ಲೇಖಕ: admin

ಮಡಿಕೇರಿ ಮಾ.28 NEWS DESK : ವಯನಾಡು ಜಿಲ್ಲೆಯ ಮಾನಂದವಾಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿರುನೆಲ್ಲಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ತಿರುನೆಲ್ಲಿ ಭಾಗದ ಪ್ರಸಿದ್ಧ ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಅಭ್ಯರ್ಥಿಯ ಗೆಲುವಿಗಾಗಿ ಪ್ರಾರ್ಥಿಸಿದರು. ಶಾಸಕರೊಂದಿಗೆ ಮಾನಂದವಾಡಿ ಕ್ಷೇತ್ರದ ಅಭ್ಯರ್ಥಿ ಉಷಾ ವಿಜಯನ್, ಕೊಡಗಿನ ಪ್ರಮುಖರಾದ ಅಜ್ಜಿಕುಟ್ಟಿರ ಪೊನ್ನು, ಕುಂಡಚ್ಚಿರ ಮಂಜು ದೇವಯ್ಯ, ರಾಜನ್, ಶಾಸಕರ ಸಹಾಯಕರಾದ ಕುಮಾರ್ ಮಂಡ್ಯ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Read More

ಸೋಮವಾರಪೇಟೆ ಮಾ.28 NEWS DESK : ಸಂಭ್ರಮದ ರಾಮೋತ್ಸವ, ವಿಜೃಂಭಣೆಯ ಶೋಭಾಯಾತ್ರೆಗೆ ವಿದ್ಯುಕ್ತ ತೆರೆಬಿದ್ದಿತು. ಸೋಮವಾರಪೇಟೆ ರಾಮನವಮಿ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಹನ್ನೊಂದನೇ ವರ್ಷದ ರಾಮನವಮಿ ಉತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ 12ಕ್ಕೂ ಹೆಚ್ಚಿನ ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾ ತಂಡ ಹಾಗೂ ಸಿಡಿಮದ್ದು ಪ್ರದರ್ಶನದೊಂದಿಗೆ ಒಂದು ಕಿಲೋಮೀಟರ್ ಬೃಹತ್ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ವೀರಗಾಸೆ, ನಂದಿಧ್ವಜ, ಭಜನೆ, ಹುಲಿವೇಷ, ಗೊಂಬೆಕುಣಿತ, ಅಗ್ನಿ ಸರ್ಕಸ್, ಗಿರಿಜನ ಕಲೆ, ಕೆಂಗಿಲೆ ಕಲಾತಂಡಗಳೊಂದಿಗೆ ವಿವಿಧ ಬ್ಯಾಂಡ್ ಸೆಟ್ ಗಳೊಂದಿಗೆ ಆಗಸದಲ್ಲಿ ಚಿತ್ತಾಕಾರ ಪಟಾಕಿ ಪ್ರದರ್ಶನ ಜನಮನ ಸೆಳೆಯಿತು. ಈ ಎಲ್ಲಾ ಕಲಾತಂಡ ಗಳೊಂದಿಗೆ ಅಲಂಕೃತ ಮಂಟಪದಲ್ಲಿ ಸೀತಾರಾಮಾಂಜನಯರ ಉತ್ಸವ ಮೂರ್ತಿಯನ್ನು ಮಂಗಳ ವಾದ್ಯಗೋಷಗಳೊಂದಿಗೆ ಶನಿವಾರ ಮುಂಜಾನೆಯವರೆಗೂ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿಯವರ ನೇತೃತ್ವದಲ್ಲಿ ಬಿಗುಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು. ಮೆರವಣಿಗೆ ತೆರಳುವ ಮಾರ್ಗದಲ್ಲಿ ಅಡಚಣೆಯಾಗದಂತೆ ವಾಹನಸಂಚಾರ ನಿರ್ಬಂಧಿಸಲಾಗಿತ್ತು. ಯಾವುದೇ…

Read More

ಮಡಿಕೇರಿ ಮಾ.28 NEWS DESK : 33/11ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ F3 ಮೂರ್ನಾಡು ಫೀಡರ್‌ನಲ್ಲಿ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.29 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಮೂರ್ನಾಡು ಟೌನ್, ಮುತ್ತಾರುಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

