ಲೇಖಕ: admin

ಮಡಿಕೇರಿ ಅ.10 NEWS DESK : ಸರ್ಕಾರದ ಪೋಷಣ್ ಕಾರ್ಯಕ್ರಮದ ಭಾಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹುದಿಕೇರಿ ಕೊಡವ ಸಮಾಜದಲ್ಲಿ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅವರು, ಕಲಿಯುವ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಲೆಂದು ಸರಕಾರವು ಮಕ್ಕಳಿಗೆ ವಿವಿಧ ಸೌಲತ್ತುಗಳನ್ನು ಕಲ್ಪಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ಪುಟ್ಟ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅವರಿಗೆ ಬೇಕಾದಂತಹ ಎಲ್ಲಾ ಪೌಷ್ಟಿಕಾಂಶ ಇರುವ ಆಹಾರಗಳನ್ನು ಸರಕಾರ ಕೊಡುಗೆಯಾಗಿ ನೀಡುತ್ತಿದೆ. ಈ ಕಾರ್ಯಕ್ರಮಗಳು ಎಲ್ಲರಿಗೂ ತಲುಪುವಂತಾಗಬೇಕು. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ಪೌಷ್ಟಿಕಾಂಶದ ಕೊರತೆಗಳಿಂದ ಬಳಲುತ್ತಿರುವುದು ವರದಿಗಳಿಂದ ಮನಗಂಡ ಸರಕಾರವು ಇಂತಹ ಮಕ್ಕಳ ಆರೋಗ್ಯ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಶಾಸಕರು ಕರೆ ನೀಡಿದರು.  ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ ಅವರು ಸೀಮಂತ…

Read More

ಮಡಿಕೇರಿ ಅ.10 NEWS DESK : ಸ್ವಚ್ಛ ಕಾವೇರಿಗಾಗಿ ಅ.24 ರಿಂದ ನ.16ರ ವರೆಗೆ ಕಾವೇರಿ ಜಾಗೃತಿ ರಥಯಾತ್ರೆ ನಡೆಯಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ, ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದೊಂದಿಗೆ ಅ.24 ರಿಂದ ನ.16ರ ವರೆಗೆ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ತಲಕಾವೇರಿಯಿಂದ ಪೊಂಪ್‌ಹಾರ್ ವರೆಗೆ ಯಾತ್ರೆ ಕೈಗೊಳ್ಳಲಾಗಿದ್ದು, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ ಸಾಧುಸಂತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಅ.23 ರಂದು ಮಧ್ಯಾಹ್ನ 2 ಗಂಟೆಗೆ ಸಾಧು ಸಂತರ ತಂಡ ಕಾವೇರಿ ಮಾತೆಯ…

Read More

ಮಡಿಕೇರಿ NEWS DESK ಅ.10 : ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ಪ್ರಕರಣ ಖಂಡನೀಯ. ಇದು ಸಂವಿಧಾನದ ಮೇಲಿನ ದಾಳಿಯಾಗಿದ್ದು, ಈ ರೀತಿಯ ಘಟನೆಗಳು ನ್ಯಾಯಾಂಗದ ಘನತೆಗೆ ದಕ್ಕೆ ತರುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಕೀಲ ರಾಕೇಶ್ ಕಿಶೋರ್ ಮಾಡಿರುವ ತಪ್ಪನ್ನು ಸ್ವತ: ವಕೀಲನಾಗಿರುವ ನಾನು ತೀವ್ರವಾಗಿ ಖಂಡಿಸುತ್ತೇನೆ, ಇದು ಕ್ಷಮಿಸಲಾಗದ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ. ಇದು ನಮ್ಮ ದೇಶದ ಪವಿತ್ರ ಸಂವಿಧಾನದ ಮೇಲಿನ ದಾಳಿಯಾಗಿದ್ದು, ಈ ರೀತಿಯ ಬೆಳವಣಿಗೆ ಕಾನೂನು ವ್ಯವಸ್ಥೆಯನ್ನು ಹಾಳು ಮಾಡುತ್ತದೆ. ಶಾಂತಿಯುತ ಹೋರಾಟಗಳು ನ್ಯಾಯಾಂಗ ವ್ಯವಸ್ಥೆ, ಸಂವಿಧಾನದ ಆಶಯ ಮತ್ತು ಪ್ರಜಾಪ್ರಭುತ್ವದ ಶಕ್ತಿಯನ್ನು ಹೆಚ್ಚಿಸುತ್ತದೆ. ಸಂವಿಧಾನದ ಆಶಯಗಳಿಗೆ ಬದ್ಧರಾಗಿರುವ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಬೆಂಬಲಕ್ಕೆ ಸಿಎನ್‌ಸಿ ನಿಲ್ಲಲಿದೆ. ನ್ಯಾಯಾಂಗ ವ್ಯವಸ್ಥೆ ಮತ್ತು ಸಂವಿಧಾನ ಸಂಸ್ಥೆಗಳಲ್ಲಿ ಅಪಾರ ಗೌರವ ಹೊಂದಿದಾಗ ಮಾತ್ರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ…

