ಮಡಿಕೇರಿ ಅ.16 NEWS DESK : ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಅ.20 ರಂದು ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನಿಡಿದ ಅವರು, ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಾರಿಕೆ ಪಿ.ದಿನೇಶ್ ಕುಮಾರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ ವಹಿಸಿಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಜಂಟಿ ಆಯುಕ್ತರಾದ ನಂಗಾರು ಆರ್.ನಾಣಯ್ಯ ಪಾಲ್ಗೊಳ್ಳಲಿದ್ದು, ಅತಿಥಿಗಳಾಗಿ ವಿದ್ಯಾನಿಧಿ ದಾನಿಗಳಾದ ಕಾಫಿ ಬೆಳೆಗಾರ ತಳೂರು ಯಶೋಧ ಸೋಮಣ್ಣ, ಭಾಗಮಂಡಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಆನೇರ ಜಾನಕಿ ಮೋಹನ್, ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಚೆರಿಯಮನೆ ಬಿ.ರಾಮಚಂದ್ರ, ಚೇರಂಬಾಣೆ ಅರುಣ ಪದವಿ…
ಮಡಿಕೇರಿ ಅ.16 NEWS DESK : ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ವಿರುದ್ಧ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಅದನ್ನು ಬೆಂಬಲಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡುವಂತೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ಕೆ. ಮೊಣ್ಣಪ್ಪ ಅವರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ, ಪಕ್ಷದ ಪದಾಧಿಕಾರಿಗಳು ಮತ್ತು ಸದಸ್ಯರು ಜಿಲ್ಲಾಡಳಿತ ಭವನದ ಮುಂಭಾಗ ಸಮಾವೇಶಗೊಂಡು ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ವಿರುದ್ಧ ಶೂ ಎಸೆದ ವಕೀಲ ರಾಕೇಶ್ ಕಿಶೋರ್, ಆತನ ವರ್ತನೆಯನ್ನು ಬೆಂಬಲಿಸಿದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ ಹಾಗೂ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಕೀಲ ಅನಿಲ್ ಮಿಶ್ರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು…
ಮಡಿಕೇರಿ NEWS DESK ಅ.16 : ಕುಶಾಲನಗರ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.18.10.2025 ರಿಂದ 22.10.2025ರ ವರೆಗೆ ನಡೆಯಲಿದೆ. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ ಅನ್ವಯದೊಂದಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 400/ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ಗೆ ರೂ.7,000/- ವರೆಗೆ ರಿಯಾಯಿತಿ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ.3000/- ಫ್ಲ್ಯಾಟ್ ಡಿಸ್ಕೌಂಟ್ ನೀಡಲಾಗುವುದು. ರೂ.50,000 ಮೇಲ್ಪಟ್ಟ ಖರೀದಿಗೆ ಖಚಿತ ಉಡುಗೊರೆಯ ಕೂಪನ್ ಹಾಗೂ ಆಕರ್ಷಕ ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶವಿದೆ. 916 ಅಥವಾ ಬೇರೆ ಯಾವುದೇ ಶುದ್ಧತೆಯ ಆಭರಣವನ್ನು ವಿನಿಮಯ ಮಾಡಿಕೊಳ್ಳುವಾಗ, ಚಿನ್ನದ ದರ ಏರಿಕೆಯ ಲಾಭವನ್ನು ಪಡೆಯಿರಿ ಹಾಗೂ ಚಿನ್ನದ ಬೆಲೆ…
