ಮಡಿಕೇರಿ ಅ.11 NEWS DESK : ನಗರದಲ್ಲಿರುವ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಮಡಿಕೇರಿ ತಾಲ್ಲೂಕು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸುವ ಮೂಲಕ ಸಾರ್ವಜನಿಕರ ಹಣ ಪೋಲಾಗುವುದನ್ನು ತಪ್ಪಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರ್ಜಿದಾರರ ಹಿತದೃಷ್ಟಿಯಿಂದ ಎಲ್ಲಾ ಸರಕಾರಿ ಕಚೇರಿಗಳು ಒಂದೇ ಕಟ್ಟಡದಲ್ಲಿ ಇರಬೇಕೆನ್ನುವ ಉದ್ದೇಶದಿಂದ ನಗರದಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಮಿನಿ ವಿಧಾನಸೌಧ ನಿರ್ಮಿಸಲಾಗಿದೆ. ಕಟ್ಟಡ ಉದ್ಘಾಟನೆಗೊಂಡು ಹಲವು ದಿನಗಳೇ ಕಳೆದಿದ್ದರು ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಉಪ ನೋಂದಣಾಧಿಕಾರಿಗಳ ಕಚೇರಿ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ರೂಪದಲ್ಲಿ ವಾರ್ಷಿಕ ಲಕ್ಷಾಂತರ ಹಣ ಪೋಲಾಗುತ್ತಿದೆ. ಇದು ಸಾರ್ವಜನಿಕರ ತೆರಿಗೆ ಹಣವಾಗಿರುವುದರಿಂದ ಈ ಹೊರೆಯನ್ನು ತಪ್ಪಿಸಲು ತಕ್ಷಣ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ. *ಮಾಹಿತಿ ಕೊರತೆ* ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕಡತಗಳ…
ಲೇಖಕ: admin
ಮಡಿಕೇರಿ ಅ.11 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್ನ 24ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅ.19 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಒಳಾಂಗಣ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಟೇಬಲ್ ಟೆನ್ನಿಸ್ ಸಿಂಗಲ್ಸ್ ಮತ್ತು ಡಬಲ್ಸ್, ಕೇರಂ ಸಿಂಗಲ್ಸ್ ಮತ್ತು ಡಬಲ್ಸ್ ಮತ್ತು ಚೆಸ್ ಪಂದ್ಯಾವಳಿ ನಡೆಯಲಿದೆ. ಟೇಬಲ್ ಟೆನ್ನಿಸ್, ಕೇರಂ ಸಿಂಗಲ್ಸ್ ಪಂದ್ಯಾವಳಿಗೆ ಹೆಸರು ನೋಂದಾಯಿಸಿಕೊಂಡವರನ್ನು, ಡಬಲ್ಸ್ ತಂಡಗಳನ್ನಾಗಿ ಬಳಿಕ ವಿಂಗಡಿಸಿಕೊಳ್ಳಲಾಗುವುದು. ಚೆಸ್ ಪಂದ್ಯಾವಳಿಯನ್ನು 15 ವರ್ಷ ವಯೋಮಿತಿಯ ಒಳಗಿನ ಮತ್ತು ಅದಕ್ಕೆ ಮೇಲ್ಪಟ್ಟ ಎರಡು ವಿಭಾಗಗಳಲ್ಲಿ ನಡೆಸಲಾಗುತ್ತದೆ. ಚೆಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವವರು ದಯವಿಟ್ಟು ಚೆಸ್ ಬೋರ್ಡ್ ತರಬೇಕೆಂದು ವಿನಂತಿ. ಟಿಟಿ, ಕೇರಂ, ಚೆಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವವರು ವ್ಯವಸ್ಥಾಪಕರು, ಪತ್ರಿಕಾ ಭವನ ಮೊ.8970565856 ಇವರನ್ನು ಸಂಪರ್ಕಿಸಬೇಕೆಂದು ಪತ್ರಿಕಾ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ವಿನಂತಿಸಿಕೊಂಡಿದ್ದಾರೆ.
