ಲೇಖಕ: admin

ಮಡಿಕೇರಿ NEWS DESK ಮೇ 21 : ಬೆಲೆ ಹೆಚ್ಚಳದ ಪರಿಣಾಮ ಸಂಕಷ್ಟದ ಜೀವನ ಸಾಗಿಸುತ್ತಿರುವ ಆಟೋ ಚಾಲಕರ ಹಿತ ಕಾಪಾಡಲು ಸರಕಾರ “ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ” ರಚಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಡಿಟಿಯು ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಅವರು ಪೆಟ್ರೋಲ್, ಡೀಸೆಲ್, ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನಿತ್ಯ ದುಡಿಯುವ ಆಟೋ ಚಾಲಕರು ಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸದ ಶುಲ್ಕವೂ ದುಬಾರಿಯಾಗಿದೆ, ತೆರಿಗೆ ಹೊರೆ ಅಧಿಕವಾಗಿದೆ. ಆದ್ದರಿಂದ ಸರಕಾರ ತಕ್ಷಣ ಆಟೋ ಚಾಲಕರ ನೆರವಿಗೆ ಬಂದು “ಆಟೋ ಚಾಲಕರ ಕ್ಷೇಮಾಭಿವೃದ್ಧಿ ಮಂಡಳಿ” ರಚಿಸಿ ಅಗತ್ಯ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Read More

ಮಡಿಕೇರಿ ಮೇ 20 NEWS DESK : ಶ್ರೀಮಂಗಲ 66/11ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಬಿರುನಾಣಿ ಮತ್ತು ಎಫ್7 ಟಿ.ಶೆಟ್ಟಿಗೇರಿ ಫೀಡರ್‍ನಲ್ಲಿ ಮೇ, 21 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಈ ಫೀಡರ್‍ನ ಗ್ರಾಮಗಳಾದ ತೆರಾಲು, ಬಿರುನಾಣಿ, ಬಾಡಗರಕೇರಿ, ಪೂಕೊಳ, ಪೊರಾಡು, ಕೊಟಿಯಾಲು, ಟಿ.ಶೆಟ್ಟಿಗೇರಿ, ವೆಸ್ಟ್ ಈಸ್ಟ್ ನೆಮ್ಮಲೆ, ಕಾಫಿಕಾಡು ಎಸ್ಟೇಟ್, ಹೊಸಕೆರೆ, ಗೊಟುಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 20 NEWS DESK : 7ನೇ ಆವೃತ್ತಿಯ ಚೆನ್ನಯ್ಯನಕೋಟೆ ಪ್ರೀಮಿಯರ್ ಲೀಗ್’ ನ ಚಾಂಪಿಯನ್ಸ್ ಪಟ್ಟವನ್ನು ಸ್ಮ್ಯಾಶ್ ಟೀಂ ತನ್ನದಾಗಿಸಿಕೊಂಡರೆ ಫಾಲ್ಕನ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಕಳೆದ ಮೂರು ದಿನಗಳಿಂದ ಇಲ್ಲಿನ ಸರಕಾರಿ ಶಾಲಾ ಮೈದಾನದಲ್ಲಿ ಸುಮಾರು ಎಂಟು ತಂಡಗಳ ನಡುವೆ ನಡೆದ ಈ ಪಂದ್ಯಾವಳಿಯಲ್ಲಿ ಟೀಂ ಸ್ಮ್ಯಾಶ್, ಟೀಂ ಫಾಲ್ಕನ್, ಸಹರಾ ಹಾಗೂ ಸಾಗರ್ ತಂಡ ಲೀಗ್ ಹಂತದಲ್ಲಿ ಉತ್ತಮ ಅಂಕ ಪಡೆದು ಕ್ವಾಲಿಫೈಯರ್ ಸುತ್ತಿಗೆ ಅರ್ಹತೆ ಪಡೆದವು. ಕ್ವಾಲಿಫೈಯರ್ ನಲ್ಲಿ ಗೆಲುವು ಸಾಧಿಸಿದ ಟೀಂ ಸ್ಮ್ಯಾಶ್ ಹಾಗೂ ಟೀಂ ಫಾಲ್ಕನ್ ನಡುವೆ ನಡೆದ ಫೈನಲ್ಸ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಫಾಲ್ಕನ್ಸ್ ನಿಗದಿತ 4ಓವರ್ ಗಳಲ್ಲಿ ಪ್ರಮುಖ 8 ವಿಕೆಟ್ ಕಳೆದುಕೊಂಡು 23ರನ್ನುಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಟೀಂ ಸ್ಮ್ಯಾಶ್ 3.3 ಓವರ್ ನಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು 27 ರನ್ನುಗಳ ಕಲೆ ಹಾಕುವ ಭರ್ಜರಿ ಜಯ ಸಾಧಿಸಿ ಚಾಂಪಿಯನ್ಸ್…

