ಲೇಖಕ: admin

ಮಡಿಕೇರಿ NEWS DESK ಅ.9 : ಕಾಟಕೇರಿಯ ‘ಹರ್ ಮಂದಿರ’ ವಸತಿ ಶಾಲೆಯಲ್ಲಿ ಅಗ್ನಿ ಅವಘಡಕ್ಕೆ ತುತ್ತಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಕ್ಕಳು ಹಾಗೂ ಸಿಬ್ಬಂದಿಗಳ ಆರೋಗ್ಯವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಗುರುವಾರ ಭೇಟಿ ನೀಡಿ ವಿಚಾರಿಸಿದರು. ಅಗ್ನಿ ಅವಘಡಕ್ಕೆ ಕಾರಣ ಮತ್ತಿತರ ಬಗ್ಗೆ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಎರಡನೇ ತರಗತಿಯ ವಿದ್ಯಾರ್ಥಿ ಮೃತಪಟ್ಟು, ಇಬ್ಬರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಆಗಮಿಸಿ ಮಕ್ಕಳ ಹಾಗೂ ಸಿಬ್ಬಂದಿಯ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದೇನೆ ಎಂದರು. ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಅವರು ಭೇಟಿ ನೀಡಿ ಪರಿಶೀಸಿದ್ದಾರೆ ಎಂದು ತಿಳಿಸಿದರು. ವಿದ್ಯುತ್ ಅವಘಡ ಬಗ್ಗೆ ಸತ್ಯ ಹೊರಬರಬೇಕು. ಆ ನಿಟ್ಟಿನಲ್ಲಿ ತನಿಖೆಯಿಂದ ತಿಳಿಯಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು…

Read More

ಮಡಿಕೇರಿ ಅ.9 NEWS DESK : ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣವನ್ನು ಖಂಡಿಸಿ ಅ.13 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಪ್ರಗತಿಪರ, ಚಿಂತಕರ, ದಲಿತಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪದಾಧಿಕಾರಿಗಳಾದ ಅಂಬೇಡ್ಕರ್ ವಿಚಾರವಾದಿ ಸಿ.ಜೆ.ಮೋಹನ್ ಮೌರ್ಯ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ವಿರುದ್ಧ ನಡೆದಿರುವ ಘಟನೆ ಸಂವಿಧಾನ ವಿರೋಧಿ ಕೃತ್ಯವಾಗಿದ್ದು, ಆ ಮೂಲಕ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದುಷ್ಕೃತ್ಯವೆಸಗಿದ ವಕೀಲನ ವಿರುದ್ಧ ಕೇಂದ್ರ ಸರ್ಕಾರ ‘ದೇಶ ದ್ರೋಹ’ದ ಪ್ರಕರಣವನ್ನು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಗಲ್ಲಾಗಿರುವ ಸಂವಿಧಾನಕ್ಕೆ ಮಾಡಿರುವ ಅಪಮಾನದ ಘಟನೆ ಇದಾಗಿದ್ದು, ಇದನ್ನು ಪ್ರತಿಯೊಬ್ಬ ನಾಗರಿಕರು ವಿರೋಧಿಸಬೇಕೆಂದು ಕರೆ ನೀಡಿದರು. ದುಷ್ಕೃತ್ಯವೆಸಗಿದ ವಕೀಲನನ್ನು ದೆಹಲಿ ವಕೀಲರ ಸಂಘ ಸಂಘದಿಂದ ಉಚ್ಛಾಟಿಸಿದೆ. ದೆಹಲಿ ವಕೀಲರ ಸಂಘಕ್ಕೆ ಇರುವ ಬದ್ಧತೆ ಕೇಂದ್ರದ ಬಿಜೆಪಿ…