ಮಡಿಕೇರಿ ಅ.11 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಿಂದ ಮೆರವಣಿಗೆ ಮೂಲಕ ಹೊರಟ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರಲ್ಲದೇ ಅಣಕು ಚಿತ್ರ ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಆಗಮಿಸಿದ ಸಂಘದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಕಚೇರಿ ಮುಂದೆ ಧರಣಿ ನಡೆಸಿ ಬೇಡಿಕೆಯ ಮನವಿ ಪತ್ರವನ್ನು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಉಪವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೆ ನೇರ ನೇಮಕಾತಿ ಮಾಡುವುದರ ಮೂಲಕ ಅರಣ್ಯಶಾಸ್ತ್ರದಲ್ಲಿ ವಿಶೇಷ ಪರಿಣಿತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಲು ಸರ್ಕಾರವನ್ನು…
ನಾಪೋಕ್ಲು ಅ.11 NEWS DESK : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕಾರುಗುಂದ ಗೌಡ ಸಮಾಜದ ಸಭಾಂಗಣದಲ್ಲಿ ಶಾರದಾ ಪೂಜೆ ನಡೆಯಿತು. ಒಕ್ಕೂಟದ ಸದಸ್ಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ನಂತರ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಾನಪದ ದಸರಾ ವೇದಿಕೆ ಅಲಂಕಾರದಲ್ಲಿ ಭಾಗವಹಿಸಿದ ಒಕ್ಕೂಟದ ಸದಸ್ಯರು ಮಡಿಕೇರಿ ಹಾಗೂ ಗೋಣಿಕೊಪ್ಪಲು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ಹಾಗೂ ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ವಿಜೇತರಾದ ತಂಡಕ್ಕೆ ಅಭಿನಂದನೆ ಸಲ್ಲಿಸಿ ಅವರ ಸಾಧನೆಗೆ ಪ್ರಸಂಸೆ ವ್ಯಕ್ತಪಡಿಸಿದರು. ಪೂಜಾ ವಿಧಿ ವಿಧಾನವನ್ನು ಕೊಟ್ಟೂರು ಶ್ರೀ ಗೋಪಾಲಕೃಷ್ಣ ದೇವಾಲಯದ ಪ್ರಧಾನ ಅರ್ಚಕರಾದ ಮುರಳಿ ಭಟ್ ನೆರವೇರಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.11 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಕೊಡಮಾಡುವ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಭೆಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಹಕಾರದೊಂದಿಗೆ ಬೆಂಗಳೂರಿನ ಗಾಲ್ಫ್ ಕ್ಲಬ್ ನಲ್ಲಿ ಜರುಗಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಗೌರವ ಪ್ರಶಸ್ತಿ ಸಮಾರಂಭದ ಬಗ್ಗೆ ಹಲವು ಸಲಹೆ ಸೂಚನೆಗಳೊಂದಿಗೆ ಚರ್ಚಿಸಿ ನಿರ್ಣಯಗಳನ್ನು ಎಲ್ಲರ ಸಹಮತದೊಂದಿಗೆ ಸಭೆಯಲ್ಲಿ ನಿರ್ಣಯಿಸಲಾಯಿತು. ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಮತ್ತು ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷರಾದ ಡಾ.ರಾಜೇಶ್ ತೇನನ ಸೇರಿದಂತೆ ಕೊಡಗು ಗೌಡ ಸಮಾಜ, ಯುವ ವೇದಿಕೆ, ಮಹಿಳಾ ಘಟಕ ಬೆಂಗಳೂರು, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ, ಯುವ ವೇದಿಕೆ, ಮಹಿಳಾ ಘಟಕ, ಬೆಂಗಳೂರು, ಗೌಡ ಸಮಾಜ ದಾಸರಹಳ್ಳಿ, ಗೌಡ ಸಮಾಜ ಯಲಹಂಕ, ಕೊಡಗು ದಕ್ಷಿಣ ಕನ್ನಡ ಗೌಡ ಕ್ರೆಡಿಟ್ ಕೋ ಸೊಸೈಟಿ, ಕೆಂಪೇಗೌಡ ರೂರಲ್ ಹೌಸಿಂಗ್ ಸೊಸೈಟಿ, ದಕ್ಷಿಣ ಕನ್ನಡ ಕ್ಷೇಮ ಅಭಿವೃದ್ಧಿ…