Read More

ಗೋಣಿಕೊಪ್ಪ ಮಾ.28 NEWS DESK : ಗೋಣಿಕೊಪ್ಪಲು ಕ್ಲಸ್ಟರ್ ಮಟ್ಟದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿಯು ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ತರಬೇತಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ನಂತರ ಮಾತನಾಡಿ, ಶಾಲೆಯ ಸವಾರ್ಂಗೀಣ ಅಭಿವೃದ್ಧಿಗೆ ಸಮಿತಿಯ ಕರ್ತವ್ಯ ಪ್ರಮುಖವಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಯ ಮುನ್ನೋಟಕ್ಕೆ ಸಮಿತಿ ಪೂರ್ವಕವಾಗಿ ಸ್ಪಂದಿಸಿ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿ ಇದೆ ಎಂದು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾತನಾಡಿ, ಎಸ್‍ಡಿಎಂಸಿ ಸಮಿತಿಯು ಶಾಲೆಯ ಅಭಿವೃದ್ಧಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಮಕ್ಕಳ ದಾಖಲಾತಿ ಶಾಲೆಯ ಮೂಲ ಸೌಕರ್ಯಗಳ ಅಗತ್ಯತೆಗಳ ಬಗ್ಗೆ ಪೂರೈಕೆ ಮಾಡುವ ಕರ್ತವ್ಯ ಹೊಂದಿದೆ ಎಂದು ತಿಳಿಸಿದರು. ಗೋಣಿಕೊಪ್ಪ ಕ್ಲಸ್ಟರ್‍ನ ಸಿ.ಆರ್.ಪಿ ರಾಧಾ ಅವರು, ನೂತನವಾಗಿ ಆಯ್ಕೆಯಾದ ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳ ಜವಾಬ್ದಾರಿ, ಸಮಿತಿ ನಿರ್ವಹಿಸಬೇಕಾದ ಪ್ರಕಾರಗಳ ಬಗ್ಗೆ ತಿಳಿಸುತ್ತಾ, ಸಮಿತಿ ರಚನೆ ಮತ್ತು…

Read More

ಕೂಡಿಗೆ ಮಾ.28 NEWS DESK : ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ವೃತ್ತಿ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಕಂಡುಕೊಳ್ಳಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿ ಮಾಹಿತಿ ನೀಡುತ್ತಿರುವುದು ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ಹಹಕಾಧಿಕಾರಿ ಆನಂದ್ ಪ್ರಕಾಶ್ ಮೀನ ಕರೆ ನೀಡಿದರು. ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಕೂಡಿಗೆ ಡಯಟ್ ಸಂಸ್ಥೆ ಆವರಣದಲ್ಲಿ “ನನ್ನ ವೃತ್ತಿ ನನ್ನ ಆಯ್ಕೆ” ಎಂಬ ಶೀರ್ಷಿಕೆಯಡಿ ಏರ್ಪಡಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ವೃತ್ತಿಮೇಳದ ಮಾಹಿತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಂಡು ತಮ್ಮ ಉತ್ತಮ…

Read More

ಕುಶಾಲನಗರ ಮಾ.28 NEWS DESK : ಭಾರತವು ವಿಶ್ವದ ಅತ್ಯುನ್ನತ ನಾಗರಿಕತೆಗಳನ್ನು ಹೊಂದಿದೆ. ಪ್ರಾಚೀನ ಕಾಲದಲ್ಲಿ ಗುರುಕುಲ ಮತ್ತು ಆಶ್ರಮಗಳು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿದ್ದವು. ತದನಂತರ ನಳಂದ ಮತ್ತು ತಕ್ಷಶಿಲಾದಂತಹ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಭಾರತೀಯ ಸಮಾಜದ ಮೌಲ್ಯಗಳನ್ನು, ಬದುಕಿನ ಪಾಠಗಳನ್ನು, ಸಂಸ್ಕಾರಯುತ ವಿದ್ಯಾಭ್ಯಾಸವನ್ನು ಉನ್ನತ ಶಿಕ್ಷಣದ ಮೂಲಕ ಬೋಧಿಸುತ್ತಿದ್ದವು. ಭಾರತದ ಇಂತಹ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಮಕ್ಕಳಿಗೆ ಅತ್ಯಗತ್ಯ ಮತ್ತು ಅನಿವಾರ್ಯ ಎಂದು ಬೆಂಗಳೂರು ದಕ್ಷಿಣದ ಆಡಳಿತಾತ್ಮಕ ನ್ಯಾಯಾಧೀಶ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಅಭಿಮತ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿಹಮ್ಮಿಕೊಂಡಿದ್ದ ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಜಿಟಲ್ ಯುಗದಲ್ಲಿ ನಾವು ಎಷ್ಟೇ ಮುಂದುವರೆದಿದ್ದರೂ ನಮ್ಮ ಪೂರ್ವಜರ ಜ್ಞಾನದಿಂದ ನಾವು ತುಂಬ ದೂರ ಉಳಿದಿದ್ದೇವೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ವಿಜ್ಞಾನ, ಕಲೆ, ಸಾಹಿತ್ಯ, ಸಂಗೀತ, ರಾಜಕೀಯ ಒಳಗೊಂಡಂತೆ ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಪೂರ್ವಜರು…

