ಮಡಿಕೇರಿ NEWS DESK ಅ.14 : ರಾಜ್ಯ ಸರಕಾರ ನಡೆಸಿದ ಜಾತಿ ಜನಗಣತಿಯ ಸಂದರ್ಭ ಕೊಡವರು ಮೂರೂ ಕಾಲಂಗಳಲ್ಲಿ ‘ಕೊಡವ’ ಎಂದು ನಮೂದಿಸುವ ಮೂಲಕ ಉತ್ಸಾಹ ಮೆರೆದಿದ್ದಾರೆ. 2026-27ರ ರಾಷ್ಟ್ರೀಯ ಜನಗಣತಿಯಲ್ಲೂ ಕೊಡವರಿಂದ ಇದೇ ಉತ್ಸಾಹ ಮುಂದುವರೆಯಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಜನಗಣತಿ ಸಂದರ್ಭ ‘ಕೊಡವ’ ಎಂದು ನಮೂದಿಸುವಂತೆ ಸಿಎನ್ಸಿ ಕರೆ ನೀಡಿತ್ತು. ಈ ಕರೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ ‘ಕೊಡವ’ ಎಂದೇ ಗುರುತಿಸಿಕೊಂಡ ಸರ್ವ ಕೊಡವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. 2026-27ರ ರಾಷ್ಟ್ರೀಯ ಜನಗಣತಿಯ ಸಂದರ್ಭವೂ ಕೊಡವ ಸಮುದಾಯ ಜಾಗೃತಗೊಂಡು ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಿ ‘ಕೊಡವ’ ಎಂದು ದಾಖಲಿಸುವ ಮೂಲಕ ಒಗ್ಗಟ್ಟನ್ನು ತೋರ್ಪಡಿಸಬೇಕೆಂದು ಮನವಿ ಮಾಡಿದ್ದಾರೆ. ಪ್ರಸ್ತುತ ಎರವಲು ಪಡೆದ ಸಂಸ್ಕೃತಿಯನ್ನು ತ್ಯಜಿಸಬೇಕು ಅಥವಾ ಆಮದು ಮಾಡಿಕೊಂಡ ದೇವತೆಗಳನ್ನು ಬಿಡಬೇಕು ಎಂದು ಸಿಎನ್ಸಿ ಕರೆ ನೀಡುತ್ತಿಲ್ಲ. ಸನಾತನ ದೇವಾಲಯಗಳು,…
ಲೇಖಕ: admin
ಮಡಿಕೇರಿ ಅ.14 NEWS DESK : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಸ್ಕೃತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 63 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ವೆಬ್ಸೈಟ್ ವಿಳಾಸ https://karnemakaone.kar.nic.in/abcd/ ನಲ್ಲಿ ಆನ್ಲೈನ್ ಮುಖಾಂತರ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 13 ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. (ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ ಕಚೇರಿ ದೂರವಾಣಿ ಸಂಖ್ಯೆ 08276-200023 ಅಥವಾ 08276-282281 ಕ್ಕೆ ಕಚೇರಿ ಸಮಯದಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು 4 ಹಂತಗಳಿದ್ದು ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ…
ಗೋಣಿಕೊಪ್ಪ ಅ.14 NEWS DESK : ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರತಿನಿಧಿ ಪತ್ರಿಕೆ ಜಿಲ್ಲಾ ವರದಿಗಾರ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧ ಪುನರಾಯ್ಕೆಯಾದರು. ಕೊಡಗು ಹಿಂದು ಮಲಯಾಳಿ ಸಮಾಜ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್. ಎನ್. ದಿನೇಶ್, ಖಜಾಂಚಿಯಾಗಿ ವಿ. ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಅವಿರೋಧವಾಗಿ ಆಯ್ಕೆಯಾಗಿದರು. ಚುನಾವಣಾ ಅಧಿಕಾರಿಯಾಗಿ ಗೋಣಿಕೊಪ್ಪ ಗ್ರಾಮಾಂತರ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ. ಕೆ. ಪ್ರತಾಪ್, ಸಹಾಯಕ ಚುನಾವಣಾಧಿಕಾರಿಯಾಗಿ ಸಿಇಒ, ಬಿ. ಇ. ಕಿರಣ್ ಕಾರ್ಯನಿರ್ವಹಿಸಿದರು. ವೀಕ್ಷಕರಾಗಿ ಸುನಿಲ್ ಪೊನ್ನೇಟಿ ಕಾರ್ಯನಿರ್ವಹಿಸಿದರು. ಚುನಾಯಿತರಿಗೆ ಪ್ರಮಾಣ ಪತ್ರ ವಿತರಿಸಿ ಶುಭಕೋರಲಾಯಿತು.
