ಲೇಖಕ: admin

ಮಡಿಕೇರಿ ನ.12 NEWS DESK : ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು. ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮಂಡ್ ಪೆಂಡೆಂಟ್ ವಿಜೇತರಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ನ.12 NEWS DESK : ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಯಶಸ್ವೀ ಅನುಷ್ಠಾನದ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವುದು, ವಿರೋಧ ಪಕ್ಷಗಳ ಆಧಾರ ರಹಿತ ಟೀಕೆಗಳಿಗೆ ಪ್ರತ್ಯುತ್ತರ ನೀಡುವುದು ಮತ್ತು ವೋಟ್ ಚೋರಿ ಅಭಿಯಾನ ನಡೆಸಲು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ನಿರ್ಧರಿಸಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮತ್ತು ರಾಜ್ಯ ಸರಕಾರದ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡಲು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಜಿಲ್ಲೆಯ ಇಬ್ಬರು ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, 6 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳ ಸಹಕಾರ ಪಡೆದು ಕಾರ್ಯೋನ್ಮುಖವಾಗಲು ಜಿಲ್ಲಾ ಕಾರ್ಯಕಾರಿ ಸಮಿತಿ ತೀರ್ಮಾನಿಸಿತು. ಆಯಾ ಬ್ಲಾಕ್ ನ ನೂತನ ಅಧ್ಯಕ್ಷರುಗಳು ಎಲ್ಲಾ ಕಾಂಗ್ರೆಸ್ ನಾಯಕರುಗಳ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಈ ತಿಂಗಳ ಅಂತ್ಯದೊಳಗೆ ಅರ್ಥಪೂರ್ಣವಾಗಿ ಅಧಿಕಾರ ಸ್ವೀಕರಿಸಬೇಕು. ಪ್ರತಿ ವಲಯ…

Read More

ಮಡಿಕೇರಿ ನ.12 NEWS DESK : ಸರಕಾರದ ವಿವಿಧ ಇಲಾಖೆಗಳ ಬಹಳಷ್ಟು ಲೋಪಗಳು ಲೋಕಾಯುಕ್ತರ ಗಮನಕ್ಕೆ ಬರುತ್ತಿದ್ದು, ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಅಧಿಕಾರಿಗಳು ಸರಕಾರಿ ಕೆಲಸವನ್ನು ಲಘುವಾಗಿ ಪರಿಗಣಿಸಬಾರದು ಮತ್ತು ವಿಳಂಬವಿಲ್ಲದೆ ಜನಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಮಡಿಕೇರಿ ಲೋಕಾಯುಕ್ತ ಡಿವೈಎಸ್‍ಪಿ ದಿನಕರ ಶೆಟ್ಟಿ ಅವರು ಸೂಚನೆ ನೀಡಿದ್ದಾರೆ. ನಗರದ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ಇರುವುದಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬಂಧ ಪ್ರತಿನಿತ್ಯ ಚಲನವಲನ ಬಗ್ಗೆ ದಾಖಲು ಮಾಡಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರದ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಸಮಯ ಪಾಲನೆ ಅತೀ ಮುಖ್ಯ. ಆ ನಿಟ್ಟಿನಲ್ಲಿ ಚಲನವಲನ ವಹಿಯನ್ನು ಸರಿಯಾಗಿ ನಿರ್ವಹಿಸಬೇಕು. ರಜೆ ಪಡೆದಿದ್ದಲ್ಲಿ ರಜೆ ಅರ್ಜಿ ಕಚೇರಿಯಲ್ಲಿ ಇರಬೇಕು. ನಗದು ವಹಿ ಬರೆಯಬೇಕು. ಕಚೇರಿ ಕೆಲಸ ನಿರ್ವಹಣೆ ಸಂಬಂಧ ಸರಿಯಾಗಿ ಪಾಲನೆ ಅತೀ ಮುಖ್ಯ ಎಂದು…