ನಾಪೋಕ್ಲು ಅ.16 NEWS DESK : ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಿಂದ ತಲಕಾವೇರಿ ಸನ್ನಿಧಿಗೆ ಚಿನ್ನಾಭರಣಗಳನ್ನು ವಾದ್ಯ ಮೇಳಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಕೊಂಡೊಯ್ಯಲಾಯಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಂದ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಪಡೆದುಕೊಂಡರು. ಬಳಿಕ ದೇವಾಲಯದ ಸುತ್ತ ವಾದ್ಯಗೋಷ್ಠಿಯೊಂದಿಗೆ ಪ್ರದಕ್ಷಿಣೆ ಬರಲಾಯಿತು. ನಂತರ ಚಿನ್ನಾಭರಣಗಳನ್ನು ತಲಕಾವೇರಿಗೆ ಕೊಂಡೊಯ್ದು ಕಾವೇರಿ ಮಾತೆಗೆ ತೊಡಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಒಂದು ತಿಂಗಳ ಕಾಲ ತಲಕಾವೇರಿ ತಕ್ಕರಾದ ಕೋಡಿ ಮೊಟ್ಟಯ್ಯ ಅವರ ಸುಪರ್ದಿಯಲ್ಲಿ ಈ ಚಿನ್ನಾಭರಣಗಳಿದ್ದು ಪ್ರತಿ ದಿನ ಕಾವೇರಿ ಮಾತೆಗೆ ತೊಡಿಸಿ ತುಲಾಮಾಸದಲ್ಲಿ ಕಾವೇರಿಮಾತೆ ಕಂಗೊಳಿಸಲಿದ್ದಾಳೆ. ಕಿರು ಸಂಕ್ರಮಣದ ಬಳಿಕ ಚಿನ್ನಾಭರಗಳನ್ನು ಹಿಂತಿರುಗಿಸಿ ತಂದು ಆಡಳಿತಾಧಿಕಾರಿಗೆ ಒಪ್ಪಿಸಲಿದ್ದಾರೆ. ಈ ಸಂದರ್ಭ ಆಡಳಿತಾಧಿಕಾರಿ ಚಂದ್ರಶೇಖರ್, ಪಾರುಪತ್ಯೆಗಾರ ಪೊನ್ನಣ್ಣ, ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೊಡಗರ ಹರ್ಷ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ, ನಗರಸಭಾ ಸದಸ್ಯ ಶ್ವೇತಪ್ರಾಶತ್, ಕೊಡಗು ಗೌಡ…
ನಾಪೋಕ್ಲು ಅ.16 NEWS DESK : ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು – ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನದಲ್ಲಿ ಸ್ಥಳೀಯ ಪ್ಲಾಂಟಸ್ ಕ್ಲಬ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಭಾಗವಹಿಸಿ ಪಟ್ಟಣದ ಮುಖ್ಯ ರಸ್ತೆಯುದ್ಧಕ್ಕೂ ತ್ಯಾಜ್ಯ ವಸ್ತುಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಕಾರ್ಯಕ್ರಮದಲ್ಲಿ ಪ್ಲಾಂಟಸ್ ಕ್ಲಬ್ ಅಧ್ಯಕ್ಷ ಬಾಚಮಂಡ ಲವ ಚಿನ್ನಪ್ಪ, ಚೆಕ್ ಪೂವಂಡ, ಅಪ್ಪಚ್ಚು, ಶಿವಚಳಿಯಂಡ ಅಂಬಿ ಕಾರ್ಯಪ್ಪ, ಅರೆಯಡ ರತ್ನ, ಕಲಿಯಂಡರ ಕೌಶಿಕ್ ಹಾಗೂ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ತಂಡದ ತಾಲ್ಲೂಕು ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ, ಶೌರ್ಯ ತಂಡದ ಸದಸ್ಯರು ಪಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ NEWS DESK ಅ.16 : ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.18.10.2025 ರಿಂದ 22.10.2025ರ ವರೆಗೆ ನಡೆಯಲಿದೆ. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ ಅನ್ವಯದೊಂದಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 400/ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ಗೆ ರೂ.7,000/- ವರೆಗೆ ರಿಯಾಯಿತಿ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆಜಿಗೆ ರೂ.3000/- ಫ್ಲ್ಯಾಟ್ ಡಿಸ್ಕೌಂಟ್ ನೀಡಲಾಗುವುದು. ರೂ.50,000 ಮೇಲ್ಪಟ್ಟ ಖರೀದಿಗೆ ಖಚಿತ ಉಡುಗೊರೆಯ ಕೂಪನ್ ಹಾಗೂ ಆಕರ್ಷಕ ಚಿನ್ನದ ನಾಣ್ಯ ಗೆಲ್ಲುವ ಸುವರ್ಣವಕಾಶವಿದೆ. 916 ಅಥವಾ ಬೇರೆ ಯಾವುದೇ ಶುದ್ಧತೆಯ ಆಭರಣವನ್ನು ವಿನಿಮಯ ಮಾಡಿಕೊಳ್ಳುವಾಗ, ಚಿನ್ನದ ದರ ಏರಿಕೆಯ ಲಾಭವನ್ನು ಪಡೆಯಿರಿ ಹಾಗೂ ಚಿನ್ನದ ಬೆಲೆ…
ನಾಪೋಕ್ಲು ಅ.18 NEWS DESK : ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು – ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆಯಿತು. ಗ್ರಾಮ ಪಂಚಾಯಿತಿ ಹಾಗೂ ವರ್ತಕರ ಸಂಘ, ಸಹಕಾರ ಮಹಿಳಾ ಸಮಾಜದ ವತಿಯಿಂದ ಸ್ವಚ್ಚತಾ ಆಂದೋಲನ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ವರ್ತಕರ ಸಂಘದ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚೊಂದಕ್ಕಿ, ಸಹಕಾರ ಮಹಿಳಾ ಸಮಾಜದ ಅಧ್ಯಕ್ಷ ಕುಚ್ಚೇಟಿರ ರೇಷ್ಮಾ ಉತ್ತಪ್ಪ, ಲಯನ್ ಮಾಜಿ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.