ವಿರಾಜಪೇಟೆ ಅ.11 NEWS DESK : ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜು, ಕನ್ನಡ ಭಾಷಾ ವಿಭಾಗ ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ವತಿಯಿಂದ “ಪರಿಸರದಸ್ಮಿತೆ ಪೂಚಂತೇ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ವಿರಾಜಪೇಟೆ ಸ.ಪ್ರ.ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬಸವರಾಜು ಕೆ. ಸಂಪ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಪೂರ್ಣಚಂದ್ರ ತೇಜಸ್ವಿ ಅವರ ಸಾಹಿತ್ಯ ಕೃಷಿ ಹಾಗೂ ಸಾಹಿತ್ಯದಲ್ಲಿ ಪರಿಸರ ಹಾಗೂ ಜೀವಸಂಕುಲದ ಅನಾವರಣವಾಗಿರುವ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು. ಪೂರ್ಣಚಂದ್ರ ತೇಜಸ್ವಿಯವರ ಪ್ರತೀ ಬರಹಗಳು ಪ್ರಕೃತಿಯೊಂದಿಗೆ ಅನನ್ಯತೆ ಹೊಂದಿದೆ. ಪರಿಸರ ಜೀವಸಂಕುಲದ ಬಗ್ಗೆ ತೇಜಸ್ವಿಯವರು ಬರೆದಷ್ಟು ಬಹುಶಃ ಯಾವ ಬರಹಗಾರರೂ ಬರೆದಿರಲಾರರು ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಬಿಸಿಎ ವಿದ್ಯಾರ್ಥಿಗಳಾದ ಮಹಮ್ಮದ್ ಸಫ್ವಾನ್, ಆಶಿಕ್, ಮುಸ್ತಾಕ್ ಹಾಗೂ ಶಿಬಿಲ್ ವಿನ್ಯಾಸಗೊಳಿಸಿದ ಕಾಲೇಜಿನ ಕನ್ನಡ ಭಾಷಾ ಮುಖ್ಯಸ್ಥರಾದ ಅರ್ಜುನ್ ಮೌರ್ಯ ಅವರ ವೆಬ್ಸೈಟ್ ಅನ್ನು ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಬಿಡುಗಡೆಗೊಳಿಸಿ ಶುಭಹಾರೈಸಿದರು. …
ಮೂರ್ನಾಡು ಅ.11 NEWS DESK : ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 17ನೇ ವರ್ಷದ ಓಣಂ ಹಬ್ಬಾಚರಣೆಯು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬಾಚರಣೆಯ ಸಮಾರಂಭವನ್ನು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಉದ್ಘಾಟಿಸಿ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದುಗಳು ತಮ್ಮತಮ್ಮಲ್ಲಿಯೆ ಆಚಾರ-ವಿಚಾರಗಳು ಬೇರೆ ಬೇರೆಯಾಗಿದ್ದರೂ ಎಲ್ಲರೂ ಒಗ್ಗಟಾಗಿ ಸೇರಿದಾಗ ಹಿಂದೂ ಸಮಾಜ ಭದ್ರಗೊಳ್ಳುತ್ತದೆ. ಕೇರಳ ಸಮಾಜದೊಂದಿಗೆ ಕೊಡಗಿನ ನಂಟು ಆಧ್ಯಾತ್ಮಿಕವಾಗಿ ಹಿಂದಿನಿಂದಲೂ ಬೆಸೆದುಕೊಂಡಿದೆ. ಕೇರಳ ಸಮಾಜದವರು ಶ್ರಮಜೀವಗಳು ಮತ್ತು ಬುದ್ದಿವಂತರಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುತ್ತಾರೆ. ಎಲ್ಲರೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಕೇಂದ್ರ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ.ಚಂದ್ರಶೇಖರ್ ಮಾತನಾಡಿ, ನಮ್ಮ ಸಂಸ್ಕøತಿ ಆಚಾರ-ವಿಚಾರಗಳನ್ನು ಪರಿಪಾಲನೆ ಮಾಡಿದಲ್ಲಿ ನಮ್ಮ ಮಕ್ಕಳಿಗೆ ಅದರ ಬಗ್ಗೆ ಅರಿವು ಮೂಡುತ್ತದೆ. ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದಾಗ, ಮಕ್ಕಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದು ಹೇಳಿದರು.…