Read More

ಮಡಿಕೇರಿ ನ.12 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು ಇದೇ ನವೆಂಬರ್ 30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 2024 ನೇ ಸಾಲಿನ ಪ್ರಶಸ್ತಿಗೆ ಅರೆಭಾಷೆ ಸಾಹಿತಿ ಹಾಗೂ ನಿಘಂಟು ತಯಾರಕರು ಆಗಿರುವ ಕೆ.ಆರ್. ಗಂಗಾಧರ, ಗ್ರಾಮೀಣ ಪತ್ರಿಕೋದ್ಯಮದಲ್ಲಿ ಕ್ರಾಂತಿ ಮಾಡಿರುವ ಡಾ.ಯು.ಪಿ. ಶಿವಾನಂದ ಹಾಗೂ ಅರೆಭಾಷಿಕರ ಸಂಘಟಕ ದಂಬೆಕೋಡಿ ಆನಂದ ಇವರುಗಳು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಜೊತೆಗೆ ಐನ್ ಮನೆ ಕುರಿತ ಅರೆಭಾಷೆ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ ಇದರೊಂದಿಗೆ ಅರೆಭಾಷೆ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮ ಹಾಗೂ ಅರೆಭಾಷೆ ಅಕಾಡೆಮಿ ಪ್ರಾಯೋಜಿತ ಅರೆಭಾಷೆ ನಾಟಕ ‘ಅಪ್ಪ’ ಪ್ರದರ್ಶನಗೊಳ್ಳಲಿದೆ ಎಂದು…

Read More

ಮಡಿಕೇರಿ ನ.12 NEWS DESK : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ 49ನೇ ವರ್ಷದ ದಸರಾ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಲಕ್ಕಿಡಿಪ್ ಫಲಿತಾಂಶವನ್ನು ಸಮಿತಿ ಪ್ರಕಟಿಸಿದೆ. ಬಂಪರ್ ಬಹುಮಾನದ ವಿಜೇತ ಸಂಖ್ಯೆ 2586, ಮೊದಲ ಬಹುಮಾನ 5703, ದ್ವಿತೀಯ ಬಹುಮಾನ 8282, ತೃತೀಯ ಬಹುಮಾನ 0136, ನಾಲ್ಕನೇ ಬಹುಮಾನ 0921, ಸಮಾಧಾನಕರ ಬಹುಮಾನಗಳು 9713, 3528, 9236, 8867, 7353, 8141, 8738, 7879, 9109, 9198, 6207, 5491, 9963, 8874, 5933 ವಿಜೇತರು ಒಂದು ತಿಂಗಳೊಳಗೆ ಮಡಿಕೇರಿ ನಗರದ ಮಹದೇವಪೇಟೆಯಲ್ಲಿರುವ ಶೇಖರ್ ಜ್ಯುವೆಲ್ಲರ್ಸ್‍ನಲ್ಲಿ ಬಹುಮಾನವನ್ನು ಪಡೆದುಕೊಳ್ಳುವಂತೆ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಅಧ್ಯಕ್ಷ ವಿಘ್ನೇಶ್ ಸಿ.ಯು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ : 9986498466 ಸಂಪರ್ಕಿಸಬಹುದಾಗಿದೆ.

Read More

ವಿರಾಜಪೇಟೆ ನ.12 NEWS DESK : ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಮಕ್ಕಳ ತುರ್ತು ನಿಧಿ (ಯುನಿಸೆಫ್)ನ ಹೈದರಾಬಾದ್ ಪ್ರಾದೇಶಿಕ ಕಚೇರಿ ಹಾಗೂ ಮೈಸೂರು ವಿಶ್ವ ವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ವಿಭಾಗದ ವತಿಯಿಂದ ಬೆಂಗಳೂರಿನ ಹಲಸೂರಿನಲ್ಲಿರುವ ರ್ಯಾಡಿಸನ್ ಬೆಂಗಳೂರು ಸಿಟಿ ಸೆಂಟರ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಸಂಬಂಧಿ ಆರೋಗ್ಯ ಕಾರ್ಯಾಗಾರದಲ್ಲಿ ಕೊಡಗಿನಿಂದ ಸಾಹಿತಿ ಹಾಗೂ ಪತ್ರಕರ್ತೆ ರಜಿತ ಕಾರ್ಯಪ್ಪ ಪಾಲ್ಗೋಂಡು ಪ್ರಶಂಸನಾ ಪತ್ರ ಪಡೆದುಕೊಂಡಿದ್ದಾರೆ. ಈ ಸಂದರ್ಭ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಉಪನಿರ್ದೇಶಕಿ ಡಾ. ಇಂದುಮತಿ, ಮೈಸೂರು ವಿಶ್ವ ವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ವಿಭಾಗದ ಪ್ರಾದ್ಯಾಪಕಿ ಡಾ. ಸಪ್ನ, ಯುನಿಸೆಫ್‍ನ ಭಾರತೀಯ ಘಟಕದ ವೈಧ್ಯಕೀಯ ಸಲಹೆಗಾರ ಡಾ. ಶ್ರೀಧರ್ ಪ್ರಹ್ಲಾದ್, ಹೈದರಾಬಾದ್ ಯುನಿಸೆಫ್‍ನ ಪ್ರಾದೇಶಿಕ ಕಛೇರಿಯ ಮುಖ್ಯಸ್ಥ ಡಾ. ಪ್ರೊಸುನ್‍ಸೆನ್ ಮತ್ತಿತರರು ಇದ್ದರು.

