ಲೇಖಕ: admin

ಮಡಿಕೇರಿ NEWS DESK ಅ.10 : ಮಡಿಕೇರಿ ದಸರಾದ ಕೊನೆಯ ದಿನ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ವಕೀಲ ಯಕ್ಷಿತ್ ಕೊತ್ತೋಳಿ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹಲ್ಲೆಯಾಗಿದೆ ಎಂದು ಬೆಂಗಳೂರು ವಕೀಲರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಸಮಿತಿಯ ಸದಸ್ಯ, ವಕೀಲ ಯಕ್ಷಿತ್ ಅವರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಪೊಲೀಸರು ಕಾನೂನು ಮರೆತು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಹಲ್ಲೆ ನಡಿಸಿದವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸುವುದಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್, ವಕೀಲ ಯಕ್ಷಿತ್ ಕೊತ್ತೋಳಿ, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಬೆಂಗಳೂರು NEWS DESK ಅ.10 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಜೀ ಕುಟುಂಬ ಅವಾರ್ಡ್ – 2025ರ ಸಮಾರಂಭದಲ್ಲಿ ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀ ರಿಷಭ್ ಶೆಟ್ಟಿ ಅವರನ್ನು ಭೇಟಿ ಮಾಡಿ, ಅವರ ಕಾಂತಾರ – ಅಧ್ಯಾಯ 1ರ ಅದ್ಭುತ ಯಶಸ್ಸಿಗೆ ಅಭಿನಂದಿಸಿದರು. ಈ ಚಿತ್ರಕ್ಕೆ ಸಿಕ್ಕಿರುವ ವ್ಯಾಪಕ ಮೆಚ್ಚುಗೆ ಅವರ ಅಸಾಧಾರಣ ಪ್ರತಿಭೆಗೆ ನಿಜವಾದ ಸಾಕ್ಷಿಯಾಗಿದೆ. ಶೀಘ್ರದಲ್ಲೇ ಕಾಂತಾರ-1 ಚಿತ್ರವನ್ನು ವೀಕ್ಷಿಸಲಿದ್ದೇನೆ ಎಂದರು.

Read More

ಮಡಿಕೇರಿ NEWS DESK ಅ.10 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಗ್ರಂಥಾಲಯದ ವತಿಯಿಂದ ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಯಿತು. ಕಾಲೇಜ್ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರು ವಿದ್ಯಾರ್ಥಿಗಳಿಗೆ ಓದು ಮತ್ತು ಸಾಕ್ಷರತೆಯ ಮಹತ್ವದ ಕುರಿತು ವಿವರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪಂಜಾಬ್ ಅಮೃತಸರ್ ಗುರುನಾನಕ್‌ದೇವ್ ವಿಶ್ವವಿದ್ಯಾಲಯದ ಗ್ರಂಥಾಲಯ ಮಾಹಿತಿ ವಿಜ್ಞಾನ ವಿಭಾಗದ ಪ್ರೊ.ಎಂ.ಪಿ.ಸತೀಜ ಹಾಗೂ ಬೆಂಗಳೂರು ಇಂಡಿಯನ್ ಸ್ಟೇಟಿಸ್ಟಿಕಲ್ ಇನ್ಸ್ಸ್ಟಿಟ್ಯೂಟ್ (ಐ.ಎಸ್.ಐ) ಡಾಕ್ಯುಮೆಂಟೇಶನ್ ಮತ್ತು ರಿಸರ್ಚ್ ಟ್ರೈನಿಂಗ್ ಸೆಂಟರ್ ಮುಖ್ಯಸ್ಥ ಡಾ.ಕೃಷ್ಣಮೂರ್ತಿ ಮಾತನಾಡಿ ಸಾಕ್ಷರತೆ, ಓದು, ಸಂಶೋಧನಾ ಪ್ರಬಂಧ, ಬರವಣಿಗೆಯ ಮಹತ್ವ, ಬರವಣಿಗೆಯಲ್ಲಿ ಪಾಲಿಸಬೇಕಾದ ನೀತಿ ನಿಯಮಗಳ ಬಗ್ಗೆ ತಾಂತ್ರಿಕ ಉಪನ್ಯಾಸ ನೀಡಿದರು. ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅವರು ಕಾಲೇಜ್ ನ ಗ್ರಂಥಾಲಯದ ಡಿಜಿಟಲೀಕರಣ, ಇ-ಬುಕ್ ವ್ಯವಸ್ಥೆ, ಇ.ಲರ್ನಿಂಗ್, ವಿದ್ಯಾರ್ಥಿಗಳಿಗೆ ದೈನಂದಿನ ಬಳಕೆಗೆ ಸುಲಭವಾದ ವ್ಯವಸ್ಥೆಗಳು ಹಾಗೂ ಓದಿನ…