Read More

ಮಡಿಕೇರಿ ಮಾ.28 NEWS DESK : ಬಿಟ್ಟಂಗಾಲ ಹಾಗೂ ಸಿದ್ದಾಪುರ ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಸಿದ್ದಾಪುರ ಕರಡಿಗೂಡು ರಸ್ತೆಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು.  ಡಿ ಎಂ ಪಿ ಶಾಲೆಯ ಸಂಸ್ಥಾಪಕರಾದ ಎಂ.ಎಂ.ದೇವಯ್ಯ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯದಿಂದಲೇ ಮಕ್ಕಳು ಶಿಕ್ಷಣಭ್ಯಾಸದ ಮೂಲಕ ಕಲಿಕೆಯಲ್ಲಿ ತೊಡಗಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದ್ದು. ಪೋಷಕರು ತಮ್ಮ ಮಕ್ಕಳ ಕಲಿಕೆ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಹಕಾರ ನೀಡಬೇಕೆಂದು ಹೇಳಿದ ಅವರು ಮಾಂಟೆಸ್ಸರಿ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತು ತಮ್ಮ ಪ್ರತಿಭೆ ಪ್ರದರ್ಶನ ಮಾಡಿರುವುದು ಶ್ಲಾಘನಯ ಎಂದರು. ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯ ಸಂಸ್ಥಾಪಕಿ ಸುಧಾ ಉತ್ತಪ್ಪ ಮಾತನಾಡಿ, ಬಾಲ್ಯದ ಮಕ್ಕಳ ಪ್ರತಿಭೆಗೆ ಅನುಗುಣವಾಗಿ ವಿಶೇಷ ಕಲಿಕೆಯೊಂದಿಗೆ ಪ್ರತಿಭಾನ್ವಿತರಾಗಿ ಮುಂದೆ ತರಲು ಹಲವಾರು ಕಾರ್ಯಕ್ರಮಗಳನ್ನ ಮಾಡಲಾಗುತ್ತಿದ್ದು ಶಾಲೆಯಲ್ಲಿಯೇ ಕಲಿಕೆಗೆ ಸೀಮಿತವಾಗದೆ ಮಕ್ಕಳನ್ನ ನೇರವಾಗಿ ಆಯ ಸ್ಥಳಗಳಿಗೆ ಕರೆದುಕೊಂಡು ಹೋಗಿ ಕಲಿಕ…

Read More

ಮಡಿಕೇರಿ ಮಾ.28 NEWS DESK : ನವ ದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಕೆ ಭರತ್ ಬೆಳ್ಳಿ ಪದಕ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾದ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ಮಿಲನರವರು ನೃತ್ಯ ಪ್ರದರ್ಶನ ನೀಡಿದ್ದರು.