Read More

ಮಡಿಕೇರಿ ನ.12 NEWS DESK : ಕಾವೇರಿ ನದಿ ಮಾಲಿನ್ಯ ನಿವಾರಣೆ, ತ್ಯಾಜ್ಯ ನಿಯಂತ್ರಣ ಮತ್ತು ನದಿಯ ಹೂಳೆತ್ತುವ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ದಕ್ಷಿಣ ಭಾರತದ ಜೀವನಾಡಿಯಾಗಿರುವ ಕಾವೇರಿ ನದಿ ಕರ್ನಾಟಕ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳ ಲಕ್ಷಾಂತರ ಜನರಿಗೆ ಕುಡಿಯುವ ನೀರು, ಕೃಷಿ ನೀರಾವರಿ ಮತ್ತು ಜೀವನೋಪಾಯದ ಮೂಲವಾಗಿದೆ. ಆದರೆ ಕಳೆದ ಕೆಲವು ದಶಕಗಳಿಂದ ನದಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ಸ್ಥಿತಿಗೆ ಬಂದು ತಲುಪಿದೆ. ನದಿಯನ್ನು ಆವರಿಸಿರುವ ತ್ಯಾಜ್ಯದಿಂದ ಶುದ್ಧ ನೀರಿನ ಲಭ್ಯತೆ ಮತ್ತು ಪರಿಸರ ಸಮತೋಲನ ಎರಡಕ್ಕೂ ಭಾರೀ ಧಕ್ಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನದಿತೀರ ಪ್ರದೇಶಗಳಲ್ಲಿ ಬೆಳೆಯುತ್ತಿರುವ ಕೈಗಾರಿಕೆಗಳು ಮತ್ತು ನಗರ ಪ್ರದೇಶಗಳಿಂದ ನೇರವಾಗಿ ನದಿಗೆ ಹರಿಯುತ್ತಿರುವ ರಾಸಾಯನಿಕ ತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಒಳಚರಂಡಿಯ ಕಲುಷಿತ ನೀರು ನದಿಯ ಜೀವವೈವಿಧ್ಯವನ್ನು ಹಾಳುಮಾಡಿದೆ. ವಿಶೇಷವಾಗಿ…

Read More

ಮಡಿಕೇರಿ ನ.12 NEWS DESK  : ಕೊಡಗು ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ  ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.  ಥ್ರೋಬಾಲ್ ನಲ್ಲಿ ಬಾಲಕರ ತಂಡ ಪ್ರಥಮ,  ವಾಲಿಬಾಲ್ ನಲ್ಲಿ ಬಾಲಕಿಯರ  ತಂಡ ಪ್ರಥಮ ಮತ್ತು ಚೆಸ್ ನಲ್ಲಿ ಆರೋಮಲ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಟೇಬಲ್ ಟೆನ್ನಿಸ್ ನಲ್ಲಿ ನೀಲೇಶ್ ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಪ್ರಮೋದ್ ಗೌಡ ತರಬೇತಿ ನೀಡಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ.