Read More

ಸುಂಟಿಕೊಪ್ಪ ಮೇ 20 NEWS DESK : ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ 17ನೇ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ನಡೆಸಲು ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಹಲವು ವೈಶಿಷ್ಟತೆಯನ್ನು ಹೊಂದಿರುವ ತವರೂರಾದ ಸುಂಟಿಕೊಪ್ಪ ತನ್ನದೆಯಾದ ಇತಿಹಾಸವನ್ನು ಇರಿಸಿಕೊಂಡಿದೆ. ಸುಂಟಿಕೊಪ್ಪ ಪಟ್ಟಣದ ಹೃದಯ ಭಾಗದಲ್ಲಿರುವ ವೃತ್ತವೊಂದಕ್ಕೆ ಕನ್ನಡ ವೃತ್ತ ಎಂದು ಪದನಾಮ ಮಾಡಲಾಗಿದ್ದು, ವೃತ್ತದಲ್ಲಿ ನಮ್ಮ ಸುಂಟಿಕೊಪ್ಪ ಬಳಗದವರು ಕನ್ನಡದ ಅಕ್ಷರ ಮಾಲೆಯನ್ನು ಅಳವಡಿಸಿದ್ದಾರೆ. ಇದರಿಂದ ಈ ವೃತ್ತದ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ. ಈ ಕನ್ನಡ ವೃತ್ತಕ್ಕೆ 4 ದಶಕಗಳ ಇತಿಹಾಸವಿದ್ದು ಕಳೆದ 32 ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಸಂಘಟನೆಗಳು ಸೇರಿ ಅದ್ಧೂರಿಯಾಗಿ ಆಚರಿಸುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ತಾತ್ಕಲಿಕ ಕಚೇರಿಯನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಹಳೆಯ ಕಟ್ಟಡದಲ್ಲಿ ತೆರೆಯುವ ಮೂಲಕ ಕಾರ್ಯಪ್ರವೃತವಾಗಿದೆ. ಸಮ್ಮೇಳದ ಆಶೋತ್ತರಗಳನ್ನು ಪ್ರತಿಬಿಂಬಿಸುವ ಲಾಂಛನವನ್ನು ಕನ್ನಡ ಸಾಹಿತ್ಯ ಸಂಸ್ಥಾಪನ ದಿನದಂದು ಅನಾವರಣಗೊಳಿಸಲಾಗಿದೆ ಸಮ್ಮೇಳನದ…

Read More

ಕುಶಾಲನಗರ ಮೇ 20 NEWS DESK : ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದ ನಂತರ ತಾಲ್ಲೂಕಿನ ಹೆಬ್ಬಾಲೆ ಪ್ರೌಢಶಾಲೆ ಹಾಗೂ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗಳಿಗೆ ಶೇ.100 ಫಲಿತಾಂಶ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ತಿಳಿಸಿದ್ದಾರೆ. ಕುಶಾಲನಗರ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಓರ್ವ ವಿದ್ಯಾರ್ಥಿನಿಯು ಮರು ಮೌಲ್ಯಮಾಪನದಲ್ಲಿ ತೇರ್ಗಡೆ ಹೊಂದಿದ್ದು, ಶಾಲೆಯ ಎಲ್ಲಾ 30 ವಿದ್ಯಾರ್ಥಿಗಳು ಕೂಡ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಬಂದಿದೆ. ಹಾಗೆಯೇ, ತಾಲ್ಲೂಕಿನ ಹೆಬ್ಬಾಲೆ ಪ್ರೌಢಶಾಲೆ ಯ ಒರ್ವ ವಿದ್ಯಾರ್ಥಿ ಕೂಡ ಮರು ಮೌಲ್ಯಮಾಪನದಲ್ಲಿ ತೇರ್ಗಡೆ ಹೊಂದಿದ್ದು, ಶಾಲೆಯ ಎಲ್ಲಾ 37 ವಿದ್ಯಾರ್ಥಿಗಳು ಕೂಡ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಬಂದಿದೆ ಎಂದು ತಿಳಿಸಲಾಗಿದೆ. ಇದರಿಂದ ತಾಲ್ಲೂಕಿನಲ್ಲಿ ಮೊದಲು 39 ಪ್ರೌಢಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಇದೀಗ 2 ಪ್ರೌಢಶಾಲೆಗಳು ಶೇ.100 ಫಲಿತಾಂಶ ಗಳಿಸಿದ ಹಿನ್ನೆಲೆಯಲ್ಲಿ ಸೋಮವಾರಪೇಟೆ…