Read More

ವಿರಾಜಪೇಟೆ ಅ.10 NEWS DESK : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿಯು ದಿ. ಎಸ್.ಎಲ್. ಭೈರಪ್ಪ ಅವರಿಗೆ ಸಲ್ಲುತ್ತದೆ ಎಂದು ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪತ್ರಕರ್ತರ ವೇದಿಕೆ ವಿರಾಜಪೇಟೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ದಿ. ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತಿದ್ದರು. ಕನ್ನಡ ಭಾಷೆ ನಾಡು ನುಡಿಗೆ ಸಂಬಂಧಿಸಿದಂತೆ ಕೊಡುಗೆಯನ್ನು ನೀಡಿದವರಲ್ಲಿ ದಿ. ಎಸ್. ಎಲ್. ಭೈರಪ್ಪ ರವರು ಅಗ್ರಗಣ್ಯರು. ಸಾಹಿತ್ಯ ಲೋಕದಲ್ಲಿ ಸದಾ ಅವಿಸ್ಮರಣಿಯವಾಗಿ ಉಳಿದಿದ್ದಾರೆ. ಮಾತ್ರವಲ್ಲದೆ ತಮ್ಮದೇ ಆದ ಶೈಲಿಯಲ್ಲಿ ಕೃತಿಯ ರಚನೆಯನ್ನು ಮಾಡಿರುತ್ತಾರೆ. ಕವಿಗಳು ಹಾಗೂ ಸಾಹಿತಿಗಳನ್ನು ಇಂದಿನ ದಿವಸಗಳಲ್ಲಿ ಜಾತಿಯ ಲೆಕ್ಕಾಚಾರದಲ್ಲಿ ನೋಡುತ್ತಿರುವುದು ವಿಷಾದನೀಯ. ಸಾಹಿತಿಗಳು ಒಂದು ನಿರ್ದಿಷ್ಟ ಜಾತಿಗೆ ಸಂಬಂಧಿಸಿದವರಾಗಿರದೆ ಒಂದು ನಾಡಿಗೆ ಸಂಬಂಧಿಸಿದವರಾಗಿರುತ್ತಾರೆ ಎಂದರು. ಎಸ್. ಎಲ್. ಭೈರಪ್ಪ ಅವರ ಪ್ರಮುಖ ಕೃತಿಗಳನ್ನು ಹಾಗೂ ಅದರಲ್ಲಿ ಅಡಗಿರುವ ಅಂಶಗಳನ್ನುಉದಾಹರಣೆ ಸಮೇತ ವಿವರಿಸಿದರು. ಗೋಣಿಕೊಪ್ಪಲು ಕಾವೇರಿ…