Read More

ಮಡಿಕೇರಿ ಅ.9 NEWS DESK : ಮಡಿಕೇರಿ ದಸರಾ ಕ್ರೀಡಾ ಸಮಿತಿಯಿಂದ ಅ.12ರಂದು ನಗರದ ಗಾಂಧಿ ಮೈದಾನದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಪಂದ್ಯಾವಳಿಯ ಆಹ್ವಾನ ಪತ್ರಿಕೆ ಮತ್ತು ಆಕರ್ಷಕ ಟ್ರೋಫಿಗಳನ್ನು ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅನಾವರಣಗೊಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಪ್ರದೀಪ್ ಕರ್ಕೆರ, ದಸರಾ ಉತ್ಸವದ ಸಂದರ್ಭ ನಡೆಯಬೇಕಿದ್ದ ಕಬಡ್ಡಿ ಪಂದ್ಯಾವಳಿಯನ್ನು ಮಳೆಯ ಕಾರಣಗಳ ಹಿನ್ನೆಲೆ ಇದೀಗ ನಡೆಸಲಾಗುತ್ತಿದೆ. ಪಂದ್ಯಾವಳಿ ಮುಕ್ತವಾಗಿದ್ದು, ಸುಮಾರು ಇಪ್ಪತ್ತು ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಾಕ್ ಔಟ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ಪುರುಷರ ವಿಭಾಗದ ಕಬಡ್ಡಿ ಪಂದ್ಯಾವಳಿಗೆ ಪ್ರವೇಶ ಶುಲ್ಕವಾಗಿ ಪ್ರತಿ ತಂಡಕ್ಕೆ 10 ಸಾವಿರ ರೂ.ಗಳನ್ನು , ಮಹಿಳಾ ವಿಭಾಗಕ್ಕೆ 2 ಸಾವಿರ ರೂ.ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪಂದ್ಯಾವಳಿ ನಡೆಯುವ ದಿನದವರೆಗೆ ತಂಡಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪಂದ್ಯಾವಳಿ ಮಧ್ಯಾಹ್ನ 2 ಗಂಟೆಗೆ ಆರಂಭಗೊಳ್ಳಲಿದ್ದು, ಅಂತಿಮ ಪಂದ್ಯವು ಅಂದು ರಾತ್ರಿಯೆ ಹೊನಲು ಬೆಳಕಿನಡಿ ನಡೆಯಲಿದೆಯೆಂದು ಸ್ಪಷ್ಟಪಡಿಸಿದರು. :: ವಿಜೇತರಿಗೆ…

Read More

ಮಡಿಕೇರಿ ಅ.9 NEWS DESK : ಧರ್ಮಸ್ಥಳದಲ್ಲಿ ನಡೆದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕೊಡಗು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ. ಸೌಜನ್ಯ ಪ್ರಕರಣ ನಡೆದು 13 ವರ್ಷಗಳೇ ಕಳೆದಿದ್ದರೂ ನೈಜ ಆರೋಪಿಗಳನ್ನು ಬಂಧಿಸಲು ಆಡಳಿತ ವ್ಯವಸ್ಥೆಯಿಂದ ಸಾಧ್ಯವಾಗಿಲ್ಲ. ಆದ್ದರಿಂದ ವೇದಿಕೆ ಮೂಲಕ ರಾಜ್ಯವ್ಯಾಪಿ ‘ನ್ಯಾಯಕ್ಕಾಗಿ ಜನಾಗ್ರಹ ಕಾರ್ಯಕ್ರಮ’ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಮನವಿ ಸಲ್ಲಿಸಿರುವುದಾಗಿ ವೇದಿಕೆಯ ಪ್ರಮುಖರು ಹಾಗೂ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು ತಿಳಿಸಿದರು. ಸೌಜನ್ಯ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸದ ಮತ್ತು ಸೂಕ್ತ ತನಿಖೆ ನಡೆಸದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೂಕ್ತ ಎಂಬ ಆದೇಶವನ್ನು ಸರಕಾರ ಪಾಲಿಸಬೇಕು. ವೈದ್ಯಕೀಯ ಅಧಿಕಾರಿಗಳು ಹಾಗೂ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನೈಜ ಆರೋಪಿಗಳ…

Read More

ಮಡಿಕೇರಿ ಅ.9 NEWS DESK : ಇದೇ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು. ವಾಟರ್ ಪ್ರೋಫ್ ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‍ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸೂಚಿಸಿದರು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಹಾಡುಗಳನ್ನು ಮಾತ್ರ ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿ…