Read More

ಮಡಿಕೇರಿ NEWS DESK ಅ.10 : ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ಅ.17 ರಂದು ಕಾವೇರಿ ತೀರ್ಥೋದ್ಭವವಾಗುತ್ತಿದೆ. ಆದರೆ ಕಾವೇರಿ ತುಲಾಸಂಕ್ರಮಣ ಬಂದರೂ ಮಡಿಕೇರಿ– ತಲಕಾವೇರಿ ರಸ್ತೆಯ ದುರಸ್ತಿ ಕಾರ್ಯಕ್ಕೆ ಆಡಳಿತ ವ್ಯವಸ್ಥೆ ಕ್ರಮ ಕೈಗೊಂಡಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್ ಅವರು ತಲಕಾವೇರಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ, ತಲಕಾವೇರಿ ಜಾತ್ರೆಗೆ ಬರುವ ಭಕ್ತರಿಗೆ ಸುಗಮ ಸಂಚಾರಕ್ಕೆ ರಸ್ತೆ ದುರಸ್ತಿ ಕಾರ್ಯವೇ ನಡೆದಿಲ್ಲ. ರಸ್ತೆ ಬದಿ ಕಾಡು ತುಂಬಿದ್ದು, ಕಾಡು ಕಡಿಯುವ ಕಾರ್ಯ ಕೂಡ ನಡೆದಿಲ್ಲ. ರಸ್ತೆಗೆ ಮಣ್ಣು ಹಾಕದಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದರೂ ಗುಂಡಿ ಮುಚ್ಚಲೆಂದು ಮಣ್ಣು ಸುರಿಯಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರಕಾರದಿಂದ ಕೊಡಗಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಟೀಕಿಸಿದರು. ರಸ್ತೆಗಳ ಅಭಿವೃದ್ಧಿ ಕುರಿತು ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಧಿಕ ಮಳೆಯಾದ ಕಾರಣ ಶಾಲೆಗಳಿಗೆ ಹೆಚ್ಚಿನ…

Read More

ವಿರಾಜಪೇಟೆ ಅ.10 NEWS DESK : ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನವನ್ನು ರೂಪಿಸುವುದರೊಂದಿಗೆ ಅವರಲ್ಲಿರುವ ವಿಶೇಷ ಗುಣಗಳನ್ನು ಹವ್ಯಾಸಗಳನ್ನು ತೋರ್ಪಡಿಸಲು ಎನ್ ಎಸ್ ಎಸ್  ಶಿಬಿರಗಳು ಅತ್ಯುತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು  ಕಡಂಗದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಹೆಚ್ಚಿನ ವಿಚಾರಗಳನ್ನು ಕಲಿಯಲು ಹಾಗೂ ಕಲಿತ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಶಿಬಿರಗಳು  ಉತ್ತಮ ವೇದಿಕೆಯಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಹಕಾರ, ಸೌಹಾರ್ದ ಮನೋಭಾವನೆಯನ್ನು ಬೆಳೆಸುತ್ತದೆ. ತಮ್ಮಲ್ಲಿ  ಹುದುಗಿರುವ ವಿವಿಧ ಕಲೆ, ಹವ್ಯಾಸಗಳನ್ನು ತೋರ್ಪಡಿಸಲು ಇದೊಂದು ಉತ್ತಮ ವೇದಿಕೆ. ಪ್ರತೀ ವ್ಯಕ್ತಿಯನ್ನು ಬಾಲ್ಯದಲ್ಲಿ ಆತನ ತಂದೆ ತಾಯಿಗಳ ಹೆಸರಿನ ಮೂಲಕ ಗುರುತಿಸುತ್ತಾರೆ. ಅದೇ ವ್ಯಕ್ತಿ  ಯವ್ವನವನ್ನು ತಲುಪಿದಂತಹ ಸಂದರ್ಭದಲ್ಲಿ ಆತ ಮಾಡಿದ ಸಾಧನೆಯಿಂದ ಆತನ ಹೆಸರಿನ ಮೂಲಕ  ತಂದೆ…