Read More

ಕುಶಾಲನಗರ, ಮೇ 20 NEWS DESK : ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮದಲ್ಲಿ ಮೇ 22 ರಂದು ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಮತ್ತು ಚಿಕ್ಕಮ್ಮ ದೇವಿಯ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವಕ್ಕೆ ಶ್ರೀ ಬಸವೇಶ್ವರ ದೇವಸ್ಥಾನ ಟ್ರಸ್ಟ್ ಹಾಗೂ ಗ್ರಾಮ ದೇವತಾ ಸಮಿತಿ ವತಿಯಿಂದ ಸಿದ್ಧತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಟಿ.ಬಿ.ಜಗದೀಶ್ ತಿಳಿಸಿದ್ದಾರೆ. ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಬಸವೇಶ್ವರ ದೇವಸ್ಥಾನ , ಮಠದ ಆವರಣದಲ್ಲಿನ ದೇವಿನ ಬನ ಸೇರಿದಂತೆ ಗ್ರಾಮವನ್ನು ಹಸಿರು ತಳಿರು- ತೋರಣ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲಾಗುವುದು. ಗ್ರಾಮದಲ್ಲಿ ಗ್ರಾಮಸ್ಥರು ಹೊರಗಿನಿಂದ ಬರುವ ನೆಂಟರಿಷ್ಟರು ಹಾಗೂ ಸ್ನೇಹಿತರಿಗೆ ವಿವಿಧ ಭಕ್ಷ್ಯ ಭೋಜನಗಳನ್ನು ನೀಡಿ ಆತಿಥ್ಯ ನೀಡುವುದು ಗ್ರಾಮೀಣ ಸೊಗಡಿನ ಪ್ರತೀಕವಾಗಿದೆ. ಕೊಡಗು ಹಾಗೂ ಹಾಸನ ಜಿಲ್ಲೆಯ ಗಡಿ ಗ್ರಾಮದ ತೊರೆನೂರು ಗ್ರಾಮದಲ್ಲಿ ನಡೆಯುವ ಗ್ರಾಮೀಣ ಭಾಗದ ದೇವಿಯ ಉತ್ಸವ ಹಾಗೂ ಜಾತ್ರೆಯಲ್ಲಿ ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಗಡಿ ಗ್ರಾಮಗಳ ಜನರು…

Read More

ಮಡಿಕೇರಿ ಮೇ 20 NEWS DESK : ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಇರಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ಬುಧವಾರ ನಡೆದ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಆದರೆ ವಾಸ್ತವ ಪರಿಸ್ಥಿತಿ ಹೇಗಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಹ ಸ್ಥಳೀಯ ಹಾಗೂ ನಾಡಿನ ಭಾಷೆಗಳು ಬಲಯುತವಾಗಿದೆ. ಆದರೆ ನಗರ, ಮಹಾನಗರ ಪ್ರದೇಶಗಳಲ್ಲಿ ಪರಿಸ್ಥಿತಿ ಯಾವ ರೀತಿ ಇದೆ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ಒತ್ತಿ ಹೇಳಿದರು. ಕನ್ನಡ ಭಾಷೆ ಬಗ್ಗೆ ತಾತ್ಸಾರ ಇರಬಾರದು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಪರಿಸ್ಥಿತಿ…

Read More

ಮಡಿಕೇರಿ ಮೇ 20 NEWS DESK :  ಆನ್ ಲೈನ್ ನಲ್ಲಿ ಔಷಧಿಗಳ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸಿ ಔಷಧಿ ವ್ಯಾಪಾರಸ್ಥರ ಸಂಘ ಕರೆ ನೀಡಿದ್ದ ಔಷಧಿ ಮಳಿಗೆಗಳ ಬಂದ್ ಕೊಡಗಿನಲ್ಲಿ ಸಂಪೂಣ೯ ಯಶಸ್ವಿಯಾಗಿದೆ. ಕೊಡಗು ಜಿಲ್ಲೆಯಾದ್ಯಂತಲಿನ 200 ಕ್ಕೂ ಅಧಿಕ ಔಷಧಿ ಅಂಗಡಿಗಳು ಬುಧವಾರ ವ್ಯಾಪಾರ ಸ್ಥಗಿತಗೊಳಿಸಿದ್ದವು. ಬಂದ್ ಗೆ ಸಹಕಾರ ನೀಡಿದ ಗ್ರಾಹಕರಿಗೆ ಸಂಘದ ವತಿಯಿಂದ ಧನ್ಯವಾದ ಸಲ್ಲಿಸುವುದಾಗಿ ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಔಷದಿ ವ್ಯಾಪಾರಸ್ಥರ ಸಂಘದ ವತಿಯಿಂದ ಜಿಲ್ಲಾಡಳಿತ ಧ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹೆಚ್ ಹಾದಿಮನಿ ಸಂಘದಿಂದ ನೀಡಲಾದ ಮನವಿ ಪತ್ರವನ್ನು ಸ್ವೀಕರಿಸಿದರು. ಔಷಧಿ ವ್ಯಾಪಾರಸ್ಥರ ಸಂಘದ ಧ್ಯಕ್ಷ ಜೀವನ್ ಕುಶಾಲಪ್ಪ, ಜಂಟಿ ಕಾಯ೯ದಶಿ೯ ವಸಂತ್ ಕುಮಾರ್, ಉಪಾಧ್ಯಕ್ಷ ಎ.ಕೆ. ವಿನೋದ್ , ಖಜಾಂಜಿ ಪ್ರಸಾದ್ ಗೌಡ ಹಾಜರಿದ್ದರು. ಆನ್‌ಲೈನ್‌ನಲ್ಲಿ ಔಷಧಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸಕಾ೯ರ…