Read More

ಮಡಿಕೇರಿ ಅ.9 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಇತರೆ ಚುನಾವಣೆ ವಿಷಯಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಹಿನ್ನೆಲೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಜಿಲ್ಲೆಯಲ್ಲಿಯೂ ಸಹ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು. 2002 ರಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗಿತ್ತು, ಆ ದಿಸೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳುವಂತಾಗಬೇಕು ಎಂದು ಕೋರಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ನಮೂನೆ-6 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ನಮೂನೆ-07 ಮತದಾರರ ಪಟ್ಟಿಯಿಂದ ಹೆಸರು…

Read More

ಮಡಿಕೇರಿ ಅ.9 NEWS DESK : ಪ್ರತಿಯೊಬ್ಬರೂ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಿದಾಗ ಮಾತ್ರ ಪ್ರಕೃತಿ, ಪರಿಸರ ಹಾಗೂ ವನ್ಯಜೀವಿಗಳನ್ನು ಉಳಿಸಲು ಸಾಧ್ಯ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ( ಎನ್ನೆಸ್ಸೆಸ್ ) ಘಟಕಗಳ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಅರಣ್ಯ ಭವನದ ಆವರಣದಲ್ಲಿ “ಮಾನವ ಪ್ರಾಣಿ ಸಹಬಾಳ್ವೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 71 ನೇ ವನ್ಯಜೀವಿ ಸಪ್ತಾಹ : 2025 ದ ಅಂಗವಾಗಿ “ಪರಿಸರ ನಡಿಗೆ”ಕಾಲ್ನಡಿಗೆ ಜಾಗೃತಿ ಜಾಥಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ಅರಣ್ಯ ಹಾಗೂ…

Read More

ವಿರಾಜಪೇಟೆ ಅ.9 NEWS DESK :  ಅಖಿಲ ಭಾರತ ಎಸ್.ಎನ್.ಡಿ.ಪಿ ಯೋಗಂ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹಾಗೂ ಉದ್ಯಮಿಗಳಾದ  ವೆಲ್ಲಪಳ್ಳಿ ನಟೇಶನ್  ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಗೋಲ್ಡನ್ ಬೀನ್ಸ್ ಹೋಂ ಸ್ಟೇ ಗೆ ಖಾಸಗಿ ಭೇಟಿಯನ್ನು ನೀಡಿದರು. ಭೇಟಿ ಸಂದರ್ಭದಲ್ಲಿ ಎಸ್ ಎನ್ ಡಿ ಪಿ ಯ ಪಧಾಧಿಕಾರಿಗಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಎಸ್ ಎನ್ ಡಿ ಪಿ ಸಂಘಟನೆಯ ವಿರಾಜಪೇಟೆ, ಸಿದ್ದಾಪುರ ಹಾಗೂ ಹೆಗ್ಗಳ ದ ಪದಾಧಿಕಾರಿಗಳು ಭೇಟಿಯಾಗಿ ಸಂಘಟನೆಯ ಕುರಿತು ಚರ್ಚೆ ನಡೆಸಿದರು. ಮಾತ್ರವಲ್ಲದೆ ಉಭಯ ಕುಶಲೋಪರಿಯನ್ನು ನಡೆಸಿದರು. ಎಸ್ ಎನ್ ಡಿ ಪಿ ಸಂಘಟನೆ ಹಾಗೂ ಹೆಗ್ಗಳದ ಗೋಲ್ಡನ್ ರಾಕ್ಸ್ ನ ವತಿಯಿಂದ ವೆಲ್ಲಪಳ್ಳಿ ನಟೇಶನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಹೆಗ್ಗಳ ಗ್ರಾಮದ ಗೋಲ್ಡನ್ ರಾಕ್ಸ್ ಹಾಗೂ ಗೋಲ್ಡನ್ ಬೀನ್ಸ್ ನ ಮಾಲೀಕರು, ಉದ್ಯಮಿಗಳಾದ ಸಜೇಶ್ ಭರತನ್, ಪತ್ನಿ ಪೂಜಾ ಸಜೇಶ್, ವಿರಾಜಪೇಟೆ ಪುರಸಭಾ ಸದಸ್ಯ ಪೃಥ್ವಿನಾಥ್, ವಿರಾಜಪೇಟೆ ಹಿಂದೂ ಮಲಯಾಳಿ ಮಹಿಳಾ…