Read More

ಮಡಿಕೇರಿ ಅ.10 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯಗಳಲ್ಲಿ ಅ.17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಜರುಗಲಿದ್ದು, ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಗಳಲ್ಲಿ ಊಧ್ವಾರ್ಚನೆ (ಶುಚಿತ್ವ) ಕಾರ್ಯವು ಅಕ್ಟೋಬರ್, 13 ರಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ. ಈ ಸಮಯದಲ್ಲಿ ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ಯಾವುದೇ ಸೇವೆಗಳು ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿಯವರ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಅ.11 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್5 ಹೊದ್ದೂರು ಹಾಗೂ ಎಫ್2 ನಾಪೋಕ್ಲು ಫೀಡರ್‍ನಲ್ಲಿ ಅ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕೊಟ್ಟಮುಡಿ, ಪಾಲೂರು, ಹೊದವಾಡ, ನಾಪೋಕ್ಲು, ಬೇತು, ಹಳೆತಾಲೂಕು, ಕೊಳಕೇರಿ, ಕಕ್ಕಬೆ, ನಾಲಡಿ, ಚೋನಕೆರೆ, ಎಮ್ಮೆಮಾಡು, ಪಡಿಯಾನಿ, ಬಲ್ಲಮಾವಟಿ, ಪೇರೂರು, ಕಿಯಲ್‍ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಅ.10 NEWS DESK : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸರ್ಕಾರದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25 ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಸರ್ಕಾರ…

Read More

ಮಡಿಕೇರಿ ಅ.10 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.  ವಿಶೇಷವಾಗಿ ಈ ಭಾಗದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸುವ ಕಾರ್ಯಕ್ರಮ ಹಮ್ಮಿಕೊಂಡಿರುವ ಶಾಸಕರು, ರೂ.90 ಲಕ್ಷ ವೆಚ್ಚದಲ್ಲಿ ನೂತನ 11 ಕೆವಿ ಹೆಚ್ ಟಿ ವಿದ್ಯುತ್ ಮಾರ್ಗ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ, ಹಲವು ನೂತನ ವಿದ್ಯುತ್ ಪರಿವರ್ತಕಗಳನ್ನು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಶಾಸಕರು, ಕ್ಷೇತ್ರಾದ್ಯಂತ ಉತ್ತಮ ವಿದ್ಯುತ್ ಪೂರೈಸಿ ಕೃಷಿಕರಿಗೆ ಹಾಗೂ ಗ್ರಾಹಕರಿಗೆ ನಿರಂತರವಾಗಿ ತಡೆರಹಿತ ವಿದ್ಯುತ್ ನೀಡಲು ಸರ್ಕಾರದ ವತಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಉತ್ತಮ ಗುಣಮಟ್ಟದ ನೂತನ ವಿದ್ಯುತ್ ಮಾರ್ಗಗಳನ್ನು ಅಳವಡಿಸುವುದರೊಂದಿಗೆ, ನೂತನ ವಿದ್ಯುತ್ ಪರಿವರ್ತಕಗಳನ್ನು ಹಾಗೂ ಸಬ್ ಸ್ಟೇಷನ್ ಗಳನ್ನು ಕ್ಷೇತ್ರಾದ್ಯಂತ ಕೈಗೊಂಡಿರುವುದು ತಿಳಿಸಿದರು. ಈ ಸಂದರ್ಭ ಸಾರ್ವಜನಿಕರ ಅಹವಾಲುಗಳನ್ನು  ಆಲಿಸಿದ ಶಾಸಕರು, ಆದ್ಯತೆ ಮೇರೆಗೆ ಎಲ್ಲಾ ಸಮಸ್ಯೆಗಳನ್ನು…

Read More

ಮಡಿಕೇರಿ ಅ.10 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಗ್ರಾಮದ ಪ್ರಸಿದ್ಧ ಮೃತ್ಯುಂಜಯ ದೇವಸ್ಥಾನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪತ್ನಿ ಕಾಂಚನ್ ಪೊನ್ನಣ್ಣ ಅವರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮೃತ್ಯುಂಜಯ ಸ್ವಾಮಿಯು ನಾಡಿನ ಎಲ್ಲರಿಗೂ ಸುಭಿಕ್ಷೆಯನ್ನು ಕರುಣಿಸಲಿ ಎಂದು ಶಾಸಕರು ಪ್ರಾರ್ಥಿಸಿದರು. ಈ ಸಂದರ್ಭ  ದೇವಸ್ಥಾನದ ಆಡಳಿತ ಮಂಡಳಿ ಮಂಡಳಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More