ಮಡಿಕೇರಿ ಅ.14 NEWS DESK : ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಸಹಾಯಕ ಸೆಕ್ಷನ್ ಅಧಿಕಾರಿ ಮನೀಶ್ ಕುಮಾರ್ ಅವರು ನಗರದ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲ್ಲೂಕುಗಳಲ್ಲಿರುವ ಚುನಾವಣಾ ಶಾಖೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬಿಎಲ್ಒಗಳು ಜೊತೆ ಚುನಾವಣೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು, ಬಿಎಲ್ಒ ನಮೂನೆ-6, 7 ಮತ್ತು 8 ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಮತದಾರರ ಗುರುತಿನ ಚೀಟಿಯ ಮಹ್ವತದ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತದಾರರ ಗುರುತಿನ ಚೀಟಿ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಬಿಎಲ್ಒಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಅರ್ಹರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆಯುವುದರ ಜೊತೆಗೆ, ಯಾರಾದರೂ ನಿಧನ ಹೊಂದಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು…
ಮಡಿಕೇರಿ ಅ.14 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್, ರೋಟರಿ ಲಯನ್ಸ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಇತ್ಯಾದಿ ಸಂಸ್ಥೆಗಳೊಂದಿಗೆ ಅ.15ರಂದು ನಡೆಯುವ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನದಲ್ಲಿ ಫೀ.ಮಾ.ಕಾರ್ಯಪ್ಪ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು, ಎನ್ಸಿಸಿ, ಎನ್ಎಸ್ಎಸ್, ಸ್ಫೋರ್ಟ್ಸ್ ಮತ್ತು ಇಸಿ/ಸಿಸಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ತಿಳಿಸಿದ್ದಾರೆ.
ಮಡಿಕೇರಿ ಅ.14 NEWS DESK : ಕೂರ್ಗ್ ಹೊಟೇಲ್, ರೆಸಾರ್ಟ್ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮರ್ಸ್, ಕೊಡಗು ಹೋಂಸ್ಟೇ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.15ರಂದು ನಡೆಯುವ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನದಲ್ಲಿ ಕೊಡಗು ಕಲಾವಿದರ ಸಂಘ ಪಾಲ್ಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ತಿಳಿಸಿದ್ದಾರೆ. ಕೊಡಗು ಕಲಾವಿದರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಬುಧವಾರ ನಡೆಯುವ ಅಭಿಯಾನದಲ್ಲಿ ತಾವಿರುವ ಪ್ರದೇಶದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಪ್ರಕೃತಿ ಸೌಂದರ್ಯದ ಕಾವೇರಿನಾಡು ಕೊಡಗು ದಕ್ಷಿಣ ಕಾಶ್ಮೀರವೆಂದೇ ಖ್ಯಾತಿ ಗಳಿಸಿದೆ. ಇಲ್ಲಿನ ಸುಂದರ ಪರಿಸರ ದೇಶ ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಈ ಹಸಿರ ಪ್ರಕೃತಿಯ ಸೊಬಗನ್ನು ಉಳಿಸಿಕೊಳ್ಳಲು ಮತ್ತು ಸಂರಕ್ಷಿಸಲು ಸ್ವಚ್ಛತೆಗೆ ಆದ್ಯತೆ ನೀಡುವ ಅಗತ್ಯವಿದೆ. ಸ್ವಚ್ಛತೆಯಿಂದ ಮಾತ್ರ ಕಾವೇರಿಯ ತವರೂರು ಕೊಡಗು ಸುಂದರವಾಗಿರಲು ಸಾಧ್ಯ. ಆದ್ದರಿಂದ ಸ್ವಚ್ಛತಾ…