Read More

ವಿರಾಜಪೇಟೆ ಅ.9 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ, ಸಮಾಜದ ಏಳಿಗೆಗೆ ಮಹಿಳಾ ಸಹಕಾರ ಸಂಘದ ಎಲ್ಲ ಸದಸ್ಯರ ಸಹಕಾರ ಮುಖ್ಯ. ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿರುವುದಾಗಿ ತಿಳಿಸಿದರು. ಮಹಿಳಾ ಸಮಾಜಕ್ಕೆ ಸುಸಜ್ಜಿತ ಶೌಚಾಲಯದ ಅವಶ್ಯಕತೆ ಇದ್ದು, ಅದನ್ನು ನಿರ್ಮಾಣ ಮಾಡುವ ಯೋಜನೆಯ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ. ಇದಕ್ಕೆ ದಾನಿಗಳ ಸಹಕಾರವೂ ಅಗತ್ಯವಿದೆ. ಎಲ್ಲರೂ ಸಹಕಾರ ನೀಡಿದ್ದಲ್ಲಿ ಉತ್ತಮ ಸುಸಜ್ಜಿತ ಶೌಚಾಲಯ ನಿರ್ಮಾಣವಾಗುತ್ತದೆ. ಹಂತ ಹಂತವಾಗಿ ಸಮಾಜದ ಅಭಿವೃದ್ಧಿ ಕಾರ್ಯ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಸದಸ್ಯತ್ವ ನೋಂದಣಿ ಹಣ ಹೆಚ್ಚಿಸುವಂತೆ ಹಾಗೂ ಇತರ ವಿಚಾರಗಳನ್ನು ಚರ್ಚಿಸಲಾಯಿತು. ಸಭೆಯಲ್ಲಿ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡನೆ ಮಾಡಿ ಅನುಮೋದಿಸಲಾಯಿತು. ಸಭೆ ಪ್ರಾರಂಭದ ಮೊದಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಈ…

Read More

ಪುತ್ತೂರು ಅ.9 NEWS DESK : ಕೃತಕ ಬುದ್ಧಿಮತ್ತೆಯು ದಿನದಿಂದ ದಿನಕ್ಕೆ ಅಗಾಧವಾಗಿ ವ್ಯಾಪಿಸುತ್ತಿದ್ದು, ಮಾನವ ಜೀವನದ ಅವಿಭಾಜ್ಯ ಅಂಗವಾಗುತ್ತಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ (AIML)  ವಿದ್ಯಾರ್ಥಿ ವಿಭಾಗ, IEEE VCET ವಿದ್ಯಾರ್ಥಿ ವಿಭಾಗ ಮತ್ತು IEEE ಕಮ್ಯುನಿಕೇಶನ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಹಾಕಥಾನ್ ಸ್ಪರ್ಧೆ ಕೋಡ್ ಮಂಥನ್-25ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕಷ್ಟೇ ಸೀಮಿತವಾಗಬಾರದು ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ಸಮಾಜದ ಒಳಿತಿಗೆ ಬಳಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕು ಎಂದರು. IEEE VCET ವಿದ್ಯಾರ್ಥಿ ವಿಭಾಗದ ಸಂಯೋಜಕಿ ಡಾ.ಜೀವಿತಾ.ಬಿ.ಕೆ ಮಾತನಾಡಿ ಕೃತಕ ಬುದ್ಧಿಮತ್ತೆ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳಲ್ಲಿ ತಮ್ಮ ಸಾಮಥ್ರ್ಯವನ್ನು ತೋರಿಸಲು ವಿದ್ಯಾರ್ಥಿಗಳಿಗೆ ಇದೊಂದು ಸದವಕಾಶ ಎಂದರು. ಸಮಾಜದಲ್ಲಿ ಜನಸಾಮಾನ್ಯರು ವಿವಿಧ ಕ್ಷೇತ್ರಗಳಲ್ಲಿ ಎದುರಿಸುವ ಸಮಸ್ಯೆಗಳಿಗೆ…

Read More