Read More

ಬೆಂಗಳೂರು ನ.12 NEWS DESK :  ಬೆಂಗಳೂರಿನ ಪಿಸಿಡಿಎ ಸಂಕೀರ್ಣದ ಬಹುಪಯೋಗಿ ಸಭಾಂಗಣದಲ್ಲಿಂದು ‘ಸ್ಪರ್ಶ್ ಔಟ್ರೀಚ್’ (ಸ್ಪರ್ಶ್‌ ಜನಸಂಪರ್ಕ) ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ರಕ್ಷಣಾ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ‘ಸ್ಪರ್ಶ್’ ಸಂಬಂಧಿತ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಪರಿಹರಿಸಲು ಎರಡು ದಿನಗಳ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಎಎಸ್‌ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟಿನೆಂಟ್ ಜನರಲ್ ಜೆ.ಕೆ. ಗೆರಾ, ಕರ್ನಾಟಕ ಮತ್ತು ಕೇರಳ ಸಬ್ ಏರಿಯಾದ ಎವಿಎಸ್‌ಎಂ, ವೈಎಸ್‌ಎಂ, ಜಿಒಸಿ ಮೇಜರ್ ಜನರಲ್ ವಿ.ಟಿ. ಮ್ಯಾಥ್ಯೂ, ದಕ್ಷಿಣದ ಆಯ್ಕೆ ಕೇಂದ್ರದ ಕಮಾಂಡೆಂಟ್ ಮೇಜರ್ ಜನರಲ್ ಹರೀಶ್ ಭೂತಾನಿ ಮತ್ತು ಬೆಂಗಳೂರಿನ ರಕ್ಷಣಾ ಖಾತೆಗಳ ಪ್ರಧಾನ ನಿಯಂತ್ರಕ (ಪಿಸಿಡಿಎ) ಐಡಿಎಎಸ್ ಶ್ರೀ ಪ್ರಮೋದ್ ಕುಮಾರ್ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಸೇನಾ ಗಣ್ಯರು, ಐಡಿಎಎಸ್ ಅಧಿಕಾರಿಗಳು ಮತ್ತು ರಕ್ಷಣಾ ಪಿಂಚಣಿದಾರರ ದೊಡ್ಡಮಟ್ಟದಲ್ಲಿ ಭಾಗವಹಿಸಿದ್ದರು. ಸ್ಪರ್ಶ್ ಜನಸಂಪರ್ಕ ಕಾರ್ಯಕ್ರಮವು ಪಿಂಚಣಿದಾರರು ಮತ್ತು ಅಧಿಕಾರಿಗಳ ನಡುವೆ ನೇರ ಸಂವಾದವನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದ ಸಮಯದಲ್ಲಿ…

Read More

ವಿರಾಜಪೇಟೆ ನ.12 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ವತಿಯಿಂದ ಕೊಡಗಿನ ಕನ್ನಡ ನುಡಿ ವೈಭವದ ಹಬ್ಬ ನುಡಿ ಉತ್ಸವ-2025 ರ ಲಾಂಛನವನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜರುಗುವ ಈ ಕಾರ್ಯಕ್ರಮವು ಸಂಭ್ರಮದ ಕಾರ್ಯಕ್ರಮವಾಗಿದ್ದು, ನಮ್ಮ ನಾಡಿನ ಹೆಮ್ಮೆಯ ಹಬ್ಬವು ಆಗಿದೆ. ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಕನ್ನಡ ನಾಡು ಪ್ರಾಚೀನ ಇತಿಹಾಸವನ್ನು ಹೊಂದಿದ್ದು, ರಾಜ್ಯೋತ್ಸವದ ಆಚರಣೆಯು ನಾವು ನಾಡಿಗೆ ಸಲ್ಲಿಸುವ ಗೌರವವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ನ ನುಡಿ ಉತ್ಸವ ಸಮಿತಿಯ ಸಂಚಾಲಕರು ಹಾಗೂ ಪತ್ರಕರ್ತರಾದ ಅಬ್ದುಲ್ ರೆಹಮಾನ್ ಮಾತನಾಡಿ, ಕನ್ನಡಮ್ಮನ ಸೇವೆಗೆ ನಾವು ಸದಾ ಸಿದ್ಧರಿರಬೇಕು. ವಿರಾಜಪೇಟೆಯ ಈ…

Read More