Read More

ನಾಪೋಕ್ಲು ಅ.10 NEWS DESK : ಸಾರ್ವಜನಿಕರ ಕುಂದು ಕೊರತೆಗಳನ್ನು ಸರಿಪಡಿಸಿ ಉತ್ತಮ ಅಭಿವೃದ್ಧಿ ಕಾರ್ಯ ಗ್ರಾಮಪಂಚಾಯಿತಿಯಿಂದ ಆಗುತ್ತಿದೆ ಎಂದು ಪಂಚಾಯಿತಿಯ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಗ್ರಾಮ ಸಭೆಯು ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ನೋಡಲ್ ಅಧಿಕಾರಿ ಕೆ.ಬಾಲಕೃಷ್ಣ ರೈ ಅವರ ಸಮ್ಮುಖದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಮೆಚ್ಚುಗೆಯ ನುಡಿಗಳು ಕೇಳಿಬಂದವು. ಸಭೆಯಲ್ಲಿ ಮಾತನಾಡಿದ ಪಂಚಾಯಿತಿ ಅಧ್ಯಕ್ಷ ಕುಶನ್ ರೈ ಮಾತನಾಡಿ ಎಲ್ಲಾ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಕೊಡಿಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಸರಿಪಡಿಸುವಂಥ ಕಾರ್ಯ ಆಗಬೇಕೆಂದು ಆಲೋಚಿಸಿದ್ದೆವು. ಗ್ರಾಮ ಸಭೆಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಬಂದು ತಮ್ಮ ತಮ್ಮ ಕುಂದುಕೊರತೆಯನ್ನು ತಿಳಿಸಿದ್ದರಿಂದ ಸಾರ್ವಜನಿಕರಿಗೂ ಹಾಗೂ ಸಮಾಜಕ್ಕೂ ಉತ್ತಮ ಕೆಲಸಗಳು ನಡೆಯುತ್ತದೆ ಯಾರೇ ಅಧಿಕಾರಕ್ಕೆ ಬಂದರು ಸಾರ್ವಜನಿಕರು ಹೀಗೆ ಸ್ಪಂದಿಸುತ್ತಾ ಹಾಗೆಯೇ ಸಂಘ-ಸಂಸ್ಥೆಗಳು ಪಂಚಾಯಿತಿ ಜೊತೆ ಸೇರಿ ಕೆಲಸ ಮಾಡಿದರೆ ಇನ್ನೂ ಹೆಚ್ಚು ಅಭಿವೃದ್ಧಿ ಕಾರ್ಯಗಳು ಆಗುತ್ತವೆ ಎಂದರು. ಏಳು ಗ್ರಾಮಗಳ ಸಾರ್ವಜನಿಕರು ಸೇರಿ ಗ್ರಾಮ ಸಭೆ ನಡೆಸಿದರು.…

Read More

ವಿರಾಜಪೇಟೆ ಅ.10 NEWS DESK : ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಅವಕಾಶವಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಪುರಸಭೆ ಸದಸ್ಯರಾದ ಎಸ್.ಹೆಚ್.ಮತೀನ್ ಹೇಳಿದರು. ವಿರಾಜಪೇಟೆಯ ಮೌಂಟೇನ್ ವ್ಯೂವ್ ಶಾಲೆಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಐಎಎಸ್ ಮತ್ತು ಐಪಿಎಸ್ ತರಬೇತಿ ಕೇಂದ್ರ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತರಬೇತಿ ತಯಾರಿ ನಡೆಸುವ ಕುರಿತು ಮತ್ತು ಪರೀಕ್ಷೆಗಳನ್ನು ಬರೆದು ಉನ್ನತ ಹುದ್ದೆಯನ್ನು ಹೊಂದಬೇಕೆಂಬ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದು ಕೊಡಗಿನಲ್ಲಿಯೇ ಮೊಟ್ಟಮೊದಲು ನಮ್ಮ ವಿರಾಜಪೇಟೆಯಲ್ಲಿ ಪ್ರಾರಂಭವಾಗಿದೆ ಎಂದು ಭಾವಿಸುವುದಾಗಿ ಹೇಳಿದರಲ್ಲದೆ. ನಮ್ಮ ಕಾಲದಲ್ಲಿ ಉನ್ನತ ಮಟ್ಟದ ವಿದ್ಯಾಭ್ಯಸ ಕೇವಲ ಕನಸಾಗಿತ್ತು. ಈಗಿನ ವಿದ್ಯಾರ್ಥಿಗಳಿಗೆ ಇದು ಕೈಗೆಟುಕುವಂತ್ತಿದೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಸಾಹಿತಿಗಳಾದ ರಜಿತ ಕಾರ್ಯಪ್ಪ ಮಾತನಾಡಿ, ಬಹುತೇಕ ಕೇಂದ್ರಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ…