ಬೆಂಗಳೂರು ಅ.14 NEWS DESK : ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು, ಎಲ್ಲರ ನೆಮ್ಮದಿಯ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ “ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ, ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು…
ಮಡಿಕೇರಿ ಅ.14 NEWS DESK : ಸಾಹಿತ್ಯದ ಮೂಲಕ ಎಲ್ಲೆಯನ್ನು ಮೀರಬಹುದು ಮತ್ತು ವಿಶ್ವದ ಅನೇಕ ಸಾಹಿತ್ಯಗಳ ಪರಿಚಯ ನಮಗಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಅಭಿರುಚಿಯನ್ನು ರೂಡಿಸಿಕೊಳ್ಳಬೇಕು ಎಂದು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಭಾಸ್ತಿ ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆಂಗ್ಲಮಾಧ್ಯಮ ವಿಭಾಗದ ವತಿಯಿಂದ ಕಾಲೇಜಿನ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ಆಂಗ್ಲ ವಿಭಾಗದ “ಜಾಯ್ಸ್” ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅವರು, ಆಂಗ್ಲ ಐಚ್ಚಿಕ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ಹೊಂದಿರಬೇಕು ಮತ್ತು ವಿವಿಧ ಸಾಹಿತ್ಯ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ವಿಭಾಗದ ಮುಖ್ಯಸ್ಥರಾದ ಪ್ರೊ. ನಯನಾ ಕಶ್ಯಪ್ ಮತ್ತು ಸಹ ಪ್ರಾಧ್ಯಾಪಕರಾದ ಕೆ.ಎಂ.ಪೂಣಚ್ಚ, ಹೆಚ್.ಆರ್.ರಮೇಶ್, ಅಲೋಕ್ ಬಿ ಜೈ ಹಾಗೂ ಉಪನ್ಯಾಸಕರಾದ ಎಂ.ಪಿ.ಡೀನಾ, ಕನ್ನಿಕಾ ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು,…
ಮಡಿಕೇರಿ ಅ.14 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಇಂದು ಪೊನ್ನಂಪೇಟೆಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಮೀಕ್ಷೆ ನಡೆಯುತ್ತಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರ ಮಾಧ್ಯಮ ಸಹಾಯಕರಾದ ಪೆಮ್ಮಂಡ ವಿನಿಲ್ ಸೋಮಣ್ಣ ಸಮೀಕ್ಷೆಯಲ್ಲಿ ಭಾಗವಹಿಸಿ ತಮ್ಮ ದಾಖಲೆಗಳನ್ನು ಒದಗಿಸಿದರು.
ಮಡಿಕೇರಿ ಅ.14 NEWS DESK : ಕೊಡವ ಜನಾಂಗದವರು ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಸಹ ಕ್ರೀಡೆ, ಸೇನೆ, ಜ್ಞಾನ, ಬುದ್ಧಿವಂತಿಗೆ ಹೀಗೆ ಹಲವಾರು ವಿಷಯಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಾ ಮುಂಚೂಣಿಯಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ಕಾವೇರಿ ಕೊಡವಕೇರಿ ವತಿಯಿಂದ ನಡೆದ 4ನೇ ವರ್ಷದ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೊಡವ ಜನಾಂಗದವರ ಸಂಸ್ಕೃತಿ ವಿಭಿನ್ನವಾಗಿದ್ದು, ನಮ್ಮ ಆಚಾರ ವಿಚಾರಗಳು ವಿಶಿಷ್ಟ ರೀತಿಯಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಈ ಇತಿಹಾಸ, ಪರಂಪರೆಯನ್ನು ಪೋಷಿಸಿ ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಂತಹ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾನು ಅಧಿಕಾರಕ್ಕೆ ಬಂದ ಬಳಿಕ ಕೊಡವ ಜನಾಂಗದವರ ಹಲವಾರು ಹಕ್ಕುಗಳಿಗೆ ಹೋರಾಟ ಮಾಡುತ್ತಿದ್ದು, ಕೋವಿ ವಿಷಯದಲ್ಲಿ ಪೂರಕವಾಗಿ ಆದೇಶ ಬರುವಂತೆ ನೋಡಿಕೊಂಡಿದ್ದೇನೆ. ಯುವ ಜನತೆಗೆ ಅನುಕೂಲವಾಗಲಿ ಎಂದು ಜಿಲ್ಲೆ ಹಾಗೂ ವಿರಾಜಪೇಟೆ ಕ್ಷೇತ್ರದಾದ್ಯಂತ ಕ್ರೀಡೆಯ ಅಭಿವೃದ್ಧಿಗೆ ಹಲವಾರು…