Read More

ಮಡಿಕೇರಿ ಮಾ.28 NEWS DESK : ಕೊಡಗಿನಲ್ಲಿ ರಂಗ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ಮನವಿ ಮಾಡಿದ್ದಾರೆ. ನಗರಸಭೆಯ ಕಾವೇರಿ ಕಲಾಕ್ಷೇತ್ರದ ಜಾಗದಲ್ಲಿ ಹೊಸ ಭವನ ನಿರ್ಮಾಣವಾಗಿವ ಹಂತದಲ್ಲಿ ರಂಗ ಚಟುವಟಿಕೆಗಳಿಗೆ ಅಗತ್ಯವಾದ ಸಭಾಂಗಣ ಮತ್ತು ಗೋಣಿಕೊಪ್ಪಲಿನ ಸ್ವಾತಂತ್ರ್ಯ ಭವನದಲ್ಲಿ ನಾಟಕಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡುವಂತೆ ಕೋರಿದರು. ನಗರದ ಪೀ.ಮಾ.ಕಾರ್ಯಪ್ಪ ಕಾಲೇಜಿನ ಕ್ಯಾಂಪಸ್‍ಗೆ, ಕಾಲೇಜು ಆರಂಭಕ್ಕೆ ಕಾರಣರಾದ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನಿರಿಸುವಂತೆ , ವಿರಾಜಪೇಟೆ ಕಾವೇರಿ ಕಾಲೇಜಿನ ಕ್ಯಾಂಪಸ್‍ಗೆ ಪಾಂಡಂಡ ಸುಬ್ಬಮ್ಮ ಅವರ ಹೆಸರನ್ನಿರಿಸುವಂತೆ ಆಗ್ರಹ ಪೂರ್ವಕ ಮನವಿ ಮಾಡಿದರು.

Read More

ಮಡಿಕೇರಿ ಮಾ.28 NEWS DESK : ಅಲ್ಲಾರಂಡ ರಂಗಚಾವಡಿಯ ವತಿಯಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ ನಗರದ ಪತ್ರಿಕ ಭವನದ ಸಭಾಂಗಣದಲ್ಲಿ ಆಯೋಜಿತ ವಿಶ್ವ ರಂಗಭೂಮಿ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಶಿಕ್ಷಕರು ಹಾಗೂ ರಂಗಭೂಮಿ ಕಲಾವಿದರಾದ ಕಲಿಯಂಡ ಸರಸ್ವತಿ ಅವರು, ಕೊಡಗಿನಲ್ಲಿ ಪ್ರತಿಭಾವಂತ ರಂಗ ಕಲಾವಿದರುಗಳಿದ್ದಾರೆ. ಇಂತಹವರನ್ನು ಗುರುತಿಸುವ, ಪ್ರೋತ್ಸಾಹಿಸುವ ಪ್ರಯತ್ನಗಳಾಗದಿರುವುದರಿಂದ ರಂಗ ಭೂಮಿ ಇಲ್ಲಿ ಬೆಳೆಯುತ್ತಿಲ್ಲವೆನ್ನುವ ಮನದಾಳದ ಮಾತುಗಳನ್ನಾಡುತ್ತಲೆ, ಶಿಕ್ಷಕರಾದವರು ತಮ್ಮ ವೃತ್ತಿಯನ್ನು ಮತ್ತು ಮಕ್ಕಳನ್ನು ಪ್ರೀತಿಯಿಂದ ಕಣಬೇಕು. ನಮ್ಮ ಜ್ಞಾನವನ್ನು ಅತ್ಯಂತ ಪರಿಣಾಮಕಾರಿಯಾಗಿ ನಾಟಕಗಳ ಮೂಲಕ ಅಭಿವ್ಯಕ್ತ್ತಪಡಿಸಿದಾಗ, ವಿಚಾರಗಳು ಮಕ್ಕಳ ಮೇಲೆ ಪ್ರಭಾವ ಬೀರಬಲ್ಲುತ್ತದೆ ಮತ್ತು ಅವು ಶಾಶ್ವತವಾಗಿ ಮನಸ್ಸಿನಲ್ಲಿ ಉಳಿಯುತ್ತದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆ ಪಾಠ ಪ್ರವಚನ- ಅಂಕಗಳ ಒತ್ತಡಗಳ ನಡುವೆ ಸಿಲುಕಿದ್ದು, ಇತರೆ ಅಮೂಲ್ಯ ವಿಚಾರಗಳು ಮರೆಯಾಗುತ್ತಿದೆಯೆಂದು ವಿಷಾದಿಸಿದರು. ಈ ಸಂದರ್ಭ ಅವರು, ತಾವು ಎಂಬತ್ತರ ದಶಕದಲ್ಲಿ ಆಡಿದ ನಾಟಕಗಳು, ಶಿಕ್ಷಕಿಯಾಗಿ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು, ನಾಟಕಗಳ ಮೂಲಕ ಪಾಠ…

Read More