ಮೂರ್ನಾಡು ಅ.11 NEWS DESK : ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್ನ ವತಿಯಿಂದ 101ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್ನ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ತೆಂಗಿನಕಾಯಿಗೆ ಗುಂಡು ಹೊಡೆಯುವುದರ ಮೂಲಕ ಮೂರ್ನಾಡು ಪೊಲೀಸ್ ಉಪಠಾಣೆಯ ಪೊಲೀಸ್ ಅಧಿಕಾರಿ ಪಟ್ರಪಂಡ ಮೊಣ್ಣಪ್ಪ ಉದ್ಘಾಟಿಸಿ, ಮಾತನಾಡಿ ಕೊಡಗಿನ ಯುವ ಜನತೆ ಎಲ್ಲರೂ ಕ್ರೀಡಾಪುಟುಗಳಾಗಬೇಕು. ಮೂರ್ನಾಡು ಪಕ್ಕದಲ್ಲಿಯೆ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಕ್ರೀಡೆಯ ಬೆಳವಣಿಗೆಗೆ ಪೂರಕವಾಗಿದೆ. ಕೈಲ್ ಮುಹೂರ್ತ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಹಬ್ಬದ ದಿನದಂದು ಎಲ್ಲಾರೂ ಒಟ್ಟಾಗಿ ಸೇರಿ, ಕ್ರೀಡಾ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದು ಹೇಳಿದರು. ಮೂರ್ನಾಡಿನ ಪಶು ವೈದ್ಯಾಧಿಕಾರಿ ಡಾ. ಶಿಲ್ಪ ಯಂಕನ ಮಾತನಾಡಿ ಒಂದು ಸಂಘವು ಶತಮಾನೋತ್ಸವ ಆಚರಿಸಿಕೊಂಡಿದೆ ಎಂದರೆ ಅಲ್ಲಿ ವ್ಯವಸ್ಥಿತವಾದ ಆಡಳಿತಾತ್ಮಕತೆ, ಸಂಘಟನೆ ಇದ್ದಾಗ ಮಾತ್ರ ಸಾಧ್ಯ ಎಂದು ಹೇಳಿದರು. ಇಂತಹ ಕ್ರೀಡೆಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು. ಎಲ್ಲರೂಗೆಲ್ಲಲು…
ಪುತ್ತೂರು ಅ.11 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ದೀಪ್ತಿಲಕ್ಷ್ಮಿ.ಕೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು 2025-26ನೇ ಸಾಲಿನ ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಚೆಸ್ ಟೂರ್ನಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಾಯಿರಾಂ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದು ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ವಿರಾಜಪೇಟೆ ಅ.11 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ಶ್ರದ್ಧಾಭಕ್ತಿಯಿಂದ ಶಾರದಾ ಪೂಜೆಯನ್ನು ಆಚರಿಸಲಾಯಿತು. ವಿರಾಜಪೇಟೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಪೂಜೆಯಲ್ಲಿ ಶಾರಾದ ದೇವಿಗೆ ನೈವೇದ್ಯ ಅರ್ಪಿಸಲಾಯಿತು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದ್ದರು. ಮಹಿಳಾ ಸದಸ್ಯರು ದೇವರ ನಾಮ ಹಾಗೂ ಭಜನೆಯನ್ನು ಮಾಡಿದರು. ಪೂಜೆಯ ಬಳಿಕ ನೆರೆದಿದ್ದ ಸದಸ್ಯರುಗಳಿಗೆ ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾದ ಪಟ್ರಪಂಡ ಗೀತಾ ಬೆಳ್ಯಪ್ಪ, ಉಪಾಧ್ಯಕ್ಷೆ ಬಿ.ಆರ್. ಸಬಿತ, ನಿರ್ದೆಶಕರಾದ ಆಶಾ ಚಿಣ್ಣಪ್ಪ, ಯು.ಕೆ. ಪೊನ್ನಮ್ಮ, ಕುಸುಮ ಸೋಮಣ್ಣ, ಜಯಲೀಲಾ ಸತೀಶ್, ಪಿ.ಕೆ. ನೀಲಮ್ಮ, ಪ್ರೇಮ ಮಂಜುನಾಥ್, ಬಿ.ಎನ್. ಭಾರತಿ, ಬಿ.ಯಶೋಧ, ಹೆಚ್.ಆರ್. ಪುಷ್ಪವಾಸು, ಪುಷ್ಪ ಐತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಜಿ. ಪುಷ್ಪಲತಾ ಸೇರಿದಂತೆ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.