Read More

ಮಡಿಕೇರಿ ಅ.10 NEWS DESK : ಜಿಲ್ಲೆಯಾದ್ಯಂತ ನಡೆದ 90 ದಿನಗಳ ವಿಶೇಷ ಮಧ್ಯಸ್ಥಗಾರಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲೆಗೆ ಸಂಬಂಧಪಟ್ಟಂತೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಮಧ್ಯಸ್ಥಿಕಾ ಕೇಂದ್ರದಲ್ಲಿ ಇತ್ಯರ್ಥವಾದ ಪ್ರಕರಣಗಳ ವಿವರ. 2025 ರ ಜುಲೈ, 01 ಕ್ಕೆ ಮಧ್ಯಸ್ಥಿಕೆಗೆ ಅರ್ಹವಾದ ಒಟ್ಟು ಪ್ರಕರಣಗಳು 12,054, ಮಧ್ಯಸ್ಥಿಕೆಗೆ ತೆಗೆದುಕೊಂಡ ಪ್ರಕರಣಗಳು 2779, ಮಧ್ಯಸ್ಥಿಕೆಯಲ್ಲಿ ಇತ್ಯರ್ಥವಾದ ಪ್ರಕರಣಗಳು 61. ಒಟ್ಟು ಇತ್ಯರ್ಥವಾದ ಪ್ರಕರಣಗಳು ವೈವಾಹಿಕ ಪ್ರಕರಣಗಳು 23, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು 3, ಚೆಕ್ ಅಮಾನ್ಯ ಪ್ರಕರಣಗಳು 20, ರಾಜಿಯಾಗುವಂತಹ ಕ್ರಿಮಿನಲ್ ಪ್ರಕರಗಣಳು 1, ಪಾಲು ವಿಭಾಗ ಪ್ರಕರಣಗಳು(ಸಿವಿಲ್ ವ್ಯಾಜ್ಯ) 2, ಇತರೆ ಸಿವಿಲ್ ವ್ಯಾಜ್ಯಗಳು 12 ಆಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಅ.9 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರು: ತಮ್ಮ ಆಶೋತ್ತರಗಳು, ಯೋಗಕ್ಷೇಮ ಮತ್ತು ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು’ ಎಂಬ ಘೋಷವಾಕ್ಯದೊಂದಿಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಹಿರಿಯ ನಾಗರಿಕರು ಸಮಾಜದ ಆಸ್ತಿ. ಇವರು ಪ್ರತಿಯೊಂದು ಕ್ಷೇತ್ರದಲ್ಲಿ ಮಾಡಿರುವಂತಹ ಸಾಧನೆಗಳು ಮಾದರಿಯಾಗಿವೆ. ಹಿರಿಯ ನಾಗರಿಕರ ಅನುಭವ ನಮಗೆ ದಾರಿದೀಪ ಎಂದರು.  ಹಿರಿಯ ನಾಗರಿಕರು ದೇಶದ ಸಂಪತ್ತು. ಇವರಿಗಾಗಿ ಸರ್ಕಾರವು 10 ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಹಿರಿಯ ನಾಗರಿಕರ ಪಾಲನೆ ಪೋಷಣೆ ಸಂರಕ್ಷಣೆ ಕಾಯ್ದೆ 2018 ಜಾರಿಗೊಳಿಸಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಹಿರಿಯರಿಗೆ ಮನವಿ…