Read More

ಮಡಿಕೇರಿ NEWS DESK ಮೇ 20 : ಕೊಡಗು ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ, ಬಿಜೆಪಿಗೆ ಕಾರ್ಯಕರ್ತರ ನಾಯಕತ್ವವೇ ದೊಡ್ಡ ಶಕ್ತಿಯಾಗಿದೆ. ಬಿಜೆಪಿಗೆ ನಾಯಕತ್ವದ ಕೊರತೆ ಇರಬಹುದೆಂದು ಇತ್ತೀಚೆಗೆ ಮಡಿಕೇರಿ ಕ್ಷೇತ್ರದ ಶಾಸಕರು ನೀಡಿರುವ ಹೇಳಿಕೆ ಖಂಡನೀಯವೆoದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸದೃಢ ಹಿರಿಯ ಮುಖಂಡರ ನೇತೃತ್ವದಲ್ಲಿ ಬಿಜೆಪಿಯಲ್ಲಿರುವ ದೊಡ್ಡ ಸಂಖ್ಯೆಯ ಕಾರ್ಯಕರ್ತರೇ ನಾಯಕರಾಗಿದ್ದಾರೆ. ಆದರೆ ಕಾರ್ಯಕರ್ತರೇ ಇಲ್ಲದ ಕೊಡಗು ಕಾಂಗ್ರೆಸ್ ನಾಯಕತ್ವದ ಕೊರತೆಯನ್ನು ಎದುರಿಸುತ್ತಿದೆ. ಹೊರ ಜಿಲ್ಲೆಯಿಂದ ಬಂದು ಇಲ್ಲಿ ಶಾಸಕರಾಗಿರುವ ಮಡಿಕೇರಿ ಶಾಸಕರಿಗೆ ಇದು ಮರೆತು ಹೋಗಿದೆ. ಬಿಜೆಪಿ ಎಂದಿಗೂ ಆಮದು ನಾಯಕರನ್ನು ಶಾಸಕರನ್ನಾಗಿ ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ನಾಯಕತ್ವದ ಬಗ್ಗೆ ಮಾತನಾಡಿ ಕಾಲಹರಣ ಮಾಡುವ ಬದಲು ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಶಾಸಕರು ಚಿಂತನೆ ಹರಿಸುವುದು ಸೂಕ್ತ. ಮಳೆಗಾಲ ಆರಂಭಗೊಳ್ಳಲು ಕೇವಲ ಎರಡು ವಾರಗಳಿರುವಾಗ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿರುವ ಶಾಸಕರ…

Read More

ಮಡಿಕೇರಿ NEWS DESK ಮೇ 20 : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ವತಿಯಿಂದ ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ ಮೇ 22 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ ಶ್ರೀ ಕೋಟೆ ಮಹಾಗಣಪತಿ ದೇವರಿಗೆ ಅಭಿಷೇಕ, 12 ತೆಂಗಿನ ಕಾಯಿಯ ಗಣ ಹೋಮ, 10 ಸಹಸ್ರ ದುರ್ವಾಂಕುರ ಸಮರ್ಪಣೆ, ಒಂದು ಸಹಸ್ರ ಎಕ್ಕ ಸಮರ್ಪಣೆಯಾಗಲಿದೆ. ನಂತರ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಅಕ್ಕಿ, ತರಕಾರಿ. ಎಣ್ಣೆ, ಹೂವು ಮತ್ತಿತರ ಸಾಮಾಗ್ರಿಗಳನ್ನು ನೀಡುವವರು 9986498466, 8050342562 ನ್ನು ಸಂಪರ್ಕಿಸಬಹುದು.

Read More