Read More

ವಿರಾಜಪೇಟೆ ಅ.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ವತಿಯಿಂದ ನಗರದ ಕಚೇರಿಯಲ್ಲಿ ಆಯುಧ ಮತ್ತು ಕಚೇರಿ ಪೂಜೆ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ವಿವಿಧ ಬಗೆಯ ಹೂವುಗಳಿಂದ ವಿಶೇಷವಾಗಿ ಹಾಗೂ ಬಣ್ಣ ಬಣ್ಣದ ರಂಗೋಲಿಯಿಂದ ಕಚೇರಿಯನ್ನು ಅಲಂಕಾರಿಗೊಳಿಸಲಾಗಿತ್ತು, ಶ್ರೀ ಲಕ್ಷ್ಮಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ, ದೇವಿಗೆ ಹಾಗೂ ಕಚೇರಿ ಸಿಬ್ಬಂದಿಗಳ ವಾಹನಗಳಿಗೆ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಲಾಯಿತು ಬಳಿಕ ಪ್ರಸಾದ ವಿತರಣೆ ಮಾಡಲಾಯಿತು. ಜಿಲ್ಲಾ ಯೋಜನಾ ನಿರ್ದೇಶಕಿ ಲೀಲಾವತಿ ಅವರು ಮಾತನಾಡಿ ನವರಾತ್ರಿ ವೇಳೆ ಶಕ್ತಿ ದೇವತೆಗಳ ಆರಾಧನೆ ಮಾಡಿ ಒಂಬತ್ತು ದಿನಗಳ ಕಾಲ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಇದರ ಅಂಗವಾಗಿ ಕಛೇರಿಯಲ್ಲಿ ದೇವಿಯ ಆರಾದನೆ ನಡೆಸಲಾಯಿತು. ಶ್ರೀ ಕ್ಷೇತ್ರದ ಮಂಜುನಾಥ ಸ್ವಾಮಿ ಹಾಗೂ ದೇವತೆಗಳ ಅನುಗ್ರಹದಿಂದ ಉತ್ತಮ ಮಳೆ ಬೆಳೆಯಾಗಿ ಕರುನಾಡು ಸಂಪತ್ಭರಿತವಾಗಿರಲಿ ಎಂದು ಆಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾ ಅಧಿಕಾರಿ ಹರೀಶ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ…

Read More

ಮಡಿಕೇರಿ NEWS DESK ಅ.9 : ಹರ್ ಮಂದಿರ್ ಆಶ್ರಮ ವಸತಿ ಶಾಲೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 2ನೇ ತರಗತಿಯ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗಾ.ಪಂ ವ್ಯಾಪ್ತಿಯ ಹೆರವನಾಡು ಗ್ರಾಮದ ಕಾಟಕೇರಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಉಳಿದ 52 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾಗಮಂಡಲ ಹೋಬಳಿ ಚೆಟ್ಟಿಮಾನಿ ಗ್ರಾಮದ ಕೃಷಿಕ ಕೇಕಡ ಅನಿಲ್ ಕುಮಾರ್ ಹಾಗೂ ಕುಂದಚೇರಿ ಸರಕಾರಿ ಶಾಲೆಯ ಅತಿಥಿ ಶಿಕ್ಷಕಿ ತ್ರಿವೇಣಿ ದಂಪತಿಯ ಪುತ್ರ ಪುಷ್ಪಕ್ (7) ಅಗ್ನಿ ದುರಂತಕ್ಕೆ ಬಲಿಯಾದ ಬಾಲಕನಾಗಿದ್ದಾನೆ. ದೆಹಲಿಯ ಎನ್‌ಜಿಓ ಸಂಸ್ಥೆ ಕಾಟಕೇರಿ ಗ್ರಾಮದಲ್ಲಿ ನಡೆಸುತ್ತಿರುವ ಹರ್ ಮಂದಿರ್ ಆಶ್ರಮ ವಸತಿ ಶಾಲೆಯ ವಸತಿ ನಿಲಯದಲ್ಲಿ ಗುರುವಾರ ನಸುಕಿನ 4 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಗಾಢ ನಿದ್ದೆಯಲ್ಲಿದ್ದ ಒಟ್ಟು 53 ವಿದ್ಯಾರ್ಥಿಗಳಲ್ಲಿ 52 ಮಂದಿ ಹೇಗೋ ಹೊರಗೆ ಓಡಿ ಬಂದಿದ್ದಾರೆ. ಆದರೆ ಪುಷ್ಪಕ್ ಹೊರ ಬರಲಾಗದೆ ಬೆಂಕಿಯಲ್ಲಿ ಸಿಲುಕಿ ಅಸುನೀಗಿದ್ದಾನೆ. ಬೆಂಕಿ ಅವಘಡದಲ್ಲಿ ವಿದ್ಯಾರ್ಥಿಗಳಾದ ಸಿದ್ದಾಪುರದ ತನ್ವಿತ್…

Read More